Author: roovari

ಹಾಸನ : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ.) ಬೆಂಗಳೂರು ಸಂಸ್ಥೆ, ಉತ್ತರ ಕನ್ನಡ ಜಿಲ್ಲಾ ಘಟಕ ಹಾಗೂ ಯಲ್ಲಾಪುರ ತಾಲೂಕು ಘಟಕದ ಸಹಕಾರದಲ್ಲಿ ನಾಡಿನ ಪ್ರಸಿದ್ಧ ಮಕ್ಕಳ ಸಾಹಿತಿ ತಮ್ಮಣ್ಣ ಬೀಗಾರ ಸರ್ವಾಧ್ಯಕ್ಷತೆಯಲ್ಲಿ ದಿನಾಂಕ 23 ಫೆಬ್ರವರಿ 2025 ಭಾನುವಾರ ಯಲ್ಲಾಪುರದ ಅಡಿಕೆ ಭವನದಲ್ಲಿ ಹಮ್ಮಿಕೊಂಡಿರುವ ಅಖಿಲ ಕರ್ನಾಟಕ ಪ್ರಥಮ ಶಿಶು ಸಾಹಿತ್ಯ ಸಮ್ಮೇಳನದ ಲೋಗೋ ಬಿಡುಗಡೆ ಕಾರ್ಯಕ್ರಮವು ದಿನಾಂಕ 19 ಫೆಬ್ರವರಿ 2025ರಂದು ಹಾಸನದ ಮದನಗೌಡರ ನಿವಾಸದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಲೋಗೋ ಅನಾವರಣಗೊಳಿಸಿ ಮಾತನಾಡಿದ ಹಾಸನ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಚ್.ಬಿ. ಮದನಗೌಡ “ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ.) ಇದರಡಿಯಲ್ಲಿ ಕೊಟ್ರೇಶ್ ಎಸ್. ಉಪ್ಪಾರ್ ನೇತೃತ್ವದ ತಂಡ ಕರ್ನಾಟಕದ ಉದ್ದಗಲಕ್ಕೂ ಕನ್ನಡದ ಕಂಪನ್ನು ಸೂಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದೆ. ಸಾಹಿತ್ಯ ವೇದಿಕೆ ಈಗಾಗಲೇ ಸಾಹಿತ್ಯದ ವಿವಿಧ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಲವು ರಾಜ್ಯಮಟ್ಟದ ಸಮ್ಮೇಳನಗಳನ್ನು ಹಮ್ಮಿಕೊಂಡಿದ್ದು, ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯ…

Read More

ಹೊನ್ನಾವರ : ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ (ರಿ.) ಇದರ 90ನೇ ವರ್ಷದ ಸಂಭ್ರಮ ಹಾಗೂ ಕೆರೆಮನೆ ಶಂಭು ಹೆಗಡೆ ‘ರಾಷ್ಟ್ರೀಯ ನಾಟ್ಯೋತ್ಸವ -15’ವನ್ನು ದಿನಾಂಕ 22 ಫೆಬ್ರವರಿ 2025ರಿಂದ 02 ಮಾರ್ಚ್ 2025ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಗುಣವಂತೆಯ ಯಕ್ಷಾಂಗಣದಲ್ಲಿ ಆಯೋಜಿಸಲಾಗಿದೆ. ದಿನಾಂಕ 22 ಫೆಬ್ರವರಿ 2025ರಂದು ಸಂಜೆ 4-30 ಗಂಟೆಗೆ ಮಾನ್ಯ ಸಂಸದರು ವಿಶ್ವೇಶ್ವರ ಹೆಗಡೆ ಕಾಗೇರಿ ಇವರ ಅಧ್ಯಕ್ಷತೆಯಲ್ಲಿ ಸಚಿವರಾದ ಮಂಕಾಳು ಎಸ್. ವೈದ್ಯ ಇವರು ಶ್ರೀ ಇಡಗುಂಜಿ ಮೇಳದ 90ನೇ ವರ್ಷದ ಸಂಭ್ರಮ ಹಾಗೂ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವವನ್ನು ಹಾಗೂ ಬೆಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಡಾ. ನಿರಂಜನ ವಾನಳ್ಳಿ ಇವರು ಪ್ರದರ್ಶನಾಂಗಣವನ್ನು ಉದ್ಘಾಟಿಸಲಿದ್ದಾರೆ. ಬೆಂಗಳೂರಿನ ಕರ್ನಾಟಕ ಜಾನಪದ ಪರಿಷತ್ತು ಸಂಸ್ಥೆಗೆ ‘ಕೆರೆಮನೆ ಶಿವರಾಮ ಹೆಗಡೆ ರಾಷ್ಟ್ರೀಯ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಸಂಜೆ 6-30 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಮಾ ವೈದ್ಯನಾಥನ್ ಮತ್ತು ತಂಡ ದೆಹಲಿ ಮತ್ತು ಸಹ ಕಲಾವಿದರಾದ…

