Subscribe to Updates
Get the latest creative news from FooBar about art, design and business.
Author: roovari
ಮೂಡುಬಿದಿರೆ: ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ ಗದಗ, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ ಹಾಗೂ ಬಾಲಭವನ ಸೊಸೈಟಿ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ರಾಷ್ಟ್ರಮಟ್ಟದ ಮಕ್ಕಳ ಚಿತ್ರ ಕಲೋತ್ಸವ ‘ಚಿಣ್ಣರ ಚಿತ್ರ ಚಿತ್ತಾರ 2023-24’ ಇದರ ಬಹುಮಾನ ವಿತರಣಾ ಸಮಾರಂಭವು ದಿನಾಂಕ 14 ಆಗಸ್ಟ್ 2024 ರಂದು ಧಾರಾವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಿತು. ದೇಶದಾದ್ಯಂತ ಸುಮಾರು 27,000 ಕ್ಕೂ ಅಧಿಕ ಮಕ್ಕಳು ಭಾಗವಹಿಸಿದ ಈ ಚಿತ್ರಕಲಾ ಸ್ಪರ್ಧೆಯಲ್ಲಿ ಮೂಡುಬಿದಿರೆ ಮೌಂಟ್ ಕಾರ್ಮೆಲ್ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಅಶ್ವಿಲ್ ನೀಲ್ ಲೋಬೋ ‘ಪುಟ್ಟ ಕಲಾವಿದ’ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಇವರು ಮೂಡುಬಿದಿರೆ ಅಪೂರ್ವ ನಗರದ ಅರುಣ್ ವಿನೀತ ಲೋಬೋ ದಂಪತಿಯ ಪುತ್ರ.
ಉಡುಪಿ : ಕೋಟದ ಸು.ವಿ.ಕಾ. ಸಾಂಸ್ಕೃತಿಕ ಸಂಘಟನೆಯು ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಆಶ್ರಯದಲ್ಲಿ ಆಯೋಜಿಸಿದ ಖ್ಯಾತ ರಂಗನಿರ್ದೇಶಕ ಡಾ. ಶ್ರೀಪಾದ ಭಟ್ ಅವರ ಪರಿಕಲ್ಪನೆ ಮತ್ತು ನಿರ್ದೇಶನದಲ್ಲಿ ಕುಮಾರಿ ಕಾವ್ಯ ಹಂದೆ ಅಭಿನಯದ ಏಕವ್ಯಕ್ತಿ ಕಾವ್ಯಾಭಿನಯ ‘ಹಕ್ಕಿ ಮತ್ತು ಅವಳು’ ಇದರ ಪ್ರದರ್ಶನವು 30 ಆಗಸ್ಟ್ 2024ರ ಶುಕ್ರವಾರದಂದು ನಡೆಯಿತು. ಹಿನ್ನೆಲೆಯಲ್ಲಿ ಶಿಕ್ಷಕಿ ವಿನಿತಾ ಹಂದೆ ಮತ್ತು ಉಪನ್ಯಾಸಕ ಸುಜಯೀಂದ್ರ ಹಂದೆ ಸಹಕರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ಕುಮಾರ್ ಇವರು ಸಾಹಿತ್ಯ ವೇದಿಕೆಯ ಪರವಾಗಿ ನಟಿ ಕಾವ್ಯ ಹಂದೆಯವರನ್ನು ಸಂಮಾನಿಸಿ ಗೌರವಿಸಿದರು. ಕಾಲೇಜಿನ ಹಿರಿಯ ಉಪನ್ಯಾಸಕಿ ಸುಮಾ, ಸಾಹಿತ್ಯ ಸಂಘದ ಸಂಚಾಲಕಿ ಹಾಗೂ ಲೇಖಕಿ ಸುಧಾ ಆಡುಕಳ, ಉಪನ್ಯಾಸಕರಾದ ಪ್ರೇಮ, ಭವ್ಯ, ಶಾಲಿನಿ, ಡಾ. ಉಷಾ, ಗಂಗಾಧರ, ಛಾಯಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಸಾಹಿತ್ಯ ಸಂಘದ ವಿದ್ಯಾರ್ಥಿ ಪ್ರತಿನಿಧಿಗಳಾದ ಕುಮಾರಿ ಗ್ರೀಷ್ಮಿತಾ ಪಿಂಟೊ ಹಾಗೂ ಕುಮಾರಿ ಲವಿಕಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಉಡುಪಿ : ಕನ್ನಡ ಜಾನಪದ ಪರಿಷತ್ ಉಡುಪಿ ತಾಲೂಕು ಘಟಕವು ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀಕೃಷ್ಣ ಮಠದ ಆಶ್ರಯದಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಪ್ರಥಮ ಕನ್ನಡ ಜಾನಪದ ಸಮ್ಮೇಳನದ ಉದ್ಘಾಟನಾ ಸಮಾರಂಭವು ದಿನಾಂಕ 27 ಆಗಸ್ಟ್ 2024 ರಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು “ಜಾನಪದ ಕಲೆ ಹಾಗೂ ಕ್ರೀಡೆಯ ಸೊಬಗು, ಸಹಜತೆ, ಆತ್ಮೀಯತೆ ಯಾವುದೇ ಕಲೆಗಳಲ್ಲಿ ನೋಡಲು ಸಾಧ್ಯವಿಲ್ಲ. ಇದು ಎಂದಿಗೂ ಶಾಶ್ವತವಾಗಿರುತ್ತದೆ. ಈ ಮಣ್ಣಿನ ಕಲೆಗಳನ್ನು ಉಳಿಸಿ ಬೆಳೆಸುವ ಕಾರ್ಯ ಅಗತ್ಯವಾಗಿ ಮಾಡಬೇಕಾಗಿದೆ. ಈ ಜಾನಪದವು ಈ ನೆಲದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಬಿಂಬಿಸುತ್ತದೆ.” ಎಂದರು. ಜನಪದ ವಿದ್ವಾಂಸ ಡಾ. ಗಣನಾಥ್ ಎಕ್ಕಾರು ಮಾತನಾಡಿ “ಪ್ರಕೃತಿ ಹಾಗೂ ಕೃಷಿ ಸಂರಕ್ಷಣೆ ಬಗ್ಗೆ ಕಾಳಜಿ ವಹಿಸದಿದ್ದರೆ ಜಾನಪದವು ಅಪಾಯದಂಚಿಗೆ ತಲುಪಬಹುದು. ಪ್ರಕೃತಿ ಮತ್ತು ಸಂಸ್ಕೃತಿಯ ಅವಿನಾಭಾವ ಸಂಬಂಧದ ಕುರಿತು ಚರ್ಚಿಸಿ ಅಭಿವೃದ್ಧಿಯ ಚಿಂತನೆ ರೂಪಿಸಬೇಕಿದೆ.…
ಬೆಳಗಾವಿ : ರಂಗ ಸಂಪದ ಬೆಳಗಾವಿ ಆಯೋಜಿಸುವ ‘ಹಾಸ್ಯ ಸಂಜೆ’ ಗದ್ಯ– ಪದ್ಯ- ವೈವಿಧ್ಯ ಕಾರ್ಯಕ್ರಮವು 01 ಸೆಪ್ಟೆಂಬರ್ 2024ರ ಭಾನುವಾರದಂದು ಸಂಜೆ ಘಂಟೆ 5.30 ರಿಂದ ಬೆಳಗಾವಿಯ ತಿಳಕವಾಡಿಯಲ್ಲಿರುವ ವಿದ್ಯಾಪೀಠದ ಸಮೀಪದ ಐ. ಎಮ್. ಇ. ಆರ್. ಸಭಾಭವನದಲ್ಲಿ ನಡೆಯಲಿದೆ. ಶ್ರೀ ಶ್ರೀಪತಿ ಮಂಜನಬೈಲು ಇವರ ಸಂಯೋಜನೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಅಂಕಣಕಾರ ಹಾಗೂ ಹಾಸ್ಯೋಕ್ತಿ ಪಟುಗಳಾದ ಶ್ರೀ ಎನ್. ರಾಮನಾಥ ಮತ್ತು ಪ್ರಸಿದ್ಧ ವಾಗ್ಮಿ, ಹರಟೆ ಪಟು ಹಾಗೂ ಹಾಸ್ಯ ಮಾತುಗಾರರಾದ ಶ್ರೀ ವೈ. ವಿ. ಗುಂಡುರಾವ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಈ ಕಾರ್ಯಕ್ರಮ ಸಂಪೂರ್ಣ ಉಚಿತವಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿಸಬೇಕೆಂದು ರಂಗಸಂಪದ ಇದರ ಅಧ್ಯಕ್ಷರಾದ ಡಾ. ಅರವಿಂದ ಕುಲಕರ್ಣಿ ವಿನಂತಿಸಿದ್ದಾರೆ.
ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಕೊಡಮಾಡುವ 2022 ಮತ್ತು 2023ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ಆರು ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ. 2022ನೇ ಸಾಲಿನಲ್ಲಿ ಮರಿಯಮ್ಮ ಇಸ್ಮಾಈಲ್ ಉಳ್ಳಾಲ (ಬ್ಯಾರಿ ಸಾಹಿತ್ಯ), ಹಂಝತುಲ್ಲಾ ಕುವೇಂಡ ಬೆಂಗಳೂರು (ಬ್ಯಾರಿ ಭಾಷೆ ಮತ್ತು ಸಂಘಟನೆ) ಮತ್ತು ಎಂ.ಜಿ. ಶಾಹುಲ್ ಹಮೀದ್ ಗುರುಪುರ (ಬ್ಯಾರಿ ಕಲೆ ಮತ್ತು ಸಂಸ್ಕೃತಿ) ಹಾಗೂ 2023ನೇ ಸಾಲಿನಲ್ಲಿ ಮುಹಮ್ಮದ್ ಶರೀಫ್ ನಿರ್ಮುಂಜೆ (ಬ್ಯಾರಿ ಸಾಹಿತ್ಯ), ಹಾಜಿ ಟಿ.ಎ. ಆಲಿಯಬ್ಬ ಜೋಕಟ್ಟೆ (ಬ್ಯಾರಿ ಭಾಷೆ ಮತ್ತು ಸಂಘಟನೆ) ಮತ್ತು ಅಶ್ರಫ್ ಅಪೋಲೋ ಕಲ್ಲಡ್ಕ (ಬ್ಯಾರಿ ಕಲೆ ಮತ್ತು ಸಂಸ್ಕೃತಿ) ಇವರುಗಳು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ‘ಗೌರವ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ. ಅಕಾಡೆಮಿಯ ಮಾಜಿ ಅಧ್ಯಕ್ಷ ಮುಹಮ್ಮದ್ ಕರಂಬಾರು, ಮಾಜಿ ಸದಸ್ಯರಾದ ಅತ್ತೂರು ಚೆಯ್ಯಬ್ಬ, ಆಯಿಶಾ ಯು.ಕೆ. ಮತ್ತು ಹುಸೈನ್ ಕಾಟಿಪಳ್ಳ ಇವರನ್ನು ಒಳಗೊಂಡ ಆಯ್ಕೆ ಸಮಿತಿಯು ಈ ಆಯ್ಕೆ ಮಾಡಿದ್ದು, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸ್ಥಾಯಿ ಸಮಿತಿ…
ಮೂಡಬಿದ್ರೆ : ತುಳುನಾಡಿನ ಮೂಲ ಜನಾಂಗದಲ್ಲಿ ಹುಟ್ಟಿದ ಕಾರಣಿಕ ಪುರುಷರ ಚರಿತ್ರೆಯನ್ನು ಲೋಕಮುಖಕ್ಕೆ ಸಾರುವರೆ ಸಿದ್ಧತೆ ನಡೆಸುತ್ತಿದೆ ಮೂಡಬಿದ್ರೆಯ ಯಕ್ಷ ಸಂಭ್ರಮ. ಬಿಲ್ಲವ, ಬಂಟ, ಮುಗೇರ ಹಾಗೂ ಸತ್ಯ ಸಾರಮಾನಿ ಜನಾಂಗದ ಕೋಟಿ – ಚೆನ್ನಯರು, ಕಾಂತಬಾರೆ – ಬುದಬಾರೆ, ಸಿರಿ – ಸೊನ್ನೆ – ಅಬ್ಬಯ – ದಾರಯ, ದೈಯು – ಪೆರ್ಣು – ಮಾನಿಗ, ಕಾನದ – ಕಟದರ ಇತಿಹಾಸವನ್ನು ಲೋಕ ಮುಖಕ್ಕೆ ಸಾರುವ ತುಳು ಯಕ್ಷ ಪರ್ಬವನ್ನು ಜಾತ್ರೆಯನ್ನಾಗಿಸುವರೇ ತೆಂಕು ತಿಟ್ಟಿನ 60ಕ್ಕೂ ಮಿಕ್ಕಿ ದಿಗ್ಗಜ ಕಲಾವಿದರ ಕೂಡುವಿಕೆಯಲ್ಲಿ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಪ್ರಸಂಗ ರಚನೆಯ ಯಶಸ್ವೀ ಜೋಡಿ ಶ್ರೀ ನಿತಿನ್ ಕುಮಾರ್ ತೆಂಕಕಾರಂದೂರು ರಚಿಸಿ, ನಿರ್ದೇಶಿಸುವ ಶ್ರೀ ಯೋಗೀಶ್ ರಾವ್ ಚಿಗುರುಪಾದೆ ಪದ್ಯ ರಚನೆಯ ತುಳು ಪ್ರಸಂಗ ‘ಕುಲದೈವೋ ಬ್ರಹ್ಮ’ ಇದರ ಯಕ್ಷಗಾನ ಬಯಲಾಟವು ದಿನಾಂಕ 01 ಸೆಪ್ಟೆಂಬರ್ 2024ರಂದು ಮಧ್ಯಾಹ್ನ 2-00 ಗಂಟೆಗೆ ಮೂಡಬಿದ್ರೆಯ ಕನ್ನಡ ಭವನದಲ್ಲಿ ನಡೆಯಲಿದೆ. ಕೆಮ್ಮಲೆ ಬೆರ್ಮೆರೆ ಕ್ಷೇತ್ರದ…
ಮಂಗಳೂರು : ಸಂಗೀತ ಪರಿಷತ್ ಮಂಗಳೂರು ಇದರ ವತಿಯಿಂದ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಭಾರತೀಯ ವಿದ್ಯಾಭವನ ಮತ್ತು ರಾಮಕೃಷ್ಣಮಠ ಇವುಗಳ ಸಹಯೋಗದೊಂದಿಗೆ ಪ್ರಸ್ತುತ ಪಡಿಸುವ ‘ಶ್ರಾವಣ ಸಂಗೀತೋತ್ಸವ 2024’ವನ್ನು ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ದಿನಾಂಕ 01 ಸೆಪ್ಟೆಂಬರ್ 2024ರಂದು ಆಯೋಜಿಸಲಾಗಿದೆ. ಸಂಗೀತ ಪರಿಷತ್ ಮಂಗಳೂರು ಇದರ ಗೌರವ ಅಧ್ಯಕ್ಷರಾದ ಡಾ. ಸಿ.ಆರ್.ಬಲ್ಲಾಳ್ ಇವರ ಪ್ರಾಯೋಜಕತ್ವದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಬೆಳಗ್ಗೆ ಗಂಟೆ 10-00ರಿಂದ ಮಂಗಳೂರಿನ ಜಿ.ಎನ್. ಕೃಷ್ಣಪವನ್ ಕುಮಾರ್ ಇವರ ಹಾಡುಗಾರಿಕೆಗೆ ಬೆಂಗಳೂರಿನ ಶ್ರೀ ಕಾರ್ತಿಕೇಯ ರಾಮಚಂದ್ರ ವಯೋಲಿನ್, ಬೆಂಗಳೂರಿನ ಸುನಿಲ್ ಸುಬ್ರಹ್ಮಣ್ಯ ಮೃದಂಗದಲ್ಲಿ ಮತ್ತು ಮಂಗಳೂರಿನ ಸುಮುಖ ಕಾರಂತ್ ಖಂಜೀರದಲ್ಲಿ ಸಹಕರಿಸಲಿದ್ದಾರೆ. ಮಧ್ಯಾಹ್ನ 1-30 ಗಂಟೆಗೆ ಬೆಂಗಳೂರಿನ ಶ್ರೀ ಶ್ರೀಕೃಷ್ಣ ಭಟ್ ಎನ್.ಆರ್. ಇವರ ಕೊಳಲು ವಾದನಕ್ಕೆ ಬೆಂಗಳೂರಿನ ಅಭಯ್ ಸಂಪಿಗೆತಾಯ ವಯೋಲಿನ್ ಮತ್ತು ಮಂಗಳೂರಿನ ಶ್ರೀ ಅವಿನಾಶ್ ಬೆಳ್ಳಾರೆ ಮೃದಂಗದಲ್ಲಿ ಸಹಕರಿಸಲಿದ್ದಾರೆ. ಸಂಜೆ 4-45 ಗಂಟೆಗೆ ಬೆಂಗಳೂರಿನ ಕುಮಾರಿ…
