Author: roovari

ಬಂಟ್ವಾಳ : ಏರ್ಯ ಆಳ್ವ ಫೌಂಡೇಶನ್ ಇದರ ವತಿಯಿಂದ ‘ಏರ್ಯ ಲಕ್ಷ್ಮೀನಾರಾಯಣ ಆಳ್ವ ಶತಮಾನೋತ್ಸವ ಸಮಾರಂಭವು ದಿನಾಂಕ 28 ಆಗಸ್ಟ್ 2025ರಂದು ಬಂಟ್ವಾಳದ ಅಮ್ಟಾಡಿಯ ‘ಏರ್ಯ ಬೀಡುವಿನಲ್ಲಿ’ ನಡೆಯಿತು. ನಾಡೋಜ ಪ್ರೊ. ಹಂಪ ನಾಗರಾಜಯ್ಯ ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮವನ್ನು ಏರ್ಯ ಲಕ್ಷ್ಮೀ ನಾರಾಯಣ ಆಳ್ವರ ಪತ್ನಿ ಆನಂದಿ ಎಲ್. ಆಳ್ವ ಕಾರ್ಯಕ್ರಮ ಉದ್ಘಾಟಿಸಿದರು. ಡಾ. ನಾ. ದಾಮೋದರ ಶೆಟ್ಟಿ ಇವರ ಸಂಪಾದಿತ ‘ಏರ್ಯ ಸಾಹಿತ್ಯ ಮರುಚಿಂತನ’ ಕೃತಿಯನ್ನು ಅನಾವರಣಗೊಳಿಸಿದ ಜಾನಪದ ವಿದ್ವಾಂಸ, ವಿಶ್ರಾಂತ ಕುಲಪತಿ ಪ್ರೊ. ಬಿ.ಎ. ವಿವೇಕ್ ರೈ ಮಾತನಾಡುತ್ತಾ “ಸಾಹಿತ್ಯ, ಸಂಸ್ಕೃತಿ, ಸಂಘಟನೆ, ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಆಳ್ವರ ಬರೆದದ್ದು ಕಡಿಮೆ, ಓದಿದ್ದು ಹೆಚ್ಚು. ಅವರು ಭಾವನಾತ್ಮಕ ಜೀವಿ, ಕವಿ ಹೃದಯಿ. ಅವರ ಬಗ್ಗೆ ಬರೆದಿರುವ ಪುಸ್ತಕದ ತೋರಣ ಹಾಗೂ ಹೂರಣ ಅದ್ಭುತವಾಗಿದೆ” ಎಂದು ಹೇಳಿದರು. ಹಿರಿಯ ಸಾಹಿತಿಗಳಾದ ಡಾ. ಕೆ. ಚಿನ್ನಪ್ಪ ಗೌಡ ಹಾಗೂ ಡಾ. ನಾ. ದಾಮೋದರ ಶೆಟ್ಟಿಯವರಿಗೆ ‘ಏರ್ಯ ಲಕ್ಷ್ಮೀನಾರಾಯಣ ಆಳ್ವ ಶತಮಾನೋತ್ಸವ…

