Subscribe to Updates
Get the latest creative news from FooBar about art, design and business.
Author: roovari
ಬೆಂಗಳೂರು : ಜನಸಂಸ್ಕೃತಿ ಪ್ರತಿಷ್ಠಾನ, ಬೆಂಗಳೂರು ಆರ್ಟ್ ಫೌಂಡೇಷನ್ ಮತ್ತು ಕಿರಂ ಪ್ರಕಾಶನ ಇವರ ಜಂಟಿ ಸಹಯೋಗದಲ್ಲಿ ದಿನಾಂಕ 07 ಆಗಸ್ಟ್ 2025ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡದ ಖ್ಯಾತ ವಿಮರ್ಶಕ ಪ್ರೊ. ಕಿ.ರಂ. ನಾಗರಾಜ ಇವರ ಸ್ಮರಣಾರ್ಥ 14ನೇ ವರ್ಷದ ‘ಅಹೋರಾತ್ರಿ ಕಾಡುವ ಕಿರಂ’ ಕಾರ್ಯಕ್ರಮ ಆಯೋಜನೆಗೊಂಡಿದೆ. ಕಾರ್ಯಕ್ರಮವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ. ಪುರುಷೋತ್ತಮ ಬಿಳಿಮಲೆ ಇವರು ಉದ್ಘಾಟಿಸಿ, ‘ಕಾಡುವ ಕಿರಂ ಹೊಸ ಕವಿತೆಗಳು 2025’ ಕೃತಿಯನ್ನು ಡಾ. ಎಂ.ಎಸ್. ಮೂರ್ತಿ ಬಿಡುಗಡೆ ಮಾಡಿದರು. ಕವಿಗೋಷ್ಠಿ, ಜನಪದ ಗಾಯನ ಮತ್ತು ಉಪನ್ಯಾಸಗಳೊಂದಿಗೆ ಸಾಧಕರಾದ ಎಂ. ಗೋಪಾಲ್ (ಜನಪರ ಹೋರಾಟ), ಡಾ. ಎಂ. ಉಷಾ (ಸ್ತ್ರೀವಾದ, ಸಾಹಿತ್ಯ), ಪ್ರೊ. ಎಂ.ಜಿ. ಚಂದ್ರಶೇಖರಯ್ಯ (ಸಾಹಿತ್ಯ), ಶ್ರೀನಿವಾಸ ನಟೇಕರ್ (ವೈಚಾರಿಕತೆ, ರಂಗಭೂಮಿ), ಡಾ. ಕೂಡ್ಲೂರು ವೆಂಕಟಪ್ಪ (ಸಾಹಿತ್ಯ, ಸಂಶೋಧನೆ) ಮತ್ತು ಟಿ. ನಾರಾಯಣ್ (ಚಿತ್ರಕಲೆ) ಇವರುಗಳಿಗೆ ‘ಕಿರಂ ಪುರಸ್ಕಾರ’ವನ್ನು ಪ್ರದಾನ ಮಾಡಲಾಯಿತು. ಪ್ರಸ್ತಾವನೆಗೈದ ಜನಸಂಸ್ಕೃತಿ ಪ್ರತಿಷ್ಠಾನದ ಅಧ್ಯಕ್ಷ, ಸಂಶೋಧಕ ಮತ್ತು ಪತ್ರಕರ್ತ…
ಸ್ವಾತಂತ್ರ್ಯ ಹೋರಾಟಗಾರರಾಗಿ, ಕರ್ನಾಟಕ ಏಕೀಕರಣದ ಮುಂದಾಳುವಾಗಿ, ಕನ್ನಡ ಕಾವ್ಯ ಪರಂಪರೆಯ ಪ್ರತಿನಿಧಿಯಾಗಿ, ರಾಷ್ಟ್ರ ಪ್ರಶಸ್ತಿ ವಿಜೇತ ಅಧ್ಯಾಪಕರಾಗಿ, ಕನ್ನಡಿಗರಿಗೆ ಹಿರಿಯಣ್ಣನಾಗಿ ಪ್ರೇರಣೆಯನ್ನು ನೀಡಿದ ಕಯ್ಯಾರ ಕಿಂಞಣ್ಣ ರೈಯವರು ಶತಮಾನ ಕಂಡ ಅಪರೂಪದ ಕವಿ. “ಇವರ ಕವನಗಳು ಪಾರಿವಾಳದ ಹಿಂಡಿನಂತೆ ರೂಪದಲ್ಲಿ ಮಾತ್ರ ಸಾಹಜಿಕವಾಗಿ ಭಿನ್ನವೇ ಹೊರತು ಧ್ವನಿಯಲ್ಲಿ ಏಕಪ್ರಕಾರವಾದ ಕಲಕಂಠ” ಎಂದು ಮಂಜೇಶ್ವರ ಗೋವಿಂದ ಪೈಗಳು ‘ಪುನರ್ನವ’ ಸಂಕಲನಕ್ಕೆ ಸಂಬಂಧಿಸಿ ಹೇಳಿದ ಮಾತುಗಳನ್ನು ಕಯ್ಯಾರರ ಒಟ್ಟು ಕವನಗಳಿಗೆ ಅನ್ವಯಿಸಹುದು. ‘ಶ್ರೀಮುಖ’, ‘ಐಕ್ಯಗಾನ’, ‘ಪುನರ್ನವ’, ‘ಚೇತನ’, ‘ಪಂಚಮಿ’, ‘ಕೊರಗ’, ‘ಗಂಧವತಿ’ ಎಂಬ ಆರು ಕವನ ಸಂಕಲನಗಳ ಜೊತೆಗೆ 111 ಕವನಗಳ ಸಂಕಲನ ‘ಶತಮಾನದ ಗಾನ’, ಅವುಗಳನ್ನು ಒಳಗೊಂಡ ‘ಪ್ರತಿಭಾ ಪಯಸ್ವಿನಿ’ಯೂ ಸೇರಿದಂತೆ ‘ಕುಮಾರನ್ ಆಶಾನ್ ಅವರ ಮೂರು ಕವಿತೆಗಳು’ (ಅನುವಾದ) ಮತ್ತು ‘ಮಕ್ಕಳ ಪದ್ಯ ಮಂಜರಿ ಭಾಗ 1 ಮತ್ತು ಭಾಗ 2’ ಎಂಬ ಕೃತಿಗಳು ಅವರ ಪ್ರತಿಭೆಗೆ ಸಾಕ್ಷಿಯಾಗಿವೆ. “ಆಗ ಕನ್ನಡದಲ್ಲಿ ನವೋದಯ ಸಾಹಿತ್ಯ ಕೃಷಿಯ ಕಾಲವಾಗಿತ್ತು. ನನ್ನ ಒಲವು ಆ…
ಮಂಗಳೂರು: ಯಕ್ಷಭವನ ಟ್ರಸ್ಟ್ ಆಕಾಶಭವನ ಮಂಜಲ್ಕಟ್ಟೆ ಕಾವೂರು ವತಿಯಿಂದ ಆಯೋಜಿಸಿದ ‘ಯಕ್ಷ ಮುಂಗಾರು’ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ದಿನಾಂಕ 03 ಆಗಸ್ಟ್ 2025ರ ಭಾನುವಾರದಂದು ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ್ ಭಟ್ ಕಾವೂರು ಮಾತನಾಡಿ “ಯುವ ಪೀಳಿಗೆಗೆ ಯಕ್ಷಗಾನ ತರಬೇತಿ ನೀಡಿ ಕಲೆಯನ್ನು ಬೆಳೆಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಯಕ್ಷಭವನ ಟ್ರಸ್ಟ್ ಕಾರ್ಯೋನ್ಮುಖವಾಗಿ ಎಳೆಯರಿಗೆ ತರಬೇತಿ ನೀಡುತ್ತಿರುವುದು ಶ್ಲಾಘನೀಯ” ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾವೂರು ಬಂಟರ ಸಂಘದ ಅಧ್ಯಕ್ಷರಾದ ಆನಂದ ಶೆಟ್ಟಿ ಅಡ್ಯಾರ್ ಮಾತನಾಡಿ “ಶಾಲಾ ಹಂತದಲ್ಲೇ ಮಕ್ಕಳನ್ನು ಯಕ್ಷಗಾನದತ್ತ ಆಕರ್ಷಿಸಲು ಪೋಷಕರು ಬೆಂಬಲ ನೀಡಬೇಕು” ಎಂದರು. ಇದೇ ಸಂದರ್ಭದಲ್ಲಿ ಯಕ್ಷಗಾನ ಕಲಾವಿದ ಡಿ. ಮನೋಹರ್ ಕುಮಾರ್ ಅವರಿಗೆ ‘ಯಕ್ಷ ಭವನ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಶ್ರೀ ದುರ್ಗಾಪರಮೇಶ್ವರಿ ಸೇವಾ ಸಮಿತಿಯ ಅಧ್ಯಕ್ಷ ಶಂಕರ ಶೆಟ್ಟಿ ನಂದನಕೆರೆ, ಕಾವೂರು ಬಂಟರ ಸಂಘದ…
ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಸ್ಕೂಲ್ ಆಫ್ ಸೋಶಿಯಲ್ ವರ್ಕ್ (ಸ್ವಾಯತ್ತ) ರೋಶನಿ ನಿಲಯ, ಮಂಗಳೂರು ಆಯೋಜಿಸುವ ‘ಅಕಾಡೆಮಿಡ್ ಒಂಜಿ ದಿನ – ಬಲೆ ತುಳು ಓದುಗ’ ಸ್ಕೂಲ್ ಆಫ್ ಸೋಶಿಯಲ್ ವರ್ಕ್ (ಸ್ವಾಯತ್ತ) ರೋಶನಿ ನಿಲಯದ ಕನ್ನಡ ವಿಭಾಗದ ವಿದ್ಯಾರ್ಥಿಗಳಿಂದ ಅಕಾಡೆಮಿ ಗ್ರಂಥಾಲಯಕ್ಕೆ ಭೇಟಿ ಹಾಗೂ ಅಧ್ಯಯನ ಕಾರ್ಯಕ್ರಮವು ದಿನಾಂಕ 09 ಆಗಸ್ಟ್ 2025ರ ಶನಿವಾರದಂದು ಬೆಳಿಗ್ಗೆ ಘಂಟೆ 10.00ಕ್ಕೆ ಮಂಗಳೂರಿನ ಉರ್ವಸ್ಟೋರ್ ನಲ್ಲಿರುವ ತುಳು ಭವನದ ಸಿರಿ ಚಾವಡಿಯಲ್ಲಿ ನಡೆಯಲಿದೆ. ಕರ್ನಾಟಕ ತುಳು ಸಾಹಿತ್ಯ ಆಕಾಡಮಿಯ ಅಧ್ಯಕ್ಷರಾದ ಶ್ರೀ ತಾರಾನಾಥ ಗಟ್ಟಿ ಕಾಪಿಕಾಡ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಹಿರಿಯ ಲೇಖಕಿ ಹಾಗೂ ವಿಶ್ರಾಂತ ಪ್ರಾಂಶುಪಾಲರಾದ ಶ್ರೀಮತಿ ಚಂದ್ರಕಲಾ ನಂದಾವರ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಾರ್ತಾ ಭಾರತಿ ದೈನಿಕದ ಹಿರಿಯ ವರದಿಗಾರ್ತಿಯಾದ ಶ್ರೀಮತಿ ಸತ್ಯ ಕೆ. ಹಾಗೂ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯ ಮಂಗಳೂರು ಇಲ್ಲಿನ ಕನ್ನಡ ವಿಭಾಗದ ಮುಖ್ಯಸ್ಥರಾದ…
ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ಆಶ್ರಯದಲ್ಲಿ ಆಯೋಜಿಸಿದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರ ಪುರಸ್ಕಾರ ಸಮಾರಂಭ ದಿನಾಂಕ 19 ಆಗಸ್ಟ್ 2025ರಂದು ಪೂರ್ವಾಹ್ನ ಹನ್ನೊಂದು ಗಂಟೆಗೆ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ ಎಂದು ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಶಶಿಕಾಂತ ಜೈನ್ ತಿಳಿಸಿದ್ದಾರೆ. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಚಲನಚಿತ್ರ ನಟ ದತ್ತಣ್ಣ ಪುರಸ್ಕಾರ ಪ್ರದಾನ ಮಡುವರು. ಚಲನಚಿತ್ರ ನಿರ್ದೇಶಕ ವಿ. ನಾಗೇಂದ್ರ ಪ್ರಸಾದ್ ‘ಜ್ಞಾನಪಥ ಮತ್ತು ಜ್ಞಾನರಥ’ ಎಂಬ ಎರಡು ಕೃತಿಗಳನ್ನು ಲೋಕಾರ್ಪಣೆಗೊಳಿಸಲಿರುವರು.
ಕಾಸರಗೋಡು : ಎಡನೀರು ಮಠದಲ್ಲಿ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಪಂಚಮ ಚಾತುರ್ಮಾಸ್ಯ ವ್ರತಾಚರಣೆ ವೇಳೆ ಬಡಗು ತಿಟ್ಟು ಯಕ್ಷಗಾನ ನಾಟ್ಯ ವಾಚ್ಯ ವೈಭವ ದಿನಾಂಕ 05 ಆಗಸ್ಟ್ 2025ರ ಮಂಗಳವಾರ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷತೂಣೀರ ಸಂಪ್ರತಿಷ್ಠಾನ ಕೋಟೂರು ಪ್ರಾಯೋಜಕತ್ವದಲ್ಲಿ ಗಯಚರಿತ್ರೆ – ಉಗ್ರಸೇನ ರುಚಿಮತಿ ಯಕ್ಷಗಾನ ಪ್ರದರ್ಶನ ಗೊಂಡಿತು. ರವೀಂದ್ರ ದೇವಾಡಿಗ ಕಮಲಶಿಲೆ, ಕಾರ್ತಿಕ ಚಿಟ್ಟಾಣಿ, ಸುಧೀರ ಉಳ್ಳೂರು ಇವರು ಮುಮ್ಮೇಳದಲ್ಲಿ ಗಮನ ಸೆಳೆದರು. ಇವರಿಗೆ ಹಿಮ್ಮೇಳದಲ್ಲಿ ಪ್ರಸನ್ನ ಭಟ್ ಬಾಳ್ಕಲ್, ಮದ್ದಳೆಯಲ್ಲಿ ಸುನೀಲ್ ಭಂಡಾರಿ ಕಡತೋಕ, ಚೆಂಡೆಯಲ್ಲಿ ನಯನ ಕುಮಾರ ನಿಟ್ಟೂರು ಉತ್ತಮ ಸಾಥ್ ನೀಡಿದರು. ನಂತರ ಶಿವಾನಿ ಕೂಡ್ಲು ಅವರಿಂದ ಕೇರಳ ನಡನಂ ನೃತ್ಯರೂಪಕ ನಡೆಯಿತು.
ಮಂಗಳೂರು : ನಾವೀನ್ಯತೆ (ಇನೋವೇಶನ್) ತಾರ್ಕಿಕ (ಸ್ಕಾಲ ಸ್ಟಿಕ್) ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಗೈದ ಮಕ್ಕಳಿಗೆ ಜಿಲ್ಲಾಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 5 ರಿಂದ 18 ವರ್ಷದೊಳಗಿನವರು ತಮ್ಮ ಸಾಧನೆಯನ್ನು ದೃಢೀಕರಿಸುವ ದಾಖಲೆಗಳೊಂದಿಗೆ ದಿನಾಂಕ 31 ಆಗಸ್ಟ್ 2025ರೊಳಗೆ ಅರ್ಜಿ ಸಲ್ಲಿಸಬೇಕು. ಜನನ-ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಲ್ಪಟ್ಟಿರಬೇಕು. ಈ ಹಿಂದಿನ ವರ್ಷಗಳಲ್ಲಿ ಜಿಲ್ಲಾಮಟ್ಟದ ಪ್ರಶಸ್ತಿ ಪಡೆದಮಕ್ಕಳಿಗೆ ಅವಕಾಶವಿಲ್ಲ. ಮಾಹಿತಿ ಅಥವಾ ಅರ್ಜಿ ನಮೂನೆಯನ್ನು ಬಿಜೈ ನಲ್ಲಿರುವ ಜಿಲ್ಲಾ ಸ್ತ್ರೀಶಕ್ತಿ ಭವನದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾ ಖೆಯ ಉಪನಿರ್ದೇಶಕರ ಕಚೇರಿ ಯಿಂದ ಪಡೆಯಬಹುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
