Author: roovari

ಬೆಳಗಾವಿ : ಬೆಳಗಾವಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ದಿನಾಂಕ 01 ಮಾರ್ಚ್ 2025 ಮತ್ತು 02 ಮಾರ್ಚ್ 2025ರಂದು ಬೆಳ್ಳಿಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ನಾಲ್ಕನೇ ಚುಟುಕು ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಿದೆ. ಈ ಹಿನ್ನೆಲೆಯಲ್ಲಿ ಪರಿಷತ್ತು ರಾಜ್ಯಮಟ್ಟದ ಚುಟುಕು ಕಾವ್ಯಕೃತಿಗಳ ಸ್ಪರ್ಧೆ ಏರ್ಪಡಿಸಿದೆ. ಸ್ಪರ್ಧೆಯ ವಿವರ : 2022 ಜನವರಿಯಿಂದ 2024 ಡಿಸೆಂಬರ್ ವರೆಗಿನ ಅವಧಿಯಲ್ಲಿ ಪ್ರಕಟಗೊಂಡ ಚುಟುಕು/ಹನಿ ಗವನ ಕೃತಿಗಳಿಗೆ ಮಾತ್ರ ಅವಕಾಶ. ಯಾವುದಾದರೂ ಒಂದು ವರ್ಷದ ಕೃತಿಯ 2 ಪ್ರತಿಗಳನ್ನು ದಿನಾಂಕ 20 ಜನವರಿ 2025ರ ಒಳಗಾಗಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿಕೊಡಬೇಕು. ವಿಳಾಸ : ಬಸವರಾಜ ಗಾರ್ಗಿ, ಪ್ರಧಾನ ಕಾರ್ಯದರ್ಶಿ, ಹೊಂಗನಸು, 73/ ರಾಣಿ ಚೆನ್ನಮ್ಮ ಹೌಸಿಂಗ್ ಸೊಸೈಟಿ, ಶ್ರೀನಗರ, ಬೆಳಗಾವಿ -590017.

Read More

ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಉಪ್ಪಳ ಘಟಕದ 7ನೇ ವಾರ್ಷಿಕೋತ್ಸವವನ್ನು 12 ಜನವರಿ 2025ರಂದು ಸಂಜೆ 6-30 ಗಂಟೆಗೆ ಕುಳೂರು ಶ್ರೀಹರಿ ಭಜನಾ ಮಂದಿರದ ವಠಾರದಲ್ಲಿ ಹಮ್ಮಿಕೊಳ್ಳಲಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಉಪ್ಪಳ ಘಟಕದ ಅಧ್ಯಕ್ಷರಾದ ಶ್ರೀ ಪಿ.ಆರ್. ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಖ್ಯಾತ ಭಾಗವತರಾದ ಶ್ರೀ ಜಿ.ಕೆ. ನಾವಡ ಬಾಯಾರು ಇವರನ್ನು ಸನ್ಮಾನಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ‘ಶ್ರೀಹರಿ ದರ್ಶನ’ ಎಂಬ ಪ್ರಸಂಗದ ಯಕ್ಷಗಾನ ಬಯಲಾಟ ನಡೆಯಲಿದೆ.

