Author: roovari

ಬಂಟ್ವಾಳ : ಬಂಟ್ವಾಳ ಜೋಡುಮಾರ್ಗದ ನಿವೃತ್ತ ಶಿಕ್ಷಕ ರಾಜಮಣಿಯವರ ನಿವಾಸದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ವತಿಯಿಂದ ‘ರಾಷ್ಟ್ರ – ರಾಷ್ಡ್ರೀಯತೆ – ಸಾಹಿತ್ಯ’ ಎಂಬ ವಿಚಾರದಲ್ಲಿ ವಿಚಾರ ಸಂಕಿರಣವು ದಿನಾಂಕ 18-04-2024 ರಂದು ನಡೆಯಿತು. ಬಂಟ್ವಾಳ ಸಮಿತಿಯ ಅಧ್ಯಕ್ಷ ಮಂಗಳೂರಿನ ಶಸ್ತ್ರ ಚಿಕಿತ್ಸಕ ಮತ್ತು ಕಣಚೂರು ಆಯುರ್ವೇದ ಕಾಲೇಜಿನ ಮುಖ್ಯ ವೈದ್ಯಕೀಯ ಅಧೀಕ್ಷಕ ಸಲಹೆಗಾರ ಡಾ. ಸುರೇಶ ನೆಗಳಗುಳಿಯವರ ಸಾರಥ್ಯದಲ್ಲಿ ನಡೆದ ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀ ರಾಜಮಣಿಯವರು ವಹಿಸಿದ್ದರು. ಶ್ರೀಮತಿ ಭಾರತಿಯವರ ಪ್ರಾರ್ಥನೆಯೊಡನೆ ಪ್ರಾರಂಭವಾದ ಕಾರ್ಯಕ್ರಮದ ಸ್ವಾಗತ ಭಾಷಣವನ್ನು ಪಿಂಗಾರ ಸಾಹಿತ್ಯ ಬಳಗದ ಮುಖ್ಯಸ್ಥ ಹಾಗೂ ಅ.ಭಾ‌.ಸಾ‌.ಪ ಸದಸ್ಯ ರೇಮಂಡ್ ಡಿಕೂನಾ ತಾಕೊಡೆ ನೆರವೇರಿಸಿದರು. ಪ್ರಧಾನ ಉಪನ್ಯಾಸಕ ಜೋಡುಮಾರ್ಗದ ಶ್ರೀ ಮಹಾಬಲೇಶ್ವರ ಹೆಗಡೆಯವರು ಸವಿವರವಾಗಿ ರಾಷ್ಡ್ರ ಹಾಗೂ ರಾಷ್ಡ್ರೀಯತೆಯು ಸಾಹಿತ್ಯದೊಡನೆ ಹಾಸು ಹೊಕ್ಕಾಗಿರುವ ವಿಚಾರವನ್ನು ಹಲವು ಉದಾಹರಣೆ ಸಹಿತ ವಿಷದ ಪಡಿಸಿದರು. ಅವರು ಮುಂದುವರಿದು “ಡಿ.ವಿ.ಗುಂಡಪ್ಪನವರ ಸಾಹಿತ್ಯದಲ್ಲಿ ಬಂದ ನಾಲ್ಕನೆಯದಾದ ದೇಶ ಋಣವೂ ಸಹ ಅರ್ಥಗರ್ಭಿತ ವಾಗಿದೆ.” ಎಂದರು.…