Read More

ಮಂಗಳೂರು : ಮಂಗಳೂರಿನ ಧ್ಯಾನಸಂಗೀತ ಅಕಾಡೆಮಿ ಕಲಾ ಟ್ರಸ್ಟಿನ ವತಿಯಿಂದ ನಡೆದ ‘ಗಾನಯೋಗಿ ಪಂಚಾಕ್ಷರಿ -ಪುಟ್ಟರಾಜ ಗವಾಯಿ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತೋತ್ಸವ’ ಕಾರ್ಯಕ್ರಮವು ದಿನಾಂಕ 16 ಫೆಬ್ರವರಿ 2025 ರಂದು ಮಂಗಳೂರಿನ ವಿ. ಟಿ. ರಸ್ತೆಯಲ್ಲಿರುವ ಕೃಷ್ಣ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ-ಕಲಾವಿದರಾಗಿ ಭಾಗವಹಿಸಿದ ಮೈಸೂರಿನ ಪಂಡಿತ್ ವೀರಭದ್ರಯ್ಯ ಹಿರೇಮಠ ಮಾತನಾಡಿ “ಗದುಗಿನ ವೀರೇಶ್ವರ ಪುಣ್ಯಾಶ್ರಮದ ವಾತಾವರಣದಲ್ಲಿ ಬೆಳೆದ ಸಂಗೀತ ಪರಂಪರೆ ಅಪಾರ. ಇಂತಹ ಗುರುಶಿಷ್ಯ ಪರಂಪರೆಯಿಂದಲೇ ಸಂಗೀತ ವಿದ್ಯೆಯು ವಿದ್ಯಾರ್ಥಿಗೆ ಸಿದ್ಧಿಸುವುದು. ಇಂದಿನ ಅನೇಕ ಕಲಾವಿದರಿಗೆ ಪಂಚಾಕ್ಷರಿ- ಪುಟ್ಟರಾಜ ಗವಾಯಿಗಳ ಸಂಬಂಧದಿಂದಲೇ ಸಂಗೀತವು ಶುದ್ಧ ರೀತಿಯಲ್ಲಿ ಉಳಿದು ಮುಂದುವರಿದಿದೆ” ಎಂದರು. ಮೈಸೂರಿನ ಸಮೀರ್ ರಾವ್ ಇವರಿಂದ ಬಾನ್ಸುರಿ ವಾದನ, ಭೀಮಾಶಂಕರ್ ಬಿದನೂರ್ ಹಾಗೂ ಪಂಚಮಿ ಬಿದನೂರ್ ಇವರಿಂದ ತಬಲ ಸೋಲೋ ಹಾಗೂ ಪಂಡಿತ್ ವೀರಭದ್ರಯ್ಯ ಹಿರೇಮಠ ಇವರಿಂದ ಹಿಂದುಸ್ತಾನಿ ಗಾಯನ ಕಚೇರಿ ನಡೆಯಿತು ಇವರಿಗೆ ಹಾರ್ಮೋನಿಯಂನಲ್ಲಿ ಶ್ರೀರಾಮ ಭಟ್ ಮತ್ತು ತಬಲಾದಲ್ಲಿ ಬೆಂಗಳೂರಿನ ಆದರ್ಶ್ ಶೆಣೈ ಸಹಕರಿಸಿದರು. ಟ್ರಸ್ಟಿನ…

