Author: roovari

ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ಮಹತ್ವದ ಅಭಿಯಾನ ‘ಮನೆಯೇ ಗ್ರಂಥಾಲಯ’ ನೂರು ದಿನಗಳಲ್ಲಿ 100 ಗ್ರಂಥಾಲಯಗಳ ಸ್ಥಾಪನೆಯ ವಿನೂತನ ಅಭಿಯಾನವು ಶತ ಸಂಭ್ರಮ ಕಾಣುತ್ತಿದ್ದು, ಈ ಕಾರ್ಯಕ್ರಮ ದಿನಾಂಕ 3 ಸೆಪ್ಟೆಂಬರ್ 2024ರಂದು ಉಡುಪಿಯ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾದ ಡಾ. ಎ.ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯಲ್ಲಿ ಸಂಪನ್ನಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ಉಡುಪಿ ವಿಶ್ವನಾಥ ಶೆಣೈ ಇವರು ಗ್ರಂಥಾಲಯಕ್ಕೆ ಕಪಾಟನ್ನು ನೀಡಿ ಉದ್ಘಾಟಿಸಲಿದ್ದಾರೆ. ಆಸ್ಪತ್ರೆಯ ಆಡಳಿತ ನಿರ್ದೇಶಕರು ಡಾ. ಪಿ.ವಿ. ಭಂಡಾರಿ ಇವರು ಅಧ್ಯಕ್ಷತೆ ವಹಿಸಲಿದ್ದು. ನಾಡಿನ ಪ್ರಸಿದ್ಧ ಕಥೆಗಾರರು, ವಿಮರ್ಶಕರು ಆದ ಡಾ. ಬಿ. ಜನಾರ್ದನ ಭಟ್ ಪುಸ್ತಕಗಳನ್ನು ಹಸ್ತಾಂತರ ಮಾಡಿ ಚಾಲನೆ ನೀಡಲಿರುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಶ್ರೀಮತಿ ಪೂರ್ಣಿಮಾ, ಕ.ಸಾ.ಪ. ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮತ್ತು ಜಿಲ್ಲಾ ಸಹ ಕಾರ್ಯದರ್ಶಿ ಮೋಹನ ಉಡುಪ ಹಂದಾಡಿ ಉಪಸ್ಥಿತರಿರುತ್ತಾರೆ.

