Author: roovari

ಉಡುಪಿ : ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನ ಅಂಬಲಪಾಡಿ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಎಂ.ಜಿ.ಎಂ. ಕಾಲೇಜಿನ ಸಹಕಾರದೊಂದಿಗೆ ರಂಗಭೂಮಿ (ರಿ.) ಉಡುಪಿ ಆಯೋಜಿಸುವ ‘ಅಂಬಲಪಾಡಿ ನಾಟಕೋತ್ಸವ’ವನ್ನು ದಿನಾಂಕ 12 ಜನವರಿ 2025 ಮತ್ತು 13 ಜನವರಿ 2025ರಂದು ಸಂಜೆ 6-00 ಗಂಟೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ಮುದ್ದಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ನಾಟಕೋತ್ಸವವನ್ನು ರಂಗಭೂಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿಗಳಾದ ಡಾ. ನಿ.ಬೀ. ವಿಜಯ ಬಲ್ಲಾಳ ಇವರು ಉದ್ಘಾಟಿಸಲಿದ್ದಾರೆ. ದಿನಾಂಕ 12 ಜನವರಿ 2025ರಂದು ಭವಭೂತಿ ರಚನೆ ಹಾಗೂ ಅಕ್ಷರ ಕೆ.ವಿ. ಇವರ ನಿರ್ದೇಶನದಲ್ಲಿ ಹೆಗ್ಗೋಡು ನೀನಾಸಂ ತಂಡದವರಿಂದ ‘ಮಾಲತೀ ಮಾಧವ’ ಮತ್ತು ದಿನಾಂಕ 13 ಜನವರಿ 2025ರಂದು ಅಭಿರಾಮ್ ಭಡ್ಕಮ್ಕರ್ ರಚಿಸಿರುವ ಜಯಂತ್ ಕಾಯ್ಕಿಣಿ ಕನ್ನಡಕ್ಕೆ ಅನುವಾದಿಸಿರುವ ವಿದ್ಯಾನಿಧಿ ವನಾರಸೆ ಇವರ ನಿರ್ದೇಶನದಲ್ಲಿ ಹೆಗ್ಗೋಡು ನೀನಾಸಂ ತಂಡದವರಿಂದ ‘ಅಂಕದ ಪರದೆ’…

Read More

ಆಲೂರು : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ.), ಬೆಂಗಳೂರು ಕೇಂದ್ರ ಸಮಿತಿಯ ಮಾರ್ಗದರ್ಶನದಲ್ಲಿ ಹಾಸನ ಜಿಲ್ಲೆಯ ಆಲೂರು ತಾಲೂಕು ಘಟಕ ಇದರ ವತಿಯಿಂದ ದಿನಾಂಕ 12 ಜನವರಿ 2025 ಭಾನುವಾರದಂದು ಆಲೂರು ತಾಲೂಕಿನ ಹರಿಹಳ್ಳಿಯಲ್ಲಿ ‘ಆಲೂರು ತಾಲೂಕು ತೃತೀಯ ಕೇಂದ್ರ ಕನ್ನಡ ಸಾಹಿತ್ಯ ಸಮ್ಮೇಳನ’ವನ್ನು ಹಮ್ಮಿಕೊಳ್ಳಲಾಗಿದೆ. ತಾಲೂಕಿನ ಹಿರಿಯ ಪತ್ರಕರ್ತೆ, ಲೇಖಕಿ ಲೀಲಾವತಿಯವರ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ಸಮ್ಮೇಳನವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ರವಿ ನಾಕಲಗೂಡು ಉದ್ಘಾಟಿಸಲಿದ್ದು, ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ಜೆ. ಕೃಷ್ಣೇಗೌಡರವರು ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ. ಸಮಾಜ ಸೇವಕರಾದ ಕಟ್ಟೆಗದ್ದೆ ನಾಗರಾಜ್ ವೇದಿಕೆಯ ಕ್ಯಾಲೆಂಡರ್ ಬಿಡುಗಡೆ ಮಾಡಲಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಸ್.ಎಸ್. ಶಿವಮೂರ್ತಿ ಆಶಯ ನುಡಿಗಳನ್ನಾಡುವರು. ಸಾಹಿತಿ ಹಾಗೂ ಪತ್ರಕರ್ತ ನಾಗರಾಜ್ ಹೆತ್ತೂರುರವರು ಕವಿ ವಿಶ್ವಾಸ್ ಡಿ. ಗೌಡರವರ “ನೆನಪುಗಳ ಖಾತೆ” ಕೃತಿ ಲೋಕಾರ್ಪಣೆ…

