Subscribe to Updates
Get the latest creative news from FooBar about art, design and business.
Author: roovari
ಉಡುಪಿ : ಗಿರಿಬಳಗ (ರಿ.) ಕುಂಜಾರುಗಿರಿ ಇವರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಪ್ರಸ್ತುತ ಪಡಿಸುವ ‘ಛತ್ರಪತಿ ಶಿವಾಜಿ’ ಕನ್ನಡ ಐತಿಹಾಸಿಕ ನಾಟಕ ಪ್ರದರ್ಶನವನ್ನು ದಿನಾಂಕ 25 ಅಕ್ಟೋಬರ್ 2025ರಂದು ಸಂಜೆ 6-30 ಗಂಟೆಗೆ ಉಡುಪಿಯ ಶಾರದಾ ಕಲ್ಯಾಣ ಮಂಟಪ ರಸ್ತೆ, ಯಕ್ಷಗಾನ ಕಲಾರಂಗದ ಐ.ವೈ.ಸಿ. ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಈ ನಾಟಕದ ರಚನೆ ಶಶಿರಾಜ್ ರಾವ್ ಕಾವೂರು, ಗಿರೀಶ್ ತಂತ್ರಿ ಉಡುಪಿ ಇವರು ಸಂಗೀತ ಹಾಗೂ ಗಣೇಶ್ ರಾವ್ ಎಲ್ಲೂರು ಇವರು ರಂಗ ಕಲ್ಪನೆ, ವಿನ್ಯಾಸ ಮತ್ತು ನಿರ್ದೇಶನ ಮಾಡಿರುತ್ತಾರೆ.
ಸುಳ್ಯ : ತೆಂಕು ತಿಟ್ಟನ ಶ್ರೇಷ್ಠ ಯಕ್ಷಗಾನ ಕಲಾವಿದ ಸುಳ್ಯದ ‘ರಂಗಮನೆ’ಯ ಯಜಮಾನ ಸುಜನಾ ಸುಳ್ಯ ದಿನಾಂಕ 24 ಅಕ್ಟೋಬರ್ 2025ರಂದು ವಯೊ ಸಹಜ ಅನಾರೋಗ್ಯದಿಂದ ದೈವಾಧೀನರಾದರು. ಅವರಿಗೆ 89ವರ್ಷ ವಯಸ್ಸಾಗಿತ್ತು. ಇವರು ಪುತ್ರ ರಂಗಕರ್ಮಿ ಜೀವನರಾಂ ಸುಳ್ಯ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಸುಳ್ಯದ ಪ್ರಸಿದ್ಧ ನಾವೂರು ಮನೆತನದಲ್ಲಿ ಜನಿಸಿದ ಸುಜನಾ ಅವರು ನಾಟಕ ನಟರಾಗಿ ವೃತ್ತಿ ಆರಂಭಿಸಿದರು. ಮಾವ ಕಾವು ಶ್ರೀನಿವಾಸ ರಾಯರ ಪ್ರೇರಣೆಯಿಂದ ಯಕ್ಷಗಾನ ಕಲಾವಿದರಾಗಿ ಬಳ್ಳಂಬೆಟ್ಟು, ಧರ್ಮಸ್ಥಳ, ಇರಾ ಸೋಮನಾಥೇಶ್ವರ, ಕುದ್ರೋಳಿ, ಕೂಡ್ಲು, ಆದಿಸುಬ್ರಹ್ಮಣ್ಯ, ಸುಂಕದಕಟ್ಟೆ, ಕಟೀಲು ಮೇಳಗಳಲ್ಲಿ ಮುವತ್ತಾರು ವರ್ಷ ಕಲಾಸೇವೆ ಗೈದಿದ್ದರು. ಹಾಸ್ಯ ಪಾತ್ರಗಳಲ್ಲಿ ವಿಶೇಷ ಸಿದ್ಧಿ ಪ್ರಸಿದ್ಧಿ ಪಡೆದಿದ್ದ ಇವರು ಎಲ್ಲಾ ರೀತಿಯ ಸ್ತ್ರೀ, ಪುರುಷ ಪಾತ್ರಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ ಕಲಾಭಿಮಾನಿಳ ಪ್ರೀತಿಗೆ ಪಾತ್ರರಾಗಿದ್ದರು. ಹಿಮ್ಮೇಳದ ಎಲ್ಲಾ ವಿಭಾಗಗಳಲ್ಲೂ ಪರಿಣತರಾಗಿದ್ದು, ತಾಳಮದ್ದಲೆ ಅರ್ಥಧಾರಿಯಾಗಿ, ಪ್ರಸಾಧನ ತಜ್ಞರಾಗಿ ಯಕ್ಷಗಾನದ ಸರ್ವಾಂಗವನ್ನೂ ಬಲ್ಲ ಕಲಾವಿದರಾಗಿದ್ದರು. ಯಕ್ಷಗಾನ ಗುರುಗಳಾಗಿ ಸುಳ್ಯದಲ್ಲಿ ‘ವಿದೇಯದೇವಿ ನಾಟ್ಯಕಲಾ ಸಂಘ’ ಸ್ಥಾಪಿಸಿ, ರಂಗ…
ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘ ಮತ್ತು ತುಳು ಪರಿಷತ್ ಇವರ ಸಹಯೋಗದಲ್ಲಿ ಇತ್ತೀಚೆಗೆ ನಮ್ಮನ್ನಗಲಿದ ಹಿರಿಯ ಲೇಖಕಿ ಲಲಿತಾ ರೈ ಹಾಗೂ ಹಿರಿಯ ಯಕ್ಷಗಾನ ಭಾಗವತರಾದ ದಿನೇಶ್ ಅಮ್ಮಣ್ಣಾಯ ಇವರಿಗೆ ಶ್ರದ್ಧಾಂಜಲಿ ಸಭೆ ಹಾಗೂ ನುಡಿ ನಮನ ಸಲ್ಲಿಕೆ ಕಾರ್ಯಕ್ರಮವನ್ನು ದಿನಾಂಕ 25 ಅಕ್ಟೋಬರ್ 2025ರಂದು ಸಂಜೆ 4-00 ಗಂಟೆಗೆ ಮಂಗಳೂರಿನ ಉರ್ವಾಸ್ಟೋರ್ ತುಳು ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾಸರಗೋಡು : ಸಾಮಾಜಿಕ ಸಾಂಸ್ಕೃತಿಕ ಸಂಸ್ಥೆ ರಂಗಚಿನ್ನಾರಿ ಕಾಸರಗೋಡು (ರಿ.) ಮತ್ತು ‘ಸ್ವರ ಚಿನ್ನಾರಿ’ (ಸಂಗೀತ ಘಟಕ) ಪ್ರಸ್ತುತ ಪಡಿಸುವ ಪ್ರತಿಭಾನ್ವಿತ ಕರೋಕೆ ಗಾಯಕರ ಸಮ್ಮಿಲನ ‘ಅಂತರ್ಧ್ವನಿ -10’ ಸಂಗೀತ ಕಾರ್ಯಕ್ರಮವನ್ನು ದಿನಾಂಕ 26 ಅಕ್ಟೋಬರ್ 2025ರಂದು ಬೆಳಿಗ್ಗೆ 10-00 ಗಂಟೆಗೆ ಕಾಸರಗೋಡಿನ ಕರೆಂದಕ್ಕಾಡು ಪದ್ಮಗಿರಿ ಕಲಾ ಕುಟೀರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಂಗೀತ ಕಾರ್ಯಕ್ರಮವನ್ನು ಮಂಗಳೂರು ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷರಾದ ಸಿ.ಎ. ನಂದಗೋಪಾಲ್ ಶೆಣೈ ಇವರು ಉದ್ಘಾಟನೆ ಮಾಡಲಿದ್ದು, ಕೇರಳ ಮಿಷನ್ ಚಾನೆಲ್ ನಿರ್ದೇಶಕರಾದ ಶುಕೂರ್ ಕೋಳಿಕ್ಕರ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಮೈಸೂರು : ನಟನ ಪಯಣ ರೆಪರ್ಟರಿ ತಂಡದ ಹೊಸ ಪ್ರಯೋಗ ‘ಅಂಧಯುಗ’ ನಾಟಕದ ಪ್ರದರ್ಶನವು ದಿನಾಂಕ 26 ಅಕ್ಟೋಬರ್ 2025ರಂದು ಸಂಜೆ ಘಂಟೆ 6-30ಕ್ಕೆ ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನಟನ ರಂಗಶಾಲೆಯಲ್ಲಿ ನಡೆಯಲಿದೆ. ಮೂಲ ಧರ್ಮವೀರ ಭಾರತಿ ವಿರಚಿತ ಈ ನಾಟಕವನ್ನು ಸಿದ್ಧಲಿಂಗ ಪಟ್ಟಣಶೆಟ್ಟಿ ಹಾಗೂ ತಿಪ್ಪೇಸ್ವಾಮಿಯವರು ಕನ್ನಡಕ್ಕೆ ಅನುವಾಡಿಸಿದ್ದಾರೆ. ಖ್ಯಾತ ನಟ ಹಾಗೂ ನಿರ್ದೇಶಕರಾದ ಮಂಡ್ಯ ರಮೇಶ್ ನಿರ್ದೇಶಿಸಿರುವ ಈ ನಾಟಕಕ್ಕೆ ಮೇಘ ಸಮೀರ ದೃಶ್ಯ ಸಂಯೋಜನೆ ಹಾಗೂ ವಿನ್ಯಾಸ ಮಾಡಿದ್ದಾರೆ. ವಸ್ತ್ರಾಲಂಕಾರವನ್ನು ರಂಜನಾ ಕೇರಾ ನಿರ್ವಹಿಸಿದ್ದು, ದಿಶಾ ರಮೇಶ್ ಸಂಗೀತ ಸಂಯೋಜಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ. 72595 37777, 94804 68327 ಮತ್ತು 98455 95505 ಸಂಪರ್ಕಿಸಿರಿ. ನಟನ ಪಯಣ ರೆಪರ್ಟರಿ ನಟನದಲ್ಲಿ ಅನೇಕ ವರ್ಷಗಳಿಂದ ರಂಗ ಕಾರ್ಯದಲ್ಲಿ ತೊಡಗಿದ ನುರಿತ ಕಲಾವಿದರು ಮತ್ತು ನಟನ ರಂಗಶಾಲೆಯ ಡಿಪ್ಲೊಮಾ ತರಬೇತಿ ಮುಗಿಸಿದ ರಂಗಾಭ್ಯಾಸಿಗಳ ವೃತ್ತಿಪರ ತಂಡ ‘ನಟನ ಪಯಣ ರೆಪರ್ಟರಿ’. ವಾರಾಂತ್ಯಗಳಲ್ಲಿ ನಟನದ ರಂಗ ಮಂದಿರದಲ್ಲಿ ಪ್ರದರ್ಶನಗಳನ್ನು ನೀಡುವುದರ…
ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ಉಡುಪಿ ಆಶ್ರಯದಲ್ಲಿ ರಾಧಾಕೃಷ್ಣ ನೃತ್ಯನಿಕೇತನ (ರಿ.) ಉಡುಪಿ ಆಚರಿಸುವ 23ನೇ ವರ್ಷದ ‘ಭರತಮುನಿ ಜಯಂತ್ಯುತ್ಸವ’ವನ್ನು ದಿನಾಂಕ 26 ಅಕ್ಟೋಬರ್ 2025ರಂದು ಬೆಳಿಗ್ಗೆ 10-00 ಗಂಟೆಗೆ ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕಿದಿಯೂರು ಶ್ರೀ ವೇದಮೂರ್ತಿ ಕೆ. ಪದ್ಮನಾಭ ಭಟ್ ಇವರ ಅಧ್ಯಕ್ಷತೆಯಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಆಶೀರ್ವಚನ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ‘ಭರತ ಪ್ರಶಸ್ತಿ’, ‘ಕಲಾರ್ಪಣ ಪ್ರಶಸ್ತಿ’ ಮತ್ತು ‘ಗುರು ರಾಧಾಕೃಷ್ಣಾನುಗ್ರಹ ಪ್ರಶಸ್ತಿ ಪ್ರದಾನ ಮಾಡಲಾಗುವುದು. 12-00 ಗಂಟೆಗೆ ರಾಧಾಕೃಷ್ಣ ನೃತ್ಯನಿಕೇತನದ ಶಿಷ್ಯರಿಂದ, ಪ್ರಶಿಷ್ಯರಿಂದ ಭರತನಾಟ್ಯ ನೃತ್ಯ ಕಾರ್ಯಕ್ರಮ, 3-00 ಗಂಟೆಗೆ ನೃತ್ಯ ಸಿಂಚನ, ಸಂಜೆ 7-00 ಗಂಟೆಗೆ ರಾಧಾಕೃಷ್ಣ ನೃತ್ಯನಿಕೇತನ ಶಿಷ್ಯರಿಂದ ‘ನೃತ್ಯಾಭಿಷೇಕಂ’ ಕೂಚುಪುಡಿ ನೃತ್ಯ ಕಾರ್ಯಕ್ರಮ ಪ್ರಸ್ತುತಗೊಳ್ಳಲಿದೆ.
