Author: roovari

ಕಲಬುರಗಿ : ವಿಶ್ವರಂಗ ನಾಟಕ ಮತ್ತು ನೃತ್ಯ ಸೇವಾ ಸಂಘ (ರಿ.) ಕಲಬುರಗಿ ಇದರ 15ನೇ ವರ್ಷದ ರಂಗಸಂಭ್ರಮದ ಪ್ರಯುಕ್ತ ‘ರಂಗ ವೈಭವ’ ಕಾರ್ಯಕ್ರಮವನ್ನು ದಿನಾಂಕ 31 ಆಗಸ್ಟ್ 2024ರಂದು ಸಂಜೆ 6-00 ಗಂಟೆಗೆ ಕಲಬುರಗಿಯ ಡಾ. ಎಸ್.ಎಂ. ಪಂಡಿತ ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ. ವಿಶ್ವರಂಗದ ಅಧ್ಯಕ್ಷರಾದ ಶ್ರೀಮತಿ ನೀತಾ ಪಾಟೇಲ್ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ರಂಗಾಯಣದ ನೂತನ ನಿರ್ದೇಶಕರಾದ ಡಾ. ಸುಜಾತ ಜಂಗಮ ಶೆಟ್ಟಿ ಇವರು ಉದ್ಘಾಟನೆ ಮಾಡಲಿರುವರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ‘ವಿಶ್ವರಂಗ ಗೌರವ ಪುರಸ್ಕಾರ’ ನೀಡಿ ಸನ್ಮಾನಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಚಿಕ್ಕಮಗಳೂರಿನ ಎನ್.ಆರ್. ಪುರದ ರಾಗ ಮಯೂರಿ ಅಕಾಡೆಮಿಯ ಶ್ರೀ ಗಣನಾಥ ಚಂದ್ರಚೂಡ ಇವರಿಂದ ಭಕ್ತಿ ಪ್ರಧಾನ ನೃತ್ಯಗಳು ಹಾಗೂ ತಂಡದವರಿಂದ ಬಾಂಗ್ರಾ – ಪಂಜಾಬಿ, ಬಂಜಾರ – ಲಂಬಾಣಿ, ಕರಗ – ತಮಿಳ್ನಾಡು, ಕಂಗಿಲೋ – ತುಳು ನಾಡು ನೃತ್ಯ, ಪುರುಳಿಯೋ ಚ್ಟಾವು – ವೆಸ್ಟ್ ಬೆಂಗಾಲ್ ಲಯನ್ ಡಾನ್ಸ್…

Read More

ಕಾಸರಗೋಡು : ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ಆಯೋಜಿಸಿದ ಎರಡು ದಿನಗಳ ತೆಂಕುತಿಟ್ಟು ಯಕ್ಷ ಮಾರ್ಗ- ಶಿಬಿರ- ಯಕ್ಷಗಾನ ಪ್ರದರ್ಶನದ ಸಮಾರೋಪ ಸಮಾರಂಭವು 25 ಆಗಸ್ಟ್ 2024ರಂದು ಗಡಿನಾಡು ಕಾಸರಗೋಡು ಇಲ್ಲಿನ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ನಡೆಯಿತು. 50ಕ್ಕೂ ಹೆಚ್ಚು ಶಿಬಿರಾರ್ಥಿಗಳಿಗೆ ತೆಂಕುತಿಟ್ಟಿನ ಶಾಸ್ತ್ರೀಯ ನಾಟ್ಯ ಗುರುಗಳಾದ ಕರ್ಗಲ್ಲು ವಿಶ್ವೇಶ್ವರ ಭಟ್ ಎರಡು ದಿನಗಳ ಕಾಲ ಪ್ರಾತ್ಯಕ್ಷಿಕೆಗಳನ್ನು ನಡೆಸಿಕೊಟ್ಟರು. ಯಕ್ಷಗಾನದ ಸಭಾ ವಂದನೆ, ಸಭಾ ಕಲಸು ಹಾಗೂ ತ್ತಿತ್ತಿತೈ ನಾಟ್ಯ ಕುಣಿತ ಮುಂತಾದವುಗಳ ಕುರಿತಾಗಿ ಮಾರ್ಗದರ್ಶನ ನೀಡಿ, ವಿದ್ಯಾರ್ಥಿಗಳನ್ನು ಪ್ರಾತ್ಯಕ್ಷಿಕೆಯಲ್ಲಿ ತೊಡಗಿಸಿಕೊಂಡರು. ಸಮಾರೋಪ ಸಮಾರಂಭಕ್ಕೆ ಮೊದಲು ಸಿರಿಬಾಗಿಲು ವೆಂಕಪ್ಪಯ್ಯ ಪ್ರಶಸ್ತಿಯನ್ನು ಯಕ್ಷಗಾನ ವಿದ್ವಾಂಸ, ಪ್ರಸಂಗ ಕರ್ತ, ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತರಾದ ಶ್ರೀಧರ ಡಿ. ಎಸ್. ಇವರಿಗೆ ನೀಡಿ ಗೌರವಿಸಲಾಯಿತು. ಸದಸ್ಯತ್ವ ನೋಂದಾವಣಾ ಅಭಿಯಾನದ ಅಂಗವಾಗಿ ಯಚ್. ಕೃಷ್ಣ ಭಟ್ ಮಂಗಳೂರು ಇವರಿಗೆ ‘ಪೋಷಕರ ಗೌರವ’ ಪುರಸ್ಕಾರ ನೀಡಲಾಯಿತು. ಸಮಾರೋಪ ಸಮಾರಂಭದಲ್ಲಿ ಮುಖ್ಯ…

