Subscribe to Updates
Get the latest creative news from FooBar about art, design and business.
Author: roovari
ಉಡುಪಿ : ರಂಗಭೂಮಿ ಉಡುಪಿ ವತಿಯಿಂದ ಶಾಲಾ ಮಕ್ಕಳಿಗೆ ರಂಗ ಶಿಕ್ಷಣ ಅಭಿಯಾನದ ಅಂಗವಾಗಿ ಹಮ್ಮಿಕೊಂಡ ರಂಗಶಿಕ್ಷಣ ಮಕ್ಕಳ ನಾಟಕೋತ್ಸವದ ಸಮಾರೋಪ ಸಮಾರಂಭ ದಿನಾಂಕ 02 ಜನವರಿ 2024ರಂದು ಎಂ. ಜಿ. ಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಖ್ಯಾತ ರಂಗ ಕರ್ಮಿ ಡಾ. ಜೀವನರಾಮ್ ಸುಳ್ಯ ಮಾತನಾಡಿ ನಾಟಕ, ಯಕ್ಷಗಾನ, ನೃತ್ಯ ಮೊದಲಾದ ಕಲಾ ಕೌಶಲಗಳನ್ನು ಮಕ್ಕಳಿಗೆ ಕಲಿಸಿದರೆ ಅವರ ಶೈಕ್ಷಣಿಕ ಪ್ರಗತಿಗೆ ತೊಡಕಾಗುತ್ತದೆ ಎಂದು ಆತಂಕ ಪಡುವ ಅಗತ್ಯವಿಲ್ಲ. ರಂಗ ಶಿಕ್ಷಣ ಮಕ್ಕಳ ಪ್ರಗತಿಗೆ ಪೂರಕವಾಗಲಿದೆ ಎಂಬುದನ್ನು ಹೆತ್ತವರು ಅರಿತುಕೊಳ್ಳಬೇಕು. ಶಾಲಾ ಕಾಲೇಜುಗಳ ವಾರ್ಷಿಕೋತ್ಸದಲ್ಲಿ ಸಾಮಾನ್ಯವಾಗಿ ನಡೆಯುತ್ತಿದ್ದ ನಾಟಕಗಳು ಇಂದು ನಾನಾ ಕಾರಣಗಳಿಂದಾಗಿ ಬಹುತೇಕ ನಿಂತೇ ಹೋಗಿವೆ. ಇದು ಮಕ್ಕಳಿಗಾದ ನಷ್ಟ. ರಂಗ ಚಟುವಟಿಕೆ ಎಂಬುದು ಒಡೆಯುವ ಕಾರ್ಯ ಅಲ್ಲ, ಬದಲಿಗೆ ಅದು ಕಟ್ಟುವ ಕಾರ್ಯ. ಜಾತಿ, ಮತ, ವರ್ಗ, ಬೇಧ ಎಲ್ಲಾ ಮರೆತು ಒಂದಾಗುವುದು ರಂಗಭೂಮಿಯಲ್ಲಿ ಮಾತ್ರ. ಸರಕಾರ ಇಂತಹ ಉತ್ತಮ…
ಮಂಗಳೂರು : ಏಮ್ ಫಾರ್ ಸೇವಾ ಸಂಸ್ಥೆ ಚಾರಿಟಿ ಕಾರ್ಯಕ್ರಮಗಳಿಗೆ ಪೂರಕವಾಗಿ ದಿನಾಂಕ 12 ಜನವರಿ 2025ರಂದು ಸಂಜೆ 6-00 ಗಂಟೆಗೆ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ಸಂಗೀತ ಭಾರತಿ ಪ್ರತಿಷ್ಠಾನದ ಸಹಯೋಗದೊಂದಿಗೆ ಮ್ಯೂಸಿಕಲ್ ಸೆಲೆಬ್ರೇಷನ್ ಆಫ್ ರಾಮ ಎಂಬ ಪರಿಕಲ್ಪನೆಯೊಂದಿಗೆ ‘ರಾಮಂ ಭಜೇ’ ಸಂಗೀತ ಕಾರ್ಯಕ್ರಮ ಆಯೋಜಿಸಿದೆ. ದೇಶದ ಹೆಸರಾಂತ ಯುವ ಕಲಾವಿದೆ ಸೂರ್ಯಗಾಯತ್ರಿ ಇವರ ಹಾಡುಗಾರಿಕೆ ಇರಲಿದೆ. ಏಮ್ ಫಾರ್ ಸೇವಾ ಸಂಸ್ಥೆ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೊದಲಬಾರಿಗೆ ಮಂಗಳೂರಿನಲ್ಲಿ ಸಂಗೀತಾಸಕ್ತರಿಗೆ ಹೊಸ ರೀತಿಯ ಸಂಗೀತಾನುಭವ ನೀಡಬೇಕು ಎಂಬ ಉದ್ದೇಶದಿಂದ ದೇಶ-ವಿದೇಶಗಳ ಪ್ರತಿಷ್ಠಿತ ವೇದಿಕೆಗಳಲ್ಲಿ ಸುಶ್ರಾವ್ಯ ಸಂಗೀತದಿಂದ ಹೆಸರುವಾಸಿಯಾಗಿರುವ ಸೂರ್ಯಗಾಯತ್ರಿಯವರ ಕಾರ್ಯಕ್ರಮ ಆಯೋಜಿಸಿದೆ. ಸೂರ್ಯಗಾಯತ್ರಿ ವಿವಿಧ ಹಾಡುಗಳ ಮೂಲಕ ರಾಮಾರಾಧನೆ ಮಾಡಲಿದ್ದು, ಸಂಗೀತ ಕ್ಷೇತ್ರದ ದಿಗ್ಗಜರೆನಿಸಿಕೊಂಡ ವಿದ್ವಾನ್ ಸುಂದರ ರಾಜನ್ ವೀಣೆ, ವಿದ್ವಾನ್ ಆದರ್ಶ ಅಜಯ್ ಕುಮಾರ್ ವಯೋಲಿನ್, ವಿ.ಪಿ.ವಿ. ಅನಿಲ್ ಕುಮಾರ್ ಮೃದಂಗ, ಪಂಡಿತ್ ಪ್ರಶಾಂತ್ ಶಂಕರ್ ತಬಲ, ಶೈಲೇಶ್ ಮಾರರ್ ತಾಳವಾದ್ಯದಲ್ಲಿ ಸಹಕರಿಸಲಿದ್ದಾರೆ. ಗ್ರಾಮೀಣ…
ಕುಂದಾಪುರ : ಧಾರ್ಮಿಕ, ಶೈಕ್ಷಣಿಕ, ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಲೋಕದ ಹರಿಕಾರ, ಅಜಾತಶತ್ರು ತೊಂಬತ್ತರ ದಾರ್ಶನಿಕ ಬಸ್ರೂರು ಅಪ್ಪಣ್ಣ ಹೆಗ್ಡೆಯವರನ್ನು ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಐರೋಡಿ ಇವರು ಬಸ್ರೂರಿನ ಹೆಗ್ಡೆಯವರ ಸ್ವಗೃಹದಲ್ಲಿ ದಿನಾಂಕ 23 ಡಿಸೆಂಬರ್ 2024ರಂದು ಸನ್ಮಾನಿಸಿದರು. ಕಲಾಕೇಂದ್ರದ ಅಧ್ಯಕ್ಷರಾದ ಆನಂದ ಕುಂದರ್ ಇವರ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಕಾರ್ಯದರ್ಶಿ ರಾಜಶೇಖರ ಹೆಬ್ಬಾರ್ ಸ್ವಾಗತಿಸಿದರು. ಯಕ್ಷಗಾನದ ಕೇದಿಗೆ ಮಂದಲೆ ತೊಡಿಸಿ, ಮಣಿಸರದೊಂದಿಗೆ ತೊಂಬತ್ತರ ಸುಂದರಾಂಗ ಹೆಗ್ಡೆಯವರನ್ನು ಶೃಂಗರಿಸಿ ಅಭಿನಂದಿಸಲಾಯಿತು. ಶ್ರೀಹೆಗ್ಡೆಯವರು ಮಾತನಾಡುತ್ತಾ “ಯಕ್ಷಗಾನ ಸಮಾಜವನ್ನು ಸಂಸ್ಕಾರವಂತರನ್ನಾಗಿ ರೂಪಿಸುತ್ತದೆ. ಧರ್ಮವಂತರನ್ನಾಗಿ ಬಾಳುವಲ್ಲಿ ಸಹಕರಿಸುತ್ತದೆ. ಪುರಾಣ ಮುಂತಾದ ಅನೇಕ ವಿಚಾರಗಳನ್ನು ತಿಳಿಸುತ್ತಾ ಜನರನ್ನು ವಿದ್ಯಾವಂತರನ್ನಾಗಿಸುತ್ತದೆ. ಇಂತಹ ಕಲೆಯನ್ನು ಉಳಿಸಿ ಬೆಳಸುವ ಬಗ್ಗೆ ಪರಿಶ್ರಮಿಸುತ್ತಿರುವ ಯಕ್ಷಗಾನ ಕಲಾಕೇಂದ್ರಕ್ಕೆ ಶುಭ ಹಾರೈಕೆಗಳು” ಎಂದು ಹೇಳಿದರು. ಅಧ್ಯಕ್ಷರಾದ ಆನಂದ ಕುಂದರ್ ಇವರು ಅಪ್ಪಣ್ಣ ಹೆಗ್ಡೆಯುವರಿಗೆ ತೊಂಬತ್ತರ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದರು. ಭಾಗವತರಾದ ರಾಘವೇಂದ್ರ ಮಯ್ಯ ಮತ್ತು ಗಣೇಶ ಆಚಾರ್ಯರು ವಿಷ್ಣುಮೂರ್ತಿ ಬೇಳೂರರು ರಚಿಸಿದ ಅಪ್ಪಣ್ಣ ಹೆಗ್ಡೆಯುವರ…
ಕಾಸರಗೋಡು : ಶ್ರೀಮಾನ್ ಕೃಷ್ಣಮೂರ್ತಿ ಕುಲಕರ್ಣಿ ಹುಬ್ಬಳ್ಳಿ ಸಾರತ್ಯದ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಇದೀಗ ಕೇರಳ ರಾಜ್ಯದಲ್ಲಿ ತನ್ನ ಕಾರ್ಯಕ್ಷೇತ್ರವನ್ನು ವಿಸ್ತಾರಗೊಳಿಸುವ ಸದುದ್ದೇಶದಿಂದ ಕಾರ್ಯ ಪ್ರವೃತವಾಗಿದೆ. ಕಾಸರಗೋಡು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಇವರನ್ನು ಕೇರಳ ರಾಜ್ಯ ಸಂಚಾಲಕರನ್ನಾಗಿ ನಿಯಮಿಸಿ ಆದೇಶ ನೀಡಿದ ಹಿನ್ನೆಲೆಯಲ್ಲಿ, ಕಾಸರಗೋಡು ಜಿಲ್ಲೆಯಲ್ಲಿ ಚುಟುಕು ಕವಿಗಳ ಜನಪ್ರಿಯ ಕವಿ, ಸಂಘಟಕ, ಸಂಪನ್ಮೂಲ ವ್ಯಕ್ತಿಯಾದ ಶ್ರೀ ವೆಂಕಟ್ ಭಟ್ ಎಡನೀರು ಇವರನ್ನು ಕಾಸರಗೋಡು ಜಿಲ್ಲಾ ವ್ಯಾಪ್ತಿಗೆ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಇವರು ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ರಾಜ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದರು. ಅನೇಕ ಚುಟುಕು ಕೃತಿಗಳನ್ನು ಹೊರತಂದಿದ್ದು, ನೂರಾರು ಕವಿಗೋಷ್ಠಿ, ಕವಿತಾ ರಚನಾ ಕಾರ್ಯಗಾರಗಳನ್ನು ಸಂಘಟಿಸಿದ್ದಾರೆ. ಇವರ ಪ್ರಕಟಿತ ಚುಟುಕು ಕೃತಿಗಳು, ಖರ್ಜುರ, ನೂರೊಂದು ಕವಿತೆಗಳು, ತಿಳಿಸಾರು, ಪೆಟ್ಟಿಗೆ ಭೂತ, 302 ಎಳ್ಳುಂಡೆ. ವೆಂಕಟ್ ಎಡನೀರು ಇವರನ್ನು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಇದರ ಕಾಸರಗೋಡು ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ…
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಮುಖ ಕಾರ್ಯ ಚಟುವಟಿಕೆಗಳಲ್ಲಿ ಪುಸ್ತಕ ಪ್ರಕಟಣೆ ಬಹಳ ಮುಖ್ಯವಾದದ್ದು. ಇದುವರೆಗೂ 1,800ಕ್ಕೂ ಹೆಚ್ಚು ಪುಸ್ತಕಗಳನ್ನು ಪರಿಷತ್ತು ಪ್ರಕಟಿಸಿದ್ದು, ಅದು ಒಂದು ರೀತಿಯಲ್ಲಿ ಆಧುನಿಕ ಕನ್ನಡ ಸಾಹಿತ್ಯ ಚರಿತ್ರೆಯನ್ನೇ ಬಿಂಬಿಸುತ್ತದೆ ಎಂದರೆ ತಪ್ಪಾಗಲಾರದು. ಪರಿಷತ್ತು ಪ್ರಕಟಿಸುವ ಪುಸ್ತಕಗಳು ಎಂದರೆ ಹೂರಣ ಮತ್ತು ಮುದ್ರಣಗಳೆರಡರೆಲ್ಲಿಯೂ ಶ್ರೇಷ್ಠ ಗುಣಮಟ್ಟವನ್ನು ಹೊಂದಿರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿಯವರು ತಿಳಿಸಿದ್ದು, ಕನ್ನಡಿಗರಿಗೆ ಈ ಕೃತಿಗಳನ್ನು ತಲುಪಿಸುವ ಉದ್ದೇಶದಿಂದ ವರ್ಷದಲ್ಲಿ ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ, ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪನೆ ಮತ್ತು ಕನ್ನಡ ರಾಜ್ಯೋತ್ಸವಗಳ ಸಂದರ್ಭದಲ್ಲಿ ನಾಲ್ಕು ತಿಂಗಳುಗಳ ಕಾಲ ವಿಶೇಷ ರಿಯಾಯತಿ ಮಾರಾಟವನ್ನು ಕನ್ನಡ ಸಾಹಿತ್ಯ ಪರಿಷತ್ತು ಅದಮ್ಯ ಪುಸ್ತಕ ಪ್ರೇಮಿ ಗಳಗನಾಥರ ಹೆಸರಿನ ತನ್ನ ‘ಪುಸ್ತಕ ಮಳಿಗೆ’ಯಲ್ಲಿ ಏರ್ಪಡಿಸುತ್ತದೆ. ಅದರಂತೆ 76ನೆಯ ಗಣರಾಜ್ಯೋತ್ಸವದ ಸಂದರ್ಭದಲ್ಲಿ 2025ರ ಜನವರಿ ತಿಂಗಳಿಡೀ ‘ವಿಶೇಷ ರಿಯಾಯತಿ ಮಾರಾಟ’ವನ್ನು ನಡೆಸಲಿದ್ದು ಶೇ.10ರಿಂದ ಶೇ 75ರವರೆಗೆ ವಿಶೇಷ ರಿಯಾಯಿತಿಯನ್ನು ಪರಿಷತ್ತಿನ…
ಕೋಟ : ಐವತ್ತರ ಸಂಭ್ರಮದ ಸುವರ್ಣ ಪರ್ವವನ್ನು ಆಚರಿಸುತ್ತಿರುವ ವಿಶ್ವ ವಿಖ್ಯಾತ ಸಾಲಿಗ್ರಾಮ ಮಕ್ಕಳ ಮೇಳದ ಸ್ಥಾಪಕ ನಿರ್ದೇಶಕ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ, ಲೇಖಕ, ಯಕ್ಷಗಾನ ಹಾಗೂ ನಾಟಕ ಕಲಾವಿದರಾದ ದಿವಂಗತ ಕಾರ್ಕಡ ಶ್ರೀನಿವಾಸ ಉಡುಪ ಮತ್ತು ಎಚ್. ಶ್ರೀಧರ ಹಂದೆಯವರ ಹೆಸರಿನ 2025ರ ಸಾಲಿನ ‘ಉಡುಪ-ಹಂದೆ ಪ್ರಶಸ್ತಿ’ಗೆ ಯಕ್ಷಗಾನದ ಪ್ರಸಿದ್ಧ ಭಾಗವತರಾದ ಹೆರೆಂಜಾಲು ಗೋಪಾಲ ಗಾಣಿಗ ಮತ್ತು ರಾಷ್ಟೀಯ ರಂಗ ನಿರ್ದೇಶಕ ಡಾ. ಶ್ರೀಪಾದ ಭಟ್ ಆಯ್ಕೆಯಾಗಿದ್ದಾರೆ. ಹೆರೆಂಜಾಲು ಗೋಪಾಲ ಗಾಣಿಗ : ಕುಂದಾಪುರ ತಾಲೂಕಿನ ನಾಗೂರಿನ ಯಕ್ಷಗಾನ ಭಾಗವತ ಹೆರಂಜಾಲು ಗೋಪಾಲ ಗಾಣಿಗರು, ತಂದೆ ವೆಂಕಟರಮಣ ಗಾಣಿಗರಿಂದ ಬಳುವಳಿಯಾಗಿ ಬಂದ ಯಕ್ಷ ಸಂಪತ್ತನ್ನು ವಿಸ್ತರಿಸಿಕೊಂಡವರು. ಡಾ. ಶಿವರಾಮ ಕಾರಂತರ ನಿರ್ದೇಶನದ ಉಡುಪಿಯ ಯಕ್ಷಗಾನ ಕೇಂದ್ರವನ್ನು ಸೇರಿ, ಗುರು ನೀಲಾವರ ರಾಮಕೃಷ್ಣಯ್ಯ ಹಾಗೂ ಮಹಾಬಲ ಕಾರಂತರ ಗರಡಿಯಲ್ಲಿ ಪಳಗಿ, ಯಕ್ಷಾನದ ಹಿಮ್ಮೇಳ ಮತ್ತು ಮುಮ್ಮೇಳಗಳಲ್ಲಿ ಸಾಧನೆಗೈದರು. ಡಾ. ಶಿವರಾಮ ಕಾರಂತರ ಯಕ್ಷ ಬ್ಯಾಲೆ ತಂಡದ ಮೂಲಕ ರಷ್ಯ, ಲಂಡನ್,…