Read More

ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ಆಶ್ರಯದಲ್ಲಿ ಸಾಹಿತಿ, ಕವಿ ದಿವಂಗತ ಮೇಟಿ ಮುದಿಯಪ್ಪ ನೆನಪಿನ ಉಡುಪಿ ಜಿಲ್ಲಾಮಟ್ಟದ ಯುವ ಕಥಾ ಸ್ಪರ್ಧೆಯಲ್ಲಿ ಡಾ. ನಮೃತಾ ಬಿ. ಅವರು ಪ್ರಥಮ ಬಹುಮಾನದೊಂದಿಗೆ ಆಯ್ಕೆಯಾಗಿರುತ್ತಾರೆ. ಬಹುಮಾನವು ರೂಪಾಯಿ ಐದು ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಫಲಕ ಒಳಗೊಂಡಿರುತ್ತದೆ. ದ್ವಿತೀಯ ಬಹುಮಾನ ನಗದು ಮೂರು ಸಾವಿರದೊಂದಿಗೆ ಡಾ. ಜಿ.ಪಿ. ನಾಗರಾಜ್ ಆಯ್ಕೆಯಾಗಿರುತ್ತಾರೆ. ತೀರ್ಪುಗಾರರ ಮೆಚ್ಚುಗೆ ಬಹುಮಾನಕ್ಕಾಗಿ ರಾಮಾಂಜಿ ನಮ್ಮಭೂಮಿ, ಮಂಜುನಾಥ ಕಾರ್ತಟ್ಟು ಹಾಗೂ ಮಂಜುನಾಥ ಹಿಲಿಯಾಣ ಆಯ್ಕೆಯಾಗಿರುತ್ತಾರೆ. ಪ್ರಸಿದ್ಧ ಕಥೆಗಾರ ಡಾ. ಬಿ. ಜನಾರ್ದನ ಭಟ್ ತೀರ್ಪುಗಾರರಾಗಿ ಸಹಕರಿಸಿದ್ದರು. ಮುಂದಿನ ಸಾಹಿತ್ಯ ಪರಿಷತ್ತಿನ ಸಮಾರಂಭದಲ್ಲಿ ಬಹುಮಾನವನ್ನು ನೀಡಲಾಗುವುದು ಎಂದು ಕ.ಸಾ.ಪ. ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ., ಗೌರವ ಕಾರ್ಯದರ್ಶಿಗಳಾದ ಜನಾರ್ದನ ಕೊಡವೂರು ಮತ್ತು ರಂಜಿನಿ ವಸಂತ್ ತಿಳಿಸಿರುತ್ತಾರೆ.

Read More

ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಹಾಗೂ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸಮಿತಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ‘ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ’ ಕಾರ್ಯಕ್ರಮವು ದಿನಾಂಕ 20-04-2024ರಂದು ಬೆಳಿಗ್ಗೆ ಗಂಟೆ 10-30ಕ್ಕೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ನಡೆಯಲಿದೆ. ಈ ವರ್ಷದ ಪ್ರಶಸ್ತಿಯನ್ನು ಪ್ರಸಿದ್ಧ ಗಮಕ ವ್ಯಾಖ್ಯಾನಕಾರ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ್ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಆರ್‌.ಆರ್.ಸಿ.ಯ ಆಡಳಿತಾಧಿಕಾರಿ ಡಾ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ. ನಾಡೋಜ ಪ್ರೊ. ಕೆ.ಪಿ. ರಾವ್ ಪ್ರಶಸ್ತಿ ಪ್ರದಾನ ಮಾಡಲಿದ್ದು, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸಮಿತಿ ಅಧ್ಯಕ್ಷ ಡಾ. ನಾ. ದಾಮೋದರ ಶೆಟ್ಟಿ ವಹಿಸಲಿದ್ದಾರೆ. ಕಾಲೇಜಿನ ಕನ್ನಡ ಉಪನ್ಯಾಸಕ ಡಾ. ಶಿವಕುಮಾರ ಅಳಗೋಡು ಅಭಿನಂದನಾ ಭಾಷಣ ಮಾಡಲಿರುವರು. ಪ್ರಶಸ್ತಿ ಸಮಿತಿಯ ಕಾರ್ಯದರ್ಶಿ ಶ್ರೀಮತಿ ಮನೋರಮಾ ಎಂ. ಭಟ್ ಹಾಗೂ ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ…

