Subscribe to Updates
Get the latest creative news from FooBar about art, design and business.
Author: roovari
ರಂಗಭೂಮಿಯ ಸೌಂದರ್ಯ ಇರುವುದು ಅದರೊಳಗಿನ ಭಾವಾಭಿವ್ಯಕ್ತಿ ಹಾಗೂ ಆಂಗಿಕ ಅಭಿನಯ ಚತುರತೆಯ ವೈವಿಧ್ಯತೆಗಳಲ್ಲಿ. ಈ ಕಲಾಪ್ರಕಾರದ ಅಂತಃಸತ್ವ ಅಡಗಿರುವುದು ಪ್ರಯೋಗಶೀಲತೆಯಲ್ಲಿ. ಈ ಮೂರೂ ಗುಣಲಕ್ಷಣಗಳನ್ನು ಮೈಗೂಡಿಸಿಕೊಳ್ಳುತ್ತಲೇ ಬೆಳೆಯುವ ರಂಗಭೂಮಿಗೆ ಚಲನಶೀಲತೆಯನ್ನು ಕಾಪಾಡಿಕೊಂಡು ಬರಲು ನೆರವಾಗುವುದು ರಂಗ ಕಲಾವಿದರ ಸೃಜನಶೀಲ ಪ್ರಯತ್ನಗಳು ಮತ್ತು ಹೊಸ ಹೊಸ ಪ್ರಯತ್ನಗಳು. ಕನ್ನಡ ರಂಗಭೂಮಿ ತನ್ನ ಈ ವೈವಿಧ್ಯತೆಗಳಿಂದಲೇ ಇಂದಿಗೂ ಸಹ ಸಾಂಸ್ಕೃತಿಕ ಜಗತ್ತಿನಲ್ಲಿ ಪ್ರಶಸ್ತ ಸ್ಥಾನವನ್ನು ಉಳಿಸಿಕೊಂಡಿದೆ, ಬೆಳೆಸುತ್ತಲೂ ಇದೆ. ಹವ್ಯಾಸಿ ರಂಗಭೂಮಿ ಉದಯಿಸಿದ ನಂತರದಲ್ಲಿ ರಂಗಕಲೆ ಎನ್ನುವುದು ತನ್ನ ಸಾಂಸ್ಥಿಕ ನೆಲೆಯಿಂದ ಸಾಂಘಿಕ ನೆಲೆಗೆ ರೂಪಾಂತರಗೊಂಡಿರುವುದು ಕಳೆದ ಐದಾರು ದಶಕಗಳಲ್ಲಿ ಅಸಂಖ್ಯಾತ ಕಲಾವಿದರನ್ನು ಹುಟ್ಟುಹಾಕಿದೆ. ಕನ್ನಡದ ಹವ್ಯಾಸಿ ರಂಗಭೂಮಿ ತನ್ನೊಳಗೆ ಸೃಜಿಸಿದ ಕಲಾರಾಧಕರ-ಕಲಾವಿದರ ಒಂದು ತಲೆಮಾರು ಇಂದು ರಂಗಭೂಮಿಯನ್ನು ವಿಭಿನ್ನ ಆಯಾಮಗಳಲ್ಲಿ, ವಿವಿಧ ಮಜಲುಗಳಲ್ಲಿ ಶ್ರೀಸಾಮಾನ್ಯನ ಬಳಿಗೆ ಕೊಂಡೊಯ್ದಿದೆ. ಹೊರ ಸಮಾಜದ ಒಂದು ಪ್ರತಿಬಿಂಬವನ್ನು ರಂಗದ ಮೇಲೆ ಕಾಣುವ ಪ್ರಯತ್ನದಲ್ಲಿ ಹಲವು ರಂಗತಂಡಗಳು ತಮ್ಮದೇ ಆದ ವೈವಿಧ್ಯತೆಗಳೊಂದಿಗೆ ಚಲನಶೀಲವಾಗಿವೆ. ತಾನು ಪ್ರತಿನಿಧಿಸುವ ಸಮಾಜಕ್ಕೆ ಅಗತ್ಯವಾದ…
