Author: roovari

ಬೆಂಗಳೂರು : ಕನ್ನಡ ಸಂಶೋಧನ ಅಕಾಡೆಮಿ (ನೋಂ.) ಇದರ ವತಿಯಿಂದ ‘ಆವಿಷ್ಕಾರ’ ಕನ್ನಡ ಸಂಶೋಧನೆಯ ವಿಧಿ-ವಿಧಾನಗಳು ಮತ್ತು ಹೊಸ ಸಾಧ್ಯತೆಗಳು ಬೃಹತ್ ಮುಕ್ತ ಆನ್ ಲೈನ್ ಕೋರ್ಸ್ ಪ್ರಯುಕ್ತ ವಿಶೇಷ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮವನ್ನು ದಿನಾಂಕ 26 ಜನವರಿ 2025ರಂದು ಸಂಜೆ ಗಂಟೆ 5-45ಕ್ಕೆ ಆನ್ ಲೈನ್ ವೇದಿಕೆಯಲ್ಲಿ ಆಯೋಜಿಸಲಾಗಿದೆ. ‘ನಾಟಕ ಸಾಹಿತ್ಯದ ಸವಾಲುಗಳು ಮತ್ತು ಸಾಧ್ಯತೆಗಳು’ ಎಂಬ ವಿಷಯದ ಬಗ್ಗೆ ನಾಟಕಕಾರರು ಮತ್ತು ಸಹ ಪ್ರಾಧ್ಯಾಪಕರಾದ ಡಾ. ನಟರಾಜ ತಲಘಟ್ಟಪುರ ಮತ್ತು ‘ರಂಗಭೂಮಿ ಕ್ಷೇತ್ರದ ಸವಾಲುಗಳು ಮತ್ತು ಸಾಧ್ಯತೆಗಳು’ ಎಂಬ ವಿಷಯದ ಬಗ್ಗೆ ನಾಟಕಕಾರರು ಮತ್ತು ನಿವೃತ್ತ ಪ್ರಾಧ್ಯಾಪಕರಾದ ಡಾ. ನಾ. ದಾಮೋದರ ಶೆಟ್ಟಿ ಇವರುಗಳು ಉಪನ್ಯಾಸ ನೀಡಲಿದ್ದಾರೆ.

Read More

ಮಡಿಕೇರಿ : ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತ ನಿರ್ದೇಶಕಿ, ನಿರ್ಮಾಪಕಿ, ಲೇಖಕಿ ಕೊಟ್ಟುಕತ್ತಿರ ಯಶೋಧ ಪ್ರಕಾಶ್ ಇವರು ಬರೆದಿರುವ ‘ಕೊಡವ ಮಕ್ಕಡ ಕೂಟ’ ಪ್ರಕಟಿಸಿರುವ ‘ಮುಖಾಮುಖಿ’ ಕನ್ನಡ ಪುಸ್ತಕವು ದಿನಾಂಕ 21 ಜನವರಿ 2025ರಂದು ಮಡಿಕೇರಿಯ ಪತ್ರಿಕಾ ಭವನದಲ್ಲಿ ಲೋಕಾರ್ಪಣೆಗೊಂಡಿತು. ಈ ಕಾರ್ಯಕ್ರಮದಲ್ಲಿ ಕೃತಿ ಬಿಡುಗಡೆಗೊಳಿಸಿದ ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ ಮಾತನಾಡಿ “ಪ್ರಸ್ತುತ ದಿನಗಳಲ್ಲಿ ಮಹಿಳಾ ಲೇಖಕಿಯರು ತಮ್ಮ ಬರಹದ ಮೂಲಕ ಸಮಾಜದ ಕಣ್ಣನ್ನು ತೆರೆಸುವ ಪ್ರಯತ್ನ ಮಾಡುತ್ತಿದ್ದು, ಇದಕ್ಕೆ ಎಲ್ಲರ ಸಹಕಾರ ಅಗತ್ಯ. ಪುಸ್ತಕಗಳನ್ನು ಓದಿ ಹೆಚ್ಚು ಜ್ಞಾನಾರ್ಜನೆಯನ್ನು ಪಡೆದುಕೊಂಡರೆ ಉನ್ನತ ಸ್ಥಾನಕ್ಕೇರಲು ಸಾಧ್ಯವಿದೆ. ಆದ್ದರಿಂದ ಪ್ರತಿಯೊಬ್ಬರೂ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಪುಸ್ತಕಗಳು ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುತ್ತವೆ. ಸಾಹಿತ್ಯದಲ್ಲಿ ಅಡಗಿರುವ ಸಾರಾಂಶ ಮತ್ತು ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮುಖಾಮುಖಿ ಪುಸ್ತಕವು ಉತ್ತಮ ಸಂದೇಶವನ್ನು ಹೊಂದಿದ್ದು, ಲೇಖಕಿ ಕೊಟ್ಟುಕತ್ತಿರ ಯಶೋಧ ಪ್ರಕಾಶ್ ಅವರು ಚಲನಚಿತ್ರಗಳ ಮೂಲಕ ರಾಷ್ಟ್ರಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದ್ದಾರೆ. ಇದೀಗ ಸಾಹಿತ್ಯ…