Read More

ಮಂಗಳೂರು : “ನಮ್ಮ ಸಂಸ್ಕೃತಿ… ನಮ್ಮ ಹೆಮ್ಮೆ” ಎಂಬ ಧ್ಯೇಯ ವಾಕ್ಯದೊಂದಿಗೆ ಕಳೆದ ನಾಲ್ಕು ದಶಕಗಳಿಂದ ತನ್ನ ಸದಸ್ಯರ ಮಕ್ಕಳ ಮತ್ತು ವಿವಿಧ ಶಾಲಾ ಮಕ್ಕಳ ಭಾರತೀಯ ಕಲೆ, ಸಂಗೀತ, ನೃತ್ಯ ಕಲೆ, ಶಾಸ್ತ್ರೀಯ ಸಂಗೀತ ಇತ್ಯಾದಿಗಳ ಅಭ್ಯಾಸ, ಪ್ರದರ್ಶನ, ಸ್ಪರ್ಧೆಗಳಿಗೆ ಸೂಕ್ತ ವೇದಿಕೆ ನಿರ್ಮಾಣದ ಮೂಲಕ ಪ್ರಸಿದ್ಧವಾದ ಸಂಸ್ಥೆ ರಾಗ ತರಂಗ (ರಿ.) ಮಂಗಳೂರು. 2024-25ನೇ ಸಾಲಿನ ಉಡುಪಿ, ಮಂಗಳೂರು ಮತ್ತು ಕಾಸರಗೋಡು ವ್ಯಾಪ್ತಿಯ ಶಾಲಾ ಮಕ್ಕಳ ಅಂತರ್ ಶಾಲಾ ಮಟ್ಟದ ವಿವಿಧ ಸ್ಪರ್ಧೆಗಳು ದಿನಾಂಕ 13 ಡಿಸೆಂಬರ್ 2024ರಿಂದ 15 ಡಿಸೆಂಬರ್ 2024ರವರೆಗೆ ಜರುಗಿದ್ದು, ಇವುಗಳ ಬಹುಮಾನ ವಿಜೇತ ಮಕ್ಕಳಿಗೆ ಬಹುಮಾನ ವಿತರಣಾ ಸಮಾರಂಭ ಮತ್ತು ವಿಜೇತ ಮಕ್ಕಳ ಪ್ರತಿಭಾ ಪ್ರದರ್ಶನದ ‘ಬಾಲ ಪ್ರತಿಭೋತ್ಸವ’ ಕಾರ್ಯಕ್ರಮವು ದಿನಾಂಕ 05 ಜನವರಿ 2025ನೇ ಆದಿತ್ಯವಾರ ಮಂಗಳೂರಿನ ಸುಬ್ರಹ್ಮಣ್ಯ ಸಭಾದಲ್ಲಿ ಜರುಗಿತು. ಸಮಾರಂಭದಲ್ಲಿ ಮುಖ್ಯ ಆಹ್ವಾನಿತರಾಗಿ 92.7 Big FMನ ಪ್ರಖ್ಯಾತ RJ ನಯನಾ ಶೆಟ್ಟಿ ಭಾಗವಹಿಸಿ ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ…

