Author: roovari

ಸುರತ್ಕಲ್ : ಮಣಿಕೃಷ್ಣ ಸ್ವಾಮಿ ಅಕಾಡೆಮಿ(ರಿ) ಮತ್ತು ನಾಗರಿಕ ಸಲಹಾ ಸಮಿತಿ(ರಿ) ಸುರತ್ಕಲ್ ಸಹಭಾಗಿತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಇದರ ಸಹಕಾರದೊಂದಿಗೆ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿಯು ದಿನಾಂಕ 06-04-2024ರ ಸಂಜೆ ಸುರತ್ಕಲ್ಲಿನ ಅನುಪಲ್ಲವಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿದ ಹಿರಿಯ ಸಂಗೀತ ಗುರುಗಳಾದ ವಿದುಷಿ ಸುಮಾ ಸತೀಶ್ ರಾವ್ ಮಾತನಾಡಿ “ಮಕ್ಕಳು ನಿರ್ದಿಷ್ಟ ಆಸಕ್ತಿಯ ಕಲಾಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಸಾಧನೆ ನಡೆಸಬೇಕು.” ಎಂದರು. ಸಭಾ ಕಾರ್ಯಕ್ರಮದ ಬಳಿಕ ಚಿನ್ಮಯಿ ಮನೀಶ್ ಚಾಲಕುಡಿಯವರಿಂದ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು.ಇವರಿಗೆ ವಯಲಿನ್ ನಲ್ಲಿ ಸುನಾದ ಪಿ ಎಸ್ ಮಾವೆ, ಮೃದಂಗದಲ್ಲಿ ನಿಕ್ಷಿತ್ ಪುತ್ತೂರು ಹಾಗೂ ಖಂಜೀರದಲ್ಲಿ ಕಾರ್ತಿಕ್ ಭಟ್ ಇನ್ನಂಜೆ ಸಾಥ್ ನೀಡಿದರು. ಕಾರ್ಯಕ್ರಮದಲ್ಲಿ ಮಣಿಕೃಷ್ಣ ಸ್ವಾಮಿ ಅಕಾಡೆಮಿಯ ಗೌರವಾಧ್ಯಕ್ಷ ಹರಿಕೃಷ್ಣ ಪುನರೂರು ಶುಭ ಹಾರೈಸಿದರು. ಮಣಿಕೃಷ್ಣ ಸ್ವಾಮಿ ಅಕಾಡೆಮಿಯ ಕಾರ್ಯದರ್ಶಿ ಪಿ.ನಿತ್ಯಾನಂದ ರಾವ್ ಕಾರ್ಯಕ್ರಮ ನಿರೂಪಿಸಿದರು.

Read More

ಉಡುಪಿ : ಭಾವನಾ ಪೌಂಡೇಶನ್(ರಿ.) ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ಗ್ರಾಮೀಣ ಭಾಗದಲ್ಲಿ ಸಂಯೋಜಿಸಿದ ಬಾಲ ಲೀಲಾ ಚಿಣ್ಣರ ಬೇಸಿಗೆ ಶಿಬಿರವು ದಿನಾಂಕ 14-04-2024ರ ಭಾನುವಾರದಂದು ಹಾವಂಜೆಯ ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಸಮಾಪನಗೊಂಡಿತು. ಇದೇ ಸಂದರ್ಭದಲ್ಲಿ ವೀಣೆ ಹಾಗೂ ಚಿತ್ರಕಲಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ವಿದುಷಿ ಪವನಾ ಬಿ. ಆಚಾರ್‌ ಇವರಿಗೆ ‘ಕಲಾ ಸಿಂಧು’ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು. ಬಳಿಕ ಮಾತನಾಡಿದ ಅವರು “ಕಲೆಯ ಬಗೆಗಿನ ಪಾರಂಪರಿಕ ಜ್ಞಾನವನ್ನು ಮಕ್ಕಳೆಲ್ಲ ಅರಿತಾಗ ಮಾತ್ರ ನಮ್ಮ ಶರೀರ ಮತ್ತು ಮನಸ್ಸು ನೆಮ್ಮದಿಯಿಂದಿರುತ್ತದೆ. ಕೇಳುವ ಮತ್ತು ನೋಡುವ ಹಸಿವನ್ನು ಚಿಣ್ಣರು ಬೆಳೆಸಿಕೊಳ್ಳಬೇಕು.” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಯು. ವಿಶ್ವನಾಥ ಶೆಣೈಯವರು ತಾವು ನಡೆದು ಬಂದ ದಾರಿಯನ್ನು ಮಕ್ಕಳಿಗೆ ವಿವರಿಸುತ್ತ ಚಿಣ್ಣರ ಶಿಬಿರವು ಹೇಗೆ ಮಕ್ಕಳ ಬದುಕನ್ನು ಹಸನಾಗುವಂತೆ ರೂಪಿಸಬಲ್ಲುದು ಎಂಬುದಾಗಿ ವಿವರಿಸಿದರು. ಇನ್ನೋರ್ವ ಅತಿಥಿಗಳಾದ ಆನಂದ ಕಾರ್ನಾಡ್‌ ಮಾತನಾಡಿ “ಸ್ವಚ್ಚಂದದ…

