Author: roovari

ಮೂಡುಬಿದಿರೆ : ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಆಶ್ರಯದಲ್ಲಿ ‘ವಿಶೇಷ ಉಪನ್ಯಾಸ ಮತ್ತು ಕವಿಯೊಂದಿಗೆ ಸಂವಾದ’ ಕಾರ್ಯಕ್ರಮವು ಡಾ. ವಿ.ಎ. ಆಚಾರ್ಯ ಸಭಾಂಗಣದಲ್ಲಿ ದಿನಾಂಕ 19 ಸೆಪ್ಟೆಂಬರ್ 2025ರಂದು ಜರುಗಿತು. ಕಾರ್ಯಕ್ರಮದಲ್ಲಿ ಕನ್ನಡದ ಖ್ಯಾತ ಕವಿ ಹಾಗೂ ವಿಮರ್ಶಕರಾದ ಕೆ.ಆರ್. ಪುರಂ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ಟಿ. ಯಲ್ಲಪ್ಪ ಇವರು ಅತಿಥಿ ಉಪನ್ಯಾಸಕರಾಗಿ ಪಾಲ್ಗೊಂಡು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಅವರು ತಮ್ಮ ಬದುಕಿನ ಹಿನ್ನಲೆಯಲ್ಲಿ ಎದುರಿಸಿದ ಸಂಕಷ್ಟಗಳನ್ನು ಹಂಚಿಕೊಂಡರು. “ವಿದ್ಯಾಭ್ಯಾಸಕ್ಕೆ ಅನುಕೂಲವಿಲ್ಲದ ಮಲಹೋರುವ ಕುಟುಂಬದಲ್ಲಿ ಕಡುಬಡತನದಲ್ಲಿ ಜನಿಸಿದ್ದ ನಾನು, ಕನ್ನಡ ಸಾಹಿತ್ಯದ ಅಭ್ಯಾಸ ಮಾಡದೆ, ಭಾಷೆಯನ್ನು ಪ್ರೀತಿಸದೆ ಇದ್ದಿದ್ದರೆ ಇವತ್ತು ಸಹ ಅದೇ ಪರಿಸ್ಥಿತಿಯಲ್ಲಿ ಮುಂದುವರಿಯಬೇಕಾಗಿತ್ತು. ಆದರೆ ಬದುಕಿನ ಆಯ್ಕೆ ನನ್ನ ಕೈಯಲ್ಲಿತ್ತು. ಕಲಾ ವಿಭಾಗವನ್ನು ಆರಿಸಿಕೊಂಡು, ಬದುಕಿನ ಪಥ ಬದಲಿಸಿದೆ ಎಂದು ತಮ್ಮ ಬದುಕಿನ ಹೋರಾಟವನ್ನು ವಿವರಿಸಿದರು. ಡಾ. ಯಲ್ಲಪ್ಪರು ವೈದ್ಯರಾಗಬೇಕೆಂಬ ಕನಸನ್ನು ಹೊತ್ತು ವಿಜ್ಞಾನ ವಿಭಾಗಕ್ಕೆ ಸೇರಿದ ನೆನಪು ಹಂಚಿಕೊಂಡರು. “ನನ್ನ…