ಬೆಂಗಳೂರು : ಕೊಡಗಿನ ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವತಿಯಿಂದ ಡಿವೈನ್ ಟೆಂಪಲ್ ಫೌಂಡೇಷನ್ (ರಿ.) ಬೆಂಗಳೂರು ಇವರ ಸಹಯೋಗದೊಂದಿಗೆ ಆಯೋಜಿಸಿದ್ದ ‘ರಾಷ್ಟ್ರ ಮಟ್ಟದ ನೃತ್ಯೋತ್ಸವ’ ಕಾರ್ಯಕ್ರಮವು ದಿನಾಂಕ 18 ಆಗಸ್ಟ್ 2024ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದ ಆವರಣ ನಯನ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರಾದ ಶಶಿಧರ್ ಕೋಟಿ, ಸಿನಿಮಾ ಧಾರಾವಾಹಿ ನಿರ್ದೇಶಕರಾದ ಡಾ. ಸುಧಾಕರ್ ಬನ್ನಂಜೆ, ಸಮಾಜ ಸೇವಕರಾದ ಡಾ. ಶೇಖ್ ವಾಹಿದ್ ದಾವೂದ್, ಉಡುಪಿ ಚಲನಚಿತ್ರ ನಟರಾದ ನೀಲಕಂಠ ಅಡಿಗ, ಸಮಾಜ ಸೇವಕರಾದ ಡಾ. ಪಿ. ಶ್ರೀಧರ್, ಡಾ. ಬಿ.ವಿ. ಮುನಿರಾಜು, ಕಾರ್ಯಕ್ರಮದ ಗೌರವ ಅಧ್ಯಕ್ಷರಾದ ಕೆಂಚನೂರ್ ಶಂಕರ್, ಡಾ. ಲಕ್ಷ್ಮೀದೇವಿ ಹಾಗೂ ಡಾ. ಮೀರಾ ಕುಮಾರ್ ಹಾಗೂ ಇನ್ನೂ ಹಲವಾರು ಗಣ್ಯ ವ್ಯಕ್ತಿಗಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯರಿಗೆ ‘ಶ್ರೀ ಕೆಂಗಲ್ ಹನುಮಂತಯ್ಯ ಸದ್ಬಾವನ ಪ್ರಶಸ್ತಿ’ ಹಾಗೂ ಮಕ್ಕಳಿಗೆ ಮಿನುಗು ತಾರೆ ರಾಷ್ಟ್ರ ಪ್ರಶಸ್ತಿ’ಯನ್ನು ನೀಡಿ…
ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮವು ದಿನಾಂಕ 02-09-2024ರಂದು ಸಂಜೆ ಗಂಟೆ 6.25ಕ್ಕೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಈ ದಿನದ ಸರಣಿ ಕಾರ್ಯಕ್ರಮದಲ್ಲಿ ಕುಮಾರಿ ಪ್ರಜ್ಞಾ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ. ಉಡುಪಿ ಪ್ರತ್ತೂರಿನ ದಂಪತಿಗಳಾದ ಶ್ರೀಯುತ ನಿತ್ಯಾನಂದ ಸೇರಿಗಾರ್ ಹಾಗೂ ಶ್ರೀಮತಿ ಶ್ಯಾಮಲಾರವರ ಸುಪುತ್ರಿಯಾದ ಇವರು ತನ್ನ ಎಂಟನೆಯ ವಯಸ್ಸಿನಿಂದ ವಿದುಷಿ ಮಾನಸಿ ಸುಧೀರ್ ಹಾಗೂ ವಿದ್ವಾನ್ ಸುಧೀರ್ ರಾವ್ ಕೊಡವೂರು ಇವರ ಬಳಿ ಭರತನಾಟ್ಯ ತರಬೇತಿ ಪಡೆಯುತ್ತಿದ್ದಾಳೆ. ಈಕೆ ವಿದ್ವತ್ ಪೂರ್ವ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಿದ್ದು, ಈ ಬಾರಿ ವಿದ್ವತ್ ಅಂತಿಮ ಪರೀಕ್ಷೆಯನ್ನು ಬರೆಯಲಿದ್ದಾಳೆ. ಸಾಲಿಗ್ರಾಮದ ಗೀತಾ ತುಂಗರ ಬಳಿ ಸಂಗೀತ ಅಭ್ಯಾಸವನ್ನು ಮಾಡಿರುತ್ತಾಳೆ.