Read More

ಮಂಗಳೂರು : ತುಳುಕೂಟ ಕುಡ್ಲ ಸಂಸ್ಥೆ ಆಯೋಜಿಸಿದ ‘ತುಳುವೆರೆ ಬಿಸು ಪರ್ಬ ಸಂಭ್ರಮೊ’ ಕಾರ್ಯಕ್ರಮವು ದಿನಾಂಕ 14-04-2024ರಂದು ಮಂಗಳೂರಿನ ಶ್ರೀಕ್ಷೇತ್ರ ಮಂಗಳಾದೇವಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಕ.ಸಾ.ಪ. ದ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಮಾತನಾಡಿ “ತೌಳವರ ಆಚರಣೆಗಳು, ಆಚಾರ- ವಿಚಾರಗಳು, ಪ್ರಾಚೀನವಾದುದು. ಹಬ್ಬಹರಿದಿನ, ಸಂಸ್ಕೃತಿ ಸಂಸ್ಕಾರಗಳು ನಿತ್ಯವೋ ಎಂಬಂತೆ ನಡೆಯುತ್ತಿದೆ. ದಿನ – ವಾರ – ನಕ್ಷತ್ರ ಎಲ್ಲವೂ ತುಳುವರ ಪಾಲಿಗೆ ಶುಭವಾಗಿಯೇ ಇರುತ್ತದೆ. ಅಂತೆಯೇ ಈ ವಿಷು ಹಬ್ಬ ಕೂಡಾ. ಹಬ್ಬಗಳಿಗೆ ಆದಿಯಾಗಿ ಸೌರಮಾನ ಯುಗಾದಿಯನ್ನು ವಿಷುಕಣಿ ಉತ್ಸವವಾಗಿ ಆಚರಿಸುತ್ತೇವೆ. ಇಂದು ನಡೆವ ಶುಭಸಂಗತಿಗಳು ವರ್ಷಪೂರ್ತಿ ನಡೆಯುತ್ತವೆ ಎಂಬ ನಂಬಿಕೆ. ತುಳುಕೂಟ ಈ ಬಿಸು ಪರ್ಬವನ್ನು ಆಚರಿಸಿ ಜನರನ್ನು ಜಾಗ್ರತಗೊಳಿಸುವ ಕಾರ್ಯವನ್ನು ನಡೆಸುತ್ತಾ ಬರುತ್ತಿದೆ. ಕ್ರೋಧಿ ನಾಮ ಸಂವತ್ಸರ ಎಲ್ಲರಿಗೂ ಒಳಿತನ್ನೇ ಉಂಟುಮಾಡಲಿ.” ಎಂದು ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮರೋಳಿ ಬಿ. ದಾಮೋದರ ನಿಸರ್ಗ ಮಾತನಾಡಿ “ಕೃಷಿ ಹಾಗೂ ಸಂಸ್ಕೃತಿ ನಮ್ಮ ತುಳುವರ…