Read More

ಶಿರಸಿ : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಕೊಂಕಣ ಕಲಾ ಮಂಡಳ (ರಿ.) ಶಿರಸಿ ಇವರ ಸಹಯೋಗದಲ್ಲಿ ಶಿರಸಿಯ ರಂಗಧಾಮ, ನೆಮ್ಮದಿ ಆವರಣ ಸಭಾಂಗಣದಲ್ಲಿ ದಿನಾಂಕ 24 ಆಗಸ್ಟ್ 2025ರಂದು ಕೊಂಕಣಿ ಮಾನ್ಯತಾ ದಿನಾಚರಣೆ- 2025ನ್ನು ಆಚರಿಸಲಾಯಿತು. ವಂ. ಸ್ವಾಮಿ ಪೀಟರ್ ಪಿಂಟೊರವರು ಕೊಂಕಣಿ ಧ್ವಜಾರೋಹಣ ಮಾಡಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರು ಪ್ರಾಸ್ತಾವಿಕವಾಗಿ ಮಾತಾನಾಡಿ, “ಕೊಂಕಣಿ ಭಾಷೆಗೆ ಮಾನ್ಯತೆ ದೊರೆತ ಬಗ್ಗೆ ಹಾಗೂ ಇದರ ಮಹತ್ವವನ್ನು ವಿವರಿಸಿ, ಭಾಷೆಗಳನ್ನು ಕಲಿಯುವುದರೊಂದಿಗೆ, ಕೊಂಕಣಿ ಭಾಷೆಯನ್ನು ಮರೆಯದೆ, ಕೊಂಕಣಿ ಮಾತಾನಾಡಬೇಕು. ಕೊಂಕಣಿ ಭಾಷೆಗೆ ಗೌರವ ನೀಡಬೇಕು” ಎಂದು ಕರೆಕೊಟ್ಟರು. ಅತಿಥಿ ಗಣ್ಯರನ್ನು ಸ್ವಾಗತಿಸಿ, ಭಾಷಣ ಹಾಗೂ ಗೀತಗಾಯನ ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಕಲಾತಂಡಗಳಿಗೆ ಶುಭಹಾರೈಸಿದರು. ಶಿರಸಿಯ ಡಾನ್ ಬೊಸ್ಕೊ ಚರ್ಚಿನ ಪ್ರಧಾನ ಧರ್ಮಗುರು ವಂದನೀಯ ಸ್ವಾ. ಪೀಟರ್ ಪಿಂಟೊರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಎಲ್ಲರೂ…

Read More

ಮಂಗಳೂರು : ಹರಿಕಥಾ ಪರಿಷತ್ (ರಿ) ಮಂಗಳೂರು ಇವರು ಸಂತ ಭದ್ರಗಿರಿ ಅಚ್ಯುತದಾಸರಿಗೆ ಮೂವತ್ತು ವರ್ಷಗಳ ಕಾಲ ತಬ್ಲಾ ಸಾಥ್ ನೀಡಿದ ಪ್ರಸಿದ್ಧ ತಬ್ಲಾವಾದಕರೂ, ವೈದಿಕರೂ, ಕೊಡಿಯಾಲ್‌ ಬೈಲ್ ಲಕ್ಷ್ಮೀನಾರಾಯಣಿ ದೇವಸ್ಥಾನದ ಪ್ರಧಾನ ಅರ್ಚಕರೂ ಆಗಿದ್ದ ಕೀರ್ತಿಶೇಷ ವಿದ್ವಾನ್ ಎಂ. ಲಕ್ಷ್ಮೀನಾರಾಯಣ ಭಟ್ ಇವರ ಸಂಸ್ಮರಣಾರ್ಥ ಆಯೋಜಿಸುವ ಹರಿಕಥಾ ಸಪ್ತಾಹವು ದಿನಾಂಕ 30 ಆಗಸ್ಟ್ 2025ರಿಂದ 05 ಸೆಪ್ಟೆಂಬರ್ 2025ರ ವರೆಗೆ ಪ್ರತೀದಿನ ಸಂಜೆ ಗಂಟೆ 6ರಿಂದ ಮಂಗಳೂರಿನ ಶರವು ರಸ್ತೆಯಲ್ಲಿರುವ ಶ್ರೀ ರಾಧಾಕೃಷ್ಣ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ. ದಿನಾಂಕ 30 ಆಗಸ್ಟ್ 2025ರಂದು ಅಪರಾಹ್ನ ಗಂಟೆ 4.30ಕ್ಕೆ ಯುವಕೀರ್ತನಕಾರೆ ಕು. ಗಾಯತ್ರೀ ಆಚಾರ್ಯ ಕೊಂಡೆವೂರು ಇವರಿಂದ ‘ಕನಕನಿಗೊಲಿದ ಗೋವಿಂದ’ ಹರಿಕಥೆ ನಡೆಯಲಿದ್ದು, ಬಳಿಕ ಹರಿಕಥಾ ಪರಿಷತ್ ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಕೆ. ಮಹಾಬಲ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭಾಕಾರ್ಯಕ್ರಮವನ್ನು ಶ್ರೀರಾಧಾಕೃಷ್ಣ ದೇವಸ್ಥಾನ ಶರವು ರಸ್ತೆ ಮಂಗಳೂರು ಇಲ್ಲಿನ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀ ಎಂ. ನಾರಾಯಣ ಭಟ್…

