Subscribe to Updates
Get the latest creative news from FooBar about art, design and business.
Author: roovari
ಉಡುಪಿ : ಭಾವನಾ ಫೌಂಡೇಶನ್ ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ವತಿಯಿಂದ ಮಧುರಂ ವೈಟ್ ಲೋಟಸ್ ಹೋಟೆಲಿನ ಸಹಯೋಗದೊಂದಿಗೆ ಸಂಯೋಜಿಸಿದ ‘ಬೃಂದಾವನದಿಂದ ಉಡುಪಿಯೆಡೆಗೆ’ ಮಥುರಾ ಸಾಂಝಿ ಕಲಾಕೃತಿಗಳ ಪ್ರದರ್ಶನವು ದಿನಾಂಕ 22 ಜನವರಿ 2025ರಂದು ಬಡಗುಪೇಟೆಯಲ್ಲಿ ಉದ್ಘಾಟನೆಗೊಂಡಿತು. ಈ ಕಲಾ ಪ್ರದರ್ಶನವನ್ನು ಉದ್ಘಾಟಿಸಿದ ಆರ್ಕಿಟೆಕ್ಟ್ ಶ್ರೀಜಾ ಜಯಕುಮಾರ್ ಇವರು ಮಾತನಾಡಿ “ಭಾರತೀಯ ಕಲೆಯಲ್ಲಿಯೇ ಶ್ರೇಷ್ಠವಾದ ಹಾಗೂ ರಾಧೆಯ ಪ್ರೀತಿಯೊಂದಿಗೆ ಬೆಸೆದಿರುವ ಸಾಂಝಿ ಕಲೆಯನ್ನು ಉಡುಪಿಯ ಕಲಾ ರಸಿಕರಿಗೆ ಉಣಬಡಿಸುತ್ತಿರುವ ಭಾಸ ಗ್ಯಾಲರಿಯ ಪ್ರಯತ್ನ ನಿಜಕ್ಕೂ ಶ್ಲಾಘನೀಯ. ಇಂದಿನ ಕಟ್ಟಡಗಳ ಒಳಾಂಗಣ ವಿನ್ಯಾಸದಲ್ಲಿ ಈ ತೆರನಾದ ಕಲೆಗಳ ಮಹತ್ವ ಉಡುಪಿಯ ಕಲಾಪ್ರಿಯರಲ್ಲಿ ಒಂದು ಹೊಸ ಸಂಚಲನವನ್ನೇ ಸೃಷ್ಟಿಸಬಹುದು. ನಾವೆಲ್ಲ ಸೇರಿಕೊಂಡು ಈ ದೇಶೀಯ ಕಲೆಗೆ ಪ್ರೋತ್ಸಾಹಿಸೋಣ” ಎಂಬುದಾಗಿ ಆಶಿಸಿದರು. ರಾಷ್ಟ್ರಪ್ರಶಸ್ತಿ ಪುರಸ್ಕತ ಕಲಾವಿದರಾದ ಶ್ರೀ ರಾಮ್ ಸೋನಿಯವರು ಸಾಂಝಿ ಕಲೆಯ ಬೆಳವಣಿಗೆ ಹಾಗೂ ತಮ್ಮ ಕಲಾಕೃತಿಗಳಲ್ಲಿ ಕಂಡುಕೊಳ್ಳುತ್ತಿರುವ ನವೀನ ಪ್ರಯೋಗಗಳ ಬಗೆಗೆ ವಿವರಿಸಿದರು. ಚಿನ್ನದ ಲೇಪದೊಂದಿಗೆ ಸಾಂಝಿ ಕಲೆಯ ನಿರ್ಮಾಣ…
ಗಂಗಾವತಿ : ಅಖಿಲ ಭಾರತ ಸಾಹಿತ್ಯ ಪರಿಷತ್ತಿನ ರಾಜ್ಯ ಅಧಿವೇಶನವನ್ನು ಮೇ ತಿಂಗಳಲ್ಲಿ ದಾವಣಗೇರಿಯಲ್ಲಿ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ‘ಸಾಹಿತ್ಯದಲ್ಲಿ ಸ್ವತ್ವ’ ಎಂಬ ವಿಷಯದ ಕವಿಗೋಷ್ಠಿ ಹಮ್ಮಿಕೊಂಡಿದ್ದು, ಕವಿತೆಗಳನ್ನು ಆಹ್ವಾನಿಸಿದೆ. ಈ ಕುರಿತು ಪರಿಷತ್ ವಿಭಾಗೀಯ ಪ್ರಮುಖ ಅಶೋಕ ರಾಯ್ಕರ್, ನಾಗಪ್ಪ ಬಡಿಗೇರಿ ತಿಳಿಸಿದ್ದಾರೆ. ಸಾಹಿತ್ಯವೂ ಸೇರಿದಂತೆ ಕಲೆ, ಶಿಕ್ಷಣ, ನಡೆ-ನುಡಿ, ಉಡುಗೆ-ತೊಡುಗೆ, ಪರಿಸರ, ಆಚರಣೆ, ವಾಣಿಜ್ಯ ಇತ್ಯಾದಿ ನಮ್ಮ ರಾಷ್ಟ್ರಜೀವನದ ವಿವಿಧ ರಂಗಗಳಲ್ಲಿ ಸ್ವಾತಂತ್ರ್ಯ ಕಳೆದುಕೊಂಡಾಗ ನಷ್ಟಗೊಂಡ ಸ್ವತ್ವವನ್ನು ಮತ್ತೆ ಗಳಿಕೊಳ್ಳಬೇಕಿತ್ತಷ್ಟೆ. ಸ್ವತ್ವವನ್ನು ಕಳಕೊಂಡರೆ ಸ್ವಾತಂತ್ರ್ಯವನ್ನು ಕಳಕೊಂಡಂತೆ. ಸ್ವಾತಂತ್ರ್ಯವನ್ನು ಗಳಿಸಿಕೊಳ್ಳುವುದೆಂದರೆ ಸ್ವತ್ವವನ್ನು ಪಡಕೊಳ್ಳುವುದೆಂದೇ ಅರ್ಥ, ಎಲ್ಲಾ ರಂಗಗಳಲ್ಲೂ ಸ್ವತ್ವದ ಅಭಿವ್ಯಕ್ತಿ ಸಾಧ್ಯವಾದಾಗ ಗಳಿಸಿಕೊಂಡ ಸ್ವಾತಂತ್ರ್ಯ ಪೂರ್ಣವಾಯಿತೆಂದುಕೊಳ್ಳಬಹುದು. ಎಲ್ಲಾ ರಂಗಗಳಲ್ಲಿ ನಾವು ಕಳೆದುಕೊಂಡ ನಮ್ಮತನವನ್ನು ಮತ್ತೆ ಪಡೆಯುವ ಸಾಧ್ಯತೆಗಳನ್ನು, ಅವು ಪಡೆಯಬೇಕಾದ ಅಭಿವ್ಯಕ್ತಿಯ ಬಗೆಯನ್ನು ಇತ್ಯಾದಿ ಹತ್ತು ಹಲವು ಆಯಾಮಗಳಲ್ಲಿ ಕೆಲವನ್ನಾದರೂ ಸ್ಪರ್ಶಿಸಿ ಉತ್ಕೃಷ್ಟ ಕಾವ್ಯಗುಣವುಳ್ಳ ಸ್ವರಚಿತ ಕವಿತೆಗೆ ಈ ಕವಿಗೋಷ್ಠಿಯಲ್ಲಿ ವಾಚನಕ್ಕೆ ಅವಕಾಶವಿದೆ. ಕವಿತೆಗಳು ಹದಿನಾರರಿಂದ ಇಪ್ಪತ್ತೆರಡು ಸಾಲುಗಳ ಮಿತಿಯಲ್ಲಿ…
ಮಂಗಳೂರು : ಕುಳಾಯಿ ಹೊಸಬೆಟ್ಟು ಇಲ್ಲಿರುವ ಶ್ರೀ ಶಾರದಾ ನಾಟ್ಯಾಲಯದ ವತಿಯಿಂದ ಲಲಿತ ಕಲಾ ಸಂಘ ಗೋವಿಂದ ದಾಸ ಕಾಲೇಜು ಸುರತ್ಕಲ್ ಇವರ ಸಹಯೋಗದೊಂದಿಗೆ ವಿದುಷಿ ಶೀಲಾ ದಿವಾಕರ್ ಇವರಿಗೆ ‘ಗಾನ ಶಾರದೆಗೆ ನಮನ’ ಗುರುವಿ ಗೊಂದು ನಾಟ್ಯ ನಮನ ಕಾರ್ಯಕ್ರಮವನ್ನು ದಿನಾಂಕ 26 ಜನವರಿ 2025ರಂದು ಸಂಜೆ 5-30 ಗಂಟೆಗೆ ಸುರತ್ಕಲ್ಲಿನ ಗೋವಿಂದ ದಾಸ ಕಾಲೇಜಿನ ರಂಗ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೃಷ್ಣಮೂರ್ತಿ ಪಿ. ಇವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮದಲ್ಲಿ ವಿದ್ವಾನ್ ಶ್ರೀ ಕೆ. ಮುರಳೀಧರ್ ಇವರಿಂದ ನುಡಿ ನಮನ ನಡೆಯಲಿದೆ. ಶ್ರೀಮತಿ ಕಲಾವತಿ ಕೆ., ಶ್ರೀಮತಿ ಸಂಧ್ಯಾ ಗಣೇಶ್, ಕುಮಾರಿ ಪೂಜಾ ಆಚಾರ್ಯ, ಕುಮಾರಿ ದೀಕ್ಷಾ ಮತ್ತು ಕುಮಾರಿ ಲಹರಿ ಇವರ ಗೀತ ನಮನಕ್ಕೆ ಹರೀಶ್ ಮುಲ್ಕಿ ರಿದಂ ಪ್ಯಾಡ್, ವಿಜಯ್ ಕುಳಾಯಿ ಕೀ ಬೋರ್ಡ್ ಮತ್ತು ದರ್ಶನ್ ಮುಲ್ಕಿ ತಬಲಾ ಸಾಥ್ ನೀಡಲಿದ್ದಾರೆ. ವಿದುಷಿ ಶ್ರೀಮತಿ ಪ್ರಣತಿ ಸತೀಶ್, ಶ್ರೀಮತಿ ಅಪೂರ್ವ…
ಇತಿಹಾಸದ ಪುಟಗಳ ಅಜರಾಮರರ ಸಾಲಿನಲ್ಲಿ ಇರುವ ಅಪ್ರತಿಮ ಮೇಧಾವಿಗಳಲ್ಲಿ ಒಬ್ಬರು ಕೀರ್ತಿಶೇಷ ರಾಳ್ಳಪಲ್ಲಿ ಅನಂತಕೃಷ್ಣ ಶರ್ಮರು. ಇವರು 20ನೇ ಶತಮಾನದ ತ್ರಿಭಾಷಾ ಪಂಡಿತರು (ಕನ್ನಡ, ಸಂಸ್ಕೃತ, ತೆಲುಗು) ಕರ್ನಾಟಕ ಸಂಗೀತದ ಪ್ರಸಿದ್ಧ ಸಂಯೋಜಕರು ಮತ್ತು ಗಾಯಕರು. ಆಕಾಶವಾಣಿ ಎಂಬ ಪದವನ್ನು ಸೂಚಿಸಿದ ಕೀರ್ತಿವಂತರು. ಪದಕವಿ ಪಿತಾಮಹ ಎಂಬ ಬಿರುದು ಪಡೆದವರು. ಮೇಲಾಗಿ ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿರುವ ತಿರುಮಲ ತಿರುಪತಿ ದೇವಳದ ವೆಂಕಟೇಶ್ವರ ಸ್ವಾಮಿಯ ಪರಮ ಭಕ್ತರು. ಗುರುಕುಲದಲ್ಲಿ ಬೆಳೆದ ಇವರು ವೇದೋಪನಿಷತ್ತುಗಳ ಪ್ರಚಂಡ ವಿದ್ವಾಂಸರು, ಮಹಾ ಜ್ಞಾನಿಗಳು, ವ್ಯಾಕರಣ ತಜ್ಞರು. ಇಂತಹ ಬಹುಮುಖ ಪ್ರತಿಭೆಯ ಅನಂತಕೃಷ್ಣ ಶರ್ಮರು ದಿನಾಂಕ 23 ಜನವರಿ 1893ರಲ್ಲಿ ಆಂಧ್ರದ ಅನಂತಪುರ ಜಿಲ್ಲೆಯ ಕಂಬದೂರು ಮಂಡಲದ ರಾಳ್ಳಪಲ್ಲಿ ಗ್ರಾಮದ ಕೃಷ್ಣಮಾಚಾರ್ಯ ಮತ್ತು ಅಲಮೇಲು ಮಂಗಮ್ಮರ ಸುಪುತ್ರರಾಗಿ ಜನಿಸಿದರು. ಬಾಲಕನಾಗಿದ್ದಾಗಲೇ ಕಬ್ಬಿಣದ ಕಡಲೆ ಎನ್ನುತ್ತಿದ್ದ ಸಂಸ್ಕೃತ ಗ್ರಂಥಗಳಾದ ಚಂಪೂ ರಾಮಾಯಣ, ಕಾಳಿದಾಸನ ರಘುವಂಶ, ಅಚ್ಚ ತೆಲುಗು ರಾಮಾಯಣ, ನೀಲಾ ಸುಂದರಿಯ ಪರಿಣಯ ಮುಂತಾದ ಪ್ರಾಚೀನ ಗ್ರಂಥಗಳನ್ನು ಓದಿ ಅರಗಿಸಿಕೊಂಡಿದ್ದರು.…
