Author: roovari

ಮಂಗಳೂರು : ಕಥಾಬಿಂದು ಪ್ರಕಾಶನ ಇದರ ವತಿಯಿಂದ ಪಿ.ವಿ. ಪ್ರದೀಪ್ ಕುಮಾರ್ ಸಾರಥ್ಯದಲ್ಲಿ ‘ಸಾಹಿತ್ಯೋತ್ಸವ’ವನ್ನು ದಿನಾಂಕ 26 ಅಕ್ಟೋಬರ್ 2025ರಂದು ಮಂಗಳೂರು ದೇರಳಕಟ್ಟೆಯಲ್ಲಿರುವ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಸೌರಭ ರತ್ನ, ಸಮಾಜ ಸೇವಾರತ್ನ, ‘ಚೈತನ್ಯ ಶ್ರೀ’, ‘ಶಿಕ್ಷಕ ರತ್ನ’ ರಾಜ್ಯ ಪ್ರಶಸ್ತಿ, ಕವಿಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ರವೀಂದ್ರ ಶೆಟ್ಟಿ ಉಳಿದೊಟ್ಟು ಇವರು ಈ ಕಾರ್ಯಕ್ರಮವನ್ನು ಬಿಡುಗಡೆ ಮಾಡಲಿದ್ದಾರೆ. ಯುಗಪುರುಷ ಮಾಸ ಪತ್ರಿಕೆಯ ಸಂಪಾದಕರಾದ ಭುವನಾಭಿರಾಮ ಉಡುಪ ಇವರು ಸ್ಮರಣ ಸಂಚಿಕೆ ಬಿಡುಗಡೆ ಮತ್ತು ವಿ.ಬಿ. ಕುಳಮರ್ವ ಇವರು ಕೃತಿಗಳ ಅನಾವರಣ ಮಾಡಲಿದ್ದಾರೆ. ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ, ವಿಜಯಪುರ ನಾಟ್ಯಕಲಾ ನೃತ್ಯ ಅಕಾಡೆಮಿ ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಶ್ರೀಮತಿ ಪುಷ್ಪ ಪ್ರಸಾದ್ ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ, ಡಾ. ವಾಣಿಶ್ರೀ ನೇತೃತ್ವದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ನೃತ್ಯ ವೈಭವ ಮತ್ತು ಗಡಿನಾಡ…

Read More

ಸೊರಬ : ಶ್ರೀ ಎಸ್. ಬಂಗಾರಪ್ಪ ಫೌಂಡೇಷನ್ (ರಿ.) ಹಾಗೂ ಶ್ರೀ ಎಸ್. ಬಂಗಾರಪ್ಪ ವಿಚಾರ ವೇದಿಕೆ ಇದರ ವತಿಯಿಂದ ಎಸ್. ಬಂಗಾರಪ್ಪ ಇವರ ಜನ್ಮ ದಿನೋತ್ಸವವನ್ನು ದಿನಾಂಕ 26 ಅಕ್ಟೋಬರ್ 2025ರಂದು ಶಿವಮೊಗ್ಗ ಜಿಲ್ಲೆಯ ಸೊರಬದ ಬಂಗಾರಧಾಮದಲ್ಲಿ ಆಯೋಜಿಸಲಾಗಿದೆ. ಎಸ್. ಬಂಗಾರಪ್ಪ ಫೌಂಡೇಷನ್ ಇದರ ಅಧ್ಯಕ್ಷರಾದ ಎಸ್. ಮಧು ಬಂಗಾರಪ್ಪ ಇವರ ಅಧ್ಯಕ್ಷತೆಯಲ್ಲಿ ಈ ಸಮಾರಂಭವನ್ನು ಸಚಿವರಾದ ಕೆ.ಹೆಚ್. ಮುನಿಯಪ್ಪ ಇವರು ಉದ್ಘಾಟನೆ ಮಾಡಲಿದ್ದಾರೆ. ಪ್ರಸಿದ್ಧ ಸಾಹಿತಿಗಳಾದ ಡಾ. ಕಾಳೇಗೌಡ ನಾಗವಾರ ಇವರಿಗೆ ‘ಸಾಹಿತ್ಯ ಬಂಗಾರ’, ಬೆಂಗಳೂರಿನ ಗುಬ್ಬಿ ತೋಟದಪ್ಪ ಧರ್ಮಸಂಸ್ಥೆಗೆ ‘ಧರ್ಮ ಬಂಗಾರ’, ಚೌಡಿಕೆ ಕಲಾವಿದರಾದ ಶ್ರೀಮತಿ ರಾಧಾಬಾಯಿ ಮಾದರ್ ಇವರಿಗೆ ‘ಜಾನಪದ ಬಂಗಾರ’, ರಂಗಭೂಮಿ ಕಲಾವಿದರಾದ ಜೇವರ್ಗಿ ರಾಜಣ್ಣ ‘ಕಲಾ ಬಂಗಾರ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಬೆಳಿಗ್ಗೆ 10-30 ಗಂಟೆಗೆ ಸೊರಬದಲ್ಲಿರುವ ಡಾ. ರಾಜ್ ಕುಮಾರ್ ರಂಗಮಂದಿರದಲ್ಲಿ ‘ಬಂಗಾರಪ್ಪನವರ ಚಿಂತನೆಗಳು’ ವಿಚಾರ ಸಂಕಿರಣ ನಡೆಯಲಿದೆ. ಪ್ರಸಿದ್ಧ ಕವಿಗಳಾದ ಪ್ರೊ. ಎಸ್.ಜಿ. ಸಿದ್ಧರಾಮಯ್ಯ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ…

