Author: roovari

ಬೆಂಗಳೂರು : ವೀರಲೋಕ ಇದರ ಆಶ್ರಯದಲ್ಲಿ 84ನೇ ‘ಬಿಂಬ ಬಿಂಬನ’ ಕೃತಿ ಲೋಕಾರ್ಪಣೆ ಸಮಾರಂಭವು ದಿನಾಂಕ 24-03-2024ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ ಮಂದಿರದಲ್ಲಿ ನಡೆಯಲಿದೆ. ಮಾಜಿ ಸಚಿವರು ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟಿ, ನಿರ್ಮಾಪಕಿ ಡಾ. ಜಯಮಾಲ ಇವರು ಕೃತಿ ಬಿಡುಗಡೆ ಮಾಡಲಿದ್ದು, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕರಾದ ಪಿ. ಶೇಷಾದ್ರಿ ಇವರು ಈ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಿನೆಮಾ ಲೇಖಕರಾದ ಶ್ರೀ ಕೆ. ಪುಟ್ಟಸ್ವಾಮಿ ಮತ್ತು ಖ್ಯಾತ ಪತ್ರಕರ್ತರು ಮತ್ತು ಲೇಖಕರಾದ ಶ್ರೀ ರಘುನಾಥ ಚ.ಹ. ಇವರು ಕೃತಿ ಕುರಿತು ಮಾತನಾಡಲಿದ್ದಾರೆ. ಪದ್ಮಶ್ರೀ ಪುರಸ್ಕೃತ ಮತ್ತು ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕರಾದ ಡಾ.ಗಿರೀಶ್ ಕಾಸರವಳ್ಳಿ ಮತ್ತು ರಾಷ್ಟ್ರಪ್ರಶಸ್ತಿ ಪುರಸ್ಕೃತ ಚಿತ್ರ ಸಾಹಿತಿ ಹಾಗೂ ಕೇಂದ್ರ ಮತ್ತು ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಶ್ರೀ ಗೋಪಾಲ ಕೃಷ್ಣ ಪೈ ಇವರ ಗೌರವ ಉಪಸ್ಥಿತಿಯಲ್ಲಿ ರಾಷ್ಟ್ರಪ್ರಶಸ್ತಿ ಪುರಸ್ಕೃತ…

Read More

ಉಡುಪಿ : ಯತಿಶ್ರೇಷ್ಠರಾದ ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದರ ಹೆಸರಿನಲ್ಲಿ ಅವರ ಕರಕಮಲ ಸಂಜಾತ ಪಲಿಮಾರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಅನುಗ್ರಹ ಪೂರ್ವಕವಾಗಿ ಕೊಡಮಾಡುವ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ ಪುರಸ್ಕಾರ’ಕ್ಕೆ ಬಡಗುತಿಟ್ಟಿನ ಶ್ರೇಷ್ಠ ಕಲಾವಿದರಾದ ಶ್ರೀ ಕೊಂಡದಕುಳಿ ರಾಮಚಂದ್ರ ಹೆಗಡೆ ಆಯ್ಕೆಯಾಗಿದ್ದಾರೆ. ಬಡಗುತಿಟ್ಟಿನ ಪರಂಪರೆಯ ಪ್ರಾತಿನಿಧಿಕ ವೇಷಧಾರಿಯಾಗಿರುವ ಇವರು ಗುಂಡುಬಾಳ, ಪಂಚಲಿಂಗ, ಸಾಲಿಗ್ರಾಮ ಮೇಳಗಳಲ್ಲಿ ಕಲಾಸೇವೆಗೈದಿರುತ್ತಾರೆ. ‘ಪೂರ್ಣಚಂದ್ರ ಯಕ್ಷಕಲಾ ಪ್ರತಿಷ್ಠಾನ’ಎಂಬ ಸ್ವಂತ ಮೇಳ ಸ್ಥಾಪಿಸಿ, ಕಾಲಮಿತಿಯ ಪ್ರದರ್ಶನಗಳನ್ನು ನೀಡುತ್ತಾ ಬಂದಿರುತ್ತಾರೆ. ನಾಲ್ಕೂವರೆ ದಶಕಗಳ ಕಲಾ ಜೀವನದಲ್ಲಿ ಹಲವು ಪೌರಾಣಿಕ ಪಾತ್ರಗಳನ್ನು ಅನನ್ಯವಾಗಿ ಚಿತ್ರಿಸಿ, ಯಕ್ಷಗಾನ ಕಲಾಭಿಮಾನಿಗಳ ಪ್ರೀತ್ಯಾದರಕ್ಕೆ ಪಾತ್ರರಾಗಿರುತ್ತಾರೆ. ದಿನಾಂಕ 23-04-2024ರ ಮಂಗಳವಾರ ಪೂರ್ವಾಹ್ನ 10.30 ಗಂಟೆಗೆ ಪಲಿಮಾರಿನಲ್ಲಿ ಜರಗುವ ಶ್ರೀ ವಿದ್ಯಾಮಾನ್ಯತೀರ್ಥರ ಆರಾಧನಾ ಮಹೋತ್ಸವದ ಸಂದರ್ಭದಲ್ಲಿ ಈ ಪುರಸ್ಕಾರವನ್ನು ಪ್ರಶಸ್ತಿ ಫಲಕ ಮತ್ತು ರೂ. 50,000 ನಿಧಿಯೊಂದಿಗೆ ಪ್ರದಾನ ಮಾಡಲಾಗುವುದು.

