Subscribe to Updates
Get the latest creative news from FooBar about art, design and business.
Author: roovari
ವರಕವಿ ಎಂದೇ ಪ್ರಸಿದ್ಧರಾದ ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು 20ನೇ ಶತಮಾನದ ಕನ್ನಡದ ಖ್ಯಾತ ಕವಿ ಮತ್ತು ಕಾದಂಬರಿಕಾರರು. ಸಾಮಾನ್ಯವಾಗಿ ಇವರ ಹೆಸರನ್ನು ದ. ರಾ. ಬೇಂದ್ರೆ ಅಥವಾ ಬೇಂದ್ರೆ ಎಂದೇ ಕರೆಯುವುದು ವಾಡಿಕೆ. ಆದರೆ ‘ಅಂಬಿಕಾತನಯದತ್ತ’, ‘ದತ್ತ ರಾಮ ಬೇಂದ್ರೆ’, ‘ಸದಾನಂದ ಜಂಗಮ’, ‘ಬೆಂ. ದ. ರಾ’, ‘ಬೆಂದರೇ’ ಹೀಗೆ ಬೇರೆ ಬೇರೆ ಕಾವ್ಯನಾಮಗಳಿಂದಲೂ ಇವರು ಸಾಹಿತ್ಯ ರಚನೆ ಮಾಡಿದ್ದಾರೆ. ರಾಮಚಂದ್ರ ಭಟ್ಟ ಮತ್ತು ಪಾರ್ವತಿ ಬಾಯಿ ದಂಪತಿಯ ಹಿರಿಯ ಮಗನಾದ ಬೇಂದ್ರೆಯವರು ಚಿತ್ಪಾವನ ಕುಟುಂಬದಲ್ಲಿ 31 ಜನವರಿ 1896 ರಂದು ಧಾರವಾಡದಲ್ಲಿ ಜನಿಸಿದರು. ರಾಮಚಂದ್ರ ಭಟ್ಟರ ಅಜ್ಜ, ಅಪ್ಪಾ ಶಾಸ್ತ್ರಿಯವರು ವೈದಿಕ ವಿದ್ವಾಂಸರಾಗಿದ್ದು ಮರಾಠಿಯಲ್ಲಿ ಹಲವಾರು ಕೀರ್ತನೆಗಳನ್ನು ರಚಿಸಿದ್ದಾರೆ. ಬೇಂದ್ರೆಯವರ ತಂದೆಯವರೂ ಸಂಸ್ಕೃತ ವಿದ್ವಾಂಸರಾಗಿದ್ದು, ಬೇಂದ್ರೆಯವರ 12ನೇ ವರ್ಷ ವಯಸ್ಸಿನಲ್ಲಿ ತೀರಿಕೊಂಡರು. ಆದ್ದರಿಂದ ತಾಯಿ ಮತ್ತು ಅಜ್ಜಿಯ ಆಶ್ರಯದಲ್ಲಿ ಬೇಂದ್ರೆಯವರು ಬೆಳೆಯಬೇಕಾಯಿತು. ತನ್ನ ಪ್ರಾರಂಭಿಕ ಶಿಕ್ಷಣವನ್ನು ಹುಟ್ಟೂರಾದ ಧಾರವಾಡದಲ್ಲಿ ಪೂರೈಸಿದ ಬೇಂದ್ರೆಯವರು ಮುಂದಿನ ವಿದ್ಯಾಭ್ಯಾಸಕ್ಕಾಗಿ 1913ರಲ್ಲಿ ಪುಣೆಯ ‘ಫರ್ಗುಸನ್’ ಕಾಲೇಜಿಗೆ…
ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಸಂತ ಎಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯವು ಜಂಟಿಯಾಗಿ ಆಯೋಜಿಸಿದ ‘ಗಾಂಧಿ ಸ್ಮೃತಿ’ ಕಾರ್ಯಕ್ರಮವು ದಿನಾಂಕ 30 ಜನವರಿ 2025 ರಂದು ಮಂಗಳೂರಿನ ಸಂತ ಎಲೋಶಿಯಸ್ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಂತ ಎಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿಗಳಾದ ವಂದನೀಯ ಡಾ. ಪ್ರವೀಣ್ ಮಾರ್ಟಿಸ್ ಮಾತನಾಡಿ “ಗಾಂಧೀಜಿಯವರ ತತ್ವಗಳು ನಮ್ಮ ಜೀವನದ ಎಲ್ಲಾ ಹಂತಗಳಲ್ಲಿ ಮಾರ್ಗದರ್ಶನ ನೀಡುವಂತಹವು” ಎಂದು ತಿಳಿಸಿದರು. ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಾದ ಡಾ. ಗಣಪತಿ ಗೌಡ ಇವರು ಗಾಂಧೀಜಿಯವರ ಜೀವನ ಸಿದ್ಧಾಂತ ಮತ್ತು ಸಾಹಿತ್ಯದ ಕುರಿತು ವಿಸ್ತ್ರತವಾದ ಪ್ರಬಂಧ ಮಂಡನೆ ಮಾಡಿದರು. ಇದೇ ಸಂದರ್ಭದಲ್ಲಿ ಸ್ವೀವನ್ ಕ್ವಾಡ್ರಸ್ ಪೆರ್ಮುದೆ ಇವರು ಮಹಾತ್ಮ ಗಾಂಧೀಜಿಯವರ ಕುರಿತು ಬರೆದ ಪುಸ್ತಕದ ಲೋಕಾರ್ಪಣೆ ನಡೆಯಿತು. ಪುಸ್ತಕದ ತಯಾರಿಯಲ್ಲಿ ಧನಸಹಾಯ ಮಾಡಿದ ಮಿಲಾಗ್ರಿಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಶ್ರೀಯುತ ಜಾರ್ಜ್ ಎನ್. ಫರ್ನಾಂಡಿಸ್ ಮಾತನಾಡಿ “ಗಾಂಧೀಜಿಯವರ ಜೀವನ ಆದರ್ಶಗಳು…
ಮಂಗಳೂರು : ಕೊಂಕಣಿ ಲೇಖಕ್ ಸಂಘ್ ಕೊಡಮಾಡುವ 2025ನೇ ಸಾಲಿನ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ಕೊಂಕಣಿ ಲೇಖಕಿ ಆಲಿಸ್ ಫೆರ್ನಾಂಡಿಸ್ (ಶಾಲಿನಿ ವಲೆನ್ಸಿಯಾ) ಅವರು ಆಯ್ಕೆಗೊಂಡಿದ್ದಾರೆ. ಕೊಂಕಣಿ ಲೇಖಕ್ ಸಂಘ್ ಕರ್ನಾಟಕ, ಕೊಂಕಣಿ ಭಾಷೆ ಮತ್ತು ಸಾಹಿತ್ಯವನ್ನು ಉತ್ತೇಜಿಸಿ ಬೆಳೆಸುವ ಉದ್ದೇಶದಿಂದ 2018ರಲ್ಲಿ ಆರಂಭಗೊಂಡಿತು. 2022ರಲ್ಲಿ ಕೊಂಕಣಿ ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದ ಲೇಖಕರನ್ನು ಆಯ್ಕೆ ಮಾಡಿ ಗೌರವಿಸಲು ಕೊಂಕಣಿ ಲೇಖಕ್ ಸಂಘ್ ನಿರ್ಧರಿಸಿತು. ಈ ಪ್ರಶಸ್ತಿಯು ರುಪಾಯಿ 25000/- ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. ಈ ಪ್ರಶಸ್ತಿ ಪ್ರದಾನ ಸಮಾರಂಭವು 15 ಫೆಬ್ರವರಿ 2025ನೇ ಶನಿವಾರ ಸಂಜೆ 6.30ಕ್ಕೆ ಮಂಗಳೂರಿನ ಬಜ್ಜೋಡಿಯಲ್ಲಿರುವ ಸಂದೇಶ ಪ್ರತಿಷ್ಠಾನದ ಸಭಾಂಗಣದಲ್ಲಿ ನಡೆಯಲಿದೆ. ಆಲಿಸ್ ಫೆರ್ನಾಂಡಿಸ್ : ತನ್ನ 16ನೇ ವಯಸ್ಸಿನಲ್ಲೇ ಲೇಖನಿ ಹಿಡಿದರು ಸಾಹಿತ್ಯ ಸೇವೆ ಆರಂಭಿಸಿದ ಆಲಿಸ್ ಫೆರ್ನಾಂಡಿಸ್ ಇವರ ಅನೇಕ ಲೇಖನಗಳು ಕೊಂಕಣಿಯ ‘ಮಿತ್ರ್’, ‘ಝೆಲೊ’, ‘ರಾಕ್ಣೊ’, ‘ಕಾಣಿಕ್’, ‘ವಾವ್ರಾಡ್ಯಾಂಚೊ ತಾಳೊ’ ಮುಂತಾದ ಪತ್ರಿಕೆಗಳಲ್ಲಿ ಪ್ರಕಟಗೊಂಡವು. ಇವರ ಸರಿಸುಮಾರು…
ಬೆಂಗಳೂರು : ಗಾನಚಂದ್ರಿಕಾ ಕಲ್ಚರಲ್ ಫೌಂಡೇಷನ್ (ರಿ.) ಇದರ ದಶಮಾನೋತ್ಸವ ಪ್ರಯುಕ್ತ ಸಂಪದ ಪ್ರತಿಷ್ಠಾನದ ಸಹಯೋಗದೊಂದಿಗೆ ‘ಸಂಗೀತ ರಸಗ್ರಹಣ ಶಿಬಿರ’ವನ್ನು ದಿನಾಂಕ 08 ಮತ್ತು 09 ಫೆಬ್ರವರಿ 2025ರಂದು ಬೆಳಗ್ಗೆ 10-00 ಗಂಟೆಗೆ ಬೆಂಗಳೂರಿನ ಸಂಪದ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ಭಾವ, ಜಾನಪದ ಹಿನ್ನೆಲೆ ಗಾಯನಗಳ ಕಾರ್ಯಕಾರವು ನಡೆಯಲಿದೆ. ಪ್ರಖ್ಯಾತ ಜಾನಪದ ಗಾಯಕರು ಹಾಗೂ ಸಂಗೀತ ಸಂಯೋಜಕರಾದ ಶ್ರೀ ಕೆ. ಯುವರಾಜ್, ಪ್ರಖ್ಯಾತ ಗಾಯಕಿ ಹಾಗೂ ಸಂಗೀತ ಸಂಯೋಜಕಿ ಶ್ರೀಮತಿ ನಾಗಚಂದ್ರಿಕಾ ಭಟ್, ಪ್ರಖ್ಯಾತ ಗಾಯಕರು ಪತ್ರಕರ್ತರಾದ ಶ್ರೀ ಅಚ್ಚುತ ಸಂಕೇತಿ ಮತ್ತು ಆಯುರ್ವೇದ ವೈದ್ಯೆ ಕುಮಾರಿ ಅನಘ ಎಚ್.ಎ. ಇವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಹೆಚ್ಚಿನ ಮಾಹಿತಿ ಹಾಗೂ ನೋಂದಾವಣೆಗಾಗಿ 9480231345 ಸಂಖ್ಯೆಯನ್ನು ಸಂಪರ್ಕಿಸಿರಿ.