Read More

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ಸರ್ಕಾರಿ ನೌಕರರಿಗೆ ರಾಜ್ಯಮಟ್ಟದ ಜನಪದ, ಕನ್ನಡ ಗೀತೆಗಳ ಗುಂಪು ನೃತ್ಯ ಸ್ಪರ್ಧೆಗಳನ್ನು ದಿನಾಂಕ 08 ನವೆಂಬರ್ 2025ರಂದು ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿರುವ ಸಂಘದ ಆವರಣದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕೇಂದ್ರ ಸಂಘದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಕಾರ್ಮಿಕ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸ್ಪರ್ಧೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರದ ಖಾಯಂ ನೌಕರರು ಸಂಘವು ನೀಡಿರುವ https://forms.gle/8pR3m5nXowwQzccs9 ಆನ್ ಲೈನ್ ಲಿಂಕಿನಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ. ಸ್ಪರ್ಧೆಗಳಲ್ಲಿ ವಿಜೇತ ತಂಡಗಳಿಗೆ ಪ್ರಥಮ ಬಹುಮಾನ ರೂ.1,00,000-00, ದ್ವಿತೀಯ ಬಹುಮಾನ ರೂ.75,000-00, ತೃತೀಯ ಬಹುಮಾನ ರೂ.50,000-00 ಹಾಗೂ ಸಮಾಧಾನಕರ ಬಹುಮಾನ ರೂ.20,000-00 ನಗದು ಬಹುಮಾನ ನೀಡಲಾಗುತ್ತದೆ.