Read More

ಬೆಂಗಳೂರು : 2024ನೆಯ ಸಾಲಿನ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಟಿತ ‘ಕಂಡ್ಲೂರು ಗಿರಿಜಮ್ಮ ಮತ್ತು ನರಸಿಂಹ ಜೋಗಿ ದತ್ತಿ ಪ್ರಶಸ್ತಿ’ಗಾಗಿ ಹಿರಿಯ ನಾಟಕಕಾರ ಮತ್ತು ರಂಗಕಲಾವಿದ ಬಸವರಾಜ ಚೆನ್ನವೀರಪ್ಪ ಬೆಂಗೇರಿಯವರನ್ನು ಆಯ್ಕೆ ಮಾಡಲಾಗಿದೆ. ಶ್ರೀನಿವಾಸ ಜೋಗಿಯವರು ತಮ್ಮ ಹೆತ್ತವರಾದ ಕಂಡ್ಲೂರು ಗಿರಿಜಮ್ಮ ಮತ್ತು ನರಸಿಂಹ ಜೋಗಿಯವರ ಹೆಸರಿನಲ್ಲಿ ಈ ದತ್ತಿಯನ್ನು ಸ್ಥಾಪಿಸಿದ್ದು, ರಂಗಭೂಮಿಗೆ ವಿಶೇಷ ಕೊಡುಗೆ ನೀಡಿದವರಿಗೆ ಈ ಪುರಸ್ಕಾರವನ್ನು ನೀಡಲಾಗುತ್ತದೆ. ಧಾರವಾಡ ಜಿಲ್ಲೆ ಕುಂದಗೋಳದ ಸಮೀಪದ ಶಿರೂರು ಗ್ರಾಮದವರಾದ ಬಸವರಾಜ ಬೆಂಗೇರಿಯವರು ‘ಶಿರಹಟ್ಟಿ ಫಕೀರೇಶ್ವರ ಮಹಾತ್ಮೆ’ ನಾಟಕದ ಫಕೀರೇಶ್ವರನ ಪಾತ್ರಕ್ಕೆ ಹೆಸರಾದವರು. ಈ ನಾಟಕವು ಇದುವರೆಗೂ 1400ಕ್ಕೂ ಹೆಚ್ಚು ಪ್ರದರ್ಶನವನ್ನು ಕಂಡು ದಾಖಲೆಯನ್ನು ಸ್ಥಾಪಿಸಿದೆ. ಛತ್ರಪತಿ ಶಿವಾಜಿ, ಕದಳಿಯ ಕರ್ಪೂರ, ತಂದೆ ಇದ್ದರೂ ತಬ್ಬಲಿಯಾದೆ ಮೊದಲಾದವು ಅವರು ರಚಿಸಿದ ಪ್ರಮುಖ ನಾಟಕಗಳು. ವೈವಿಧ್ಯಮಯ ಪಾತ್ರಗಳಲ್ಲಿ ಅಭಿನಯಿಸಿರುವ ಅವರು ‘ಹೇಮರೆಡ್ಡಿ ಮಲ್ಲಮ್ಮ’ ನಾಟಕದಲ್ಲಿ ಮಲ್ಲಮ್ಮನ ಸ್ತ್ರೀಪಾತ್ರವನ್ನು ನಿರ್ವಹಿಸಿದ್ದರು. ವಿವಿಧ ನಾಟಕ ಮಂಡಳಿಗಳಲ್ಲಿ ಸೇವೆ ಸಲ್ಲಿಸಿದ ಇವರು 2004ರಲ್ಲಿ ‘ವಿಶ್ವಭಾರತಿ ರಮ್ಯನಾಟಕ ಸಂಘ…

Read More

ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಹಾಗೂ ನಾರಾಯಣ ಗುರು ಸಮೂಹ ಶಿಕ್ಷಣ ಸಂಸ್ಥೆ ಕಾಟಿಪಳ್ಳ ಇವರ ಸಹಯೋಗದಲ್ಲಿ 102ನೇ ‘ಸಾಹಿತ್ಯ ಅಭಿರುಚಿ’ ಕಾರ್ಯಕ್ರಮವು ದಿನಾಂಕ 31 ಆಗಸ್ಟ್ 2024ರಂದು ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸಾಹಿತಿ, ಜನಪದ ವಿದ್ವಾಂಸ ಸಂಸ್ಥೆಯ ಆಡಳಿತ ಅಧಿಕಾರಿ ಡಾ. ಗಣೇಶ್ ಅಮೀನ್ ಸಂಕಮಾರ್ ಉದ್ಘಾಟಿಸಿ ಮಾತನಾಡಿ ಮಕ್ಕಳಲ್ಲಿ ಸಾಹಿತ್ಯದ ಅಭಿರುಚಿಗಳು ಬೆಳೆಯಲು ಮೈಗೂಡಿಸಿಕೊಳ್ಳಬೇಕಾದ ಕೆಲವು ವಿಚಾರಗಳನ್ನು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಪಿ. ದಯಾಕರ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದ ಗೋವಿಂದ ದಾಸ ಕಾಲೇಜು ಸುರತ್ಕಲ್ ಇಲ್ಲಿನ ಪ್ರಾಂಶುಪಾಲರಾದ ಪ್ರೊ. ಕೃಷ್ಣಮೂರ್ತಿ ಮಾತನಾಡಿ “ವಿದ್ಯಾರ್ಥಿಗಳು ತಮ್ಮ ಎಳವೆಯಿಂದಲೇ ಸಾಹಿತ್ಯದ ಬಗ್ಗೆ ಒಲವು ಮೂಡಿಸಿಕೊಳ್ಳಬೇಕು” ಎಂದರು. ಇನ್ನೋರ್ವ ಮುಖ್ಯ ಅತಿಥಿ ಅತ್ತಾವರ ಮಧುಸೂದನ ಕುಶೆ ಶಾಲೆಯ ಪ್ರಾಂಶುಪಾಲರಾದ ಬಿಂದುಸಾರ ಶೆಟ್ಟಿ ಮಾತನಾಡಿ “ಸಾಹಿತ್ಯಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳು ಶಾಲಾ ಮಟ್ಟದಲ್ಲಿ ನಡೆದಾಗ ಮಕ್ಕಳು ಸಾಹಿತ್ಯದ ಸಾರ ತಿಳಿಯಲು ಸಾಧ್ಯವಾಗುತ್ತದೆ” ಎಂದರು.…