ಹೂವಿನಕೆರೆ: ಕೋಟೇಶ್ವರದ ಹೂವಿನಕೆರೆ ವಾದಿರಾಜ ಮಠದ ಗೌರಿಗೆದ್ದೆಯಲ್ಲಿ ಶ್ರೀ ಮಧ್ವ ಪುರಂದರೋತ್ಸವ ಕಾರ್ಯಕ್ರಮದ ಅಂಗವಾಗಿ ಯಶಸ್ವಿ ಕಲಾವೃಂದ ಕೊಮೆ ತೆಕ್ಕಟ್ಟೆಯ ಮಕ್ಕಳ ಮೇಳದ ಯಕ್ಷಗಾನ ಕಾರ್ಯಕ್ರಮವು ದಿನಾಂಕ 28 ಜನವರಿ 2025ರಂದು ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಶ್ರೀ ರಾಮಚಂದ್ರ ದಾಸರು ಮಾತನಾಡಿ “ಶ್ರೀಮದ್ ಆಚಾರ್ಯರ ಕಾಲದಿಂದಲೂ ಭಗವಂತನ ಲೀಲೆ ಹಾಗೂ ಮಹಿಮೆಗಳನ್ನು ಅತಿ ವೇಗವಾಗಿ ಮನ ಮುಟ್ಟುವಂತ ಮಾಡುವ ಕಲೆ ಯಕ್ಷಗಾನ. ಇದು ಯಕ್ಷಗಾನದ ವೈಶಿಷ್ಯತೆ . ಪೂರ್ವ ನಿಗದಿತ ಸಂಭಾಷಣೆಗಳಿಲ್ಲದ, ಕರ್ನಾಟಕದಲ್ಲಿ ಶುದ್ಧವಾದ ಕನ್ನಡದ ಪರಿಕಲ್ಪನೆಯ ಏಕೈಕ ಕಲೆ ಯಕ್ಷಗಾನ. ಇಂತಹ ಕಲೆಯಲ್ಲಿ ಪ್ರಭುದ್ಧತೆಯನ್ನು ಸಾಧಿಸಿ, ನಿರಂತರ ಚಟುವಟಿಕೆಯಿಂದ ಸಮಾಜಮುಖಿಯಾಗಿ ಮೆರೆದ ‘ಯಶಸ್ವಿ ಕಲಾವೃಂದ’ದ ಸಾಧನೆ ಅನನ್ಯ” ಎಂದರು. ಯಕ್ಷಗುರು ಲಂಬೋದರ ಹೆಗಡೆ, ರಾಘವೇಂದ್ರ ಹೆಗಡೆ ಯಲ್ಲಾಪುರ, ಕುಮಾರ್ ಅಮೀನ್ ಕೊಕ್ಕರ್ಣಿ, ಕಾರ್ಯದರ್ಶಿ ವೆಂಕಟೇಶ ವೈದ್ಯ ಉಪಸ್ಥಿತರಿದ್ದರು. ಯಕ್ಷಗಾನ ಪ್ರಸಂಗ ‘ಕಂಸ ವಧೆ’ ರಂಗ ಪ್ರಸ್ತುತಿಗೊಂಡಿತು.
ಮಂಗಳೂರು : ಮಣಿ ಕೃಷ್ಣಸ್ವಾಮಿ ಸಂಗೀತ ವಿದ್ಯಾಲಯದ ವತಿಯಿಂದ ಅನುಭವೀ ಶಿಕ್ಷಕರಿಂದ ಜೂನಿಯರ್, ಸೀನಿಯರ್ ಹಾಗೂ ವಿದ್ವತ್ ಸಂಗೀತ ಶಿಕ್ಷಣವನ್ನು ಸುರತ್ಕಲ್, ಕೆನರಾ ಬ್ಯಾಂಕ್ ಅಡ್ಡರಸ್ತೆ, ಅನುಪಲ್ಲವಿ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ನೀಡಲಾಗುವುದು. ಸಂಗೀತ ಪರೀಕ್ಷೆ ಮತ್ತು ಕಛೇರಿಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಪಡಿಸುವುದು ಸಂಸ್ಥೆಯ ಉದ್ದೇಶವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಪಿ. ನಿತ್ಯಾನಂದ ರಾವ್ 9742792669 ಸಂಖ್ಯೆಯನ್ನು ಸಂಪರ್ಕಿಸಿರಿ.