Read More

ಬಂಟ್ವಾಳ: ಪಾವಂಜೆ ಮೇಳದ ಸಂಚಾಲಕರು ಹಾಗೂ ಪ್ರಧಾನ ಭಾಗವತರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರು ಕಲಾಸೇವೆಯಲ್ಲಿ 25 ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಬಿ. ಸಿ. ರೋಡಿನ ಹೊಟೇಲ್ ರಂಗೋಲಿ ಸಹೋದರರು ವಿಶಿಷ್ಟ ರೀತಿಯ ಸಂಯೋಜನೆಯಿಂದ ಆಯೋಜಿಸಿದ ಯಕ್ಷಗಾನ ಬಯಲಾಟದ ರಂಗಸ್ಥಳದಲ್ಲಿ ಸನ್ಮಾನಿಸಲಾಯಿತು. ದಿನಾಂಕ 03 ಜನವರಿ 2025ರಂದು ಬಂಟ್ವಾಳ ತಾಲೂಕಿನ ಕೂರಿಯಾಳ ಪಡುವಿನ ಚಂದ್ರತೋಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಟ್ಲ ಸತೀಶ್ ಶೆಟ್ಟಿ ಇವರನ್ನು ಸನ್ಮಾನಿಸಿ ಮಾತನಾಡಿದ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ “ಯಕ್ಷಗಾನ ಕಲಾಭಿಮಾನಿಗಳ ಕಣ್ಮಣಿ, ಯಕ್ಷರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಖ್ಯಾತ ಭಾಗವತರಾದ ಇವರು ಯಕ್ಷಗಾನ ರಂಗದ ಸೆಲೆಬ್ರಿಟಿಯಾಗಿದ್ದಾರೆ. ಪ್ರಥಮ ಶ್ರೇಣಿಯ ಭಾಗವತಿಕೆಯ ಮೂಲಕ ಯಕ್ಷಗಾನದಲ್ಲಿ ಜೀವಂತಿಕೆಯನ್ನು ಉಳಿಸಿಕೊಂಡಿರುವ ಇವರು ದೇಶ ಮಾತ್ರವಲ್ಲ ವಿದೇಶದಲ್ಲೂ ಯಕ್ಷಗಾನದ ಕಂಪನ್ನು ಪಸರಿಸಿರುವ ಅದ್ಭುತ ಸಂಘಟಕರೂ ಆಗಿದ್ದಾರೆ. ಪಟ್ಲ ಫೌಂಡೇಶನ್ ಮೂಲಕ ಶಾಶ್ವತವಾದ ಯೋಜನೆಯನ್ನು ರೂಪಿಸಿ ಕಲಾವಿದರಿಗೆ ಮನೆ ಸಹಿತ ವಿವಿಧ ನೆರವು ನೀಡುತ್ತಿರುವ…

Read More

ತೆಕ್ಕಟ್ಟೆ: ಕರಾವಳಿಯ ಅಭಿಮಾನದ ಕಲಾಸಂಸ್ಥೆಯಾದ ಯಶಸ್ವೀ ಕಲಾವೃಂದದ ಆಶ್ರಯದಲ್ಲಿ ಇನ್ನು ಮುಂದೆ ಬಡಗಿನ ಹಿಮ್ಮೇಳದೊಂದಿಗೆ ತೆಂಕುತಿಟ್ಟು ಹಿಮ್ಮೇಳ ತರಗತಿಯೂ ನಡೆಯಲಿದೆ. ತಾಳ ಮದ್ದಳೆಯೊಂದಿಗೆ ಜಾಗಟೆಯ ಮಧುರ ಮೈತ್ರಿ ಬಯಸುವ ಕಲಾಸಕ್ತರಿಗೆ ಬೆಳ್ಳಿ ಹಬ್ಬದ ಸಂಸ್ಥೆ ನೀಡಿದ ಸುವರ್ಣ ಅವಕಾಶವಿದು. ಒಂದೇ ಕಲಿಕಾ ಕೇಂದ್ರದಲ್ಲಿ ಯಕ್ಷಗಾನ ಕಲಾಮಾತೆಯ ಯುಗ್ಮ ನಯನಗಳಂತಿರುವ ಎರಡು ತಿಟ್ಟುಗಳ ಸಶಕ್ತ ಶಿಕ್ಷಣ ಸಿಗುವುದೆಂದರೆ ನಿಜಕ್ಕೂ ಕಲಾಭ್ಯಾಸಿಗಳ ಭಾಗ್ಯವೆನ್ನಬೇಕು. ಯಶಸ್ವೀ ಕಲಾವೃಂದದ ಕಲಾತ್ಮಕ ಯೋಚನೆಯ ಮಹತ್ವಪೂರ್ಣ ನಡೆಯಿದು. ತೆಂಕು ತಿಟ್ಟಿನ ಅಗ್ರಮಾನ್ಯ ಗುರುಗಳಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರ ಗುರುತನದಲ್ಲಿ ತರಗತಿಗಳು ನಡೆಯುವ ಸಂಗತಿ ಅತ್ಯಂತ ಸಂತೋಷ ಕೊಡುತ್ತದೆ. ಸಿರಿಬಾಗಿಲು ರಾಮಕೃಷ್ಣ ಮಯ್ಯರು, ಪಟ್ಲ ಸತೀಶ ಶೆಟ್ಟಿಯವರಂತಹ ಘಟಾನುಘಟಿ ಕಲಾ ದಿಗ್ಗಜ ಶಿಷ್ಯರ ಗುರುಗಳಾದ ಮಾಂಬಾಡಿಯವರ ಗುರುತನ ಕರಾವಳಿಗೂ ಸುಲಲಿತವಾಗಿ ದಕ್ಕಲಿದೆ. 11 ಜನವರಿ 2025 ರಂದು ಬೆಳಿಗ್ಗೆ ಘಂಟೆ 10.00ಕ್ಕೆ ತೆಕ್ಕಟ್ಟೆ ಹಯಗ್ರೀವದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಉದ್ಘಾಟಕರಾಗಿ ಆಗಮಿಸುವ ಪ್ರಸಂಗಕರ್ತ ಪ್ರಸಾದ್ ಕುಮಾರ್ ಮೊಗೆಬೆಟ್ಟು ತಿಳಿಸಿದ್ದಾರೆ.

