Subscribe to Updates
Get the latest creative news from FooBar about art, design and business.
Author: roovari
ಬೆಂಗಳೂರು : ಕಪ್ಪಣ್ಣ ಅಂಗಳ ಹಾಗೂ ಸಮಂಜಸ ಇದರ ವತಿಯಿಂದ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ ಗೌರವಾರ್ಪಣೆ ಕಾರ್ಯಕ್ರಮವನ್ನು ದಿನಾಂಕ 08 ಜೂನ್ 2025ರಂದು ಬೆಳಿಗ್ಗೆ 10-00 ಗಂಟೆಗೆ ಬೆಂಗಳೂರಿನ ಎನ್.ಆರ್. ಕಾಲೋನಿಯಲ್ಲಿರುವ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪ್ರೊ. ಕೆ.ಈ. ರಾಧಾಕೃಷ್ಣ, ಮಲ್ಲೇಪುರಂ ಜಿ. ವೆಂಕಟೇಶ್, ಬಿ.ಆರ್. ಲಕ್ಷ್ಮಣ ರಾವ್, ರೆವರೆಂಡ್ ಫಾದರ್ ಚಾರ್ಲ್ಸ್ ಲಸ್ರಾಡೋ, ಸುಂದರ್ ವೀಣಾ ಮತ್ತು ಟಿ.ಎನ್. ಸೀತಾರಾಮ್ ಇವರಿಂದ ಸಾಹಿತ್ಯ ಗೌರವ, ಬಿ. ಜಯಶ್ರೀ ಇವರಿಂದ ರಂಗ ಗೌರವ, ಎಂ.ಡಿ. ಪಲ್ಲವಿ ಇವರಿಂದ ಗೀತ ಗೌರವ ಪ್ರಸ್ತುತಗೊಳ್ಳಲಿದೆ. ಪ್ರೊ. ಹಂ.ಪ.ನಾ. ಮತ್ತು ಬಿ.ಎಂ. ವಿಠ್ಠಲ ಮೂರ್ತಿ ಇವರುಗಳು ವಿಶೇಷ ಉಪಸ್ಥಿತಿ ಇರಲಿದೆ.
ಮಂಗಳೂರು : ಸರಯೂ ಬಾಲ ಯಕ್ಷವೃಂದ ಕೋಡಿಕಲ್ ಇದರ ರಜತ ಮಹೋತ್ಸವ ಸಂಭ್ರಮ ಸಮಾರಂಭದ ಅಂಗವಾಗಿ ಆಯೋಜಿಸಿದ 15 ದಿನಗಳ ಯಕ್ಷಪಕ್ಷ – ರಜತ ಸರಯೂ ಕಾರ್ಯಕ್ರಮದ ಸಮಾರೂಪ ಸಮಾರಂಭ ದಿನಾಂಕ 01 ಜೂನ್ 2025ರ ಬುಧವಾರದಂದು ಕದ್ರಿ ದೇವಳದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾರದಾ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಹಾಗೂ ಶಿಕ್ಷಣ ತಜ್ಞ ಪ್ರೊ ಎಂ. ಬಿ ಪುರಾಣಿಕ್ ಮಾತನಾಡಿ “ಯಾವುದೇ ಸಂಸ್ಥೆಯ ಸಾಧನೆಯನ್ನ ಗುರುತಿಸಲು ಅದು ಗೈದ ಸಾಹಸಕಾರ್ಯಗಳೇ ರಹದಾರಿಯಾಗುತ್ತದೆ. ಸಾಧನಾಪಥದಲ್ಲಿ ಸಾಗುವಾಗ ಕಂಟಕ ಮಾರ್ಗವಿರುತ್ತದೆ. ಅದನ್ನು ಸಾಗುವಾಗ ಕಷ್ಟ ಎದುರಾಗುವುದು ಸಹಜ. ತೆಂಕುತಿಟ್ಟಿನಲ್ಲಿ ಮಕ್ಕಳ ಮೇಳ ಎಂಬ ಕಲ್ಪನೆಯನ್ನು ಹುಟ್ಟುಹಾಕಿ, ದೇಶಾದ್ಯಂತ ಸಂಚರಿಸಿ, ಯಕ್ಷಗಾನದ ಕಂಪನ್ನು ಪಸರಿಸಿದ ಕೀರ್ತಿ ಸರಯೂ ಸಂಸ್ಥೆಯದ್ದು. 25 ವರ್ಷಗಳಿಂದ ಅದು ಬೆಳೆದದ್ದನ್ನು ನಾವು ಹತ್ತಿರದಿಂದ ಕಂಡಿದ್ದೇವೆ. ಇನ್ನು ಇನ್ನು ಹೆಚ್ಚಿನ ಗಣನೀಯ ಸಾಧನೆಯನ್ನು ಈ ಮಕ್ಕಳ ಮೇಳದ ಚಿಣ್ಣರು ನಡೆಸಲಿ” ಎಂದು ಹಾರೈಸಿದರು. ವಾರ್ಡ್ 17ರ ಮನಪಾ ಮಾಜಿ…
