Subscribe to Updates
Get the latest creative news from FooBar about art, design and business.
Author: roovari
ಕಾಸರಗೋಡು : ಗೋಪಾಲಕೃಷ್ಣ ದೇವಸ್ಥಾನದಲ್ಲಿ ತೆಂಕುತಿಟ್ಟು ಯಕ್ಷಗಾನದ ಹಿಮ್ಮೇಳ ತರಗತಿಗಳು ದಿನಾಂಕ 31 ಆಗಸ್ಟ್ 2025ರಂದು ಆರಂಭಗೊಳ್ಳಲಿವೆ. ಕುತ್ಯಾಳ ಶ್ರೀ ಗೋಪಾಲಕೃಷ್ಣ ಯಕ್ಷಗಾನ ತರಬೇತಿ ಕೇಂದ್ರದ ಆಶ್ರಯದಲ್ಲಿ ನಡೆಯುವ ಈ ತರಗತಿಯನ್ನು ಯಕ್ಷಗಾನದ ಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್ ಬೆಳಗ್ಗೆ ಘಂಟೆ 10.00 ಉದ್ಘಾಟಿಸುವರು. ಮಾಂಬಾಡಿಯವರ ಶಿಷ್ಯ ಹಾಗೂ ಎರಡು ದಶಕಗಳಿಗೂ ಹೆಚ್ಚು ಕಾಲ ಕಲಾ ಸೇವೆ ನಿರ್ವಹಿಸುತ್ತಿರುವ ಬಾಲಕೃಷ್ಣ ಆಚೆಗೋಳಿ ತರಗತಿ ನಡೆಸುವರು. ತರಬೇತಿ ಕೇಂದ್ರದ ಅಧ್ಯಕ್ಷರಾದ ಚಂದ್ರಮೋಹನ ಕೂಡ್ಲು ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಕುತ್ಯಾಳ ದೇವಾಲಯದ ಮೊಕ್ತಸರ ಹಾಗೂ ತರಬೇತಿ ಕೇಂದ್ರದ ಗೌರವಾಧ್ಯಕ್ಷರಾದ ಕೂಡ್ಲು ಗೋಪಾಲಕೃಷ್ಣ ಶ್ಯಾನುಭೋಗ್, ಕಾರ್ಯದರ್ಶಿ ಕಿಶೋರ್ಕುಮಾರ್ ಕೂಡ್ಲು ಪಾಲ್ಗೊಳ್ಳುವರು. ಈಗಾಗಲೇ ಈ ಕೇಂದ್ರದಲ್ಲಿ ರಂಜಿತ್ ಗೋಳಿಯಡ್ಕ ಅವರಿಂದ ನಾಟ್ಯ ತರಗತಿಗಳು ನಡೆಯುತ್ತಿವೆ. ಯಾವುದೇ ತರಗತಿಗಳಿಗೆ ಸೇರಲಿಚ್ಛಿಸುವವರು 9744803074 5 8075278118 5 ಮೊಬೈಲ್ ನಂಬ್ರಗಳಿಗೆ ಕರೆ ಮಾಡಲು ತಿಳಿಸಲಾಗಿದೆ
ಮೈಸೂರು : ಮಂಡ್ಯ ರಮೇಶ್ ಅವರ ನಟನ ರಂಗಶಾಲೆಯು ನಟನವು ವಾರಾಂತ್ಯ ರಂಗ ಪ್ರದರ್ಶನಗಳನ್ನು ನಡೆಸುತ್ತಿದ್ದು, ದಿನಾಂಕ 31 ಆಗಸ್ಟ್ 2025ರಂದು ಮಧ್ಯಾಹ್ನ 3-00 ಹಾಗೂ ಸಂಜೆ 6-30 ಗಂಟೆಗೆ ರಾಮಕೃಷ್ಣನಗರದಲ್ಲಿರುವ ನಟನ ರಂಗಶಾಲೆಯಲ್ಲಿ ಬೆಂಗಳೂರು ಥಿಯೇಟರ್ ಕಲೆಕ್ಟಿವ್ ಪ್ರಸ್ತುತ ಪಡಿಸುವ ಎ.