Read More

ಕೊಡಗಿನ ರಾಮಸ್ವಾಮಿ ಕಣಿವೆಯ ಕೆ.ಎಸ್.ಭಗವಾನ್ ಮತ್ತು ಬಿ.ನೇತ್ರಾವತಿ ದಂಪತಿಗಳ ಪುತ್ರಿಯಾಗಿರುವ ಪೂರ್ಣಿಮಾ ಭಗವಾನ್ ಇವರು ಕಣಿವೆ ಸೂರ್ಯನಾರಾಯಣ ಶೆಟ್ಟಿಯವರ ಹಿರಿಯ ಮೊಮ್ಮಗಳು. ಮೈಸೂರಿನ ಚಂದ್ರಿಕಾ ಪಾಠಶಾಲೆಯಲ್ಲಿ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಪಡೆದು ಮಹಾರಾಣಿ ಕಾಲೇಜಿನಲ್ಲಿ ವಿದ್ಯಾಭ್ಯಾಸವನ್ನು ಮುಂದುವರಿಸಿದ್ದಾರೆ. ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ತಮ್ಮ ಎಮ್ಎಸ್‌ಸಿ ಸ್ನಾತಕೋತ್ತರ ಪದವಿಯನ್ನು ಪಡೆದರು . ಹೊಳೆನರಸೀಪುರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದವರು. ನಂತರ ಬ್ಯಾಂಕ್ ಉದ್ಯೋಗಿಯಾಗಿದ್ದಾರೆ. ಎಳವೆಯಿಂದಲೇ ಓದು ,ಬರೆಹ, ಅಂಚೆ ಚೀಟಿ ಸಂಗ್ರಹದಂತಹ ಹವ್ಯಾಸವನ್ನು ಬೆಳೆಸಿಕೊಂಡವರು. ನಾಟಕ , ನೃತ್ಯ, ಸಂಗೀತ ಕಾರ್ಯಕ್ರಮಗಳತ್ತ ತಮ್ಮ ಒಲವು ಹರಿಸಿಕೊಂಡಿದ್ದಾರೆ. ಶಾಲಾ ದಿನಗಳಲ್ಲಿ ಅನೇಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಗಳಿಗೆ ಭಾಜನರಾಗಿದ್ದಾರೆ.ಇವರ ಕವನ,ಲೇಖನಗಳು ಈ ಸಂಜೆ ಮತ್ತು ನಿಮ್ಮ ವೈಶ್ಯವಾರ್ತೆ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಎಂ. ಎಸ್ಸಿ. ಪದವೀಧರರಾದರೂ ಕನ್ನಡ ಪುಸ್ತಕಗಳ ಓದು ಮತ್ತು ಬರೆಯುವ ಹವ್ಯಾಸವನ್ನು ಚಿಕ್ಕಂದಿನಿಂದಲೂ ರೂಢಿಸಿಕೊಂಡು ಬಂದಿರುವುದರಿಂದ ಅಂತರ್ಜಾಲದ ಅನೇಕ ವಾಟ್ಸ್ಅಪ್ ಬಳಗಗಳಲ್ಲಿ ಕನ್ನಡ ಕವಿತೆಗಳು, ಚಿತ್ರಕವನ, ಚುಟುಕು, ವಚನ, ಲೇಖನ, ಕಿರುಗತೆ…