Read More

ದಾವಣಗೆರೆ : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್ ಯಕ್ಷಗಾನ ಗೊಂಬೆಯಾಟ ಟ್ರಸ್ಟ್ (ರಿ.) ಇದರ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಿಂದ ದಿನಾಂಕ 11 ಫೆಬ್ರವರಿ 2025ರಂದು ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ, ಯಕ್ಷರಂಗ, ಯಕ್ಷಗಾನ, ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ಇವರಿಗೆ ‘ಯಕ್ಷಗಾನ ಗೊಂಬೆಸಿರಿ’ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿ, ಸನ್ಮಾನಿಸಲಾಯಿತು ಎಂದು ಅಕಾಡೆಮಿಯ ಅಧ್ಯಕ್ಷರಾದ ಭಾಸ್ಕರ್ ಕೊಗ್ಗ ಕಾಮತ್ ತಿಳಿಸಿದ್ದಾರೆ. “ದಾವಣಗೆರೆಯಲ್ಲಿ ಯಕ್ಷಗಾನ ಸೇರಿದಂತೆ ಕಲೆ, ಸಾಹಿತ್ಯ, ಸಂಗೀತ ಹೀಗೆ ಸಾಂಸ್ಕೃತಿಕ ಚಟುವಟಿಕೆಗಳನ್ನು ಕಳೆದ ನಾಲ್ಕು ದಶಕಗಳಿಂದ ನಿರಂತರವಾಗಿ ಕಠಿಣ ಪರಿಶ್ರಮದಿಂದ ಯಾವುದೇ ಸ್ವಾರ್ಥವಿಲ್ಲದೇ ಹೊಸ ಹೊಸ ಪರಿಕಲ್ಪನೆಗಳೊಂದಿಗೆ ಸಾಧನೆಯ ಜತೆಯಲ್ಲಿ ದಾವಣಗೆರೆಯ ಮಹಿಳೆಯರಿಗೆ ಯಕ್ಷಗಾನ ಪ್ರದರ್ಶನ ಯಶಸ್ವಿಗೊಳಿಸಿದ ಶೆಣೈಯರಿಗೆ ಅಭಿಮಾನದಿಂದ ಅಭಿನಂದಿಸಲಾಗಿದೆ” ಎಂದು ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಗೀತಾಂಜಲಿ ಭಾಸ್ಕರ್ ಕಾಮತ್ ತಿಳಿಸಿದ್ದಾರೆ. ವೇದಿಕೆಯಲ್ಲಿ ಶ್ರೀಮತಿ ಜ್ಯೋತಿ ಗಣೇಶ್ ಶೆಣೈ, ಶ್ರೀಮತಿ ಸನ್ನಿಧಿ…