Read More

ನನ್ನ ಕಣ್ಣುಗಳು ಅವನ ನಡೆ, ನುಡಿಗಳನ್ನು ಹಿಂಬಾಲಿಸಿದವು. ಅವನ ನಡಿಗೆಯಲ್ಲೇ ಒಂದು ವಿಚಿತ್ರ ಲಯವಿತ್ತು. ಆ ಲಯ, ನನ್ನ ನಾಟಕದ ಮುಖ್ಯ ಪಾತ್ರದಂತೆಯೇ ಕಂಡಿತು. ‘ಯಾರವನು?’ ಎಂದು ನನ್ನ ಸಹೋದ್ಯೋಗಿಯನ್ನು ಕೇಳಿದೆ. ‘ಅವನು ಪ್ರಸಾದರಾವ್. ಒಂದು ರೀತಿಯಲ್ಲಿ ಹುಚ್ಚ. ಅವನ ವಿಷಯದಲ್ಲಿ ಯಾರೂ ತಲೆ ಹಾಕುವುದಿಲ್ಲ’ ಎಂದು ನಕ್ಕ. ಆದರೂ ನನ್ನ ಮನಸ್ಸು ಆತನನ್ನೇ ಹಿಂಬಾಲಿಸಿತು. ಆತ ಇನ್ನೊಬ್ಬರೊಂದಿಗೆ ನಗುತ್ತಾ, ಹರಟುತ್ತಿದ್ದ. ಆ ನಗು, ಆ ಹರಟೆಗಳಲ್ಲಿ ಪಾತ್ರದ ತುಡಿತ ಕಾಣಿಸಿತು. ‘ನನ್ನ ನಾಟಕಕ್ಕೆ ಇವನೇ ತಕ್ಕವನು’ ಎಂದು ಮನಸ್ಸಿನಲ್ಲಿ ನಿರ್ಧರಿಸಿದೆ. ಅವನನ್ನು ಪರಿಚಯಿಸುವಂತೆ ಸಹೋದ್ಯೋಗಿಯನ್ನು ಕೋರಿಕೊಂಡೆ. ಅವನು ವ್ಯಂಗ್ಯವಾಗಿ ನಗುತ್ತಾ, ‘ನಿನ್ನ ಇಷ್ಟ. ಕೋತಿ ಜೊತೆ ಜಗಳವಾಡಬೇಕೆಂದರೆ ನಾನೇನು ಮಾಡಲಿ?’ ಎಂದು ಹೇಳಿದರೂ, ಪ್ರಸಾದರಾವ್‌ನನ್ನು ಕರೆದ. ಪ್ರಸಾದ್ ನಗುತ್ತಾ ನಮ್ಮತ್ತ ಬಂದ. ಕೈಕುಲುಕಿ ಪರಿಚಯವಾದಾಗ, ಯಾವುದೇ ಪೀಠಿಕೆಯಿಲ್ಲದೆ ನೇರವಾಗಿ ವಿಷಯಕ್ಕೆ ಬಂದೆ. ‘ನಾನು ಒಂದು ನಾಟಕ ಬರೆದಿದ್ದೇನೆ. ನಿಮ್ಮ ನಡಿಗೆ, ಭಂಗಿಗಳಿಂದ ನೀವೇ ಆ ಪಾತ್ರಕ್ಕೆ ಸೂಕ್ತರೆಂದು ಅನಿಸಿತು. ನನ್ನ…

Read More

ಮಂಗಳೂರು : ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಮತ್ತು ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಇವರ ಸಹಯೋಗದಲ್ಲಿ ಮಂಗಳೂರು ದಸರಾ ಪ್ರಯುಕ್ತ ‘ಮಂಗಳೂರು ದಸರಾ ಕವಿಗೋಷ್ಠಿ’ಯನ್ನು ದಿನಾಂಕ 23 ಸೆಪ್ಟೆಂಬರ್ 2025ರಂದು ಸಂಜೆ 4-00 ಗಂಟೆಗೆ ಕುದ್ರೋಳಿ ಸಂತೋಷಿ ಕಲಾ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಇವರ ಅಧ್ಯಕ್ಷತೆಯಲ್ಲಿ ‘ಬಹುಭಾಷಾ ಕವಿಗೋಷ್ಠಿ’ ಮತ್ತು ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಡಾ. ಕೆ. ಚಿನ್ನಪ್ಪ ಗೌಡ ಇವರ ಅಧ್ಯಕ್ಷತೆಯಲ್ಲಿ ‘ತುಳು ಕವಿಗೋಷ್ಠಿ’ ನಡೆಯಲಿದೆ.