Read More

ಮಂಗಳೂರು : ನಟ, ನಿರ್ದೇಶಕ, ಸಂಘಟಕ ವೇಣುಗೋಪಾಲ ಟಿ. ಕೋಟ್ಯಾನ್ (ವಿ.ಜಿ.ಪಾಲ್) ಅನಾರೋಗ್ಯದಿಂದ ದಿನಾಂಕ 20-03-2024ರ ಬುಧವಾರ ರಾತ್ರಿ ನಿಧನರಾದರು. ತುಳು ರಂಗಭೂಮಿಯಲ್ಲಿ ಐದು ದಶಕಗಳಿಗೂ ಹೆಚ್ಚು ಸೇವೆ ಸಲ್ಲಿಸಿದ್ದ ಅವರು ಹತ್ತಾರು ನಾಟಕಗಳಲ್ಲಿ ಹಾಗೂ ತುಳು ಮತ್ತು ಕನ್ನಡ ಭಾಷೆಯ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ‘ಕಲ್ಜಿಗದ ಕುರುಕ್ಷೇತ್ರ’ ತುಳು ನಾಟಕದ ಮೂಲಕ 1961ರಲ್ಲಿ ರಂಗಪ್ರವೇಶ ಮಾಡಿದ ವಿ.ಜಿ.ಪಾಲ್ ಹಾಸ್ಯ ಪಾತ್ರಕ್ಕೊಂದು ಮಾದರಿಯಾಗಿದ್ದರು. ಚಲನಚಿತ್ರಗಳು, ಕಿರುತೆರೆ, ಧ್ವನಿ ಸುರುಳಿಗಳಿಗೆ ಕಂಠದಾನ ಮಾಡಿದ್ದರು. ತುಳು ನಾಟಕಗಳನ್ನು ಪ್ರಥಮ ಬಾರಿಗೆ ಕೊಲ್ಲಿ ರಾಷ್ಟ್ರದಲ್ಲಿ ಪ್ರದರ್ಶನ ನೀಡಿದ ಖ್ಯಾತಿ ಇವರದ್ದು. ಕನ್ನಡದ ‘ಜೀವನ್ಮುಖಿ’, ‘ಮಹಾನದಿ’ ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಬಯ್ಯಮಲ್ಲಿಗೆ’, ‘ಭಾಗ್ಯವಂತೆದಿ’, ‘ಸತ್ಯ ಓಲುಂಡು’, ‘ಬಂಗಾರ್ ಪಟ್ಲೇರ್’, ‘ಮಾರಿಬಲೆ’, ‘ತುಡರ್’ ಸೇರಿ ಸುಮಾರು 2,000 ಸಾಮಾಜಿಕ, ಐತಿಹಾಸಿಕ ಹಾಗೂ ಪೌರಾಣಿಕ ನಾಟಕ ಹಾಗೂ ಸಿನೆಮಾಗಳಲ್ಲಿ ಅಭಿನಯಿಸಿದ ಹಿರಿಮೆ ಇವರದ್ದು. ಐ. ಟಿ. ಐ. ವಿದ್ಯಾಭ್ಯಾಸ ಪಡೆದಿದ್ದ ಅವರು ಮೀನುಗಾರಿಕಾ ಅಭಿವೃದ್ಧಿ ನಿಗಮದಲ್ಲಿ ಹಿರಿಯ ಸಹಾಯಕರಾಗಿ ನಿವೃತ್ತರಾಗಿದ್ದರು. ‘ಕರ್ನಾಟಕ…

