Author: roovari

ಪುತ್ತೂರು : ನೃತ್ಯೋಪಾಸನಾ ಕಲಾ ಅಕಾಡೆಮಿ ಪುತ್ತೂರು ಇದರ ‘ನೃತ್ಯ ತರಂಗಿಣಿ’ ಸರಣಿ ಕಾರ್ಯಕ್ರಮದ ಅಂಗವಾಗಿ ಮಾಸ್ಟರ್ ಶಮಂತಕ ಜೊತೆಗಿನ ಮುಕ್ತ ಸಂವಾದ ಕಾರ್ಯಕ್ರಮವು ದಿನಾಂಕ 21 ಡಿಸೆಂಬರ್ 2025ರಂದು ಬರೆಕೆರೆ ವೆಂಕಟರಮಣ ಸಭಾಭವನದಲ್ಲಿ ನಡೆಯಿತು. ಡ್ಯಾನ್ಸ್ ಫೆಡರೇಶನ್ ಆಫ್ ಇಂಡಿಯಾದ ಯುವಕಲಾ ಪ್ರಶಸ್ತಿ ಪುರಸ್ಕೃತ ಭರತನಾಟ್ಯ ಬಾಲ ಕಲಾವಿದ ಮಾಸ್ಟರ್ ಶಮಂತಕ ಹಾಗೂ ಅವರ ತಾಯಿ ವಿದುಷಿ ಸವಿತಾ ಹೆಗಡೆ ಇವರೊಂದಿಗೆ ಸಂವಾದ ಏರ್ಪಟ್ಟಿತು. ವಿದುಷಿ ಸವಿತಾ ಹೆಗಡೆಯವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ನೃತ್ಯೋಪಾಸನಾ ಕಲಾ ಅಕಾಡೆಮಿ ಅಧ್ಯಕ್ಷ ಮಂಜುನಾಥ ಪಿ.ಎಸ್. ಹಾಗೂ ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್ ಉಪಸ್ಥಿತರಿದ್ದರು. ಮಾಸ್ಟರ್ ಶಮಂತಕನ ನೃತ್ಯಾಭ್ಯಾಸ ಆರಂಭದ ಕುರಿತು ವಿದುಷಿ ಸವಿತಾ ಹೆಗಡೆ ತಿಳಿಸಿದರು. ಅದರಂತೆಯೇ ವಿದ್ಯಾರ್ಥಿಗಳಲ್ಲಿ ಇರಬೇಕಾದ ಆಸಕ್ತಿ, ಪ್ರತಿನಿತ್ಯದ ಅಭ್ಯಾಸ, ಹಾಗೆಯೇ ನೃತ್ಯದಲ್ಲಿ ಅಡವುಗಳ ಹಾಗೂ ವ್ಯಾಯಾಮ ಕ್ರಿಯೆಗಳ ಪ್ರಾಮುಖ್ಯತೆಯ ಕುರಿತು ವಿವರಿಸಿದರು. ಮಕ್ಕಳ ಆಸಕ್ತಿಯ ವಿಷಯದಲ್ಲಿ ಪೋಷಕರು ನೀಡಬೇಕಾದ ಪೋತ್ಸಾಹದ ಬಗೆಗೆ ವಿವರಣೆ ನೀಡಿದರು.…

Read More

ಮಂಗಳೂರು : ಮಂಗಳೂರಿನ ಜರ್ನಿ ಥಿಯೇಟರ್ ಗ್ರೂಪ್‌ನ ಸದಸ್ಯರು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಎಲ್.ಸಿ.ಆರ್.ಐ. ಸಭಾಂಗಣದಲ್ಲಿ ದಿನಾಂಕ 19 ಡಿಸೆಂಬರ್ 2025ರಂದು ‘ಸಾಹೇಬರು ಬರುತ್ತಾರೆ’ ನಾಟಕವನ್ನು ಪ್ರದರ್ಶಿಸಿದರು. ನಾಟಕದ ಉದ್ಘಾಟನೆಯನ್ನು ಡಾ. ಆರ್. ನರಸಿಂಹ ಮೂರ್ತಿ ನೆರವೇರಿಸಿದರು. ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಉಪಕುಲಪತಿ ವಂದನೀಯ ಡಾ. ಪ್ರವೀಣ್ ಮಾರ್ಟಿನ್ ಎಸ್.ಜೆ. ನಾಟಕಕ್ಕೆ ಶುಭಹಾರೈಸಿದರು. ತ್ರಿಪುರಾದ ಇಂಟರ್ ಕಲ್ಚರ್ ಥಿಯೇಟರ್ ಇನ್‌ಸ್ಟಿಟ್ಯೂಟ್ (ಐ.ಸಿ.ಟಿ.ಐ.)ನ ಪ್ರೊಫೆಷನಲ್ ಡಿಪ್ಲೊಮಾ ತರಬೇತಿಗೆ ಆಯ್ಕೆಯಾಗಿರುವ ಅವಿನಾಶ್ ರೈ ಕುಂಬ್ಳೆ ಇವರನ್ನು ಗೌರವಿಸಲಾಯಿತು. ತ್ರಿಪುರಾದ ಐ.ಸಿ.ಟಿ.ಐ.ನ ದ್ವಿತೀಯ ವರ್ಷದ ವಿದ್ಯಾರ್ಥಿ ಜರ್ನಿಯ ಸದಸ್ಯ ಮನೀಷ್ ಜೆ. ಪಿಂಟೋ, ನಾಟಕ ನಿರ್ದೇಶಕ ಚೇತನ್ ಗಣೇಶಪುರ, ಜರ್ನಿಯ ಶಶಾಂಕ್ ಐತಾಳ್ ಮತ್ತು ಮೇಘನಾ ಕುಂದಾಪುರ ಉಪಸ್ಥಿತರಿದ್ದರು. ಬಳಿಕ ನಿಕೋಲಾಯ್ ಗೊಗೋಲ್ ನ ‘ದಿ ಗವರ್ನಮೆಂಟ್ ಇನ್‌ಸ್ಪೆರ್ಕ್ಷ’ನ್ನು ಕೆ.ವಿ. ಅಕ್ಷರ ಮತ್ತು ಕೆ.ವಿ. ಸುಬ್ಬಣ್ಣ ಕನ್ನಡ ಅನುವಾದಿಸಿದ ‘ಸಾಹೇಬರು ಬರುತ್ತಾರೆ’ ನಾಟಕ ಪ್ರದರ್ಶನಗೊಂಡಿತು. ಈ ನಾಟಕವನ್ನು ಯುವ ನಿರ್ದೇಶಕ ಚೇತನ್ ಗಣೇಶಪುರ…

Read More

ಉಡುಪಿ : ಅನಿಶ ಗಾನಕೂಟ ಉಡುಪಿ ಪ್ರಸ್ತುತ ಪಡಿಸುವ ‘ಶ್ರೀಕಾಂತ ಸೋಮಯಾಜಿ ಸಂಗೀತ ಮಾಲಿಕೆ’ ಕಾರ್ಯಕ್ರಮವನ್ನು ದಿನಾಂಕ 27 ಡಿಸೆಂಬರ್ 2025ರಂದು ಸೋಮಯಾಜಿಯವರ ಮನೆಯಲ್ಲಿ ಆಯೋಜಿಸಲಾಗಿದೆ. ಸಂಜೆ 4-00 ಗಂಟೆಗೆ ಬೆಂಗಳೂರಿನ ಶ್ರೀಮತಿ ಸಿಂಚನಾ ಮೂರ್ತಿ ಮತ್ತು ತಂಡ ದವರಿಂದ ಭಕ್ತಿ ಭಾವ ಗಾನ ಸಿಂಚನ ಹಾಗೂ 6-00 ಗಂಟೆಗೆ ಸುವಿಕಾ ಕೋಟ ಇವರಿಂದ ಡಾ. ಶ್ರೀಪಾದ ಭಟ್ ಇವರ ನಿರ್ದೇಶನದಲ್ಲಿ ಕಾವ್ಯ ಹಂದೆ ಅಭಿನಯದ ‘ಹಕ್ಕಿ ಮತ್ತು ಅವಳು’ ಏಕವ್ಯಕ್ತಿ ನಾಟಕ ಪ್ರದರ್ಶನ ನಡೆಯಲಿದೆ.