Read More

ಮಂಗಳೂರು : ತುಳು ನಾಟಕ ಕಲಾವಿದರ ಒಕ್ಕೂಟ (ರಿ.) ಇದರ ನೂತನ ಅಧ್ಯಕ್ಷರಾಗಿ ಕಿಶೋರ್ ಡಿ. ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಕದ್ರಿ ಪಾರ್ಕ್ ಬಳಿಯ ಲಯನ್ಸ್ ಅಶೋಕ ಸೇವಾಭವನದಲ್ಲಿ ನಡೆದ ಮಂಗಳೂರು ತುಳು ನಾಟಕ ಕಲಾವಿದರ ಒಕ್ಕೂಟದ 2024-2025ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಕಿಶೋರ್ ಡಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಂದಿನ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಕಿಶೋರ್ ಡಿ. ಶೆಟ್ಟಿಯವರು ಸರ್ವಾನುಮತದಿಂದ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಗೋಕುಲ್ ಕದ್ರಿ ಮತ್ತು ತಾರಾನಾಥ ಶೆಟ್ಟಿ ಬೋಳಾರ, ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷಣ್ ಕುಮಾರ್ ಮಲ್ಲೂರ್, ಕೋಶಾಧಿಕಾರಿಯಾಗಿ ಮೋಹನ ಕೊಪ್ಪಲ ಕದ್ರಿ, ಕ್ಷೇಮನಿಧಿ ಪ್ರಧಾನ ಸಂಚಾಲಕರಾಗಿ ಪ್ರದೀಪ್ ಆಳ್ವ ಕದ್ರಿ, ಕ್ಷೇಮನಿಧಿ ಸಂಚಾಲಕರಾಗಿ ರಾಘವೇಂದ್ರ ರಾವ್ ಶರವು, ಜೊತೆ ಕಾರ್ಯದರ್ಶಿ ತುಳಸೀ ದಾಸ್ ಉರ್ವ, ಸಲಹಾ ಸಮಿತಿ ಸದಸ್ಯರಾಗಿ ತಮ್ಮ ಲಕ್ಷ್ಮ್ಮಣ್, ಶೋಭಾಶೆಟ್ಟಿ, ಶರತ್ ಶೆಟ್ಟಿ ಮುಂಡ್ಕೂರು, ಸಂಘಟನಾ ಕಾರ್ಯದರ್ಶಿಯಾಗಿ ಮಧು ಬಂಗೇರ, ಪ್ರಚಾರ ನಿರ್ದೇಶಕರಾಗಿ ರತ್ನದೇವ್ ಪುಂಜಾಲಕಟ್ಟೆ, ಆಡಳಿತ ಸಮಿತಿ…

Read More

ಪೆರಿಯ : ಬೇಕಲದ ಗೋಕುಲಂ ಗೋಶಾಲೆಯಲ್ಲಿ ದಿನಾಂಕ 23 ಅಕ್ಟೋಬರ್ 2025ರಂದು ಪರಂಪರಾ ವಿದ್ಯಾಪೀಠದ ಅಡಿಯಲ್ಲಿ ನಡೆಯುತ್ತಿರುವ ಐದನೇಯ ದೀಪಾವಳಿ ಸಂಗೀತೋತ್ಸವದಲ್ಲಿ ಎ. ಅನಂತ ಪದ್ಮನಾಭನ್ ಇವರ ವೀಣಾ ಕಛೇರಿ ಪ್ರೇಕ್ಷಕರಿಗೆ ರಸದೌತಣ ನೀಡಿತು. ಕರ್ನಾಟಕ, ಹಿಂದೂಸ್ತಾನಿ, ಪಾಶ್ಚಾತ್ಯ ಸಂಗೀತವನ್ನು ಏಕಕಾಲದಲ್ಲಿ ಕೇಳುವಾಗ ಅದು ಸಂಗೀತದ ತ್ರಿವೇಣಿ ಸಂಗಮವಾಗಿತ್ತು. ನಾಟ್ಟ, ಗಾನಮೂರ್ತಿ, ಸರಸ್ವತಿ, ಕಪಿ, ಸಿಂಧು ಭೈರವಿ ರಾಗಗಳಲ್ಲಿ ಕೀರ್ತನೆಗಳನ್ನು ತಮ್ಮದೇ ಶೈಲಿಯಲ್ಲಿ ವೀಣೆಯನ್ನು ನುಡಿಸಿದರು. ಪಕ್ಕ ವಾದ್ಯದಲ್ಲಿ ಚೇರ್ತಲ ದಿನೇಶ್ ಮೃದಂಗ, ಡಾ. ಸುರೇಶ್ ವೈದ್ಯನಾಥನ್ ಘಟವನ್ನು ಹಾಗೂ ಪಯ್ಯನ್ನೂರು ಗೋವಿಂದ ಪ್ರಸಾದ್ ಮೋರ್ಸಿಂಗ್ ನುಡಿಸಿದರು. ಕಲಾವತಿಯವರ ಸೋಪಾನ ಸಂಗೀತ, ಬದರಿ ವಿಶ್ವನಾಥ್ ಇವರ ಸಂಗೀತೋತ್ಸವದೊಂದಿಗೆ ಐದನೇ ದಿನದ ಸಂಗೀತೋತ್ಸವ ಆರಂಭವಾಯಿತು. ವರುಣ ಲಕ್ಷ್ಮಿ, ವಿದ್ಯಾ ಹರಿಕೃಷ್ಣ, ಯೋಗ ಕೀರ್ತನೆ, ರಮ್ಯಾ ನಂಬೂತಿರಿ, ಹೃದಯೇಶ್ ಕೃಷ್ಣನ್, ಮಾತಂಗಿ ಸತ್ಯಮೂರ್ತಿ ಮತ್ತು ಎನ್.ಜೆ. ನಂದಿನಿ ಇವರಿಂದ ಸಂಗೀತ ಕಛೇರಿಗಳು, ಯೋಗ ವಂದನಾ ಇವರಿಂದ ವೀಣಾ ಕಛೇರಿ ಮತ್ತು ಘಟ ವಿದ್ವಾಂಸ ಡಾಕ್ಟರ್…

