Author: roovari

ಬ್ರಹ್ಮಾವರ : ಉಡುಪಿ ಅಮ್ಮುಂಜೆಯ ಶ್ರೀ ಭ್ರಾಮರೀ ನಾಟ್ಯಾಲಯದ ರಜತ ವರ್ಷದ ಅಂಗವಾಗಿ ‘ನೃತ್ಯ ಪರಂಪರಾ’ ಭರತನಾಟ್ಯ ಪ್ರಾತ್ಯಕ್ಷಿಕೆಯ ಉದ್ಘಾಟನ ಕಾರ್ಯಕ್ರಮವು ದಿನಾಂಕ 22 ಡಿಸೆಂಬರ್ 2025ರಂದು ಕೆ.ಪಿ.ಎಸ್. ಪ್ರೌಢಶಾಲೆ ಬ್ರಹ್ಮಾವರದಲ್ಲಿ ನಡೆಯಿತು. ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆ…1 ಇದರ ಅಂಗವಾಗಿ ‘ನೃತ್ಯ ಪರಂಪರಾ’ ಸಂಸ್ಕೃತಿ-ಆರೋಗ್ಯ-ಶಿಕ್ಷಣ ಎಂಬ ವಿಷಯದಲ್ಲಿ ಭರತನಾಟ್ಯ ಪ್ರಾತ್ಯಕ್ಷಿಕೆ ಪ್ರಸ್ತುತಗೊಂಡಿತು. ಕನ್ನಡ ಮತ್ತು ಸಂಸ್ಕೃತಿ ಉಡುಪಿ ಇಲಾಖೆಯ ಸಹಯೋಗದೊಂದಿಗೆ ನಡೆದ ಈ ಕಾರ್ಯಕ್ರಮವು ದೈಹಿಕ ಶಿಕ್ಷಣ ಶಿಕ್ಷಕರಾದ ಜಗದೀಶ್ ಇವರ ಅಮೃತ ಹಸ್ತದಿಂದ ಉದ್ಘಾಟನೆಗೊಂಡಿತು. ನೃತ್ಯ ಪರಂಪರೆ ಬಗ್ಗೆ ಮಾತನಾಡುತ್ತಾ “ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಎಷ್ಟು ಮುಖ್ಯವೋ ಅದೇ ರೀತಿ ಈ ಕಲೆ ಸಂಸ್ಕೃತಿಯ ಕಲಿಕೆ ಕೂಡ ಅತ್ಯವಶ್ಯ. ಪುರಾಣ ಕಥೆಗಳ ಅರಿವಿನ ಭರತನಾಟ್ಯದಿಂದ ಧರ್ಮ ಸಂಸ್ಕೃತಿ ಉಳಿವು ಸಾಧ್ಯ” ಎಂಬ ಸಂದೇಶ ನೀಡಿದರು. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಧಾಕೃಷ್ಣ ನೃತ್ಯ ನಿಕೇತನ ಉಡುಪಿ ಇದರ ನಿರ್ದೇಶಕರು ಹಾಗೂ ವಿದ್ವಾನ್ ಭವಾನಿಶಂಕರ್ ಅವರ ಗುರುಗಳಾದ ವಿದುಷಿ ವೀಣಾ ಎಂ.…

