Subscribe to Updates
Get the latest creative news from FooBar about art, design and business.
Author: roovari
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ವನದುರ್ಗ ದೇವಸ್ಥಾನದಲ್ಲಿ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತಿ ಸ್ವಾಮಿಜಿಗಳ ಸ್ವರ್ಣ ಪಾದುಕ ಪೂಜೆಯ ಪ್ರಯುಕ್ತ ಗಮಕ ವಾಚನವು ದಿನಾಂಕ 02-04-2024 ರಂದು ನಡೆಯಿತು. ಗಮಕಿ ಶ್ರೀ ಎ. ಡಿ. ಸುರೇಶ್ ಅವರಿಂದ ನಿತ್ಯಾತ್ಮ ಶುಕಯೋಗಿಗಳ ಭಗವದ್ಗೀತಾ ಉಪದೇಶದ ಭಾಗದ ವಾಚನ ಮತ್ತು ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯರಿಂದ ವ್ಯಾಖ್ಯಾನವು ನಡೆಯಿತು. ಬಾಸಮೆ ನಾರಾಯಣ ಭಟ್, ಶ್ರೀ ಗೋಪಾಲಕೃಷ್ಣ ಶರ್ಮ, ಕಾಂತಾಜೆ ಶ್ರೀ ಗಣೇಶ ಭಟ್ ಅವರು ಸ್ವಾಗತಿಸಿ ವಂದನಾರ್ಪಣೆಯನ್ನು ಮಾಡಿ ಗೌರವಿಸಿದರು .
ಪುತ್ತೂರು: ಪುತ್ತೂರಿನ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ನಾಟಕ ತರಬೇತಿ ‘ರಂಗ ನಟನಾ’ ಇದರ ಸಮಾರೋಪ ಸಮಾರಂಭ ದಿನಾಂಕ 22-03-2024ರ ಶುಕ್ರವಾರದಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ರಂಗಭೂಮಿ ಕಲಾವಿದ ಹಾಗೂ ಚಲನಚಿತ್ರ ನಟ ಯದು ವಿಟ್ಲ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶಿವಪ್ರಕಾಶ್ ಎಂ. ದೀಪ ಪ್ರಜ್ವಲಿಸಿ ವಿದ್ಯಾರ್ಥಿಗಳಿಗೆ ಯಶಸ್ಸನ್ನು ಕೋರಿದರು. ಶಾಲಾ ಸಹಶಿಕ್ಷಕಿ ಸೌಮ್ಯ ಸ್ವಾಗತಿಸಿ, ಕವಿತಾ ಸತೀಶ್ ಕಾರ್ಯಕ್ರಮ ನಿರ್ವಹಿಸಿ, ಜ್ಯೋತಿ ಲಕ್ಷ್ಮೀ ವಂದಿಸಿದರು. ಬಳಿಕ ಶಾಲಾ ಮುಖ್ಯ ಗುರುಗಳ ಮಾರ್ಗದರ್ಶನದಲ್ಲಿ ಶಾಲಾ ಕಲಾ ಶಿಕ್ಷಕ ಕಾರ್ತಿಕ್ ಕುಮಾರ್ ವಿಟ್ಲ ಅವರ ಸಾರಥ್ಯದಲ್ಲಿ ‘ರಂಗ ನಟನಾ’ ನಾಟಕ ತರಗತಿಯ ವಿದ್ಯಾರ್ಥಿಗಳಿಂದ ‘ವೀರ ಸಾವರ್ಕರ್’, ‘ಹನುಮನ ಉಸಿರಲ್ಲಿ ರಾಮ’ ಹಾಗೂ ‘ಹರಿದ್ವರ್ಣ’ ಎಂಬ ಮೂರು ಕಿರು ನಾಟಕಗಳು ಪ್ರದರ್ಶನಗೊಂಡವು. ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಗುರು, ಪ್ರಾಥಮಿಕ ವಿಭಾಗ ಮುಖ್ಯ ಶಿಕ್ಷಕಿ ಸಂಧ್ಯಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ…