Read More

ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್, ಎಂ.ಜಿ.ಎಂ. ಕಾಲೇಜು ಹಾಗೂ ನಂದಳಿಕೆಯ ಮುದ್ದಣ ಪ್ರಕಾಶನದ ಸಹಯೋಗದಲ್ಲಿ ಮುದ್ದಣ 155ನೆಯ ಜನ್ಮದಿನಾಚರಣೆಯ ಪ್ರಯುಕ್ತ ತೆಕ್ಕುಂಜ ಗೋಪಾಲಕೃಷ್ಣ ಭಟ್ಟರ ಮುದ್ದಣ ಕವಿ ರಚಿತಂ ‘ಶ್ರೀರಾಮಾಶ್ವಮೇಧಂ’ ಹಾಗೂ ‘ನಂದಳಿಕೆ ಐಸಿರಿ ದರ್ಶನ’ ಕೃತಿಗಳ ಅನಾವರಣ ಕಾರ್ಯಕ್ರಮವು ದಿನಾಂಕ 24 ಜನವರಿ 2025ರಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನ ಆವರಣದಲ್ಲಿರುವ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಕೃತಿಗಳನ್ನು ಅನಾವರಣಗೊಳಿಸಿ ಮಾತನಾಡಿದ ಡಾ. ಬಿ.ಎ. ವಿವೇಕ ರೈ “ನಂದಳಿಕೆಯ ಕವಿ ಮುದ್ದಣ ಕನ್ನಡ ಸಾಹಿತ್ಯ ಸಂದರ್ಭದಲ್ಲಿ ಎಂದೂ ಮರೆಯಲಾಗದ ಕವಿ. ಬದುಕಿದ ಕಾಲ ಕಡಿಮೆಯಾದರೂ ಕನ್ನಡ ಸಾರಸ್ವತ ಲೋಕಕ್ಕೆ ಅವರ ಕೊಡುಗೆ ಅಪಾರ. ಕನ್ನಡ ಸಾಹಿತ್ಯಕ್ಕೆ ಹೊಸ ಮನ್ವಂತರವನ್ನೇ ಸೃಷ್ಟಿಸಿದ ಕವಿ ಮುದ್ದಣ. ಭಾಷೆ, ಸಾಹಿತ್ಯ ರಚನೆ, ಹೊಸ ಶೈಲಿ ಮುಂತಾದವುಗಳಲ್ಲಿ ಅವರ ಕೊಡುಗೆ ಅಪಾರ. ಭಾಷೆಯ ಸಂವಹನ ಶಕ್ತಿಗೆ, ಸಾಹಿತ್ಯದ ಹೊಸರೂಪಕ್ಕೆ ನಾಂದಿ ಹಾಡಿದವರಾಗಿರುವುದರಿಂದ ಅವರ…