Read More

ಪೊನ್ನಂಪೇಟೆ : ಕೊಡವ ಸಾಹಿತ್ಯ ಕ್ಷೇತ್ರದ ಪ್ರತಿಷ್ಠಿತ ಸಂಸ್ಥೆಯಾಗಿರುವ ‘ಕೊಡವ ತಕ್ಕ ಎಳ್ತ್’ಕಾರಡ ಕೂಟ’ವು ಯುವ ಪ್ರತಿಭೆಗಳು ಸೇರಿದಂತೆ ರಾಜ್ಯದ ಕೊಡವ ಭಾಷಾ ಕವಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ದಿನಾಂಕ 30 ಡಿಸೆಂಬರ್ 2025ರಂದು ವೀರಾಜಪೇಟೆಯಲ್ಲಿರುವ ಅಖಿಲ ಕೊಡವ ಸಮಾಜ ಸಭಾಂಗಣದಲ್ಲಿ ರಾಜ್ಯ ಮಟ್ಟದ ಕೊಡವ ಕವಿಗೋಷ್ಠಿ ಏರ್ಪಡಿಸಲಾಗಿದೆ. ಪುತ್ರರಿ ಹಬ್ಬದ ಸವಿ ನೆನಪಿಗಾಗಿ ಆಯೋಜಿಸಿರುವ ಈ ಕವಿಗೋಷ್ಠಿಯಲ್ಲಿ ಜಾತಿ, ಧರ್ಮದ ಯಾವುದೇ ನಿರ್ಭಂದವಿಲ್ಲದೆ ಎಲ್ಲರೂ ಕೊಡವ ಭಾಷೆಯಲ್ಲಿ ಕವನ ಬರೆದು ಭಾಗವಹಿಸಬಹುದು. ಆಸಕ್ತಿ ಇರುವ ಕವಿಗಳು ದಿನಾಂಕ 25 ಡಿಸೆಂಬರ್ 2025ರಂದು ರಾತ್ರಿ 8-00 ಗಂಟೆಯ ಒಳಗೆ ಇದುವರೆಗೆ ಎಲ್ಲಿಯೂ ಪ್ರಕಟವಾಗದ ತಮ್ಮ ಸ್ವಂತ ರಚನೆಯ ಕೊಡವ ಕವನಗಳನ್ನು 98885 84732/ 94483 26014/ 94499 98789 ವಾಟ್ಸಪ್ ಸಂಖ್ಯೆಗಳಿಗೆ ಕಳುಹಿಸಬಹುದು ಅಥವಾ ಅಧ್ಯಕ್ಷರು, ಕೊಡವ ತಕ್ಕ ಎಳ್ತ್’ಕಾರಡ ಕೂಟ, ಕೇರಾಫ್ ಕರ್ನಾಟಕ ಒನ್ ಕಛೇರಿ, ಆತ್ರೇಯ ಆಸ್ಪತ್ರೆ ಎದುರು, ವೀರಾಜಪೇಟೆ ಈ ವಿಳಾಸಕ್ಕೆ ತಲುಪಿಸಬೇಕೆಂದು ಕೋರಲಾಗಿದೆ.

Read More

ಬಿ.ಸಿ. ರೋಡ್ : ರಾರಾಸಂ ಫೌಂಡೇಶನ್ (ರಿ.) ಬಂಟ್ವಾಳ ಇದರ 15ನೇ ವರ್ಷದ ಸಾಂಸ್ಕೃತಿಕ ಕಲರವ ‘ರಾರಾ ಸಂಭ್ರಮ’ವನ್ನು ದಿನಾಂಕ 25 ಡಿಸೆಂಬರ್ 2025ರಂದು ಬೆಳಗ್ಗೆ 9-00 ಗಂಟೆಗೆ ಬಿ.ಸಿ. ರೋಡ್ ಲಯನ್ಸ್ ಸೇವಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಬೆಳಗ್ಗೆ 10-00 ಗಂಟೆಗೆ ಮಾಜಿ ಸಚಿವರಾದ ಬಿ. ರಾಮನಾಥ ರೈ ಇವರು ಉದ್ಘಾಟನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಬಹುಮುಖ ಪ್ರತಿಭಾನ್ವಿತ ವಿದ್ಯಾರ್ಥಿ ‘ನಿನಾದ್ ಕೈರಂಗಳ’ ಇವರಿಗೆ ‘ರಾರಾಸಂ ಪುರಸ್ಕಾರ’ ಮತ್ತು ನಿವೃತ್ತ ಪ್ರಥಮ ದರ್ಜೆ ಸಹಾಯಕರಾದ ಪ್ರವೀಣ್ ಕುಮಾರ್ ದೋಟ ಇವರಿಗೆ ಗೌರವಾಭಿನಂದನೆ ನೀಡಿ ಸನ್ಮಾನಿಸಲಾಗುವುದು. ಬೆಳಗ್ಗೆ 9-00 ಗಂಟೆಗೆ ಮಕ್ಕಳಿಗೆ ಹಾಗೂ ಹಿರಿಯರಿಗೆ ವಿವಿಧ ಸ್ಪರ್ಧೆಗಳಾದ ಸೆಲ್ಫಿ ವಿತ್ ನೇಚರ್, ಅದೃಷ್ಟ ಪುಟಾಣಿ, ಪೇಪರ್ ಕ್ರಾಫ್ಟ್, ಚಿತ್ರಕಲಾ, ರಂಗೋಲಿ, ಪುಟಾಣಿ ಪಂಟರ್, ಕವನ ವಾಚನ, ಕೂಪನ್ ಕಲರವ, ಸ್ಮರಣ ಶಕ್ತಿ, ಹೂವು ಜೋಡಣೆ, ಭಾಷಣ ಸ್ಪರ್ಧೆ, ಎದುರುಕತೆ, ವೈಯುಕ್ತಿಕ ಛದ್ಮವೇಷ ಸ್ಪರ್ಧೆ, ಸೂಪರ್ ಸಿಂಗರ್, ಡ್ಯಾನ್ಸ್ ಜೂನಿಯರ್ಸ್ ಮತ್ತು…