ಕೋಟ : ಗೆಳೆಯರ ಬಳ ದಿನಾಂಕ ಗ ಕಾರ್ಕಡ ಇವರ ಆಶ್ರಯದಲ್ಲಿ ಡಾ.ಕೋಟ ಶಿವರಾಮ ಕಾರಂತ ಜನ್ಮದಿನಾಚರಣ ಅಂಗವಾಗಿ ಗೆಳೆಯರ ಬಳಗ ಕಾರಂತ ಪುರಸ್ಕಾರ ಸಮಾರಂಭ ದಿನಾಂಕ 17 ಅಕ್ಟೋಬರ್ 2025ರ ಶನಿವಾರದಂದು ಗಿರಿಜಾ ಕಲ್ಯಾಣಮಂಟಪದಲ್ಲಿ ನಡೆಯಿತು. ಕಾರ್ಯಕ್ರಮಾವನ್ನು ಉದ್ಘಾಟಿಸಿದ ಕುಂದಾಪುರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ “ಕಾರಂತರು ತಮ್ಮ ಜೀವಿತ ಅವಧಿಯಲ್ಲಿ ನಡೆನುಡಿ ಬಲು ವಿಶಿಷ್ಟವಾದದ್ದು ಅವರ ಸಾಹಿತ್ಯಿಕ ಬದುಕು ಯುವ ಸಮುದಾಯಕ್ಕೆ ಪ್ರೇರಣೆದಾಯಕ, ಕಾರಂತರು ವಿಶ್ವಮಟ್ಟದಲ್ಲಿ ತಮ್ಮ ಸಾಹಿತ್ಯ, ವಿವಿಧ ರಂಗವನ್ನು ಪರಿಚಯಿಸಿಕೊಂಡವರು ಅಂತಹ ಮಹಾನ್ ಚೇತನ ಹೆಸರಿನಲ್ಲಿ ಪುರಸ್ಕಾರ ಏರ್ಪಡಿಸಿದ ಗೆಳೆಯರ ಬಳಗಕ್ಕೆ ಕೃತಜ್ಞತೆ ಸಲ್ಲಿಸಬೇಕು.” ಎಂದು ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರಾದ ಹರಿಕೃಷ್ಣ ಪುನನೂರು ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಾಹಿತಿ ಎಚ್. ಶಕುಂತಲ ಭಟ್ ಹಳೆಯಂಗಡಿ ಇವರಿಗೆ ಗೆಳೆಯರ ಬಳಗದ ಕಾರಂತ ಪುರಸ್ಕಾರ ನೀಡಲಾಯಿತು. ಕಲ್ಕೂರ ಪ್ರತಿಷ್ಠಾನ ಮಂಗಳೂರು ಇದರ ಅಧ್ಯಕ್ಷ ಎಸ್.ಪ್ರದೀಪ್ ಕುಮಾರ್ ಕಲ್ಕೂರ ಕಾರಂತರ ಭಾವ…
ಸಾಲಿಗ್ರಾಮ : ಪಟ್ಟಣ ಪಂಚಾಯತ್ ಸಾಲಿಗ್ರಾಮ ಇದರ ಸುವರ್ಣ ಸಂಭ್ರಮದ ಉತ್ಸವದ ಪ್ರಯುಕ್ತ ಯಕ್ಷಗಾನ ಕಲಾ ಕೇಂದ್ರ ಹಂಗಾರಕಟ್ಟೆ ಐರೋಡಿ ಇವರ ಸಂಯೋಜನೆಯಲ್ಲಿ ಯಕ್ಷಗಾನ ಪ್ರದರ್ಶನವನ್ನು ದಿನಾಂಕ 25 ಅಕ್ಟೋಬರ್ 2025ರಂದು ರಾತ್ರಿ ಗಂಟೆ 8-00ಕ್ಕೆ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಬಯಲು ರಂಗಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಹಳೆಮಕ್ಕಿ ರಾಮ ಇವರು ವಿರಚಿತ ‘ಕೃಷ್ಣಾರ್ಜುನ’ ಎಂಬ ಪ್ರಸಂಗದ ಯಕ್ಷಗಾನ ಪ್ರದರ್ಶನದಲ್ಲಿ ಪರಮೇಶ್ವರ ನಾಯ್ಕ್, ಗಜೇಂದ್ರ ಶೆಟ್ಟಿ ಆಜ್ರಿ, ಗಣೇಶ ಶಣೈ ಶಿವಪುರ, ವಾಗ್ವಿಲಾಸ ಭಟ್ಸ್, ಕೋಟ ಸುರೇಶ, ನಾಗೂರು ಮಾಧವ, ಪಂಜು ಪೂಜಾರಿ, ವಿಘ್ನೇಶ ಪೈ ಸಿದ್ದಾಪುರ, ಸತೀಶ ಹಾಲಾಡಿ, ಆದಿತ್ಯ ಹೆಗಡೆ, ಅಶೋಕ ಆಚಾರ್, ಯುವರಾಜ ಇವರುಗಳು ಸಹಕರಿಸಲಿದ್ದಾರೆ.
ಕೋಣಾಜೆ : ಮಂಗಳೂರು ವಿಶ್ವವಿದ್ಯಾನಿಲಯ ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ ʻಕನಕ ಜಯಂತಿ ಪ್ರಯುಕ್ತʼ ಕನಕದಾಸರ ಕೀರ್ತನೆಗಳ ‘ಕನಕ ಕೀರ್ತನ ಗಂಗೋತ್ರಿ’ ಕಾರ್ಯಕ್ರಮವು ದಿನಾಂಕ 12 ನವೆಂಬರ್ 2025ರಂದು ಬುಧವಾರ ಪೂರ್ವಾಹ್ನ 10-00 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ಪ್ರೊ. ವಿವೇಕ ರೈ ವಿಚಾರ ವೇದಿಕೆಯಲ್ಲಿ ನಡೆಯಲಿದೆ ಎಂದು ಕನಕದಾಸ ಸಂಶೋಧನ ಕೇಂದ್ರದ ಸಂಯೋಜಕ ಡಾ. ಧನಂಜಯ ಕುಂಬ್ಳೆ ತಿಳಿಸಿದ್ದಾರೆ. ಪ್ರೌಢಶಾಲಾ, ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿಗಳ ವಿದ್ಯಾರ್ಥಿಗಳು, ಅಧ್ಯಾಪಕ, ಅಧ್ಯಾಪಕೇತರ ಹಾಗೂ ಸಾರ್ವಜನಿಕ ಒಟ್ಟು ಏಳು ವಿಭಾಗಗಳಲ್ಲಿ ನಡೆಯುವ ʻಸಾಮುದಾಯಿಕ ಪಾಲ್ಗೊಳ್ಳುವಿಕೆʼಯ ಆಶಯದ ಈ ಕಾರ್ಯಕ್ರಮದಲ್ಲಿ ಉಳ್ಳಾಲ, ಮಂಗಳೂರು, ಬಂಟ್ವಾಳ, ಪುತ್ತೂರು, ಮೂಲ್ಕಿ, ಮೂಡಬಿದ್ರೆ ಹಾಗೂ ಗಡಿನಾಡು ಪ್ರದೇಶವಾದ ಮಂಜೇಶ್ವರ, ಕಾಸರಗೋಡು ತಾಲೂಕು ವ್ಯಾಪ್ತಿಯ ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳು ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳು, ದಕ್ಷಿಣ ಕನ್ನಡ ಉಡುಪಿ, ಕೊಡಗು ಜಿಲ್ಲೆಯ ವಿಶ್ವೇಶ್ವರಯ್ಯ ತಾಂತ್ರಿಕ ಹಾಗೂ ರಾಜೀವ್ ಗಾಂಧಿ ವೈದ್ಯಕೀಯ ವಿಶ್ವವಿದ್ಯಾನಿಲಯ, ಕಣ್ಣೂರು…
ವಾರಾಣಸಿ : ಕರಾವಳಿಯ ಜನಪ್ರಿಯ ಕಲೆ ಯಕ್ಷಗಾನದ ಗಂಧಗಾಳಿ ಇಲ್ಲದಿದ್ದರೂ ಕೇವಲ ನಾಲ್ಕು ವಾರಗಳ ತರಬೇತಿಯಿಂದಲೇ ಉತ್ತರ ಭಾರತದ ವಿದ್ಯಾರ್ಥಿಗಳು ‘ಜಟಾಯು ಮೋಕ್ಷ’ ಯಕ್ಷಗಾನ ಪ್ರಸಂಗವನ್ನು ದಿನಾಂಕ 17 ಅಕ್ಟೋಬರ್ 2025ರಂದು ರಂಗದಲ್ಲಿ ಪ್ರದರ್ಶಿಸಿದ್ದಾರೆ. ಯಕ್ಷಗಾನ ಗುರು ಉಡುಪಿಯ ಬನ್ನಂಜೆ ಸಂಜೀವ ಸುವರ್ಣ ಇವರು ವಾರಾಣಸಿಗೆ ತೆರಳಿ ಅಲ್ಲಿನ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮದಲ್ಲಿ (ಎನ್.ಎಸ್.ಡಿ.) ರಂಗ ಶಿಕ್ಷಣ ಪಡೆಯುತ್ತಿರುವ 20 ವಿದ್ಯಾರ್ಥಿಗಳಿಗೆ ಯಕ್ಷ ಧೀಂಗಿಣ ಕಲಿಸಿ ಅವರಲ್ಲಿ ಕರಾವಳಿ ಕಲೆಯ ಒಲವು ಮೂಡಿಸಿದ್ದಾರೆ. ದಿನಾಂಕ 15 ಸೆಪ್ಟೆಂಬರ್ 2025ರಿಂದ ಪ್ರಾರಂಭವಾಗಿ 17 ಅಕ್ಟೋಬರ್ 2025ರವರೆಗೆ ಯಕ್ಷಗಾನದ ರಾಗ, ತಾಳ ಮತ್ತು ಮುಖಭಾವಗಳನ್ನು ಅಭ್ಯಾಸ ಮಾಡಿದ 10 ಹುಡುಗರು ಹಾಗೂ 10 ಹುಡುಗಿಯರು ಪಾರ್ತಿಸುಬ್ಬ ಬರೆದ ಪೌರಾಣಿಕ ಪ್ರಸಂಗವನ್ನು ವಾರಾಣಸಿ ಎನ್.ಎಸ್.ಡಿ.ಯಲ್ಲಿ ಪ್ರದರ್ಶಿಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಪಾರ್ತಿಸುಬ್ಬ ಬರೆದ ‘ಪಂಚವಟಿ’ ಪ್ರಸಂಗವನ್ನು ಪರ್ಕಳದ ಪ್ರಭಾತ್ ಎಸ್. ಪಾಟೀಲ್ ಇವರು ಹಿಂದಿ ಭಾಷೆಗೆ ಅನುವಾದಿಸಿದ್ದಾರೆ. ಅದರಲ್ಲಿನ ‘ಜಟಾಯು ಮೋಕ್ಷ’ ಭಾಗವನ್ನು ವಿದ್ಯಾರ್ಥಿಗಳ…