Read More

ಸುಳ್ಯ : ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ದಿನಾಂಕ 27 ಮತ್ತು 28 ಡಿಸೆಂಬರ್ 2025ರಂದು ರಂಗಮನೆ ಅಡಿಟೋರಿಯಂನಲ್ಲಿ ನೀನಾಸಂ ತಿರುಗಾಟದ ನಾಟಕಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ದಿನಾಂಕ 27 ಡಿಸೆಂಬರ್ 2025ರ ಶನಿವಾರದಂದು ಲೇಖಕಿ ಬಾನು ಮುಷ್ತಾಕ್ ರವರ ಕತೆಯಾಧಾರಿಸಿ ಡಾ. ಎಂ. ಗಣೇಶ್ ನಿರ್ದೇಶಿಸಿದ ‘ಹೃದಯದ ತೀರ್ಪು’ ಎಂಬ ನಾಟಕ ಪ್ರದರ್ಶನಗೊಳ್ಳಲಿದೆ. ದಿನಾಂಕ 27 ಡಿಸೆಂಬರ್ 2025ರ ಭಾನುವಾರದಂದು ಮಲೆಯಾಳ ಮೂಲ ಜಿ. ಶಂಕರ್ ಪಿಳ್ಳೈ ರಚಿಸಿದ, ಡಾ. ನಾ. ದಾಮೋದರ ಶೆಟ್ಟಿ ಕನ್ನಡಕ್ಕೆ ಅನುವಾದಿಸಿ, ಶಂಕರ್ ವೆಂಕಟೇಶ್ವರ್ ನಿರ್ದೇಶಿಸಿದ ‘ಅವತರಣಮ್ ಭ್ರಾಂತಾಲಯಮ್’ ಎಂಬ ನಾಟಕ ಪ್ರದರ್ಶನಗೊಳ್ಳಲಿದೆ. ಯಾವುದೇ ಸಭಾ ಕಾರ್ಯಕ್ರಮ ಇರುವುದಿಲ್ಲ. ಪ್ರತಿದಿನ ಸಂಜೆ ಗಂಟೆ 6-45ಕ್ಕೆ ಸರಿಯಾಗಿ ಆರಂಭವಾಗಲಿರುವ ನಾಟಕಕ್ಕೆ ಪ್ರವೇಶ ಉಚಿತವಾಗಿದ್ದು ಹತ್ತು ನಿಮಿಷ ಮೊದಲೇ ಬರಬೇಕೆಂದು ರಂಗಮನೆಯ ಅಧ್ಯಕ್ಷರಾದ ಡಾಜೀವನ್ ರಾಂ ಸುಳ್ಯ ತಿಳಿಸಿದ್ದಾರೆ. ಎರಡೂ ವಿಭಿನ್ನ ನಾಟಕಗಳು ರಾಜ್ಯಾದ್ಯಂತ ಸಾಕಷ್ಟು ಸುದ್ದಿ…