ಪುತ್ತೂರು : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಪುತ್ತೂರು ವತಿಯಿಂದ ಕೊಡಮಾಡುವ ಸ್ವರ್ಣ ಸಾಧನಾ ಪ್ರಶಸ್ತಿಗೆ ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ದಿನಾಂಕ 04-05-2024ರಂದು ಪುತ್ತೂರಿನ ಜೈನ ಭವನದಲ್ಲಿ ಜರಗಲಿದೆ. ಪ್ರಶಸ್ತಿಯು ರೂಪಾಯಿ 15,000 ನಗದು, ಪ್ರಶಸ್ತಿ ಫಲಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ಸಂಘದ ಅಧ್ಯಕ್ಷ ಬಿ. ಐತ್ತಪ್ಪ ನಾಯ್ಕ ತಿಳಿಸಿದ್ದಾರೆ. ಸುಬ್ರಾಯ ಚೊಕ್ಕಾಡಿ : ಕವಿ, ವಿಮರ್ಶಕ, ನಾಟಕಕಾರರಾದ ಸುಬ್ರಾಯ ಚೊಕ್ಕಾಡಿಯವರು ಹುಟ್ಟಿದ್ದು 29-06-1940 ರಂದು ಸುಳ್ಯ ತಾಲ್ಲೂಕಿನ ಚೊಕ್ಕಾಡಿಯಲ್ಲಿ. ತಂದೆ ಯಕ್ಷಗಾನ ಭಾಗವತರಾದ ಗಣಪಯ್ಯ, ತಾಯಿ ಸುಬ್ಬಮ್ಮ. ತನ್ನ ಪ್ರಾಥಮಿಕ ಶಿಕ್ಷಣವನ್ನು ಚೊಕ್ಕಾಡಿಯಲ್ಲಿ, ಪ್ರೌಢಶಾಲಾ ಶಿಕ್ಷಣವನ್ನು ಪಂಜದಲ್ಲಿ ಹಾಗೂ ಮೈಸೂರು ವಿಶ್ವವಿದ್ಯಾಲಯದ ಅಂಚೆ ಮತ್ತು ತೆರಪಿನ ಶಿಕ್ಷಣ ಸಂಸ್ಥೆಯಿಂದ ಕನ್ನಡದಲ್ಲಿ ಎಂ. ಎ. ಪದವಿ ಪಡೆದರು. ತಂದೆ ಯಕ್ಷಗಾನ ಕವಿ, ಭಾಗವತರಾದುದರಿಂದ ಕಿವಿಗೆ ಬೀಳುತ್ತಿದ್ದ ಲಯಬದ್ಧ ಹಾಡುಗಳು, ಹೈಸ್ಕೂಲಿಗೆ ನಡೆದು ಹೋಗುವಾಗ ಕಾಡಿನ ಮಧ್ಯೆ ಕೇಳುತ್ತಿದ್ದ ನೀರಿನ…
ಮಂಗಳೂರು : ಭಾರತೀಯ ವಿದ್ಯಾಭವನ ಮತ್ತು ರಾಮಕೃಷ್ಣಮಠದ ಸಹಯೋಗದೊಂದಿಗೆ ಸಂಗೀತ ಪರಿಷತ್ ಮಂಗಳೂರು ಆಯೋಜಿಸುವ ಸಂಗೀತ ವಿದ್ವಾನ್ ಎನ್. ಗೋಪಾಲಕೃಷ್ಣ ಐಯ್ಯರ್ ಸ್ಮರಣಾರ್ಥ ಸಂಗೀತ ಕಛೇರಿಯು ದಿನಾಂಕ 07-04-2024ರಂದು ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ನಡೆಯಲಿದೆ. ಸಂಜೆ 3.30ಕ್ಕೆ ಉಡುಪಿಯ ಕಡಿಯಾಳಿ ಸಹೋದರರಾದ ಪ್ರಭವ್ ಉಪಾಧ್ಯ ಮತ್ತು ಸೌರವ್ ಉಪಾಧ್ಯ ಅವರಿಂದ ಕೊಳಲು ವಾದನ ಕಛೇರಿಯು ನಡೆಯಲಿದ್ದು, ಧನಶ್ರೀ ಶಬರಾಯ ವಯೋಲಿನ್ ನಲ್ಲಿ ಹಾಗೂ ಪ್ರಣವ್ ಸುಬ್ರಹ್ಮಣ್ಯ ಮೃದಂಗದಲ್ಲಿ ಸಹಕರಿಸಲಿದ್ದಾರೆ. ಬಳಿಕ ಬಾಲ ಪ್ರತಿಭೆ ಗಂಗಾ ಶಶಿಧರನ್ ಹಾಗೂ ಅವರ ಗುರುಗಳಾದ ಸಿ. ಎಸ್. ಅನುರೂಪ್ ಅವರಿಂದ ವಯೋಲಿನ್ ಕಚೇರಿ ನಡೆಯಲಿದ್ದು, ಕೆ. ಬಿ. ಗಣೇಶ್ ಮೃದಂಗದಲ್ಲಿ, ತ್ರಿಪುಣಿತ್ತುರ ಸಿ. ಎಚ್. ಶ್ರೀಕುಮಾರ್ ತವಿಲ್ ನಲ್ಲಿ , ವೆಲ್ಲಂತಂಜೂರ್ ಶ್ರೀಜಿತ್ ಘಟಂನಲ್ಲಿ ಸಹಕಾರ ನೀಡಲಿದ್ದಾರೆ.