Read More

ಪುತ್ತೂರು : ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇದರ ದ್ವಿತೀಯ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಏಪ್ರಿಲ್ ತಿಂಗಳಲ್ಲಿ ನಡೆಯುವ ಕವಿಗೋಷ್ಠಿಗೆ ದಿವ್ಯಾಂಗ ಚೇತನ ಮಕ್ಕಳಿಗಾಗಿ ಕವಿಗೋಷ್ಠಿಗೆ ಆಹ್ವಾನ ನೀಡಲಾಗಿದೆ. ಈ ಗೋಷ್ಠಿ ಕೇವಲ ದಿವ್ಯಾಂಗ ಚೇತನದವರಿಗಾಗಿ ಆಯೋಜಿಸಲಾಗಿದ್ದು, ಮೊದಲು ನೋಂದಾಯಿಸಿದ 25 ಮಂದಿಗೆ ಮಾತ್ರ ಅವಕಾಶ. ಅಲ್ಲದೇ ಕವನ ವಾಚನಕ್ಕೆ ಮಾತ್ರ ಅವಕಾಶ. ಬೇರೆ ಯಾವುದೇ ನೃತ್ಯ, ಹಾಡುಗಳಿಗೆ ಅವಕಾಶವಿಲ್ಲ. ಭಾಗವಹಿಸುವ ದಿವ್ಯಾಂಗ ಚೇತನ ವಿದ್ಯಾರ್ಥಿಗಳಿಗೆ ಅಂದು ಬಿಡುಗಡೆಯಾಗುವ ಕವನ ಸಂಕಲನದಿಂದ ಯಾವುದೇ ಕವನ ವಾಚಿಸಬಹುದು. ಭಾಗವಹಿಸಿದವರನ್ನು ಸಾಕ್ಷಿ ಪ್ರಮಾಣ ಪತ್ರ, ಪುಸ್ತಕ ಕಾಣಿಕೆಯೊಂದಿಗೆ ಗಣ್ಯರು ಗೌರವಿಸಲಿದ್ದಾರೆ. ಭಾಗವಹಿಸುವವರು ದಿನಾಂಕ 07-04-2024ರ ಒಳಗಾಗಿ ಸುಪ್ರೀತಾ ಚರಣ್ ಪಾಲಪ್ಪೆ ಇವರ ವಾಟ್ಸಪ್ಪ್ ಸಂಖ್ಯೆ 8971271027 ಮಾಹಿತಿ ನೀಡುವಂತೆ ಚಿಗುರೆಲೆ ಸಾಹಿತ್ಯ ಬಳಗದ ಸ್ಥಾಪಕಾಧ್ಯಕ್ಷರು ಚಂದ್ರಮೌಳಿ ಕಡಂದೇಲು ತಿಳಿಸಿದ್ದಾರೆ.