ಪುತ್ತೂರು : ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಇವರ ಸಹಯೋಗದೊಂದಿಗೆ ಡಾ. ವಾಣಿಶ್ರೀ ಕಾಸರಗೋಡು ಗಡಿನಾಡ ಕನ್ನಡತಿ ಇವರ ಸಾರಥ್ಯದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ ಕಾಸರಗೋಡು ಇದರ ವತಿಯಿಂದ ಯಶಸ್ವಿ 113ನೇ ಕಾರ್ಯಕ್ರಮ ‘ಶತ ಸಂಭ್ರಮ’ ಮತ್ತು ಪೊಟ್ಟಿಪ್ಪಲ ಆಶುಕವಿ ಶ್ರೀ ಕೀರ್ತಿಶೇಷ ನಾರಾಯಣ ಭಟ್ ರವರಿಗೆ ‘ನುಡಿ ನಮನ’ ಕಾರ್ಯಕ್ರಮವನ್ನು ದಿನಾಂಕ 08 ಜೂನ್ 2025ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ, ಕವಿಗೋಷ್ಠಿ, ಗೀತಗಾಯನ, ಸಾಧಕರಿಗೆ ಸನ್ಮಾನ, ಕುಣಿತ ಭಜನೆ ಮತ್ತು ಭಜನೆ ಹಾಗೂ ಸಾಹಿತ್ಯ ಗಾನ ನೃತ್ಯ ವೈಭವ ನಡೆಯಲಿದೆ. ಪುತ್ತೂರು ತಾಲೂಕು ಕ.ಸಾ.ಪ.ದ ಅಧ್ಯಕ್ಷರಾದ ಉಮೇಶ್ ನಾಯಕ್ ಇವರು ‘ಶತ ಸಂಭ್ರಮ’ದ ಉದ್ಘಾಟನೆ ಮಾಡಲಿದ್ದು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಈಶ್ವರ ಭಟ್ ಪಂಜಿಗುಡ್ಡೆ ಇವರು ದೀಪ ಪ್ರಜ್ವಲನೆ ಮಾಡಲಿರುವರು. ಉದ್ಯಮಿ ಪ್ರಸಾದ್ ಪೆರ್ಲ ಇವರು ನುಡಿ ನಮನ…
ಸಾಣೇಹಳ್ಳಿ : ಕರ್ನಾಟಕ ರಾಜ್ಯ ಸರಕಾರದಿಂದ ಮಾನ್ಯತೆ ಪಡೆದಿರುವ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯ 2025-26ನೆಯ ಸಾಲಿನ ರಂಗಶಿಕ್ಷಣಕ್ಕೆ (ಡಿಪ್ಲೋಮಾ ಇನ್ ಡ್ರಾಮಾ ಆರ್ಟ್ಸ್)ಗೆ ಆಸಕ್ತಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಕ್ಕೆ ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರಬೇಕು. ಪದವೀಧರರಿಗೆ ಆದ್ಯತೆ ಕೊಡಲಾಗಿದೆ. ರಂಗಭೂಮಿಯಲ್ಲಿ ಆಸಕ್ತಿಯಿದ್ದು, ಸ್ವಲ್ಪಮಟ್ಟಿನ ಅನುಭವ ಇರಬೇಕಾದದ್ದು ಅಗತ್ಯ. ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಉಚಿತ ಊಟ, ವಸತಿ ಸೌಲಭ್ಯವಿದೆ. ಕರ್ನಾಟಕ ಹಾಗೂ ಭಾರತದ ರಂಗತಜ್ಞರಿಂದ ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ. ಗ್ರಂಥ ಭಂಡಾರ ಹಾಗೂ ದೃಶ್ಯ, ಶ್ರವ್ಯ ಪರಿಕರಗಳ ಅನುಕೂಲತೆ ಇದೆ. ರಂಗಶಾಲೆಯ ವಿದ್ಯಾರ್ಥಿಗಳಿಗೆ ಭಾರತೀಯ ರಂಗಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಆಹಾರ್ಯ, ಶಿಕ್ಷಣದಲ್ಲಿ ರಂಗಭೂಮಿ ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯುತ್ತವೆ. ಅರ್ಜಿಗಾಗಿ ರಂಗಶಾಲೆಯ ವೆಬ್ ಸೈಟ್ www.theatreschoolsanehalli.org ನಲ್ಲಿ ಪ್ರವೇಶ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ದಿನಾಂಕ 25 ಜೂನ್ 2025ರೊಳಗಾಗಿ ಅರ್ಜಿಯನ್ನು ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಕಳಿಸುವುದು. ಸಂದರ್ಶನದ…
ಬೆಂಗಳೂರು : ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕನ್ನಡ ಪುಸ್ತಕ ಪ್ರಾಧಿಕಾರ ಇದರ ವತಿಯಿಂದ ‘ಬೂಕರ್ ಪ್ರಶಸ್ತಿ’ ಪುರಸ್ಕೃತರಾದ ಶ್ರೀಮತಿ ಬಾನು ಮುಷ್ತಾಕ್ ಹಾಗೂ ಶ್ರೀಮತಿ ದೀಪಾ ಭಾಸ್ತಿ ಇವರುಗಳಿಗೆ ಗೌರವ ಸನ್ಮಾನವನ್ನು ದಿನಾಂಕ 04 ಜೂನ್ 2025ರಂದು ಸಂಜೆ 5-00 ಗಂಟೆಗೆ ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ.
ಮೂಡುಬಿದಿರೆ: ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ.) ಇದರ ದಶಮ ಸಂಭ್ರಮದ ಪ್ರಯುಕ್ತ ಮಂಗಳೂರಿನ ಅಡ್ಯಾರ್ ಗಾರ್ಡ್ ನ್ ನಲ್ಲಿ ದಿನಾಂಕ 01 ಜೂನ್ 2025 ರಂದು 15 ವರ್ಷದಿಂದ 25 ವರ್ಷದೊಳಗಿನ ಯುವ ಪ್ರತಿಭೆಗಳಿಗಾಗಿ ಏರ್ಪಡಿಸಿದ ಯಕ್ಷಗಾನ ಸ್ಪರ್ಧೆಯಲ್ಲಿ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದ ತಂಡವು ಪ್ರಥಮ ಬಹುಮಾನವನ್ನು ಪಡೆಯಿತು. ಬೊಟ್ಟಿಕೆರೆ ಪುರುಷೋತ್ತಮ ಪೂಂಜರು ವಿರಚಿಸಿದ, ಶೇಖರ ಶೆಟ್ಟಿಗಾರ್ ಮತ್ತು ಆದಿತ್ಯ ಅಂಬಲಪಾಡಿ ನಿರ್ದೇಶನದಲ್ಲಿ ‘ಸತಿ ಉಲೂಪಿ’ ಪ್ರಸಂಗ ಪ್ರದರ್ಶನವನ್ನು ನೀಡಿ, ಒಂದು ಲಕ್ಷ ರೂಪಾಯಿ ಹಾಗೂ ಸ್ಮರಣಿಕೆಯನ್ನು ಒಳಗೊಂಡ ಪ್ರಥಮ ಬಹುಮಾನವನ್ನು ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರವು ಪಡೆಯಿತು. ಸಮಗ್ರ ವೈಯಕ್ತಿಕ ವಿಭಾಗದಲ್ಲಿ ಶಬರೀಶ್ ಆಚಾರ್ಯ, ಆಹಾರ್ಯ ವಿಭಾಗದಲ್ಲಿ ಮುಖೇಶ್ ದೇವಧರ್, ಲಿಖಿತ ವಿಭಾಗಲ್ಲಿ ಪ್ರಜ್ವಲ್ ಬಿ. ಶೆಟ್ಟಿ ಬಹುಮಾನಗಳನ್ನು ಪಡೆದರು. ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರವು ಕಳೆದ ಎರಡು ದಶಕಗಳಿಂದ ಯಕ್ಷಗಾನದ ವಿವಿಧ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದಲ್ಲಿ ತರಬೇತಿ ಪಡೆದ…