Read More

ಮಂಗಳೂರು : ಬ್ಯಾರಿ ಎಲ್ತ್ ಕಾರ್ – ಕಲಾವಿದಮಾರೊ ಕೂಟ (ಮೇಲ್ತೆನೆ) ದೇರಳಕಟ್ಟೆ ಇದರ ದಶಮಾನೋತ್ಸವ ಪ್ರಯುಕ್ತ ನೀಡಲಾಗುವ ‘ಮೇಲ್ತೆನೆ’ ಪ್ರಶಸ್ತಿಗೆ ಹಿರಿಯ ಗಾಯಕ, ಕಲಾವಿದ ರಹೀಂ ಬಿ.ಸಿ.ರೋಡ್ ಆಯ್ಕೆಯಾಗಿದ್ದಾರೆ. ದಿನಾಂಕ 30 ಸೆಪ್ಟೆಂಬರ್ 2025ರಂದು ದೇರಳಕಟ್ಟೆಯ ಕಣಚೂರು ಪಬ್ಲಿಕ್ ಸ್ಕೂಲ್‌ನಲ್ಲಿ ನಡೆಯುವ ‘ಮೇಲ್ತೆನೆ ಪತ್ತನೆ ವರ್ಸತ್ತೆ ಜಲ್ಸ್-ಲೇಸ್ 2025’ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನಿಸಲಾಗುವುದು ಎಂದು ‘ಮೇಲ್ತೆನೆ’ಯ ಅಧ್ಯಕ್ಷರಾದ ವಿ. ಇಬ್ರಾಹಿಂ ನಡುಪದವು ತಿಳಿಸಿದ್ದಾರೆ.

Read More

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಸಿಂಗಾರ ಸುರತ್ಕಲ್ ಮತ್ತು ಚೇಳ್ಯಾರು ಸರಕಾರಿ ಪದವಿ ಪೂರ್ವ ಕಾಲೇಜು ಇವುಗಳ ಸಹಭಾಗಿತ್ವದಲ್ಲಿ ‘ನಲ್ಮೆ ಬಲ್ಮೆ’ ವಿದ್ಯಾರ್ಥಿಗಳಿಗೆ ಮೂರು ದಿನಗಳ ರಂಗ ಕಾರ್ಯಾಗಾರವನ್ನು ದಿನಾಂಕ 24 ಸೆಪ್ಟೆಂಬರ್ 2025ರಿಂದ 26 ಸೆಪ್ಟೆಂಬರ್ 2025ರ ತನಕ ನಡೆಯಲಿದೆ. ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ ಗಟ್ಟಿಯವರ ಅಧ್ಯಕ್ಷತೆಯಲ್ಲಿ ಹಿರಿಯ ರಂಗ ನಟಿ ಗೀತಾ ಸುರತ್ಕಲ್ ಇವರು ಈ ಕಾರ್ಯಾಗಾರ ಉದ್ಘಾಟಿಸಲಿದ್ದಾರೆ. ಚೇಳ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ ಜಯಾನಂದ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ವೆಂಕಟೇಶ್ ಶೆಟ್ಟಿ, ಸಮಿತಿಯ ಸದಸ್ಯ ಪುಷ್ಪರಾಜ್ ಶೆಟ್ಟಿ, ರಂಗ ನಿರ್ದೇಶಕ ಜಗನ್ ಪವಾರ್ ಬೇಕಲ್ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Read More