Read More

ಮಹಾಭಾರತವನ್ನು ಆಧಾರವಾಗಿಟ್ಟುಕೊಂಡು ‘ಪರ್ವ’ವನ್ನು ಬರೆದ ಎಸ್.ಎಲ್. ಭೈರಪ್ಪನವರು ರಾಮಾಯಣದ ಸೀತೆಯ ಬದುಕು ಮತ್ತು ಚಿಂತನೆಗಳ ಆಧಾರದಲ್ಲಿ ‘ಉತ್ತರಕಾಂಡ’ ಎಂಬ ಕಾದಂಬರಿಯನ್ನು ರಚಿಸಿದ್ದಾರೆ. ರಾಮಾಯಣದ ಪಾತ್ರಗಳ ಅತಿಮಾನುಷ ಗುಣಗಳನ್ನು ಬದಿಗಿಟ್ಟು ಅವರನ್ನು ಶಕ್ತಿ ದೌರ್ಬಲ್ಯಗಳಿರುವ ಸಾಮಾನ್ಯ ಮನುಷ್ಯರಂತೆ ಚಿತ್ರಿಸಿದ್ದಾರೆ. ಇದರ ಹಿಂದೆ ಲೇಖಕರ ಧ್ಯಾನ- ಅಧ್ಯಯನ, ಇತಿಹಾಸ ಪ್ರಜ್ಞೆ, ಪುರಾಣಾದಿ ಸಾಹಿತ್ಯಗಳು ಮೂಡಿಸಿದ ಭಾರತೀಯ ಸಂಸ್ಕೃತಿಯ ಪ್ರಭಾವಗಳು ಕೆಲಸ ಮಾಡಿವೆ. ರಾಮಾಯಣವನ್ನು ಹಿನ್ನೆಲೆಯಾಗಿಟ್ಟುಕೊಂಡು ಬದುಕಿನ ಸಂಘರ್ಷಗಳನ್ನು ಅವಲೋಕಿಸಿದ ಲೇಖಕರು ಸೀತೆಯ ಮನೋವೇದನೆಗಳನ್ನು ಸಾಮಾನ್ಯ ಹೆಣ್ಣಿನ ಬದುಕಿನೊಂದಿಗೆ ಸಮೀಕರಿಸಿ ಆಧುನಿಕ ಸಮಾಜವನ್ನು ವಿಮರ್ಶಿಸಿದ್ದಾರೆ. ವ್ಯಾಪಾರಿ ಮೌಲ್ಯಗಳು ಸಮಾಜವನ್ನು ಮುನ್ನಡೆಸುತ್ತಿರುವ ಈ ಸಂದರ್ಭದಲ್ಲಿ ಸತ್ಯ, ಸೌಂದರ್ಯ, ಪ್ರೀತಿ ವಿಶ್ವಾಸಗಳು ಬೆಲೆ ಕಳೆದುಕೊಳ್ಳುತ್ತಿವೆ. ವೈರತ್ವ ವಿಜೃಂಭಿಸುತ್ತಿದೆ. ಪ್ರತಿಯೊಬ್ಬರೂ ಗುಂಪಿನಲ್ಲಿ ಒಂಟಿಯಾಗುತ್ತಾರೆ ಎಂಬ ಸತ್ಯವನ್ನರಿತುಕೊಂಡ ಲೇಖಕರು ಹೆಜ್ಜೆಹೆಜ್ಜೆಗೂ ನೋವಿನ ಮಡುವಿನೊಳಗೆ ಮುಳುಗೇಳುವ ಸೀತೆಯನ್ನು ತಮ್ಮ ಕಾದಂಬರಿಯ ನಾಯಕಿಯನ್ನಾಗಿಸಿದ್ದಾರೆ. ಅವಳ ತಳಮಳ, ತುಡಿತ, ಪುರುಷ ಪ್ರಧಾನ ಸಮಾಜಕ್ಕೆ ಕೊಡುವ ತೀಕ್ಷ್ಣ ಪ್ರತಿಕ್ರಿಯೆಗಳು ಮುಖ್ಯವಾಗುತ್ತವೆ. ಆಕೆ ಅನುಭವಿಸುವ ತಬ್ಬಲಿತನದ ನೋವು ಇಡೀ…

Read More

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಎರಡು ಪ್ರತಿಷ್ಟಿತ ದತ್ತಿ ಪ್ರಶಸ್ತಿಗಳಾದ ಡಾ. ರಾಜಕುಮಾರ್ ಸಂಸ್ಕೃತಿ ದತ್ತಿ ಮತ್ತು ಪ್ರೊ. ಸಿ.ಎಚ್. ಮರಿದೇವರು ಪ್ರತಿಷ್ಠಾನ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 20-04-2024ರ ಶನಿವಾರ ಸಂಜೆ ಗಂಟೆ 5-00ಕ್ಕೆ ನಡೆಯಲಿದೆ. ಖ್ಯಾತ ನಿರ್ಮಾಪಕರೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರೂ ಆದ ಶ್ರೀ ಎಸ್.ಎ. ಚಿನ್ನೇಗೌಡ ಅವರು ಉದ್ಘಾಟಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ, ಹಿರಿಯ ಕಲಾವಿದರೂ, ನಿರ್ಮಾಪಕರೂ ಆದ ಶ್ರೀ ರಮೇಶ್ ಭಟ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು ದತ್ತಿ ದಾನಿಗಳ ಪರವಾಗಿ ಎಸ್. ರಾಜಶೇಖರ್ ಅವರು ಉಪಸ್ಥಿತರಿರುತ್ತಾರೆ. ಕನ್ನಡಿಗರ ಅಭಿಮಾನ ದೇವತೆ ಡಾ. ರಾಜ್ ಕುಮಾರ್ ಸರಳತೆ ಮತ್ತು ವಿನಯತೆಯ ಪ್ರತಿರೂಪದಂತಿದ್ದವರು. ಸಾಹಿತ್ಯ ಸಂಸ್ಕೃತಿಯ ಬಗ್ಗೆ ಕೂಡ ಅಪಾರ ಕಾಳಜಿಯನ್ನು ಹೊಂದಿದವರು ತಮಗೆ ಭಾರತೀಯ ಚಿತ್ರರಂಗದ ಮೇರು ಪುರಸ್ಕಾರ ‘ದಾದಾ…

Read More

ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ದ.ಕ. ಜಿಲ್ಲೆ ಮತ್ತು ಶ್ರೀ ರಾಮಕೃಷ್ಣ ಪದವಿ ಕಾಲೇಜು ಮಂಗಳೂರು ಇವುಗಳ ಸಹಯೋಗದಲ್ಲಿ ‘ಮತದಾನ – ಪ್ರದಾನ ಕವಿಗೋಷ್ಠಿ ಮತ್ತು ಸಂವಾದ’ ಕಾರ್ಯಕ್ರಮವನ್ನು ದಿನಾಂಕ 20-04-2024ರಂದು ಬೆಳಗ್ಗೆ 10-00 ಗಂಟೆಗೆ ಮಂಗಳೂರಿನ ಬಂಟ್ಸ್ ಹಾಸ್ಟಲ್ ಇಲ್ಲಿರುವ ಶ್ರೀ ರಾಮಕೃಷ್ಣ ಪದವಿ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರಾಮಕೃಷ್ಣ ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಬಾಲಕೃಷ್ಣ ಶೆಟ್ಟಿಯವರು ವಹಿಸಲಿದ್ದು, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಇದರ ಅಧ್ಯಕ್ಷರಾದ ಪ್ರೊ. ಗಣಪತಿ ಭಟ್ ಕುಳಮರ್ವ ಇವರು ಉದ್ಘಾಟಿಸಲಿದ್ದಾರೆ. ಅಖಿಲ ಭಾರತೀಯ ಸಾಹಿತ್ಯ ಪರಿಷತ್ ದ.ಕ. ಜಿಲ್ಲೆ ಅಧ್ಯಕ್ಷರಾದ ಪಿ.ಬಿ. ಹರೀಶ್ ರೈ ಇವರು ಉಪಸ್ಥಿತರಿರುವರು. ಇದೇ ಸಂದರ್ಭದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ದ.ಕ. ಜಿಲ್ಲಾ ಸಮಿತಿ ಆಯೋಜಿಸಿದ ಅಯೋಧ್ಯೆಯಲ್ಲಿ ರಾಮಮಂದಿರ, ಮನೆಮನಗಳಲ್ಲಿ ರಾಮಚಂದಿರ ಕವಿತಾ ಸ್ಪರ್ಧೆಯ…