Read More

ಆಧುನಿಕ ಯುಗದಲ್ಲಿ ಧಾವಂತದ ಬದುಕಿನೊಂದಿಗೆ ಧಾವಿಸುತ್ತಿರುವಾಗ ವೃತ್ತಿ ಜೊತೆಗೆ ಹವ್ಯಾಸಗಳ ಕಡೆಗೆ ಗಮನ ಹರಿಸುವುದನ್ನೇ ಮರೆತು ಬಿಡುತ್ತೇವೆ. ಅಂತಹ ಹವ್ಯಾಸವನ್ನು ಜೀವಂತವಾಗಿರಿಸಿಕೊಂಡು ವೃತ್ತಿ ಜತೆಗೆ ಪ್ರವೃತ್ತಿಯನ್ನು ಜತನದಿಂದ ಬೆಳೆಸಿಕೊಂಡು ಬರುತ್ತಿರುವ ಕಲಾವಿದ ವಿದ್ವಾನ್ ಗಣೇಶ ಭಟ್ಟ ಸುಂಕಸಾಳ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸುಂಕಸಾಳದಲ್ಲಿ 08.02.1995 ರಂದು ಲಕ್ಮ್ಷೀ ಮತ್ತು ಸತ್ಯನಾರಾಯಣ ಭಟ್ಟ ಇವರ ಮಗನಾಗಿ ಜನನ. (ಅಲಂಕಾರ ಶಾಸ್ತ್ರದಲ್ಲಿ ವಿದ್ವತ್) ಎಂ. ಎ, ಬಿ. ಎಡ್ ಇವರ ವಿದ್ಯಾಭ್ಯಾಸ. ನಾನು ತಾಳಮದ್ದಳೆಯ ಅರ್ಥಧಾರಿ ಅಷ್ಟೆ.‌ ಹೆಜ್ಜೆಯಾಗಲಿ – ಹಿಮ್ಮೇಳದ ಯಾವುದೇ ವಿಭಾಗವೂ ಗೊತ್ತಿಲ್ಲ. ಆದರೆ ನನ್ನಲ್ಲಿ ಒಬ್ಬ ಅರ್ಥಧಾರಿಯನ್ನು ಗುರುತಿಸಿ, ಮೊದಲು ಅವಕಾಶ ಕೊಟ್ಟವರು ಖ್ಯಾತ ಅರ್ಥಧಾರಿಗಳಾದ ಜಬ್ಬಾರ್ ಸಮೋ ಇವರು. ನಂತರ ರಾಧಾಕೃಷ್ಣ ಕಲ್ಚಾರರು, ರಂಗಾಭಟ್ಟರು, ಸಂಕದಗುಂಡಿಯವರು, ಅಜಿತ್ ಕಾರಂತರೇ ಆದಿಯಾಗಿ ಅನೇಕ ಹಿರಿಯ ಕಲಾವಿದರು ಪ್ರತ್ಯಕ್ಷವಾಗಿ, ಪರೋಕ್ಷವಾಗಿ ನನ್ನನ್ನು ತಿದ್ದಿದ್ದಾರೆ. ಹಾಗಾಗಿ ಹಿರಿಯ ಕಲಾವಿದರನೇಕರು ನನ್ನ ಗುರುಗಳೇ. ಬಾಲ್ಯದಲ್ಲಿ ಓದಿದ ಏ.ಆರ್ ಕೃಷ್ಣಶಾಸ್ತ್ರಿಗಳ ವಚನಭಾರತ ಪುಸ್ತಕ…