ಬಾಗಲಕೋಟೆ : ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ (ರಿ.) ಕಮತಗಿ ಮತ್ತು ವಚನ ವೈಭವ ಮಹಿಳಾ ಜಾನಪದ ಸಾಂಸ್ಕೃತಿಕ ಕಲಾ ಸಂಘ (ರಿ.) ಬಾಗಲಕೋಟೆ ಇವುಗಳ ಸಹಯೋಗದಲ್ಲಿ ‘ಜನಪದ ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಸಮ್ಮೇಳನ – 2025’ವನ್ನು ದಿನಾಂಕ 25 ಜನವರಿ 2025ರಂದು ಮಧ್ಯಾಹ್ನ 2-00 ಗಂಟೆಗೆ ಬಾಗಲಕೋಟೆಯ ಶ್ರೀ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ. ಈ ಸಮ್ಮೇಳನದಲ್ಲಿ ಪುಸ್ತಕ ಬಿಡುಗಡೆ, ಕಲಾ ಪ್ರದರ್ಶನ, ವಿಶೇಷ ಉಪನ್ಯಾಸ, ಕವಿಗೋಷ್ಠಿ ಮತ್ತು ವಿವಿಧ ಕ್ಷೇತ್ರದಲ್ಲಿ ಸೇವೆಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದ್ದು, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಜನಪದ ಕಲಾವಿದೆ ಶ್ರೀಮತಿ ಗುರಮ್ಮ ಸಂಕಿನಮಠ ಇವರು ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಗುರು ಚನ್ನಬಸವೇಶ್ವರ ಹಿರೇಮಠ ಕಮತಗಿಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಹಿರಿಯ ಜನಪದ ಗಾಯಕರಾದ ಶ್ರೀ ಗುರುರಾಜ್ ಹೊಸಕೋಟೆ ಇವರು ಈ ಸಮ್ಮೇಳನವನ್ನು ಉದ್ಘಟಿಸಲಿರುವರು. ಶ್ರೀಮತಿ ಜಯಶ್ರೀ ಭಂಡಾರಿಯವರ ‘ಸಂಸ್ಕೃತಿಯ ಚಿಂತಕರು’ ಲೇಖನಗಳ ಸಂಕಲನ, ಶ್ರೀ ಹುಸೇನ್ ಪತ್ತೆಖಾನ್…
ಕಾಸರಗೋಡು : ಕಾಸರಗೋಡಿನ ಕನ್ನಡ ಭವನದ ಆಶ್ರಯದಲ್ಲಿ ದಿನಾಂಕ 02 ಫೆಬ್ರವರಿ 2025ರಂದು ಅಪರಾಹ್ನ 2-30 ಗಂಟೆಗೆ ಕಾಸರಗೋಡಿನ ಕನ್ನಡ ಭವನದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ನೂತನ ಸಮಿತಿಯ ಸಮಾಲೋಚನೆ ಹಾಗೂ ಚುಟುಕು ಕವಿಗೋಷ್ಠಿಯು ನಡೆಯಲಿದೆ. ಈ ಕವಿಗೋಷ್ಠಿಯಲ್ಲಿ ಕಾಸರಗೋಡು ಜಿಲ್ಲೆಯ ಕವಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಆಸಕ್ತರು ದಿನಾಂಕ 26 ಜನವರಿ 2025ರ ಮುಂಚಿತವಾಗಿ 9447490344 ಸಂಖ್ಯೆಯಲ್ಲಿ ಹೆಸರು ನೊಂದಾಯಿಸಲು ತಿಳಿಸಿದೆ.
