Subscribe to Updates
Get the latest creative news from FooBar about art, design and business.
Author: roovari
ಕಾಂತಾವರ : ಕಾಂತಾವರ ಕನ್ನಡ ಸಂಘದಲ್ಲಿ ಗಮಕಿ ಸತೀಶ್ ಕುಮಾರ್ ಕೆಮ್ಮಣ್ಣು ಅವರು ಸ್ಥಾಪಿಸಿರುವ ದತ್ತಿನಿಧಿಯ ‘ಗಮಕ ಕಲಾ ಪ್ರವಚನ’ ಪ್ರಶಸ್ತಿಗೆ ಪ್ರಸಿದ್ಧ ವಾಗ್ಮಿಗಳಾಗಿರುವ, ಗಮಕಿ ಶ್ರೀಮತಿ ಯಾಮಿನಿ ಭಟ್ ಉಡುಪಿ ಸ್ಥಾಪಿಸಿರುವ ದತ್ತಿನಿಧಿಯ ವತಿಯಿಂದ ‘ಗಮಕಕಲಾ ವಾಚನ’ ಪ್ರಶಸ್ತಿಗೆ ಗಮಕಿ ಶ್ರೀ ಸುರೇಶ್ ರಾವ್ ಅತ್ತೂರು ಮತ್ತು ಕೆ. ಶಾಮರಾಯ ಆಚಾರ್ಯ ಅವರ ದತ್ತಿನಿಧಿಯಿಂದ ನೀಡುವ ಶಿಲ್ಪಕಲಾ ಪ್ರಶಸ್ತಿಗೆ ‘ಶಿಲ್ಪಗುರು’ ಪ್ರಶಸ್ತಿ ಪುರಸ್ಕೃತ ಕಾರ್ಕಳದ ಶ್ರೀ ಲೋಹಶಿಲ್ಪಿ ಪ್ರಕಾಶ್ ಆಚಾರ್ಯ ಅವರು ಆಯ್ಕೆಯಾಗಿರುವುದಾಗಿ ತಿಳಿಸಿದೆ. ದಿನಾಂಕ 24-03-2024ರಂದು ಕಾಂತಾವರದ ‘ಕನ್ನಡ ಭವನ’ದಲ್ಲಿ ಈಗಾಗಲೇ ಘೋಷಣೆಯಾಗಿರುವ 2023ರ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಡಾ. ವಿ. ಎ. ಲಕ್ಷ್ಮಣ ಅವರಿಗೆ ನೀಡುವುದರ ಜೊತೆಗೆ ಈ ಮೂರು ಪ್ರಶಸ್ತಿಗಳನ್ನು ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರ ಮೂಲಕ ನೀಡಲಾಗುವುದೆಂದು ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆಯವರು ತಿಳಿಸಿದ್ದಾರೆ. ಪ್ರತಿ ಪ್ರಶಸ್ತಿಯೂ ತಲಾ ಹತ್ತು ಸಾವಿರದ ನಗದು, ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದೆ. ಶ್ರೀ ಮುನಿರಾಜ ರೆಂಜಾಳ ಶ್ರೀ…
ಬೆಂಗಳೂರು : ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಘಟನೆಯಾದ ರಂಗಚಂದಿರ ಟ್ರಸ್ಟ್ (ರಿ.) ಆಯೋಜಿಸಿರುವ ‘ವಿಶ್ವ ರಂಗಭೂಮಿ ದಿನಾಚರಣೆ’ಯು ದಿನಾಂಕ 27-03-2024ರಂದು ಸಂಜೆ 6.30ರಿಂದ ಬೆಂಗಳೂರಿನ ಎನ್.ಆರ್. ಕಾಲೋನಿಯ ಸಿ.