Read More

ಮೂಡುಬಿದಿರೆ : ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಗ್ರಂಥಪಾಲಕರ ಸಂಘ ಮತ್ತು ಆಳ್ವಾಸ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆ ಅಂಗವಾಗಿ ‘ಗ್ರಂಥಾಲಯ ಸೇವೆಗಳ ನಾವಿನ್ಯತೆ ಹಾಗೂ ಪರಿಣಾಮಕಾರಿ ಬಳಕೆಯಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆ’ ಎಂಬ ವಿಷಯದ ಕುರಿತು ರಾಜ್ಯಮಟ್ಟದ ಒಂದು ದಿನದ ಕಾರ್ಯಾಗಾರ ದಿನಾಂಕ 23 ಆಗಸ್ಟ್ 2025ರ ಶನಿವಾರದಂದು ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಜರುಗಿತು. ಮಂಗಳೂರು ವಿ.ವಿ. ಕಾಲೇಜಿನ ಡಾ. ಮಾಧವ ಎಂ.ಕೆ. ಮಾತನಾಡಿ “ಗ್ರಂಥಾಲಯ ವಿಭಾಗದಲ್ಲಿ ಕೆಲಸ ಮಾಡುವವರು ಸರಸ್ವತಿಯ ದಾಸೋಹಿಗಳು. ಅವರ ಸೇವೆ ಅಕ್ಷರಶಃ ಮಾನವ ಸಮಾಜದ ಬೆಳಕಿನ ದೀಪ. ಜ್ಞಾನ ಹಂಚುವ ಕರ‍್ಯದಲ್ಲಿ ತೊಡಗಿರುವ ಅವರು ನಿಜಕ್ಕೂ ಪುಣ್ಯವಂತರು. ಈ ಜಗತ್ತಿನಲ್ಲಿ ಭಗವಂತನು ಮಾನವನಿಗೆ ನೀಡಿರುವ ಅತ್ಯಂತ ಅಮೂಲ್ಯವಾದ ವರವೇ ಸಮಯ. ಧನ, ಪದವಿ, ಸ್ಥಾನಮಾನದಲ್ಲಿ ವ್ಯತ್ಯಾಸಗಳಿರಬಹುದು. ಆದರೆ ಸಮಯ ಮಾತ್ರ ಎಲ್ಲರಿಗೂ ಸಮಾನವಾಗಿ ಹಂಚಲ್ಪಟ್ಟಿದೆ. ಈ ಸಮಯವನ್ನು ಹೇಗೆ ಬಳಸುತ್ತೇವೆ ಎಂಬುದರ ಮೇಲೆಯೇ ಜೀವನದ ಸಾಧನೆ ನಿರ್ಧಾರವಾಗುತ್ತದೆ. ಕಲಿಕೆಯ…

Read More

ಕಾಸರಗೋಡು : ಕಡಬ ಸಂಸ್ಮರಣಾ ಸಮಿತಿ ರಥಬೀದಿ ಮಂಗಳೂರು ಇದರ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ದಿನಾಂಕ 31 ಆಗಸ್ಟ್ 2025ರಂದು ಅಪರಾಹ್ನ 2-00 ಗಂಟೆಗೆ ಕಾಸರಗೋಡಿನ ಶ್ರೀ ಕ್ಷೇತ್ರ ಎಡನೀರು ಮಠದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ‘ಕಡಬ ವಿನಯ ನಾರಾಯಣ ಆಚಾರ್ಯ ಸಂಸ್ಮರಣಾ ಪ್ರಶಸ್ತಿ’ ಪ್ರದಾನ ಹಾಗೂ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ. ಈ ಕಾರ್ಯಕ್ರಮ ಅಧ್ಯಕ್ಷತೆಯನ್ನು ಕಡಬ ಸಂಸ್ಮರಣಾ ಸಮಿತಿಯ ಅಧ್ಯಕ್ಷರಾದ ಶ್ರೀ ಸುಂದರ ಆಚಾರ್ಯ ಬೆಳುವಾಯಿ ಇವರು ವಹಿಸಲಿದ್ದು, ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಡಾ. ಟಿ. ಶ್ಯಾಮ್ ಭಟ್ ಇವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟನೆ ಮಾಡಲಿರುವರು. ಹಿರಿಯ ಭಾಗವತರಾದ ದಿನೇಶ ಅಮ್ಮಣ್ಣಾಯ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಹಿರಿಯ ಕಲಾವಿದರಾದ ಎಂ.ಕೆ. ರಮೇಶ ಆಚಾರ್ಯ ಇವರು ಸಂಸ್ಮರಣಾ ಭಾಷಣ ಹಾಗೂ ತಾಳಮದ್ದಲೆ ಅರ್ಥಧಾರಿ ವಿಶ್ವೇಶ್ವರ ಭಟ್ ಇವರು ಅಭಿನಂದನಾ ಭಾಷಣ ಮಾಡಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಜಿಲ್ಲೆಯ ಸುಪ್ರಸಿದ್ಧ ಕಲಾವಿದರುಗಳಿಂದ ‘ಸುರಭಿಜಾತೆ’ ತಾಳಮದ್ದಲೆ ಮತ್ತು…

Read More

ಪುತ್ತೂರು : ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಇಲ್ಲಿ ಸಂಸ್ಕೃತ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ಸಂಸ್ಕೃತ ಸಂಘ, ವಿವೇಕಾನಂದ ಸಂಶೋಧನಾ ಕೇಂದ್ರ, ಸೌರಭ ಪ್ರಸಾರಾಂಗ ಹಾಗೂ ಐಕ್ಯೂಎಸಿಯ ಸಹಯೋಗದಲ್ಲಿ ನಡೆದ ‘ಭಾರತಿಯ ಜೀವನ ದರ್ಶನ’ ಪ್ರವಚನ ಮಾಲಿಕೆ ಕಾರ್ಯಕ್ರಮ ದಿನಾಂಕ ದಿನಾಂಕ 22 ಆಗಸ್ಟ್ 2025ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮೈಸೂರು ಅಂಭ್ರಣೀ ಗುರುಕುಲದ ನಿರ್ದೇಶಕರಾದ ಡಾ. ಬೆ. ನಾ. ವಿಜಯೀಂದ್ರ ಆಚಾರ್ಯ ಮಾತನಾಡಿ “ನಮ್ಮಲ್ಲಿರುವ ಭಾವನೆಗಳನ್ನು ಜಾಗೃತವಾಗಿಡಲು ಆಧ್ಯಾತ್ಮಿಕ ಜ್ಞಾನ ಸಹಕಾರಿ. ಕಣ್ಣು, ಕಿವಿ ಮುಂತಾದ ಪಂಚೇಂದ್ರಿಯಗಳಿಗೆ ಅದರದ್ದೇ ಆದ ಮಹತ್ವ ಇದೆ. ಅದರ ಸಮರ್ಥ ಬಳಕೆಯಿಂದ ನಾವು ಪ್ರತಿ ವಿಚಾರಗಳ ಬಗ್ಗೆ ವಿಮರ್ಶೆ ಮಾಡಿ ಮುಂದುವರಿಯಬೇಕು. ಮಾನವರ ಬದುಕು ತಿಳಿಯುವುದಕ್ಕಾಗಿ ಇದೆ. ಭಾರತದಲ್ಲಿ ಜನ್ಮ ಪಡೆದಾಗ ಸ್ವರ್ಗ ಪ್ರಾಪ್ತಿಯ ಫಲ ಎಂಬುದು ನಂಬಿಕೆ. ಸಂಕಷ್ಟದ ಸಂದರ್ಭ ಅದನ್ನು ಪರಿಹರಿಸಿ ಮೇಲೇಳುವ ದೇಶ ಇದು. ಹೀಗಿರುವ ದೇಶದಲ್ಲಿ ಯುವ ಸಮಾಜ ಧರ್ಮ ಸಂರಕ್ಷಣೆಯ ಕಾರ್ಯದಲ್ಲಿ…