ಉಡುಪಿ : ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು (ರಿ.) ಕೇಂದ್ರ ಸಮಿತಿ ಹುಬ್ಬಳ್ಳಿ ಮತ್ತು ಜಿಲ್ಲಾ ಘಟಕ ಉಡುಪಿ ಇದರ ವತಿಯಿಂದ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನ ಅಂಬಲಪಾಡಿ ಇವರ ಆಶ್ರಯದಲ್ಲಿ ಉಡುಪಿ ಅಂಬಲಪಾಡಿ ಭವಾನಿ ಸಭಾಂಗಣದಲ್ಲಿ ದಾಸವರೇಣ್ಯ ಪುರಂದರದಾಸರ ಆರಾಧನೆಯ ಮಹೋತ್ಸವ ಸಂದರ್ಭದಲ್ಲಿ ಕ.ಚು.ಸಾ.ಪ. ಸಂಭ್ರಮವು ದಿನಾಂಕ 29 ಜನವರಿ 2025ರಂದು ನಡೆಯಿತು. ಹಿರಿಯ ಚಿಂತಕ ಸನ್ಮಾನ್ಯ ವಿಶ್ವನಾಥ ಶೆಣೈ ಅಧ್ಯಕ್ಷತೆಯಲ್ಲಿ ಅಂಬಲಪಾಡಿ ಜನಾರ್ಧನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ನಿ.ಬಿ. ವಿಜಯ ಬಲ್ಲಾಳರು ಉದ್ಘಾಟಿಸಿ “ದಾಸರ ನುಡಿಗಳು ಲೋಕಕ್ಕೇ ಆದರ್ಶ” ಎಂದರು. ಮುಖ್ಯ ಅತಿಥಿಗಳಾಗಿ ಶ್ರೀ ನೆಂಪು ನರಸಿಂಹ ಭಟ್ಟರು ಮಾತನಾಡಿದರು. ತದ ನಂತರದ ಉಪಾನ್ಯಾಸ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದ್ದ ಮಂಗಳೂರಿನ ಮಂಗಳಾ ಆಸ್ಪತ್ರೆಯ ಮೂಲವ್ಯಾಧಿ ಕ್ಷಾರ ತಜ್ಞ ಹಾಗೂ ಕಣಚೂರು ಆಯುರ್ವೇದ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಸುರೇಶ ನೆಗಳಗುಳಿಯವರು “ಪುರಂದರಗಢದ ಪುರಂದರ ಅಂಕಿತನಾಮದ ಪುರಂದರರು ಪುರಂದರ ವಿಠಲನಿಗೆ ಶರಣಾಗಿ ಪುರಂದರ ದಾಸರಾದರು. ಚುಟುಕಿನಲ್ಲಿ ಹೇಳುತ್ತಾ ಹೋದ…
ಕಾಸರಗೋಡು : ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕನ್ನಡ ಗ್ರಾಮ, ಕಾಸರಗೋಡು, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ, ಕೇರಳ ರಾಜ್ಯ ದಾಸ ಸಾಹಿತ್ಯ ಪರಿಷತ್ತು ಹಾಗೂ ವಿ.ಕೆ.ಎಂ. ಕಲಾವಿದರು (ರಿ.) ಬೆಂಗಳೂರು ಇವರ ಸಹಯೋಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರ ಬೆಂಗಳೂರು ಪ್ರಾಯೋಜಕತ್ವದಲ್ಲಿ ಕಾಸರಗೋಡು ಕನ್ನಡ ಗ್ರಾಮದಲ್ಲಿ ದಿನಾಂಕ 27 ಮಾರ್ಚ್ 2025 ಗುರುವಾರದಂದು ಬೆಳಿಗ್ಗೆ ಗಂಟೆ 9-00ರಿಂದ ರಾತ್ರಿ 9-00ರವರೆಗೆ ನಡೆಯುವ ಒಂದು ದಿನದ ಕಾಸರಗೋಡು ಜಿಲ್ಲಾ 7ನೇ ಚುಟುಕು ಸಾಹಿತ್ಯ ಸಮ್ಮೇಳನ -2025, ಕರ್ನಾಟಕ ಗಡಿನಾಡ ಉತ್ಸವ, ವಿಶ್ವ ರಂಗಭೂಮಿ ದಿನಾಚರಣೆ, ಬೆಂಗಳೂರು ಕನ್ನಡ ನಾಟಕೋತ್ಸವವನ್ನು ಯಶಸ್ವಿಯಾಗಿ ಸಂಘಟಿಸುವ ಉದ್ದೇಶದಿಂದ ವಿಶೇಷ ಸಭೆಯನ್ನು ಕಾಸರಗೋಡು ಕನ್ನಡ ಗ್ರಾಮದಲ್ಲಿ ದಿನಾಂಕ 28 ಜನವರಿ 2025ರಂದು ಕರೆಯಲಾಯಿತು. ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವರಾಮ ಕಾಸರಗೋಡು ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಜಿಲ್ಲಾ…