Read More

ಮಂಡ್ಯ : ಸ್ಪೋರ್ಟ್ಸ್ ಆಂಡ್ ಕಲ್ಚರ್ ಅಕಾಡಮಿ ಫಾರ್ ಡಿಫರೆಂಟ್ಲಿ ಏಬಲ್ಡ್ (ರಿ.) ಇವರು ಆಶಾಸದನ ಮಂಡ್ಯ ಇವರ ಸಹಯೋಗದಲ್ಲಿ ಹಮ್ಮಿಕೊಂಡ ರಾಜ್ಯಮಟ್ಟದ ಕಾರ್ಯಕ್ರಮ ‘ಸಕಾಡೋತ್ಸವ -2025’ ಭಿನ್ನ ಸಾಮರ್ಥ್ಯದ ಮಕ್ಕಳ ರಾಜ್ಯಮಟ್ಟದ ಜನಪದ ನೃತ್ಯೋತ್ಸವ ಸ್ಪರ್ಧೆಯನ್ನು ದಿನಾಂಕ 11 ಜನವರಿ 2025 ಮತ್ತು 12 ಜನವರಿ 2025ರಂದು ಬೆಳಿಗ್ಗೆ 10-30 ಗಂಟೆಗೆ ಮಂಡ್ಯ ಸುಭಾಷ್ ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ದಿನಾಂಕ 11 ಜನವರಿ 2025ರಂದು ಈ ಕಾರ್ಯಕ್ರಮವನ್ನು ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ. ಕುಮಾರ್ ಭಾ.ಆ.ಸೇ. ಇವರು ಉದ್ಘಾಟಿಸಲಿದ್ದು, ಮಂಡ್ಯದ ಸೈಂಟ್ ಥೋಮಸ್ ಮಿಷನ್ ಸೊಸೈಟಿ ವಲಯ ನಿರ್ದೇಶಕರಾದ ಗುರುಗಳು ಸೋಜನ್ ಎಂ.ಎಸ್.ಟಿ. ಇವರು ಆಶೀರ್ವಚನ ನೀಡಲಿದ್ದಾರೆ. ದಿನಾಂಕ 12 ಜನವರಿ 2025ರಂದು ಸಮಾರೋಪ ಸಮಾರಂಭ ನಡೆಯಲಿದೆ.

Read More

ಪುತ್ತೂರು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ (ರಿ.) ಪುತ್ತೂರು ಅರ್ಪಿಸುವ ‘ನೃತ್ಯಾಂತರಂಗ 120’ ನೃತ್ಯ ಕಾರ್ಯಕ್ರಮವನ್ನು ದಿನಾಂಕ 11 ಜನವರಿ 2025ರಂದು ಸಂಜೆ 5-30 ಗಂಟೆಗೆ ಪುತ್ತೂರಿನ ದರ್ಬೆಯ ಶಶಿಶಂಕರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಗುರು ಅನ್ನಪೂರ್ಣ ರಿತೇಶ್ ಇವರ ಶಿಷ್ಯೆ ಕುಮಾರಿ ರಿದ್ಧಿ ಹೆಚ್. ಶೆಟ್ಟಿ ಇವರು ನೃತ್ಯ ಪ್ರದರ್ಶನ ನೀಡಲಿದ್ದು, ಪುತ್ತೂರು ಇನ್ನರ್ ವೀಲ್ ಕ್ಲಬ್ ಇದರ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ ಆಚಾರ್ ಇವರು ಅಭ್ಯಾಗತರಾಗಿ ಭಾಗವಹಿಸಲಿರುವರು.

Read More

ಮಂಗಳೂರು : ನವಭಾರತ ಎಜುಕೇಶನ್ ಸೊಸೈಟಿ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ನವಭಾರತ ಯಕ್ಷಗಾನ ಅಕಾಡೆಮಿಯ ‘ದಶಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮವನ್ನು ದಿನಾಂಕ 11 ಜನವರಿ 2025ರಂದು ಮಧ್ಯಾಹ್ನ 2-00 ಗಂಟೆಗೆ ಮಂಗಳೂರಿನ ಮಣ್ಣಗುಡ್ಡೆ ಸಂಘನಿಕೇತನದ ಸುಜ್ಞಾನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮಧ್ಯಾಹ್ನ 2-00 ಗಂಟೆಗೆ ‘ಶ್ರೀದೇವಿ ಮಹಿಷಮರ್ದಿನಿ’ ಯಕ್ಷಗಾನ ನಡೆಯಲಿದ್ದು, ಸಂಜೆ 5-00 ಗಂಟೆಗೆ ಡಾ. ಪಿ. ವಾಮನ ಶೆಣೈಯವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ವೇಳೆ ಸಾಧಕರನ್ನು ಸನ್ಮಾನಿಸಲಾಗುವುದು. ಕ.ಸಾ.ಪ. ಮಾಜಿ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು, ನವಭಾರತ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಮಧುಸೂದನ ಅಯಾರ್, ಕೋಶಾಧಿಕಾರಿ ಗಣೇಶ್ ರಾವ್, ಪೊಲೀಸ್‌ಲೇನ್ ಶ್ರೀದೇವಿ ದೇವಸ್ಥಾನ ಅಧ್ಯಕ್ಷ ಮಯೂರ್ ಉಳ್ಳಾಲ್, ವಿದ್ವಾಂಸ ಡಾ. ಸತ್ಯಕೃಷ್ಣ ಭಟ್, ವಕೀಲರಾದ ಕುಶಾಲಪ್ಪ, ಸಂತೋಷ್ ಐತಾಳ್ ಭಾಗವಹಿಸುವರು. ಬಳಿಕ ನವಭಾರತ ಯಕ್ಷಗಾನ ಅಕಾಡೆಮಿಯ ಸದಸ್ಯರಿಂದ ‘ಶ್ರೀದೇವಿ ಕೌಶಿಕೆ’ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ. ನವಭಾರತ ರಾತ್ರಿ ಶಾಲೆಯಲ್ಲಿ ನಡೆಯುವ ನವಭಾರತ ಯಕ್ಷಗಾನ ಅಕಾಡೆಮಿ ಕಳೆದ 10 ವರ್ಷಗಳಲ್ಲಿ ಬಯಲಾಟ ಹಾಗೂ…