Read More

ಮಂಗಳೂರು : ಮಂಗಳೂರಿನ ಶಕ್ತಿನಗರದಲ್ಲಿ ಕಾರ್ಯಾಚರಿಸುತ್ತಿರುವ ಸಾನಿಧ್ಯ ಭಿನ್ನ ಸಾಮರ್ಥ್ಯದ ಮಕ್ಕಳ ವಸತಿಯುತ ಶಾಲೆ ಮತ್ತು ತರಬೇತಿ ಸಂಸ್ಥೆ ಇದರ ಮುಖಾಂತರ ‘ಸಾನಿಧ್ಯ ಉತ್ಸವ’ ಮಂಗಳೂರಿನ ಕದ್ರಿ ಉದ್ಯಾನದಲ್ಲಿ ದಿನಾಂಕ 10-03-2024ರಂದು ನಡೆಯಿತು. ಉದ್ಘಾಟನೆಯನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕರಾದ ಶ್ರೀ ವೇದಮೂರ್ತಿ ಕಮಲಾದೇವಿ ಪ್ರಸಾದ ಅಸ್ತ್ರಣ್ಣರವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಮುಂಬೈಯ ಚಾರ್ಟರ್ಡ್ ಅಕೌಂಟೆಂಟ್ ಶ್ರೀ ಸುಧೀರ್ ಶೆಟ್ಟಿಯವರು, ಅದೇ ರೀತಿ ಮಂಡ್ಯ ಜಿಲ್ಲೆಯ ಆಶಾ ಸದನ ವಿಶೇಷ ಶಾಲೆಯ ಮುಖ್ಯಸ್ಥರಾದ ವಂದನೀಯ ಗುರುಗಳಾದ ಜಾಯ್ಸನ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಬೆಂಗಳೂರಿನ ಅಕ್ಕರೆಯ ಬೆಳಕು ಶಾಲೆಯ ಸ್ಥಾಪಕರಾದ ಕರೆಪ್ಪ ಬಿ.ಎಚ್. ಹಾಗೂ ಮಂಗಳೂರು ಕಿನ್ನಿಗೋಳಿಯ ಸೈಂಟ್ ಮೇರಿಸ್ ಸ್ಪೆಷಲ್ ಸ್ಕೂಲಿನ ಮುಖ್ಯಸ್ಥೆಯಾದ ಶ್ರೀಮತಿ ರೇಷ್ಮಾ ಮರಿಯ ಮಾರ್ಟಿಸ್ ಇವರನ್ನು ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದ ಬಳಿಕ ವಿಶೇಷ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಸಂಪನ್ನಗೊಂಡಿತು. ಕದ್ರಿ ಹವ್ಯಾಸಿ ಬಳಗದ ಮುಖ್ಯಸ್ಥರಾದ ಶರತ್ ಕುಮಾರ್ ಇವರ ನೇತೃತ್ವದಲ್ಲಿ ವಿಶೇಷ ಮಕ್ಕಳು ಪ್ರದರ್ಶಿಸಿದ…

Read More

ಬೆಂಗಳೂರು : 2024ನೇ ಕನ್ನಡ ಸಾಹಿತ್ಯ ಪರಿಷತ್ತಿನ ‘ನಾಗಡಿಕೆರೆ-ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ’ ಪ್ರಶಸ್ತಿಗೆ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮಹತ್ವದ ಸೇವೆ ಸಲ್ಲಿಸುತ್ತಿರುವ ‘ಉದಯ ಕಾಲ’ ಪತ್ರಿಕೆಯ ಸಂಪಾದಕರಾದ ಕೆ.ಎನ್. ಪುಟ್ಟಲಿಂಗಯ್ಯ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯು ದತ್ತಿಯ ನಿಯಮಗಳನ್ನು ಪರಿಶೀಲಿಸಿ ಈ ಆಯ್ಕೆಯನ್ನು ಮಾಡಿದೆ. ಪ್ರಶಸ್ತಿ ಪುರಸ್ಕೃತರಾದ ಕೆ.ಎನ್. ಪುಟ್ಟಲಿಂಗಯ್ಯ ಗೌಡರು ಮೈಸೂರು ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೊತ್ತರ ಪದವಿಯನ್ನು ಪಡೆದುಕೊಂಡಿದ್ದು, ವಿಜಯ ಕರ್ನಾಟಕ, ಸಂಯುಕ್ತ ಕರ್ನಾಟಕ, ಉದಯ ಟಿ.ವಿ, ಟೈಮ್ಸ್ ಆಫ್ ಇಂಡಿಯಾ (ಕನ್ನಡ) ಸೇರಿದಂತೆ ಕಾಲು ಶತಮಾನಕ್ಕೂ ಹೆಚ್ಚು ಕಾಲ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದು, ಪತ್ರಿಕೋದ್ಯಮದ ಉನ್ನತ ಆಶಯಗಳನ್ನು ಸದಾ ಎತ್ತಿ ಹಿಡಿಯುತ್ತಾ ಬಂದಿದ್ದಾರೆ. ಪ್ರಸ್ತುತ ‘ಉದಯಕಾಲ’ ಪತ್ರಿಕೆಯ ಸಂಪಾದಕ ಮತ್ತು ಪ್ರಕಾಶಕರಾಗಿ ನಿರ್ಭೀತ ಪತ್ರಿಕೋದ್ಯಮವನ್ನು ನಡೆಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಜನಿಸಿದ ದತ್ತಿ ದಾನಿಗಳಾದ ಕಿಟ್ಟಪ್ಪ ಗೌಡರು ಪ್ರೌಢಶಾಲೆಯಲ್ಲಿ ಓದುವಾಗಲೇ ‘ಭಾರತ…

Read More

ಕಾರ್ಕಳ : ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನಲ್ಲಿ ಉಡುಪಿಯ ಕನಕದಾಸ ಅಧ್ಯಯನ ಸಂಶೋಧನಾ ಪೀಠ, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಮಣಿಪಾಲದ ಅಕಾಡೆಮಿ ಆಫ್ ಹೈಯರ್ ಎಜುಕೇಶನ್, ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್ ಹಾಗೂ ಶ್ರೀ ಭುವನೇಂದ್ರ ಕಾಲೇಜು ಆಶ್ರಯದಲ್ಲಿ ‘ರಾಷ್ಟ್ರೀಯ ಚಿಂತನೆ – ಕನಕ ವೈಚಾರಿಕತೆಯ ಸೊಬಗು’ ಎಂಬ ವಿಚಾರದ ಬಗ್ಗೆ ದಿನಾಂಕ 16-03-2024ರಂದು ರಾಷ್ಟ್ರೀಯ ವಿಚಾರ ಸಂಕಿರಣ ಜರುಗಿತು. ಈ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ, ದಿಕ್ಸೂಚಿ ಮಾತುಗಳನ್ನಾಡಿದ ನಾಡಿನ ಹಿರಿಯ ವಿದ್ವಾಂಸರೂ, ವಿಶ್ರಾಂತ ಪ್ರಾಚಾರ್ಯರೂ ಆದ ಡಾ. ಪಾದೇಕಲ್ಲು ವಿಷ್ಣು ಭಟ್ “ಭಾರತದಲ್ಲಿ ದಾಸಪರಂಪರೆ, ವಿದ್ವತ್ ಪರಂಪರೆ, ಪ್ರಾಜ್ಞರ ಪರಂಪರೆ ಹೀಗೆ ಹಲವಾರು ವಿಶೇಷ ಪರಂಪರೆಗಳಿವೆ. ಅವುಗಳಲ್ಲಿ ಯಾವುದೂ ಶ್ರೇಷ್ಠ ಮತ್ತು ಕನಿಷ್ಠವೆಂಬುದಿಲ್ಲ. ದಾಸಪರಂಪರೆಯಲ್ಲಿ ಕನಕದಾಸರು ಮುಖ್ಯರಾಗುತ್ತಾರೆ. ಕ್ರಾಂತದರ್ಶಿತ್ವ ಇರುವ ವ್ಯಕ್ತಿತ್ವ ಅವರದು. ಅವರು ಕವಿಗಳೂ ಹೌದು, ಪಂಡಿತರೂ ಹೌದು. ಪುರಾಣದ ಸಂಪೂರ್ಣ ನೆಲೆಗಟ್ಟು ಅವರಲ್ಲಿ ಇದ್ದುದರಿಂದ ಕಾವ್ಯಗಳನ್ನು ಕಟ್ಟುವಲ್ಲಿ ಅವರು ಯಶಸ್ವಿಯಾದರು. ದೋಷಜ್ಞರಾದುದರಿಂದ ಆತ್ಮವಿಮರ್ಶೆಯ…