ಬೆಂಗಳೂರು : ಜನ ಸಾಮಾನ್ಯರಲ್ಲಿ ಅದರಲ್ಲಿಯೂ ವಿಶೇಷವಾಗಿ ಕನ್ನಡ ಯುವಜನತೆಯಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯದ ಕುರಿತು ಆಸಕ್ತಿ ಮೂಡಿಸಲು ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾಗಿದ್ದ ಬಿ.ಎಂ.ಶ್ರೀಯವರು ರೂಪಿಸಿದ ಮುಖ್ಯ ಯೋಜನೆ ಕನ್ನಡ ಸಾಹಿತ್ಯ ಪರೀಕ್ಷೆಗಳು. 1940ರ ಜೂನ್ ತಿಂಗಳಿನಿಂದ ‘ಕನ್ನಡ ಅಣುಗ’, ಕನ್ನಡ ಕಾವ, ಕನ್ನಡ ಜಾಣ ಪರೀಕ್ಷೆಗಳು ಆರಂಭವಾದವು. 1948ರಲ್ಲಿ `ಅಣುಗ’ವನ್ನು ಕೈ ಬಿಡಲಾಯಿತು. 1966ರಲ್ಲಿ ‘ಕನ್ನಡ ರತ್ನ’ ಪರೀಕ್ಷೆ ಆರಂಭವಾಗಿದ್ದು, 1992ರಲ್ಲಿ ಕನ್ನಡ ಪ್ರವೇಶ ಆರಂಭವಾಯಿತು. ಈ ಎಲ್ಲಾ ಪರೀಕ್ಷೆಗಳು ಲಕ್ಷಾಂತರ ಕನ್ನಡಿಗರಲ್ಲಿ ಭಾಷೆ ಮತ್ತು ಸಾಹಿತ್ಯದ ಕುರಿತು ಅರಿವು ಮೂಡಿಸುವಲ್ಲಿ ಯಶಸ್ವಿಯಾಗಿದ್ದು, ನಿರಂತರವಾಗಿ ನಡೆದುಕೊಂಡು ಬರುತ್ತಿವೆ. ಈ ವರ್ಷ ಕನ್ನಡ ಸಾಹಿತ್ಯ ಪರಿಷತ್ತು 2024-25ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳನ್ನು ದಿನಾಂಕ 7, 8 ಮತ್ತು 9 ಫೆಬ್ರವರಿ 2025ರಂದು ಒಟ್ಟು ಮೂರು ದಿನಗಳ ಕಾಲ ರಾಜ್ಯದ 18 ಕೇಂದ್ರಗಳಲ್ಲಿ ನಡೆಸಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.…
ಬೆಂಗಳೂರು : ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ (ರಿ.) ಕಮತಗಿ ಮತ್ತು ಗೀತಾ ಸಂಗೀತ ಅಕಾಡೆಮಿ ಟ್ರಸ್ಟ್ (ರಿ.) ಬೆಂಗಳೂರು ಇದರ ಸಹಯೋಗದಲ್ಲಿ ‘ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಉತ್ಸವ-2025’ ಸಮಾರಂಭವನ್ನು ದಿನಾಂಕ 02 ಫೆಬ್ರವರಿ 2025 ಭಾನುವಾರ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಜಾನಪದ ಕಲಾ ಪ್ರದರ್ಶನ, ಭರತನಾಟ್ಯ, ವಿಶೇಷ ಉಪನ್ಯಾಸ, ಸುಗಮ ಸಂಗೀತ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪ್ರಶಸ್ತಿ ಪ್ರದಾನ ನಡೆಯಲಿದ್ದು, ಚಿಕ್ಕಬಳ್ಳಾಪುರ ಜಾನಪದ ಕಲಾವಿದರಾದ ಡಾ. ಶಶಿಕಲಾ ಎ.ಆರ್. ಇವರು ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಮೊದಲು ಮೆರವಣಿಗೆ ಚಾಲನೆ, ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆ, ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪುಸ್ತಕ ಮಳಿಗೆ ಉದ್ಘಾಟನೆಗೊಳ್ಳಲಿದೆ. ಬೆಂಗಳೂರು ಆಕಾಶವಾಣಿ ಸಹಾಯಕ ನಿರ್ದೇಶಕರಾದ ಶ್ರೀಮತಿ ನೂತನ ದೋಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇದರ ಕಾರ್ಯದರ್ಶಿಗಳಾದ ಡಾ. ಸಂಗಮೇಶ…