ಬೆಳಗಾವಿ : ರಂಗ ಸಂಪದ (ರಿ.) ಬೆಳಗಾವಿ ಇದರ ವತಿಯಿಂದ ‘ರಂಗ ಸಂಕ್ರಮಣ ನಾಟಕೋತ್ಸವ’ವನ್ನು ದಿನಾಂಕ 11 ಜನವರಿ 2025ರಿಂದ 14 ಜನವರಿ 2025ರವರೆಗೆ ಬೆಳಗಾವಿಯ ಲೋಕಮಾನ್ಯ ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ. ದಿನಾಂಕ 11 ಜನವರಿ 2025ರಂದು ಧಾರವಾಡದ ‘ಅಭಿನಯ ಭಾರತಿ’ ತಂಡದ ಏಕವ್ಯಕ್ತಿ ಪ್ರದರ್ಶನ ಶ್ರೀಪತಿ ಮಂಜನಬೈಲು ನಿರ್ದೇಶನದಲ್ಲಿ ‘ಉರಿಯ ಉಯ್ಯಾಲೆ’ ನಾಟಕವನ್ನು ಜ್ಯೋತಿ ದೀಕ್ಷಿತ ಪುರಾಣಿಕ ಇವರು ಪ್ರಸ್ತುತ ಪಡಿಸಲಿದ್ದಾರೆ. ದಿನಾಂಕ 12 ಜನವರಿ 2025ರಂದು ಬೆಳಗಾವಿಯ ‘ರಂಗಸಂಪದ’ ತಂಡದಿಂದ ವೈಭವ ಲೋಕೂರ ಇವರ ನಿರ್ದೇಶನದಲ್ಲಿ ‘ಡಿಯರ್ ಅಜ್ಜೋ’ ಎಂಬ ನಾಟಕವನ್ನು ಅರವಿಂದ ಕುಲಕರ್ಣಿ ಮತ್ತು ಸ್ನೇಹ ಕುಲಕರ್ಣಿ ಇವರುಗಳು ಅಭಿನಯಿಸಲಿದ್ದಾರೆ. ದಿನಾಂಕ 13 ಜನವರಿ 2025ರಂದು ಮಳವಳ್ಳಿಯ ‘ರಂಗಬಂಡಿ’ ತಂಡದ ಏಕವ್ಯಕ್ತಿ ಪ್ರದರ್ಶನ ಮಧು ಮಳವಳ್ಳಿ ಇವರ ನಿರ್ದೇಶನದಲ್ಲಿ ‘ಮಧುರ ಮಂಡೋಡರಿ’ ನಾಟಕವನ್ನು ವನೀತಾ ರಾಜೇಶ ಇವರು ಪ್ರಸ್ತುತ ಪಡಿಸಲಿದ್ದಾರೆ. ದಿನಾಂಕ 14 ಜನವರಿ 2025ರಂದು ಧಾರವಾಡದ ಆಟಮಾಟ ತಂಡದವರು ಮಹಾದೇವ ಹಡಪದ ಇವರ ನಿರ್ದೇಶನದಲ್ಲಿ ಬಸವರಾಜ…
ಉಡುಪಿ : ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿರುವ ಕುಮಾರಿ ಮನ್ವಿತಾ ಎಸ್. ಇವರು ಈ ಬಾರಿಯ ಉಡುಪಿ ಜಿಲ್ಲಾ 10ನೇ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆಯಾಗಿ ಆಯ್ಕೆಯಾಗಿರುತ್ತಾರೆ. ಶ್ರೀ ಸೂರ್ಯಕಾಂತ ಬಿ. ಬಸ್ರೂರು ಹಾಗೂ ಶ್ರೀಮತಿ ಲತಾ ದಂಪತಿಗಳ ಹೆಮ್ಮೆಯ ಪುತ್ರಿಯಾದ ಮನ್ವಿತಾ ಎಸ್. ಚಿಕ್ಕ ವಯಸ್ಸಿನಲ್ಲೇ ಕಲೆಯಲ್ಲಿ ಆಸಕ್ತಿ ಹೊಂದಿದ್ದು, ತನ್ನ 4ನೇ ವಯಸ್ಸಿಗೆ ಯಕ್ಷಗಾನ ಗೆಜ್ಜೆ ಕಟ್ಟಿ ವೇದಿಕೆ ಏರಿ ನೃತ್ಯ ಪ್ರದರ್ಶನ ನೀಡಿರುತ್ತಾರೆ. ಭರತನಾಟ್ಯದಲ್ಲಿ ಜ್ಯೂನಿಯರ್ ವಿಭಾಗದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಸೀನಿಯರ್ ವಿಭಾಗದಲ್ಲಿ ತರಬೇತಿ ಮುಂದುವರಿಸಿದ್ದಾರೆ. ಭಾಷಣ ಮತ್ತು ಕಾರ್ಯಕ್ರಮ ನಿರೂಪಣೆ ಈಕೆಯ ಪ್ರೀತಿಯ ಕ್ಷೇತ್ರವಾಗಿದ್ದು, ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಗಿಟ್ಟಿಸಿಕೊಂಡು ಜಿಲ್ಲಾ ಮಟ್ಟಕ್ಕೂ ಆಯ್ಕೆಯಾಗಿತ್ತಾರೆ. ಅಲ್ಲದೇ 2023-24ನೇ ಸಾಲಿನ ಮಕ್ಕಳ ಜಿಲ್ಲಾ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದ ನಿರೂಪಣೆಗೆ ಆಯ್ಕೆಯಾಗಿ ಉತ್ತಮ ನಿರೂಪಣೆಯಿಂದ ಜನಮನ ಗೆದ್ದಿರುವ ಇವರು ಕುಂದಾಪುರ ತಾಲೂಕು 9ನೇ ಕನ್ನಡ…
ದಾವಣಗೆರೆ : ‘ವೃತ್ತಿ ರಂಗಭೂಮಿ ರಂಗಾಯಣ ಕೇಂದ್ರ’ ಹಾಗೂ ‘ಕರ್ನಾಟಕ ನಾಟಕ ಅಕಾಡೆಮಿ’ಯ ಸಹಯೋಗದೊಂದಿಗೆ ಐದು ದಿನಗಳ ವೃತ್ತಿ ನಾಟಕ ರಚನಾ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಶಿಬಿರದ ನಂತರ ತಿಂಗಳಲ್ಲಿ ಶಿಬಿರಾರ್ಥಿಗಳು ರಚಿಸಿದ ಆಯ್ಕೆಗೊಂಡ ನಾಟಕಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲಾಗುವುದು. ಸ್ಪಷ್ಟವಾಗಿ ಕನ್ನಡ ಓದಲು, ಬರೆಯಲು ಬರುವ ಮತ್ತು ರಂಗಸಾಹಿತ್ಯ ಕುರಿತು ಪ್ರಾಥಮಿಕ ಜ್ಞಾನವುಳ್ಳ 18 ವರ್ಷ ಮೇಲ್ಪಟ್ಟವರು ಸ್ವ-ಪರಿಚಯದೊಂದಿಗೆ ದಿನಾಂಕ 20 ಜನವರಿ 2025ರೊಳಗೆ ವೃತ್ತಿ ರಂಗಭೂಮಿ ರಂಗಾಯಣ ಕೇಂದ್ರಕ್ಕೆ ಅರ್ಜಿ ಸಲ್ಲಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ, ವಸತಿ ಸೌಲಭ್ಯ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ವೃತ್ತಿ ರಂಗಭೂಮಿ ರಂಗಾಯಣ, ಮೊದಲನೇ ಮಹಡಿ, ಕೊಠಡಿ ಸಂಖ್ಯೆ 38ಎ, ಜಿಲ್ಲಾಡಳಿತ ಭವನ, ಪಿ.ಬಿ. ರಸ್ತೆ, ದಾವಣಗೆರೆ ದೂರವಾಣಿ ಸಂಖ್ಯೆ :08192- 200635, 9341010712 ಸಂಪರ್ಕಿಸಲು ವಿಶೇಷಾಧಿಕಾರಿ ರವಿಚಂದ್ರ ತಿಳಿಸಿದ್ದಾರೆ.