Read More

ರಾಮನಗರ : ಚುಟುಕು ಸಾಹಿತ್ಯ ಪರಿಷತ್ತು ರಾಮನಗರ ಹಾಗೂ ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ (ರಿ.) ಕಮತಗಿಯ ಸಹಯೋಗದಲ್ಲಿ ದಿನಾಂಕ 30 ಆಗಸ್ಟ್ 2025ರಂದು ರಾಮನಗರದ ನ್ಯೂ ಎಕ್ಸ್ ಪರ್ಟ್ ಕಾಲೇಜಿನ ಸಭಾಂಗಣದಲ್ಲಿ ಸಾಹಿತಿಗಳು, ಕಲಾವಿದರು ಹಾಗೂ ಪೊಲೀಸ್ ಅಧಿಕಾರಿಗಳಾದ ಡಾ. ಶೈಲೇಶ್ ಕಾಕೋಳು ಇವರ ಸರ್ವಾಧ್ಯಕ್ಷತೆಯಲ್ಲಿ ‘ಚುಟುಕು ಸಾಹಿತ್ಯ ಸಮ್ಮೇಳನ’ವನ್ನು ಹಮ್ಮಿಕೊಳ್ಳಲಾಗಿದೆ. ಸಮಾರಂಭದಲ್ಲಿ ಚುಟುಕು ಕವಿಗೋಷ್ಠಿ, ಉಪನ್ಯಾಸ, ವಿಚಾರಗೋಷ್ಠಿ, ಪುಸ್ತಕ ಬಿಡುಗಡೆ, ಪ್ರಶಸ್ತಿ ಪ್ರಾದಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ. ಎಂ.ಜಿ.ಆರ್. ಅರಸು ಇವರ ಅಧ್ಯಕ್ಷತೆಯಲ್ಲಿ ಮಾಜಿ ಶಾಸಕರಾದ ಕೆ. ರಾಜು ಇವರು ಈ ಸಮ್ಮೇಳನದ ಉದ್ಘಾಟನೆ ಮಾಡಲಿದ್ದಾರೆ. ವಿಚಾರಗೋಷ್ಠಿಯಲ್ಲಿ ‘ಚುಟುಕು ಸಾಹಿತ್ಯ ಬೆಳೆದು ಬಂದ ಹಾದಿ’ ಎಂಬ ವಿಷಯದ ಬಗ್ಗೆ ಸಾಹಿತಿ ರಮೇಶ ಹೊಸದೊಡ್ಡಿ ಇವರು ಉಪನ್ಯಾಸ ನೀಡಲಿದ್ದಾರೆ. ಹಿರಿಯ ಸಾಹಿತಿ ಕೂ.ಗಿ. ಗಿರಿಯಪ್ಪ ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ಪ್ರಸ್ತುತಗೊಳ್ಳಲಿದ್ದು, ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮತ್ತು ಸಾಂಸ್ಕೃತಿಕ…