Read More

ಕಾರ್ಕಳ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯಕ್ಷ ರಂಗಾಯಣ ಕಾರ್ಕಳ ಆಯೋಜಿಸುವ ತಿಂಗಳ ಕಾರ್ಯಕ್ರಮ ‘ನಾಟಕದ ಮಾತು ಕತೆ’ ಜಾಗತಿಕ ನೆಲೆಯ ನಾಟಕ ಸಾಹಿತ್ಯ ಕೃತಿಗಳನ್ನು ಪರಿಚಯಿಸುವ ಉಪನ್ಯಾಸ ಹಾಗೂ ಕಥನ ಮಾಲಿಕೆ ಕಾರ್ಯಕ್ರಮವು ದಿನಾಂಕ 25 ಅಕ್ಟೋಬರ್ 2025ರ ಶನಿವಾರ ಸಂಜೆ ಘಂಟೆ 4.00 ರಿಂದ 6.00ರ ವರೆಗೆ ಕಾರ್ಕಳದ ಕೋಟಿ ಚೆನ್ನಯ ಥೀಂ ಪಾರ್ಕ್ ಆವರಣದಲ್ಲಿ ನಡೆಯಲಿದೆ. ಇದು ಈ ಸರಣಿಯ 6 ನೇ ಉಪನ್ಯಾಸವಾಗಿದ್ದು, ಕಾರ್ಯಕ್ರಮದಲ್ಲಿ ಉಪನ್ಯಾಸದ ಬಿ. ಆ‌ರ್. ವೆಂಕಟರಮಣ ಐತಾಳ ಇವರು ಸೋಫೋಕ್ಲಿಸ್ ಮಹಾಕವಿಯ ‘ಈಡಿಪಸ್ ನಾಟಕಗಳು’ ಕುರಿತು ಮಾತನಾಡಲಿದ್ದಾರೆ.

Read More

ಹೊಸದುರ್ಗ : ರಂಗಭೂಮಿಗೆ ಅಪೂರ್ವ ಕೊಡುಗೆ ನೀಡಿದವರಿಗೆ ಚಿತ್ರದುರ್ಗ ಜಿಲ್ಲೆಯ ಶ್ರೀ ಶಿವಕುಮಾರ ಕಲಾಸಂಘ ಕೊಡಮಾಡುವ ‘ಶ್ರೀ ಶಿವಕುಮಾರ ಪ್ರಶಸ್ತಿ’ಗೆ ನಟಿ, ವಿಧಾನ ಪರಿಷತ್‌ ಸದಸ್ಯೆ ಉಮಾಶ್ರೀ ಆಯ್ಕೆಯಾಗಿದ್ದಾರೆ. 2004ರಿಂದ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿಯು ರೂಪಾಯಿ 50,000 ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. 02 ನವೆಂಬರ್ 2025 ರಿಂದ 07 ನವೆಂಬರ್ 2025ರ ವರೆಗೆ ಸಾಣೇಹಳ್ಳಿಯಲ್ಲಿ ನಡೆಯುವ ರಾಷ್ಟ್ರೀಯ ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಾಣೇಹಳ್ಳಿಯ ತರಳಬಾಳು ಶಾಖಾ ಮಠದ ಪೀಠಾಧ್ಯಕ್ಷ ಪಂಡಿತಾರಾಧ್ಯ ಸ್ವಾಮೀಜಿ ತಿಳಿಸಿದ್ದಾರೆ.