Read More

ಕಾರ್ಕಳ : ಕಾಂತಾವರ ಕನ್ನಡ ಸಂಘದ 50ರ ಸಂಭ್ರಮದ ಪ್ರಯುಕ್ತ ಕಾರ್ಕಳದ ಶಾಸ್ತ್ರೀಯ ಸಂಗೀತ ಸಭಾದ ಸಹಯೋಗದಲ್ಲಿ ದಿನಾಂಕ 20 ಡಿಸೆಂಬರ್ 2025ರಂದು ಕಾರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಭವನದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಮತ್ತು ಭಕ್ತಿ ಸಂಗೀತ ಕಾರ್ಯಕ್ರಮವು ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕರ್ನಾಟಕ ಕಲಾಶ್ರೀ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ನಿವೃತ್ತ ಉಡುಪಿಯ ಜಿಲ್ಲಾಧಿಕಾರಿಗಳೂ ಆಗಿರುವ ಡಾ. ಮುದ್ದು ಮೋಹನ್ ಇವರು ಮಾತನಾಡಿ “ಅವಿಭಜಿತ ದ.ಕ. ಜಿಲ್ಲೆಯ ಜನತೆಯೂ ಕಲೆ, ಸಂಸ್ಕೃತಿ, ಸಂಗೀತವನ್ನು ಆರಾಧಿಸುವವರಾಗಿದ್ದು ಕಲಾವಿದರಿಗೆ ಅವರು ನೀಡುವ ಗೌರವ, ಪ್ರೋತ್ಸಾಹ ಬೇರೆಲ್ಲೂ ಕಾಣಸಿಗದು. ಈ ಜಿಲ್ಲೆಯ ಜನರ ಪ್ರೀತಿ, ಹೃದಯ ಶ್ರೀಮಂತಿಕೆಗೆ ನಾನು ಮಾರುಹೋಗಿದ್ದೇನೆ” ಎಂದು ತಿಳಿಸಿದರು. ಶಾಸ್ತ್ರೀಯ ಸಂಗೀತ ಸಭಾ ಇದರ ಸ್ಥಾಪಕ ಕಾರ್ಯದರ್ಶಿಗಳಾದ ಡಾ. ಪ್ರಕಾಶ್ ಶೆಣೈಯವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಾ. ಮುದ್ದು ಮೋಹನ್ ಇವರಿಗೆ ಸಹ ವಾದ್ಯ ಸಹಾಯಕರಾಗಿ ಹಾರ್ಮೋನಿಯಂನಲ್ಲಿ ಶ್ರೀ ಪಂಚಾಕ್ಷರಿ ಹಿರೇಮಠ, ತಬಲಾದಲ್ಲಿ…