ಬೆಂಗಳೂರು : ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ (ರಿ.) ಸಿದ್ಧನಹಳ್ಳಿ ಇದರ ವತಿಯಿಂದ ದಿನಾಂಕ 29 ಸೆಪ್ಟೆಂಬರ್ 2024ರಂದು ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ 14ನೇ ಕನ್ನಡ ಸಾಹಿತ್ಯ ಸಂಸ್ಕೃತಿ ಸಮಾವೇಶದಲ್ಲಿ ಕೊಡಮಾಡಲಿರುವ ವಿವಿಧ ದತ್ತಿ ಪ್ರಶಸ್ತಿಗಳಿಗೆ ಅರ್ಹರನ್ನು ಶಿಫಾರಸು ಮಾಡಿ ಅವರ ಫೋಟೋ ಪರಿಚಯ ಕಳುಹಿಸಲು ಕೋರಿದೆ. 1. ದೊಡ್ಡಬಳ್ಳಾಪುರದ ಶ್ರೀಮತಿ ಎನ್. ರೇಣುಕಾ ನಾಗಪ್ರಿಯ ದತ್ತಿ (ಬೆಂಗಳೂರು ಹೊರತುಪಡಿಸಿ ಕುವೆಂಪು ಸಾಹಿತ್ಯ ಪ್ರಚಾರದಲ್ಲಿ ತೊಡಗಿರುವ ಸಂಘ ಸಂಸ್ಥೆಗಳು, ಸಾಹಿತ್ಯ ರಚನೆ ಮಾಡಿದವರಿಗೆ) 2. ಶ್ರೀ ರಾಂ.ಕೆ. ಹನುಮಂತಯ್ಯ ಮತ್ತು ಹೆಬ್ಬಗೋಡಿ ಗೋಪಾಲಪ್ಪ ಪುಸ್ತಕ ದತ್ತಿ ಬಹುಮಾನ (ಕತೆ, ಕಾವ್ಯ, ಕಾದಂಬರಿ, ವಿಮರ್ಶೆ/ಪ್ರಬಂಧ, ಸಂಶೋಧನಾ ಲೇಖನಗಳಿಗೆ) 3. ಶ್ರೀಮತಿ ಎಸ್. ಗುಣಸಾಗರಿ ಸಿ. ನಾಗರಾಜ್ ದತ್ತಿ 35 ವರ್ಷದ ಒಳಗಿನ ಯುವ ಬರಹಗಾರರಿಗೆ ಕೊಡಮಾಡುವ ಪ್ರತಿಭಾ ಪುರಸ್ಕಾರ 4. ಶ್ರೀ ಕೆ. ಕೃಷ್ಣಮೂರ್ತಿ ಪೂಜಾರಿ ಪಾಳ್ಯ ಅವರ ದತ್ತಿ (ಸಾಮಾಜಿಕ ಮತ್ತು ಸಂಗೀತ ಕ್ಷೇತ್ರದ…