Read More

ಶಿವಮೊಗ್ಗ : ಕೆ.ಎನ್. ರುದ್ರಪ್ಪ ಮತ್ತು ಮಲೆನಾಡು ಕಥಾನಕಗಳ ‘ಕೊಳಲೆ’ ಪುಸ್ತಕ ಲೋಕಾರ್ಪಣೆ ಸಮಾರಂಭವನ್ನು ದಿನಾಂಕ 4 ಸೆಪ್ಟೆಂಬರ್ 2024ರಂದು ಸಂಜೆ 5-00 ಗಂಟೆಗೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಮಾಜಿ ಶಾಸಕರಾದ ಶ್ರೀ ವೈ.ಎಸ್.ವಿ. ದತ್ತ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ಮಾಜಿ ಸಭಾಪತಿಗಳಾದ ಡಾ. ಬಿ.ಎಲ್. ಶಂಕರ್ ಪುಸ್ತಕ ಲೋಕಾರ್ಪಣೆಗೊಳಿಸಲಿರುವರು. ಶಿವಮೊಗ್ಗದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇದರ ಅಧ್ಯಕ್ಷರಾದ ಶ್ರೀ ಡಿ. ಮಂಜುನಾಥ ಇವರು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದು, ಪುಸ್ತಕ ಸಂಪಾದಕರಾದ ಡಾ. ಎಚ್ ಟಿ. ಕೃಷ್ಣಮೂರ್ತಿ ಇವರು ಪುಸ್ತಕದ ಕುರಿತು ಮಾತನಾಡಲಿದ್ದಾರೆ. ಶಿವಮೊಗ್ಗದ ಡಿ.ವಿ.ಎಸ್. ಸಮಿತಿ (ರಿ.) ಇದರ ಅಧ್ಯಕ್ಷರಾದ ಶ್ರೀ ಕೆ.ಎನ್. ರುದ್ರಪ್ಪ ಕೊಳಲೆ ಮತ್ತು ಶ್ರೀಮತಿ ಎ.ಬಿ. ಸರೋಜ ಕೊಳಲೆ ಇವರು ಗೌರವ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಖ್ಯಾತ ಹಿಂದೂಸ್ತಾನಿ ಗಾಯಕರಾದ ಶ್ರೀ ವಿ. ನೌಶಾದ್ ಹರ್ಲಾಪುರ ಮತ್ತು ವಿ. ನಿಶಾದ್ ಹರ್ಲಾಪುರ ಇವರಿಂದ ಸಂಗೀತ ಸಂಜೆ ಪ್ರಸ್ತುತಗೊಳ್ಳಲಿದೆ.