ಅಶ್ವತ್ ಸಭಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವು ಕರ್ನಾಟಕ ರಾಜ್ಯ ಸಮುದಾಯದ ರಂಗ ಸಂಘಟಕರು ಹಾಗೂ ಉಪಾಧ್ಯಕ್ಷರಾದ ಶ್ರೀ ಗುಂಡಣ್ಣ ಚಿಕ್ಕಮಗಳೂರು ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಇದೇ ಸಂದರ್ಭದಲ್ಲಿ ನಾಟಕಕಾರರು ಹಾಗೂ ರಂಗ ನಿರ್ದೇಶಕರಾದ ಡಾ. ಬೇಲೂರು ರಘುನಂದನ್ ಇವರಿಗೆ ಅಭಿನಂದನೆ, ಭರತನಾಟ್ಯ ಕಲಾವಿದೆ ಕುಮಾರಿ ಚಿತ್ರಾ ರಾವ್ ಇವರಿಗೆ ರಂಗ ಗೌರವ ನಡೆಯಲಿದೆ. ರಂಗ ನಿರ್ದೇಶಕರಾದ ಶ್ರೀ ಶಶಿಧರ್ ಭಾರೀಘಾಟ್ ಇವರು ವಿಶ್ವ ರಂಗಭೂಮಿ ಸಂದೇಶ ಪ್ರಸ್ತುತ ಪಡಿಸುವರು. ಬೆಂಗಳೂರಿನ ರಂಗ ವಿಜಯ ತಂಡದವರು ರಂಗ ಗೀತೆ ಹಾಗೂ ಮೈಸೂರಿನ ನಟನ ತಂಡದವರು ಡಾ. ಶ್ರೀಪಾದ ಭಟ್ ಇವರ ನಿರ್ದೇಶನದಲ್ಲಿ ‘ಕಣಿವೆಯ ಹಾಡು’ ನಾಟಕ ಪ್ರದರ್ಶನ ನೀಡಲಿದ್ದಾರೆ.
ಮಂಗಳೂರು : ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲು ಬಾಲ ರಾಮನ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಬಿರುವೆರ್ ಕುಡ್ಲದ ವತಿಯಿಂದ ಮಂಗಳೂರಿನ ಗೋಲ್ಡ್ ಫಿಂಚ್ ಹೊಟೇಲಿನಲ್ಲಿ ದಿನಾಂಕ 03-03-2024ರಂದು ಬ್ರಹ್ಮಶಶ್ರೀ ನಾರಾಯಣಗುರು ಅವರ ಭಾವಚಿತ್ರ, ರೇಷ್ಮೆ ಪಂಚೆ ಹಾಗೂ ಶಾಲು ನೀಡುವ ಮೂಲಕ ಸಮ್ಮಾನಿಸಲಾಯಿತು. ಈ ಸಂದರ್ಭ ಮಾತನಾಡಿದ ಅವರು “ನಮ್ಮ ರಾಷ್ಟ್ರೀಯ ಅಸ್ಮಿತೆಯಾಗಿರುವ ಶ್ರೀ ರಾಮ ಮಂದಿರ ನಿರ್ಮಾಣದಲ್ಲಿ ದೇವರ ಇಚ್ಛೆಯಂತೆ ನಾನು ನಿರ್ಮಿಸಿದ ಬಾಲರಾಮನ ಮೂರ್ತಿ ಪ್ರತಿಷ್ಠಾಪನೆ ಆಗಿರುವುದು ಪುಣ್ಯವೇ ಸರಿ. ಈ ಹಿಂದೆ ಹಲವು ಮೂರ್ತಿ ನಿರ್ಮಿಸಿದ್ದರೂ ಬಾಲರಾಮನ ಪ್ರತಿಷ್ಠಾಪನೆಯ ಬಳಿಕ ದೇಶದ ಹಳ್ಳಿ ಹಳ್ಳಿಗಳಲ್ಲಿ ರಾಮಭಕ್ತರು ನನಗೆ ಆಶೀರ್ವಾದಿಸಿದ್ದಾರೆ. ಮರ್ಯಾದಾಪುರುಷನ ಮಂದಿರ ಮರು ನಿರ್ಮಾಣವಾಗಿದ್ದು, ದೇಶವು ರಾಮ ರಾಜ್ಯವಾಗಿ ರೂಪುಗೊಳ್ಳಲಿ. ‘ಬಿರುವೆರ್ ಕುಡ್ಲ’ ಸಂಘಟನೆಯ ಬಗ್ಗೆ ನನಗೆ ಮಾಹಿತಿ ಸಿಕ್ಕಾಗ ಯುವ ಸಮೂಹವು ಒಟ್ಟುಸೇರಿ ಸಮಾಜದ ಸೇವೆಗೆ ಇಳಿದಿರುವುದು ನಿಜಕ್ಕೂ ಶ್ಲಾಘನೀಯ. ಎಂದರು. ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಲ್ಲಾಳ್…
ಮಡಿಕೇರಿ : ಕೊಡವ ಮಕ್ಕಡ ಕೂಟದ 87ನೇ ಪುಸ್ತಕ ಹಾಗೂ ಸಾಹಿತಿ ಹಂಚೆಟ್ಟರ ಫ್ಯಾನ್ಸಿ ಮುತ್ತಣ್ಣ ಅವರು ರಚಿಸಿರುವ 7ನೇ ಕೊಡವ ಪುಸ್ತಕ ‘ಕೂಪದಿ’ ಇದರ ಲೋಕಾರ್ಪಣಾ ಸಮಾರಂಭವು ದಿನಾಂಕ 20-03-2024ರ ಬುಧವಾರದಂದು ಮಡಿಕೇರಿಯ ಪತ್ರಿಕಾ ಭವನದಲ್ಲಿ ನಡೆಯಿತು. ಪುಸ್ತಕ ಲೋಕಾರ್ಪಣೆಗೊಳಿಸಿ ಮಾತನಾಡಿದ 2024 ಹಾಕಿ ನಮ್ಮೆಯ ಅಧ್ಯಕ್ಷ ಕುಂಡ್ಕೋಳಂಡ ರಮೇಶ್ ಮುದ್ದಯ್ಯ “ಸಾಹಿತ್ಯ ಕೃಷಿ ಉಳಿದೆಲ್ಲ ಕೃಷಿಗಿಂತ ಕಠಿಣವಾದುದು. ಬೇರೆ ಕೃಷಿಯಲ್ಲಿ ತಪ್ಪಾದರೂ ಸರಿ ಮಾಡಿಕೊಳ್ಳುವ ಅವಕಾಶ ಇದೆ. ಆದರೆ ಸಾಹಿತ್ಯ ಕೃಷಿಯಲ್ಲಿ ತಪ್ಪಾಗದಂತೆ ಬರೆಯಬೇಕಿದೆ. ಅದೊಂದು ಬಗೆಯ ತಪಸ್ಸು ಇದ್ದಂತೆ.” ಎಂದು ಹೇಳಿದರು. ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಮಾತನಾಡಿ “ಕೊಡಗಿನಲ್ಲಿ ಸಂಶೋಧನಾ ಕೃತಿಗಳು ರಚನೆಯಾಗಬೇಕಿದೆ. ಈ ಕುರಿತು ಲೇಖಕರು ಗಮನ ಹರಿಸಬೇಕು. ಕೊಡವ ಭಾಷೆಯಲ್ಲಿ ಪುಸ್ತಕ ಬರೆಯಲು ಯುವಪೀಳಿಗೆ ಮುಂದಾಗಬೇಕು.ವಿಶೇಷವಾಗಿ ಸಂಶೋಧನಾ ಕೃತಿಗಳು ಹೆಚ್ಚು ಹೆಚ್ಚು ಹೊರಬೇಕಾದ ಅನಿವಾರ್ಯತೆ ಇದೆ. ಕೊಡಗಿನಲ್ಲಿ ಸಂಶೋಧನೆಗೆ ವಿಫುಲವಾದ ಅವಕಾಶವೂ ಇದೆ. ಇವುಗಳನ್ನು ಅರಿತು ಯುವಪೀಳಿಗೆ ಸಂಶೋಧನೆಗೆ…
ಮಂಗಳೂರು : ನಾದ ನೂಪುರ ಯಕ್ಷೋತ್ಥಾನ ಟ್ರಸ್ಟ್ ವಂಡಾರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಾರಿಂಜದ ಯಕ್ಷಾವಾಸ್ಯಮ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳುಪೀಠ, ಮಂಗಳೂರು ವಿಶ್ವವಿದ್ಯಾನಿಲಯ, ತುಳು