ಪುತ್ತೂರು: ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ, ಮಹಾವಿದ್ಯಾಲಯ(ಸ್ವಾಯತ್ತ) ಇಲ್ಲಿ ಸಂಸ್ಕೃತ ವಿಭಾಗ, ಸಂಸ್ಕೃತ ಸಂಘ, ವಿವೇಕಾನಂದ ಸಂಶೋಧನಾ ಕೇಂದ್ರ, ಸೌರಭ ಪ್ರಸಾರಾಂಗ ಹಾಗೂ ಐಕ್ಯೂಎಸಿಯ ಸಹಯೋಗದಲ್ಲಿ ನಡೆದ ಭಾರತೀಯ ಜೀವನ ದರ್ಶನ ಪ್ರವಚನ ಮಾಲಿಕೆಯ ಮೂರನೆಯ ಹಾಗೂ ನಾಲ್ಕನೆಯ ಸರಣಿ ಕಾರ್ಯಕ್ರಮ ದಿನಾಂಕ 19 ಸೆಪ್ಟೆಂಬರ್ 2025ರಂದು ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ವೇದಾಂತ ವಿಭಾಗದ ಸಹ ಪ್ರಾಧ್ಯಾಪಕ ಡಾ. ವಿಶ್ವನಾಥ ಹೆಗಡೆ ಸುಂಕಸಾಳ ಮಾತನಾಡಿ “ಭಾರತೀಯ ಎಲ್ಲಾ ಶಾಸ್ತ ಗ್ರಂಥಗಳಲ್ಲೂ ಮನಸ್ಸಿನ ಬಗ್ಗೆ ವಿಸ್ತಾರವಾದ ವಿಚಾರಗಳಿವೆ. ಈ ಶಾಸ್ತ್ರಗಳೆಲ್ಲವೂ ನಮ್ಮನ್ನು ನಾವು ತಿಳಿದುಕೊಳ್ಳುವುದಕ್ಕಾಗಿ ಇರುವುದಾಗಿದೆ. ಅಂದಿನ ಋಷಿಮುನಿಗಳು ಹಾಗೂ ವಿಜ್ಞಾನಿಗಳು ಒಂದೊಂದು ಅಧ್ಯಯನ ವಿಭಾಗವನ್ನು ಬೇರೆಬೇರೆಯಾಗಿ ಕಾಣದೇ ಒಂದಾಗಿ ಕಾಣುತ್ತಿದ್ದರು. ಹಾಗೆ ಇಂದಿನ ಆಧುನಿಕ ಸಿದ್ಧಾಂತಗಳಲ್ಲಿರುವ ವಿಷಯವನ್ನೂ ಒಳಗೊಂಡಂತೆ ಅದಕ್ಕೂ ಹೆಚ್ಚಿನ ವಿಷಯಗಳು ನಮ್ಮ ಕೃತಿಗಳಲ್ಲಿವೆ. ವಿದೇಶೀಯರೂ ನಮ್ಮಲ್ಲಿನ ಜ್ಞಾನವನ್ನು ಅವರು ಬಳಸುತ್ತಿರಬೇಕಾದರೆ ಭಾರತೀಯರಾದ ನಾವು ಈ ಶಾಸ್ತ್ರಗ್ರಂಥಗಳು, ಜ್ಞಾನ ಪರಂಪರೆ ಇತ್ಯಾದಿಗಳನ್ನು…

Read More

ಚನ್ನಗಿರಿ : ರಂಗ ಮಿಡಿತ (ರಿ.) ಗೊಪ್ಪೇನಹಳ್ಳಿ ಮತ್ತು ಚಂದಗಿರಿ ನರ್ಸರಿ ಶಾಲೆ ಚನ್ನಗಿರಿ ಆಯೋಜಿಸುತ್ತಿರುವ ‘ಗೊಂಬೆಗಳ ಜೊತೆಯಲಿ’ ಮಕ್ಕಳ ಕಲೆ, ಕಲ್ಪನೆ ಮತ್ತು ಕ್ರಿಯೆಗೊಂದು ಉತ್ಸವವನ್ನು ದಿನಾಂಕ 26 ಸೆಪ್ಟೆಂಬರ್ 2025ರಂದು ಮಧ್ಯಾಹ್ನ 1-30 ಗಂಟೆಗೆ ಚನ್ನಗಿರಿಯ ಚಂದಗಿರಿ ನರ್ಸರಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಅರುಣ ಬಿ.ಟಿ. ಗೊಪ್ಪೇನಹಳ್ಳಿಯವರ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಮಕ್ಕಳ ಕಥೆ ಹಾಡುಗಳ ಗೊಂಬೆಯಾಟ, ಸೂತ್ರದ ಗೊಂಬೆ, ಕಡ್ಡಿ ಗೊಂಬೆ, ಬೆರಳು ಗೊಂಬೆ, ನೆರಳು ಗೊಂಬೆ ಇವುಗಳ ರೋಚಕ ಪರಿಚಯ, ಪೋಷಕರೊಂದಿಗೆ ಗೊಂಬೆ ತಯಾರಿ, ಮಕ್ಕಳಿಗೆ ಗೊಂಬೆಯಾಟ ಅನುಭವ. ಹೆಸರು ನೋಂದಾಯಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ 9481986116 ಮತ್ತು 9448895493 ಸಂಖ್ಯೆಯನ್ನು ಸಂಪರ್ಕಿಸಿರಿ.