Read More

ಮಂಗಳೂರು : ತುಳು ಕೂಟ (ರಿ.) ಕುಡ್ಲದ ಅಧ್ಯಕ್ಷರಾದ ದಾಮೋದರ ನಿಸರ್ಗ ಇವರು ದಿನಾಂಕ 31 ಆಗಸ್ಟ್ 2024ರಂದು ನಿಧನ ಹೊಂದಿದ್ದು, ಅವರಿಗೆ 52 ವರ್ಷ ವಯಸ್ಸಾಗಿತ್ತು. ಸಂತಾಪ ಸಭೆಯಲ್ಲಿ ಮಾತನಾಡಿದ ತುಳುಕೂಟದ ಪ್ರಧಾನ ಕಾರ್ಯದರ್ಶಿ ವರ್ಕಾಡಿ ರವಿ ಅಲೆವೂರಾಯ “ಓರ್ವ ಉದ್ಯಮಿಯಾಗಿ, ತುಳು ಅಕಾಡೆಮಿಯ ಪುನರ್ ಸ್ಥಾಪಿಸಲು ಹೆಣಗಿದವರು. ವಿಶ್ವ ತುಳುವೆರೆ ಪರ್ಬದ ಪ್ರಮುಖ ರೂವಾರಿಯೂ ಆಗಿ ದುಡಿದು ನಿಸ್ವಾರ್ಥ ಸೇವೆಗೈದ ಸಜ್ಜನ, ಮೆಲು ಮಾತಿನ ದಾಮಣ್ಣ ತುಳುಕೂಟದ ಸುವರ್ಣ ಸಂಭ್ರಮದ ಆಚರಣೆಯ ರೂಪು – ರೇಷೆಗಳನ್ನು ಹೊಂದಿದ್ದರು. ಅವರ ವಿದಾಯತೆ ತುಳು ಭಾಷಿಗರಿಗೆ ತುಂಬಲಾರದ ನಷ್ಟ” ಎಂದರು. ಕೂಟದ ಉಪಾಧ್ಯಕ್ಷ ಜೆ.ವಿ. ಶೆಟ್ಟಿ ಮಾತನಾಡಿ “ದಾಮಣ್ಣ ಗೋಕರ್ಣನಾಥೇಶ್ವರ ಬ್ಯಾಂಕ್ ಇದರ ಅಧ್ಯಕ್ಷರಾಗಿ, ಕಂಕನಾಡಿ ಗರೋಡಿ ಕ್ಷೇತ್ರದ ಟ್ರಸ್ಟಿಗಳಾಗಿ, ಸೂರ್ಯನಾರಾಯಣ ದೇವಳದ ಮೊಕ್ತೇಸರರರಾಗಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಹಾನಗರ ಸಂಘ ಚಾಲಕರಾಗಿ ಸಮಾಜದ ಪ್ರತೀ ಕ್ಷೇತ್ರದಲ್ಲೂ ಸಮಾಜ ಸೇವೆಯನ್ನು ನಿಸ್ವಾರ್ಥವಾಗಿ ಮಾಡಿದವರು.” ಎಂದರು. ಪದ್ಮನಾಭ ಕೋಟ್ಯಾನ್ ಮಾತನಾಡಿ “ನಿಸರ್ಗರು ಬಿಲ್ಲವ…

