Subscribe to Updates
Get the latest creative news from FooBar about art, design and business.
Author: roovari
ಬೆಂಗಳೂರು : ನೃತ್ಯ ಕುಟೀರ ಬೆಂಗಳೂರು ನೃತ್ಯ ಸಂಸ್ಥೆಯು ದಿನಾಂಕ 20-03-2204 ಮತ್ತು 21-03-2024ರಂದು ಎರಡು ದಿನಗಳ ಪೂರ್ಣಾವಧಿಯ ಕಾರ್ಯಾಗಾರವನ್ನು ಹಮ್ಮಿಕೊಂಡಿತ್ತು. ಕರಾವಳಿಯ ಯುವ ವಿದ್ವಾಂಸರಾದ ವಿದ್ವಾನ್ ಮಂಜುನಾಥ ಎನ್. ಪುತ್ತೂರು ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಈ ಕಾರ್ಯಾಗಾರದಲ್ಲಿ ವಿವಿಧ ನೃತ್ಯ ಗುರುಗಳ 20 ಮಂದಿ ನೃತ್ಯ ವಿದ್ಯಾರ್ಥಿಗಳು ಮತ್ತು ಕೆಲವು ಮಂದಿ ಗುರುಗಳು ಹಾಜರಿದ್ದರು ಎಂದು ಸಂಸ್ಥೆಯ ಗುರುಗಳಾದ ವಿದುಷಿ ದೀಪಾ ಭಟ್ ಅವರು ತಿಳಿಸಿದ್ದಾರೆ.
ಕುಂದಾಪುರ : ಮಣಿಪಾಲ ಅಕಾಡೆಮಿ ಆಡಳಿತಾಧಿಕಾರಿಯಾಗಿದ್ದ ಡಾ. ಎಚ್. ಶಾಂತಾ ರಾಮ್ ಹೆಸರಿನಲ್ಲಿ ಭಂಡಾರ್ಕಾರ್ಸ್ ಕಾಲೇಜು ದತ್ತಿನಿಧಿ ಸ್ಥಾಪಿಸಿ ಪ್ರತಿ ವರ್ಷ ಕನ್ನಡದ ಅತ್ಯುತ್ತಮ ಸೃಜನಶೀಲ ಕೃತಿಗೆ ಪ್ರಶಸ್ತಿ ನೀಡುತ್ತಾ ಬಂದಿದ್ದು, ಈ ವರ್ಷ ಸಣ್ಣ ಕತೆಗಳನ್ನು ಪರಿಗಣಿಸಿದೆ. 2022 ಮತ್ತು 2023ರಲ್ಲಿ ಮೊದಲ ಆವೃತ್ತಿಯಾಗಿ ಪ್ರಕಟಗೊಂಡ ಸಣ್ಣಕಥಾ ಸಂಕಲನಗಳನ್ನು ಪ್ರಶಸ್ತಿಗೆ ಆಹ್ವಾನಿಸಲಾಗಿದೆ. ಆಸಕ್ತರು ಕಥಾ ಸಂಕಲನಗಳ ನಾಲ್ಕು ಪ್ರತಿಗಳನ್ನು ದಿನಾಂಕ 10-05-2024ರೊಳಗೆ ಡಾ. ಎಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸಮಿತಿ, ಭಂಡಾರ್ಕಾರ್ಸ್ ಕಾಲೇಜು, ಕುಂದಾಪುರ-576201 ಈ ವಿಳಾಸಕ್ಕೆ ಕಳುಹಿಸಿಕೊಡಬಹುದು.