Read More

ತುಮಕೂರು: ತುಮಕೂರು ಕೃಷ್ಣಮಂದಿರದಲ್ಲಿ ಯಶಸ್ವಿ ಕಲಾವೃಂದ ಕೊಮೆ ತೆಕ್ಕಟ್ಟೆ ಸಂಸ್ಥೆಯ ಕಲಾವಿದರು ಕೃಷ್ಣಾಷ್ಠಮಿ ಕಾರ್ಯಕ್ರಮದ ಪ್ರಯುಕ್ತ ‘ಹೂವಿನ ಕೋಲು’ ಮತ್ತು ಯಕ್ಷಗಾನ ‘ಕೃಷ್ಣಲೀಲೆ-ಕಂಸವಧೆ’ ಪ್ರದರ್ಶನ ದಿನಾಂಕ 08 ಆಗಸ್ಟ್ 2025 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಯಶಸ್ವಿ ಕಲಾವೃಂದದ ಗುರುಗಳಾದ ಲಂಬೋದರ ಹೆಗಡೆ ನಿಟ್ಟೂರು ಮತ್ತು ಕಾರ್ಯದರ್ಶಿ ವೆಂಕಟೇಶ ವೈದ್ಯ ಇವರನ್ನು ಗೌರವಿಸಿದ ತುಮಕೂರಿನ ಉದ್ಯಮಿ ಕೋಣಿ ನಾಗರಾಜ ಧನ್ಯ ಮಾತನಾಡಿ “ತುಮಕೂರಿನ ಮಹಾ ಜನತೆಗೆ ಕರಾವಳಿಯ ಯಕ್ಷಗಾನ ಪ್ರಕಾರ ಹೂವಿನಕೋಲು ಕಾರ್ಯಕ್ರಮ ನೀಡಿ, ಪರಿಚಯಿಸಿ, ಕರಾವಳಿಯ ಕಲೆಯನ್ನು ಎತ್ತಿ ಹಿಡಿದ ಸಂಸ್ಥೆ ಯಶಸ್ವಿ ಕಲಾವೃಂದ. ಮಕ್ಕಳ ಮೂಲಕ ಕಲೆಯ ಪ್ರಬುದ್ಧತೆಯನ್ನು ರಂಗದಲ್ಲಿ ಮೆರೆವ ಸಂಸ್ಥೆ ಅದ್ಭುತ ಯಕ್ಷಗಾನ ಪ್ರದರ್ಶನದಿಂದ ಸಂಸ್ಥೆ ಯಶಸ್ವೀ ದಿನಗಳತ್ತ ದಾಪುಗಾಲು ಇಡುತ್ತಿರುವುದು ನಿಜಕ್ಕೂ ಶ್ಲಾಘನೀಯ” ಎಂದರು. ದೇವಳದ ಜನಾರ್ಧನ ಭಟ್, ಪ್ರಾಚಾರ್ಯ ದೇವದಾಸ್ ರಾವ್ ಕೂಡ್ಲಿ, ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸುದರ್ಶನ ಉರಾಳ ಕೋಟ, ಉಪನ್ಯಾಸಕ ಶಶಾಂಕ್ ಪಟೇಲ್, ರಾಹುಲ್ ಕುಂದರ್ ಕೋಡಿ ಕನ್ಯಾಣ, ದೇವಳದ ಆಡಳಿತ…

Read More

ಪುತ್ತೂರು : ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ಮದಗ ಶ್ರೀ ಜನಾರ್ದನ ದೇವಳದ ವಠಾರದಲ್ಲಿ ದಿನಾಂಕ 27 ಆಗಸ್ಟ್ 2025ರಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುಂಜಾರು ಪಡ್ನೂರು ಇದರ 38ನೇ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ತಾಳಮದ್ದಳೆ ‘ದಾಶರಥಿ ದರ್ಶನ’ ಎಂಬ ಆಖ್ಯಾನದೊಂದಿಗೆ ಜರಗಿತು. ಹಿಮ್ಮೇಳದಲ್ಲಿ ಭಾಗವತರಾಗಿ ಸುಬ್ರಾಯ ಸಂಪಾಜೆ ಹಾಗೂ ಚೆಂಡೆ, ಮದ್ದಲೆಗಳಲ್ಲಿ ಪದ್ಯಾಣ ಜಯರಾಮ ಭಟ್ ಹಾಗೂ ಮುರಳೀಧರ ಕಲ್ಲೂರಾಯ ಸಹಕರಿಸಿದರು. ಮುಮ್ಮೇಳದಲ್ಲಿ ಜಯಂತಿ ಹೆಬ್ಬಾರ್ (ಶ್ರೀ ಕೃಷ್ಣ), ಶುಭಾ ಗಣೇಶ್ (ನಾರದ), ಕಿಶೋರಿ ದುಗ್ಗಪ್ಪ ನಡುಗಲ್ಲು (ಜಾಂಬವ), ಹರಿಣಾಕ್ಷಿ ಜೆ. ಶೆಟ್ಟಿ (ಬಲರಾಮ) ಸಹಕರಿಸಿದರು. ಸಂಘದ ಕೋಶಾಧಿಕಾರಿ ದುಗ್ಗಪ್ಪ ನಡುಗಲ್ಲು ಸ್ವಾಗತಿಸಿ, ನಿರ್ದೇಶಕ ಭಾಸ್ಕರ ಬಾರ್ಯ ವಂದಿಸಿದರು. ಗಣೇಶೋತ್ಸವ ಸಮಿತಿ ವತಿಯಿಂದ ಕಲಾವಿದರಿಗೆ ಶ್ರೀ ದೇವರ ಪ್ರಸಾದ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.]