ಆರ್. ಗರ್ನಿ ಅವರ ‘ಲವ್ ಲೆಟರ್ಸ್’ ನಿನ್ನ ಪ್ರೀತಿಯ ನಾನು! ನಾಟಕವು ಪ್ರದರ್ಶನಗೊಳ್ಳಲಿದೆ. ನಾಟಕದ ವಿನ್ಯಾಸ ಜಿ. ಜಯಂತ್ ಮತ್ತು ನಿಶಾಂತ್ ಗುರುಮೂರ್ತಿ ಅವರದ್ದು. ನಾಟಕದ ರೂಪಾಂತರ ಮತ್ತು ನಿರ್ದೇಶನ ವೆಂಕಟೇಶ್ ಪ್ರಸಾದ್ ಅವರದ್ದು. ಪ್ರಧಾನ ಭೂಮಿಕೆಯಲ್ಲಿ ರಂಗಭೂಮಿ, ಸಿನಿಮಾ ಕಲಾವಿದ ಕಿಶೋರ್ ಕುಮಾರ್ ಹಾಗೂ ನಿರೂಪಕಿ, ನಟಿ ಸಿರಿ ರವಿಕುಮಾರ್ ಅಭಿನಯಿಸಲಿದ್ದಾರೆ. ರಂಗಾಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊ. 72595 37777, 94804 68327 ಮತ್ತು 98455 95505 ಸಂಪರ್ಕಿಸಿರಿ.
ತಿರುವನಂತಪುರ : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರ ಮತ್ತು ಭಾರತ್ ಭವನ ತಿರುವನಂತಪುರ ಕೇರಳ ಸರಕಾರ ಇವುಗಳ ಸಂಯುಕ್ತಾಶ್ರಯದಲ್ಲಿ ತಿರುವನಂತಪುರದ ಸಿ.ವಿ. ರಾಮನ್ ಪಿಳ್ಳೆ ರಸ್ತೆಯಲ್ಲಿರುವ ಭಾರತ್ ಭವನದಲ್ಲಿ ಒಂದು ದಿನದ ‘ಅನಂತಪುರಿ ಗಡಿನಾಡ ಕನ್ನಡ ಸಂಸ್ಕೃತಿ ಉತ್ಸವ’ವು ದಿನಾಂಕ 23 ಆಗಸ್ಟ್ 2025ರಂದು ಜರಗಿತು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅಧ್ಯಕ್ಷತೆ ವಹಿಸಿದ್ದ ಈ ಉತ್ಸವವನ್ನು ಕೇರಳ ಸರಕಾರದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಿ.ಆರ್. ಅನಿಲ್ ಇವರು ಉದ್ಘಾಟಿಸಿದರು. ಕೇರಳ ಸರಕಾರದ ಶಿಕ್ಷಣ ಸಚಿವ ಶಿವನ್ ಕುಟ್ಟಿ, ಕಾಸರಗೋಡಿನ ಶಾಸಕ ಎನ್.