ಪುತ್ತೂರು : ಚಿಗುರೆಲೆ ಸಾಹಿತ್ಯ ಬಳಗದ ದ್ವಿತೀಯ ವಾರ್ಷಿಕೋತ್ಸವವು ದಿನಾಂಕ 14-4-2024ರ ಭಾನುವಾರ ಪುತ್ತೂರಿನ ಅನುರಾಗ ವಠಾರದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಪುತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೇತೃತ್ವದಲ್ಲಿ ಅಂಬೇಡ್ಕರ್ ದಿನಾಚರಣೆ, ದಿವ್ಯಾಂಗ ಚೇತನರಿಗೆ ಕವಿಗೋಷ್ಠಿ ಮತ್ತು ಕೃತಿ ಬಿಡುಗಡೆ ಸಮಾರಂಭವು ಸಂಪನ್ನಗೊಂಡಿತು. ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ, ಗಿಡಕ್ಕೆ ನೀರುಣಿಸಿ ಉದ್ಘಾಟಿಸಿದ ಹಿರಿಯ ಸಾಹಿತಿಗಳು ಮತ್ತು ಕರ್ನಾಟಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಬಿ. ಪುರಂದರ ಭಟ್ ಮಾತನಾಡಿ “ಸಾಧನೆಯ ಹಾದಿಯಲ್ಲಿ ಎಲ್ಲರೂ ಏಕಾಂಗಿಯಾಗಿ ಇರುತ್ತಾರೆ, ಮುಂದಕ್ಕೆ ಹೋದಂತೆ ಸಮಾನ ಮನಸ್ಕರು ಸೇರಿಕೊಳ್ಳುತ್ತಾರೆ “ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿವೇಕಾನಂದ ಕಾಲೇಜು ಪುತ್ತೂರು ಇಲ್ಲಿನ ಪರೀಕ್ಷಾಂಗ ಕುಲಸಚಿವರಾದ ಡಾ. ಹೆಚ್. ಜಿ. ಶ್ರೀಧರ್ ಮಾತನಾಡಿ “ಸಾಹಿತ್ಯದಲ್ಲಿ ಪ್ರಾಸ ಮಾತ್ರವಲ್ಲ ಲಯ, ಛಂದಸ್ಸು, ಮಾತ್ರೆ ಹಾಗೂ ಗಣಗಳನ್ನು ಒಳಗೊಂಡು ಕೃತಿ ರಚಿಸಲು ಪ್ರಬುದ್ಧರಾಗಬೇಕಾದರೆ ಕನ್ನಡ ಸಾಹಿತ್ಯ ಪರಿಷತ್ತಿನ ಮೂಲಕ ಕಾವ್ಯ ಕಮ್ಮಟಗಳು ಆಯೋಜನೆಯಾಗಬೇಕಿದೆ.” ಎಂದರು. ರಂಗಕರ್ಮಿ ಮತ್ತು ಪತ್ರಕರ್ತರಾದ ಸಂಶುದ್ದೀನ್ ಸಂಪ್ಯ…
ಬ್ರಹ್ಮಾವರ : ಸಾಂಸ್ಕೃತಿಕ ಸಂಘಟನೆ ಭೂಮಿಕಾ ಹಾರಾಡಿ ಇದರ ಹತ್ತನೇ ವರ್ಷದ ನಾಟಕೋತ್ಸವ `ಬಣ್ಣ’ದ ಉದ್ಘಾಟನಾ ಕಾರ್ಯಕ್ರಮ ದಿನಾಂಕ 09-04-2024ರ ಮಂಗಳವಾರದಂದು ನಡೆಯಿತು. ಬ್ರಹ್ಮಾವರದ ಎಸ್. ಎಂ. ಎಸ್. ಶಿಕ್ಷಣ ಸಂಸ್ಥೆಯ ಮಕ್ಕಳ ಮಂಟಪದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ರಂಗ ಗೌರವ ಸಮರ್ಪಣೆ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ತಲ್ಲೂರು ಶಿವರಾಮ ಶೆಟ್ಟಿ “ಕಲೆ ಮತ್ತು ಕಲಾವಿದರನ್ನು ಪ್ರೋತ್ಸಾಹಿಸುವ ಕಾರ್ಯ ಸಮಾಜದ ಕರ್ತವ್ಯವಾಗಬೇಕು. ಈ ಮಣ್ಣಿನ ಜಾನಪದ ಕಲೆಗಳನ್ನು ಬೆಳೆಸುವ ಉದ್ದೇಶದಿಂದಲೇ ಹಿರಿಯ ವಿದ್ವಾಂಸರಾದ ಏರ್ಯ ಲಕ್ಷ್ಮೀನಾರಾಯಣ ಆಳ್ವ, ಎ. ಜಿ. ಕೊಡ್ಗಿ, ಡಾ. ತಿಮ್ಮೇ ಗೌಡ ಅವರ ಕೋರಿಕೆಯ ಮೇರೆಗೆ ಕರ್ನಾಟಕ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷನಾಗಲು ಒಪ್ಪಿದೆ. ಕಳೆದ 6 ವರ್ಷಗಳಲ್ಲಿ ನಾಡಿನಾದ್ಯಂತ 27ಕ್ಕೂ ಅಧಿಕ ಜಾನಪದ ವೈಭವ ಕಾರ್ಯಕ್ರಮಗಳನ್ನು ನಡೆಸಿ, ಈ ಮೂಲಕ ಜಾನಪದ ಕಲೆಯ ಬೆಳವಣಿಗೆಯ ಜೊತೆಗೆ ಜಾನಪದ ಕಲಾ…
ಕನ್ನಡ ನವ್ಯ ಸಾಹಿತ್ಯದ ಸಂದರ್ಭದಲ್ಲಿ ಬರೆಯಲಾರಂಭಿಸಿದ ಕೆ.ವಿ. ತಿರುಮಲೇಶ್ ಇದುವರೆಗೆ ಕವಿತೆ, ಕತೆ, ವಿಮರ್ಶೆ ಮತ್ತು ಅನುವಾದ ಕ್ಷೇತ್ರಗಳಲ್ಲಿ ಗಮನಾರ್ಹವಾದ ಸಾಧನೆಯನ್ನು ಮಾಡಿದ್ದಾರೆ. ಇಂಗ್ಲೀಷ್ ಪ್ರಾಧ್ಯಾಪಕರಾಗಿ, ಭಾಷಾವಿಜ್ಞಾನಿಯಾಗಿ ಬಹುಕಾಲ ಕನ್ನಡ ನಾಡಿನ ಹೊರಗಿದ್ದುಕೊಂಡೇ ಬರೆದ ತಿರುಮಲೇಶರು ಮೂಲತಃ ಕಾಸರಗೋಡಿನ ಕಾರಡ್ಕ ಗ್ರಾಮದವರಾಗಿದ್ದು ಈಗ ಹೈದರಾಬಾದಿನಲ್ಲಿ ನೆಲೆಸಿದ್ದಾರೆ. ಅವರ ‘ಅಕ್ಷಯ ಕಾವ್ಯ’ಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆ ತರುವ ವಿಷಯ. ಕೆ.