Read More

ಉಡುಪಿ : ಗಿರಿಬಳಗ (ರಿ.) ಕುಂಜಾರುಗಿರಿ ಇವರು ದೀಪಾವಳಿ ಹಬ್ಬದ ಪ್ರಯುಕ್ತ ಪ್ರಸ್ತುತಪಡಿಸುವ “ಛತ್ರಪತಿ ಶಿವಾಜಿ” ಕನ್ನಡ ಐತಿಹಾಸಿಕ ನಾಟಕದ ಪ್ರದರ್ಶನವು ದಿನಾಂಕ 25 ಅಕ್ಟೋಬರ್ 2025ರಂದು ಉಡುಪಿಯ ಶಾರದಾ ಕಲ್ಯಾಣ ಮಂಟಪ ರಸ್ತೆಯಲ್ಲಿರುವ ಐ. ವೈ. ಸಿ. ಸಭಾಂಗಣದಲ್ಲಿ ಸಂಜೆ ಘಂಟೆ 6.30ರಿಂದ ನಡೆಯಲಿದೆ. ಖ್ಯಾತ ಸಾಹಿತಿ ಶಶಿರಾಜ್ ರಾವ್ ಕಾವೂರು ರಚಿಸಿರುವ ಈ ನಾಟಕದ ರಂಗ ಕಲ್ಪನೆ, ವಿನ್ಯಾಸ ಮತ್ತು ನಿರ್ದೇಶನವನ್ನು ಗಣೇಶ್ ರಾವ್ ಎಲ್ಲೂರು ಮಾಡಿದ್ದಾರೆ. ಗಿರೀಶ್ ತಂತ್ರಿ ಉಡುಪಿ ಸಂಗೀತದಲ್ಲಿ ಸಹಕರಿಸಲಿದ್ದು, ಶಂಕರ್ ಬೆಳಲಕಟ್ಟೆ ಶಿವಮೊಗ್ಗ ಬೆಳಕು ಸಂಯೋಜನೆಯಲ್ಲಿ, ರಾಜು ಆಚಾರ್ಯ ಸಾಗರ ಹಾಗೂ ಭಾಸ್ಕರ ಆಚಾರ್ಯ ಸಾಗರ ವಸ್ತ್ರಾಲಂಕಾರದಲ್ಲಿ, ಜಗದೀಶ್ ಚೆನ್ನಂಗಡಿ ಉಡುಪಿ ಪ್ರಸಾದನದಲ್ಲಿ ಹಾಗೂ ಮಹೇಶ್ ಹೊನ್ನಾವರ ರಂಗಸಜ್ಜಿಕೆಯಲ್ಲಿ ಸಹಕರಿಸಲಿದ್ದಾರೆ. ಈ ನಾಟಕಕ್ಕೆ ಪ್ರವೇಶ ಉಚಿತವಾಗಿದೆ.