ಮಂಗಳೂರು : ಜೆನೆಸಿಸ್ ಪ್ರಕಾಶನ ಮಂಗಳೂರು ವತಿಯಿಂದ ಲೇಖಕ ಮಾರ್ಸೆಲ್ ಎಂ. ಡಿ’ಸೋಜಾ (ಮಾಚ್ಯಾ, ಮಿಲಾರ್)ರವರ ‘ಚಂದ್ರೆಮ್’ ಕೊಂಕಣಿ ಇ- ಮಾಸಿಕ ಪತ್ರಿಕೆಯ ಲೋಕಾರ್ಪಣೆಯು ದಿನಾಂಕ 20-03-2024ರಂದು ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಿತು. ಪತ್ರಿಕೆಯನ್ನು ಎಂ.ಸಿ.ಸಿ. ಬ್ಯಾಂಕ್ ನಿರ್ದೇಶಕ ಜೆರಾಲ್ಡ್ ಪಿಂಟೊ (ಜೆರಿ ನಿಡ್ಡೋಡಿ) ಅವರು ಬಿಡುಗಡೆಗೊಳಿಸಿ “ಕೊಂಕಣಿ ಭಾಷೆಯಲ್ಲಿ ಮಕ್ಕಳ ಬರಹಕ್ಕಾಗಿ ಕೆಲವು ಪತ್ರಿಕೆಗಳು ಮಂಗಳೂರಿನಿಂದ ಪ್ರಕಟವಾಗುತ್ತಿದ್ದವು. ಕಾಲಕ್ರಮೇಣ ಅವು ಮುಚ್ಚಲ್ಪಟ್ಟವು. ಮಕ್ಕಳ ಸಾಹಿತ್ಯ ಉಳಿಸಿ, ಬೆಳೆಸಲು ಕೊಂಕಣಿ ಸಾಹಿತಿ ಮಾಚ್ಯಾ, ಮಿಲಾರ್ ಅವರ ಪ್ರಯತ್ನ ಯಶಸ್ವಿಯಾಗಲಿ. 20 ವರ್ಷಗಳಿಂದ ಲೇಖಕ ಮಾಚ್ಯಾ, ಮಿಲಾರ್ ರವರು ಜೆನೆಸಿಸ್ ಪ್ರಕಾಶನದ ಮೂಲಕ ಕೊಂಕಣಿ ಪುಸ್ತಕಗಳನ್ನು ಪ್ರಕಟಿಸಿ ಕೊಂಕಣಿಯ ಸೇವೆ ಮಾಡುತ್ತಿದ್ದಾರೆ. ಕೊಂಕಣಿ ಭಾಷೆಯನ್ನು ಮುಂದಿನ ಪೀಳಿಗೆಗೆ ತಲುಪಿಸಲು ಇದೊಂದು ಉತ್ತಮ ಪ್ರಯತ್ನವಾಗಿದೆ” ಎಂದು ಹೇಳಿದರು. “2004ರ ಸೆಪ್ಟೆಂಬರ್ ನಲ್ಲಿ ಕೊಂಕಣಿ ಚುಟುಕು ಹಾಗೂ ಕವಿತಾ ಸಂಕಲನ ‘ಕಾಳ್ಜಾಪರ್ಜಳ್’ ಕೃತಿಯ ಪ್ರಕಟಣೆಯ ಮೂಲಕ ಆರಂಭವಾದ ಜೆನೆಸಿಸ್ ಪ್ರಕಾಶನಕ್ಕೆ ಈಗ ವಿಂಶತಿ ಸಂಭ್ರಮ. ಕೊಂಕಣಿ…
ಮಂಗಳೂರು : ಬ್ರಹ್ಮಶ್ರೀ ನಾರಾಯಣ ಗುರು ಸಮೂಹ ಶಿಕ್ಷಣ ಸಂಸ್ಥೆಗಳು ಕಾಟಿಪಳ್ಳ ಹಾಗೂ ‘ನಿನಾದ’ ತುಳು ಸಂಸ್ಕೃತಿ ಅಧ್ಯಯನ ಕೇಂದ್ರ, ಪಾವಂಜೆ ಇವರ ಸಂಯೋಜನೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನೆಲಸಂಸ್ಕೃತಿ ಹಾಗೂ ಜಲಸಂಸ್ಕೃತಿ ಪರಿಚಯಿಸುವ ‘ಯುವ ನಿನಾದ’ – ನಿನಾದ ನೆನಪು ಕಾರ್ಯಕ್ರಮವು ದಿನಾಂಕ 6-4-2024ರ ಶನಿವಾರ ಬೆಳಿಗ್ಗೆ 9.30ರಿಂದ ಪಾವಂಜೆಯ ನಿನಾದ ರಂಗಮಂದಿರದಲ್ಲಿ ನಡೆಯಲಿದೆ. ಕಾಟಿಪಳ್ಳದ ಬ್ರಹ್ಮಶ್ರೀ ನಾರಾಯಣಗುರು ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಪಿ. ದಯಾಕರ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಶ್ರೀಮತಿ ಶಕುಂತಲಾ ರಮಾನಂದ ಭಟ್ ಇಡ್ಯಾ ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅನುರಾಧಾ ರಾಜೀವ್ ಸುರತ್ಕಲ್ ಇವರ ‘ಭಾವ ಘಮಲು’ ಮತ್ತು ‘ಅಂತರಂಗ ಸಂವಾದ’ ಎರಡು ಕೃತಿಗಳ ಲೋಕಾರ್ಪಣೆಗೊಳ್ಳಲಿದ್ದು, ಶ್ರೀ ಕಡಂಬೋಡಿ ಮಹಾಬಲ ಪೂಜಾರಿ, ಶ್ರೀಮತಿ ಕುಸುಮ ಮಹಾಬಲ ಪೂಜಾರಿ, ಅಡ್ವಕೇಟ್ ಮತ್ತು ನೋಟರಿಯಾದ ಲಯನ್ ಮಧುಕರ ಅಮೀನ್ ಕೃತಿ ಬಿಡುಗಡೆ ಗೊಳಿಸಲಿದ್ದಾರೆ. ಉಡುಪಿ ಸಮೂಹ ಶಿಕ್ಷಣ ಸಂಸ್ಥೆಗಳು ಮಣಿಪಾಲ ಇದರ ಸಹ ಪ್ರಾಧ್ಯಾಪಕರಾದ ಶ್ರೀಮತಿ…
ಉಪ್ಪಿನಕುದ್ರು : ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ವತಿಯಿಂದ 2024ರ ವಿನೂತನ ಕಾರ್ಯಕ್ರಮ ಸರಣಿಯಲ್ಲಿ ಶ್ರೀಮತಿ ಜಯಂತಿ ಗಣಪತಿ ಸೇರುಗಾರ್ ನೇತೃತ್ವದಲ್ಲಿ ಗಂಗೊಳ್ಳಿ ಸುಗ್ಗಿಬೈಲು ಇಲ್ಲಿರುವ ಹಾಲ್ಮಕ್ಕಿ ಜಟ್ಟಿಗೇಶ್ವರ ಭಜನಾ ಮಂಡಳಿಯವರಿಂದ ‘ಭಕ್ತಿ ಸಂಗೀತ’ ಕಾರ್ಯಕ್ರಮವು ದಿನಾಂಕ 07-04-2024ರಂದು ಸಂಜೆ ಗಂಟೆ 4ರಿಂದ ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ನಡೆಯಲಿದೆ.