Read More

ಮಂಗಳೂರು : ಚಿರಂತನ ಚಾರಿಟೇಬಲ್ ಟ್ರಸ್ಟ್, ಸಪ್ತಕ ಬೆಂಗಳೂರು, ಐ.ಟಿ.ಸಿ. ಸಂಗೀತ ರಿಸರ್ಚ್ ಅಕಾಡೆಮಿ ಮತ್ತು ರಾಮಕೃಷ್ಣ ಮಠ ಮಂಗಳೂರು ಜಂಟಿಯಾಗಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಸ್ವಾಮಿ ವಿವೇಕಾನಂದರ ಜನ್ಮದಿನ ಪ್ರಯುಕ್ತ ಪ್ರಸ್ತುತ ಪಡಿಸುವ ‘ಐ.ಟಿ.ಸಿ. ಮಿನಿ ಸಂಗೀತ ಸಮ್ಮೇಳನ’ವನ್ನು ದಿನಾಂಕ 12 ಜನವರಿ 2025ರಂದು ಬೆಳಗ್ಗೆ 10-00 ಗಂಟೆಗೆ ಮಂಗಳೂರಿನ ರಾಮಕೃಷ್ಣ ಮಠದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ಮಂಗಳೂರಿನ ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮನಂದಾಜಿ ಇವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಲಿದ್ದಾರೆ. ಕೋಲ್ಕತಾದ ಶ್ರೀಮತಿ ಶತವಿಷ ಮುಖರ್ಜಿ ಇವರ ಹಾಡುಗಾರಿಕೆಗೆ ಬೆಂಗಳೂರಿನ ಗುರುಮೂರ್ತಿ ವೈದ್ಯ ತಬಲಾದಲ್ಲಿ ಮತ್ತು ಉಡುಪಿಯ ಶ್ರೀ ಪ್ರಸಾದ್ ಕಾಮತ್ ಇವರು ಸಂವಾದಿನಿಯಲ್ಲಿ ಸಹಕರಿಸಲಿದ್ದಾರೆ. ಶ್ರೀ ಬ್ರಜೇಶ್ವರ ಮುಖರ್ಜಿ ಇವರ ಹಾಡುಗಾರಿಕೆಗೆ ಕೋಲ್ಕತಾದ ಶ್ರೀ ಆಶಿಶ್ ಪಾಲ್ ತಬಲಾದಲ್ಲಿ ಮತ್ತು ಮುಂಬೈ ಶ್ರೀ ಸಿದ್ಧೇಶ್ ಬಿಚೊಳ್ಕರ್ ಸಂವಾದಿನಿಯಲ್ಲಿ ಸಾಥ್ ನೀಡಲಿದ್ದಾರೆ.

Read More

ಕಟೀಲು : ಶ್ರೀ ದುರ್ಗಾ ಮಕ್ಕಳ ಮೇಳದ 16ನೇ ವಾರ್ಷಿಕ ಕಲಾಪರ್ವದ ಸಮಾರೋಪ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 29 ಡಿಸೆಂಬರ್ 2024ರಂದು ಸರಸ್ವತೀ ಸದನದಲ್ಲಿ ನಡೆಯಿತು. ಈ ಸಮಾರಂಭದಲ್ಲಿ ಭಾಗವಹಿಸಿ ಶುಭಾಶಂಸನೆ ಗೈದ ಕೊಂಡೆವೂರು ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ “ಯಕ್ಷಗಾನ ನಮ್ಮಲ್ಲಿ ಸತ್ ಚಿಂತನೆಯನ್ನು ಬೆಳೆಸುವುದರಿಂದ ಮಕ್ಕಳಲ್ಲಿ ಆಸಕ್ತಿ ಮೂಡಿಸಬೇಕು. ಕಟೀಲು ಮಕ್ಕಳ ಮೇಳದ ಕಾರ್ಯ ಅಭಿನಂದನೀಯ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಯಕ್ಷಗಾನ ವಿದ್ವಾಂಸ ಕೆ.ಎಲ್. ಕುಂಡಂತಾಯ ಇವರಿಗೆ ‘ಕಟೀಲು ಸದಾನಂದ ಆಸ್ರಣ್ಣ ಪ್ರಶಸ್ತಿ’ ಹಾಗೂ ಖ್ಯಾತ ಹಿಮ್ಮೇಳ ವಾದಕ ಮಣಿಮುಂಡ ಸುಬ್ರಹ್ಮಣ್ಯ ಶಾಸ್ತ್ರಿಯವರಿಗೆ ‘ಕಟೀಲು ಕೃಷ್ಣ ಆಸ್ರಣ್ಣ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಯಿತು. ಈ ಸಮಾರಂಭದಲ್ಲಿ ಭಾಗವಹಿಸಿದ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಇವರು ಮಾತನಾಡಿ “ಯಕ್ಷಗಾನ ಕಲಿಕೆಯತ್ತ ಮಕ್ಕಳ ಸೆಳೆತ ಸ್ತುತ್ಯರ್ಹ ಬೆಳವಣಿಗೆಯಾಗಿದ್ದು, ಮಕ್ಕಳಿಗೆ ಸಂಸ್ಕೃತಿ ಸಂಸ್ಕಾರವನ್ನು ಯಕ್ಷಗಾನದ ಮೂಲಕ ಕಲಿಸುವ ಅವಕಾಶ ಇದೆ. ಇಲ್ಲದಿದ್ದರೆ ಹಿರಿಯರನ್ನು ಗೌರವಿಸುವ ಮನಸ್ಥಿತಿಯಿಂದ…