Read More

ಕಾಸರಗೋಡು: ಕಾಸರಗೋಡು ಜಿಲ್ಲೆಯ ರಾಮದಾಸ ನಗರದಲ್ಲಿರುವ ಕುತ್ಯಾಳ ಶ್ರೀ ಗೋಪಾಲಕೃಷ್ಣ ಯಕ್ಷಗಾನ ತರಬೇತಿ ಕೇಂದ್ರ (ರಿ.) ವತಿಯಿಂದ ಕೇಂದ್ರದ 25ನೇ ವರ್ಷದ ಅಂಗವಾಗಿ ಆಯೋಜಿಸಿದ ಸರಣಿ ಕಾರ್ಯಕ್ರಮ “ರಜತ ರಂಗ” ಇದರ ಉದ್ಘಾಟನಾ ಸಮಾರಂಭವು ದಿನಾಂಕ 20 ಅಕ್ಟೋಬರ್ 2025ರ ಸೋಮವಾರದಂದು ಎಡನೀರು ಮಠಾಧೀಶರಾದ ಶ್ರೀಶ್ರೀ ಸಚ್ಚಿದಾನಂದ ಭಾರತಿ ಶ್ರೀಗಳು ಹಾಗೂ ಕೊಂಡೆವೂರು ಮಠಾಧೀಶರಾದ ಶ್ರೀ ಶ್ರೀ ಯೋಗಾನಂದ ಸರಸ್ವತೀ ಶ್ರೀಗಳ ಆಶೀರ್ವಾದದೊಂದಿಗೆ  ಕುತ್ಯಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯಿತು. ಕುತ್ಯಾಳ ಶ್ರೀ ಕ್ಷೇತ್ರದ ಮೊಕ್ತೇಸರರಾದ ಕೆ. ಜಿ. ಶ್ಯಾನುಭೋಗ್ ಇವರು ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಸರಕಾರಿ ಜನರಲ್ ಆಸ್ಪತ್ರೆ, ಕಾಸರಗೋಡು, ಇಲ್ಲಿನ ವೈದ್ಯರಾದ ಡಾ. ಜನಾರ್ದನ ನಾಯ್ಕ ಸಿ.ಎಚ್. ದೀಪ ಬೆಳಗಿಸಿ ಉದ್ಘಾಟಿಸಿದರು. ರಜತ ಮಹೋತ್ಸವ ಸಮಿತಿ ಅಧ್ಯಕ್ಷರಾದ ಡಾ. ಹರಿಕಿರಣ್ ಬಂಗೇರ, ಪ್ರಧಾನ ಕಾರ್ಯದರ್ಶಿ ಹರಿನಾರಾಯಣ ಮಯ್ಯ ಹಾಗೂ ತರಬೇತಿ ಕೇಂದ್ರದ ಅಧ್ಯಕ್ಷರಾದ ಚಂದ್ರ ಮೋಹನ್ ಕೂಡ್ಲು, ಕೆ. ಕೆ. ಶ್ಯಾನುಭಾಗ್ ಮತ್ತು ಬಲಿಪ ಶಿವಶಂಕರ ಭಟ್…

Read More

ಪುತ್ತೂರು : ಕರ್ನಾಟಕ ಗಮಕ ಕಲಾ ಪರಿಷತ್ ಬೆಂಗಳೂರು, ಕರ್ನಾಟಕ ಗಮಕ ಕಲಾ ಪರಿಷತ್ ದ. ಕ. ಜಿಲ್ಲೆ, ಕರ್ನಾಟಕ ಗಮಕ ಕಲಾ ಪರಿಷತ್ ಪುತ್ತೂರು ತಾಲೂಕು ಘಟಕ, ಹಾಗೂ ಇತರ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ದ. ಕ. ಜಿಲ್ಲಾ 10ನೇ ಗಮಕ ಸಮ್ಮೇಳನ ದಿನಾಂಕ 17 ಅಕ್ಟೋಬರ್ 2025ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಾಲಯದ ನಟರಾಜ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿ ಉದ್ಘಾಟಿಸಿದ ಒಡಿಯೂರು ಸಂಸ್ಥಾನದ ಯೋಗಿನಿ ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀ ಮಾತನಾಡಿ “ಗಮಕ ಕಲೆಗೆ ಪ್ರಚಾರ ಸಿಗಬೇಕು. ಜಿಲ್ಲಾ ಅಧ್ಯಕ್ಷರು ಹೇಳಿದ ಹಾಗೆ ಮಠ ಮಂದಿರಗಳಲ್ಲಿ ವಾರಕ್ಕೆ ಒಮ್ಮೆಯಾದರೂ ಪುರಾಣ ವಾಚನಗಳು ನಡೆಯಬೇಕು. ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ಗಮಕಲಾ ಪರಿಷತ್ತು ಇದರ ಅಧ್ಯಕ್ಷರಾದ ಪ್ರೊಫೆಸರ್ ಮಧೂರು ಮೋಹನ ಕಲ್ಲೂ ರಾಯ ಮಾತನಾಡಿ “ಕನ್ನಡ ಕಾವ್ಯಗಳನ್ನು ಜನಸಾಮಾನ್ಯರಿಗೆ ಮುಟ್ಟಿಸುವಲ್ಲಿ ಗಮಕ ಅಥವಾ ಕಾವ್ಯವಾಚನವು ಮಹತ್ತಾದಂತಹ ಕೆಲಸವನ್ನು ಮಾಡುತ್ತಿದೆ.…

Read More