Read More

ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮವು ದಿನಾಂಕ 22-04-2024ರಂದು ಸಂಜೆ ಗಂಟೆ 6.25ಕ್ಕೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಈ ದಿನದ ಸರಣಿ ಕಾರ್ಯಕ್ರಮದಲ್ಲಿ ಉಡುಪಿಯ ಕುಮಾರಿ ಶ್ರದ್ಧಾ ಕೆ. ಭಟ್ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ. ಶ್ರೀ ಕೃಷ್ಣರಾಜ ಭಟ್ ಮತ್ತು ಶ್ರೀಮತಿ ವಸುಧಾ ಭಟ್ ದಂಪತಿಯ ಸುಪುತ್ರಿಯಾದ ಕುಮಾರಿ ಶ್ರದ್ಧಾ ಕೆ. ಭಟ್ ಇವರು ಪ್ರಸ್ತುತ ಉಡುಪಿಯ ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜಿನಲ್ಲಿ ತೃತೀಯ ಬಿಸಿಎಯನ್ನು ವ್ಯಾಸಂಗ ಮಾಡುತ್ತಿದ್ದಾರೆ. ಕಳೆದ 10 ವರ್ಷಗಳಿಂದ ಉಡುಪಿಯ ರಾಧಾಕೃಷ್ಣ ನೃತ್ಯನಿಕೇತನದ ಗುರುಗಳಾದ ನೃತ್ಯ ವಿದುಷಿ ಶ್ರೀಮತಿ ವೀಣಾ ಸಾಮಗ ಅವರ ಬಳಿ ನೃತ್ಯಭ್ಯಾಸ ಮಾಡುತ್ತಿದ್ದು, ಭರತನಾಟ್ಯ ಜೂನಿಯರ್ ಹಾಗೂ ಸೀನಿಯರ್ ಪರೀಕ್ಷೆಗಳಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾಳೆ. ಚಿಕ್ಕಂದಿನಿಂದಲೂ ನೃತ್ಯದ ಬಗ್ಗೆ ಅಪಾರ ಆಸಕ್ತಿಯನ್ನು ಹೊಂದಿದ…

Read More

ಬೆಂಗಳೂರು : ಪ್ರವರ ಥಿಯೇಟರ್ ಪ್ರಸ್ತುತ ಪಡಿಸುವ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕದ ಪ್ರದರ್ಶನವು ದಿನಾಂಕ 20-04-2024ರಂದು ಸಂಜೆ ಗಂಟೆ 7-00ಕ್ಕೆ ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ಪ್ರದರ್ಶನಗೊಳ್ಳಲಿದೆ. ಈ ನಾಟಕದ ನಿರ್ವಹಣೆ ಅಜಯ್ ಕುಮಾರ್ ಮಾಡಿದ್ದು, ಸಂಗೀತ ಅಕ್ಷಯ್ ಭೊಂಸ್ಲೆ ಮತ್ತು ಬೆಳಕಿನ ವಿನ್ಯಾಸ ಮಂಜು ನಾರಾಯಣ್ ನೀಡಿದ್ದು, ಹನು ರಾಮಸಂಜೀವ ಇವರು ವಿನ್ಯಾಸ ಮತ್ತು ನಿರ್ದೇಶನ ಮಾಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 9686869676. ಪ್ರವೇಶ ದರ ರೂ.150/- ಆಗಿರುತ್ತದೆ. ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ‘ಅಣ್ಣನ ನೆನಪು’ ಕೃತಿಯು ಮಹಾಕವಿ ಕುವೆಂಪು ಇವರ ಜೀವನದ ಹಲವು ಮಹತ್ವದ ಅಧ್ಯಾಯಗಳನ್ನು ಒಳಗೊಂಡಿದೆ. ಒಂದರ್ಥದಲ್ಲಿ ತೇಜಸ್ವಿಯವರು ಹುಟ್ಟಿದಲ್ಲಿಂದ ಇಲ್ಲಿಯವರೆಗಿನ ಕುವೆಂಪುರವರ ಕಥೆ, ಹಾಗೆಯೇ ಇದು ತೇಜಸ್ವಿಯವರ ಆತ್ಮಕಥೆಯ ಹಲವು ಅಧ್ಯಾಯಗಳೆಂದೂ ಹೇಳಬಹುದು. ಕುವೆಂಪು, ಕನ್ನಡ ಸಾಂಸ್ಕೃತಿಕ ಚರಿತ್ರೆಯಲ್ಲಿ ವಹಿಸಿದ ಮಹತ್ವಪೂರ್ಣ ಪಾತ್ರದಿಂದಾಗಿ ಇವು ಕನ್ನಡ ಸಾಂಸ್ಕೃತಿಕ ಚರಿತ್ರೆಯ ಬಹುಮುಖ್ಯ ಅಧ್ಯಾಯಗಳೂ ಆಗಿದೆ. ಇದೆಲ್ಲದರ ಜೊತೆಗೆ ಇದೊಂದು ಅತಿಸುಂದರ ಕಾದಂಬರಿಯಂಥ…