Read More

ಬೆಂಗಳೂರು : ಡಾ. ವೇಮಗಲ್ ನಾರಾಯಣಸ್ವಾಮಿ ಸಾಂಸ್ಕೃತಿಕ ಮತ್ತು ಸೇವಾ ಪ್ರತಿಷ್ಠಾನ (ರಿ.) ಇದರ ವತಿಯಿಂದ ನಾಟಕ ಪ್ರದರ್ಶನವನ್ನು ದಿನಾಂಕ 23 ಸೆಪ್ಟೆಂಬರ್ 2025ರಂದು ಸಂಜೆ 3-00 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ. ಹಿರಿಯ ರಂಗಕರ್ಮಿ ಸಿ. ಬಸವಲಿಂಗಯ್ಯ ಇವರು ಚಾಲನೆ ನೀಡಲಿದ್ದು, ದ್ರಾವಿಡ ವಿಶ್ವವಿದ್ಯಾಲಯದ ಡೀನ್ ಎಂ.ಎನ್. ವೆಂಕಟೇಶ್ ಇವರಿಂದ ಪ್ರಾಸ್ತಾವಿಕ ನುಡಿ ಹಾಗೂ ಕರ್ಣಾಟಕ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಪ್ರೊ. ಹಿ.ಚಿ. ಬೋರಲಿಂಗಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ. ಗುಂಡೇಲು ರವೀಂದ್ರ, ವಿನಾಯಕ ನಾಟಕ ಮಂಡಳಿ, ಬೈರೆಡ್ಡಿ ಪಲ್ಲಿ, ಟಿ.ಎನ್. ಕುಪ್ಪಂ, ಚಿತ್ತೂರು ಜಿಲ್ಲೆ ಆಂಧ್ರಪ್ರದೇಶ ತಂಡದಿಂದ ‘ನಲ್ಲತಂಗ’ ಮತ್ತು ‘ಸಾಸುವೆ ಚಿನ್ನಮ್ಮ’ ಎಂಬ ಎರಡು ನಾಟಕಗಳ ಪ್ರದರ್ಶನ ನಡೆಯಲಿದೆ.