Read More

ಕೊಡಗು : ಕೊಡಗಿನ ಮನೆ ಮನೆ ಕಾವ್ಯಗೋಷ್ಠಿ ಪರಿಷತ್ತಿನ ಸಂಸ್ಥಾಪಕ ವೈಲೇಶ್ ಪಿ.ಎಸ್. ಕೊಡಗು ಇವರ ಪುತ್ರಿ ಕಾವ್ಯಶ್ರೀ ಮತ್ತು ಮೈಸೂರು ಜಿಲ್ಲೆ ಬಿಳಿಕೆರೆ ಹೋಬಳಿಯ ಚೆಲುವರಾಜು ಇವರ ಪುತ್ರ ರಾಜು ಸಿ. ಇವರ ವಿವಾಹವು ದಿನಾಂಕ 18-02-2024ರಂದು ವಿರಾಜಪೇಟೆಯ ಕಾವೇರಿ ಕಲ್ಯಾಣ ಮಂಟಪದಲ್ಲಿ ಜರುಗಿತು. ಈ ಶುಭ ಸಂದರ್ಭದಲ್ಲಿ ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಕನ್ನಡ ಸಿರಿ ಸ್ನೇಹ ಬಳಗ ಕುಶಾಲನಗರ ಮತ್ತು ಮನೆ ಮನೆ ಕಾವ್ಯಗೋಷ್ಠಿ ಪರಿಷತ್ತು, ಕೊಡಗು ಜಿಲ್ಲೆ ಸಂಘಟನೆಗಳ ಜಂಟಿ ಆಶ್ರಯದಲ್ಲಿ ‘ಗಟ್ಟಿಮೇಳದೊಂದಿಗೆ ಸಾಹಿತ್ಯ ಸಂಭ್ರಮ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಹಿರಿಯ ಕವಿಗಳಾದ ಗಿರೀಶ್ ಕಿಗ್ಗಾಲುರವರ ‘ಮಾಯವಾದ ಮಾಯಾಂಗನೆ’ ಹಾಗೂ ಮತ್ತೋರ್ವ ಹಿರಿಯ ಸಾಹಿತಿಗಳಾದ ಜಯಪ್ರಕಾಶ್ ರಾವ್‌ರವರ ‘ದಶಕಗಳ ಸಾಹಿತ್ಯದ ಮೊಗಸಾಲೆಯಲ್ಲಿ’ ಕೃತಿಗಳನ್ನು ಲೋಕಾರ್ಪಣೆ ಮಾಡಲಾಯಿತು. ಇಪ್ಪತ್ತಕ್ಕೂ ಹೆಚ್ಚಿನ ಕವಿಗಳಿಂದ ಕವನ ವಾಚನದ ಜೊತೆಗೆ ಬಹಳಷ್ಟು ಗಾಯಕರಿಂದ ಗೀತಗಾಯನ ನಡೆಸಲಾಯಿತು. ಈ ಸಂದರ್ಭದಲ್ಲಿ ಬೆಂಗಳೂರಿನ ಕವಿ ಮತ್ತು ಪ್ರಕಾಶಕರಾದ ರೇಣುಕಾ ವೈಕುಂಟಯ್ಯ, ಹಾಸನದ ಕವಿಗಳಾದ ಕುಮಾರ್…

Read More

ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘ ಇದರ ವಾರ್ಷಿಕ ಮಹಾಸಭೆಯು ದಿನಾಂಕ 16-03-2024ನೇ ಶನಿವಾರದಂದು ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ಜರುಗಿತು. ಸಂಘದ ಗೌರವ ಕಾರ್ಯದರ್ಶಿ ಶ್ರೀ ರಂಗನಾಥ್ ರಾವ್ ಇವರು ವಾರ್ಷಿಕ ವರದಿ ಹಾಗೂ ಉಪಾಧ್ಯಕ್ಷರಾದ ಗುಡ್ಡಪ್ಪ ಬಲ್ಯ ವಾರ್ಷಿಕ ಲೆಕ್ಕ ಪತ್ರವನ್ನು ಮಂಡಿಸಿದರು. ಸಂಘದ ಅಧ್ಯಕ್ಷರಾದ ಶ್ರೀ ಭಾಸ್ಕರ್ ಬಾರ್ಯ, ಸ್ವಾಗತಿಸಿ ಪ್ರಧಾನ ಕಾರ್ಯದರ್ಶಿ ಆನಂದ ಸವಣೂರು ವಂದಿಸಿದರು. ಪ್ರಸಕ್ತ ಸಾಲಿನ ಪದಾಧಿಕಾರಿಗಳನ್ನೇ ಮುಂದಿನ ವರ್ಷಕ್ಕೂ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಶ್ರೀ ಗುಂಡ್ಯಡ್ಕ ಈಶ್ವರ ಭಟ್ ಮತ್ತು ಮಾ. ಪರೀಕ್ಷಿತ್ ಇವರುಗಳನ್ನು ಕ್ರಮವಾಗಿ ಉಪಾಧ್ಯಕ್ಷ ಸ್ಥಾನ ಮತ್ತು ಸಹ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆ ಮಾಡಿಕೊಳ್ಳಲಾಯಿತು. ಸಭೆಯಲ್ಲಿ ಮಹಿಳಾ ಸಂಘದ ಅಧ್ಯಕ್ಷೆ, ಕಾರ್ಯದರ್ಶಿ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಸಭೆಯ ಬಳಿಕ ಪಾರ್ತಿ ಸುಬ್ಬ ವಿರಚಿತ ‘ವಿಭೀಷಣ ಶರಣಾಗತಿ’ ತಾಳಮದ್ದಳೆ ನಡೆಯಿತು.