Read More

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಮೂರು ಪ್ರಮುಖ ದತ್ತಿಗಳಾದ ಸತ್ಯವತಿ ವಿಜಯರಾಘವ ಚಾರಿಟಬಲ್ ಟ್ರಸ್ಟ್ ಧರ್ಮದರ್ಶಿಗಳ ದತ್ತಿ, ನಾಗಡಿಕೆರೆ-ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಮತ್ತು ಪಂಕಜಶ್ರೀ ದತ್ತಿ ಪುರಸ್ಕಾರಗಳ ಪ್ರದಾನ ಕಾರ್ಯಕ್ರಮವು ದಿನಾಂಕ 13-04-2024ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ “ಭಾಷೆ ಮತ್ತು ಸಂಸ್ಕೃತಿಯ ಅಡಿಪಾಯದ ಮೇಲೆ ಬೆಳೆಯುತ್ತಿರುವ ವಿಶ್ವದಲ್ಲಿಯೇ ವಿರಳವೆನ್ನಿಸ ಬಹುದಾದ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತು ಎಲ್ಲಾ ನೆಲೆಗಳಲ್ಲಿಯೂ ಕನ್ನಡವನ್ನು ಬೆಳೆಸುವ ಮತ್ತು ಉಳಿಸುವ ನಿಟ್ಟಿನಲ್ಲಿ ನಿರಂತರವಾಗಿ ಪ್ರಯತ್ನಿಸುತ್ತಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕರ ಬದ್ದತೆ ಮತ್ತು ನಿಷ್ಟೆಗಳನ್ನು ನೆನಪು ಮಾಡಿಕೊಂಡ ನಾಡೋಜ ಡಾ.ಮಹೇಶ ಜೋಶಿಯವರು ಅವರು ಹಾಕಿದ ಭದ್ರ ಬುನಾದಿಯಿಂದಲೇ ಪರಿಷತ್ತು ಇಷ್ಟು ಮಹತ್ವದ್ದಾಗಿ ಬೆಳೆಯಲು ಸಾಧ್ಯವಾಗಿದೆ ಎಂದರು. ಕನ್ನಡ ಸಾಹಿತ್ಯ ಪರಿಷತ್ತಿನ ಮೊದಲ ಅಧ್ಯಕ್ಷರಾದ ಎಚ್. ವಿ. ನಂಜುಂಡಯ್ಯನವರು ಮೊಟ್ಟ ಮೊದಲ…

Read More

ಕಾಸರಗೋಡು : ಬೀರಂತಬೈಲು ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನ ಸಂಸ್ಥೆ ಹಾಗು ಕೋಲಾರದ ಸ್ವರ್ಣಭೂಮಿ ಫೌಂಡೇಶನ್ ಜಂಟಿಯಾಗಿ ಕನ್ನಡ ಭವನ ಬಯಲು ರಂಗ ಮಂಟಪದಲ್ಲಿ ಆಯೋಜಿಸಿದ ‘ಕೇರಳ – ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕಂತಿಕ ಉತ್ಸವ’ ದಿನಾಂಕ 11-04-2024 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರು “ದಿನದಿಂದ ದಿನಕ್ಕೆ ಗಡಿನಾಡು ಕಾಸರಗೋಡಿನಲ್ಲಿ ಕನ್ನಡದ ಅಸ್ತಿತ್ವ ತೆರೆಮರೆಗೆ ಸರಿಯುತ್ತಿರುವ ಸಂದರ್ಭದಲ್ಲಿ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಪ್ರತೀಯೊಬ್ಬ ಕನ್ನಡಿಗನೂ ಕಂಕಣಬದ್ಧರಾಗಬೇಕು. ಸಾಹಿತ್ಯ ಹಾಗೂ ಕಲೆಗಳಿಂದ ನಮ್ಮ ಸಂಸ್ಕೃತಿಯ ಸಂವರ್ಧನೆ ಮತ್ತು ಸಂರಕ್ಷಣೆ ಸಾಧ್ಯ. ಈ ನಿಟ್ಟಿನಲ್ಲಿ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ ಕನ್ನಡ ಪರ ಚಟುವಟಿಕೆಗಳು ಇತರ ಸಂಘ ಸಂಸ್ಥೆಗಳಿಗೆ ಮಾದರಿ ಹಾಗು ಅನುಕರಣೀಯವಾಗಿದೆ.” ಎಂದು ಹೇಳಿದರು. ಕಾಯಕ್ರಮವನ್ನು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ ದೀಪ ಪ್ರಜ್ವಲನಗೈದು ಉದ್ಘಾಟಿಸಿದರು.…