ಕೋಟ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬ್ರಹ್ಮಾವರ ತಾಲೂಕು ಘಟಕ ಇದರ ವತಿಯಿಂದ ಸಾಹಿತ್ಯ ಸಂಚಾರ 26ರ ‘ಸಾಹಿತ್ಯ ಪ್ರೇರಣೆ’ ಕಾರ್ಯಕ್ರಮವು ದಿನಾಂಕ 05-04-2024ರಂದು ಗಿಳಿಯಾರು ಕೋಟ ಶಾಂಭವೀ ವಿದ್ಯಾದಾಯಿನೀ ಅ.ಹಿ.ಪ್ರಾ. ಶಾಲೆಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಚಿತ್ರಪಾಡಿ ಪ್ರೊ. ಉಪೇಂದ್ರ ಸೋಮಯಾಜಿ, ಉಡುಪಿ ಜಿಲ್ಲಾ ಕ.ಸಾ.ಪ. ಅಧ್ಯಕ್ಷರಾದ ಶ್ರೀ ನೀಲಾವರ ಸುರೇಂದ್ರ ಅಡಿಗ, ಬ್ರಹ್ಮಾವರ ತಾಲೂಕು ಘಟಕ ಕ.ಸಾ.ಪ. ಅಧ್ಯಕ್ಷರಾದ ಶ್ರೀ ರಾಮಚಂದ್ರ ಐತಾಳ ಗುಂಡ್ಮಿ, ಕೋಟ ಹೋಬಳಿ ಅಧ್ಯಕ್ಷರಾದ ಶ್ರೀ ಅಚ್ಚುತ ಪೂಜಾರಿ ಕಾರ್ಕಳ, ನಿವೃತ್ತ ಶಿಕ್ಷಕರಾದ ಶ್ರೀ ನಾಗೇಶ ಮಯ್ಯ ಗುಂಡ್ಮಿ ಇವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿರುವರು.
ಸುಳ್ಯ : ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡದ ಸಾಹಿತಿ ಪ್ರೊ. ಎಲ್.ಎಸ್. ಶೇಷಗಿರಿ ರಾವ್ ಅವರ ಜನ್ಮ ಶತಮಾನೋತ್ಸವ ಆಚರಣೆ ಹಾಗೂ ಅವರ ಹೆಸರಿನಲ್ಲಿ ಎಲ್.ಎಸ್.ಎಸ್. ವಿದ್ಯಾನಿಧಿಯ ಸ್ಥಾಪನೆಯ ಕಾರ್ಯಕ್ರಮವು ದಿನಾಂಕ 06-04-2024ರಂದು ನಡೆಯಲಿದೆ. ಪ್ರೊ. ಎಲ್.ಎಸ್. ಶೇಷಗಿರಿ ರಾವ್ ಅವರ ಜನ್ಮ ಶತಮಾನೋತ್ಸವದ ಸಂದರ್ಭ ಕನ್ನಡ ಮಾಧ್ಯಮದ ಸ್ನೇಹ ಶಾಲೆಯಲ್ಲಿ ಬಡ ವಿದ್ಯಾರ್ಥಿಗಳ ಉಚಿತ ಶಿಕ್ಷಣಕ್ಕಾಗಿ ಎಲ್.ಎಸ್.ಎಸ್. ವಿದ್ಯಾನಿಧಿಯ ಸ್ಥಾಪಿಸಲು ಅವರ ಕುಟುಂಬದವರು ಮುಂದೆ ಬಂದಿದ್ದು, ಭಾರತಿ ಶೇಷಗಿರಿ ರಾವ್ ಅವರು ವಿದ್ಯಾನಿಧಿ ಸಮರ್ಪಣೆ ಮಾಡಲಿದ್ದಾರೆ. ಶೇಷಗಿರಿ ರಾವ್ ಅವರ ಸಾಂಸ್ಕೃತಿಕ ಕೊಡುಗೆಗಳ ಕುರಿತು ಸಾಹಿತಿ ಹಾಗೂ ಶಿಕ್ಷಣ ತಜ್ಞ ಶ್ರೀ ಅರವಿಂದ ಚೊಕ್ಕಾಡಿ ಉಪನ್ಯಾಸ ನೀಡಲಿರುವರು. ಬೆಂಗಳೂರಿನ ಚಿಂತಕ ಹಾಗೂ ಕನ್ನಡಪರ ಹೋರಾಟಗಾರ ಶ್ರೀ ರಾ.