Subscribe to Updates
Get the latest creative news from FooBar about art, design and business.
Author: roovari
ಮೂಡುಬಿದಿರೆ: ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕ ಮತ್ತು ಶ್ರೀ ಮಹಾವೀರ ಪ. ಪೂ. ಕಾಲೇಜಿನ ಸಹಯೋಗದಲ್ಲಿ ‘ಕನ್ನಡ ಚಿಂತನ’ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ ‘ಕನ್ನಡ ಕಾವ್ಯ ಮತ್ತು ಜೀವನಪ್ರೀತಿ’ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವು ದಿನಾಂಕ 08 ಜನವರಿ 2025ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಆಗಮಿಸಿದ ಆಳ್ವಾಸ್ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಯೋಗೀಶ್ ಕೈರೋಡಿ ಮಾತನಾಡಿ “ಹೊರಗಿನ ಪ್ರಪಂಚವನ್ನು ತೆರೆದ ಕಣ್ಣುಗಳಿಂದ ಕಂಡಾಗ ಅನೇಕ ಸಂಗತಿಗಳು ನಮ್ಮ ಮನಸ್ಸನ್ನು ತಟ್ಟಿ ಯೋಚನೆಗೀಡು ಮಾಡಿದಾಗ ಅಂತಹ ಸಂಗತಿಗಳೇ ನಮ್ಮನ್ನು ಕವಿತ್ವದೆಡೆಗೆ ಸೆಳೆಯುತ್ತವೆ.ಭಾವನಾತ್ಮಕ ಸಂಗತಿಗಳಿರಬಹುದು, ನೋವಿನ ಘಟನೆಗಳೇ ಇರಬಹುದು, ಸಂತೋಷದ ಕ್ಷಣಗಳೇ ಇರಬಹುದು ಆ ಸಂದರ್ಭಗಳಲ್ಲಿ ನಮ್ಮನ್ನು ಕಾಡುವ ಸಂವೇದನೆ, ಜೀವನಪ್ರೀತಿ ಕವಿಮನಸ್ಸಿಗೆ ಮೂಲ. ಒಳ್ಳೆಯ ಬರಹವೂ ಕಾವ್ಯವಾಗಬಲ್ಲುದು ಮತ್ತು ಕಾವ್ಯ ರಚಿಸದಿದ್ದರೂ ಜೀವನ ಪ್ರೀತಿಯ ಸಂವೇದನೆ ಇರುವವರೆಲ್ಲರೂ ಕವಿಗಳೇ ಆಗಿರುತ್ತಾರೆ” ಎಂದರು. ಸಭಾಧ್ಯಕ್ಷತೆಯನ್ನುವಹಿಸಿದ್ದ ಕ. ಸಾ. ಪ. ಮೂಡುಬಿದಿರೆ…
ಸುರತ್ಕಲ್ : ಮಣಿಕೃಷ್ಣ ಸ್ವಾಮಿ ಅಕಾಡೆಮಿ(ರಿ.) ಮತ್ತು ನಾಗರಿಕ ಸಲಹಾ ಸಮಿತಿ(ರಿ.) ಸುರತ್ಕಲ್ ಆಯೋಜಿಸುವ ಉದಯರಾಗ ಕಾರ್ಯಕ್ರಮ ಸರಣಿಯ ‘ಉದಯರಾಗ–58’ ಕಾರ್ಯಕ್ರಮವು ದಿನಾಂಕ 05 ಜನವರಿ 2025ರಂದು ಸುರತ್ಕಲ್ನ ಮೇಲು ಸೇತುವೆಯ ತಳಭಾಗದ ಎಂ. ಸಿ. ಎಫ್ ನಾಗರಿಕ ಸಲಹಾ ಸಮಿತಿ ಸಾಂಸ್ಕೃತಿಕ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಂಗಳೂರಿನ ‘ಅರೋಹಣಂ ಸ್ಕೂಲ್ ಆಫ್ ಮ್ಯೂಸಿಕ್’ ಇದರ ಗುರು ಹಾಗೂ ಸಂಗೀತ ಕಲಾವಿದ ಡಾ. ವಿದ್ವಾನ್ ಅನೀಶ್ ವಿ. ಭಟ್ ಮಾತನಾಡಿ “ಶಾಸ್ತ್ರೀಯ ಸಂಗೀತದ ಅಭ್ಯಾಸಿಗಳಿಗೆ ಪೂರಕ ವಾತಾವರಣ ಲಭ್ಯವಾದಾಗ ಪರಿಪೂರ್ಣ ಕಲಾವಿದರಾಗಿ ರೂಪುಗೊಳ್ಳಲು ಸಾಧ್ಯ.” ಎಂದು ನುಡಿದರು. ಡಾ. ವಿದ್ವಾನ್ ಅನೀಶ್ ವಿ. ಭಟ್ ಅವರ ಶಿಷ್ಯೆಯರಾದ ಶ್ರೀವರದಾ ಪಟ್ಟಾಜೆ, ಸುಮನ ಕೆ., ಚಿನ್ಮಯಿ ವಿ. ಭಟ್, ಹವ್ಯಶ್ರೀ ಕೆ.ಟಿ., ರಕ್ಷ ಎ. ಆರ್. ಇವರಿಂದ ಶಾಸ್ತ್ರೀಯ ಸಂಗೀತ ಹಾಡುಗಾರಿಕೆ ನಡೆಯಿತು. ಇವರಿಗೆ ವಯಲಿನ್ನಲ್ಲಿ ಸುನಾದ ಪಿ. ಎಸ್. ಹಾಗೂ ಮೃದಂಗದಲ್ಲಿ ಅವಿನಾಶ್ ಬಿ. ಸಹಕರಿಸಿದರು. ಮಣಿಕೃಷ್ಣ…
ಕೋಲಾರ ವೆಂಕಟೇಶ ಅಯ್ಯರ್ ಇವರು ಕೆ.ವಿ.ಅಯ್ಯರ್ ಎಂದೇ ಪ್ರಸಿದ್ಧಿ ಪಡೆದ ಕನ್ನಡ ನಾಡು ಕಂಡ ವಿಶೇಷ ವ್ಯಕ್ತಿಗಳಲ್ಲಿ ಒಬ್ಬರು. ವೃತ್ತಿಯಿಂದ ದೈಹಿಕ ಶಿಕ್ಷಣ ತಜ್ಞರಾದರೂ ಪ್ರವೃತ್ತಿಯಿಂದ ಸಾಹಿತ್ಯ ಕೃಷಿಯನ್ನು ಮಾಡಿಕೊಂಡು ಬಂದವರು. 1898 ಜನವರಿ 8 ರಂದು ಕೋಲಾರ ಜಿಲ್ಲೆಯ ದೇವರಾಯ ಸಮುದ್ರ ಎಂಬಲ್ಲಿ ಇವರ ಜನನವಾಯಿತು. ಪ್ರೌಢ ಶಿಕ್ಷಣ ಪಡೆದ ನಂತರ ಬಡತನದದಿಂದಾಗಿ ವಿದ್ಯಾಭ್ಯಾಸವನ್ನು ಅರ್ಧದಲ್ಲಿಯೇ ಮೊಟಕುಗೊಳಿಸಿದ್ದು ವಿಷಾದದ ಸಂಗತಿ. ಉತ್ತಮ ವ್ಯಾಯಾಮ ಶಿಕ್ಷಕರಾದ ಇವರು ಛಾಯಾಗ್ರಹಕರು, ರೇಡಿಯೋ ರಿಪೇರಿ ಇತ್ಯಾದಿಗಳಲ್ಲಿ ನಿಪುಣರು. ನಾಟಕದಲ್ಲಿ ಆಸಕ್ತಿ ಹೊಂದಿರುವ ಇವರು “ರವಿ ಕಲಾವಿದರು” ಎನ್ನುವ ನಾಟಕ ಸಂಸ್ಥೆಯ ಅಧ್ಯಕ್ಷರಾಗಿ ದುಡಿದರು. ದೇಹದಾರ್ಢ್ಯತೆಯಲ್ಲಿ ಸ್ವತಃ ಆಸಕ್ತಿಯಿರುವ ಕಾರಣ ವ್ಯಾಯಾಮ ಶಾಲೆ ನಡೆಸುತ್ತಿದ್ದರು ಇವರ ವ್ಯಾಯಾಮ ಶಾಲೆಗೆ ಮಹಾರಾಜ ಕೃಷ್ಣರಾಜ ಒಡೆಯರು ಮಾತ್ರವಲ್ಲದೆ, ಟಿ.