ತುಮಕೂರು : ಸಾಲಿಗ್ರಾಮ ಮಕ್ಕಳ ಮೇಳ (ರಿ.) ಕೋಟ ಇದರ ವತಿಯಿಂದ ನಡೆಯುವ ಸುವರ್ಣ ಪರ್ವ -10ರ ಸರಣಿಯಲ್ಲಿ ಯಕ್ಷಗಾನ ಸಾಂಸ್ಕೃತಿಕ ವೇದಿಕೆ ಮತ್ತು ಶ್ರೀ ಕೃಷ್ಣ ಮಂದಿರ ತುಮಕೂರು ಇವರ ಸಹಯೋಗದೊಂದಿಗೆ ಸುವರ್ಣ ಸಮ್ಮಾನ – ಯಕ್ಷಗಾನ ಪ್ರದರ್ಶನವನ್ನು ದಿನಾಂಕ 07 ಜೂನ್ 2025ರಂದು ಸಂಜೆ 04-00 ಗಂಟೆಗೆ ತುಮಕೂರಿನ ಕೆ.ಆರ್. ಬಡಾವಣೆಯಲ್ಲಿರುವ ಶ್ರೀ ಕೃಷ್ಣ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಮಕ್ಕಳ ಕ್ಷೇತ್ರದ ಅನನ್ಯ ಸಾಧಕ ದಂಪತಿಗಳಾದ ಆರತಿ ಪಟ್ರಮೆ ಹಾಗೂ ಸಿಬಂತಿ ಪದ್ಮನಾಭ ಇವರಿಗೆ ಸುವರ್ಣಪರ್ವ ಗೌರವ ಪುರಸ್ಕಾರ ನೀಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಕಾರ್ಕಳದ ಶ್ರೀದೇವಿ ಲಲಿತ ಕಲಾವೃಂದದವರಿಂದ ‘ಶಾಂಭವಿ ವಿಜಯ’ ಎಂಬ ಪ್ರಸಂಗದ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಮಂಗಳೂರು : ಹೋಟೆಲ್ ಮಾಯಾ ಇಂಟರ್ನ್ಯಾಷನಲ್ನಲ್ಲಿ ದಿನಾಂಕ 31 ಮೇ 2025ರ ಶನಿವಾರದಂದು ನಡೆದ ಮಂಗಳೂರು ಮೆಟ್ರೋ ರೋಟರಿ ಕ್ಲಬ್ನ ವಾರದ ಕುಟುಂಬ ಸಭೆ ಹಾಸ್ಯ, ನೆನಪು ಮತ್ತು ಪ್ರೇರಣೆಯ ಸಂಜೆಯಾಗಿ ಪರಿವರ್ತಿತವಾಯಿತು. ನಾಡಿನ ಖ್ಯಾತ ನಾಟಕಕಾರರೂ ಹಾಗೂ ಚಿತ್ರರಂಗದ ಅಭಿಜಾತ ಕಲಾವಿದರೂ ಆದ ಕಾಸರಗೋಡು ಚಿನ್ನಾ (ಸುಜೀರ್ ಶ್ರೀನಿವಾಸ್ ರಾವ್) ಇವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕನ್ನಡ, ತುಳು, ಕೊಂಕಣಿ, ಮಲಯಾಳಂ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿನ 400ಕ್ಕೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿರುವ ಚಿನ್ನಾರವರು, ಕಾಸರಗೋಡಿನ ಸಣ್ಣ ವೇದಿಕೆಯಿಂದ ಬೆಳ್ಳಿತೆರೆಗೆ ಸಾಗಿದ ತಮ್ಮ ಕಲಾಜೀವನದ ಪಯಣವನ್ನು ಮನಮೋಹಕವಾಗಿ ಹಂಚಿಕೊಂಡರು. ಅವರ ಚುಟುಕು ಮಾತುಗಳು, ಹೃದಯಸ್ಪರ್ಶಿ ಕಥೆಗಳು ಹಾಗೂ ಹಾಸ್ಯಭರಿತ ನೆನೆಪುಗಳು ಸಭಿಕರ ಮುಖದಲ್ಲಿ ಮಂದಹಾಸ ಮೂಡಿಸಿತು. “ಬದುಕು ಕ್ಷಣಿಕ ಆದರೆ ಸುಂದರ. ಕೆಟ್ಟದನ್ನು ಬಿಟ್ಟು ಧನಾತ್ಮಕವಾಗಿ ಚಿಂತಿಸಿ, ಇಡಿಯಾಗಿ ಬದುಕಿ” ಎಂಬ ಅವರ ಮಾತುಗಳು ಸಭಿಕರ ಮನದಲ್ಲಿ ಚಿರಸ್ಥಾಯಿಯಾಗಿ ಉಳಿದವು. ಸಭೆಯ ಅಧ್ಯಕ್ಷತೆಯನ್ನು ಕ್ಲಬ್ ಅಧ್ಯಕ್ಷರಾದ ಶ್ರೀಮತಿ ಛಾಯಾ ಕಾಮತ್ ಹಾಗೂ…