Read More

ಕೋಟೇಶ್ವರ: ಯಶಸ್ವಿ ಕಲಾ ವೃಂದ ಕೋಟ ತೆಕ್ಕಟ್ಟೆ ಇದರ ವತಿಯಿಂದ ಶುಭಾಶಯ ಯಕ್ಷಗಾನ ರಂಗ ಪ್ರಸ್ತುತಿಯು ದಿನಾಂಕ 18 ಫೆಬ್ರವರಿ 2025ರಂದು ಬೀಜಾಡಿ ಗಣಪಯ್ಯ ಚಡಗರ ಇವರ ಮನೆಯಂಗಳದ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅನಿರುದ್ಧ ಹಾಗೂ ಸುಪ್ರಿತಾ ದಂಪತಿಗಳನ್ನು ಗೌರವಿಸಿದ ಪ್ರಾಚಾರ್ಯ ದೇವದಾಸ್ ರಾವ್ ಕೂಡ್ಲಿ ಮಾತನಾಡಿ “ವರ್ಷವಿಡೀ ಕಲೋಲ್ಲಾಸದಿಂದಲೇ ಪರ್ಯಟನ ನಡೆಸಿ ನೂರೆಂಟು ಕಾರ್ಯಕ್ರಮದ ಸಂಕಲ್ಪ ಪೂರೈಸಿ ಜಯದ ಪತಾಕೆಯನ್ನು ರಾಜ್ಯದಾದ್ಯಂತ ಹಾರಿಸಿದ ಸಂಸ್ಥೆ ಯಶಸ್ವೀ ಕಲಾವೃಂದ. ಕಲಾವಿದನೋರ್ವನ ಮನೆಯಲ್ಲಿ ಕಲಾ ಸಂಸ್ಥೆಗೆ ಅವಕಾಶ ನೀಡಿ ಕಲಾ ಮನಸ್ಸುಗಳಿಗೆ ವೇದಿಕೆ ಕಲ್ಪಿಸಿದ ಗಣಪಯ್ಯ ಚಡಗರ ಮಗನ ಮದುವೆಯಲ್ಲಿ ದೊರೆತ ಅಪೂರ್ವ ಅವಕಾಶ ಯಶಸ್ವೀ ಸಂಸ್ಥೆಗೆ ಸಂದ ಗೌರವ” ಎಂದರು. ಕಾರ್ಯಕ್ರಮದಲ್ಲಿ ಗಣಪಯ್ಯ ಚಡಗ, ಶ್ರೀಮತಿ ಶಾಲಿನಿ, ಅನಂತ ಮಂಜ, ಶ್ರೀಮತಿ ಸವಿತಾ ಮಂಜ, ಗುರು ಲಂಬೋದರ ಹೆಗಡೆ, ರಾಘವೇಂದ್ರ ಹೆಗಡೆ ಯಲ್ಲಾಪುರ, ರಾಹುಲ್ ಕುಂದರ್ ಕೋಡಿ, ಪೂಜಾ ಆಚಾರ್, ಪಂಚಮಿ ವೈದ್ಯ ಉಪಸ್ಥಿತರಿದ್ದರು. ಬಳಿಕ ಶುಭಾಶಯ ಯಕ್ಷಗಾಯನ ಪ್ರಸ್ತುತಿಗೊಂಡಿತು.

Read More

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇದರ ವತಿಯಿಂದ ನಿರಂಜನ 100 ವರ್ಷದ ನೆನಪಿನ ಉತ್ಸವ ಕಾರ್ಯಕ್ರಮವನ್ನು ದಿನಾಂಕ 22 ಫೆಬ್ರವರಿ 2025ರಂದು ಬೆಳಿಗ್ಗೆ 10-00 ಗಂಟೆಗೆ ಮಂಗಳೂರಿನ ಉರ್ವಸ್ಟೋರ್ ತುಳು ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಇವರು ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ ಗಂಟೆ 11-45ಕ್ಕೆ ‘ನಿರಂಜನ ಇವರ ಬದುಕು ಬರಹ’ದ ಕುರಿತು ವಿಚಾರಗೋಷ್ಠಿ, ಮಧ್ಯಾಹ್ನ 12-30 ಗಂಟೆಗೆ ರಂಗ ಅಧ್ಯಯನ ಕೇಂದ್ರ ಸಂತ ಅಲೋಶಿಯಸ್ ಪರಿಗಣಿತ ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿಗಳಿಂದ ‘ಪದರಂಗಿತ’, 2-00 ಗಂಟೆಗೆ ವಿದ್ಯಾರ್ಥಿ ಗೋಷ್ಠಿಯಲ್ಲಿ ನಿರಂಜನ ಇವರ ಸಾಹಿತ್ಯ ಹೊಸ ತಲೆಮಾರಿನ ದೃಷ್ಠಿಯಿಂದ ಎಂಬ ವಿಷಯದ ಬಗ್ಗೆ ಸಂವಾದ, 3-30 ಗಂಟೆಗೆ ವಿಚಾರಗೋಷ್ಠಿ, 4-30 ಗಂಟೆಗೆ ಮಂಗಳೂರಿನ ಜರ್ನಿ ಥೇಟರ್ ಗ್ರೂಪ್ (ರಿ.) ಇವರಿಂದ ‘ಪದರಂಗಿತ’, ಸಂಜೆ 5-30 ಗಂಟೆಗೆ ಚಿರಸ್ಮರಣೆ…