ಉಡುಪಿ : ತುಳುಕೂಟ ಉಡುಪಿ (ರಿ.) ಇದರ ವತಿಯಿಂದ ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್ ಮಣಿಪಾಲ, ಎಂ.ಜಿ.ಎಂ. ಕಾಲೇಜು ಉಡುಪಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಮತ್ತು ಅಖಿಲ ಭಾರತ ತುಳು ಒಕ್ಕೂಟ (ರಿ.) ಮಂಗಳೂರು ಇವರ ಸಹಯೋಗದೊಂದಿಗೆ ‘ಕೆಮ್ತೂರು ತುಳು ನಾಟಕ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ದಿನಾಂಕ 26 ಜನವರಿ 2025ರಂದು ಸಂಜೆ 5-30 ಗಂಟೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ಮುದ್ದಣ ಮಂಟಪದಲ್ಲಿ ಆಯೋಜಿಸಲಾಗಿದೆ. ತುಳುಕೂಟ ಉಡುಪಿ ಇದರ ಅಧ್ಯಕ್ಷರಾದ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಮಾರಂಭದಲ್ಲಿ ರಂಗ ಕಲಾವಿದರಾದ ಶ್ರೀ ಭಾಸ್ಕರ್ ಮಣಿಪಾಲ ಇವರನ್ನು ಸನ್ಮಾನಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ‘ಕೆಮ್ತೂರು ತುಳು ನಾಟಕ ಪ್ರಶಸ್ತಿ’ ಪಡೆದ ಸುಮನಸಾ ಕೊಡವೂರು ಉಡುಪಿ (ರಿ.) ತಂಡದವರಿಂದ ‘ಈದಿ’ ನಾಟಕದ ಪ್ರದರ್ಶನ ನಡೆಯಲಿದೆ.
ಡಾ. ಭೈರಪ್ಪ ಇವರ ‘ಪರ್ವ’ ಹಾಗೂ ‘ಉತ್ತರಕಾಂಡ’ ಕಾದಂಬರಿಗಳ ನೂತನ ಆಯಾಮಗಳ ಶೋಧ ಪ್ರೊ. ಎಸ್. ಎಲ್. ಭೈರಪ್ಪ ಅವರದು ಕನ್ನಡ ಸಾಹಿತ್ಯ ಪ್ರಪಂಚದಲ್ಲಿಯೇ ಒಂದು ಅಪೂರ್ವ ವ್ಯಕ್ತಿತ್ವ. ಪ್ರಥಮ ದರ್ಜೆಯ ಸೃಜನಶೀಲ ಲೇಖಕರಾಗಿ ಸೈ ಎನಿಸಿಕೊಂಡಿರುವ ಅವರು ಭಾರತೀಯ ಸಾಹಿತ್ಯ ನಿರ್ಮಾಪಕರಲ್ಲಿ ಒಬ್ಬರು. ಭೈರಪ್ಪ ಅವರು ಭಾಷೆಗಳ ಗಡಿ ಗೆದ್ದ ವಿರಳ ಭಾರತೀಯ ಲೇಖಕ.ತಮ್ಮ ಮಾತು ಕೃತಿಗಳ ಮೂಲಕ ಅವರು ಜಗದಗಲ ಜನಪ್ರಿಯರಾಗಿರುವುದು ಕನ್ನಡದ ಭಾಗ್ಯ.ಡಾ.ಭೈರಪ್ಪ ಅವರು ಕನ್ನಡದ, ಕರ್ನಾಟಕದ ಹಿರಿಮೆಯನ್ನು ಹೆಚ್ಚಿಸಿದ ಅಪರೂಪದ ಸೋಜಿಗದ ಸಾಧಕ.ಅವರು ನಮ್ಮ ರಾಷ್ಟ್ರದ ಒಬ್ಬ ಘಟಾನುಘಟಿ ಚಿಂತಕರೂ ಹೌದು. ರಾಮಾಯಣ ಹಾಗೂ ಮಹಾಭಾರತ ಇವೆರಡು ಭಾರತೀಯರ ಭಾವಕೋಶದಲ್ಲಿ ಸೇರಿ ಹೋಗಿರುವ ಉತ್ಕ್ರಷ್ಟ ಮಹಾ ಕಾವ್ಯಗಳು. ವ್ಯಾಸ ಮುನಿ ವಿರಚಿತ ಮಹಾಭಾರತವನ್ನು ಇಪ್ಪತ್ತನೆಯ ಶತಮಾನದಲ್ಲಿ ನವನವೀನ ರೀತಿಯಲ್ಲಿ ಎರಕ ಹೊಯ್ದು ಕನ್ನಡ ಕಾದಂಬರಿ ಕ್ಷೇತ್ರಕ್ಕೆ ಹೊಸ ಆಯಾಮವನ್ನು ನೀಡಿದವರು ಎಸ್. ಎಲ್. ಭೈರಪ್ಪ. ಅವರ ‘ಪರ್ವ’ ಒಂದು ಅಭಿಜಾತ ಕಾದಂಬರಿ. ಭಾರತದ ಬೇರೆ ಬೇರೆ…