Read More

ಧಾರವಾಡ : ಸಾಹಿತ್ಯ ಗಂಗಾ ಸಂಸ್ಥೆಯು 2024ನೆಯ ಸಾಲಿನ ‘ಸುನಂದಾ ಬೆಳಗಾಂವಕರ ಕಾದಂಬರಿ ಪ್ರಶಸ್ತಿ’ಗೆ ಕೃತಿಗಳನ್ನು ಆಹ್ವಾನಿಸಿದೆ. ಈ ಪ್ರಶಸ್ತಿಯು ಒಂದು ಸಾಂಕೇತಿಕ ಮೊತ್ತ, ಪ್ರಶಸ್ತಿ ಫಲಕ ಮತ್ತು ಸನ್ಮಾನವನ್ನು ಒಳಗೊಂಡಿರುತ್ತದೆ. ಆಸಕ್ತ ಲೇಖಕ/ಲೇಖಕಿಯರು, ಪ್ರಕಾಶಕರು ಮತ್ತು ಓದುಗರು ನಿಯಮಾನುಸಾರವಾಗಿ ಕೃತಿಗಳನ್ನು ಕಳುಹಿಸಬಹುದು. ನಿಯಮಗಳು : * 2024ರಲ್ಲಿ ಮೊದಲ ಮುದ್ರಣ ಕಂಡ, ಸ್ವತಂತ್ರ ಕಾದಂಬರಿಗಳು ಮಾತ್ರ ಪ್ರಶಸ್ತಿಗೆ ಅರ್ಹ. * ಅನುವಾದ, ಅನುಸೃಷ್ಟಿ, ರೂಪಾಂತರ, ಪ್ರೇರಣೆ ಅಥವಾ ಸ್ಫೂರ್ತಿ ಪಡೆದ ಕಾದಂಬರಿಗಳಿಗೆ ಅವಕಾಶವಿಲ್ಲ. * ಒಬ್ಬ ಲೇಖಕ/ಲೇಖಕಿ ಒಂದಕ್ಕಿಂತ ಹೆಚ್ಚು ಕಾದಂಬರಿ ಪ್ರಕಟಿಸಿದ್ದಲ್ಲಿ, ಅವುಗಳಲ್ಲಿ ಅತ್ಯುತ್ತಮವಾದ ಒಂದನ್ನು ಮಾತ್ರ ಪ್ರಶಸ್ತಿಗೆ ಪರಿಗಣಿಸಲಾಗುವುದು. * ಆಸಕ್ತ ಲೇಖಕ/ಕಿಯರು, ಪ್ರಕಾಶಕರು ಮತ್ತು ಓದುಗರು ಕಾದಂಬರಿಯ ಮೂರು ಪ್ರತಿಗಳು, ಲೇಖಕ/ಲೇಖಕಿಯರ ಸಂಕ್ಷಿಪ್ತ ಪರಿಚಯ, ಪೂರ್ಣ ವಿಳಾಸ ಮತ್ತು ಒಂದು ಭಾವಚಿತ್ರವನ್ನು ಅಂಚೆ/ಕೊರಿಯರ್ ಮೂಲಕ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು. * ಕಾದಂಬರಿಗಳನ್ನು ಕಳಿಸಲು ಕೊನೆಯ ದಿನಾಂಕ 20 ಫೆಬ್ರುವರಿ 2025. * ಸುನಂದಾ ಬೆಳಗಾಂವಕರ ಕಾದಂಬರಿ…