ಮುಡಿಪು: ಮಂಗಳೂರು ವಿಶ್ವವಿದ್ಯಾಲಯದ ಡಾ. ಪಿ. ದಯಾನಂದ ಪೈ ಮತ್ತು ಶ್ರೀ ಪಿ. ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಇದರ ಆಶ್ರಯದಲ್ಲಿ 2024-25ನೇ ಸಾಲಿನ ಯಕ್ಷನಾಟ್ಯ ತರಬೇತಿಯ ಉದ್ಘಾಟನಾ ಸಮಾರಂಭವು ದಿನಾಂಕ 19 ಡಿಸೆಂಬರ್ 2024ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಗಳೂರು ವಿ. ವಿ. ಕುಲಸಚಿವ ರಾಜು ಮೊಗವೀರ ಮಾತನಾಡಿ “ಹಿಂದೆ ಪುರಾಣ ಜ್ಞಾನವನ್ನು ಜನಸಾಮಾನ್ಯರಿಗೂ ತಲುಪಿಸುವಲ್ಲಿ ಯಕ್ಷಗಾನವು ಮಹತ್ತರವಾದ ಪಾತ್ರ ವಹಿಸಿತ್ತು. ಯಕ್ಷಗಾನವು ಕುಣಿತ, ಸಂಗೀತ, ಬಣ್ಣಗಾರಿಕೆ, ವೇಷಭೂಷಣ, ಅಭಿನಯ ಸೇರಿದಂತೆ ಎಲ್ಲವನ್ನೂ ಹೊಂದಿರುವ ಪರಿಪೂರ್ಣ ಕಲೆಯಾಗಿ ರೂಪುಗೊಂಡಿದೆ. ಅನೇಕ ಹಿರಿಯ ಕಲಾವಿದರು ತಮ್ಮ ಅನುಭವಗಳ ಮೂಲಕ ಯಕ್ಷಗಾನವನ್ನು ಬೆಳೆಸಿದ್ದಾರೆ. ಯುವ ಕಲಾವಿದರು ಅಂತಹ ಅನುಭವಿ ಕಲಾವಿದರ ಜೊತೆಗೆ ಒಡನಾಟ ಬೆಳೆಸಿಕೊಂಡಾಗ, ಪರಂಪರೆ ಮತ್ತು ವರ್ತಮಾನದ ಅನುಸಂಧಾನ ಸಾಧ್ಯ. ಯಕ್ಷಗಾನದಲ್ಲಿ ಸುಂದರ ಕನ್ನಡ ಇದೆ. ಕನ್ನಡ ಭಾಷೆಯ ಬೆಳವಣಿಗೆಗೂ ಯಕ್ಷಗಾನದ ಪ್ರಭಾವ ಮಹತ್ತರವಾದುದು. ಇಂದಿನ ಆಧುನಿಕತೆಯಲ್ಲಿ ಯಕ್ಷಗಾನದ ಪರಂಪರೆಗೆ ಯಾವುದೇ ಧಕ್ಕೆಯಾಗದಂತೆ ಕ್ರಮಬದ್ಧವಾಗಿ ಮುಂದುವರಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಂಗಳೂರು…
ತುಮಕೂರು ಜಿಲ್ಲೆಯ ಉರುಡುಗೆರೆ ಹೋಬಳಿಯ ತಾಳೇನಹಳ್ಳಿಯಲ್ಲಿ ಜನ್ಮ ತಾಳಿದ ಅಪರೂಪದ ಸಾಹಿತಿ ಕೆ. ಎಸ್. ಧರಾಣೇಂದ್ರಯ್ಯ. 1903 ನೇ ಇಸವಿ ಡಿಸೆಂಬರ್ 31ರಂದು ಇವರ ಜನನವಾಯಿತು. ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಪಡೆದ ಇವರು ಪಂಪ, ರನ್ನ ಮತ್ತು ಜನ್ನರ ಕೃತಿಗಳ ಪದ್ಯಗಳನ್ನು ನಿರರ್ಗಳವಾಗಿ ಹಾಡುತ್ತಿದ್ದರು. ಇವರ ವೃತ್ತಿಜೀವನ ಆರಂಭವಾದದ್ದು ಶಿಕ್ಷಣ ಇಲಾಖೆಯಿಂದ. ಕರ್ನಾಟಕ ಸರಕಾರದ ಸಾಹಿತ್ಯ ಸಂಸ್ಕೃತಿ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಇವರದು. ಆಗಲೇ ಸಾಹಿತ್ಯ ಕೃಷಿಯ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡ ಮೇಧಾವಿ ಇವರು. ಪಂಪ ಆದಿಪುರಾಣ, ಭಾರತ ವಸ್ತು ಪ್ರದರ್ಶನ, ಪದ್ಮಾವತಿ ಮಹಾತ್ಮೆ, ಆಡಳಿತ ಶಬ್ದಗಳ ಕನ್ನಡ ಕೋಶ, ಭಗವಾನ್ ಮಹಾವೀರ, ಭಕ್ತಿ ಕುಸುಮಾಂಜಲಿ, ಇತ್ಯಾದಿ ಅನರ್ಘ್ಯ ಕೃತಿಗಳನ್ನು ಸಾಹಿತ್ಯ ಕ್ಷೇತ್ರಕ್ಕೆ ನೀಡಿದವರು. ಕನ್ನಡ – ಕನ್ನಡ ಕೋಶ, ಕನ್ನಡ ವಿಶ್ವಕೋಶ, ಕುಮಾರವ್ಯಾಸ ಭಾರತ ಮುಂತಾದ ಸಾಹಿತ್ಯ ಯೋಜನೆಗಳನ್ನು ಸಾಹಿತ್ಯ ಸಂಸ್ಕೃತಿ ಅಭಿವೃದ್ಧಿ ಇಲಾಖೆಯ ಮೂಲಕ ಕಾರ್ಯರೂಪಕ್ಕೆ ತರುವಲ್ಲಿ ಪ್ರಧಾನ ಪಾತ್ರ ವಹಿಸಿದವರು. “ಜೈನ ಶಾಸ್ತ್ರ…
ಉಡುಪಿ ಜಿಲ್ಲೆಯ ಕಡೆಕಾರಿನ ವಿಜಯ ಶೆಟ್ಟಿ ಹಾಗೂ ಜಯಂತಿ ಶೆಟ್ಟಿ ದಂಪತಿಯರ ಮಗಳಾಗಿ 12.12.1994 ರಂದು ಚೈತ್ರ ಅವರ ಜನನ. ಬಿಎಸ್ಸಿ ನರ್ಸಿಂಗ್, ಎಂಎಸ್ಸಿ ನರ್ಸ್ ಪ್ರಾಕ್ಟಿಶನರ್ ಕ್ರಿಟಿಕಲ್ ಕೇರ್ MAHE, ಮಣಿಪಾಲದಲ್ಲಿ ಕಲಿತು ಪ್ರಸ್ತುತ ಕಸ್ತೂರ್ಬಾ ಹಾಸ್ಪಿಟಲ್ ಮಣಿಪಾಲದಲ್ಲಿ ನರ್ಸ್ ಪ್ರಾಕ್ಟಿಶನರ್ ಇನ್ ಕ್ರಿಟಿಕಲ್ ಕೇರ್ ನಲ್ಲಿ ವೃತ್ತಿಯನ್ನು ಮಾಡುತ್ತಿದ್ದಾರೆ. ಯಕ್ಷಗಾನ ಗುರುಗಳು:- ಶ್ರೀ ರಾಜೀವ್ ತೋನ್ಸೆ (ಮಟ್ಟು) ಶ್ರೀ ಕೆ. ಜೆ. ಗಣೇಶ್. ಯಕ್ಷಗಾನಕ್ಕೆ ಕ್ಷೇತ್ರಕ್ಕೆ ಬರಲು ಪ್ರೇರಣೆ:- ಅಷ್ಟಮಿಯಂದು ಬರುವ ರಕ್ಕಸ ವೇಷ, ಯಕ್ಷಗಾನದ ವೇಷ ಭೂಷಣ ನೋಡಿ ಹೆದರಿ ಅಡಗಿ ಕುಳಿತುಕೊಳ್ಳುತ್ತಿದ್ದೆ. ಆದರೆ ನೃತ್ಯ, ನಾಟಕ ರಂಗದಲ್ಲಿ ಬಹು ಆಸಕ್ತಿ ಇತ್ತು. ಅದರಲ್ಲಿ ಮುಂದುವರಿಯಬೇಕು ಎಂಬ ಕನಸೂ ಇತ್ತು. ಸರಿಯಾದ ಅವಕಾಶ ಸಿಕ್ಕಿರಲಿಲ್ಲ. ನಾನು ಕಲಿಯುತ್ತಿದ್ದ ಸರಕಾರಿ ಪ್ರಾಥಮಿಕ ಶಾಲೆ ಕಡೆಕಾರ್ ನ ಹೆಣ್ಣು ಮಕ್ಕಳಿಗೆ, ಪಡುಕೆರೆಯಿಂದ ವರ್ಗಾವಣೆಯಾಗಿ ಕಡೆಕಾರಿಗೆ ಬಂದ ಗಂಗಾಧರ್ ಜಿ. ಅವರ ಸಾರಥ್ಯದಲ್ಲಿ ಗುರುಗಳಾದಂತಹ ಶ್ರೀಯುತ ರಾಜೀವ್ ತೋನ್ಸೆಯವರ ಶಿಕ್ಷಣದೊಂದಿಗೆ ದುರ್ಗಾಂಬಿಕಾ…