Read More

ಬೆಂಗಳೂರು : ಯಕ್ಷದೇಗುಲ (ರಿ.) ಬೆಂಗಳೂರು ಇವರ ಸಂಯೋಜನೆಯಲ್ಲಿ ‘ಯಕ್ಷದೇಗುಲ ಸನ್ಮಾನ – 2025’ ಮತ್ತು ಯಕ್ಷಗಾನ ಪ್ರದರ್ಶನವನ್ನು ದಿನಾಂಕ 25 ಡಿಸೆಂಬರ್ 2025ರಂದು ಸಂಜೆ 4-00 ಗಂಟೆಗೆ ಬೆಂಗಳೂರಿನ ಬಸವನಗುಡಿ ಎನ್.ಆರ್. ಕಾಲನಿಯಲ್ಲಿರುವ ಡಾ. ಸಿ. ಅಶ್ವಥ್ ಕಲಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಗುಂಡ್ಮಿ ಸದಾನಂದ ಐತಾಳ್ ಇವರಿಗೆ ‘ಯಕ್ಷದೇಗುಲ 2025’ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು. ಕೆ. ಮೋಹನ್ ಮತ್ತು ಪ್ರಿಯಾಂಕ ಕೆ. ಮೋಹನ್ ಇವರ ನಿರ್ದೇಶನದಲ್ಲಿ ಪ್ರಸ್ತುತಗೊಳ್ಳುವ ‘ಏಕಲವ್ಯ’ ಮತ್ತು ‘ರತ್ನಾವತಿ ಕಲ್ಯಾಣ’ ಎಂಬ ಪ್ರಸಂಗದ ಯಕ್ಷಗಾನದಲ್ಲಿ 70 ಮಕ್ಕಳ ಯಕ್ಷರಂಗ ಪ್ರವೇಶ ನಡೆಯಲಿದೆ. ಹಿಮ್ಮೇಳದಲ್ಲಿ ಲಂಬೋದರ ಹೆಗಡೆ ನಿಟ್ಟೂರು ಮತ್ತು ಪ್ರಸನ್ನ ಭಟ್ ಇವರು ಭಾಗವತರು ಹಾಗೂ ಸಂಪತ್ ಕುಮಾರ್ ಮದ್ದಲೆ ಹಾಗೂ ಸುದೀಪ ಉರಾಳ ಚೆಂಡೆಯಲ್ಲಿ ಸಹಕರಿಸಲಿದ್ದಾರೆ.

Read More

ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಮತ್ತು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಇದರ ವಾರ್ಷಿಕೋತ್ಸವ ಪ್ರಯುಕ್ತ ‘ಶ್ರೀ ಆಂಜನೇಯ 57’ ಕಾರ್ಯಕ್ರಮವು ದಿನಾಂಕ 25 ಡಿಸೆಂಬರ್ 2025ರಂದು ಅಪರಾಹ್ನ 1-00 ಗಂಟೆಗೆ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ. ಅಪರಾಹ್ನ 1-00 ಗಂಟೆಗೆ ಈ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಪುತ್ತೂರು ಉಮೇಶ ನಾಯಕ್ ಇವರು ಉದ್ಘಾಟನೆಗೊಳಿಸಲಿದ್ದು, ಬಳಿಕ ಸಂಘದ ಸದಸ್ಯರಿಂದ ‘ತಾಳಮದ್ದಳೆ ವಿಪ್ರಕೂಟ’ ನೂತನ ಪರಿಕಲ್ಪನೆ ಹಾಗೂ 3-00 ಗಂಟೆಗೆ ಕವಿ ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ ‘ಶ್ಯಮಂತಕಮಣಿ’ ತಾಳಮದ್ದಳೆ ಪ್ರಸ್ತುತಗೊಳ್ಳಲಿದೆ. ಸಂಜೆ 5-00 ಗಂಟೆಗೆ ನಡೆಯಲಿರುವ ಸಭಾ ಕಲಾಪದ ಅಧ್ಯಕ್ಷತೆಯನ್ನು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪಂಜಿಗದ್ದೆ ಈಶ್ವರ ಭಟ್ ಇವರು ವಹಿಸಲಿದ್ದು, ಶ್ರೀ ಎಡನೀರು ಮಠದ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಆಶೀರ್ವಚನ ನೀಡಲಿದ್ದಾರೆ. ಹಿರಿಯ ಕಲಾವಿದ ಪಿ.ಟಿ. ಜಯರಾಮ…