Read More

ಮುಂಬಯಿ : ಮುಂಬೈ ವಿವಿ ಕನ್ನಡ ವಿಭಾಗ ಆಯೋಜಿಸಿದ್ದ ವಿಭಾಗದ 46ರ ಸಂಭ್ರಮ, ನಿರಂಜನ ಶತಮಾನೋತ್ಸವ, ಉಪನ್ಯಾಸ ಹಾಗೂ ಆರು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮವು ದಿನಾಂಕ 13-04-2024ರ ಶನಿವಾರದಂದು ಮುಂಬಯಿಯ ಕಲೀನಾ ಕ್ಯಾಂಪಸಿನಲ್ಲಿರುವ ಜೆ. ಪಿ. ನಾಯಕ್ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಂಬಯಿ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿ “ಮುಂಬಯಿ ವಿಶ್ವವಿದ್ಯಾಲಯದ ಕಾರ್ಯಕ್ರಮ ಎಂದರೆ ಅದು ಅತ್ಯಂತ ಸರಳ, ಸುಂದರ. ಬುದ್ಧಿಜೀವಿಗಳು, ಅಕ್ಷರಜ್ಞಾನಿಗಳು ಸೇರಿರುವ ಈ ಕಾರ್ಯಕ್ರಮಕ್ಕೆ ಬಂದಿರುವುದು ನನಗೆ ಅನ್ಯಗ್ರಹದಿಂದ ಬಂದಂತಾಗಿದೆ. ಇದೊಂದು ವಿಶೇಷ ಸಭೆ. ಮುಂಬೈ ವಿವಿ ಕನ್ನಡ ವಿಭಾಗದ ಮಹನೀಯರು ಕೃತಿರಚನೆಗಳನ್ನು ಮಾಡುತ್ತಾ ಬಂದಿದ್ದಾರೆ. ಜೀವನವನ್ನು ಹತ್ತಿರದಿಂದ ನೋಡಿದರೆ ಮಾತ್ರ ಒಳ್ಳೆಯ ಪುಸ್ತಕ ಬರೆಯಬಹುದು.” ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿಭಾಗ ಪ್ರಮುಖರು ಮತ್ತು ಪ್ರಾಧ್ಯಾಪಕರಾದ ಪ್ರೊ . ಜಿ. ಎನ್. ಉಪಾಧ್ಯ ಮಾತನಾಡಿ “ ‘ಕನ್ನಡವು ಕನ್ನಡವ ಕನ್ನಡಿಸುತಿರಲಿ’ ಎಂಬ ಕವಿವಾಣಿಯ ಆಶಯದಂತೆ ಕನ್ನಡ ವಿಭಾಗವು ನಲ್ವತ್ತಾರು ವರ್ಷಗಳಿಂದ ಅಹರ್ನಿಶಿ…

Read More