Read More

ತುಮಕೂರು : ಪ್ರೊ. ಎಚ್.ಜಿ. ಸಣ್ಣಗುಡ್ಡಯ್ಯ ಪ್ರತಿಷ್ಠಾನ (ರಿ.) ತುಮಕೂರು ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜು, ತುಮಕೂರು ವಿಶ್ವವಿದ್ಯಾನಿಲಯ ಮತ್ತು ತುಮಕೂರು ವಿಶ್ವವಿದ್ಯಾನಿಲಯ ಕನ್ನಡ ಅಧ್ಯಾಪಕರ ಒಕ್ಕೂಟ ಇದರ ವತಿಯಿಂದ ‘ಪ್ರಶಸ್ತಿ ಪ್ರದಾನ ಸಮಾರಂಭ’ವನ್ನು ದಿನಾಂಕ 21 ಫೆಬ್ರವರಿ 2025ರಂದು ಮಧ್ಯಾಹ್ನ 12-00 ಗಂಟೆಗೆ ತುಮಕೂರು ವಿಶ್ವವಿದ್ಯಾನಿಲಯದ ಸರ್.ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಎಂ. ವೆಂಕಟೇಶ್ವರಲು ಇವರು ವಹಿಸಲಿದ್ದು, ಬಹುಮುಖಿ ಸಂಸ್ಕೃತಿ ಚಿಂತಕರಾದ ಪ್ರೊ. ಬರಗೂರು ರಾಮ ಚಂದ್ರಪ್ಪ ಇವರು ಆಶಯ ನುಡಿಗಳನ್ನಾಡಲಿದ್ದಾರೆ. ಶ್ರೀ ರಘುನಾಥ ಚ. ಹ. ಮತ್ತು ಶ್ರೀಮತಿ ರೂಪ ಹಾಸನ ಇವರುಗಳಿಗೆ ಬೆಂಗಳೂರಿನ ಪ್ರಸಿದ್ಧ ವಿಮರ್ಶಕರಾದ ಡಾ. ಎಚ್.ಎಸ್. ರಾಘವೇಂದ್ರ ರಾವ್ ಇವರು ಪ್ರಶಸ್ತಿ ಪ್ರದಾನ ಮಾಡಲಿರುವರು.