ಸಿದ್ದಾಪುರ : ಯಕ್ಷಶಿಕ್ಷಣ ಟ್ರಸ್ಟ್ (ರಿ.) ಉಡುಪಿ, ಯಕ್ಷಗಾನ ಕಲಾರಂಗ (ರಿ.) ಉಡುಪಿ, ಯಕ್ಷ ನುಡಿಸಿರಿ ಬಳಗ (ರಿ.) ಸಿದ್ದಾಪುರ ಮತ್ತು ಯಕ್ಷ ಗುರುಕುಲ ಬೈಂದೂರು ಇವರ ಸಹಭಾಗಿತ್ವದಲ್ಲಿ ವಿಧಾನಸಭಾ ಕ್ಷೇತ್ರದ ನಾಲ್ಕು ಪ್ರೌಢಶಾಲೆಗಳ ‘ಕಿಶೋರ ಯಕ್ಷ ಸಂಭ್ರಮ -2024’ದ ಸಮಾರೋಪ ಸಮಾರಂಭವು ದಿನಾಂಕ 29 ಡಿಸೆಂಬರ್ 2024ರಂದು ಸಿದ್ದಾಪುರದ ಸರಕಾರಿ ಪ್ರೌಢಶಾಲೆಯ ಮುಂಭಾಗದಲ್ಲಿ ಪ್ರದರ್ಶನ ಸಮಿತಿಯ ಕಾರ್ಯಾಧ್ಯಕ್ಷರಾದ ಡಾ. ಜಗದೀಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಈ ಯಕ್ಷ ಸಂಭ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಮುಖ್ಯೋಪಾಧ್ಯಾಯರ ಮೂಲಕ ಪ್ರಮಾಣ ಪತ್ರ ವಿತರಿಸಲಾಯಿತು. ಮೂವರು ವಿದ್ಯಾರ್ಥಿಗಳು ಅನಿಸಿಕೆಯನ್ನು ಹಂಚಿಕೊಂಡರು. ಅಭ್ಯಾಗತರಾಗಿ ದಾನಿಗಳಾದ ಚಂದ್ರ ಕುಲಾಲ್, ಪ್ರವೀಣ್ ಪಟೇಲ್, ಚಂದ್ರಾನಂದ ಶೆಟ್ಟಿ, ಪಂಚಾಯತ್ ಉಪಾಧ್ಯಕ್ಷರಾದ ಕೃಷ್ಣ ಪೂಜಾರಿ ಭಾಗವಹಿಸಿದರು. ಕಾರ್ಯದರ್ಶಿ ಗೋಪಾಲ ಕಾಂಚನ್ ಸ್ವಾಗತಿಸಿದರು. ಯಕ್ಷಶಿಕ್ಷಣ ಟ್ರಸ್ಟಿನ ಕಾರ್ಯದರ್ಶಿ ಮುರಲಿ ಕಡೆಕಾರ್ ಇವರು ಶಾಸಕರಿಗೆ ಮತ್ತು ಪ್ರದರ್ಶನ ಸಮಿತಿಗೆ ಕೃತಜ್ಞತೆ ಸಲ್ಲಿಸಿದರು. ಟ್ರಸ್ಟಿನ ಸದಸ್ಯರಾದ ನಾರಾಯಣ ಎಂ. ಹೆಗಡೆ ಉಪಸ್ಥಿತರಿದ್ದ ಕಾರ್ಯಕ್ರಮವನ್ನು ಬಾಲಕೃಷ್ಣ ಮಂಜ…
ತೆಕ್ಕಟ್ಟೆ: ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆ, ರಂಗಸಂಪದ ಕೋಟ, ಧಮನಿ ಟ್ರಸ್ಟ್ ತೆಕ್ಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ‘ಸಿನ್ಸ್ 1999 ಶ್ವೇತಯಾನ-95’ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ ‘ನಾಟಕಾಷ್ಟಕ’ದ ಏಳನೇ ದಿನದ ಕಾರ್ಯಕ್ರಮ ದಿನಾಂಕ 01 ಜನವರಿ 2025ರಂದು ತೆಕ್ಕಟ್ಟೆಯ ಹಯಗ್ರೀವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕಲಾಪೋಷಕ ಕೋಟ ಗಣಪತಿ ಟಿ. ಶ್ರೀಯಾನರನ್ನು ಅಭಿನಂದಿಸಿ ಮಾತನಾಡಿದ ಬನ್ನೂರು ಶಾರದಾ ಕಾಲೇಜಿನ ಉಪನ್ಯಾಸಕ ರಾಘವೇಂದ್ರ ಶೆಟ್ಟಿ ‘ನಾಟಕಾಷ್ಟಕದ ಈವರೆಗಿನ ನಾಟಕಗಳು ಭಿನ್ನ ಭಿನ್ನವಾಗಿ ರಂಗದಲ್ಲಿ ಕಂಡವು. ವೃತ್ತಿಪರ ಕಲಾವಿದರನ್ನೂ ಮೀರಿಸುವಂತಹ ರಂಗ ಪ್ರಸ್ತುತಿ ಕೆಲವು ಮಕ್ಕಳ ರಂಗಭೂಮಿಯ ನಾಟಕಗಳಲ್ಲಾದವು. ತೆಕ್ಕಟ್ಟೆ ಭಾಗದಲ್ಲಿ ರಂಗಭೂಮಿಯ ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡ ಹೆಗ್ಗಳಿಕೆ ಈ ಸಂಸ್ಥೆಯದ್ದು. ಈ ಸಂದರ್ಭವನ್ನು ನೆಪ ಮಾಡಿಕೊಂಡು ಕಲಾ ಪೋಷಕರನ್ನು ಗುರುತಿಸಿ, ಗೌರವಿಸಿದ ಚುಟುಕು ಸಭಾ ಕಾರ್ಯಕ್ರಮ ಇತರರಿಗೆ ಮಾರ್ಗದರ್ಶನವಾಗಿದೆ.” ಎಂದರು. ಎಸ್. ಎಮ್. ಎಸ್. ಕಾಲೇಜಿನ ಪ್ರಾಂಶುಪಾಲರಾದ ಅಭಿಲಾಷ ಸೋಮಯಾಜಿ, ರಂಗ ನಿರ್ದೇಶಕ ರೋಹಿತ್ ಎಸ್. ಬೈಕಾಡಿ, ಉದ್ಯಮಿ ಗೋಪಾಲ ಪೂಜಾರಿ, ಗಣೇಶ್ ಕೊಮೆ, ಸಾತ್ಯಕಿ…
ಕಟೀಲು : ಶ್ರೀ ದುರ್ಗಾ ಮಕ್ಕಳ ಮೇಳ (ರಿ.) ಇದರ 16ನೇ ವಾರ್ಷಿಕ ಕಲಾಪರ್ವವು ದಿನಾಂಕ 28 ಡಿಸೆಂಬರ್ 2024ರಂದು ಕಟೀಲು ಸರಸ್ವತೀ ಸದನದಲ್ಲಿ ಉದ್ಘಾಟನೆಗೊಂಡಿತು. ಕಿನ್ನಿಗೋಳಿ ಯಕ್ಷಲಹರಿ ಅಧ್ಯಕ್ಷ ರಘುನಾಥ ಕಾಮತ್ ಇವರ ಕಲಾಪರ್ವದ ಉದ್ಘಾಟನೆಯನ್ನು ನೆರವೇರಿಸಿದರು. ಈ ಸಮಾರಂಭದಲ್ಲಿ ಭಾಗವಹಿಸಿದ ಎಡನೀರು ಮಠದ ಶ್ರೀ ಸಚ್ಚಿದಾನಂದ ಸ್ವಾಮೀಜಿ ಇವರು ಮಾತನಾಡಿ “ಮಕ್ಕಳಲ್ಲಿ ಕಲೆಗಳ ಬಗ್ಗೆ ಆಸಕ್ತಿ ಮೂಡಿಸಿದಾಗ ಅವರಲ್ಲಿ ಶಿಸ್ತು ಸಂಸ್ಕಾರ ಜ್ಞಾನಾಭಿವೃದ್ಧಿ ಸಾಧ್ಯ. ಶಾಲಾ ಪಠ್ಯಗಳಲ್ಲಿ ಪುರಾಣದ ವಿಷಯಗಳು ಕಡಿಮೆಯಾಗುತ್ತಿದ್ದು, ಯಕ್ಷಗಾನದ ಬಗ್ಗೆ ಅಸಕ್ತಿ ಮೂಡಿಸುವ ಅಗತ್ಯವಿದೆ. ಚೌಕಿಗೆ ಮಕ್ಕಳು ಅಸಕ್ತಿಯಿಂದ ಬಂದು ವೇಷಹಾಕುವುದನ್ನು ಕುತೂಹಲದಿಂದ ನೋಡುತ್ತಿದ್ದ ದಿನಗಳು ಬದಲಾಗಿವೆ. ಯಕ್ಷಗಾನಕ್ಕೆ ಪ್ರಸಿದ್ಧವಾದ ಕಟೀಲಿನಲ್ಲಿ ಮಕ್ಕಳ ಮೇಳದ ಮೂಲಕ ಯಕ್ಷಗಾನ ಕಲಿಸುವ ಅಭಿನಂದನೀಯ ಕೆಲಸ ಆಗುತ್ತಿದೆ” ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಖ್ಯಾತ ಕಲಾವಿದ ಸುಣ್ಣಂಬಳ ವಿಶ್ವೇಶ್ವರ ಭಟ್ ಇವರಿಗೆ ‘ದುರ್ಗಾ ಮಕ್ಕಳ ಮೇಳ’ ಪ್ರಶಸ್ತಿ, ಹಿಮ್ಮೇಳ ಕಲಾವಿದ ರಾಮಪ್ರಕಾಶ ಕಲ್ಲೂರಾಯರಿಗೆ ‘ಶ್ರೀನಿಧಿ ಅಸ್ರಣ್ಣ ಪ್ರಶಸ್ತಿ’ ನೀಡಿ…
ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸಾಪ್ತಾಹಿಕ ನೃತ್ಯಸರಣಿ ಕಾರ್ಯಕ್ರಮವು ದಿನಾಂಕ 06 ಜನವರಿ 2025ರಂದು ಸಂಜೆ ಗಂಟೆ 6-25ಕ್ಕೆ ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಈ ದಿನದ ಸರಣಿ ಕಾರ್ಯಕ್ರಮದಲ್ಲಿ ಬೆಂಗಳೂರಿನ ಕುಮಾರಿ ಪ್ರಜ್ಞಾ ಪಿ. ಶರ್ಮ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ. ವಿದುಷಿ ಅರ್ಚನಾ ಪುಣ್ಯೇಶ್ ಇವರ ಶಿಷ್ಯೆಯಾಗಿರುವ ಪ್ರಜ್ಞಾ ಭರತನಾಟ್ಯ ಮತ್ತು ಕೂಚಿಪುಡಿ ಎರಡೂ ಪ್ರಕಾರಗಳನ್ನೂ ಅಭ್ಯಾಸ ಮಾಡಿರುವ ಕಲಾವಿದೆ. 2023ರಲ್ಲಿ ಭರತನಾಟ್ಯ ರಂಗಪ್ರವೇಶವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಇವಳು ಕೆ.ಎಸ್.ಇ.ಇ.ಬಿ. ನಡೆಸುವ ಭರತನಾಟ್ಯ ಜೂನಿಯರ್ ಮತ್ತು ಸೀನಿಯರ್ ಪರೀಕ್ಷೆಗಳನ್ನು ಉನ್ನತ ಶ್ರೇಣಿಯಲ್ಲಿ ಮತ್ತು ಕೂಚಿಪುಡಿ ಜೂನಿಯರ್ ಪರೀಕ್ಷೆಯಲ್ಲಿ 4ನೇ ಸ್ಥಾನ ಪಡೆದು ಯಶಸ್ವಿಯಾಗಿ ಪೂರ್ಣಗೊಳಿಸಿರುತ್ತಾರೆ ಮತ್ತು ಈ ವರ್ಷ ಕೂಚಿಪುಡಿ ಸೀನಿಯರ್ ಪರೀಕ್ಷೆಯನ್ನು ಮುಗಿಸಿರುತ್ತಾಳೆ. ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಕೊಡಲ್ಪಡುವ ಶಿಷ್ಯ ವೇತನ…