Read More

ಬೈಂದೂರು : ಯಕ್ಷಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಮತ್ತು ಯಕ್ಷ ಗುರುಕುಲ ಬೈಂದೂರು ಇವರ ಸಹಭಾಗಿತ್ವದಲ್ಲಿ ಬೈಂದೂರಿನಲ್ಲಿ ನಾಲ್ಕು ಪ್ರೌಢಶಾಲೆಗಳ ‘ಕಿಶೋರ ಯಕ್ಷಗಾನ ಸಂಭ್ರಮ’ವು ದಿನಾಂಕ 30 ಡಿಸೆಂಬರ್ 2024ರಂದು ಉದ್ಘಾಟನೆಗೊಂಡಿತು. ಕ್ಷೇತ್ರದ ಶಾಸಕರಾದ ಗುರುರಾಜ ಗಂಟಿಹೊಳೆ ಇವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು ಹಿರಿಯ ಯಕ್ಷಗಾನ ಕಲಾವಿದರಾದ ಸಂಜೀವ ಗಾಣಿಗರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಅಭ್ಯಾಗತರಾಗಿ ಉದ್ಯಮಿಗಳಾದ ದಯಾನಂದ ಬಾಸ್ ಬೈಲ್, ದೀನಪಾಲ ಶೆಟ್ಟಿ, ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಭಾಸ್ಕರ್ ದೇವಾಡಿಗ, ಸುರೇಶ ಬಚವಾಡಿ, ಯಕ್ಷಗಾನ ಕಲಾರಂಗದ ನಾರಾಯಣ ಎಂ. ಹೆಗಡೆ, ಹೆಚ್.ಎನ್. ಶೃಂಗೇಶ್ವರ, ಗಣೇಶ್ ಬ್ರಹ್ಮಾವರ ಭಾಗವಹಿಸಿದ್ದರು. ಬೈಂದೂರಿನ ಯಕ್ಷಗುರುಕುಲದ ಸಂಚಾಲಕರಾದ ಸುನೀಲ್ ಹೊಲಾಡು ಸ್ವಾಗತಿಸಿದ ಕಾರ್ಯಕ್ರಮವನ್ನು ಶಿಕ್ಷಕರಾದ ಸುಧಾಕರ್ ಪಿ. ನಿರ್ವಹಿಸಿದರು. ಯಕ್ಷಶಿಕ್ಷಣ ಟ್ರಸ್ಟಿನ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿ ಶಾಸಕರನ್ನು ಅಭಿನಂದಿಸಿದರು. ಬಳಿಕ ಸರಕಾರಿ ಪ್ರೌಢಶಾಲೆ, ಕಂಬದಕೋಣೆ ಇಲ್ಲಿನ ವಿದ್ಯಾರ್ಥಿಗಳಿಂದ, ಹೆಮ್ಮಾಡಿ ಪ್ರಭಾಕರ್ ಆಚಾರ್ಯ ನಿರ್ದೇಶನದಲ್ಲಿ ‘ದ್ರೌಪದಿ ಪ್ರತಾಪ’ ಮತ್ತು ಸರ್ಕಾರಿ ಪ್ರೌಢಶಾಲೆ ಉಪ್ಪುಂದ ಇಲ್ಲಿನ ವಿದ್ಯಾರ್ಥಿಗಳಿಂದ…