Read More

ಕೊಡಗು : ರಂಗಮಂಡಲ ಬೆಂಗಳೂರು ಮತ್ತು ಕೊಡಗು ಕವಿ ಬಳಗ ಆಯೋಜಿಸಿರುವ ‘ಕಾವ್ಯ ಸಂಸ್ಕೃತಿ ಯಾನ’ ಮನುಕುಲದ ನೋವಿಗೆ ಮದ್ದಾಗಲಿ ಕವಿತೆಗಳು ಜನಸಾಮಾನ್ಯರ ದನಿಯಾಗಲಿ ಕಾವ್ಯ ಈ ಕಾರ್ಯಕ್ರಮದ ಎಂಟನೇ ಕವಿಗೋಷ್ಠಿಯನ್ನು ದಿನಾಂಕ 23 ಫೆಬ್ರವರಿ 2025ರಂದು ಬೆಳಿಗ್ಗೆ 10-30 ಗಂಟೆಗೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು, ಕೂಡ್ಲೂರು ಗ್ರಾಮದ ಪೂರ್ಣಚಂದ್ರ ಕುಟೀರದಲ್ಲಿ ಹಮ್ಮಿಕೊಳ್ಳಲಾಗಿದೆ. ಹಿರಿಯ ಕವಯತ್ರಿ ಹಾಗೂ ಬರಹಗಾರರಾದ ಸ್ಮಿತಾ ಅಮೃತರಾಜ್ ಇವರು ಕೊಡಗು ಜಿಲ್ಲೆಯ ಕಾವ್ಯ ಸಂಸ್ಕೃತಿ ಯಾನದ ಸರ್ವಾಧ್ಯಕ್ಷರಾಗಿದ್ದು, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಎಲ್.ಎನ್. ಮುಕುಂದರಾಜ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಬೆಳಿಗ್ಗೆ 12-00 ಗಂಟೆಗೆ ಕವಿಗೋಷ್ಠಿ ಭಾಗ 01 ಸುನೀತಾ ಕುಶಾಲನಗರ ಹಾಗೂ ಮಧ್ಯಾಹ್ನ ಗಂಟೆ 2-45ಕ್ಕೆ ಕವಿಗೋಷ್ಠಿ ಭಾಗ 2 ಮೇಜರ್ ಕುಶ್ವಂತ್ ಕೋಳಿಬೈಲು ಇವರುಗಳ ಅಧ್ಯಕ್ಷತೆಯಲ್ಲಿ ಪ್ರಸ್ತುತಗೊಳ್ಳಲಿದೆ. ಮಧ್ಯಾಹ್ನ ಗಂಟೆ 1-45ಕ್ಕೆ ಸರ್ವಾಧ್ಯಕ್ಷರೊಂದಿಗೆ ಸಂವಾದ ನಡೆಯಲಿದ್ದು, ಮಾಲಾ ಮೂರ್ತಿ ಕುಶಾಲನಗರ, ಶರ್ಮಿಳಾ ರಮೇಶ್, ಆಶಾ ಎಸ್.ಎಂ. ಸೋಮವಾರಪೇಟೆ, ಕೂಡು ಮಂಗಳೂರು ಸರ್ಕಾರಿ…

Read More

ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಘಟಕ ಮತ್ತು ಮಿತ್ರ ಮಂಡಳಿ ಕೋಟ ಇದರ ಆಶ್ರಯದಲ್ಲಿ ಏಳು ಕೃತಿಗಳ ಬಿಡುಗಡೆ ಸಮಾರಂಭವನ್ನು ದಿನಾಂಕ 23 ಫೆಬ್ರವರಿ 2025ರಂದು ಸಂಜೆ 3-30 ಗಂಟೆಗೆ ಕೋಟ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಡಾ. ಕಾರಂತ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಮಣೂರು ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಶ್ರೀ ಆನಂದ ಸಿ. ಕುಂದರ್ ಇವರ ಘನ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಕ.ಸಾ.ಪ.ದ ಮಾಜಿ ರಾಜ್ಯಾಧ್ಯಕ್ಷರಾದ ಹರಿಕೃಷ್ಣ ಪುನರೂರು ಮತ್ತು ಹಿರಿಯ ವಕೀಲರಾದ ಎ.ಎಸ್.ಎನ್. ಹೆಬ್ಬಾರ್ ಇವರು ಪುಸ್ತಕ ಲೋಕಾರ್ಪಣೆಗೊಳಿಸಲಿದ್ದು, ಶಿಕ್ಷಕರಾದ ಕೊಂಡಳ್ಳಿ ಪ್ರಭಾಕರ ಶೆಟ್ಟಿ, ಮಂಜುನಾಥ ಉಪಾಧ್ಯ, ಸಾಂಸ್ಕೃತಿಕ ಸಂಪನ್ಮೂಲರು ಸುಬ್ರಹ್ಮಣ್ಯ ಶೆಟ್ಟಿ, ಉಪನ್ಯಾಸಕರಾದ ಜಿ. ಸಂಜೀವ, ಸಾಹಿತಿ ಶ್ರೀಮತಿ ಪೂರ್ಣಿಮಾ ಕಮಲಶಿಲೆ ಇವರುಗಳು ಪುಸ್ತಕದ ಕುರಿತು ಮಾತನಾಡಲಿದ್ದಾರೆ. ನೀಲಾವರ ಸುರೇಂದ್ರ ಅಡಿಗ ಇವರ ‘ನೀಲೇಂದ್ರ ವಾಣಿ’ ಮತ್ತು ‘ಕೋಟ ಹದಿನಾಲ್ಕು ಗ್ರಾಮಗಳು’, ನರೇಂದ್ರ ಕುಮಾರ್ ಕೋಟ ಇವರ ‘ಸಮಗ್ರ ಗದ್ಯ ಬರೆಹ…