ಉಡುಪಿ : ಕರ್ನಾಟಕ ಸರಕಾರ ನೂತನವಾಗಿ ರಚಿಸಿರುವ ಡಾ.ಶಿವರಾಮ ಕಾರಂತ ಟ್ರಸ್ಟ್ ಇದರ ವತಿಯಿಂದ ಒಂದು ದಿನದ ಡಾ.ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರವು ದಿನಾಂಕ 27 ಜನವರಿ 2025ರಂದು ಬೆಳಗ್ಗೆ ಘಂಟೆ 10. 00ರಿಂದ ಉಡುಪಿ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ. ಕಾರಂತರ ಕಾದಂಬರಿಗಳನ್ನು ಕೇಂದ್ರವಾಗಿಟ್ಟುಕೊಂಡು ಕಾದಂಬರಿ ಪ್ರಕಾರದ ಸ್ವರೂಪವನ್ನು ಅರಿಯುವುದು ಈ ಶಿಬಿರದ ಮುಖ್ಯ ಉದ್ದೇಶವಾಗಿದೆ. ಶಿಬಿರದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳು ಮಾರ್ಗದರ್ಶನ ಮಾಡಲಿದ್ದು, 25 ಜನರಿಗೆ ಮಾತ್ರ ಭಾಗವಹಿಸುವ ಅವಕಾಶವಿದೆ. ಶಿಬಿರಕ್ಕೆ ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ. ಆಸಕ್ತರು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಮುಕ್ತವಾಗಿ ಈ ಶಿಬಿರದಲ್ಲಿ ಭಾಗವಹಿಸಬಹುದಾಗಿದ್ದು, ಹೆಸರು ನೋಂದಾಯಿಸಿಕೊಳ್ಳಲು ಡಾ.ಶಿವರಾಮ ಕಾರಂತ ಟ್ರಸ್ಟ್ ಮೊ. ನಂ: 6362517472 ಅಥವಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಮೊ.ನಂ: 9980462972 ಅನ್ನು ಸಂಪರ್ಕಿಸಬಹುದು ಎಂದು ಡಾ.ಶಿವರಾಮ ಕಾರಂತ ಟ್ರಸ್ಟ್ ಇದರ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಮಂಗಳೂರು : ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ವಾರ್ಷಿಕ ಜಾತ್ರೆಯ ಸಂದರ್ಭದಲ್ಲಿ ನಡೆಯುವ ಕ್ಷೇತ್ರ ಸಂಚಾರದ ಪ್ರಯುಕ್ತ ಕದ್ರಿ ಹಿಲ್ಸ್ ಇಲ್ಲಿನ ಮಂಜುನಾಥ ಫ್ರೆಂಡ್ಸ್ ಸರ್ಕಲ್ ಸಂಸ್ಥೆಯು ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮ ದಿನಾಂಕ 18 ಜನವರಿ 2025ರಂದು ನಡೆಯಿತು. ಕಾರ್ಯಕ್ರಮದ ಅಂಗವಾಗಿ ಮಂಗಳೂರಿನ ‘ನಾದನೃತ್ಯ ಸ್ಕೂಲ್ ಆಫ್ ಡಾನ್ಸ್’ ಇದರ ಗುರು ಡಾ. ಭ್ರಮರಿ ಶಿವಪ್ರಕಾಶ್ ಇವರ ನಿರ್ದೇಶನದಲ್ಲಿ ವಿದ್ಯಾರ್ಥಿಗಳಾದ ಕು. ಶುಕೀ ರಾವ್ ಹಾಗೂ ಕು. ಚಿನ್ಮಯೀ ಕೆ. ಭರತನಾಟ್ಯ ಪ್ರದರ್ಶನವಿತ್ತರು.