ಎ. ನೆಲ್ಲಿಕುನ್ನು, ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್, ಕಾಸರಗೋಡು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಸಂಸ್ಥಾಪಕ ಪ್ರದೀಪ ಕುಮಾರ್ ಕಲ್ಕೂರ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕನ್ನಡ ಸಂಸ್ಕೃತಿ ಉತ್ಸವದ ಅಂಗವಾಗಿ ಅಖಿಲ ಭಾರತ ವ್ಯಾಪ್ತಿಯ ಬಹುಭಾಷಾ ಕವಿಸಂಗಮವನ್ನು ಏರ್ಪಡಿಸಲಾಗಿತ್ತು. ಕಾಸರಗೋಡಿನ ಹಿರಿಯ ಕವಿ ರಾಧಾಕೃಷ್ಣ ಕೆ.…
ಬೆಂಗಳೂರು : ಪ್ರಸಿದ್ಧ ‘ಸಾಧನ ಸಂಗಮ ಡಾನ್ಸ್ ಸೆಂಟರ್’ನ ನೃತ್ಯ ಗುರುದ್ವಯರಾದ ವಿದುಷಿ ಜ್ಯೋತಿ ಪಟ್ಟಾಭಿರಾಮ್ ಮತ್ತು ಡಾ. ಸಾಧನಶ್ರೀ ಇವರ ಕಾಳಜಿಪೂರ್ಣ ಭರತನಾಟ್ಯ ಮಾರ್ಗದರ್ಶನದಲ್ಲಿ ರೂಪುಗೊಂಡ ನೃತ್ಯಪ್ರತಿಭೆ ಕುಮಾರಿ ಪಿ. ಗುಣಶ್ರೀ ಬಹುಮುಖ ಪ್ರತಿಭೆ. ಸಂಗೀತ -ನಾಟ್ಯಗಳಲ್ಲಿ ಭರವಸೆಯ ಅಡಿಗಳನ್ನಿಡುತ್ತಿರುವ ಗುಣಶ್ರೀ ಬೆಂಗಳೂರಿನ ಎಸ್. ಪುಟ್ಟಸ್ವಾಮಿ ಮತ್ತು ಟಿ. ಸವಿತಾ ದಂಪತಿಗಳ ಪುತ್ರಿಯಾಗಿದ್ದು, ಕಳೆದ ಹನ್ನೆರಡು ವರ್ಷಗಳಿಂದ ಸತತ ಅಭ್ಯಾಸ- ಪರಿಶ್ರಮಗಳಿಂದ ನೃತ್ಯ ಕಲಿಯುತ್ತಿದ್ದಾಳೆ. ಇವಳು ಗಂಧರ್ವ ಮಹಾಮಂಡಲದ 5 ಹಂತದ ಪರೀಕ್ಷೆಗಳಲ್ಲಿ ಉತ್ತಮಾಂಕಗಳಿಂದ ತೇರ್ಗಡೆಯಾಗಿರುವುದಲ್ಲದೆ, ಕರ್ನಾಟಕ ಸರ್ಕಾರದ ಜ್ಯೂನಿಯರ್ ಮತ್ತು ಸೀನಿಯರ್ ನೃತ್ಯಪರೀಕ್ಷೆಗಳಲ್ಲಿ ಡಿಸ್ಟಿಂಕ್ಷನ್ ಪಡೆದ ಹಿರಿಮೆ ಇವಳದು. ಬಿ.ಕಾಂ. ಫೈನಲ್ ತರಗತಿಯಲ್ಲಿ ಓದುತ್ತಿರುವ ಗುಣಶ್ರೀ, ಕವಿತಾ ರಚನೆ, ಚಿತ್ರಕಲೆ, ಯೋಗ ಮತ್ತು ಕ್ರೀಡೆಯಲ್ಲೂ ಮುಂದಿದ್ದು, 20 ಸಂಶೋಧನಾ ಪ್ರಬಂಧಗಳನ್ನು ಬರೆದು ಮಂಡಿಸಿರುವುದು ಇವಳ ವೈಶಿಷ್ಟ್ಯ. ನಾಡಿನಾದ್ಯಂತ ಅನೇಕ ನೃತ್ಯ ಪ್ರದರ್ಶನಗಳನ್ನು ನೀಡಿ ‘ಸಾಧನ ಸಂಗಮ’ದ ‘ನೃತ್ಯ ನಿಪುಣ’ ತಂಡದ ಭಾಗವಾಗಿರುವ ಗುಣಶ್ರೀ, ಇದೀಗ ‘ನೃತ್ಯಸುಗುಣ’ ಎಂಬ ವಿಶಿಷ್ಟ…
