Author: roovari

ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರವು ನೀಡುವ 2020-21ನೇ ಸಾಲಿನ ‘ಡಾ.ಜಿ.ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’ ಪ್ರದಾನ ಸಮಾರಂಭವು ದಿನಾಂಕ 04 ಜೂನ್ 2025ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು. ಸಮಾರಂಭದಲ್ಲಿ ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ.ಮೋಹನ ಆಳ್ವ ಇವರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. 17 ವರ್ಷಗಳಿಂದ ನಡೆದುಕೊಂಡು ಬಂದ ‘ಆಳ್ವಾಸ್ ನುಡಿಸಿರಿ’, ಕನ್ನಡ ಸಾಹಿತ್ಯ ಸಮ್ಮೇಳನ, 30 ವರ್ಷಗಳಿಂದ ನಿರಂತರ ಆಯೋಜನೆಗೊಳ್ಳುತ್ತಿರುವ ‘ಆಳ್ವಾಸ್ ವಿರಾಸತ್’ ಬೃಹತ್ ಸಾಂಸ್ಕೃತಿಕ ಕಾರ್ಯಕ್ರಮ, ರಾಜ್ಯದ ನಂ.1 ಕನ್ನಡ ಮಾಧ್ಯಮ ಶಾಲೆಯೆಂದು ಸತತ ಗೌರವಕ್ಕೆ ಪಾತ್ರವಾಗುತ್ತಿರುವ ಸಂಪೂರ್ಣ ಉಚಿತ ಶಿಕ್ಷಣದ ‘ಆಳ್ವಾಸ್ ಕನ್ನಡ ಮಾಧ್ಯಮ ಶಾಲೆ’, ಆಳ್ವಾಸ್ ರಂಗ ಅಧ್ಯಯನ ಕೇಂದ್ರ, ಆಳ್ವಾಸ್ ಧೀಂಕೀಟ ಯಕ್ಷಗಾನ ಅಧ್ಯಯನ ಕೇಂದ್ರಗಳ ಮೂಲಕ ಕನ್ನಡ ನಾಡು- ನುಡಿ, ಕಲೆ, ಸಂಸ್ಕೃತಿಗಳಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಿಲಾಗಿದೆ.

Read More

ಮಂಡ್ಯ : ‘ಡಾ. ರಾಗೌ ಸಾಹಿತ್ಯ ಪ್ರಶಸ್ತಿ’ ಹಾಗೂ ‘ಕೆ. ಸಿಂಗಾರಿಗೌಡ ಪುಸ್ತಕ ಪ್ರಶಸ್ತಿ’ ಪ್ರದಾನ ಸಮಾರಂಭವು ದಿನಾಂಕ 06 ಜೂನ್ 2025ರಂದು ಮಂಡ್ಯದ ಕರ್ನಾಟಕ ಸಂಘದ ಕೆ. ವಿ. ಶಂಕರಗೌಡ ಶತಮಾನೋತ್ಸವ ಭವನದಲ್ಲಿ ದಿನಾಂಕ 08 ಜೂನ್ 2025ರ ಭಾನುವಾರ ಸಂಜೆ ಘಂಟೆ 5.00 ರಿಂದ ನಡೆಯಲಿದೆ. ‘ಡಾ. ರಾಗೌ ಸಾಹಿತ್ಯ ಪ್ರಶಸ್ತಿ’ಗೆ ಮೈಸೂರಿನ ವಿಶ್ರಾಂತ ಕುಲಪತಿಗಳಾದ ಡಾ. ಪದ್ಮಾಶೇಖರ್ ಹಾಗೂ ‘ಕೆ. ಸಿಂಗಾರಿಗೌಡ ಪುಸ್ತಕ ಪ್ರಶಸ್ತಿ’ಗೆ ವಿಜಯನಗರ ಜಿಲ್ಲೆಯ ಖ್ಯಾತ ವಿದ್ವಾಂಸರಾದ ಡಾ. ಕೆ. ರವೀಂದ್ರನಾಥ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯು ರೂಪಾಯಿ 15,000 ನಗದು ಮತ್ತು ಫಲಕವನ್ನು ಒಳಗೊಂಡಿದೆ. ಕರ್ನಾಟಕ ಸಂಘ (ರಿ) ಮಂಡ್ಯ ಇದರ ಅಧ್ಯಕ್ಷರಾದ ಪ್ರೊ. ಜಯಪ್ರಕಾಶಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮೈಸೂರಿನ ಖ್ಯಾತ ಸಾಹಿತಿಗಳಾದ ಡಾ.ರಾಗೌ ಹಾಗೂ ನಾಗಮಂಗಲ ತಾಲ್ಲೂಕು ಕರಡಹಳ್ಳಿಯ ಶ್ರೀ ಕೆ. ಎಸ್.…