ವಿ. ತಿರುಮಲೇಶರ ‘ಅಕ್ಷಯ ಕಾವ್ಯ’ವು ಕನ್ನಡ ಸಾಹಿತ್ಯದಲ್ಲೇ ಹೊಸ ಪ್ರಯೋಗ. ಧುಮ್ಮಿಕ್ಕಿ ಹರಿಯುವ ನದಿಯು ತನ್ನ ಸೆಳೆತಕ್ಕೆ ಸಿಕ್ಕಿದ್ದೆಲ್ಲವನ್ನೂ ಸ್ವೀಕರಿಸುವಂತೆ ಈ ಕಾವ್ಯ ನದಿಯು ಹಿರಿಕಿರಿದೆಂಬ ಭೇದವಿಲ್ಲದೆ ಸಕಲ ಸೂಕ್ಷ್ಮಾತಿಸೂಕ್ಷ್ಮ ವಿಚಾರಗಳನ್ನೂ ತನ್ನ ತೆಕ್ಕೆಗೆ ತೆಗೆದುಕೊಂಡು ರಭಸದಿಂದ ಹರಿದಿದೆ. ಎಲ್ಲೂ ನಿಲ್ಲದ ಈ ಪ್ರವಾಹವು ಒಂದರ್ಥದಲ್ಲಿ ಬತ್ತಲಾರದ ಗಂಗೆ. ಹಾಗಾಗಿ ಇದು ‘ಅಕ್ಷಯ ಕಾವ್ಯ’ ಈ ಕಾವ್ಯಕ್ಕೆ ಕೇಂದ್ರ ವಸ್ತು ಇಲ್ಲ. ಕಾವ್ಯವಿಡೀ ಕೇಂದ್ರವೇ. ಕ್ರಮಬದ್ಧತೆ-ಕಟ್ಟುಪಾಡುಗಳಿಗೆ ಒಗ್ಗದ, ಪ್ರತ್ಯೇಕ ಸೂತ್ರ-ಶೀರ್ಷಿಕೆಗಳಿಲ್ಲದ ಈ ಕಾವ್ಯವನ್ನು ಓದಿ ಆಸ್ವಾದಿಸಲು ಯಾವ…
ಬೆಂಗಳೂರು : ರಾಸಾ ಕನ್ನಡ ಮತ್ತು ಕಲಾ ಸಂಸ್ಕೃತಿ ಚಾರಿಟೇಬಲ್ ಟ್ರಸ್ಟ್ ಮತ್ತು ರಾಸಾ ಪಬ್ಲಿಕೇಷನ್ಸ್ ಆಯೋಜನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಲು ಆಸಕ್ತಿ ಹೊಂದಿರುವವರು ಕೂಡಲೇ ತಮ್ಮ ಪೂರ್ಣ ಹೆಸರು, ಸ್ಥಳ, ವೃತ್ತಿ, ಕಾರ್ಯಕ್ರಮದ ವಿವರಗಳೊಂದಿಗೆ ನೋಂದಣಿ ಮಾಡಿಕೊಳ್ಳಬಹುದು. ಕನ್ನಡ ಸಾಹಿತ್ಯ ಕವಿಗೋಷ್ಠಿಯಲ್ಲಿ ಭಾಗವಹಿಸಲು ಆಸಕ್ತಿ ಹೊಂದಿದವರು ಕೂಡಲೇ ಪೂರ್ಣ ಹೆಸರು, ಸ್ಥಳ, ಇತ್ತೀಚಿನ ಉತ್ತಮ ಫೋಟೋ, ವೃತ್ತಿಯೊಂದಿಗೆ ನೋಂದಣಿ ಮಾಡಿಕೊಳ್ಳುವ ಅವಕಾಶವಿದೆ. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವಂತಹವರು ಪೂರ್ಣ ಹೆಸರು (ಆಧಾರ್ ಪ್ರತಿಯಲ್ಲಿ) ಇರುವಂತೆ ಮತ್ತು ಪೂರ್ಣ ಸೇವಾ ವಿವರಗಳು, ವಿಳಾಸ, ಇತ್ತೀಚಿನ ಉತ್ತಮವಾದ ಫೋಟೋವನ್ನು ನಮ್ಮ ಕಛೇರಿ ಸಂಖ್ಯೆಗೆ ವ್ಯಾಟ್ಸ್ ಆಫ್ ಮಾಡಿ. ಕಚೇರಿ ಮೊಬೈಲ್ ಸಂಖ್ಯೆ 7406401473 ಮತ್ತು ಇ-ಮೇಲ್ [email protected] ರಾಸಾ ಆರ್. ಈಶ್ವರ, ಅಭಯ್ ಸಂಸ್ಥಾಪಕ ಅಧ್ಯಕ್ಷರು ಪ್ರಕಾಶಕರು, ಸಾಹಿತ್ಯ, ಸಾಮಾಜಿಕ ಸೇವೆ ಬೆಂಗಳೂರು