ಕಾಸರಗೋಡು : ಕಾಸರಗೋಡು ಚಿನ್ಮಯ ವಿದ್ಯಾಲಯದಲ್ಲಿ ಎರಡು ದಿನಗಳ ಕಾಲ ನಡೆಯುವ ‘ಚಿನ್ಮಯ ಫೆಸ್ಟ್’ ಇದರ ಉದ್ಘಾಟನಾ ಸಮಾರಂಭವು ದಿನಾಂಕ 07 ಆಗಸ್ಟ್ 2025ರಂದು ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದ ಕೇರಳ ಚಿನ್ಮಯ ಮಿಷನ್ ಇದರ ಮುಖ್ಯಸ್ಥ ಹಾಗೂ ಕಾಸರಗೋಡು ಚಿನ್ಮಯ ವಿದ್ಯಾಲಯದ ಅಧ್ಯಕ್ಷರಾದ ಸ್ವಾಮಿ ವಿವಿಕ್ತಾನಂದ ಸರಸ್ವತಿ ಜೀ. ಮಾತನಾಡಿ “ಸ್ಪರ್ಧೆಗಳು ಆರೋಗ್ಯಕರವಾಗಿರಬೇಕು. ಪ್ರತಿಯೊಬ್ಬ ಸ್ಪರ್ಧಿಯೂ ತನ್ನೊಂದಿಗೆ ಮಾತ್ರ ಸ್ಪರ್ಧಿಸಬೇಕು” ಎಂದು ಸ್ವಾಮೀಜಿ ಅಭಿಪ್ರಾಯಪಟ್ಟರು. ಪ್ರಸಿದ್ಧ ಲೇಖಕಿ, ಜನತಾಂತ್ರಿಕ ಕಲಾ ಸಾಹಿತ್ಯ ವೇದಿಕೆಯ ಉಪಾಧ್ಯಕ್ಷೆ, ಮಾನವ ಹಕ್ಕುಗಳ ಸಂಘದ ರಾಜ್ಯ ಕಾರ್ಯದರ್ಶಿಯೂ ಆಗಿರುವ ಡಾ. ಎಂ. ವಿ. ಮುಂಥಾಸ್ ಮಾತನಾಡಿ “ಸಂಸ್ಕೃತಿಯ ಮೌಲ್ಯಗಳನ್ನು ಎತ್ತಿಹಿಡಿಯುವುದೇ ಕಲೆಯ ಉದ್ದೇಶ” ಎಂದರು. ವಿದ್ಯಾಲಯದ ಪ್ರಾಂಶುಪಾಲರಾದ ಟಿ. ವಿ. ಸುಕುಮಾರನ್ ವಿದ್ಯಾರ್ಥಿಗಳಿಗೆ ಶುಭಾಶಯವನ್ನು ಕೋರಿದರು. ಮುಖ್ಯೋಪಾಧ್ಯಾಯಿನಿಯರಾದ ಶ್ರೀಮತಿ ಪೂರ್ಣಿಮಾ ಎಸ್. ಆರ್., ಶ್ರೀಮತಿ ಸಿಂಧು ಶಶೀಂದ್ರನ್, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು, ಪೋಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ವಿದ್ಯಾರ್ಥಿಗಳಾದ ಶೃಕ ಸನತ್…
ಕೋಟ : ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಸ್ಥಾನದ ಆವರಣದ ಕೂಟ ಬಂಧು ಭವನದಲ್ಲಿ ಬರಹಗಾರ್ತಿ ವಾಣಿಶ್ರೀ ಅಶೋಕ್ ಐತಾಳ ಇವರ ನಾಲ್ಕು ಕಥಾಸಂಕಲನಗಳ ಅನಾವರಣ ಕಾರ್ಯಕ್ರಮವು ದಿನಾಂಕ 03 ಆಗಸ್ಟ್ 2025ರಂದು ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಸಾಹಿತಿ ಉಪೇಂದ್ರ ಸೋಮಯಾಜಿ ಮಾತನಾಡಿದರು. ‘ನಿನಗಾಗಿ ಹೇಳುವೆ ಕಥೆ ನೂರನು’ ಎಂಬ ಕಥಾಸಂಕಲನವನ್ನು ಹೊನ್ನಾವರದ ಸಹಶಿಕ್ಷಕ ಗಣೇಶ ಹೆಗಡೆ, ‘ಗೆಜ್ಜೆ’ ಕಥಾಸಂಕಲನವನ್ನು ಸುವ್ರತ ಅಡಿಗ, ‘ಹೆಜ್ಜೆ’ ಕಥಾಸಂಕಲನವನ್ನು ಸುಮನ ಹೇರಳೆ ಹಾಗೂ ‘ಹನಿ ಇಬ್ಬನಿ’ ಎಂಬ ಕಥಾ ಸಂಕಲನವನ್ನು ಮಂಜುನಾಥ ಮರವಂತೆ ಪರಿಚಯಿಸಿದರು. ಡಾ. ಟಿ.