ಮುಂಬೈ : ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗದಲ್ಲಿ ಇತ್ತೀಚಿಗೆ ನಿಧನರಾದ ಹಿರಿಯ ಕಲಾ ಚೇತನ ಸಂಗೀತ ವಿದುಷಿ ಸರೋಜಾ ಶ್ರೀನಾಥ್ ಅವರಿಗೆ ನುಡಿ ನಮನ ಸಲ್ಲಿಸುವ ಕಾರ್ಯಕ್ರಮವನ್ನು ದಿನಾಂಕ 22 ಆಗಸ್ಟ್ 2025ರಂದು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಭಾಗದ ಮುಖ್ಯಸ್ಥ ಪ್ರೊ. ಜಿ.ಎನ್. ಉಪಾಧ್ಯ ಇವರು ವಹಿಸಿ ಮಾತನಾಡುತ್ತಾ “ಶ್ರೀಮತಿ ಸರೋಜಾ ಶ್ರೀನಾಥ್ ಅವರು ಮುಂಬಯಿ ವಿಶ್ವವಿದ್ಯಾಲಯದ ನಲಂದಾ ನೃತ್ಯ ಕಲಾ ಮಹಾವಿದ್ಯಾಲಯದಲ್ಲಿ ಸಂಗೀತ ಶಾಸ್ತಜ್ಞೆಯಾಗಿ, ಭರತನಾಟ್ಯ ವಿಭಾಗದ ಮುಖ್ಯಸ್ಥೆಯಾಗಿ ಇಪ್ಪತ್ತೆಂಟು ವರ್ಷಗಳ ಕಾಲ ಸೇವೆ ಸಲ್ಲಿಸಿ ಸೈ ಎನಿಸಿಕೊಂಡರು. ಬಾಲ್ಯದಿಂದಲೂ ವಿಶೇಷ ಆಸಕ್ತಿ ತಳೆದಿದ್ದ ನೃತ್ಯ ಹಾಗೂ ಸಂಗೀತ ಕ್ಷೇತ್ರದಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಲು ಅವರಿಗೆ ಅಲ್ಲಿ ಒಳ್ಳೆಯ ವೇದಿಕೆ ದೊರಕಿತು. ಸರೋಜಾ ಅವರದ್ದು ಸೃಷ್ಟಿಶೀಲ ಮನಸ್ಸು. ವಿಶ್ವವಿದ್ಯಾಲಯದ ನೃತ್ಯಕಲಾ ತರಗತಿಗಳಲ್ಲಿ ಪಾಠ ಪ್ರವಚನಗಳ ಜತೆಜತೆಗೆ ಸಂಗೀತ ರಚನೆ, ಸಂಯೋಜನೆ ಮಾಡಲು ಸಿಕ್ಕ ಅವಕಾಶವನ್ನು ಸರೋಜಾ ಅವರು ತಮ್ಮೊಳಗಿನ ಪ್ರತಿಭೆ ಹೊರಹೊಮ್ಮಲು ಬಳಸಿಕೊಂಡರು. ಪ್ರತಿ ವರ್ಷ ನಲಂದಾ ಮಹಾ…
ಮಂಗಳೂರು : ತುಳು ಪರಿಷತ್ ವತಿಯಿಂದ ಮಂಗಳೂರಿನ ಮ್ಯಾಪ್ಸ್ ಕಾಲೇಜಿನಲ್ಲಿ ದಿನಾಂಕ 22 ಆಗಸ್ಟ್ 2025ರಂದು ತುಳುನಾಡಿನಲ್ಲಿ ಹಬ್ಬಗಳ ಆಚರಣೆ ಮತ್ತು ಸಾಂಸ್ಕೃತಿಕ ಮಹತ್ವ ಎಂಬ ವಿಷಯದ ಬಗ್ಗೆ ವಿಚಾರ ಚಿಂತನೆ ಆಯೋಜಿಸಲಾಗಿತ್ತು. ತುಳು