Read More

ಬೆಂಗಳೂರು : ನಾಟಕ ಬೆಂಗಳೂರು 25 ರಂಗಭೂಮಿ ಸಂಭ್ರಮದ ಪ್ರಯುಕ್ತ ಕಾಜಾಣ ಅರ್ಪಿಸುವ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರ ಜೀವನಾಧಾರಿತ ಡಾ. ಬೇಲೂರು ರಘುನಂದನ್ ಇವರ ರಂಗಪಠ್ಯ, ವಿನ್ಯಾಸ, ಸಂಗೀತ ಮತ್ತು ನಿರ್ದೇಶನದಲ್ಲಿ ‘ಸಾಲುಮರಗಳ ತಾಯಿ ತಿಮ್ಮಕ್ಕ’ ನಾಟಕ ಪ್ರದರ್ಶನವನ್ನು ದಿನಾಂಕ 27 ಜನವರಿ 2025ರಂದು ಸಂಜೆ 7-00 ಗಂಟಗೆ ಬೆಂಗಳೂರಿನ ಮಲ್ಲತ್ತಹಳ್ಳಿ, ನಾಗರಭಾವಿ, 2ನೇ ಸ್ಟೇಜ್, ಎನ್.ಜಿ.ಇ.ಎಫ್. ಲೇಔಟ್ ಇಲ್ಲಿರುವ ಕಲಾಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ 8431803866, 9880339669 ಮತ್ತು 8660886439 ಸಂಪರ್ಕಿಸಿರಿ. ನಾಟಕದ ಬಗ್ಗೆ : ನಮ್ಮ ರಾಜ್ಯದ ಹೆಮ್ಮೆಯ ವೃಕ್ಷಮಾತೆಯಾದ ಸಾಲುಮರದ ತಿಮ್ಮಕ್ಕನವರು ಸುಮಾರು ೮೦ಕ್ಕೂ ಹೆಚ್ಚು ವರ್ಷಗಳಿಂದ ಪರಿಸರ ಸಂರಕ್ಷಣೆಯಲ್ಲಿ ತೊಡಗಿ ಇಡೀ ವಿಶ್ವಕ್ಕೆ ಮಾದರಿಯಾಗಿರುವಂತಹ ವ್ಯಕ್ತಿ. ಬಡತನದ ಬೇಗೆಯನ್ನು ಲೆಕ್ಕಿಸದೆ ಗಿಡಗಳ ಪಾಲನೆಯೇ ಜೀವನದ ಮಹಾಕಾಯಕವೆಂದು ಭಾವಿಸಿ ಇಳಿ ವಯಸ್ಸಿನಲ್ಲೂ ಪರಿಸರ ಸಂರಕ್ಷಣೆಗಾಗಿ ಅವಿರತವಾಗಿ ಶ್ರಮಿಸುತ್ತಿರುವ ಇವರ ಸೇವೆಯು ಅನನ್ಯ ಹಾಗೂ ಅವಿಸ್ಮರಣೀಯವಾದುದು. ನಮ್ಮ ನಾಡಿಗೆ, ನಮ್ಮ ಪರಿಸರಕ್ಕೆ ಅಪೂರ್ವ ಸೇವೆ ನೀಡಿದಂತಹ ತಿಮ್ಮಕ್ಕನವರ…