ಎಂ.ಎ. ವೈ ಮಹಾ ವಿದ್ಯಾಲಯದ ಸಮನ್ವಯಧಿಕಾರಿಗಳಾದ ಡಾ. ಮಹಾಬಲೇಶ್ವರ ರಾವ್, ಡಯಟ್ ಪ್ರಾಂಶುಪಾಲ ಡಾ. ಅಶೋಕ ಕಾಮತ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹಾಗೂ ನಿವೃತ್ತ ಶಿಕ್ಷಣಾಧಿಕಾರಿ ಸೀತಾರಾಮ ಶೆಟ್ಟಿಯವರು ಪುಸ್ತಕ ಅನಾವರಣಗೊಳಿಸಿದರು. ನಿವೃತ್ತ ಉಪನ್ಯಾಸಕಿ ಪಾರ್ವತಿ ಜಿ. ಐತಾಳ್, ಸಹಶಿಕ್ಷಕ ಸುರೇಶ ಮರಕಾಲ, ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಕೋಟ ಸಿ.ಎ. ಬ್ಯಾಂಕ್ ಪ್ರಬಂಧಕ…
ಧಾರವಾಡ ಬೇಂದ್ರೆಯವರಷ್ಟು ಶ್ರಾವಣವನ್ನು ಕಂಡರಸಿದ ಕವಿ ಕನ್ನಡದಲ್ಲಿ ಮತ್ತೊಬ್ಬರಿಲ್ಲ. ಆ ಕಾರಣದಿಂದಲೇ, ಅಡಿಗರು ಬೇಂದ್ರೆಯನ್ನು ಶ್ರಾವಣ ಪ್ರತಿಭೆ ಎಂದದ್ದು. ಬೇಂದ್ರೆಯ ಪಾಲಿಗೆ ಶ್ರಾವಣ ಬರಿ ಮಾಸವಲ್ಲ. ಅದೊಂದು ಋತುವಿಲಾಸ. ಹುಟ್ಟಿನ ಗುಟ್ಟು ಕಂಡುಕೊಂಡ ಅನುಭವ, ಸೋಜಿಗ ಮತ್ತು ಸೌಂದರ್ಯ. ಶ್ರಾವಣ ಬೇಂದ್ರೆಯವರಿಗೆ ಮೆಚ್ಚಾದ ಬಗೆಗೆ ಅವರ ಮಾತುಗಳಲ್ಲೇ ಹೇಳುವುದಾದರೆ, “ನನ್ನ ಬಾಳುವೆಯದೊಂದು ಶ್ರಾವಣದ ಹಗಲು. ಶ್ರಾವಣ ನನಗೆ ಹೊಸತನವನ್ನು ತರುತ್ತದೆ”. ಈ ಹೊಸತನ- ಶ್ರಾವಣದ ವೈಭವ, ಶ್ರಾವಣ, ಮತ್ತೆ ಶ್ರಾವಣ, ಮತ್ತೆ ಶ್ರಾವಣಾ ಬಂದ, ಶ್ರಾವಣದ ಹಗಲು, ನಾದಲೀಲೆಯ ಶ್ರಾವಣ, ಹಾಡುಪಾಡಿನ ಶ್ರಾವಣ, ಬಂದಿಕಾರ ಶ್ರಾವಣ, ಪ್ರತಿವರ್ಷದಂತೆ ಬಂತು ಶ್ರಾವಣ ಕವಿತೆಗಳಲ್ಲೂ ಇದೆ. ಧಾರವಾಡದ ಜಿ. ಬಿ. ಮೆಮೋರಿಯಲ್ ಟ್ರಸ್ಟ್ ನಗರದ ಇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ “ಶ್ರಾವಣದ ಕವಿ ಬೇಂದ್ರೆ” ಎಂಬ ವಿಶಿಷ್ಟ ಕಾರ್ಯಕ್ರಮವನ್ನು ದಿನಾಂಕ 22 ಆಗಸ್ಟ್ 2025ರ ಶುಕ್ರವಾರದಂದು ಹಮ್ಮಿಕೊಳ್ಳಲು ನಿಶ್ಚಯಿಸಿದೆ. ಈ ಕಾರ್ಯಕ್ರಮ ಮುಖ್ಯ ಉದ್ದೇಶ ಯುವಕರಿಗಾಗಿ, ಯುವಕರಲ್ಲಿ ಬೇಂದ್ರೆ ಸಾಹಿತ್ಯದ ಅಭಿರುಚಿಯನ್ನು ಬೆಳೆಸುವದು. ಇದರಲ್ಲಿ…