Read More

ವೆಂಕಟೇಶ ಹುಣಶೀಕಟ್ಟಿ ಸರ್ ನಮಗೆ ಕಾಲೇಜಿನಲ್ಲಿ ಭೌತ ರಸಾಯನಶಾಸ್ತ್ರ ಬೋಧಿಸಿದವರು. ಜೊತೆ ಜೊತೆಗೆ ಕಾವ್ಯ ಕೃಷಿಯಲ್ಲೂ ತೊಡಗಿದವರು. ಅವರು ಮತ್ತು ಅವರ‍ ಸಮಕಾಲೀನ ಸಾಹಿತ್ಯ,ರಂಗಭೂಮಿಯನ್ನು ಪ್ರೀತಿಸುತ್ತಿದ್ದ, ತೊಡಗಿಕೊಂಡಿದ್ದ ಪ್ರೊಫೆಸರ್ ಗಳು ನಮ್ಮ ಮೇಲೆ ಬೀರಿದ ಪ್ರಭಾವ ಬಹಳ ದೊಡ್ಡದು. ಇವತ್ತು ನಾವು ಏನಾಗಿದ್ದೆವೋ ಅದಕ್ಕೆ ಅವರೂ ಕಾರಣರು. ಹುಣಶೀಕಟ್ಟಿ ಸರ್ ನಮ್ಮ ಮೇಲೆ ಇಟ್ಟಿರುವ ಪ್ರೀತಿ, ಅಭಿಮಾನ ಅಪಾರ. ಮೊನ್ನೆ ಮೊನ್ನೆ ನಾನು ದೂರದರ್ಶನದ ಸಂದರ್ಶನ ಮುಗಿಸಿ ಹೊರಬರುತ್ತಿದ್ದಂತೆಯೇ ಕರೆ ಮಾಡಿದವರು ಅವರು. ಅವರ ಮಾತುಗಳಲ್ಲಿ ಅತೀವ ಪ್ರೀತಿಯಿತ್ತು. ಅಂಥ ಹುಣಶೀಕಟ್ಟಿ ಸರ್ ನನ್ನ ‘ ಹೌಸ್ ಫುಲ್’ ಕುರಿತು ಬರೆದಿದ್ದಾರೆ. ನನ್ನ ವಿದ್ಯಾರ್ಥಿ ಮಿತ್ರರಾದಂಥ ಕಿರಣ ಭಟ್ಟ (ಹೊನ್ನಾವರ )ಅವರು ಕಳುಹಿಸಿದ ಪುಸ್ತಕ “ಹೌಸ್ ಫುಲ್”–ಕೃತಜ್ಞತೆಗಳು. ಕಿರಣ ಭಟ್ಟ ಅವರ ಎರಡನೇ ಕೃತಿ ಇದು. ಮೊದಲನೆಯದು “ರಂಗಕೈರಳಿ” (ಇದರ ಕುರಿತೂ ಅಭಿಪ್ರಾಯ ತಿಳಿಸಿದ್ದೆ ).ಜಿ. ಎನ್. ಮೋಹನ್ ಅವರ ಪ್ರೋತ್ಸಾಹದಿಂದ, ಒತ್ತಾಸೆಯಿಂದ ಇವೆರಡೂ ಕೃತಿಗಳು ಹೊರಬಂದಿವೆ. ಇಲ್ಲದೇ ಹೋಗಿದ್ದರೆ ಕಿರಣ…

Read More

ತೆಕ್ಕಟ್ಟೆ : ಧಮನಿ (ರಿ.) ತೆಕ್ಕಟ್ಟೆ ಆಶ್ರಯದಲ್ಲಿ ನಡೆದ ‘ಚಿಗುರು’ ಮಕ್ಕಳ ವೃತ್ತಿಪರ ರಂಗ ತರಬೇತಿ ಶಿಬಿರದಲ್ಲಿ ಕೋಟ ಶಿವರಾಮ ಕಾರಂತರ ಮಕ್ಕಳ ನಾಟಕ “ಸೂರ್ಯ ಚಂದ್ರ” ಕುಂದಾಪುರ(ಕೋಟ) ಕನ್ನಡದಲ್ಲಿ ಸಿದ್ಧಗೊಂಡು 31 ಮೇ 2025ರ ಶನಿವಾರದಂದು ಪ್ರದರ್ಶನಗೊಂಡಿತು. ಈ ಪ್ರಯೋಗಕ್ಕೆ ಶುಭಕರ್ ಪುತ್ತೂರು ಸಂಗೀತ ನೀಡಿದ್ದು, ಬೆಳಕಿನಲ್ಲಿ ಶ್ರೀಶ ತೆಕ್ಕಟ್ಟೆ, ರಂಗಸಜ್ಜಿಕೆಯಲ್ಲಿ ಪ್ರಸಾದ್ ಬ್ರಹ್ಮಾವರ, ವಸ್ತ್ರ ವಿನ್ಯಾಸದಲ್ಲಿ ರಕ್ಷಿತಾ ಎಸ್. ಬೈಕಾಡಿ, ಪ್ರಸಾಧನದಲ್ಲಿ ರಮೇಶ್ ಕಪಿಲೇಶ್ವರ ಸಹಕರಿಸಿದರು. ರೋಹಿತ್ ಎಸ್. ಬೈಕಾಡಿ. ಈ ನಾಟಕವನ್ನು ಕುಂದಾಪ್ರ ಕನ್ನಡಕ್ಕೆ ಅನುವಾದಿಸಿ, ವಿನ್ಯಾಸ ಮಾಡಿ ನಿರ್ದೇಶಿಸಿದ್ದಾರೆ. ಶ್ರೀಶ ತೆಕ್ಕಟ್ಟೆ ನಿರ್ವಹಣೆ ಮಾಡಿದರು.

Read More

ಬೆಂಗಳೂರು : ಸ್ವಾಯಕ್ಷೇಮ ಫೌಂಡೇಷನ್, ಶ್ರೀ ಶಂಕರ ಕ್ಯಾನ್ಸರ್ ಫೌಂಡೇಷನ್ ಮತ್ತು ಅನೂರ್ ಅನಂತಕೃಷ್ಣ ಶರ್ಮ ಇವರ ಸಹಯೋಗದಲ್ಲಿ ‘ಸ್ವರೂಪಚಾರ’ ಚಿಕಿತ್ಸಕ ಸಂಗೀತ ಕಛೇರಿ ಸರಣಿಯನ್ನು ದಿನಾಂಕ 07 ಜೂನ್ 2025ರಂದು ಸಂಜೆ 4-30 ಗಂಟೆಗೆ ಬೆಂಗಳೂರಿನ ಬಸವನಗುಡಿಯಲ್ಲಿರುವ ಶ್ರೀ ಶಂಕರ ಕ್ಯಾನ್ಸರ್ ಹಾಸ್ಪಿಟಲ್ ಮತ್ತು ರಿಸರ್ಚ್ ಸೆಂಟರಿನ ಶ್ರೀ ಶ್ರೀ ಶ್ರೀ ಅಭಿನವ ವಿದ್ಯಾತೀರ್ಥ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ. ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಛೇರಿಯಲ್ಲಿ ಶ್ರೀಮತಿ ಮೇಧಾ ಭಟ್ ಇವರ ಹಾಡುಗಾರಿಕೆಗೆ ಹರೀಶ್ ಕರ್ಣಂ ಇವರು ಹಾರ್ಮೋನಿಯಂನಲ್ಲಿ ಹಾಗೂ ವಿಘ್ನೇಶ್ ಕಾಮತ್ ಇವರು ತಬಲಾದಲ್ಲಿ ಸಾಥ್ ನೀಡಲಿದ್ದಾರೆ.