Read More

ಪುತ್ತೂರು : ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ದ.ಕ. ಜಿಲ್ಲಾಡಳಿತ ವತಿಯಿಂದ, ನೃತ್ಯೋಪಾಸನಾ ಕಲಾ ಅಕಾಡೆಮಿ ಪುತ್ತೂರು ಇದರ ಸಹಯೋಗದಲ್ಲಿ ದಿನಾಂಕ 20 ಡಿಸೆಂಬರ್ 2025ರಂದು ಗಡಿ-ಸಂಸ್ಕೃತಿ ಉತ್ಸವದ ಅಂಗವಾಗಿ ‘ಕಲಾರ್ಣವ-2025’ ಭಾವ-ರಾಗ-ತಾಳ ಕಾರ್ಯಕ್ರಮವು ಶ್ರೀ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಸಕ ಅಶೋಕ್ ರೈ ಇವರು ಉದ್ಘಾಟಿಸಿ “ಕರ್ನಾಟಕದ ಎರಡನೇ ಹೆಚ್ಚುವರಿ ಭಾಷೆಯನ್ನಾಗಿ ತುಳುವನ್ನು ಘೋಷಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ. ಆಂಧ್ರಪ್ರದೇಶದಲ್ಲಿ 2ನೇ ಭಾಷಾ ಪ್ರಕ್ರಿಯೆ ಮಾಡಲಾದ ವಿಧಾನವನ್ನು ಅಧ್ಯಯನ ಮಾಡಲು ಪರಿಣಿತರ ತಂಡ ಕಳುಹಿಸಲಾಗಿದ್ದು, ಕೊನೆಯ ಹಂತದಲ್ಲಿದೆ. ಗಡಿನಾಡಿನ ತುಳು ಭಾಷೆಗೆ ಮಾನ್ಯತೆ ದೊರಕಿಸುವಲ್ಲಿ ಸರಕಾರದ ಮಟ್ಟದಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರವೂ ಸಹಕರಿಸಬೇಕು” ಎಂದು ಮನವಿ ಮಾಡಿದರು. ಎಡನೀರು ಮಠದ ಶ್ರೀ ಸಚ್ಚಿದಾನಂದ ಸ್ವಾಮೀಜಿ ಆಶೀರ್ವಚನ ನೀಡಿ, “ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಗಳು ನಿಂತ ನೀರಾಗದೆ ನಿರಂತರ ಚಲನೆಯಿರಬೇಕು. ಇದಕ್ಕೆ ಸೂಕ್ತ ರೀತಿಯ ಪ್ರೋತ್ಸಾಹ ಸಿಗಬೇಕು. ಗಡಿ ಪ್ರದೇಶದಲ್ಲಿ ಕನ್ನಡವನ್ನು ಬೆಳೆಸಿ, ಉಳಿಸುವ ಕೆಲಸವನ್ನು…

Read More

ಉಡುಪಿ : ಶ್ರೀ ನಟರಾಜ ನೃತ್ಯನಿಕೇತನ ಚಿತ್ರಪಾಡಿ ಸಾಲಿಗ್ರಾಮ ಉಡುಪಿ ಪ್ರಸ್ತುತ ಪಡಿಸುವ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಐರೋಡಿ ಸಹಯೋಗದೊಂದಿಗೆ 32ನೇ ವಾರ್ಷಿಕೋತ್ಸವ ‘ನೃತ್ಯೋಲ್ಲಾಸ 2025’ ಕಾರ್ಯಕ್ರಮವನ್ನು ದಿನಾಂಕ 25 ಡಿಸೆಂಬರ್ 2025ರಂದು ಸಂಜೆ 5-00 ಗಂಟೆಗೆ ಸಾಲಿಗ್ರಾಮ ಗುಂಡ್ಮಿಯ ಸದಾನಂದ ರಂಗಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರೀ ರಾಜೇಂದ್ರ ಎಸ್. ನಾಯಕ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ರಾಜಶೇಖರ ಹೆಬ್ಬಾರ್ ಇವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಸಾಧಕ ಪ್ರಶಸ್ತಿ ಪುರಸ್ಕಾರ ಮತ್ತು ಸಾಧಕ ಸಿರಿ ಪುರಸ್ಕಾರ ಪ್ರದಾನ ಹಾಗೂ ಸಂಸ್ಥೆಯ ವಿದ್ಯಾರ್ಥಿಗಳು ನೂಪುರದ ನಿನಾದಗಳ ಸರಮಾಲೆಯೊಂದಿಗೆ ಹೆಜ್ಜೆಗಳನ್ನಿಡಲಿದ್ದಾರೆ.