Read More

ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮವು ದಿನಾಂಕ 15-04-2024ರಂದು ಸಂಜೆ ಗಂಟೆ 6.25ಕ್ಕೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಈ ದಿನದ ಸರಣಿ ಕಾರ್ಯಕ್ರಮದಲ್ಲಿ ಬೆಂಗಳೂರಿನ ಅದಿತಿ ವಿ. ರಾವ್ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ. ಅದಿತಿ ವಿ. ರಾವ್ ಇವರು ಕರ್ನಾಟಕ ಕಲಾಶ್ರೀ ಡಾ. ಸುಪರ್ಣಾ ವೆಂಕಟೇಶ್ ಇವರಿಂದ 15 ವರ್ಷಗಳಿಂದ ಭರತನಾಟ್ಯದಲ್ಲಿ ತರಬೇತಿ ಪಡೆಯುತ್ತಿದ್ದು, ಶ್ರೀಮತಿ ಶ್ವೇತಾ ವೆಂಕಟೇಶ್ ಇವರಿಂದ ಕಥಕ್ ತರಬೇತಿ ಪಡೆಯುತ್ತಿದ್ದಾರೆ. ಕಂಸಾಳೆ, ಕೋಲಾಟ, ಕರಗ, ಪಟ್ಟದಕುಣಿತ, ಡೊಳ್ಳು ಕುಣಿತ, ಘೂಮರ್ಮತ್ತು ಇತರ ಹಲವು ಪ್ರಕಾರಗಳ ಜಾನಪದ ನೃತ್ಯದ ಅನುಭವ ಹೊಂದಿರುತ್ತಾರೆ. ಭರತನಾಟ್ಯದಲ್ಲಿ ಜೂನಿಯರ್ ಮತ್ತು ಸೀನಿಯರ್ ಹಾಗೂ ಕಥಕ್ ಜೂನಿಯರ್ ಪರೀಕ್ಷೆಯನ್ನು ಅತ್ಯುತ್ತಮ ಶ್ರೇಣಿಯಲ್ಲಿ ಪೂರ್ಣಗೊಳಿಸಿದ್ದು, ಭರತನಾಟ್ಯ ಪ್ರದರ್ಶನ ಕಲೆಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿರುತ್ತಾರೆ. ದಿನಾಂಕ 21-05-2022ರಂದು…

Read More

ಉದಯೋನ್ಮುಖ ಲೇಖಕಿ ವಿನಿಶಾ ಅವರ ‘ಎತ್ತಿನ ಗಾಡಿ ಎಕ್ಸ್ ಪ್ರೆಸ್ ಭಾಗ 2’ ಎಂಬ ಮಂದಾನಿಲ ಪ್ರಕಾಶನದಿಂದ ಪ್ರಕಟವಾದ ಕೃತಿಯ ವೈಶಿಷ್ಟ್ಯವೆಂದರೆ ಅದು ಒಳಗೂ ಹೊರಗೂ ಮೈತುಂಬಾ ಮುದ್ದಾಗಿ ಹೊದ್ದುಕೊಂಡ ತೀರ್ಥಹಳ್ಳಿಯ ಸುಂದರ ಆಡುಭಾಷೆ. ಬೆನ್ನುಡಿ, ರಕ್ಷಾ ಪುಟದ ಒಳಪುಟ ಎಲ್ಲವನ್ನೂ ಹಳ್ಳಿಗರ ಮಾತುಗಳಿಂದಲೇ ತುಂಬಿಸಲಾಗಿದೆ. ಒಳಪುಟಗಳ 51 ಲಲಿತ ಬರಹಗಳಿಗೆ ‘ಲಘು ಬರಹಗಳ ಕಂತೆ’ ಎಂಬ, ಒಳಗಿನ ಬರಹಗಳದ್ದೇ ಶೈಲಿಯ ಉಪಶೀರ್ಷಿಕೆ ನೀಡಲಾಗಿದೆ. ‌ ಈ 51 ಲೇಖನಗಳನ್ನು ಲೇಖಕಿ ಆತ್ಮಕಥನದ ಶೈಲಿಯಲ್ಲಿ ಬರೆದಿದ್ದಾರೆ. ತಮ್ಮ ದೈನಂದಿನ ಬದುಕಿನಲ್ಲಿ ತಾವು ಕಣ್ಣಾರೆ ಕಂಡ ಹಾಗೂ ಸ್ವತಃ ಅನುಭವಿಸಿದ ವಿಚಾರಗಳನ್ನೇ ಎತ್ತಿಕೊಂಡಿದ್ದಾರೆ. ಸೂಕ್ಷ್ಮ ಕಣ್ಣುಗಳ ಅವರ ತಂಗಿ ಮುದ್ದು ತೀರ್ಥಹಳ್ಳಿ ಅವರ ಎಲ್ಲಾ ಅನುಭವಗಳಲ್ಲಿ ಸದಾ ಅವರ ಜೊತೆಗೆ ಇರುತ್ತಾರೆ. ಪತಿ ಪ್ರಮೋದ್ ಕೂಡಾ ಇರುತ್ತಾರೆ. ಎದ್ರು ಮನೆಯವರೂ, ಪಕ್ಕದ ಮನೆಯವರೂ, ಹಿಂದಿನ ಮನೆಯವರೂ ಊರೂರು ಸುತ್ತುತ್ತಾ ಇದ್ದ ಕುಟುಂಬವಾಗಿದ್ದರಿಂದ ಅವರು ಹಿಂದೆ ಇದ್ದ ಹಳ್ಳಿಯವರೂ – ಹೀಗೆ ಎಲ್ಲರೂ ಇಲ್ಲಿ…