Read More

ಉಪ್ಪಿನಂಗಡಿ : ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಉಪ್ಪಿನಂಗಡಿ ಹೋಬಳಿ ಘಟಕ ಇದರ ವತಿಯಿಂದ ‘ಗಮಕ ಸೌರಭ’ ಕಾರ್ಯಕ್ರಮವು ದಿನಾಂಕ 31 ಆಗಸ್ಟ್ 2024ರಂದು ಮಧ್ಯಾಹ್ನ 2-30 ಗಂಟೆಗೆ ಉಪ್ಪಿನಂಗಡಿ ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ ಉಪ್ಪಿನಂಗಡಿ ಹೋಬಳಿ ಘಟಕದ ಅಧ್ಯಕ್ಷರಾದ ಶ್ರೀ ಕರುಣಾಕರ ಸುವರ್ಣ ಇವರು ಈ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಲಿದ್ದು, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಇದರ ಅಧ್ಯಕ್ಷರಾದ ಶ್ರೀ ಉಮೇಶ್ ನಾಯಕ್ ಇವರು ಉದ್ಘಾಟನೆ ಮಾಡಲಿದ್ದಾರೆ. ಗಮಕ ಕಲಾವಿದರಾದ ಶ್ರೀ ಗಣಪತಿ ಪದ್ಯಾಣ ಇವರು ಗಮಕ ವಾಚನ ಮಾಡಲಿದ್ದು, ಖ್ಯಾತ ಪ್ರವಚನಕಾರರಾದ ಶ್ರೀ ಮುಳಿಯ ಶಂಕರ್ ಭಟ್ ಇವರು ಗಮಕ ವ್ಯಾಖ್ಯಾನ ನೀಡಲಿದ್ದಾರೆ.

Read More

ಉಡುಪಿ : ರಂಜನಿ ಮೆಮೋರಿಯಲ್ ಟ್ರಸ್ಟ್ ಉಡುಪಿ ಇದರ ವತಿಯಿಂದ ‘ವಾರ್ಷಿಕ ಸಂಗೀತ ಉತ್ಸವ 2024’ವನ್ನು ದಿನಾಂಕ 01-09-2024ರಿಂದ 09-09-2024ರವರೆಗೆ ಉಡುಪಿಯ ಯಕ್ಷಗಾನ ಕಲಾರಂಗ ಇನ್ಫೋಸಿಸ್ ಹಾಲ್ ಇಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 01 ಸೆಪ್ಟೆಂಬರ್ 2024ರಂದು ಬೆಳಗ್ಗೆ 10-00 ಗಂಟೆಗೆ ನಾಗೇಶ್ ಬಪ್ಪನಾಡು ಮತ್ತು ತಂಡದವರಿಂದ ನಾಗಸ್ವರ ವಾದನ ಹಾಗೂ ಡಾ. ಬಿಂದಾ ಪಾರಂಜಪೆ ಇವರಿಂದ ತವೈಪ್ ಮತ್ತು ದೇವದಾಸಿಯವರು ಕಲೆಗೆ ನೀಡಿದ ಕೊಡುಗೆಗಳು ಎಂಬ ವಿಷಯದ ಬಗ್ಗೆ ಮಾತುಕತೆ ನಡೆಯಲಿದೆ. ಸಂಜೆ 5-00 ಗಂಟೆಗೆ ಉದ್ಘಾಟನೆ ಹಾಗೂ ರಮಣ ಬಾಲಚಂದ್ರನ್ ಮತ್ತು ಅನಂತ ಆರ್. ಕೃಷ್ಣನ್ ಇವರಿಂದ ವೀಣಾ ವಾದನ, ದಿನಾಂಕ 02 ಸೆಪ್ಟೆಂಬರ್ 2024ರಂದು ಚಾರುಮತಿ ರಘುರಾಮನ್ ಮತ್ತು ಅನಂತ ಆರ್. ಕೃಷ್ಣನ್ ಇವರಿಂದ ವಯೋಲಿನ್ ವಾದನ, ದಿನಾಂಕ 03 ಸೆಪ್ಟೆಂಬರ್ 2024ರಂದು ಸ್ಪೂರ್ತಿ ರಾವ್, ಸಿ.ಎಸ್. ಚಿನ್ಮಯಿ, ಅನೂರ್ ವಿನೋದ್ ಶ್ಯಾಮ್ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ, ದಿನಾಂಕ 04 ಸೆಪ್ಟೆಂಬರ್ 2024ರಂದು ಪಾಲ್ ಘಾಟ್…