Read More

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು 2024 ಹಾಗೂ 2025ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಅರ್ಜಿಯನ್ನು ಆಹ್ವಾನಿಸಿದೆ. ಅರ್ಜಿಯನ್ನು ಲೇಖಕರು ಅಥವಾ ಪ್ರಕಾಶಕರು ಸಲ್ಲಿಸಬಹುದಾಗಿದೆ. 01 ಜನವರಿ 2024ರಿಂದ 31 ಡಿಸೆಂಬರ್ 2024ರವರೆಗೆ ಹಾಗೂ 01 ಜನವರಿ 2025ರಿಂದ 31 ಡಿಸೆಂಬರ್ 2025ರ ಅವಧಿಯಲ್ಲಿ ಪ್ರಕಟಗೊಂಡ ಎರಡು ವರ್ಷಗಳ ಪ್ರತ್ಯೇಕ ಸಾಲಿನ ಪುಸ್ತಕಗಳನ್ನು ಪುಸ್ತಕ ಬಹುಮಾನಕ್ಕೆ ಪರಿಗಣಿಸಲಾಗುತ್ತದೆ. ತುಳು ಕವನ ಸಂಕಲನ, ತುಳು ಕಥಾ ಸಂಕಲನ, ತುಳು ಕಾದಂಬರಿ, ತುಳು ಕಾವ್ಯ, ತುಳು ನಾಟಕ, ತುಳುವಿನ ಬಗ್ಗೆ ಅಧ್ಯಯನ ಗ್ರಂಥ ಹಾಗೂ ತುಳುವಿನಿಂದ ಇತರ ಭಾಷೆಗೆ ಹಾಗೂ ಇತರ ಭಾಷೆಯಿಂದ ತುಳುವಿಗೆ ಭಾಷಾಂತರಿತ ಕೃತಿಗಳನ್ನು ಪುಸ್ತಕ ಬಹುಮಾನಕ್ಕೆ ಆಹ್ವಾನಿಸಲಾಗಿದೆ. ಈ ಪ್ರಕಾರಗಳಲ್ಲಿ ಅಕಾಡೆಮಿಯು ಹೆಚ್ಚು ಸಂಖ್ಯೆಯನ್ನು ಸ್ವೀಕರಿಸುವ ಪುಸ್ತಕಗಳ 3 ಪ್ರಕಾರಗಳನ್ನು ಮಾತ್ರ ಪುಸ್ತಕ ಬಹುಮಾನಕ್ಕೆ ಪರಿಗಣಿಸಲಾಗುವುದು. ಇತರ ಕೃತಿಗಳನ್ನು ವಿವಿಧ ಪುಸ್ತಕ ದತ್ತಿ ಬಹುಮಾನಕ್ಕೆ ಪರಿಗಣಿಸಲಾಗುವುದು. ಪುಸ್ತಕಗಳ ತಲಾ 4 ಪ್ರತಿಗಳನ್ನು ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು. ಪುಸ್ತಕ ಬಹುಮಾನಕ್ಕೆ ಅರ್ಜಿ…