Read More

ಮಡಿಕೇರಿ : ಉಪನ್ಯಾಸಕಿ ಮತ್ತು ಲೇಖಕಿಯಾದ ಶ್ರೀಮತಿ ಜಯಲಕ್ಷ್ಮೀ ಇವರು ಬರೆದಿರುವ ‘ಮತ್ತೆ ವಸಂತ’ ಕಥಾ ಸಂಕಲನದ ಲೋಕರ್ಪಣಾ ಸಮಾರಂಭವು ದಿನಾಂಕ 26 ಜನವರಿ 2025ರಂದು ರಂದು ಮಡಿಕೇರಿಯ ರೆಡ್ ಬ್ರಿಕ್ಸ್ ಇನ್ (ಪಾಕಶಾಲಾ ಮೇಲ್ಭಾಗ )ಸಭಾಂಗಣದಲ್ಲಿ ಬೆಳಗ್ಗೆ ಘಂಟೆ 10.00ಕ್ಕೆ ನಡೆಯಲಿದೆ. ಕೊಡಗು ಜಿಲ್ಲಾ ಕ. ಸಾ. ಪ. ಇದರ ಮಾಜಿ ಅಧ್ಯಕ್ಷರಾದ ಟಿ. ಪಿ. ರಮೇಶ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮಡಿಕೇರಿ ಆಕಾಶವಾಣಿಯ ಉದ್ಘೋಷಕರಾದ ಸುಬ್ರಾಯ ಸಂಪಾಜೆ ಕಥಾ ಸಂಕಲನವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಮಡಿಕೇರಿ ತಾಲೂಕು ಜಾನಪದ ಪರಿಷತ್ ಇದರ ಅಧ್ಯಕ್ಷರಾದ ಅನಿಲ್ ಎಚ್. ಟಿ. ಕೃತಿ ಪರಿಚಯ ಮಾಡಲಿದ್ದು, ಶಕ್ತಿ ಪತ್ರಿಕೆಯ ಸಂಪಾದಕರಾದ ಜಿ. ಚಿದ್ವಿಲಾಸ್ ಹಾಗೂ ಬೆಳ್ತಂಗಡಿಯ ಎನ್. ಜಯಪ್ರಕಾಶ್ ಶರ್ಮಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Read More

‘ರಾತ್ರಿ ಪಾಳಿ ಮುಗಿಸಿದ ದಾದಿ ಬಸ್ ಸ್ಟಾಪಿನಲ್ಲಿದ್ದಾಳೆ ಆಗಷ್ಟೇ ಊದಿನಕಡ್ಡಿ ಹಚ್ಚಿಕೊಂಡ ರಿಕ್ಷಾ, ಹಾಲಿನ ವ್ಯಾನು ಹಾದಿವೆ…. ಕನಸಿನ ಸುರಂಗಗಳಲ್ಲೂ ಓಡಿ ಓಡಿ ದಣಿದವರು ರಸ್ತೆ ಬದಿಯಲ್ಲಿ ವಿಗ್ರಹಗಳಂತೆ ಏಳುತ್ತಿದ್ದಾರೆ..’ ಇವು ಜಯಂತ್ ಕಾಯ್ಕಿಣಿಯವರ ‘ಜಾಗರದ ಕೊನೆಗೆ’ ಕವನದ ಕೆಲವು ಸಾಲುಗಳು. ಬೆಳಗು ಅಂದಾಗ ನಿಸರ್ಗದ ಚೆಲುವನ್ನು ಮಾತ್ರ ಕಲ್ಪಿಸಿಕೊಳ್ಳುವ ನಮಗೆ, ಅದಕ್ಕೆ ವ್ಯತಿರಿಕ್ತವಾಗಿ ಈ ಕವನ, ‘ಬೆಳಗಿನ ಬದುಕನ್ನು’ ಅದರೆಲ್ಲಾ ಲಯದೊಂದಿಗೆ ಕಟ್ಟಿಕೊಡುತ್ತದೆ‌. ರಸ್ತೆ ಬದಿಯಲ್ಲೇ ಮಲಗುವ ಸೂರಿಲ್ಲದವರ ನಸುಕು, ರಾತ್ರಿ ಪಾಳಿ ಮುಗಿಸಿ ದಣಿದವರ ಮುಂಜಾವು, ಸೈಕಲ್ ನಲ್ಲಿ ಪೇಪರ್ ಹಂಚುವವರ ತರಾತುರಿ, ರೆಕ್ಕೆಗಳ ಫಡಫಡಿಸಿ ಕತ್ತಲ ಕೊಡವಿಕೊಳ್ಳುವ ಮರ, ಹೀಗೆ ಒಂದು ಬೆಳಗು ಒಬ್ಬೊಬ್ಬರಿಗೂ ಭಿನ್ನ ಭಿನ್ನ ಅನುಭವ ಕೊಡಬಲ್ಲುದು ಎಂಬ ಸರಳ ಸತ್ಯವನ್ನು ನಯವಾಗಿ ಕವಿ ಓದುಗರೆದೆಗೆ ದಾಟಿಸಿ ಬಿಡುತ್ತಾರೆ. ಹಾಗೆಯೇ ನಾವು ಗಮನಿಸದೇ ಇದ್ದ ಅಂಚಿನಲ್ಲಿರುವವರ ಬದುಕಿನ ತಾಜಾ ವಿವರಗಳ ಬಗೆಗೆ ನಮ್ಮ ಹೃದಯವನ್ನು ಆರ್ದ್ರಗೊಳಿಸುತ್ತಾರೆ. ಈ ಕವನದ ಕೊನೆಗೆ ಬರುವ ಸಾಲು ‘ಕಿರಣ…