Read More

ಕಾಸರಗೋಡು : ಕರ್ನಾಟಕ ರಾಜ್ಯ ‘ಸ್ಪಂದನ ಸಿರಿ’ ವೇದಿಕೆಯ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ದಿನಾಂಕ 15 ಸಪ್ಟೆಂಬರ್ 2024 ರಂದು ಕಾಸರಗೋಡಿನ ಕನ್ನಡ ಭವನ ಗ್ರಂಥಾಲಯದಲ್ಲಿ ನಡೆಯುವ ಕೇರಳ -ಕರ್ನಾಟಕ ‘ಸ್ಪಂದನ ಸಿರಿ’ ಕೃಷಿ, ಕನ್ನಡ ಶಿಕ್ಷಣ ಮತ್ತು ಸಂಸ್ಕೃತಿ ಸಮ್ಮೇಳನದ ಆಮಂತ್ರಣ ಪತ್ರಿಕೆ ಲೋಕಾರ್ಪಣಾ ಸಮಾರಂಭವು ದಿನಾಂಕ 31 ಆಗಸ್ಟ್ 2024ರ ಶನಿವಾರದಂದು ಕಾಸರಗೋಡಿನ ಎಡನೀರು ಮಠದಲ್ಲಿ ನಡೆಯಿತು. ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ “ಆಧ್ಯಾತ್ಮಿಕ, ಸಾಂಸ್ಕೃತಿಕ ವಿಚಾರಗಳ ಜತೆಗೆ ಕೃಷಿ ಸಂಸ್ಕೃತಿಯನ್ನು ಯುವಜನತೆ ಅಳವಡಿಸಿಕೊಯಳ್ಳಬೇಕು. ಈ ನಿಟ್ಟಿನಲ್ಲಿ ಮಕ್ಕಳಲ್ಲಿ ಸಾಹಿತ್ಯ ಹಾಗೂ ಕೃಷಿಯ ಕುರಿತು ಜಾಗೃತಿ ಮೂಡಿಸಬೇಕು.” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸ್ಪಂದನ ಸಿರಿ ವೇದಿಕೆಯ ಗೌರವ ಸಲಹೆಗಾರರಾದ ಕೆ. ವಾಮನ್ ರಾವ್ ಬೇಕಲ್, ಸ್ಪಂದನ ಸಿರಿ ಜಿಲ್ಲಾ ಅಧ್ಯಕ್ಷರಾದ ವಿರಾಜ್ ಅಡೂರು, ಸಾಮಾಜಿಕ ಮುಖಂಡರಾದ ಕಾಸರಗೋಡು ವೆಂಕಟ್ರಮಣ ಹೊಳ್ಳ, ಸಂಗೀತ ವಿದ್ವಾಂಸರಾದ ಬಳ್ಳಪದವು ಯೋಗೀಶ ಶರ್ಮ,…

Read More

ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ ಆಶ್ರಯದಲ್ಲಿ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಶ್ರೀಸುಶೀಂದ್ರತೀರ್ಥ ಶ್ರೀಪಾದರ ನೇತೃತ್ವದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ 01 ಆಗಸ್ಟ್ 2024 ರಂದು ಆರಂಭಗೊಂಡ ಶ್ರೀಕೃಷ್ಣ ಮಾಸೋತ್ಸವದ ಸಮಾರೋಪ ಸಮಾರಂಭವು ದಿನಾಂಕ 01 ಸೆಪ್ಟೆಂಬರ್ 2024ರಂದು ಸಮಾರೋಪಗೊಳ್ಳಲಿದ್ದು, ಅಂದು ಶ್ರೀಕೃಷ್ಣನಿಗೆ ‘ಉದಯಾಸ್ತಮಾನ ಸೇವೆ’ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸರಿಗಮಪ ಸೀಸನ್-15ರ ರನ್ನರ್ ಅಪ್ ಕಲಾವಿದೆ ವಿದುಷಿ ಸಾಧ್ವಿನಿ ಕೊಪ್ಪ ಅವರಿಂದ ಬೆಳಗ್ಗೆ ಘಂಟೆ 10.00 ರಿಂದ 12.00ರ ವರೆಗೆ ಶಾಸ್ತ್ರೀಯ ಸಂಗೀತ ಕಛೇರಿ ,ಅಪರಾಹ್ನ ಘಂಟೆ 3.00 ರಿಂದ 5.00ರ ವರೆಗೆ ಸಂಯುಕ್ತ ಸಂಸ್ಥಾನ (ಯು. ಕೆ.) ಇಲ್ಲಿನ ನೃತ್ಯ ನಿರ್ದೇಶಕಿ ದಿವ್ಯಾ ಭಟ್ ಇವರಿಂದ ಕಥಕ್ ನೃತ್ಯ ಹಾಗೂ ರಾತ್ರಿ ಘಂಟೆ 7.00 ರಿಂದ 9.00ರ ವರೆಗೆ ಸ್ವೀಡನ್‌ ಇಲ್ಲಿನ ವಿದುಷಿ ದಿವ್ಯಾ ಸುರೇಶ್ ಇವರಿಂದ ಭರತನಾಟ್ಯ ಪ್ರದರ್ಶನ ಗೊಳ್ಳಲಿದೆ. ಅಂದು ಸಂಜೆ ಘಂಟೆ 5.00 ರಿಂದ ರಾಜಾಂಗಣದಲ್ಲಿ ನಡೆಯಲಿರುವ ಶ್ರೀಕೃಷ್ಣ…