Read More

ಕಾಸರಗೋಡು : ಕಾಸರಗೋಡಿನ ಸಾಂಸ್ಕೃತಿಕ, ಸಾಹಿತ್ಯಿಕ ಸಂಸ್ಥೆಯಾದ ರಂಗ ಚಿನ್ನಾರಿಯವರು ಏರ್ಪಡಿಸಿದ ಪ್ರಶಸ್ತಿ ವಿಜೇತ ಗಾಯಕ ಬಾಲಚಂದ್ರ ಪ್ರಭು ಅವರ ‘ಕಾಯೋ ಕರುಣಾಕರಾ’ ಭಕ್ತಿ ಸಂಗೀತ ಕಾರ್ಯಕ್ರಮವು ದಿನಾಂಕ 17-03-2024ರಂದು ಪದ್ಮಗಿರಿ ಕಲಾ ಕುಟೀರದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಕಾಸರಗೋಡಿನ ಖ್ಯಾತ ಮೂಳೆ ತಜ್ಞರಾದ ಡಾ. ಕೆ.ಕೆ. ಶ್ಯಾನಭೋಗ್ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡುತ್ತಾ “ಒಳ್ಳೆಯ ಭಜನೆ ಹಾಗೂ ಸಂಗೀತವನ್ನು ಆಲಿಸುವುದರಿಂದ ಮನಸ್ಸು ಉಲ್ಲಸಿತವಾಗಿರುತ್ತದೆ. ಸುಸಂಸ್ಕೃತವಾದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮುಖಾಂತರ ಮನಸ್ಸಿನ ನೋವುಗಳನ್ನು ದೂರ ಮಾಡಿಕೊಳ್ಳಬಹುದು. ಎಂದು ಹೇಳಿದರು. ಕಳೆದೆರಡು ದಶಕಗಳಿಂದ ನಾಡು, ನುಡಿ ಸಂಸ್ಕೃತಿಗಾಗಿ ಪ್ರಾಮಾಣಿಕವಾಗಿ ದುಡಿಯುತ್ತಿರುವ ‘ರಂಗ ಚಿನ್ನಾರಿ’ ಸಂಸ್ಥೆಯ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿದ ಅವರು ಮುಂದಿನ ತಲೆಮಾರಿಗೆ ನಮ್ಮ ಸಂಸ್ಕೃತಿಯನ್ನು ತಲುಪಿಸುವ ಬಹು ದೊಡ್ಡ ಜವಾಬ್ದಾರಿಯನ್ನು ಸಂಸ್ಥೆಯು ಮಾಡುತ್ತಿದೆಯಲ್ಲದೆ, ಮಹಿಳೆಯರಿಗಾಗಿ ‘ನಾರಿ ಚಿನ್ನಾರಿ’ ಮತ್ತು ಸಂಗೀತ ಕ್ಷೇತ್ರಕ್ಕಾಗಿ ‘ಸ್ವರ ಚಿನ್ನಾರಿ’ ಸಂಸ್ಥೆಯನ್ನು ಪ್ರಾರಂಭಿಸಿದ್ದನ್ನು ಅಭಿನಂದಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾಸರಗೋಡು ಶ್ರೀ ವರದರಾಜ ವೆಂಕಟರಮಣ…

Read More