Read More

ತೆಕ್ಕಟ್ಟೆ: ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆಯ ಬೆಳ್ಳಿ ಹಬ್ಬದ ಸಂಭ್ರಮದ ನಿಮಿತ್ತ ಬೆಂಗಳೂರಿನ ಆಯ್ದ ಉದ್ಯಮ ಹಾಗೂ ಮನೆಗಳಲ್ಲಿ ಆಯೋಜಿಸಿದ ಹೂವಿನಕೋಲು ಅಭಿಯಾನದ ಉದ್ಘಾಟನಾ ಸಮಾರಂಭವು ದಿನಾಂಕ 22 ಜನವರಿ 2025ರಂದು ಬೆಂಗಳೂರಿನ ಕತ್ರಿಗುಪ್ಪೆಯ ‘ತಾಜಾ ತಿಂಡಿ’ಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ‘ತಾಜಾ ತಿಂಡಿ’ ಇದರ ಬ್ರಾಂಡ್ ಸರದಾರ ಗೋಪಾಡಿ ಶ್ರೀನಿವಾಸ ರಾವ್ ಮಾತನಾಡಿ “ಕರಾವಳಿಯ ಸಾಂಪ್ರದಾಯಿಕ ಕಲೆ ಹೂವಿನಕೋಲನ್ನು ಬೆಂಗಳೂರಲ್ಲಿ ಬಿತ್ತಿರಿಸುವುದು ಸುಲಭದ ಮಾತಲ್ಲ. 25 ವರ್ಷಗಳಿಂದ ನಿರಂತರವಾಗಿ ಚಟುವಟಿಕೆಯಿಂದ ಮನೆಮಾತಾಗಿ ಇದೀಗ ರಾಜಧಾನಿಯಲ್ಲಿ ಕರಾವಳಿಯ ಸೊಗಡನ್ನು ಮೆರೆಸುತ್ತಿರುವುದು ಬೆಂಗಳೂರಿನ ಉದ್ಯಮಿಗಳಿಗೆ ಅತ್ಯಂತ ಸಂತಸ ತಂದಿದೆ. ಕಲೆಯನ್ನು ಉಸಿರಾಗಿಸಿಕೊಂಡ ಸಂಸ್ಥೆಯ ಸಾಧನೆ ನಿಜಕ್ಕೂ ಶ್ಲಾಘನೀಯ” ಎಂದರು. ಪ್ರಸಿದ್ಧ ಉದ್ಯಮಿ ನೇರಂಬಳ್ಳಿ ರಾಘವೇಂದ್ರ ರಾವ್ ಮಾತನಾಡಿ ಜನನಿಬಿಡದಿಂದೊಡಗೂಡಿದ ಬೆಂಗಳೂರಿನಲ್ಲಿ ಮನೆ ಮನೆಗಳಿಗೆ ಹೋಗಿ ಮಾತೃ ಸ್ಥಳವಾದ ಕರಾವಳಿಯ ಸೊಗಡಿನ ಕಾರ್ಯಕ್ರಮ ನೀಡುವುದೆಂದರೆ ದುಸ್ಸಾಹಸವೇ ಸರಿ. ಇಂತಹ ಸಂಸ್ಥೆಗಳಿದ್ದರೆ ಸಮಾಜದ ಏಳ್ಗೆ ಖಂಡಿತಾ ಸಾಧ್ಯ” ಎಂದು ಅಭಿಪ್ರಾಯ ಪಟ್ಟರು. ರಾಮ ಲಕ್ಷ್ಮಣ ಕ್ಯಾಟರರ್ಸ್…