Read More

ಪೆರುವಾಯಿ: ಮುರುವ ಬಳಿಯ ಮಾಣಿಲದ ನಿವಾಸಿ ಖ್ಯಾತ ಕಾಷ್ಠ ಶಿಲ್ಪಿ ನಾರಾಯಣ ಆಚಾರ್ಯ ಹೃದಯಾಘಾತದಿಂದ ದಿನಾಂಕ 30 ಆಗಸ್ಟ್ 2024ರ ರಾತ್ರಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಶ್ರೀಯುತರು ದಿ. ಪಕೀರ ಆಚಾರ್ಯ ಹಾಗೂ ದಿ. ಪುಟ್ಟಮ್ಮ ದಂಪತಿಗಳ ಪುತ್ರನಾಗಿದ್ದು, ಮರದ ಕೆತ್ತನೆ ಕೆಲಸದ ಜೊತೆ ಖ್ಯಾತ ಕಾಷ್ಠ ಶಿಲ್ಪಿಯಾಗಿ ಹೆಸರುವಾಸಿಯಾಗಿದ್ದರು. ತಂದೆಯ ಜೊತೆ ಹಾಗೂ ಮಂಜೇಶ್ವರದ ರಥದ ಶಿಲ್ಪಿ ದಿ. ಈಶ್ವರ ಆಚಾರ್ಯರ ಮಾರ್ಗದರ್ಶನದಲ್ಲಿ ರಥದ ಶಿಲ್ಪದ ಭವ್ಯ ಪರಂಪರೆಯನ್ನು ವಿನೂತನ ಶೈಲಿಯಲ್ಲಿ ರಚಿಸಿ ಕೀರ್ತಿ ಪಡೆದಿದ್ದರು. ಮುರುವದ ಗ್ರಾಮ ದೈವ ಪಂಜುರ್ಲಿ, ಹುಲಿ ಭೂತಗಳ ವರಾಹ ಮತ್ತು ವ್ಯಾಘ್ರ ಬಂಡಿಯಲ್ಲಿ ಇವರ ಕೈಚಳಕದ ಕೆತ್ತನೆಯನ್ನು ಈಗಲೂ ಕಾಣಬಹುದು. ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ ಮಾಣಿಲ, ಕೇಪು, ಚೆಲ್ಲಡ್ಗ ಮುಂತಾದ ಕಡೆಗಳಲ್ಲಿ ರಚಿತವಾದ ಶಿಲ್ಪ ಕಲೆಗಳಲ್ಲಿ ಇವರ ಕಲಾ ಪ್ರೌಢಿಮೆ ಎದ್ದು ಕಾಣುವಂತಿದೆ. ಅದೇ ರೀತಿ ಬೆಂಗಳೂರು ಗಿರಿನಗರ ಗಣೇಶ ದೇವಾಲಯದಲ್ಲಿ ಕೂಡ ಇವರ ಕಾಷ್ಠ ಶಿಲ್ಪ…