ಪಿ. ಕೈಲಾಸಮ್ ಬಂದು ಮಾರ್ಗದರ್ಶನ ನೀಡುವುದರೊಂದಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಾಲ್ಯದಲ್ಲಿ ಹೋಟೆಲುಗಳಲ್ಲಿ ಇಡ್ಲಿ ದೋಸೆ ಹಿಟ್ಟನ್ನು ದೊಡ್ಡ ಗಾತ್ರದ ರುಬ್ಬುಕಲ್ಲಲ್ಲಿ ರುಬ್ಬುತ್ತಿದ್ದು, ಅಡುಗೆಗೆ ಬೇಕಾದ ಭಾರಿ ಗಾತ್ರದ ನೂರಾರು ಕೊಡ…
ಕಾರ್ಕಳ : ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ ದಿನಾಂಕ 04 ಜನವರಿ 2025ರಂದು ಕ್ರಿಯೇಟಿವ್ ‘ನುಡಿಹಬ್ಬ’ ಮತ್ತು ವಾರ್ಷಿಕೋತ್ಸವ ಸಮಾರಂಭ ‘ಕ್ರಿಯೇಟಿವ್ ಆವಿರ್ಭವ’ವು ‘ವಿವಿಧತೆಯಲ್ಲಿ ಏಕತೆ’ ಎಂಬ ಪರಿಕಲ್ಪನೆಯೊಂದಿಗೆ ಬಹಳ ವೈಭವಪೂರ್ಣವಾಗಿ ಮೂಡಿಬಂದಿತು. ಕಾರ್ಯಕ್ರಮದಲ್ಲಿ ‘ಪ್ರೇಮಕವಿ’ ಎಂದೇ ಕರೆಯಲ್ಪಡುವ ಖ್ಯಾತ ಸಾಹಿತಿಗಳಾದ ಬಿ. ಆರ್. ಲಕ್ಷ್ಮಣರಾವ್ ಹಾಗೂ ನಡೆದಾಡುವ ಗ್ರಂಥಾಲಯ ಎಂದೇ ಪ್ರಸಿದ್ಧರಾದ ಡಾ. ನಾ. ಸೋಮೇಶ್ವರ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು. ವಿದ್ಯಾರ್ಥಿಗಳ ಸಮ್ಮುಖದಲ್ಲಿ ಎರಡು ಹಂತಗಳಲ್ಲಿ ಸಂವಾದ ಕಾರ್ಯಕ್ರಮವು ಖ್ಯಾತ ನಿರೂಪಕ ಅವಿನಾಶ್ ಕಾಮತ್ ಇವರ ಮುಖೇನ ನಡೆಸಲ್ಪಟ್ಟಿತು. ‘ಕವಿತೆ ಹುಟ್ಟುವ ಸಮಯ’ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಮೂಹವನ್ನುದ್ದೇಶಿಸಿ ಮಾತನಾಡಿದ ಬಿ. ಆರ್. ಲಕ್ಷ್ಮಣರಾವ್ “ಹಾಡುಗಳ ನಿರಂತರತೆಗೆ ಕಾರಣ ಮುಂದಿನ ಪೀಳಿಗೆಯಾಗಿರುವ ವಿದ್ಯಾರ್ಥಿಗಳು” ಎಂದರು. ಮಜಾ ಟಾಕೀಸ್ ಖ್ಯಾತಿಯ ಮೋಹನ್ ಕಾರ್ಕಳ ಮತ್ತು ತಂಡದವರಿಂದ ಬಿ. ಆರ್. ಲಕ್ಷ್ಮಣರಾವ್ ವಿರಚಿತ ಕವಿತೆಗಳ ಗಾಯನ ಕಾರ್ಯಕ್ರಮ ಜರುಗಿತು. ಪ್ರಖ್ಯಾತ ವೈದ್ಯ, ಕ್ವಿಜ್ ಮಾಸ್ಟರ್, ಲೇಖಕರು ಹಾಗೂ ಅಂಕಣಕಾರರಾದ ಡಾ. ನಾ. ಸೋಮೇಶ್ವರ…