Read More

ಬೆಂಗಳೂರು : ರಂಗಮಂಡಲ ಬೆಂಗಳೂರು ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಯಶವಂತಪುರ ಕ್ಷೇತ್ರ ಇವುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ ‘ಕಾವ್ಯ ಸಂಸ್ಕೃತಿ ಯಾನ’ ಜನರೆಡೆಗೆ ಕಾವ್ಯ ಕಾರ್ಯಕ್ರಮದ ಏಳನೇ ಕಾವ್ಯಯಾನವನ್ನು ದಿನಾಂಕ 26 ಜನವರಿ 2025ರಂದು ಬೆಳಿಗ್ಗೆ 10-00 ಗಂಟೆಗೆ ಬೆಂಗಳೂರಿನ ಗುರುರಾಜ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಹಿರಿಯ ಕವಿ ಮತ್ತು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಎಲ್.ಎನ್. ಮುಕುಂದರಾಜು ಕಾವ್ಯ ಸಂಸ್ಕೃತಿ ಯಾನದ ಸರ್ವಾಧ್ಯಕ್ಷರಾಗಿದ್ದು, ಹಿರಿಯ ಕವಯತ್ರಿ ಡಾ. ವಿಜಯಶ್ರೀ ಸಬರದ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಬೆಳಿಗ್ಗೆ 11-30 ಗಂಟೆಗೆ ಕವಿಗೋಷ್ಠಿ -01 ಡಾ. ಹೆಚ್. ಬಸ್ಸೀನಾರಾಯಣ ಸ್ವಾಮಿ ಹಾಗೂ ಮಧ್ಯಾಹ್ನ 1-30 ಗಂಟೆಗೆ ಕವಿಗೋಷ್ಠಿ -02 ಡಾ. ಜಯಶ್ರೀ ಕಂಬಾರ ಇವರುಗಳ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಂಜೆ 4-00 ಗಂಟೆಗೆ ಸರ್ವಾಧ್ಯಕ್ಷರೊಂದಿಗೆ ಸಂವಾದ, ಹಾಡುಗಾರರಿಂದ ‘ಪದ-ಪಾದ’ ಬಳಿಕ ಸಮಾರೋಪ ಸಮಾರಂಭ ನಡೆಯಲಿದೆ.