Read More

ಮೂಡುಬಿದಿರೆ: ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ ಗದಗ, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ ಹಾಗೂ ಬಾಲಭವನ ಸೊಸೈಟಿ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ರಾಷ್ಟ್ರಮಟ್ಟದ ಮಕ್ಕಳ ಚಿತ್ರ ಕಲೋತ್ಸವ ‘ಚಿಣ್ಣರ ಚಿತ್ರ ಚಿತ್ತಾರ 2023-24’ ಇದರ ಬಹುಮಾನ ವಿತರಣಾ ಸಮಾರಂಭವು ದಿನಾಂಕ 14 ಆಗಸ್ಟ್ 2024 ರಂದು ಧಾರಾವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಿತು. ದೇಶದಾದ್ಯಂತ ಸುಮಾರು 27,000 ಕ್ಕೂ ಅಧಿಕ ಮಕ್ಕಳು ಭಾಗವಹಿಸಿದ ಈ ಚಿತ್ರಕಲಾ ಸ್ಪರ್ಧೆಯಲ್ಲಿ ಮೂಡುಬಿದಿರೆ ಮೌಂಟ್ ಕಾರ್ಮೆಲ್ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಅಶ್ವಿಲ್ ನೀಲ್ ಲೋಬೋ ‘ಪುಟ್ಟ ಕಲಾವಿದ’ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಇವರು ಮೂಡುಬಿದಿರೆ ಅಪೂರ್ವ ನಗರದ ಅರುಣ್ ವಿನೀತ ಲೋಬೋ ದಂಪತಿಯ ಪುತ್ರ.

Read More

ಉಡುಪಿ : ಕೋಟದ ಸು.ವಿ.ಕಾ. ಸಾಂಸ್ಕೃತಿಕ ಸಂಘಟನೆಯು ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಆಶ್ರಯದಲ್ಲಿ ಆಯೋಜಿಸಿದ ಖ್ಯಾತ ರಂಗನಿರ್ದೇಶಕ ಡಾ. ಶ್ರೀಪಾದ ಭಟ್ ಅವರ ಪರಿಕಲ್ಪನೆ ಮತ್ತು ನಿರ್ದೇಶನದಲ್ಲಿ ಕುಮಾರಿ ಕಾವ್ಯ ಹಂದೆ ಅಭಿನಯದ ಏಕವ್ಯಕ್ತಿ ಕಾವ್ಯಾಭಿನಯ ‘ಹಕ್ಕಿ ಮತ್ತು ಅವಳು’ ಇದರ ಪ್ರದರ್ಶನವು 30 ಆಗಸ್ಟ್ 2024ರ ಶುಕ್ರವಾರದಂದು ನಡೆಯಿತು. ಹಿನ್ನೆಲೆಯಲ್ಲಿ ಶಿಕ್ಷಕಿ ವಿನಿತಾ ಹಂದೆ ಮತ್ತು ಉಪನ್ಯಾಸಕ ಸುಜಯೀಂದ್ರ ಹಂದೆ ಸಹಕರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ಕುಮಾರ್ ಇವರು ಸಾಹಿತ್ಯ ವೇದಿಕೆಯ ಪರವಾಗಿ ನಟಿ ಕಾವ್ಯ ಹಂದೆಯವರನ್ನು ಸಂಮಾನಿಸಿ ಗೌರವಿಸಿದರು. ಕಾಲೇಜಿನ ಹಿರಿಯ ಉಪನ್ಯಾಸಕಿ ಸುಮಾ, ಸಾಹಿತ್ಯ ಸಂಘದ ಸಂಚಾಲಕಿ ಹಾಗೂ ಲೇಖಕಿ ಸುಧಾ ಆಡುಕಳ, ಉಪನ್ಯಾಸಕರಾದ ಪ್ರೇಮ, ಭವ್ಯ, ಶಾಲಿನಿ, ಡಾ. ಉಷಾ, ಗಂಗಾಧರ, ಛಾಯಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಸಾಹಿತ್ಯ ಸಂಘದ ವಿದ್ಯಾರ್ಥಿ ಪ್ರತಿನಿಧಿಗಳಾದ ಕುಮಾರಿ ಗ್ರೀಷ್ಮಿತಾ ಪಿಂಟೊ ಹಾಗೂ ಕುಮಾರಿ ಲವಿಕಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Read More