Read More

ಹೆಸರಾಂತ ಕಾದಂಬರಿಗಳನ್ನು ಹಾಗೂ ಕಥಾ ಸಂಕಲನಗಳನ್ನು ಬರೆದು ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸಿದ ಕಾದಂಬರಿಗಳ ಸುಪ್ರಸಿದ್ಧ ಲೇಖಕಿ ಶ್ರೀಮತಿ ಎಂ.ಕೆ. ಇಂದಿರಾ. ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ದಿನಾಂಕ 05.01.1917ರಂದು ಜನಿಸಿದರು. ಇವರ ತಂದೆ ತರೀಕೆರೆ ಸೂರ್ಯನಾರಾಯಣರಾವ್ ಹಾಗೂ ತಾಯಿ ಬನಶಂಕರಮ್ಮ. ಆಗಿನ ಕಾಲದ ಜೀವನ ವಿಧಾನದ ಪ್ರಕಾರ ಎಂ. ಕೆ. ಇಂದಿರಾ ಅವರಿಗೆ 12ನೇ ವಯಸ್ಸಿನಲ್ಲಿ ಶ್ರೀಯುತ ಕೃಷ್ಣರಾವ್ ರೊಂದಿಗೆ ಬಾಲ್ಯ ವಿವಾಹ ನಡೆಯುತ್ತದೆ. ಈ ಕಾರಣದಿಂದಲೇ ಅವರು ಕೇವಲ ಆರನೆಯ ತರಗತಿ ತನಕ ವಿದ್ಯಾಭ್ಯಾಸವನ್ನು ಪಡೆಯುತ್ತಾರೆ. ಸಾಹಿತ್ಯ ಲೋಕಕ್ಕೆ ಶ್ರೇಷ್ಠ ಕೃತಿಗಳನ್ನು ನೀಡಿದ ಮಹಾನ್ ಲೇಖಕಿಯಾದ ಶ್ರೀಮತಿ ಎಂ. ಕೆ. ಇಂದಿರಾ ಇವರಿಗೆ ಸಾಹಿತ್ಯ ರಚನೆಯ ಕಾರ್ಯದಲ್ಲಿ ಅವರ ಶೈಕ್ಷಣಿಕ ವ್ಯವಸ್ಥೆ ಯಾವುದೇ ರೀತಿಯ ಕೊರತೆಯನ್ನು ತಂದೊಡ್ಡಲಿಲ್ಲವೆಂಬುದು ನಿರ್ವಿವಾದ. ಮುಖ್ಯವಾಗಿ ಅವರು ಬಾಳಿ ಬದುಕಿದ ಕುಟುಂಬದಲ್ಲಿ ಹೆಚ್ಚಿನವರು ಕಲೆ, ಸಾಹಿತ್ಯ, ಸಾಂಸ್ಕೃತಿಕ ಬದುಕಿನಲ್ಲಿ ಉನ್ನತ ಸ್ಥಾನವನ್ನು ಪಡೆದಿದ್ದರು. ಇವರ ತಾಯಿ ಬನಶಂಕರಮ್ಮ ಹಾರ್ಮೋನಿಯಂ, ಗಮಕ ಹಾಡುಗಾರಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಂಡವರು.…

Read More

ಉಡುಪಿ : ಭಾವನಾ ಫೌಂಡೇಶನ್ ಹಾವಂಜೆ ಹಾಗೂ ಭಾಸಗ್ಯಾಲರಿ ಮತ್ತು ಸ್ಟುಡಿಯೋ ಆಯೋಜಿಸುತ್ತಿರುವ ದೇಶೀಯ ಜನಪದ ಕಲೆಗಳ ಸರಣಿಯ ಹದಿನೈದನೆಯ ಕಾರ್ಯಕ್ರಮದಲ್ಲಿ ‘ಚನ್ನಪಟ್ಟಣದ ಗೊಂಬೆ’ ತಯಾರಿಕೆಯ ಕಾರ್ಯಾಗಾರದ ಉದ್ಘಾಟನೆಯು ದಿನಾಂಕ 04 ಜನವರಿ 2025ರಂದು ಬಡಗುಪೇಟೆಯಲ್ಲಿ ನಡೆಯಿತು. ಈ ಕಾರ್ಯಾಗಾರದ ಉದ್ಘಾಟನೆಯನ್ನು ನೆರವೇರಿಸಿದ ಮಣಿಪಾಲ ಸ್ಕೂಲ್‌ ಆಫ್‌ ಆರ್ಕಿಟೆಕ್ಚರ್‌ ಆಂಡ್ ಪ್ಲಾನಿಂಗ್‌ನ ಅಸೋಶಿಯೇಟ್ ಪ್ರೊಫೆಸರ್‌ ಆರ್ಕಿಟೆಕ್ಟ್ ತ್ರಿವಿಕ್ರಮ್ ಭಟ್‌ ಇವರು ಮಾತನಾಡಿ “ಭಾರತೀಯ ಕಲೆಗಳು ಬಹು ಶ್ರೇಷ್ಠವಾದುದು. ಅವುಗಳಲ್ಲೂ ಉಪಯೋಗೀ ಕಲೆಗಳು ದಿನನಿತ್ಯದ ಬದುಕಿನಲ್ಲಿ ಹಾಸುಹೊಕ್ಕಾಗಿ ನಮ್ಮ ಸೌಂದರ್ಯಪ್ರಜ್ಞೆಯನ್ನು ಬಿಂಬಿಸುವಂತವುಗಳು. ಈ ತೆರನಾದ ಚನ್ನಪಟ್ಟಣದಂತಹ ವಿಶೇಷ ಕಲೆ ಪ್ಲಾಸ್ಟಿಕ್ ಆಟಿಕೆಗಳಿಗೆ ಇಂದಿಗೆ ಸಡ್ಡು ಹೊಡೆದು ನಿಂತಿರುವುದು ಮತ್ತು ಈ ಕಾರ್ಯಾಗಾರವು ಉಡುಪಿಯಲ್ಲಿ ಆಯೋಜನೆಗೊಳ್ಳುತ್ತಿರುವುದು ಬಹು ಸಂತಸದ ಸಂಗತಿ” ಎಂಬುದಾಗಿ ಅಭಿಪ್ರಾಯವಿತ್ತರು. ಗೊಂಬೆ ತಯಾರಿಕಾ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾದ ಸುಕನ್ಯಾ ನೀಲಸಂದ್ರ ಹಾಗೂ ಸುಂದ್ರಕಲಾರವರು ಈ ಕಾರ್ಯಾಗಾರದಲ್ಲಿ ಕಲಿಸಿಕೊಡುತ್ತಿರುವ ಆಟಿಕೆಗಳ ಉಪಯುಕ್ತತೆ ಹಾಗೂ ತಾಂತ್ರಿಕತೆಯನ್ನು ವಿವರಿಸಿದರು. ಟಿಪ್ಪು ಸುಲ್ತಾನನ ಕಾಲದಲ್ಲಿ ಪರ್ಶಿಯನ್ ಆಟಿಕೆಗಳ…