ಪರಿಷತ್ ಸದಸ್ಯ ಕೃಷ್ಣಮೂರ್ತಿ ಮಾತನಾಡಿ “ಧಾರ್ಮಿಕ ಚಟುವಟಿಕೆಗಳು ಮತ್ತು ಜಾನಪದೀಯ ನಂಬಿಕೆ, ಆಚಾರ ವಿಚಾರಗಳೊಂದಿಗೆ ಹಬ್ಬಗಳು ಆಚರಣೆಯಾಗುತ್ತಿವೆ. ಸಡಗರ, ಸಂಭ್ರಮಗಳೊಂದಿಗೆ ಹಬ್ಬಗಳ ಮಹತ್ವದ ಕುರಿತು ಚಿಂತನೆಯೂ ಅಗತ್ಯವಿದೆ” ಎಂದರು. ತುಳು ಪರಿಷತ್ತಿನ ಗೌರವ ಅಧ್ಯಕ್ಷ ಸಾಹಿತಿ ಡಾ. ಪ್ರಭಾಕರ್ ನೀರುಮಾರ್ಗ ಮಾತನಾಡಿ “ಪ್ರಾದೇಶಿಕ ಅನನ್ಯತೆಗಳೊಂದಿಗೆ ಹಬ್ಬಗಳ ಆಚರಣೆ ಮಾಡಿದಾಗ ಹೆಚ್ಚು ಅರ್ಥ ಪೂರ್ಣವಾಗುತ್ತದೆ. ಸಾಂಸ್ಕೃತಿಕ ನೆಲೆ ಗಟ್ಟಿನೊಂದಿಗೆ ವೈವಿಧ್ಯದಿಂದ ಕೂಡಿರುವ ಸಂಪ್ರದಾಯಗಳು ಹಬ್ಬಗಳನ್ನು ಸುಂದರಗೊಳಿಸಿವೆ” ಎಂದರು. ತುಳು ಪರಿಷತ್ತಿನ ಅಧ್ಯಕ್ಷ ಶುಭೋದಯ ಆಳ್ವಾ ಮಾತನಾಡಿ “ಕೃಷಿ ಪ್ರಧಾನ ವ್ಯವಸ್ಥೆಯ ಹಿನ್ನೆಲೆಯೊಂದಿಗೆ ತುಳುನಾಡಿನಲ್ಲಿ ಹಬ್ಬದ ಆಚರಣೆಗಳು ನಡೆಯುತ್ತಿದ್ದು ವಿಶಿಷ್ಟ ಕ್ರಮಗಳು ರೂಢಿಗತವಾಗಿದೆ” ಎಂದರು. ಲೇಖಕಿ ಸುಧಾ ನಾಗೇಶ್, ಅಮಿತಾ ಅಶ್ವಿನ್ ಉಲ್ಲಾಳ್, ದುರ್ಗಾ ಪ್ರಸಾದ್, ಬಿ. ಶ್ರೀನಿವಾಸ್…
ಮಂಗಳೂರು : ರಥಬೀದಿಯಲ್ಲಿರುವ ಶ್ರೀ ವಾಗೀಶ್ವರೀ ಯಕ್ಷಗಾನ ಕಲಾವರ್ಧಕ ಸಂಘ ಇದರ ವತಿಯಿಂದ ಸಂಘದ ಹಿರಿಯ ಸದಸ್ಯ, ಭಾಗವತ, ಹಿಮ್ಮೇಳ ಕಲಾವಿದ ದಿ. ಬಿ. ನಾಗೇಶ ಪ್ರಭು ಸಂಸ್ಮರಣಾ ಕಾರ್ಯಕ್ರಮವು ದಿನಾಂಕ 31 ಆಗಸ್ಟ್ 2025ರಂದು ಅಪರಾಹ್ನ 2-30 ಗಂಟೆಗೆ ಮಂಗಳೂರು ರಥಬೀದಿಯ ಕುಡ್ತೇರಿ ಶ್ರೀ ಮಹಾಮಾಯಾ ದೇವಸ್ಥಾನದಲ್ಲಿ ಜರುಗಲಿದೆ. ಶ್ರೀ ವಾಗೀಶ್ವರೀ ಯಕ್ಷಗಾನ ಕಲಾವರ್ಧಕ ಸಂಘದ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ‘ಶ್ರೀ ಶನೀಶ್ವರ ಮಹಾತ್ಮೆ’ ಯಕ್ಷಗಾನ ತಾಳಮದ್ದಲೆ ಪ್ರಸ್ತುತಗೊಳ್ಳಲಿದೆ. ಇದೇ ವೇಳೆ ತಲಕಳ ‘ಶ್ರೀಶ ಯಕ್ಷಗಾನ ಕಲಿಕಾ ಕೇಂದ್ರ’ದ ಸಂಚಾಲಕಿ ಶ್ರೀಮತಿ ಯೋಗಾಕ್ಷಿ ಗಣೇಶ ಇವರಿಗೆ ‘ಶ್ರೀ ವಾಗೀಶ್ವರೀ ಅನುಗ್ರಹ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಶ್ರೀ ವಾಗೀಶ್ವರೀ ಯಕ್ಷಗಾನ ಸಂಘದ ಗೌರವಾಧ್ಯಕ್ಷರಾದ ಎಸ್. ಪ್ರದೀಪ ಕುಮಾರ ಕಲ್ಕೂರ ಇವರ ಅಧ್ಯಕ್ಷತೆಯಲ್ಲಿ ಸಮಾರಂಭ ಜರುಗಲಿದ್ದು, ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಸಂಘಟನಾ ಕಾರ್ಯದರ್ಶಿ ಪ್ರದೀಪ ಆಳ್ವ ಮತ್ತು ಬಂಟ್ವಾಳ ಘಟಕದ ಅಧ್ಯಕ್ಷ ದಿವಾಕರ ಶೆಟ್ಟಿ ಪರಾರಿಗುತ್ತು…
ಮುಂಬಯಿ : ತುಳುನಾಡಿನ ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಸಾಹಿತಿಕವಾಗಿ ತುಳುವರನ್ನು ಸಂಘಟಿಸಿದ ಕವಯಿತ್ರಿ ಸಂಘಟಕಿ ಗೀತಾ ಲಕ್ಷ್ಮೀಶ್ ಇವರ ನೇತೃತ್ವದಲ್ಲಿ ಸ್ಥಾಪನೆಗೊಂಡಿರುವ ತುಲುವೆರ ಕಲ ಟ್ರಸ್ಟ್ (ರಿ.) ಎಂಬ ಸಂಸ್ಥೆಯು ಮುಂಬೈಯಲ್ಲಿ ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಸಿಗಬೇಕು ಎನ್ನುವ ಸದುದ್ದೇಶದಿಂದ ಮಹತ್ತರವಾದ ಯೋಜನೆಯನ್ನು ರೂಪಿಸಿ ಊರು ಹಾಗೂ ಮುಂಬೈನ ಜಂಟಿ ಆಶ್ರಯದಲ್ಲಿ ‘ತುಲುವೆರೆ ಕಲ ಮಿನದನ’ ಎಂಬ ತುಳು ಕಾರ್ಯಕ್ರಮವು ದಿನಾಂಕ 23 ಆಗಸ್ಟ್ 2025 ಶನಿವಾರದಂದು ಬಂಟರ ಭವನ ಕುರ್ಲಾ ಇದರ ಎನೆಕ್ಸ್ ಹಾಲ್ನಲ್ಲಿ ವಿಜೃಂಭಣೆಯಿಂದ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ತುಲುವೆರೆ ಕಲ ಟ್ರಸ್ಟಿನ ಸಂಸ್ಥಾಪಕಿ, ತುಳು ಲಿಪಿ ಶಿಕ್ಷಕಿ ಗೀತಾ ಲಕ್ಷ್ಮೀಶ್ ವಹಿಸಿದ್ದರು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಸಾಯಿ ಪ್ಯಾಲೇಸ್ ಗ್ರೂಪ್ ಆಫ್ ಹೋಟೆಲ್ಸ್ ನಿರ್ದೇಶಕ ಉದಯ ಸುಂದರ್ ಶೆಟ್ಟಿ ಮಾತನಾಡಿ “ಊರಿನವರು ಮತ್ತು ಮುಂಬೈಯವರು ಒಗ್ಗಟ್ಟಾಗಿ ಈ ಕಾರ್ಯಕ್ರಮವನ್ನು ಬಹಳ ಅರ್ಥಪೂರ್ಣವಾಗಿ ನಡೆಸಿದ್ದಾರೆ. ಮುಂಬೈ ನಗರದಲ್ಲಿ ತುಳು ಮಾತನಾಡುವವರು ಕಡಿಮೆಯಾಗುತ್ತಿದ್ದಾರೆ. ನಾವು…
ಮಂಗಳೂರು : ಸಂಸ್ಕೃತ ಸಂಘ ಹಾಗೂ ಸರೋಜಿನಿ ಮಧುಸೂಧನ ಕುಶೆ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ದಿನಾಂಕ 23 ಆಗಸ್ಟ್ 2025ರಂದು ಅತ್ತಾವರದಲ್ಲಿರುವ ಸರೋಜಿನೀ ಮಧುಸೂದನ ಕುಶೆ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಸಂಸ್ಕೃತೋತ್ಸವ ಮತ್ತು ಸನ್ಮಾನ ಕಾರ್ಯಕ್ರಮ ವಿಜೃಂಭಣೆಯಿಂದ ಕೊನೆಗೊಂಡಿತು. ಸಂಸ್ಕೃತ ಸ್ತೋತ್ರ ಕಂಠಪಾಠ ಸ್ಪರ್ಧೆ, ಸುಭಾಷಿತ ಕಂಠಪಾಠ ಸ್ಪರ್ಧೆ, ಏಕಪಾತ್ರಾಭಿನಯ, ಸಂಸ್ಕೃತ ಸಮುಗಾಯನ, ಸಮೂಹ ನೃತ್ಯ ಇತ್ಯಾದಿ 11 ಸ್ಪರ್ಧೆಗಳಿಗೆ 20ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳಿಂದ 300ಕ್ಕೂ ಹೆಚ್ಚು ಅಧಿಕ ವಿದ್ಯಾರ್ಥಿಗಳು ಆಗಮಿಸಿದ್ದರು. ಸ್ಪರ್ಧೆಯಲ್ಲಿ ವಿಜೇತರಾಗಿರುವವರಿಗೆ ಬಹುಮಾನವನ್ನು ವಿತರಿಸಲಾಯಿತು ಹಾಗೂ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶ್ರೀಮತಿ ಭಾರತೀ ಸೊರಕೆ ಪ್ರಪಂಚದ ಅತ್ಯಂತ ಶ್ರೇಷ್ಠವಾದ ಭಾಷೆ ಸಂಸ್ಕೃತ, ಅದನ್ನು ಬಾಲ್ಯದಿಂದಲೇ ಕಲಿತರೆ ಮಾನಸಿಕ ಹಾಗೂ ಶಾರೀರಿಕ ಆರೋಗ್ಯ ವೃದ್ಧಿಸುತ್ತದೆ ಎಂದರು. ಕಾರ್ಯಕ್ರಮದಲ್ಲಿ ಎನ್.ಐ.ಟಿ.ಕೆ. ಸುರತ್ಕಲ್ ನ ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರಾದ ಸುಬ್ರಹ್ಮಣ್ಯ ಭಟ್ಟರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷರು, ಪ್ರಸಿದ್ಧ ಜ್ಯೋತಿಷ್ಕರಾದ ಶ್ರೀ ರಂಗ ಐತಾಳರು ಮಾತನಾಡಿ “ಯಾವತ್ತೂ ಮನುಷ್ಯನಿಗೆ ಭಾಷಾಭಿಮಾನ, ದೇಶಾಭಿಮಾನ, ಸ್ವಾಭಿಮಾನದ…