Read More

ಪುತ್ತೂರು : ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇದರ ದ್ವಿತೀಯ ವರ್ಷದ ಸಂಭ್ರಮ, ಕೃತಿ ಲೋಕಾರ್ಪಣೆ ಮತ್ತು ದಿವ್ಯಾಂಗ ಚೇತನ ಕವಿಗೋಷ್ಠಿಯನ್ನು ದಿನಾಂಕ 14-04-2023ರಂದು ಬೆಳಿಗ್ಗೆ 10-00 ಗಂಟೆಗೆ ಪುತ್ತೂರಿನ ಅನುರಾಗ ವಠಾರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ ಪುತ್ತೂರು ಉಮೇಶ್ ನಾಯಕ್ ಇವರ ಅಧ್ಯಕ್ಷತೆಯಲ್ಲಿ ಪುತ್ತೂರಿನ ಕರ್ನಾಟಕ ಸಂಘದ ಅಧ್ಯಕ್ಷರಾದ ಹಾಗೂ ಹಿರಿಯ ಸಾಹಿತಿಗಳಾದ ಶ್ರೀ ಬಿ. ಪುರಂದರ ಭಟ್ ಇವರು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸುನೀತಾ ಶ್ರೀರಾಮ್ ಕೊಯಿಲ ಇವರ ‘ಆಶಯ’ ಮತ್ತು ಕುಮಾರಿ ಪಾವನಿ ಬಿ. ನಲ್ಕ ಇವರ ‘ಸಪ್ತಮಿ’ ಎಂಬ ಕವನ ಸಂಕಲನಗಳ ಕೃತಿ ಲೋಕಾರ್ಪಣೆಗೊಳ್ಳಲಿದೆ. ಆಹ್ವಾನಿತ ವಿಶೇಷ ಚೇತನ ಪ್ರತಿಭೆಗಳು ‘ಕವಿಗೋಷ್ಠಿ’ ಪ್ರಸ್ತುತ ಪಡಿಸಲಿದ್ದು, ಈ ಕಾರ್ಯಕ್ರಮವು ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಸಹಯೋಗದಲ್ಲಿ ನಡೆಯಲಿದೆ. ಮಿತ್ರಂಪಾಡಿ ಜಯರಾಮ ರೈ ಮಹಾ ಪೋಷಕತ್ವದಲ್ಲಿ ತಾಲೂಕು…