ಉಜಿರೆ : ಉಜಿರೆಯ ಎಸ್ಡಿಎಂ ಕಾಲೇಜಿನ ಸಮ್ಯಕ್ ದರ್ಶನ ಸಭಾಂಗಣದಲ್ಲಿ 40ನೇ ವರ್ಷದ ಮಂಗಳೂರು ವಿಶ್ವವಿದ್ಯಾನಿಲಯದ ಮಟ್ಟದ ಡಿ.ರತ್ನ ವರ್ಮ ಹೆಗ್ಗಡೆ ಸ್ಮಾರಕ ‘ಅಂತರ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆ’ಯ ಸಮಾರೋಪ ಸಮಾರಂಭವು ದಿನಾಂಕ 13-04-2024ರ ಶನಿವಾರದಂದು ನಡೆಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಸ್. ಡಿ. ಎಂ. ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ಮಾತನಾಡಿ ಸಾಹಿತ್ಯಿಕ ಕುತೂಹಲ ಉತ್ತಮ ಮಾತುಗಾರಿಕೆಗೆ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಹೆಚ್ಚಿನ ಓದಿನ ಮೂಲಕ ತಮ್ಮ ಭಾಷಣ ಕಲೆಯನ್ನು ಮೊನಚುಗೊಳಿಸಿಕೊಳ್ಳಬೇಕು. ಆಧುನಿಕ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ದೊರಕುವ ಓದಿನ ಮೂಲಗಳಿಗೆ ತಮ್ಮನ್ನು ಸೀಮಿತಗೊಳಿಸಿಕೊಂಡಿದ್ದಾರೆ. ಬದಲಾಗಿ ಹೆಚ್ಚಿನ ಪುಸ್ತಕಗಳನ್ನು ಓದಬೇಕು. ಓದಿನ ತುಡಿತ ಮನುಷ್ಯನನ್ನು ಮಹತ್ತರ ಸ್ಥಾನಕ್ಕೆ ಕೊಂಡೊಯ್ಯುತ್ತದೆ. ಶ್ರೇಷ್ಠ ವಾಗ್ಮಿಗಳ ಕೃತಿಗಳು ವಿದ್ಯಾರ್ಥಿಗಳ ಭಾಷಣ ಕಲೆಯಲ್ಲಿ ಸಹಕಾರಿಯಾಗುತ್ತದೆ.” ಎಂದು ಅವರು ಅಭಿಪ್ರಾಯ ಪಟ್ಟರು. ನಿರ್ಣಾಯಕರಾದ ಕೃಷ್ಣಮೂರ್ತಿ ಮಾತನಾಡಿ “ಆಲೋಚನಾ ಶಕ್ತಿ ಭಾಷಣ ಕಲೆಗಳಿಗೆ ಸಹಾಯಕವಾಗಿದೆ. ವಿಷಯಗಳ ಅವಲೋಕನ ವಿಸ್ತಾರ ಮಂಡನೆಗೆ ಉಪಯುಕ್ತವಾಗಿದೆ. ಭಾಷಣ ಕಲೆಯು ವಿಚಾರಧಾರೆಯ…
ಚೆನ್ನೈ : ಐಐಟಿ ಮದ್ರಾಸು ಇದರ ಕನ್ನಡ ಸಾಂಸ್ಕೃತಿಕ ಸಂಘದ ಆಶ್ರಯದಲ್ಲಿ ಕರಾವಳಿಯ ಗಂಡುಮೆಟ್ಟಿದ ಕಲೆ ಯಕ್ಷಗಾನ ರಮ್ಯಾದ್ಭುತ ಸೃಷ್ಟಿಸಿತು. ಐಐಟಿ ಸಭಾಂಗಣದಲ್ಲಿ ಕಾಸರಗೋಡಿನ ಶ್ರೀ ವೆಂಕಟ್ರಮಣ ಸ್ವಾಮಿ ಕೃಪಾಶ್ರಿತ ಯಕ್ಷಗಾನ ಅಧ್ಯಯನ ಕೇಂದ್ರದ ಕಲಾವಿದರು ‘ಮಹಿಷಾಸುರ ವಧೆ’ ಪ್ರಸಂಗವನ್ನು