Read More

ಸಿಂಧನೂರು : ಸಮುದಾಯ ಸಿಂಧನೂರು ಘಟಕದಿಂದ ದಿನಾಂಕ 24-08-2024ರಿಂದ 26-08-2024ರವೆರೆಗೆ ಮೂರು ದಿನಗಳ ಕಾಲ ಸಿಂಧನೂರು ಟೌನ್ ಹಾಲ್ ನಲ್ಲಿ ‘ಸಮುದಾಯ ನಾಟಕೋತ್ಸವ’ವನ್ನು ಹಮ್ಮಿಕೊಳ್ಳಲಾಗಿತ್ತು. ಮೂರು ದಿನಗಳಲ್ಲಿ ನಡೆದ ನಾಟಕಗಳ ಪ್ರದರ್ಶನಕ್ಕೆ ಪ್ರೇಕ್ಷಕರು ಉತ್ಸಾಹಭರಿತರಾಗಿ ಆಗಮಿಸಿ, ನಾಟಕ ವೀಕ್ಷಣೆ ಮಾಡಿದ್ದು, ಪ್ರತಿ ದಿನವು ಟೌನ್ ಹಾಲ್ ತುಂಬಿತ್ತು. ದಿನಾಂಕ 24 ಆಗಸ್ಟ್ 2024ರಂದು ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಮುದಾಯ ಕರ್ನಾಟಕದ ರಾಜ್ಯ ಕಾರ್ಯದರ್ಶಿ ಮನೋಜ್ ವಾಮಂಜೂರು ಇವರು ನಾಟಕೋತ್ಸವವನ್ನು ಉದ್ಘಾಟಿಸಿ ಮಾತನಾಡಿ “ಸಮಾಜದಲ್ಲಿ ಬೇರೂರಿದ ಮೂಡನಂಬಿಕೆ, ಅಸಮಾನತೆ, ವೈಷಮ್ಯಗಳನ್ನು ತೊಲಗಿಸಿ ಜನರ ಬದಕನ್ನು ಸುಂದರಗೊಳಿಸುವ ಉದ್ದೇಶದಿಂದ ಸಮುದಾಯ ಸಾಂಸ್ಕೃತಿಕ ಸಂಘಟನೆ ಕಳೆದ 50 ವರ್ಷಗಳಿಂದ ಪ್ರಯತ್ನಿಸುತ್ತಿದೆ. ಸಮಾಜದ ಪ್ರತಿಬಿಂಬ ನಾಟಕ ಎನ್ನುವ ವಾಸ್ತವತೆಯನ್ನು ಸಮುದಾಯ ಮನಗಂಡಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅತಿಥಿಗಳಾಗಿ ಆಗಮಿಸಿದ ರಾಯಚೂರು ಸಮುದಾಯದ ವಿ.ಎನ್. ಅಕ್ಕಿ ಮಾತನಾಡಿ “ಸಮುದಾಯ ಸಂಘಟನೆ ಅರ್ಧ ಶತಮಾನದಿಂದ ರಾಜ್ಯದ ಸಾಂಸ್ಕೃತಿಕ ಲೋಕದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ನಿರಂತರ ಪ್ರಯತ್ನಸಿದೆ” ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು…