Read More

ಉಡುಪಿ : ಲಯನ್ಸ್ ಅಂತರಾಷ್ಟ್ರೀಯ ಜಿಲ್ಲೆ 317ಸಿ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಉಡುಪಿ, ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಘಟಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ, ಲಯನ್ಸ್ ಕ್ಲಬ್ ಮಲ್ಪೆ ಹಾಗೂ ಜಾನಪದ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ‘ಜಾನಪದ ಮತ್ತು ಯಕ್ಷಗಾನ ಸಂಭ್ರಮ -2025’ ಕಾರ್ಯಕ್ರಮವು ದಿನಾಂಕ 20 ಡಿಸೆಂಬರ್ 2025ರಂದು ಅಜ್ಜರಕಾಡು ಪುರಭವನದಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಲಯನ್ಸ್ ಜಿಲ್ಲೆ 317ಸಿ ಇದರ ಸಾಂಸ್ಕೃತಿಕ (ಜಾನಪದ ಮತ್ತು ಯಕ್ಷಗಾನ) ಕಾರ್ಯಕ್ರಮಗಳ ಸಂಯೋಜಕಿ ತಲ್ಲೂರು ಗಿರಿಜಾ ಶಿವರಾಮ ಶೆಟ್ಟಿ “ಲಯನ್ಸ್ ಅಂತರಾಷ್ಟ್ರೀಯ ಜಿಲ್ಲೆ 317ಸಿ ಮಹಿಳೆಯರ ಸಬಲೀಕರಣಕ್ಕೆ ಅತ್ಯುತ್ತಮ ವೇದಿಕೆಯಾಗಿದೆ. ಪ್ರಸ್ತುತ ಜಿಲ್ಲಾ ಗವರ್ನರ್ ಸಪ್ನಾ ಸುರೇಶ್ ಇವರ ನೇತೃತ್ವದಲ್ಲಿ ಸಂಸ್ಥೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ” ಎಂದು ಹೇಳಿದರು. ಲಯನ್ಸ್ ಅಂತರಾಷ್ಟ್ರೀಯ ಜಿಲ್ಲೆ 317ಸಿ ಇದರ ಜಿಲ್ಲಾ ಗವರ್ನರ್ ಸಪ್ನಾ ಸುರೇಶ್ ಇವರು ದೀಪ ಬೆಳಗಿಸುವ…

Read More

ಅರಗ : ತಾಲೂಕು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕನ್ನಡ ಸಾಹಿತ್ಯ ಪರಿಷತ್ತು ತೀರ್ಥಹಳ್ಳಿ ಹಾಗೂ ಸರ್ಕಾರಿ ಪ್ರೌಢ ಶಾಲೆ ಅರಗ ಇವರ ಸಹಯೋಗದಲ್ಲಿ ತೀರ್ಥಹಳ್ಳಿ ತಾಲೂಕು ಮಟ್ಟದ 9ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನವನ್ನು ದಿನಾಂಕ 23 ಡಿಸೆಂಬರ್ 2025ರಂದು ಬೆಳಗ್ಗೆ 9-30 ಗಂಟೆಗೆ ಅರಗ ಸರ್ಕಾರಿ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿದೆ. ಚಿಟ್ಟೆಬೈಲು ಪ್ರಜ್ಞಾ ಭಾರತಿ ಪ್ರೌಢ ಶಾಲೆಯ ಸಾದ್ವಿ ಎಸ್. ಪ್ರಭು ಇವರು ಈ ಸಮ್ಮೇಳನವನ್ನು ಉದ್ಘಾಟಿಸಲಿದ್ದು, ಅರಗ ಸರ್ಕಾರಿ ಪ್ರೌಢ ಶಾಲೆಯ ಜನ್ಯ ಡಿ.ಎಂ. ಇವರು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ.