Read More

ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದಿಂದ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮನೆಯೇ ಗ್ರಂಥಾಲಯ ಯೋಜನೆಯಡಿ 130ನೇ ಗ್ರಂಥಾಲಯದ ಉದ್ಘಾಟನಾ ಸಮಾರಂಭವು ದಿನಾಂಕ 03 ಜನವರಿ 2025ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಿಕ್ಷಣ ತಜ್ಞ ಡಾ. ಮಹಾಬಲೇಶ್ವರ ರಾವ್ “ಜನರಲ್ಲಿ ಓದುವ ಹವ್ಯಾಸ ವೃದ್ಧಿ, ಜ್ಞಾನ ಗಳಿಕೆ, ವಿದ್ಯಾವಂತರಾಗಲು ಪೂರಕವಾಗಿ ಗ್ರಂಥಾಲಯ ಆಂದೋಲನ ನಡೆದಿಲ್ಲ. ಬಸ್, ರೈಲು, ವಿಮಾನ ನಿಲ್ದಾಣ, ಆಸ್ಪತ್ರೆ ಸಹಿತ ಸಾರ್ವಜನಿಕ ಸ್ಥಳದಲ್ಲಿ ಜನರಿಗೆ ವಿರಾಮ ಸಿಕ್ಕಾಗ ಓದಲು ಪುಸ್ತಕ ಭಂಡಾರ/ಗ್ರಂಥಾಲಯ ನಿರ್ಮಾಣವನ್ನು ಅಗತ್ಯ ಸೇವೆಯಾಗಿ ಪರಿಗಣಿಸಬೇಕು. ಆಧುನಿಕ ಡಿಜಿಟಲ್ ಮಾಧ್ಯಮ ಬಂದ ಮೇಲೆ ಪುಸ್ತಕ ಓದು ಕಡಿಮೆಯಾಗಿದೆ. ಪದವಿ ಪೂರ್ವ ಕಾಲೇಜಿನ ತನಕದ ವೇಳಾಪಟ್ಟಿಯಲ್ಲಿ ಗ್ರಂಥಾಲಯದ ಅವಧಿಯೇ ಇಲ್ಲ. ಗ್ರಂಥಾಲಯಗಳು ದುರ್ಬಲವಾಗಿವೆ. ಈ ನಿಟ್ಟಿನಲ್ಲಿ ಶಾಲೆಗೊಂದು ಗ್ರಂಥಾಲಯ ಅಭಿಯಾನ ಆಗಬೇಕು” ಎಂದು ಹೇಳಿದರು. ಜಪಾನಿನ ಮಿಯಾಜಾಕಿ ವಿವಿಯ ಪ್ರೊಫೆಸರ್ ಡಾ. ಹರೀಶ್ ಕುಮಾರ್ ಮಧ್ಯಸ್ಥ…