Read More

ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಹಾಗೂ ನಾರಾಯಣ ಗುರು ಸಮೂಹ ಶಿಕ್ಷಣ ಸಂಸ್ಥೆ ಕಾಟಿಪಳ್ಳ ಇದರ ವತಿಯಿಂದ 102ನೆಯ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’ವನ್ನು ದಿನಾಂಕ 31 ಆಗಸ್ಟ್ 2024ರಂದು ಮಧ್ಯಾಹ್ನ 2-30 ಗಂಟೆಗೆ ಕಾಟಿಪಳ್ಳದ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಕಾಟಿಪಳ್ಳದ ಬಿ.ಎನ್.ಜಿ. ಟ್ರಸ್ಟ್ ಇದರ ಆಡಳಿತ ಅಧಿಕಾರಿ ಡಾ. ಗಣೇಶ್ ಅಮೀನ್ ಸಂಕಮಾರ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ನಾರಾಯಣ ಗುರು ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪಿ. ದಯಾಕರ್ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಸುರತ್ಕಲ್ ಗೋವಿಂದದಾಸ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೃಷ್ಣಮೂರ್ತಿ, ಅತ್ತಾವರದ ಮಧುಸೂದನ ಕುಶೆ ಶಾಲೆಯ ಪ್ರಾಂಶುಪಾಲರಾದ ಬಿಂದುಸಾರ ಶೆಟ್ಟಿ ಮತ್ತು ಕೆನರಾ ಕಾಲೇಜಿನ ಉಪನ್ಯಾಸಕಿಯಾದ ಶೈಲಜಾ ಪುದುಕೋಳಿ ಇವರುಗಳು ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಭಾಗವಹಿಸಲಿರುವರು.

Read More

ಕಾಸರಗೋಡು : ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನವು ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಸಹಕಾರದೊಂದಿಗೆ ಆಯೋಜಿಸಿದ ಎರಡು ದಿನಗಳ ತೆಂಕುತಿಟ್ಟು ‘ಯಕ್ಷಮಾರ್ಗ ಶಿಬಿರ ಹಾಗೂ ಯಕ್ಷಗಾನ ಪ್ರದರ್ಶನ’ದ ಉದ್ಘಾಟನಾ ಸಮಾರಂಭವು 24 ಆಗಸ್ಟ್ 2024ರ ಶನಿವಾರದಂದು ಸಿರಿಬಾಗಿಲು ಸಾಂಸ್ಕೃತಿಕ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಮಾತನಾಡಿ “ಯಕ್ಷಗಾನದಿಂದ ಭಕ್ತಿಯ ಚಿಂತನೆ ಬರುತ್ತದೆ ಮತ್ತು ಅದು ಜನರಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುತ್ತದೆ.” ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ “ಶತಮಾನಗಳಿಂದ ಆರಾಧನಾ ಕಲೆಯಾಗಿ ಬೆಳೆದು ಬಂದ ಯಕ್ಷಗಾನ ಪ್ರೇಕ್ಷಕರ ಮನ ತಣಿಸುವ ಕಲೆಯಾಗಿದೆ. ಇಂತಹ ಕಲೆಯನ್ನು ಉಳಿಸಿ ಬೆಳೆಸಲು ಯಕ್ಷಗಾನ ಅಕಾಡೆಮಿ ನಿರಂತರವಾಗಿ ಪ್ರಯತ್ನಿಸುತ್ತಲೇ ಬಂದಿದೆ. ಯಕ್ಷಗಾನ ಕಲೆಯನ್ನು ಹೊಸ ತಲೆಮಾರಿಗೆ ಹಸ್ತಾಂತರಿಸುವ ಉದ್ದೇಶವಿರಿಸಿಕೊಂಡು ಅಕಾಡೆಮಿ ಮಕ್ಕಳ ಯಕ್ಷಗಾನಕ್ಕೆ ಹೆಚ್ಚಿನ ಒತ್ತು ನೀಡಿದೆ.” ಎಂದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಂಜೇಶ್ವರದ ಶಾಸಕ ಎ. ಕೆ.…