ಸುರತ್ಕಲ್ : ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿ (ರಿ.) ಸುರತ್ಕಲ್ ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ದಿನಾಂಕ 05 ಜನವರಿ 2025ರಂದು ಸುರತ್ಕಲಿನ ವಿದ್ಯಾದಾಯಿನಿ ಕಲಾಮಂದಿರದಲ್ಲಿ ಆಯೋಜಿಸಿರುವ 40ರ ಸಂಭ್ರಮದ ಪ್ರಯುಕ್ತ ‘ನಲ್ವತ್ತರ ನಲಿವು -1’ ಉದ್ಘಾಟನಾ ಸಮಾರಂಭ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವದಿಸಿದ ಎಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮಿಗಳು “ಭಾರತೀಯ ಶಾಸ್ತ್ರೀಯ ಕಲಾಪ್ರಕಾರಗಳು ಆತ್ಮವನ್ನು ಪರಮಾತ್ಮನಡೆಗೆ ಕೊಂಡೊಯ್ಯುವ ಒಂದು ಕಲಾಪ್ರಕಾರವಾಗಿದೆ. ಇದನ್ನು ಅಷ್ಟೇ ಶ್ರದ್ಧೆಯಿಂದ ಆರಾಧಿಸಿ ಪ್ರದರ್ಶಿಸಿದಾಗ ಮನುಷ್ಯನಲ್ಲಿ ಸಾತ್ವಿಕ ಭಾವನೆ ಉಂಟಾಗುತ್ತದೆ. ಕಳೆದ 40 ವರ್ಷಗಳಿಂದ ಕಲಾ ಕ್ಷೇತ್ರದಲ್ಲಿ ವಿಶೇಷ ಸಾಧನೆಯನ್ನು ಮಾಡಿ ಅಸಂಖ್ಯಾತ ಶಿಷ್ಯ ವರ್ಗವನ್ನು ಹೊಂದಿರುವ ಸಂಸ್ಥೆಯ ರೂವಾರಿ ಚಂದ್ರಶೇಖರ ನಾವಡರು ಅಭಿನಂದನಾರ್ಹರು” ಎಂದು ನುಡಿದರು. ನಾಟ್ಯಾಂಜಲಿ ಸಂಸ್ಥೆಯ ಗೌರವಾರ್ಪಣೆಯನ್ನು ಎಚ್.ಯು. ಅನಂತಯ್ಯ, ಎಸ್. ಸುಬ್ರಾಯ ಹಾಲಂಬಿ ಕುಂದಾಪುರ, ವೆಂಕಟರಮಣ ಐತಾಳ್ ಕೋಟೇಶ್ವರ, ಪಿ. ಪುರುಷೋತ್ತಮ ರಾವ್ ಕೃಷ್ಣಾಪುರ, ತಿರುಮಲೇಶ್ವರ ಭಟ್ ಕಲ್ಲಡ್ಕ, ಸರ್ವೋತ್ತಮ…
ಕಾರ್ಕಳ : ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ ದಿನಾಂಕ 03 ಜನವರಿ 2025ರಂದು ಕ್ರಿಯೇಟಿವ್ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಿತು. ಕರ್ಣಾಟಕ ಬ್ಯಾಂಕ್ ಪ್ರಧಾನ ಕಚೇರಿ ಮಾನವ ಸಂಪನ್ಮೂಲ ಇಲಾಖೆಯ ಉಪಪ್ರಧಾನ ವ್ಯವಸ್ಥಾಪಕರಾದ ಶ್ರೀ ಗೋಪಾಲಕೃಷ್ಣ ಸಾಮಗ ಬಿ. ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿ “ಜ್ಞಾನಾರ್ಜನೆಯ ಜೊತೆಗೆ ವಿದ್ಯಾರ್ಥಿಗಳು ಉತ್ತಮ ಸಂಸ್ಕೃತಿಯನ್ನು ರೂಢಿಸಿಕೊಂಡಾಗ ಸರ್ವತೋಮುಖ ಅಭಿವೃದ್ಧಿ ಸಾಧ್ಯ” ಎಂದು ಹೇಳಿದರು. ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ.ಎಸ್.ರವರು ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸಾಗಿ ಬಂದ ಸಾಧನೆಯ ಹಾದಿಯ ಸಮಗ್ರ ಮಾಹಿತಿಗಳನ್ನು ಒದಗಿಸಿದರು. ಮುಖ್ಯ ಅತಿಥಿ ಎನ್.ಸಿ.ಎಸ್. ಮತ್ತು ಕೋ. ಇದರ ಸ್ಥಾಪಕರಾದ ಅಂ. ನಿತೇಶ್ ಶೆಟ್ಟಿಯವರು ಮಾತನಾಡಿ “ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಮತ್ತು ಇದು ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕು” ಎಂದರು. ಪ್ರಧಾನ ಶಿಲ್ಪಿಗಳಾದ ಸುನಿಲ್ ಕುಮಾರ್ ಇವರು ಮಾತನಾಡಿ “ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಮಕ್ಕಳು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಸಹಕಾರಿ” ಎಂದರು.…
ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇಲ್ಲಿನ ನವಗ್ರಹ ಗುಡಿಯಲ್ಲಿ ತಿಂಗಳ ಸರಣಿ ಕಾರ್ಯಕ್ರಮದ ಅಂಗವಾಗಿ ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ‘ಸುಧನ್ವ ಮೋಕ್ಷ’ ಎಂಬ ತಾಳಮದ್ದಳೆಯು ದಿನಾಂಕ 06 ಜನವರಿ 2025ರಂದು ಜರಗಿತು. ಹಿಮ್ಮೇಳದಲ್ಲಿ ಭಾಗವತರಾಗಿ ಲಕ್ಷ್ಮೀನಾರಾಯಣ ಭಟ್ ಬಟ್ಯಮೂಲೆ, ಸತೀಶ್ ಇರ್ದೆ, ಕುಮಾರಿ ಕೃತಿಕಾ ಖಂಡೇರಿ ಹಾಗೂ ಚೆಂಡೆ, ಮದ್ದಲೆಗಳಲ್ಲಿ ಪದ್ಯಾಣ ಶಂಕರನಾರಾಯಣ ಭಟ್, ಮುರಳೀಧರ ಕಲ್ಲೂರಾಯ, ಕುಮಾರಿ ಶರಣ್ಯ ನೆತ್ತರಕೆರೆ ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ ಬಾರ್ಯ (ಶ್ರೀ ಕೃಷ್ಣ), ಗುಂಡ್ಯಡ್ಕ ಈಶ್ವರ ಭಟ್ ಹಾಗೂ ದುಗ್ಗಪ್ಪ ನಡುಗಲ್ಲು (ಸುಧನ್ವ), ಗುಡ್ಡಪ್ಪ ಬಲ್ಯ (ಅರ್ಜುನ), ಶುಭಾ ಜೆ.ಸಿ. ಅಡಿಗ (ಪ್ರಭಾವತಿ) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು. ರಂಗನಾಥ್ ರಾವ್ ಸಹಕರಿಸಿದರು.
ಲಿಂಗಣ್ಣಯ್ಯ ಗುಂಡಪ್ಪನವರು ಹಾಸನ ಜಿಲ್ಲೆಯ ಮತಿಗಟ್ಟ ಎಂಬಲ್ಲಿ 08 ಜನವರಿ 1903ರಲ್ಲಿ ಜನಿಸಿದರು. ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ ಪಡೆದ ಗುಂಡಪ್ಪನವರ ಮಾರ್ಗದರ್ಶಿಗಳೂ, ಗುರುಗಳೂ ಆದ್ದವರು ಬಿ.ಎಂ. ಶ್ರೀಕಂಠಯ್ಯನವರು. ಭಾಷಾಂತರ, ಗ್ರಂಥ ಸಂಪಾದನೆ, ಆಧುನಿಕ ಸಾಹಿತ್ಯಗಳಲ್ಲಿ ನಿರಂತರ ಕೆಲಸ ಮಾಡಿದ ಇವರು ಕನ್ನಡ ಭಾಷಾ ಸಂಸ್ಕೃತಿಗೆ ಅಮೋಘ ಕಾಣಿಕೆಗಳನ್ನು ನೀಡಿದ್ದಾರೆ. ಗುಂಡಪ್ಪನವರಿಗೆ ತಮಿಳಿನ ಮೇಲೆ ಪ್ರಭುತ್ವವಿದ್ದ ಕಾರಣ ಅನೇಕ ಕೃತಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ‘ತಿರುಕ್ಕುರುಳ್’, ‘ಮಣಿಮೇಖಲೈ’, ‘ಶಿಲಪ್ಪದಿಕಾರಂ’, ‘ಅವ್ವೆಯಾರ್’, ‘ಪೆರಿಯ ಪುರಾಣಂ’, ‘ನಾಲ್ಮಡಿ ಕಡುಕು’, ‘ತಿರುವಾಚಕಂ’, ‘ಪೆರುಂಗದೈ’ ಮತ್ತು ‘ಉಳಗ ನೀತಿ’ಗಳನ್ನು ಕನ್ನಡಕ್ಕೆ ತಂದಿದ್ದಾರೆ. ಪ್ರಾಚೀನ ತಮಿಳು ಮಾತ್ರವಲ್ಲದೆ, ಸುಬ್ರಹ್ಮಣ್ಯ ಭಾರತಿಯವರ ಕವಿತೆಗಳ ಕನ್ನಡ ರೂಪವಾದ ‘ಭಾರತಿಯವರ ಕವಿತೆಗಳು’, ಮು. ವರದರಾಜನ್ ಅವರ ‘ತಮಿಳು ಸಾಹಿತ್ಯ ಚರಿತ್ರೆ’, ಯು. ಸ್ವಾಮಿನಾಥ ಅಯ್ಯರ್ ಅವರ ‘ನನ್ನ ಚರಿತ್ರೆ’ ಆಧುನಿಕ ತಮಿಳಿನ ಭಾಷಾಂತರಗಳು. ಕೌಂಟ್ ಲಿಯೋ ಟಾಲ್ ಸ್ಟಾಯ್ ಅವರ ಕಥೆಗಳ ಅನುವಾದಗಳು ಇಂದಿಗೂ ಜನಪ್ರಿಯವಾಗಿವೆ. ಇವುಗಳಲ್ಲದೇ ಸಂಸ್ಕೃತದಲ್ಲಿರುವ ಭಾಸನ ‘ಸ್ವಪ್ನ ವಾಸವದತ್ತ’…
ಸುಳ್ಯ : ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ದಿನಾಂಕ 04 ಜನವರಿ 2025 ಮತ್ತು 05 ಜನವರಿ 2025ರಂದು ನೀನಾಸಂ ನಾಟಕೋತ್ಸವ ನಡೆಯಿತು. ಈ ಉತ್ಸವವನ್ನು ಉದ್ಘಾಟಿಸಿದ ನಿವೃತ್ತ ಪ್ರಾಂಶುಪಾಲ ಡಾ. ಎನ್.