Read More

ಮಂಗಳೂರು : ಅಕ್ಕಮಹಾದೇವಿ ವೀರಶೈವ ಮಹಿಳಾ ಸಂಘದ ನೇತೃತ್ವದಲ್ಲಿ ಬೆಂಗಳೂರಿನ ಬಸವ ಸಮಿತಿ ಅಧ್ಯಕ್ಷ ಡಾ. ಅರವಿಂದ ಜತ್ತಿ ಅವರ ಸಮ್ಮೇಳನಾಧ್ಯಕ್ಷತೆಯಲ್ಲಿ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಿನಾಂಕ 04 ಜನವರಿ 2025ರಂದು ‘ರಾಜ್ಯಮಟ್ಟದ ವಚನ ಸಾಹಿತ್ಯ ಸಮ್ಮೇಳನ’ ನಡೆಯಿತು. ಈ ಸಮ್ಮೇಳನದಲ್ಲಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಮೈಸೂರಿನ ಸುತ್ತೂರು ಮಠದ ಮಠಾಧೀಶ ಡಾ. ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ “ವಚನ ಸಾಹಿತ್ಯ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದೆ. ಶಾಸ್ತ್ರಬದ್ಧ ಕೃತಿಗಳಿಗೆ ವಿರಾಮ ಹೇಳಿ ಸರಳವಾದ ಮಾತುಗಳು ಕೂಡ ಸಾಹಿತ್ಯವಾಗಬಹುದು ಎಂದು ವಚನ ಸಾಹಿತ್ಯ ತೋರಿಸಿಕೊಟ್ಟಿದೆ. ಎಲ್ಲಾ ಸುಲಭವಾದ, ಸರಳ ಭಾಷೆಯಲ್ಲಿ ಲೌಕಿಕ ಸಂಗತಿಯಲ್ಲದೆ, ಭಗವಂತ-ಮನುಷ್ಯನ ಕುರಿತ ಸಂಗತಿ ವಚನ ಸಾಹಿತ್ಯದಲ್ಲಿದೆ. ವಚನ ಸಾಹಿತ್ಯದ ಕುರಿತು ಅನೇಕ ಕೃತಿಗಳು ಬಂದಿದ್ದು, ಅದನ್ನು ಅರಿಯುವ ಕೆಲಸ ನಾವೆಲ್ಲರೂ ಮಾಡಬೇಕು. ರಾಜ್ಯ ಮಟ್ಟದ ವಚನ ಸಾಹಿತ್ಯ ಸಮ್ಮೇಳನ ಮಂಗಳೂರಿನಲ್ಲಿ ನಡೆದಿರುವುದು ವಿಶೇಷವಾಗಿದೆ” ಎಂದು ಹೇಳಿದರು. ಸಮ್ಮೇಳನಾಧ್ಯಕ್ಷ ಡಾ. ಅರವಿಂದ್ ಜತ್ತಿ ಮಾತನಾಡಿ “ವಚನ ಸಾಹಿತ್ಯ…

Read More

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ 21 ಮತ್ತು22 ಫೆಬ್ರವರಿ 2025ರಂದು ನಡೆಯುವ 27ನೇ ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಿರಿಯ ಸಾಹಿತಿ ಡಾ. ಪ್ರಭಾಕರ ಶಿಶಿಲ ಇವರನ್ನು ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ. ಪಿ. ಶ್ರೀನಾಥ್ ತಿಳಿಸಿದ್ದಾರೆ. ಡಾ. ಪ್ರಭಾಕರ ಶಿಶಿಲ : ಸುಳ್ಯ ತಾಲೂಕಿನ ಕೂತುಕುಂಜ ಕಜೆಯಲ್ಲಿ ಹುಟ್ಟಿ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ಬೆಳೆದು, ಸುಳ್ಯದಲ್ಲಿ ನೆಲೆಸಿರುವ ಡಾ. ಪ್ರಭಾಕರ ಶಿಶಿಲರು ಕನ್ನಡದ ಶ್ರೇಷ್ಠ ಸಾಹಿತಿ. ಕನ್ನಡದಲ್ಲಿ 10 ಕಾದಂಬರಿ, 8 ಕಥಾ ಸಂಕಲನ, 5 ಪ್ರವಾಸ ಕಥನ ಸೇರಿ ಒಟ್ಟು 54 ಸೃಜನಶೀಲ ಕೃತಿಗಳು, 165 ಅರ್ಥಶಾಸ್ತ್ರ ವಿಚಾರ ಸಾಹಿತ್ಯ ಕೃತಿಗಳು ಹಾಗೂ ಆಂಗ್ಲ ಭಾಷೆಯಲ್ಲಿ 10 ಅರ್ಥಶಾಸ್ತ್ರ ಕೃತಿಗಳನ್ನು ರಚಸಿದ್ದಾರೆ. ವಿವಿಧ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ಇವರ ಸುಮಾರು 250ಕ್ಕೂ ಅಧಿಕ ಲೇಖನಗಳು ಪ್ರಕಟವಾಗಿವೆ. ಅನೇಕ ಲಾವಣಿ ಮತ್ತು ಗೀಗೀ ಪದ…

Read More