Read More

ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ತಿಂಗಳ ಸರಣಿ ತಾಳಮದ್ದಳೆಯ ಪ್ರಯುಕ್ತ ಧ್ವಜಪುರ ನಾಗಪ್ಪಯ್ಯ ವಿರಚಿತ ‘ಸೌಗಂಧಿಕಾ ಪುಷ್ಪ ಹರಣ’ ಎಂಬ ಯಕ್ಷಗಾನ ತಾಳಮದ್ದಳೆಯ ದಿನಾಂಕ 27 ಆಗಸ್ಟ್ 2024ರಂದು ಬನ್ನೂರು ಭಾರತೀ ನಗರದ ಬಲಮುರಿ ಶ್ರೀವಿದ್ಯಾ ಗಣಪತಿ ದೇವಸ್ಥಾನದಲ್ಲಿ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಕುಸುಮಾಕರ ಆಚಾರ್ಯ ಆಲಂಕಾರು ಹಾಗೂ ಚೆಂಡೆ, ಮದ್ದಳೆಗಳಲ್ಲಿ ಪದ್ಯಾಣ ಶಂಕರನಾರಾಯಣ ಭಟ್ ಮತ್ತು ಅಚ್ಯುತ ಪಾಂಗಣ್ಣಾಯ ಕೋಡಿಬೈಲು ಸಹಕರಿಸಿದರು. ಮುಮ್ಮೇಳದಲ್ಲಿ ಪೂಕಳ ಲಕ್ಷ್ಮೀನಾರಾಯಣ ಭಟ್ (ಭೀಮ), ಗುಡ್ಡಪ್ಪ ಬಲ್ಯ (ಹನೂಮಂತ), ಭಾಸ್ಕರ ಬಾರ್ಯ (ದ್ರೌಪದಿ), ವಿ.ಕೆ. ಶರ್ಮ (ಧರ್ಮರಾಯ), ದುಗ್ಗಪ್ಪ ನಡುಗಲ್ಲು (ಕುಬೇರ), ಅಚ್ಯುತ ಪಾಂಗಣ್ಣಾಯ (ಮಂತ್ರಿ) ಸಹಕರಿಸಿದರು. ಬಡೆಕ್ಕಿಲ ಚಂದ್ರಶೇಖರ ಭಟ್ ಸ್ವಾಗತಿಸಿ, ವಂದಿಸಿದರು. ಪುಳು ಈಶ್ವರ ಭಟ್ ಸೇವಾಕರ್ತರಾಗಿ ಸಹಕರಿಸಿದರು.

Read More

ಅರಸಿನಮಕ್ಕಿ: ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕ ಮತ್ತು ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯ ಆಶ್ರಯದಲ್ಲಿ ಮಕ್ಕಳಿಗೆ ಸಾಹಿತ್ಯ ಪ್ರೇರಣೆ ಕಾರ್ಯಕ್ರಮ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಕೊಕ್ಕಡ ಹೋಬಳಿ ಘಟಕದ ರಚನಾ ಪ್ರಕ್ರಿಯೆಗೆ ಚಾಲನೆ ಕಾರ್ಯಕ್ರಮವು 23 ಆಗಸ್ಟ್ 2024ರಂದು ನಡೆಯಿತು. ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ. ಯದುಪತಿ ಗೌಡ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಈ ಕಾರ್ಯಕ್ರಮವನ್ನು ಹಿರಿಯ ಸಹಕಾರಿಗಳು ಹಾಗೂ ಸಾಹಿತ್ಯ ಸಾಂಸ್ಕೃತಿಕ ಸಂಘಟಕರಾದ ಶ್ರೀಕರ ರಾವ್ ಅಡ್ಕಾರಿ ಇವರು  ದೀಪ ಬೆಳಗಿಸಿ ಚಾಲನೆ ನೀಡಿ “ಅರಸಿನಮಕ್ಕಿಯಂತಹ ಹಳ್ಳಿ ಪ್ರದೇಶದಲ್ಲಿ ಸಾಹಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಿರಂತರ ನಡೆಯಲಿ.” ಎಂದು ಶುಭಹಾರೈಸಿದರು. ಮುಖ್ಯ ಅತಿಥಗಳಾಗಿ ಆಗಮಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ದ. ಕ. ಜಿಲ್ಲಾಧ್ಯಕ್ಷ ಡಾ. ಎಂ. ಪಿ. ಶ್ರೀನಾಥ್ ಮಾತನಾಡಿ  “ಅರಸಿನಮಕ್ಕಿಯಲ್ಲಿ ಈ ದಿನ ಚಾಲನೆ ನೀಡುವ ಸಾಹಿತ್ಯ ಪರಿಷತ್ತಿನ ಹೋಬಳಿ ಘಟಕವು ಊರಿನ ಮತ್ತು ಶಾಲಾ ಮಕ್ಕಳ ಸಾಹಿತ್ಯ ಪ್ರತಿಭೆಗೆ ವೇದಿಕೆಯಾಗಲಿ. ಸಾಹಿತ್ಯಿಕ…

Read More