Read More

ಧಾರವಾಡ : 2025ನೆಯ ಸಾಲಿನಲ್ಲಿ ಸಾಹಿತ್ಯ ಗಂಗಾ ಧಾರವಾಡ ಸಂಸ್ಥೆಯ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಇನ್ನಷ್ಟು ಅರ್ಥಪೂರ್ಣ ಮತ್ತು ವಿಸ್ತಾರಗೊಳ್ಳಲಿವೆ. ಸಾಹಿತ್ಯ ಗಂಗಾ ಸಂಸ್ಥೆಯು ‘ಸಾಹಿತ್ಯ ಗಂಗಾ ಕಥಾಮಾಲೆ’ ಯೋಜನೆಯ ಮೂಲಕ ಹಲವು ಉದಯೋನ್ಮುಖ ಪ್ರತಿಭೆಗಳನ್ನು ಗುರುತಿಸುವ ಮತ್ತು ಅವರಿಗೊಂದು ವೇದಿಕೆ ಒದಗಿಸುವ ಕೆಲಸ ಮಾಡಲಿದೆ. ಸಾಹಿತ್ಯಿಕ ರಾಜಕೀಯದಿಂದ ದೂರವಿರುವ, ಪ್ರಕಟಣೆಯ ಸೌಲಭ್ಯ ಕಠಿಣವಾದ ಪ್ರತಿಭಾನ್ವಿತ ಬರಹಗಾರರ ಪುಸ್ತಕ ಪ್ರಕಟಣೆಗೆ ನೆರವು ನೀಡಲಾಗುವುದು. ಕೃತಿ ಪ್ರಕಟಣೆಗೆ ಧನ ಸಹಾಯ ನೀಡಲಾಗುವುದಿಲ್ಲ. ಕೆಲವು ಉತ್ಸಾಹಿ ಪ್ರಕಾಶಕರ ನೆರವಿನೊಂದಿಗೆ ಪ್ರಕಟಿಸಲಾಗುವುದು. ಕೇವಲ ಸ್ವತಂತ್ರ ಮತ್ತು ಅಪ್ರಕಟಿತ ಕಥಾಸಂಕಲನ ಹಾಗೂ ಕಾದಂಬರಿಗಳನ್ನು ಮಾತ್ರ ಪ್ರಕಟಿಸಲಾಗುವುದು. ಜಾತಿ, ಲಿಂಗ, ವಯೋಮಿತಿ, ಪ್ರದೇಶ ಸೇರಿದಂತೆ ಯಾವುದೇ ರೀತಿಯ ಕೃತಕ ಮಾನದಂಡಗಳಿರುವುದಿಲ್ಲ. ಕೃತಿಯ ಗುಣಮಟ್ಟವೊಂದೇ ಆಯ್ಕೆಯ ಏಕೈಕ ಮಾನದಂಡ. ಆಸಕ್ತ ಲೇಖಕ/ಲೇಖಕಿಯರು ತಮ್ಮ ಸಂಕ್ಷಿಪ್ತ ಪರಿಚಯ, ಪೂರ್ಣ ವಿಳಾಸ ಮತ್ತು ಇತ್ತೀಚಿನ ಭಾವಚಿತ್ರದೊಂದಿಗೆ ಪ್ರಕಟಿಸಬೇಕೆಂದಿರುವ ಕೃತಿಯ ಆಯ್ದ ಭಾಗಗಳ ಸಾಫ್ಟ್ ಕಾಪಿಯನ್ನು ನಮಗೆ ವಾಟ್ಸಪ್ ಅಥವಾ ಈಮೇಲ್ ಮೂಲಕ…

Read More