ನಂ. ಚಂದ್ರಶೇಖರ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷ ಕಾರ್ಯಕ್ರಮವಾಗಿ ಜರ್ಮನಿಯ ಹೋಮ ತಜ್ಞ ಡಾ. ಉಲ್ರಿಕ್ ಬರ್ಕ್ ಅವರು ‘ಅಗ್ನಿಹೋತ್ರದ ಮಹತ್ವ’ದ ಬಗ್ಗೆ ಉಪನ್ಯಾಸ ನೀಡಲಿದ್ದು, ಅದೇ ದಿನ ಸ್ನೇಹ ಶಾಲೆಯ…
ಬೆಂಗಳೂರು : ರಂಗ ಬದುಕು ಟ್ರಸ್ಟ್ (ರಿ.) ಬೆಂಗಳೂರು ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಡಾ. ಬೇಲೂರು ರಘುನಂದನ್ ರಚನೆ, ವಿನ್ಯಾಸ, ಸಂಗೀತ ಮತ್ತು ನಿರ್ದೇಶನದಲ್ಲಿ ಮೈಸೂರಿನ ಡಾ. ಹೆಲನ್ ಅಭಿನಯದ ಏಕವ್ಯಕ್ತಿ ಪ್ರಯೋಗ ಮಾನವತಾವಾದಿ ‘ಥೆರೇಸಮ್ಮ’ (ಮದರ್) ನಾಟಕ ಪ್ರದರ್ಶನವು ದಿನಾಂಕ 05-04-2024ರಂದು ಸಂಜೆ ಗಂಟೆ 4.00ಕ್ಕೆ ಬೆಂಗಳೂರಿನ ಜೆ.ಸಿ. ರಸ್ತೆ, ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಡಾ. ಬೇಲೂರು ರಘುನಂದನ್, ನಾಟಕಕಾರ ಮತ್ತು ನಿರ್ದೇಶಕ : ಸಾಹಿತ್ಯ ಕ್ಷೇತ್ರ ಹಾಗೂ ರಂಗಭೂಮಿಯಲ್ಲಿ ತಮ್ಮದೇ ಛಾಪು ಮೂಡಿಸಿರುವ ರಘುನಂದನ್, ಇಪ್ಪತ್ತೈದಕ್ಕೂ ಹೆಚ್ಚು ನಾಟಕಗಳನ್ನು ರಚಿಸಿದ್ದಾರೆ. ತಾವೇ ರಂಗರೂಪಗೊಳಿಸಿರುವ ‘ಅಕ್ಕಯ್’ ‘ಲೆಟರ್ಸ್ ಟು ಡೆತ್’. ‘ನಗರಪೂಜೆ’, ‘ಅಲೆಮಾರಿ ಭಾರತ’ ‘ಮಾತಾ’ ‘ಅಧಿನಾಯಕಿ’ ‘ಗರ್ಭ’ ಮುಂತಾದ ನಾಟಕಗಳನ್ನು ನಿರ್ದೇಶಿಸಿ ಯಶಸ್ವಿಯಾಗಿದ್ದಾರೆ. ಹುಟ್ಟಿದ್ದು ಹಾಸನ ಜಿಲ್ಲೆಯ ಬೇಲೂರಿನಲ್ಲಿ ಅಲ್ಲಿಯೇ ಪದವಿ ಶಿಕ್ಷಣ ಪೂರೈಸಿ, ಮೈಸೂರು ವಿಶ್ವವಿದ್ಯಾಲಯದಲ್ಲಿ ರಾಷ್ಟ್ರಕವಿ ಕೆ.ವಿ. ಪುಟ್ಟಪ್ಪ ಚಿನ್ನದ ಪದಕ ಸೇರಿದಂತೆ, ಮೂರು ಪದಕಗಳೊಂದಿಗೆ ಕನ್ನಡದಲ್ಲಿ ಎಂ.ಎ. ಮಾಡಿದ್ದಾರೆ. ಹಂಪಿ…