Read More

ಕಾಸರಗೋಡು : ಕೇರಳ ಕರ್ನಾಟಕ ಕನ್ನಡ ರಾಜ್ಯೋತ್ಸವ – ಕಾಸರಗೋಡು ಕನ್ನಡ ಗ್ರಾಮೋತ್ಸವದ ಪೋಸ್ಟರ್ ದಿನಾಂಕ 21 ಸೆಪ್ಟೆಂಬರ್ 2024ರಂದು ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಇವರಿಂದ ಬಿಡುಗಡೆಗೊಂಡಿತು. ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಕನ್ನಡ ಗ್ರಾಮ ಕಾಸರಗೋಡು ಇದರ 35ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು 60ನೇ ವರ್ಷದ ಜನ್ಮದಿನಾಚರಣೆ ಮತ್ತು ಕೇರಳ ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಡೆಯುವ ಕಾಸರಗೋಡು ಕನ್ನಡ ಗ್ರಾಮೋತ್ಸವ-2025 ಒಂದು ದಿನ ಕಾರ್ಯಕ್ರಮವು ಕಾಸರಗೋಡು ಕನ್ನಡ ಗ್ರಾಮದಲ್ಲಿ ದಿನಾಂಕ 04 ನವೆಂಬರ್ 2025ರಂದು ಬೆಳಗ್ಗೆ 11-00 ಗಂಟೆಗೆ ಕೇರಳ-ಕರ್ನಾಟಕ ಸಾಹಿತ್ಯ, ಸಾಂಸ್ಕೃತಿಕ ಉತ್ಸವದೊಂದಿಗೆ ಆಚರಿಸಲಾಗುವುದು. ಕಾಸರಗೋಡು ಕನ್ನಡ ಗ್ರಾಮದಲ್ಲಿ ಸೂರ್ಯೋದಯದಿಂದ ಸುಪ್ರಭಾತ ಗಾಯನದೊಂದಿಗೆ, ಕೇರಳ ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕನ್ನಡ ಭುವನೇಶ್ವರಿಯ ಛಾಯಾಚಿತ್ರದ ಅನಾವರಣದೊಂದಿಗೆ ಕನ್ನಡಮ್ಮನ ಕನ್ನಡ ಗ್ರಾಮದಲ್ಲಿ ಶಿವರಾಮ ಕಾಸರಗೋಡು ಅವರ 60ನೇ ಜನ್ಮದಿನೋತ್ಸವ ಷಷ್ಟಬ್ಧಿ ಸಂಭ್ರಮದ, ಧಾರ್ಮಿಕ ಸಂಪ್ರದಾಯದ ಪೂಜೆ ಪುರಸ್ಕಾರದ…

Read More

ಬೇಳ : ಕೇರಳ ರಾಜ್ಯ- ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ದಿನಾಂಕ 20 ಸೆಪ್ಟೆಂಬರ್ 2025ರಂದು ಬೇಳ ಸಂತ ಬರ್ತಲೋಮೆಯ ಹಿರಿಯ ಬುನಾದಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ ಮಾರ್ಗದರ್ಶನ ಅಭಿಯಾನದ 6ನೇ ಶಿಬಿರ ನಡೆಯಿತು. ಈ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಬೇಳ ಸಂತ ಬರ್ತಲೋಮೆಯ ಹಿರಿಯ ಬುನಾದಿ ಶಾಲೆಯ ಸಂಚಾಲಕಿ ಸಿಸ್ಟರ್ ಮಾರ್ಸೆಲಿನ್ ಬ್ರಾಗ್ಸ್ “ಇಂದಿನ ವೇಗದ ಜಗತ್ತಿಗೆ ಚುಟುಕು ಸಾಹಿತ್ಯದ ಅಗತ್ಯ ಇದೆ. ಇಂತಹಾ ಶಿಬಿರಗಳಲ್ಲಿ ಮಕ್ಕಳು ಆಸಕ್ತಿಯಿಂದ ಭಾಗವಹಿಸಬೇಕು. ಕಾಸರಗೋಡಿನ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಈ ಅಭಿಯಾನ ಯೋಜನೆಯು ಶ್ಲಾಘನೀಯ” ಎಂದು ಹೇಳಿದರು. ಬೇಳ ಸಂತ ಬರ್ತಲೋಮೆಯ ಹಿರಿಯ ಬುನಾದಿ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಎಲಿಜಬೆತ್ ಪಿ.ಎ. ಅಧ್ಯಕ್ಷತೆ ವಹಿಸಿ ಮಾತನಾಡಿ “ಚುಟುಕದಂತಹಾ ಚಿಕ್ಕ ಚಿಕ್ಕ ಕವಿತೆಗಳನ್ನು ಬರೆದು ಮಕ್ಕಳು ಬೆಳೆಯಬೇಕು. ನಿರಂತರ ಬರವಣಿಗೆ ಮತ್ತು ಅಧ್ಯಯನದಿಂದ ಉತ್ತಮ ಬರಹಗಳನ್ನು ರಚಿಸಬಹುದು” ಎಂದು ಹೇಳಿದರು. ಕನ್ನಡ ಚುಟುಕು ಸಾಹಿತ್ಯ…

Read More