Read More

ಬಂಟ್ವಾಳ : ಸಿದ್ಧಕಟ್ಟೆಯ ಸರಕಾರಿ ಕಾಲೇಜಿನ ವಾರ್ಷಿಕ ಸಂಚಿಕೆ ‘ಸಿದ್ಧ ಸುಧೆ’ಯ ಲೋಕಾರ್ಪಣೆ ಸಮಾರಂಭವು ದಿನಾಂಕ 11-04-2024 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ‌ರಾದ ಡಾ. ಅಜೆಕಳ ಗಿರೀಶ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಂಚಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬಂಟ್ವಾಳ ಸಮಿತಿಯ ಅಧ್ಯಕ್ಷ, ಮಂಗಳೂರು ಕಣಚೂರು ಆಯುರ್ವೇದ ಕಾಲೇಜಿನ ವೈದ್ಯಕೀಯ ಸಲಹೆಗಾರ, ಮಂಗಳಾ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಹಾಗೂ ಬರಹಗಾರ ಡಾ. ಸುರೇಶ ನೆಗಳಗುಳಿ “ವಿದ್ಯಾಭ್ಯಾಸದ ಜೊತೆ ಜೊತೆಗೇ ಸಾಹಿತ್ಯ, ಕಲೆ ಮುಂತಾದ ವಿಷಯಗಳಲ್ಲಿ ತೊಡಗಿಸಿಕೊಳ್ಳುವುದು ಕಲಿಕೆಯ ಅಭಿವೃದ್ಧಿಗೆ ಪೂರಕ. ಬರೆಹಗಳು ರಾಷ್ಟ್ರದ ಉನ್ನತಿಗೆ ಪೂರಕವಾಗಿದ್ದು ಎಷ್ಟೋ ಸಾಧನೆಗಳು ಕೇವಲ ಸಾಹಿತ್ಯದಿಂದ ಆದ ಉದಾಹರಣೆಗಳು ಸಾಕಷ್ಟಿವೆ . ಶಾಲಾ ಪತ್ರಿಕೆ ‘ಸಿದ್ಧಸುಧೆ’ಯೂ  ಆ ನಿಟ್ಟಿನತ್ತ ಅಳಿಲ ಸೇವೆಯೇ ಸರಿ.” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ರಾಷ್ಟ್ರ ನಿರ್ಮಾಣದಲ್ಲಿ ಸಾಹಿತ್ಯದ ಪಾತ್ರ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಸರಕಾರೀ ಪ್ರಥಮ ದರ್ಜೆ ಕಾಲೇಜಿನ…

Read More

ಮಂಗಳೂರು : ಕಲಾಭಿ (ರಿ) ಮಂಗಳೂರು ಹಾಗೂ ಕೆನರಾ ಕಲ್ಚರಲ್ ಅಕಾಡೆಮಿಯು ಜಂಟಿಯಾಗಿ ಆಯೋಜಿಸಿರುವ ‘ಅರಳು 2024’ರ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 11-04-2024ರಂದು ಮಂಗಳೂರಿನ ಕೆನರಾ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ರಾಜೇಶ್, ಕಲಾಭಿ ಸಂಸ್ಥೆಯ ಅಧ್ಯಕ್ಷರಾಗಿರುವ ಸುರೇಶ್ ನಾಯ್ಕ್, ಅರೆಹೊಳೆ ಪ್ರತಿಷ್ಠಾನದ ಅಧ್ಯಕ್ಷರಾಗಿರುವ ಅರೆಹೊಳೆ ಸದಾಶಿವ ರಾವ್, ಕೆನರಾ ಹೈಸ್ಕೂಲ್ ಅಸೋಸಿಯೇಷನ್ನಿನ ಪಿ. ಆರ್ . ಒ. ಉಜ್ವಲ್ ಮಲ್ಯ ಹಾಗೂ ಕೆನರಾ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಕವಿತಾ ಮೌರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಲಾಭಿ ಸಂಸ್ಥೆಯ ಸ್ಥಾಪಕ ಹಾಗೂ ಕೆನರಾ ಕಲ್ಚರಲ್ ಅಕಾಡೆಮಿಯ ಸಂಯೋಜಕರಾದ ಉಜ್ವಲ್ ಯು.ವಿ. ಸಂಸ್ಥೆಯ ಪರಿಚಯವನ್ನು ಮಾಡಿದರು. ‘ಅರಳು 2024’ ಕಾರ್ಯಗಾರದ ನಿರ್ದೇಶಕರಾಗಿರುವ ಭುವನ್ ಮಣಿಪಾಲ್ ವಂದಿಸಿದರು. 10 ದಿನಗಳ ಈ ಕಾರ್ಯಾಗಾರದಲ್ಲಿ ನಿರ್ದೇಶಕರುಗಳಾಗಿ ರಾಜು…

Read More