Read More

ಮಂಗಳೂರು : ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಪ್ರಸ್ತುತ ಪಡಿಸುವ ಗಾಯನ ಸಂಗೀತ ಕಾರ್ಯಾಗಾರವು ದಿನಾಂಕ 14 ಮತ್ತು 15 ಜೂನ್ 2025ರಂದು ಸಂಜೆ 7-00 ಗಂಟೆಯಿಂದ 8-15 ರವೆರೆಗೆ ಗೂಗಲ್ ಮೀಟ್ ನಲ್ಲಿ ನಡೆಯಲಿದೆ. ವಿದ್ವಾನ್ ಡೆಲ್ಲಿ ವಿ. ಮುತ್ತು ಕುಮಾರ್ ಇವರು ಕಾರ್ಯಾಗಾರವನ್ನು ನಡೆಸಿಕೊಡಲಿದ್ದು, ವಿವಿಧ ಸಂಯೋಜಕರ ಅಪರೂಪದ ಸಂಯೋಜನೆಯನ್ನು ಕಲಿಸಲಾಗುವುದು. ನೋಂದಾವಣೆ ಮತ್ತು ಹೆಚ್ಚಿನ ಮಾಹಿತಿಗಾಗಿ 7411916098 ಸಂಖ್ಯೆಯನ್ನು ಸಂಪರ್ಕಿಸಿರಿ.

Read More

ಬೆಂಗಳೂರು : ಯಕ್ಷೇಶ್ವರಿ ಯಕ್ಷಗಾನ (ರಿ.) ಬೆಂಗಳೂರು ಇವರ ವತಿಯಿಂದ ಯಕ್ಷಗಾನ ಹಿಮ್ಮೇಳ ಹಾಗೂ ಮುಮ್ಮೇಳ ತರಗತಿಗಳು ಜೂನ್ ತಿಂಗಳ ಎರಡನೇ ವಾರದಲ್ಲಿ ಬೆಂಗಳೂರು ಮಹಾನಗರದಲ್ಲಿ ಪ್ರಾರಂಭವಾಗಲಿದೆ. ಶ್ರೀ ಸುಬ್ರಾಯ ಹೆಬ್ಬಾರ್ ಇವರ ನೇತೃತ್ವದಲ್ಲಿ ‘ಹೆಜ್ಜೆ ಹಾಗೂ ಭಾಗವತಿಗೆ’ ಹಾಗೂ ಶ್ರೀನಿವಾಸ್ ಪ್ರಭು ಮತ್ತು ಅಕ್ಷಯ್ ಆಚಾರ್ ಬಿದ್ಕಲ್ ಕಟ್ಟೆ ಇವರ ನೇತೃತ್ವದಲ್ಲಿ ‘ಚಂಡೆ ಮದ್ದಳೆ ತರಗತಿಗಳು ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 9611640186 ಮತ್ತು 8660565110 ಸಂಖ್ಯೆಯನ್ನು ಸಂಪರ್ಕಿಸಿರಿ.