Read More

ಮಂಗಳೂರು : ಡಾ. ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೇಬಲ್ ಟ್ರಸ್ಟ್ ನೀಡುವ 2025ರ ಸಾಲಿನ ಶೇಣಿ ಪ್ರಶಸ್ತಿಗೆ ಹಿರಿಯ ತಾಳಮದ್ದಳೆ ಅರ್ಥದಾರಿ, ಪ್ರವಚನಕಾರ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಆಯ್ಕೆಯಾಗಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಕೂಡ್ಲು ಮಹಾಬಲ ಶೆಟ್ಟಿ ತಿಳಿಸಿದ್ದಾರೆ. ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಬಂಟ್ವಾಳ ತಾಲೂಕಿನ ಮೂಡಂಬೈಲಿನ ಹೆಸರಾಂತ ಚಕ್ರಕೋಡಿ ಮನೆತನದಲ್ಲಿ 1936ರಲ್ಲಿ ಜನಿಸಿದರು. ಕೈಕೆಯಿ, ಅಂಬೆ, ದೌಪದಿ, ತಾರೆ, ಸೀತೆ, ಮಂಡೋದರಿ, ಕಯಾದು ಮೊದಲಾದ ಸ್ತ್ರೀಪಾತ್ರಗಳಿಂದ ಪ್ರಸಿದ್ದರಾಗಿದ್ದಾರೆ. ಟ್ರಸ್ಟ್ ವತಿಯಿಂದ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಸಹಯೋಗದಲ್ಲಿ ದಿನಾಂಕ 25 ಡಿಸೆಂಬರ್ 2025ರಂದು ಸಂಜೆ 5-00 ಗಂಟೆಗೆ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ರೂ.30,000/- ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸುರೇಂದ್ರ ರಾವ್ ದೀಪ ಪ್ರಜ್ವಲನೆ ಮಾಡಲಿದ್ದು, ಶೇಣಿ ಗೋಪಾಲಕೃಷ್ಣಭಟ್ ಚಾರಿಟೆಬಲ್ ಟ್ರಸ್ಟ್ ಗೌರವಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು…

Read More

ಕಾಸರಗೋಡು : ಕಾಸರಗೋಡಿನ ಬದಿಯಡ್ಕ ಬಳಿಯ ವೀಣಾವಾದಿನಿ ಸಂಗೀತ ಹಾಗೂ ವೈದಿಕ – ತಾಂತ್ರಿಕ ವಿದ್ಯಾಪೀಠದ ವಾರ್ಷಿಕೋತ್ಸವ ‘ವೇದ ನಾದ ಯೋಗ ತರಂಗಿಣಿ’ ಸಾಂಸ್ಕೃತಿಕ ವೈಭವವು ದಿನಾಂಕ 25ರಿಂದ 28 ಡಿಸೆಂಬರ್ 2025ರವರೆಗೆ ವೈದಿಕ, ತಾಂತ್ರಿಕ, ಯೋಗ, ಸಂಗೀತ, ನೃತ್ಯ ಮುಂತಾದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬಳ್ಳಪದವು ನಾರಾಯಣೀಯಂ ಆವರಣದಲ್ಲಿ ನಡೆಯಲಿದೆ. ದಿನಾಂಕ 25 ಡಿಸೆಂಬರ್ 2025ರಂದು ಬೆಳಗ್ಗೆ 5-00 ಗಂಟೆಗೆ ಮಹಾಗಣಪತಿ ಹೋಮ, ಲಕ್ಷಾರ್ಚನೆ, ಚಕ್ರಾಬ್ಬಪೂಜೆ ಮತ್ತು ಸಂಜೆ 6-30ಕ್ಕೆ ನವಗ್ರಹಪೂಜೆ ಹಾಗೂ ಪೂಜೆಯ ಜೊತೆ ವೀಣಾವಾದಿನಿಯ ವಿದ್ಯಾರ್ಥಿ ಕಲಾವಿದರಿಂದ ನವಗ್ರಹ ಕೃತಿಗಳ ಹಾಡುಗಾರಿಕೆ ಇರುತ್ತದೆ. ದಿನಾಂಕ 26 ಡಿಸೆಂಬರ್ 2025ರಂದು ಬೆಳಗ್ಗೆ ಗಂಟೆ 9-30ಕ್ಕೆ ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಇವರ ಉಪಸ್ಥಿತಿಯಲ್ಲಿ ಉದ್ಘಾಟನಾ ಕಾರ್ಯಕ್ರಮ ಜರಗಲಿದೆ. ಬಳಿಕ ವಿವಿಧ ವಾದ್ಯವಾದನಗಳ ಸಾಂಗತ್ಯದಲ್ಲಿ, ‘ಸಮನ್ವಯ’ ಎಂಬ ವಿಶೇಷ ಕಾರ್ಯಕ್ರಮ ಜರಗಲಿದ್ದು, ಮಹಾಶ್ರೀಚಕ್ರ ನವಾವರಣ ಪೂಜೆ, ತತ್ಸಂಬಂ ನವಾವರಣ ಕೃತಿಗಳ ಆಲಾಪನೆ, ವಿದ್ವಾನ್ ಯೋಗೀಶ ಶರ್ಮಾ ಬಳ್ಳಪದವು…

Read More

ಪುತ್ತೂರು : ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಉಳಿವು–ಬೆಳವಣಿಗೆಗೆ ನಿರಂತರವಾಗಿ ಶ್ರಮಿಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ವತಿಯಿಂದ ಪುತ್ತೂರಿನ ಪ್ರತಿಷ್ಠಿತ ಜಿ.ಎಲ್. ವನ್ ಮಾಲ್ ಮತ್ತು ರೋಟರಿ ಕ್ಲಬ್ ಪುತ್ತೂರು ಯುವ ಇವರ ಸಹಯೋಗದೊಂದಿಗೆ ಚಿತ್ರಕಲಾ ಸ್ಪರ್ಧೆಯನ್ನು ದಿನಾಂಕ 28 ಡಿಸೆಂಬರ್ 2025ರಂದು ಪುತ್ತೂರಿನ ಜಿ.ಎಲ್. ವನ್ ಮಾಲ್ ಪ್ರಥಮ ಮಹಡಿಯಲ್ಲಿ ಆಯೋಜಿಸಲಾಗಿದೆ. ಸಾಹಿತ್ಯವು ಪದಗಳ ಮೂಲಕ ಭಾವನೆಗಳನ್ನು ಮೂಡಿಸಿದರೆ, ಚಿತ್ರಕಲೆ ಬಣ್ಣ ಮತ್ತು ರೇಖೆಗಳ ಮೂಲಕ ಅದೇ ಭಾವನೆಗಳಿಗೆ ದೃಶ್ಯ ರೂಪ ನೀಡುತ್ತದೆ. ಈ ಎರಡು ಕಲಾರೂಪಗಳ ಸಮನ್ವಯದಿಂದ ಸಂಪೂರ್ಣ ಅಭಿವ್ಯಕ್ತಿ ಸಾಧ್ಯವಾಗುತ್ತದೆ. ಸಾಹಿತ್ಯದಲ್ಲಿ ಮೂಡಿಬರುವ ಕಲ್ಪನೆಗಳು, ಕಥೆಗಳು, ಪ್ರಕೃತಿ, ಜನಜೀವನ, ಸಂಸ್ಕೃತಿ ಮತ್ತು ಮೌಲ್ಯಗಳು ಚಿತ್ರಕಲೆಯ ಮೂಲಕ ಕಣ್ಣಿಗೆ ಕಾಣುವ ರೂಪ ಪಡೆಯುತ್ತವೆ. ಈ ಹಿನ್ನೆಲೆಯಲ್ಲೇ ವಿದ್ಯಾರ್ಥಿಗಳನ್ನು ಹಾಗೂ ಯುವಜನತೆಯನ್ನು ಸಾಹಿತ್ಯ ಮತ್ತು ಕಲೆಯ ಕಡೆಗೆ ಆಕರ್ಷಿಸುವ ಉದ್ದೇಶದಿಂದ ಈ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

Read More