ಸ್ನಾತಕೋತ್ತರ ವಿಭಾಗ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ಆಶ್ರಯದಲ್ಲಿ ಇಲ್ಲಿನ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ದಿನಾಂಕ 16-03-2024ರಂದು ರಾಜ್ಯ ಮಟ್ಟದ ಮಹಿಳಾ ಕಲಾವಿದೆಯರ ಸಾಧನೆಯ ಸಂಭ್ರಮದ ಸಮ್ಮಿಲನ ‘ಯಕ್ಷ ಸುಮತಿ’ ಎಂಬ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟನೆಗೊಳಿಸಿದ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಮಾತನಾಡಿ “ಭರತನಾಟ್ಯ ಮತ್ತು ಯಕ್ಷಗಾನದಂತಹ ಕಲೆಗಳು ಜೀವನಕ್ಕೊಂದು ಶಿಸ್ತು, ತಾಳ್ಮೆಯನ್ನು ಕಲಿಸುತ್ತವೆ. ಯಕ್ಷಗಾನ ಮತ್ತು ಭರತನಾಟ್ಯ ಕಲೆಗಳು ಕರಾವಳಿ ಸಂಸ್ಕೃತಿಯ ಎರಡು ಕಣ್ಣುಗಳಿದ್ದಂತೆ. ಇದನ್ನು ಉಳಿಸಿ ಬೆಳೆಸಿ, ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ಒಂದು ಕಲೆಯು ಸ್ವಯಂ ನಿಯಂತ್ರಣದ ಮೂಲಕ ವ್ಯಕ್ತಿತ್ವ ರೂಪಿಸಿಕೊಳ್ಳುವ ಪಾಠ ಕಲಿಸುತ್ತದೆ. ಹಿಂದಿನ ಯಕ್ಷಗಾನ ತಂಡಗಳು ಬಹಳ ಶ್ರಮಪಟ್ಟು ಕಲೆಯೊಂದಿಗಿನ ಭಾವನಾತ್ಮಕ ಸಂಬಂಧದಿಂದಾಗಿ ದೊಡ್ಡ…
ಮಡಿಕೇರಿ : ಬಾಳೆಲೆಯ ವಿಜಯಲಕ್ಷ್ಮೀ ಸಂಯುಕ್ತ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಬಾಳೆಲೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬಾಳೆಲೆ ಸೆಂಟರ್ ಎಜ್ಯುಕೇಶನ್ ಸೊಸೈಟಿ ಇವರ ಸಂಯುಕ್ತ ಆಶ್ರಯದಲ್ಲಿ ದಿ. ಬಿ.ಎಸ್. ಗೋಪಾಲಕೃಷ್ಣ ದತ್ತಿನಿಧಿ ಮುಕ್ತ ಕಥಾ ಸ್ಪರ್ಧೆಯ ಬಹುಮಾನ ವಿತರಣಾ ಸಭೆಯು ದಿನಾಂಕ 19-03-2024ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಕಥಾ ರಚನಾ ಕೌಶಲ್ಯದ ಕುರಿತು ಮಾತನಾಡಿದ ಪತ್ರಕರ್ತೆ ಶ್ರೀಮತಿ ಉಷಾ ಪ್ರೀತಮ್ “ಕಥೆಯ ರಚನೆಯ ಪ್ರಾರಂಭ ನಮ್ಮ ಮನೆಯಲ್ಲಿ ತಾಯಿ ಅಥವಾ ಅಜ್ಜಿ ಅವರು ಹೇಳುವ ಕಥೆಗಳಿಂದ ಪ್ರಾರಂಭವಾಗುತ್ತದೆ. ಅವರು ಹೇಳಿದ ಕಥೆಗಳನ್ನು ನೆನಪಿಸಿಕೊಂಡು ಅವುಗಳನ್ನು ಬರಹ ರೂಪಕ್ಕೆ ಇಳಿಸಿದರೆ, ಅವು ಉತ್ತಮವಾದ ಕತೆಗಳಾಗುತ್ತದೆ. ಕಥೆ ಸರಳ ಭಾಷೆಯಲ್ಲಿ ಇರಬೇಕು ಆಗ ಅದು ಎಲ್ಲರ ಮನಸ್ಸನ್ನು ತಲುಪುತ್ತದೆ” ಎಂದರು. ಕನ್ನಡದ ಹಲವಾರು ಕಥೆಗಾರರ ಉದಾಹರಣೆಗಳನ್ನು ನೀಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ…
ಪುತ್ತೂರು : ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇವರ ವತಿಯಿಂದ ಬರಿಮಾರು ಶ್ರೀ ಮಹಾಮಾಯಿ ದೇವಳದ ಜಾತ್ರೋತ್ಸವದ ಅಂಗವಾಗಿ ದಿನಾಂಕ 17-03-2024ರಂದು ಹಲಸಿನ ಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ ‘ಭೀಷ್ಮ ಪ್ರತಿಜ್ಞೆ’ ಎಂಬ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಲಕ್ಷ್ಮೀಶ ಬೇಂಗ್ರೋಡಿ, ಆನಂದ್ ಸವಣೂರು ಹಾಗೂ ಚೆಂಡೆ ಮದ್ದಳೆಗಳಲ್ಲಿ ಪುಂಡಿಕಾಯಿ ರಾಜೇಂದ್ರ ಪ್ರಸಾದ್ ಮತ್ತು ಮುರಳಿಧರ ಕಲ್ಲೂರಾಯ ಸಹಕರಿಸಿದರು. ಮುಮ್ಮೇಳದಲ್ಲಿ ಶುಭಾ ಗಣೇಶ್ (ಶಂತನು), ಜಯಂತಿ ಹೆಬ್ಬಾರ್ (ದೇವವ್ರತ), ಪ್ರೇಮಲತಾ ರಾವ್ (ಮಂತ್ರಿ), ಕಿಶೋರ್ ದುಗ್ಗಪ್ಪ ನಡುಗಲ್ಲು (ದಾಶರಾಜ) ಮತ್ತು ಮನೋರಮಾ ಜಿ. ಭಟ್ (ಸತ್ಯವತಿ) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು. ದೇವಳದ ಆಡಳಿತ ಮೊಕ್ತೇಸರರಾದ ರಾಕೇಶ್ ಪ್ರಭು ದಂಪತಿಗಳು ಕಲಾವಿದರಿಗೆ ಶ್ರೀದೇವರ ಪ್ರಸಾದವನ್ನಿತ್ತು ಗೌರವಿಸಿದರು.
ಕುಂದಾಪುರ : ಕುಂದಾಪುರ ರಂಗನಹಿತ್ಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆಯ ಯಾನದ 9ನೇ ಕಾರ್ಯಕ್ರಮ ಶ್ವೇತ ಸಂಜೆಯಲ್ಲಿ ‘ಯಕ್ಷಗಾನ ವೈಭವ’ ಕಾರ್ಯಕ್ರಮವು ದಿನಾಂಕ 17-03-2024ರಂದು ಜರಗಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ರಾಜೇಶ್ ಕಾವೇರಿ ಕುಂದಾಪುರ ಇವರು ಪ್ರಾಯೋಜಕರಾದ ಗೋಪಾಲ ಪೂಜಾರಿಯವರಿಗೆ ಅಭಿನಂದನೆಯನ್ನು ಸಲ್ಲಿಸಿ ಮಾತನಾಡಿ “ಸಂಸ್ಥೆಯ ಕಲಾ ಚಟುವಟಿಕೆಯು ನಿರಂತರವಾದಾಗ ಪ್ರೋತ್ಸಾಹಿಸಿ ಸಂಭ್ರಮಿಸಬೇಕಾದದ್ದು ಕಲಾಭಿಮಾನಿಗಳು. ಯಶಸ್ವಿ ಕಲಾವೃಂದದ ಪ್ರದರ್ಶನಗಳು ಕೇವಲ ಸ್ಥಳೀಯವಾಗಿರದೇ ತಾಲೂಕು, ಜಿಲ್ಲೆ, ರಾಜ್ಯ ಹಾಗೂ ಹೊರರಾಜ್ಯಗಳಲ್ಲೂ ಪ್ರದರ್ಶನಕ್ಕೆ ಅವಕಾಶ ದೊರೆತಾಗ ಕಲಿತ ಚಿಣ್ಣರ ಕಲಾ ಪ್ರತಿಭೆಗಳು ಇನ್ನಷ್ಟು ಬೆಳೆಯುವುದಕ್ಕೆ ಸಾಧ್ಯ. ಈ ನಿಟ್ಟಿನಲ್ಲಿ ಪ್ರಜ್ಞಾವಂತ ಕಲಾಭಿಮಾನಿಗಳ ಪ್ರೋತ್ಸಾಹ ಸಂಸ್ಥೆಯ ಶ್ವೇತಯಾನಕ್ಕೆ 108 ಕಾರ್ಯಕ್ರಮಗಳು ದೊರೆಯಬೇಕು” ಎಂದು ಹೇಳಿದರು. “ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಬೇಕಾದದ್ದು ಸಮಾಜದ ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಈವರೆಗೆ ಅದೆಷ್ಟೋ ಚಿಣ್ಣರ ಕಾರ್ಯಕ್ರಮಗಳು ರಾಜ್ಯದಾದ್ಯಂತ ಪ್ರದರ್ಶಿಸಲ್ಪಟ್ಟಿದ್ದವು. ಎಲ್ಲಾ ಕಾರ್ಯಕ್ರಮಗಳೂ ಪ್ರೇಕ್ಷಕರನ್ನು ಗೆದ್ದು ನಿಂತ ಕಾರ್ಯಕ್ರಮಗಳಾಗಿದ್ದವು. ಯಶಸ್ವಿ ಕಲಾವೃಂದದ ಚಿಣ್ಣರ ಕಾರ್ಯಕ್ರಮಗಳು ಯಶಸ್ಸಿನ ಕಾರ್ಯಕ್ರಮಗಳು” ಎಂದು ಅಭಿನಂದನೆ…
ಬಂಟ್ವಾಳ : ಮಂಗಳೂರು ವಿಶ್ವವಿದ್ಯಾಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆಯುತ್ತಿರುವ ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದಲ್ಲಿ “ಯುವಜನತೆ ಮತ್ತು ರಾಷ್ಟ್ರ : ಸ್ವಾಮಿ ವಿವೇಕಾನಂದರ ರಾಷ್ಟ್ರೀಯ ಸಂದೇಶಗಳ ಮರುಶೋಧನೆ” ಎಂಬ ವಿಷಯದ ಕುರಿತು ದಿನಾಂಕ 12-03-2024ರಂದು ಮೂವತ್ತಮೂರನೇ ಉಪನ್ಯಾಸ ನಡೆಯಿತು. ಈ ಕಾರ್ಯಕ್ರಮವು ಬೆಂಜನಪದವು ಇಲ್ಲಿರುವ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಸಂಸ್ಥೆಯ ಪ್ರೊ. ನಂದನ್ ಪ್ರಭು “ರಾಷ್ಟ್ರಕವಿ ರವೀಂದ್ರನಾಥ ಠಾಗೋರ್ ನುಡಿದಂತೆ, ಭಾರತವನ್ನು ತಿಳಿಯ ಬಯಸುವ ಯುವಕರು ಮೊಟ್ಟ ಮೊದಲು ಸ್ವಾಮಿ ವಿವೇಕಾನಂದರನ್ನು ಓದಬೇಕು. ಸ್ವಾಮೀಜಿ ಸಕಾರಾತ್ಮಕತೆಗಳ ಅಪರಿಮಿತ ಗಣಿ. ತ್ಯಾಗ ಮತ್ತು ಸೇವೆ ಈ ದೇಶದ ಅವಳಿ ಆದರ್ಶಗಳು. ಯುವಕರು ಕೇವಲ ಉದ್ಯೋಗಕ್ಕಾಗಿ ಸೀಮಿತಗೊಳ್ಳದೆ, ಸಾಮಾಜಿಕ ಸೇವೆಗಳಲ್ಲಿಯೂ ಭಾಗಿಯಾಗಬೇಕು. ‘ನಾನು ಸುಧಾರಣೆಯಲ್ಲಿ ನಂಬುವುದಿಲ್ಲ. ಬೆಳವಣಿಗೆಯಲ್ಲಿ ನಂಬುತ್ತೇನೆ. ನಾನು ದೇವರ ಸ್ಥಾನದಲ್ಲಿ ನಿಂತು ಸಮಾಜಕ್ಕೆ ನೀನು ಹೀಗೆ ಚಲಿಸಬೇಕು, ಹಾಗಲ್ಲ ಎಂದು ಕಟ್ಟಪ್ಪಣೆ ಮಾಡಲಾರೆ.…
ಕಾರ್ಕಳ : ಕಾರ್ಕಳ ಪೆರ್ವಾಜೆಯ ಅಮಿತ್ ಎಸ್. ಪೈ ಸ್ಮಾರಕ ಸ್ವಾಮಿ ವಿವೇಕಾನಂದ ಧ್ಯಾನ ಯೋಗ ಮತ್ತು ಸೇವಾಮಂದಿರದಲ್ಲಿ ಹೊಸಸಂಜೆ ಬಳಗದ ಸಹಯೋಗದಲ್ಲಿ ಆಯೋಜಿಸಲಾದ ‘ಸಾಧಕರಿಗೆ ಸನ್ಮಾನ’ ಕಾರ್ಯಕ್ರಮವು ದಿನಾಂಕ 17-03-2024 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ನಿವೃತ್ತ ಮುಖ್ಯ ಶಿಕ್ಷಕಿ ಹಾಗೂ ಲೇಖಕಿಯಾದ ಸಾವಿತ್ರಿ ಮನೋಹರ್ ಮಾತನಾಡಿ “ಮಹಿಳಾ ಸಾಹಿತ್ಯ ಅಂದರೆ ಅಡುಗೆಮನೆ ಸಾಹಿತ್ಯ ಎಂದು ಹೀಗಳೆಯದಿರಿ .ಇಂದು ಸಾಹಿತ್ಯದ ಎಲ್ಲ ಪ್ರಕಾರಗಳಲ್ಲೂ ಮಹಿಳೆಯರು ಜನಸಾಮಾನ್ಯರಿಂದ ವಿದ್ವಾಂಸರವರೆಗೆ ಮೆಚ್ಚುಗೆ ಗಳಿಸುವಂತಹ ಕೃತಿಗಳನ್ನು ರಚಿಸಿ ಯಶಸ್ವಿಯಾಗಿದ್ದಾರೆ .ಆದ ಕಾರಣ ಸಾಹಿತ್ಯದಲ್ಲಿ ಸ್ತ್ರೀ ಮತ್ತು ಪುರುಷ ಸಾಹಿತ್ಯ ಎಂಬ ಭೇದ ಸರ್ವಥಾ ಸಲ್ಲದು. ಹಾಸ್ಯ ಅಂದರೆ ಸಂತೋಷ ಕೊಡುವಂತದ್ದು .ಹಾಸ್ಯದಲ್ಲಿ ಲಘುಹಾಸ್ಯ , ತಿಳಿಹಾಸ್ಯ , ಬಿಗುಹಾಸ್ಯ ಹೀಗೆ ನಾನಾ ಪ್ರಕಾರಗಳಿವೆ . ಇನ್ನೊಬ್ಬರ ಮನಸ್ಸನ್ನು ನೋಯಿಸದೆ ನಕ್ಕು ಹಗುರಾಗುವ ಹಾಸ್ಯ ಸಾಹಿತ್ಯ ಸ್ರಷ್ಟಿ ಪ್ರಸ್ತುತ ತೀರಾ ಅತ್ಯಗತ್ಯವಾಗಿದೆ .ನಗು ಮನುಷ್ಯನ ಸಹಜಸ್ವಭಾವವಾಗಬೇಕು. ಆದಕಾರಣ ಶಿಸ್ತಿನ ಪರಿಧಿಯೊಳಗೆ ನಗುವನ್ನು ಬಂಧಿಸಿಡುವ…