ಶಿವಮೊಗ್ಗ : ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಮಿತಿ ಶಿವಮೊಗ್ಗ ಇದರ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪಕರು ನಾಡಿನ ಅಭಿವೃದ್ಧಿಯ ಕಳಶಪ್ರಾಯರಾದ ರಾಜರ್ಷಿ ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ ಇವರ 141 ನೆಯ ಜನ್ಮದಿನಾಚರಣೆಯನ್ನು ದಿನಾಂಕ 04 ಜೂನ್ 2025ರಂದು ಬೆಳಿಗ್ಗೆ 11-00 ಗಂಟೆಗೆ ಶಿವಮೊಗ್ಗದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತು ಶಿವಮೊಗ್ಗ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಡಿ. ಮಂಜುನಾಥ ಇವರು ಉದ್ಘಾಟನೆ ಮಾಡಲಿದ್ದು, ಶಿವಮೊಗ್ಗದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಈಶ್ವರಪ್ಪ ಎಚ್. ಇವರು ಅಧ್ಯಕ್ಷತೆ ವಹಿಸಲಿರುವರು. ಹಿರಿಯ ಸಾಹಿತಿ ಜಿ.ವಿ. ಸಂಗಮೇಶ್ವರ ಇವರು ಉಪನ್ಯಾಸ ನೀಡಲಿದ್ದು, ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಯೋಗೀಶ್ ಎಸ್. ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಮಂಗಳೂರು : “ಪ್ರತಿಯೊಬ್ಬ ವ್ಯಕ್ತಿಯ ಒಳಗೊಬ್ಬ ಕಲಾವಿದ ಇರುತ್ತಾನೆ. ಅವನನ್ನು ಜಾಗ್ರತಗೊಳಿಸುವುದಷ್ಟೇ ನನ್ನ ಕೆಲಸ. ನಿಮ್ಮೊಳಗಿನ ಪ್ರತಿಭೆ ನಿಮಗೆ ತಿಳಿಯುವುದಿಲ್ಲ. ಆಸಕ್ತಿ, ಶ್ರದ್ದೆ, ಮತ್ತು ತಾಳ್ಮೆಯು ಕಲಾವಿದನಿಗೆ ಇರಬೇಕಾದ ಮುಖ್ಯ ಲಕ್ಷಣಗಳು”. ಎಂದು ಖ್ಯಾತ ರಂಗ ನಿರ್ದೇಶಕ, ನಟ ಕಾಸರಗೋಡು ಚಿನ್ನಾ ಅವರು ತಿಳಿಸಿದರು. ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರದ ನೇತೃತ್ವದಲ್ಲಿ ವರ್ಷಂಪ್ರತಿ ಜರಗುವ “ಕ್ಷಿತಿಜ್ ” ಕಾರ್ಯಕ್ರಮದ ಅಂಗವಾಗಿ ಕೇಂದ್ರದಲ್ಲಿ ಜರಗಿದ ರಂಗ ತರಬೇತಿ ಶಿಬಿರದ ನಿರ್ದೇಶಕರಾಗಿ ಅವರು ಮಾತನಾಡುತ್ತಿದ್ದರು. ಮೇ ತಿಂಗಳ 25 ರಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಊರುಗಳಿಂದ ಭಾಗವಹಿಸಿದ ಸುಮಾರು 70 ಮಂದಿ ವಿದ್ಯಾರ್ಥಿಗಳಿಗೆ ಧ್ವನಿ ಏರಿಳಿತ, ಮೂಕಾಭಿನಯ, ನಟನೆ ಮತ್ತು ಅಂಗಿಕ ಅಭಿನಯ ಸೇರಿದಂತೆ ರಂಗಭೂಮಿಯ ವಿವಿಧ ಆಯಾಮಗಳ ಬಗ್ಗೆ ವಿವರಿಸಿ ಹೇಳಿದರು. ವಿಶ್ವ ಕೊಂಕಣಿ ಕೇಂದ್ರದ ಆಡಳಿತ ನಿರ್ದೇಶಕರಾದ ಸಿ.ಎ. ನಂದಗೋಪಾಲ ಶೆಣೈ ಅವರು “ಕ್ಷಿತಿಜ್ ” ಕಾರ್ಯಾಗಾರದ ಪರವಾಗಿ ಸ್ಮರಣಿಕೆ ನೀಡಿ ಗೌರವಿಸಿದರು. ಕೇಂದ್ರದ ಶ್ರೀಮತಿ ಲಕ್ಷ್ಮಿ ಅವರು ಸ್ವಾಗತಿಸಿ,…