ದಿನಾಂಕ 31-03-2024ರ ಭಾನುವಾರದಂದು ಪ್ರಸ್ತುತ ಪಡಿಸಿ ಮಹಾನಗರದಲ್ಲಿ ಯಕ್ಷ ಗಂಧರ್ವಲೋಕ ಸೃಷ್ಟಿಸಿದರು. ಅಧ್ಯಯನ ಕೇಂದ್ರದ ರೂವಾರಿ, ಧಾರ್ಮಿಕ ಮುಂದಾಳು, ಗಡಿನಾಡ ಸಾಂಸ್ಕೃತಿಕ ರಾಯಭಾರಿ ಕೆ. ಎನ್. ವೆಂಕಟ್ರಮಣ ಹೊಳ್ಳ ಮತ್ತು ಸಹೋದರ ಕೆ.ಎನ್. ರಾಮಕೃಷ್ಣ ಹೊಳ್ಳ ಅವರ ನೇತೃತ್ವದಲ್ಲಿ ನಡೆದ ಈ ಯಕ್ಷಗಾನ ಪ್ರದರ್ಶನದಲ್ಲಿ ಕೇರಳ ರಾಜ್ಯ ಶಾಲಾ ಕಲೋತ್ಸವದಲ್ಲಿ ‘ಎ’ ಗ್ರೇಡ್ ಪಡೆದ ಕಾಸರಗೋಡು ಬಿ. ಇ. ಎಂ. ಹಯರ್ ಸೆಕೆಂಡರಿ ಶಾಲಾ ವಿದ್ಯಾರ್ಥಿಗಳನ್ನೊಳಗೊಂಡ ಪ್ರತಿಭಾನ್ವಿತರ ತಂಡ ಭಾಗವಹಿಸಿತ್ತು. ರಾಕೇಶ್ ರೈ ಅಡ್ಕ ಅವರ ಸಮರ್ಥ ನಿರ್ದೇಶನದಲ್ಲಿ ಪ್ರದರ್ಶನಗೊಂಡ ಯಕ್ಷಗಾನವು ನೆರೆದ ಅಸಂಖ್ಯ ಪ್ರೇಕ್ಷಕರನ್ನು ಮೂಕ ವಿಸ್ಮಯಗೊಳಿಸಿತು. ಕಂಚಿನ ಕಂಠದ ರಾಮಕೃಷ್ಣ ಮಯ್ಯ ಕೂಡ್ಲು ಭಾಗವತರಾಗಿ ಮಿಂಚಿದರು. ಚೆಂಡೆಯಲ್ಲಿ…
ಬಜಪೆ : ‘ಪಾಡ್ಡನ ಕೋಗಿಲೆ’ ಎಂದೇ ಪ್ರಸಿದ್ಧಿ ಪಡೆದ ಹಿರಿಯ ಜಾನಪದ ಕಲಾವಿದೆ, ಕರ್ನಾಟಕ ರಾಜ್ಯ ಸರಕಾರದಿಂದ 2015ರಲ್ಲಿ ರಾಜ್ಯಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದ ಶತಾಯುಷಿ ಗಿಡಿಗೆರೆ ರಾಮಕ್ಕ ಮುಗೇರ್ತಿ(102) ಅವರು ಅನಾರೋಗ್ಯದಿಂದ ಕಟೀಲು ಗಿಡಿಗೆರೆಯ ತನ್ನ ನಿವಾಸದಲ್ಲಿ ದಿನಾಂಕ 15-04-2024ರಂದು ನಿಧನರಾದರು. ಮಂಗಳೂರು ತಾಲೂಕಿನ ವಾಮಂಜೂರಿನ ಕೂಕ್ರ ಮುಗ್ಗೇರ ಮತ್ತು ದುಗ್ಗಮ್ಮ ದಂಪತಿಯ ಸುಪುತ್ರಿಯಾಗಿದ್ದ ರಾಮಕ್ಕ 17ನೇ ವಯಸ್ಸಿನಲ್ಲಿ ಕಟೀಲು ಸಮೀಪದ ಗಿಡಿಗೆರೆಯ ಕಾಪೀರ ಮುಗ್ಗೇರ ಅವರನ್ನು ಮದುವೆಯಾದರು. ಸತ್ಯದ ಸಿರಿ ಪಾಡ್ಡನ ಗಾಯನದಿಂದ ಖ್ಯಾತರಾಗಿದ್ದ ಅವರು ಓ ಬೇಲೆ, ನಲ್ಲೊರಿ ಮಾಮ, ಮಂಜೊಟ್ಟಿ ಗೋಣ, ಗೋವಿಂದ ಬದನೆ ಕಾನಡ, ಮಾಲ್ಂಡ್ ಮರ, ಕುಮಾರ, ಸಿರಿ, ಅಬ್ಬಗ-ದಾರಗ, ಬಂಟರು ಹಾಗೂ ಅನೇಕ ದೈವ ಪಾಡ್ಡನಗಳಲ್ಲದೆ ಬೇಸಾಯದ ಸಂದರ್ಭ ಹಾಡುವ ಹತ್ತಾರು ಕೃಷಿ ಗೀತೆಗಳನ್ನು ನಿರರ್ಗಳವಾಗಿ ತನ್ನ ನೆನಪಿನಾಳದಿಂದ ಸುಶ್ರಾವ್ಯವಾಗಿ ಹಾಡಬಲ್ಲವರಾಗಿದ್ದರು. ಅಕ್ಷರಾಭ್ಯಾಸ ಇಲ್ಲದಿದ್ದರೂ ಕವಿತೆಗಳನ್ನು ರಚಿಸಿದ್ದರು. ಜಾನಪದ, ದೈವಿಕ ಆಚರಣೆ, ಶ್ರಮಿಕ ಸಂಸ್ಕೃತಿಯ ಸಂಧಿ, ಸಂಧಿ-ಪಾಡ್ಡನಗಳು ಕಂಠಪಾಠವಾಗಿತ್ತು. ಹಂಪಿ ಕನ್ನಡ…
ಸುರತ್ಕಲ್ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಇದರ ಸುರತ್ಕಲ್ ಘಟಕದ ಚತುರ್ಥ ವಾರ್ಷಿಕೋತ್ಸವ ಕಾರ್ಯಕ್ರಮವು ಸುರತ್ಕಲ್ ಬಂಟರ ಭವನದಲ್ಲಿ ದಿನಾಂಕ 14-04-2024ರಂದು ನಡೆಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಗೈದು ಉದ್ಘಾಟಿಸಿದ ಯಕ್ಷಧ್ರುವ ಯಕ್ಷ ಶಿಕ್ಷಣ ಪ್ರಧಾನ ಸಂಚಾಲಕ ವಾಸುದೇವ ಐತಾಳ್ ಯು.ಎಸ್.ಎ. ಮಾತನಾಡಿ, “ಅಮೇರಿಕದಲ್ಲಿ ಯಕ್ಷಗಾನ ಮಾಡಿಸುವ ಮೂಲಕ ಅಲ್ಲಿನ ಜನರಿಗೂ ನಮ್ಮ ಕರಾವಳಿಯ ಸಂಸ್ಕೃತಿಯ ಪರಿಚಯ ಮಾಡಿದ ಕೀರ್ತಿ ಪಟ್ಲ ಸತೀಶ್ ಶೆಟ್ಟಿ ಅವರಿಗೆ ಸಲ್ಲಬೇಕು. ಯಕ್ಷಧ್ರುವ ಟ್ರಸ್ಟ್ ಈ ಮೂಲಕ ಸಾಗರದಾಚೆಗೂ ಯಕ್ಷಪ್ರೇಮಿಗಳ ಬಾಂಧವ್ಯವನ್ನು ಬೆಸೆದಿದೆ. ಯುರೋಪ್ ರಾಷ್ಟ್ರಗಳಲ್ಲಿ ಪಟ್ಲ ತಂಡದೊಂದಿಗೆ ಸಂಚಾರ ನಡೆಸಿರುವುದು ನನ್ನ ಜೀವನದ ಅವಿಸ್ಮರಣೀಯ ದಿನಗಳು. ಮುಂದೆಯೂ ಅಮೇರಿಕದಲ್ಲಿ ಪಟ್ಲರ ಕಾರ್ಯಕ್ರಮಕ್ಕೆ ಸಹಕಾರ ನೀಡುತ್ತೇನೆ” ಎಂದು ಹೇಳಿದರು. ಬಳಿಕ ಮಾತನಾಡಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಅವರು, “ನನ್ನನ್ನು ತಾಯಿ ಕಟೀಲು ದುರ್ಗೆ ಯಕ್ಷಗಾನ ಕಲಾವಿದರ ಸೇವೆ ಮಾಡುವಂತೆ ಅನುಗ್ರಹ ನೀಡಿದ್ದಾಳೆ. ಅವಳ ಅಣತಿಯಂತೆ ನಾನಿಂದು ಯಕ್ಷಗಾನ…