Read More

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಏರ್ಪಾಟಾಗಿದ್ದ ಎಂ. ಗೋಪಾಲಕೃಷ್ಣ ಅಡಿಗರ 107ನೆಯ ಜನ್ಮದಿನೋತ್ಸವ ಕಾರ್ಯಕ್ರಮವು ದಿನಾಂಕ 18 ಫೆಬ್ರವರಿ 2025ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ಮಾತನಾಡಿ “ಎಂ. ಗೋಪಾಲಕೃಷ್ಣ ಅಡಿಗರು ಯಾವುದೇ ನಾಡು ಹೆಮ್ಮೆ ಪಡುವಂತಹ ಅಸಾಮಾನ್ಯ ಕವಿ. ಅಡಿಗರ ಸಮಗ್ರ ಕಾವ್ಯವನ್ನು ಓದಿದಾಗ ‘ಆಧುನಿಕ ಮಹಾಕಾವ್ಯ’ವೊಂದನ್ನು ಓದಿದ ಅನುಭವವಾಗುತ್ತದೆ. ಇವರ ಕಾವ್ಯದ ನಾಯಕ ಇಪ್ಪತ್ತನೇ ಶತಮಾನದ ಸ್ವಾತಂತ್ರ್ಯೋತ್ತರ ಭಾರತದ ಆಧುನಿಕ ಸಂವೇದನೆಯ ವ್ಯಕ್ತಿ. ಸ್ವತಂತ್ರ ಭಾರತದ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ವಾಸ್ತವ ಅಡಿಗರ ಕಾವ್ಯದಲ್ಲಿ ಆಕಾರ ಪಡೆದಂತೆ ಬಹುಶಃ ಕನ್ನಡದಲ್ಲಿ ಮತ್ತೆ ಯಾರ ಕಾವ್ಯದಲ್ಲೂ ಕಾಣಿಸಿಕೊಂಡಿಲ್ಲವೆನ್ನಬಹುದು. ಅವರು ಬರದಂತೆ ಬದುಕಿದರು, ಬದುಕಿದಂತೆ ಬರೆದರು. ಅವರ ಹೋರಾಟದ ಹಾದಿ ನಮಗೆಲ್ಲರಿಗೂ ಮಾರ್ಗದರ್ಶಿ. ಡಾ. ಎಂ. ಗೋಪಾಲಕೃಷ್ಣ ಅಡಿಗರು ಕುಂದಾಪುರ ತಾಲೂಕಿನ ಮೊಗೇರಿ ಎಂಬ ಹಳ್ಳಿಯಲ್ಲಿ 1918ರ ಫೆಬ್ರವರಿ 18ರಂದು ಜನಿಸಿದರು. ಅಡಿಗರು ತಮ್ಮ ಪ್ರಾರಂಭದ ವಿದ್ಯಾಭ್ಯಾಸವನ್ನು ದಕ್ಷಿಣ…

Read More