ಎನ್. ಗೋವಿಂದ ಇವರು ಮಾತನಾಡಿ “ಆಧುನಿಕ ರಂಗಭೂಮಿಯ ಹುಟ್ಟಿಗೆ ಕಾರಣವಾದ ನೀನಾಸಂ ಸಂಸ್ಥೆ ಜಗತ್ತಿನ ಶ್ರೇಷ್ಠ ಕೃತಿಗಳನ್ನು ಕನ್ನಡದಲ್ಲಿ ರಂಗಕ್ಕೆ ತರುವ ಮೂಲಕ ಸದಭಿರುಚಿಯ ಪ್ರೇಕ್ಷಕ ಬಳಗವನ್ನು ಸೃಷ್ಟಿಸಿದೆ” ಎಂದರು. ರಂಗಮನೆಯ ಅಧ್ಯಕ್ಷರಾದ ಡಾ. ಜೀವನ್ ರಾಂ ಸುಳ್ಯ ಮಾತನಾಡಿ “ಹೆಗ್ಗೋಡಿನ ನೀನಾಸಂಗೆ ಇದೀಗ 75ನೇ ವರ್ಷದ ಸಂಭ್ರಮ, ನೀನಾಸಂ ತಿರುಗಾಟಕ್ಕೆ 40 ವರ್ಷ. ಸದಭಿರುಚಿಯ ನಾಟಕಗಳನ್ನು ನಿರಂತರ ನೀಡುತ್ತಿರುವ ಈ ತರಹದ ವೃತ್ತಿನಿರತ ಕಲಾವಿದರ ತಂಡ ಮತ್ತೊಂದಿಲ್ಲ” ಎಂದರು. ವೇದಿಕೆಯಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಸಾಹಿತಿ ಕುಮಾರಸ್ವಾಮಿ ತೆಕ್ಕುಂಜ, ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಶಿವರಾಮ ಶಾಸ್ತ್ರಿ, ರಂಗಮನೆಯ ಸದಸ್ಯರಾದ ಲತಾ ಮಧುಸೂದನ, ರವೀಶ್…
ಮುಂಬಯಿ : ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ‘ವಿಕಾಸ’ ಪುಸ್ತಕ ಬಹುಮಾನಕ್ಕೆ ಯು. ವೆಂಕಟ್ರಾಜ ರಾವ್, ಅಶೋಕ ಪಕ್ಕಳ, ಅನಿತಾ ತಾಕೋಡೆಯವರ ಕೃತಿಗಳು ಆಯ್ಕೆಯಾಗಿವೆ. ಅದೇ ರೀತಿ ‘ಡಾ. ವಿಶ್ವನಾಥ ಕಾರ್ನಾಡ್ ವಾರ್ಷಿಕ ಸಾಹಿತ್ಯ ಪುರಸ್ಕಾರ’ಕ್ಕೆ ಹಿರಿಯ ಬರಹಗಾರರು ನಿವೃತ್ತ ಪ್ರಾಂಶುಪಾಲರಾದ ಡಾ. ಉಮಾ ರಾಮರಾವ್ ಇವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಜಿ.ಎನ್. ಉಪಾಧ್ಯ, ಪ್ರತಿಷ್ಠಾನದ ಸಂಸ್ಥಾಪಕರಾದ ಡಾ. ವಿಶ್ವನಾಥ ಕಾರ್ನಾಡ್, ಕೋಶಾಧಿಕಾರಿ ಶರತ್ ಕಾರ್ನಾಡ್ ಇವರುಗಳ ಉಪಸ್ಥಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಹಿರಿಯ ಸಾಹಿತಿ ಯು. ವೆಂಕಟ್ರಾಜ್ ಇವರ ‘ಪಟೇಲರ ಹುಲಿ ಬೇಟೆ’ (ಕಥಾ ಸಂಕಲನ), ಅಂಕಣಕಾರ ಅಶೋಕ ಪಕ್ಕಳ ಅವರ ‘ಶತಾಮೃತಧಾರೆ’ (ಅಂಕಣ ಬರಹಗಳ ಸಂಗ್ರಹ) ಹಾಗೂ ಅನಿತಾ ತಾಕೋಡೆ ಅವರ ‘ಸುವರ್ಣಯುಗ’ ಜಯ ಸುವರ್ಣ ಯಶೋಗಾಥೆ ಕೃತಿಗಳು ಈ ಬಾರಿಯ…