Read More

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ನೇತೃತ್ವದಲ್ಲಿ ದಿನಾಂಕ 28 ಡಿಸೆಂಬರ್ 2025ರಂದು ಕೊಯ್ಯೂರಿನಲ್ಲಿ ನಡೆಯಲಿರುವ 19ನೇಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃ ತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ ಇವರು ಆಯ್ಕೆಯಾಗಿದ್ದಾರೆ. ಸಮ್ಮೇಳನ ಸಂಯೋಜನಾ ಸಮಿತಿ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಸಮಾಲೋಚನೆಯ ಬಳಿಕ ಕ.ಸಾ.ಪ. ತಾಲೂಕು ಅಧ್ಯಕ್ಷ ಡಿ. ಯದುಪತಿ ಗೌಡ ಸಮ್ಮೇಳನಾಧ್ಯಕ್ಷರ ಹೆಸರು ಘೋಷಿಸಿದರು. ಯಕ್ಷಗಾನ ಕಲಾ ಸಂಘಟನೆ, ಸಾಂಸ್ಕೃ ತಿಕ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಸೇವೆಯನ್ನು ಗುರುತಿಸಿ ಇವರನ್ನು ಆಯ್ಕೆಗೊಳಿಸಲಾಗಿದೆ. ಬಂಗ್ವಾಡಿಯ ಬಿ. ಪದ್ಮನಾಭ ಶೆಟ್ಟಿ ಮತ್ತು ಅನಂತಮತಿ ದಂಪತಿಯ ಪುತ್ರನಾಗಿ ಜನಿಸಿದ ಭುಜಬಲಿಯವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪಾರುಪತ್ಯಗಾರ, ಜಮಾ ಉಗ್ರಾಣದಲ್ಲಿ ಮುತ್ಸದ್ದಿಯಾಗಿ ವಿವಿಧ ಸ್ಥರಗಳಲ್ಲಿ 48 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಕಲಾಪ್ರೇಮಿಗಳಾಗಿ ಕಲಾವಿದರನ್ನು ಸಂಘಟಿಸಿ ಯಕ್ಷಗಾನ ಪ್ರಸಂಗ, ಜಿನಕಥೆ, ಹರಿಕಥೆ, ತಾಳಮದ್ದಳೆ, ಭಕ್ತಿಗೀತೆಗಳು,…

Read More

ಪೆರ್ಲ : ಸವಿ ಹೃದಯದ ಕವಿ ಮಿತ್ರರು ಪೆರ್ಲ ಇದರ ಆಶ್ರಯದಲ್ಲಿ ಕೃತಿ ಬಿಡುಗಡೆ ಹಾಗೂ ಕವಿಗೋಷ್ಠಿಯು ದಿನಾಂಕ 25 ಡಿಸೆಂಬರ್ 2025ರಂದು ಬೆಳಗ್ಗೆ 9-30 ಗಂಟೆಗೆ ಮಂಜೇಶ್ವರ ಗಿಳಿವಿಂಡುನಲ್ಲಿ ನಡೆಯಲಿದೆ. ಬೆಳಗ್ಗೆ 9-30ಕ್ಕೆ ಆರಂಭಗೊಳ್ಳುವ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ ಕೇರಳ ಘಟಕ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಉದ್ಘಾಟಿಸಲಿದ್ದು, ಸಾಹಿತಿ ಮಧುರಕಾನನ ಗಣಪತಿ ಭಟ್ ಅಧ್ಯಕ್ಷತೆ ವಹಿಸುವರು. ಸವಿಹೃದಯದ ಕವಿಮಿತ್ರರು ವೇದಿಕೆ ಪೆರ್ಲ ಇದರ ಸಂಚಾಲಕ ಸುಭಾಷ್ ಪೆರ್ಲ ಇವರು ಪ್ರಸ್ತಾವನೆಗೈವರು. ವಿಶ್ರಾಂತ ಪ್ರಾಧ್ಯಾಪಕ ಡಾ. ಪ್ರಮೀಳಾ ಮಾಧವ್ ಕೃತಿ ಬಿಡುಗಡೆಗೊಳಿಸಲಿದ್ದು, ಸಾಹಿತಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಕೃತಿ ಪರಿಚಯ ಮಾಡುವರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್ . ಸುಬ್ಬಯ್ಯಕಟ್ಟೆ ಗಿಳಿವಿಂಡು ಮಂಜೇಶ್ವರ ಇದರ ವ್ಯವಸ್ಥಾಪಕ ಉಮೇಶ್ ಸಾಲ್ಯಾನ್ ಅತಿಥಿಗಳಾಗಿರುವರು. ಬಳಿಕ ನಡೆಯುವ ಕವಿಗೋಷ್ಠಿಯಲ್ಲಿ ಶಿಕ್ಷಕಿ ಸುಶೀಲಾ ಪದ್ಯಾಣ ಇವರು ಅಧ್ಯಕ್ಷತೆ ವಹಿಸುವರು.

Read More