ಮಂಗಳೂರು : ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ ವಾರ್ಷಿಕ ಮಹಾಸಭೆ ದಿನಾಂಕ 24 ಡಿಸೆಂಬರ್ 2024ರಂದು ಒಕ್ಕೂಟದ ಅಧ್ಯಕ್ಷ ದೀಪಕ್ ರಾಜ್ ಉಳ್ಳಾಲ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಒಕ್ಕೂಟದ ನೂತನ ಅಧ್ಯಕ್ಷರಾಗಿ ಕೇಶವ ಕನಿಲ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಧನುರಾಜ್ ಅತ್ತಾವರ, ಸುಭಾಷಿತ್ ಕುಮಾರ್ ಉಡುಪಿ, ಪ್ರಧಾನ ಕಾರ್ಯದರ್ಶಿಯಾಗಿ ರಾಮ್ ಕುಮಾರ್ ಅಮೀನ್, ಕೋಶಾಧಿಕಾರಿಯಾಗಿ ಹರಿಣಿ ಉದಯ್, ಜತೆ ಕಾರ್ಯದರ್ಶಿಯಾಗಿ ಶಿಶಾನ್ ಕೌಡೂರು ಮಂಗಳೂರು, ಮುಕ್ತ ಶ್ರೀನಿವಾಸ್ ಉಡುಪಿ, ಸಂಘಟನಾ ಕಾರ್ಯದರ್ಶಿಯಾಗಿ ಐವನ್ ಮಂಗಳೂರು, ರಾಧಾಕೃಷ್ಣ ಭಟ್ ಉಡುಪಿ, ಸಂಚಾಲಕರಾಗಿ ಸಂತೋಷ್ ಅಂಚನ್ ಮಂಗಳೂರು ಹಾಗೂ ಸ್ವಪ್ನ ರಾಜ್ ಉಡುಪಿ ಆಯ್ಕೆಯಾದರು.
ಕರಾವಳಿಯ ಹಾಸ್ಯ ಲೇಖಕರೆಂದೇ ಪ್ರಸಿದ್ಧರಾದವರು ಪಡುಕೋಣೆ ರಮಾನಂದ ರಾಯರು. ಇವರು 1896ರ ಡಿಸೆಂಬರ್ 30ರಂದು ಉಡುಪಿ ಜಿಲ್ಲೆಯ ಪಡುಕೋಣೆಯಲ್ಲಿ ಜನಿಸಿದರು. ತಂದೆ ನರಸಿಂಗರಾಯರು, ತಾಯಿ ಚಂದ್ರಭಾಗಿ. ಇವರ ಆರಂಭದ ಶಿಕ್ಷಣವೆಲ್ಲವೂ ಮಂಗಳೂರಿನ ಶಾಲಾ ಕಾಲೇಜುಗಳಲ್ಲಿ. ವಿದ್ಯಾರ್ಥಿ ದೆಸೆಯಲ್ಲಿ ಸಾಹಿತ್ಯದ ಒಲವು ಅಧಿಕವಾಗಿತ್ತು. ಪಠ್ಯಪುಸ್ತಕದ ಭಾಷೆಗಿಂತ ಭಿನ್ನವಾದ ಭಾಷೆ ಇರುವ ಪಿ. ಜಿ. ವುಡ್ಹೌಸ್ ಅವರ ಪುಸ್ತಕಗಳು ಮತ್ತು ವಿಶ್ವದ ಅತ್ಯಂತ ಜನಪ್ರಿಯ ಹಾಸ್ಯಗಾರ, ಶಿಕ್ಷಣ ತಜ್ಞ ಮತ್ತು ಉಪನ್ಯಾಸಕರಾದ ಕೆನಡಾದ ಸ್ಟೀಫನ್ ಲೀಕಾಕ್ ಇವರ ಬರಹಗಳು ರಮಾನಂದರಿಗೆ ಅಚ್ಚುಮೆಚ್ಚಿನದಾಗಿದ್ದವು. ಇಂಟರ್ಮೀಡಿಯಟ್ ನಲ್ಲಿ ಓದುತ್ತಿರುವಾಗ ಸೀತಾ ಎಂಬ ಪ್ರತಿಭಾನ್ವಿತೆಯೊಂದಿಗೆ ವಿವಾಹವಾದ ಕಾರಣ ಇವರ ವಿದ್ಯಾಭ್ಯಾಸ ಅಲ್ಲಿಗೆ ಮೊಟಕುಗೊಂಡಿತು. ಮತ್ತೆ ವಿದ್ಯಾಭ್ಯಾಸವನ್ನು ಮುಂದುವರಿಸಿ ಮದರಾಸಿನ ಪ್ರೆಸಿಡೆನ್ಸಿ ಕಾಲೇಜುಗಳಲ್ಲಿ ಬಿ. ಎ., ಎಂ. ಎ. ಮತ್ತು ಎಲ್. ಟಿ. ಪದವಿಗಳನ್ನು ಪಡೆದರು. ರಸಾಯನ ಶಾಸ್ತ್ರದ ಅಧ್ಯಾಪಕರಾಗಿ ರಾಜಮಹೇಂದ್ರಿ, ತಲಚೇರಿ, ಪಾಲ್ಘಾಟ್ ಮತ್ತು ಈಗಿನ ಚೆನ್ನೈಗಳಲ್ಲಿ ಸೇವೆ ಸಲ್ಲಿಸಿದರು. ಮಂಗಳೂರಿನಲ್ಲಿ ಪ್ರಾಂಶುಪಾಲರಾಗಿ ಹುದ್ದೆ ನಿರ್ವಹಿಸಿ ನಿವೃತ್ತರಾದ ನಂತರ…
ಮಂಗಳೂರು: ಚಿತ್ರಕಲಾ ಗುರು ದಿ. ಬಿ. ಜಿ. ಮುಹಮ್ಮದ್ ಇವರ 104ನೆ ಜನ್ಮದಿನಾಚರಣೆ ಪ್ರಯುಕ್ತ ಚಿತ್ರಕಲಾ ಸ್ಪರ್ಧೆಯು ದಿನಾಂಕ 05 ಜನವರಿ 2025 ರಂದು ಮಂಗಳೂರಿನ ಮಿನಿ ಪುರಭವನದಲ್ಲಿ ನಡೆಯಲಿದೆ. ಚಿತ್ರಕಲಾ ಸ್ಪರ್ಧೆಯು ಉಡುಪಿ, ದ.ಕ. ಮತ್ತು ಕಾಸರಗೋಡು ಜಿಲ್ಲೆಯ ಶಾಲಾ ಮಕ್ಕಳಿಗೆ ಮೂರು ವಿಭಾಗಗಳಲ್ಲಿ ಬೆಳಗ್ಗೆ ಘಂಟೆ 9.30 ರಿಂದ 11.30 ರವರೆಗೆ ನಡೆಯಲಿದ್ದು, 2 ರಿಂದ 4ನೇ ತರಗತಿಯವರಿಗೆ ಯಾವುದೇ ವಿಷಯದಲ್ಲಿ, 5ರಿಂದ 7ನೇ ತರಗತಿಯವರಿಗೆ ವಿಷಯ ‘ಸವಿ ನೆನಪು’ ಹಾಗೂ 8 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ‘ಜಿಲ್ಲೆಯ ಸಂಸ್ಕೃತಿ’ ಬಗ್ಗೆ ಚಿತ್ರ ರಚಿಸಲು ತಿಳಿಸಲಾಗಿದೆ. ಅದೇ ದಿನ ಬಹುಮಾನ ವಿತರಣೆಯೂ ನಡೆಯಲಿದೆ ಎಂದು ಟ್ರಸ್ಟ್ನ ಕಾರ್ಯದರ್ಶಿ ಗಣೇಶ ಸೋಮಯಾಜಿ ತಿಳಿಸಿದ್ದಾರೆ. ಭಾಗವಹಿಸುವ ಎಲ್ಲಾ ಸ್ಪರ್ಧಿಗಳಿಗೆ ಅಭಿನಂದನಾ ಪತ್ರ ನೀಡಲಾಗುವುದು. ಪ್ರತಿ ವಿಭಾಗದಲ್ಲಿ 8 ಮಂದಿ ವಿಜೇತರಂತೆ 24 ಮಂದಿ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುವುದು. ಆರ್ಟಿಸ್ಟ್ ಕಂಬೈನ್ ಅಧ್ಯಕ್ಷ ಟ್ರೆವರ್ ಪಿಂಟೊ ಸ್ಪರ್ಧೆ ಉದ್ಘಾಟಿಸಲಿದ್ದು, ಅತಿಥಿಗಳಾಗಿ…