Read More

ಬಾಗಲಕೋಟೆ : ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ (ರಿ.) ಕಮತಗಿ ಹಾಗೂ ವಚನ ವೈಭವ ಮಹಿಳಾ ಜಾನಪದ ಸಾಂಸ್ಕೃತಿಕ ಕಲಾ ಸಂಘ (ರಿ.) ಬಾಗಲಕೋಟೆ ಇವರ ಸಹಯೋಗದಲ್ಲಿ ಬಾಗಲಕೋಟೆಯಲ್ಲಿ ದಿನಾಂಕ 25 ಜನವರಿ 2025ರಂದು ‘ಜನಪದ ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಸಮ್ಮೇಳನ ಸರ್ವಾಧ್ಯಕ್ಷರಾದ ರಾಷ್ಟ್ರಪ್ರಶಸ್ತಿ ಜಾನಪದ ಕಲಾವಿದರಾದ ಶ್ರೀಮತಿ ಗುರಮ್ಮ ಸಂಕಿನಮಠ ಇವರಿಗೆ ದಿನಾಂಕ 22 ಜನವರಿ 2025ರಂದು ಸಿರೂರಿನ ಅವರ ನಿವಾಸಕ್ಕೆ ತೆರಳಿ ಪ್ರೀತಿಯಿಂದ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಈ ಸಂಧರ್ಭದಲ್ಲಿ ಕಥೆಗಾರರು ಹಾಗೂ ಶಿಕ್ಷಕರಾದ ಶ್ರೀ ಲಕ್ಷ್ಮಣ ಬಾದಾಮಿ, ಗ್ರಾಮೀಣ ಕಲೆ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ಶ್ರೀ ಕಲ್ಲಪ್ಪಣ್ಣ ಭಗವತಿ, ಕಾರ್ಯದರ್ಶಿಗಳಾದ ಶ್ರೀ ಬಸವರಾಜ ಜಡ್ರಾಮಕುಂಟಿ, ಶಿಕ್ಷಕರಾದ ಶ್ರೀ ಎಂ.ಎಸ್. ಕಲ್ಗುಡಿ, ವಕೀಲರಾದ ಶ್ರೀ ಸುಭಾಸ್ ಹುಲ್ಯಾಳ ಹಾಗೂ ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘದ ಸದಸ್ಯರಾದ ಶ್ರೀ ವಿನಾಯಕ ಗಡೆದ ಗೌಡರ ಉಪಸ್ಥಿತರಿದ್ದರು. ಈ ಸಮ್ಮೇಳನದಲ್ಲಿ ಪುಸ್ತಕ ಬಿಡುಗಡೆ, ಕಲಾ ಪ್ರದರ್ಶನ, ಭರತನಾಟ್ಯ, ವಿಶೇಷ ಉಪನ್ಯಾಸ, ಕವಿಗೋಷ್ಠಿ ಮತ್ತು…

Read More

ಬೆಂಗಳೂರು : ರಂಗರಥ – ಭಾರತೀಯ ಪ್ರದರ್ಶನ ಕಲಾ ಸಂಸ್ಥೆ (ರಿ.) ಅರ್ಪಿಸುವ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು ಇವರ ಸಹಯೋಗದೊಂದಿಗೆ 90 ನಿಮಿಷಗಳ ಸಾಂಸಾರಿಕ ಕನ್ನಡ ಹಾಸ್ಯ ನಾಟಕ ‘ಇದ್ದಾಗ ನಿಮ್ದು ಕದ್ದಾಗ ನಮ್ದು’ ಪ್ರದರ್ಶನವನ್ನು ದಿನಾಂಕ 25 ಜನವರಿ 2025ರಂದು ಸಂಜೆ 7-00 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂ 14ನೇ ಅಡ್ಡ ರಸ್ತೆಯಲ್ಲಿರುವ ಸೇವಾ ಸದನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮೂಲ : ದಾರಿಯೋ ಫೋ (ದ ವರ್ಚುವಸ್ ಬರ್ಗಲರ್) ಕನ್ನಡಕ್ಕೆ ಅನುವಾದ : ಕೆ.ವಿ. ಅಕ್ಷರ, ರಂಗಪಠ್ಯ : ಆಸಿಫ್ ಕ್ಷತ್ರಿಯ, ಸಂಗೀತ: ಭಿನ್ನಷಡ್ಜ ಮತ್ತು ಆಸಿಫ್ ಕ್ಷತ್ರಿಯ ಮತ್ತು ಶ್ವೇತ ಶ್ರೀನಿವಾಸ್ ಇವರ ನಿರ್ದೇಶನದಲ್ಲಿ ಈ ನಾಟಕ ಪ್ರದರ್ಶನಗೊಳ್ಳಲಿದೆ. ನಾಟಕದ ಟಿಕೆಟ್ ಗಳಿಗಾಗಿ 8050157443 / 9448276776 ಸಂಪರ್ಕಿಸಿ.

Read More