Read More

ಕುಷ್ಟಗಿ : ಕನ್ನಡ ಸಾಹಿತ್ಯ ಪರಿಷತ್ತು ಕುಷ್ಟಗಿ ತಾಲೂಕು ಹಾಗೂ ‘ಸಂಗಾತ ಪುಸ್ತಕ’ ಪ್ರಕಾಶನ ಇವರ ಸಹಯೋಗದೊಂದಿಗೆ ಮೌನೇಶ ನವಲಹಳ್ಳಿ ಇವರ ‘ನೀಲಿ ಹೊತ್ತಿಗೆ’ ಕಾದಂಬರಿ ಅವಲೋಕನ ಕಾರ್ಯಕ್ರಮವನ್ನು ದಿನಾಂಕ 08 ಜೂನ್ 2025ರಂದು ಬೆಳಗ್ಗೆ 10-00 ಗಂಟೆಗೆ ಕುಷ್ಟಗಿಯ ಬಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಕಾರಾಗೃಹದ ಅಧೀಕ್ಷಕರಾದ ಡಾ. ಐ.ಜೆ. ಮ್ಯಾಗೇರಿ ಇವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದು, ಕುಷ್ಟಗಿ ಕ.ಸಾ.ಪ.ದ ಅಧ್ಯಕರಾದ ಲೆಂಕೆಪ್ಪ ವಾಲಿಕಾರ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಿಂಧನೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ. ಜಾಜಿ ದೇವೇಂದ್ರಪ್ಪ ಇವರು ಕಾದಂಬರಿ ಲೋಕಾರ್ಪಣೆಗೊಳಿಸಲಿದ್ದು, ಅಕ್ಷರ ಸಂಗಾತದ ಸಂಪಾದಕರಾದ ಡಾ. ಟಿ.ಎಸ್. ಗೊರವರ ಇವರು ಪ್ರಾಸ್ತಾವಿಕ ಮಾತುಗಳನ್ನಾಡಲಿದ್ದಾರೆ. ಮಹೇಶ ಬಳ್ಳಾರಿ, ಡಾ. ವಸಂತಕುಮಾರ ಕಡ್ಲಿಮಟ್ಟಿ, ಜಹಾನ್‌ಅರಾ ಕೋಳೂರು, ಶ್ರೀಕಾಂತ ಬೆಟಗೇರಿ, ಮಹಾಂತೇಶ ಹಿರೇಕುರುಬರ, ಅಶೋಕ ಹೊಸಮನಿ, ರವಿ ದೇವರೆಡ್ಡಿ, ರವಿ ಹಾದಿಮನಿ, ದೇವರಾಜ ವಿಶ್ವಕರ್ಮ, ಶಿವನಗೌಡ ಪೊಲೀಸ್‌ ಪಾಟೀಲ್, ಮಹಾಂತೇಶ ಗೆದಗೇರಿ ಶರಣಪ್ಪ ಲೈನದ, ಮಹೇಶ ಹಡಪದ ಇವರುಗಳು…

Read More

ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಢ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ದಿನಾಂಕ 04 ಜೂನ್ 2025ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141ನೇ ಜನ್ಮದಿನೋತ್ಸವ, ‘ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಾಹಿತಿ ಹಾಗೂ ಆಕಾಶವಾಣಿ ನಿವೃತ್ತ ಉದ್ಘೋಷಕರಾದ ಸುಬ್ರಾಯ ಸಂಪಾಜೆ “ಕನ್ನಡ ನಾಡಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರವಾಗಿದೆ. ಶಿಕ್ಷಣ, ಉದ್ಯೋಗ, ಆರೋಗ್ಯ, ನೀರಾವರಿ, ಕೈಗಾರಿಕೆ, ವಿದ್ಯುತ್, ಆರ್ಥಿಕ ಹೀಗೆ ಹಲವು ಕ್ಷೇತ್ರಗಳ ಅಭಿವೃದ್ಧಿಗೆ ಚಾಲನೆ ನೀಡಿದ್ದರು. ಸ್ವಾತಂತ್ರ್ಯ ಪೂರ್ವದಲ್ಲಿ ಭಾರತದ ಶ್ರೇಷ್ಠ ರಾಜರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತ ಮೇಲ್ಪಂಕ್ತಿಯಿಂದ ಕೂಡಿತ್ತು. ಕೊಡಗಿನ ಸಾಂಸ್ಕೃತಿಕ ಹಾಗೂ ಪಾರಂಪರಿಕ ಶ್ರೀಮಂತಿಕೆ ಹೊಂದಿರುವ ಬುಡಕಟ್ಟು…

Read More

ಮೈಸೂರು : ತಿರಂಗಾ ಥಿಯೇಟರ್ ಪ್ರಸ್ತುತ ಪಡಿಸುವ ಅಂಬಿಕಾ ಈಡಿಗ ರಚನೆ ಮತ್ತು ನಿರ್ದೇಶನದಲ್ಲಿ ‘ಕೃಷ್ಣಗೀತೆ’ ಸಂಗೀತ ಕಾರ್ಯಕ್ರಮವನ್ನು ದಿನಾಂಕ 08 ಜೂನ್ 2025ರಂದು ಸಂಜೆ 6-30 ಗಂಟೆಗೆ ಮೈಸೂರಿನ ನಟನ ರಂಗಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ 7259537777 ಮತ್ತು 8123729998 ಸಂಖ್ಯೆಯನ್ನು ಸಂಪರ್ಕಿಸಿರಿ.

Read More