ಸಿಂಗಾಪುರ : ಸದಾ ಚಟುವಟಿಕೆಯಿಂದಿರುವ ಸಿಂಗಾಪುರ ಕನ್ನಡ ಸಂಘ, ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ, ವಿನೋದ, ಶುಭ ಕಾರ್ಯಕ್ರಮಗಳಿಗೆ ಸದಾ ಪ್ರೋತ್ಸಾಹಿಸುವ ಹಾಗೂ ಸಿಂಗಾಪುರದ ಕನ್ನಡ ಸಮುದಾಯ ಹಾಗೂ ಇಲ್ಲಿನ ಇತರ ಸಮುದಾಯದ ಜೊತೆ ಸಾಂಸ್ಕೃತಿಕ ಸಂಬಂಧವನ್ನು ಬೆಳೆಸುವುದು, ಜಗತ್ತಿನ ವಿವಿಧೆಡೆಯಲ್ಲಿರುವ ಕನ್ನಡಿಗರೊಡನೇ ಸಾಂಸ್ಕೃತಿಕ ಸಂಬಂಧವನ್ನು ಕಲ್ಪಿಸುವ ಒಂದು ಸುಂದರ ತಂಡ. ಬೆಂಗಳೂರಿನಲ್ಲಿ ಮನೆ ಮಾತಾಗಿರುವ ಕಳೆದ ನಾಲ್ಕುವರೆ ದಶಕಗಳಿಂದ ಗುಣಾತ್ಮಕ ಯಕ್ಷಗಾನ ಪ್ರದರ್ಶನ, ಆಸಕ್ತರಿಗಾಗಿ ನಿರಂತರ ಯಕ್ಷಗಾನ ತರಬೇತಿ, ಯಕ್ಷಗಾನದ ಕುರಿತಾದ ಕಮ್ಮಟ, ಕಾರ್ಯಾಗಾರ, ಯಕ್ಷಾಂತರಂಗವನ್ನು ಸಮಗ್ರವಾಗಿ ಪರಿಚಯಿಸುವ ಪ್ರಾತ್ಯಕ್ಷಿಕೆ, ತಾಳಮದ್ದಲೆ, ಹೂವಿನ ಕೋಲು, ಗಾನವೈಭವ, ಪ್ರತಿವರ್ಷ ಸಾಧಕ ಕಲಾವಿದರನ್ನು ಗುರುತಿಸಿ ನಗದು ಪುರಸ್ಕಾರದೊಂದಿಗೆ ‘ಯಕ್ಷದೇಗುಲ’ ಪ್ರಶಸ್ತಿ, ಯಕ್ಷಗಾನ ಉತ್ಸವ, ಪುಸ್ತಕ ಪ್ರಕಟಣೆ, ಯಕ್ಷಾಭ್ಯಾಸ ಹೀಗೆ ಸದಾ ಚಟುವಟಿಕೆಯಿಂದಿರುವ ಸಂಸ್ಥೆಯಾದ ಯಕ್ಷದೇಗುಲ ಸಂಸ್ಥೆ. ಯಕ್ಷಗಾನ ಕ್ಷೇತ್ರಕ್ಕೆ ನೀಡಿದ ಅನುಪಮ ಕೊಡುಗೆಯನ್ನು ಮನಗಂಡು ‘ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಪ್ರಶಸ್ತಿ’, ಉಡುಪಿ ಕಲಾರಂಗ ನೀಡುವ ಶ್ರೀ ಶ್ರೀ ವಿಶ್ವೇಶತೀರ್ಥ ಪ್ರಶಸ್ತಿ, ಶ್ರವಣ ಬೆಳಗೋಳದಲ್ಲಿ…