Read More

ಮೂಡುಬಿದಿರೆ : ಕನ್ನಡ ಸಾಹಿತ್ಯ ಪರಿಷತ್ ಮೂಡುಬಿದಿರೆ ತಾಲೂಕು ಘಟಕ ಮತ್ತು ಎಸ್.ಎನ್. ಮೂಡುಬಿದಿರೆ ಪಾಲಿಟೆಕ್ನಿಕ್ ಎನ್.ಎಸ್.ಎಸ್. ಘಟಕದ ವತಿಯಿಂದ ನಡೆದ ‘ಕನ್ನಡ ಕಂಪು’ ಕನ್ನಡ ಕಲರವ ಮತ್ತು ಉಪನ್ಯಾಸ ಕಾರ್ಯಕ್ರಮವು ದಿನಾಂಕ 28 ಆಗಸ್ಟ್ 2025ರಂದು ಎಸ್.ಎನ್.ಎಂ. ಪಾಲಿಟೆಕ್ನಿಕ್ ಕಾಲೇಜು ಸಭಾಂಗಣದಲ್ಲಿ ನಡೆಯಿತು. ವಿದ್ಯಾರ್ಥಿನಿಯರಾದ ಮೇಘನಾ ಮತ್ತು ಮನ್ವಿತಾ ಇವರ ಪ್ರಾರ್ಥನೆ ಮೂಲಕ ಸಭಾ ಕಾರ್ಯಕ್ರಮವನ್ನು ಪ್ರಾರಂಭವಾಯಿತು. ಎನ್.ಎಸ್.ಎಸ್. ಘಟಕ ನಾಯಕರ ಕನ್ನಡ ನೃತ್ಯ, ವಿದ್ಯಾರ್ಥಿನಿಯರಾದ ಚಿತ್ರಶ್ರೀ ಮತ್ತು ಮನ್ವಿತಾ ಇವರ ಕನ್ನಡದ ಮಾತು, ಸುದರ್ಶನ್ ಇವರ ಕನ್ನಡದ ಹಾಡು ಕಾರ್ಯಕ್ರಮಕ್ಕೆ ಮುದ ನೀಡಿತ್ತು. ಮುಖ್ಯ ಉಪನ್ಯಾಸಕರಾಗಿ ಜೈನ ಪ್ರೌಢಶಾಲೆಯ ಕನ್ನಡ ಪ್ರಾಧ್ಯಾಪಕರಾದ ನಿತೇಶ್ ಬಲ್ಲಾಳ್, ಅತಿಥಿಯಾಗಿ ಸದಾನಂದ ನಾರಾವಿ, ಅಧ್ಯಕ್ಷತೆಯನ್ನು ಕ.ಸಾ.ಪ. ಅಧ್ಯಕ್ಷರಾದ ಶ್ರೀ ವೇಣುಗೋಪಾಲ ಶೆಟ್ಟಿ ವಹಿಸಿದ್ದು, ಪಾಲಿಟೆಕ್ನಿಕ್ ನ ಎಲೆಕ್ಟ್ರಾನಿಕ್ಸ್ ವಿಭಾಗದ ಶ್ರೀಮತಿ ರಾಜೇಶ್ವರಿ ಕೆ.ಎಸ್., ಎನ್.ಎಸ್.ಎಸ್. ಅಧಿಕಾರಿಗಳಾದ ರಾಮ್ ಪ್ರಸಾದ್ ಮತ್ತು ಗೋಪಾಲಕೃಷ್ಣ ಉಪಸ್ಥಿತರಿದ್ದರು. ಶಿಬಾನಿ ಕಾರ್ಯಕ್ರಮ ನಿರೂಪಿಸಿ, ಪೂರ್ಣಿಮಾ ಸ್ವಾಗತಿಸಿ, ವಿನೋದ್ ಧನ್ಯವಾದ…

Read More