Author: roovari

ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕ ಮತ್ತು ಎಸ್.ಎನ್.ಎಂ. ಪಾಲಿಟೆಕ್ನಿಕ್ ಕಾಲೇಜು ಮೂಡುಬಿದಿರೆ ಇದರ ಸಹಯೋಗದಲ್ಲಿ ‘ಕನ್ನಡ ಕಂಪು’ ಕನ್ನಡ ಕಲರವ ಮತ್ತು ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ 28 ಆಗಸ್ಟ್ 2025ರಂದು ಅಪರಾಹ್ನ 3-00 ಗಂಟೆಗೆ ಎಸ್.ಎನ್.ಎಂ. ಪಾಲಿಟೆಕ್ನಿಕ್ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷರಾದ ವೇಣುಗೋಪಾಲ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ‘ಕನ್ನಡ ಭಾಷಾ ಪ್ರೇಮ ಮತ್ತು ಯುವಜನತೆ’ ಎಂಬ ವಿಷಯದ ಬಗ್ಗೆ ಮೂಡುಬಿದಿರೆ ಜೈನ್ ಪ್ರೌಢ ಶಾಲೆಯ ಕನ್ನಡ ಪ್ರಾಧ್ಯಾಪಕರಾದ ನಿತೇಶ್ ಬಲ್ಲಾಳ್ ಇವರು ಉಪನ್ಯಾಸ ನೀಡಲಿದ್ದಾರೆ.

Read More

ಮಂಗಳೂರು : ಗಾನ ನೃತ್ಯ ಅಕಾಡೆಮಿ (ರಿ.) ಮಂಗಳೂರು ಇಲ್ಲಿನ ವಿದ್ಯಾರ್ಥಿಗಳ ವಾರ್ಷಿಕ ಪ್ರತಿಭಾ ಪ್ರದರ್ಶನ ‘ಆರೋಹಣ’ ನೃತ್ಯ ಪ್ರದರ್ಶನವು ದಿನಾಂಕ 24 ಆಗಸ್ಟ್ 2025ರಂದು ಮಂಗಳೂರಿನ ಪುರಭವನದಲ್ಲಿ ನಡೆಯಿತು. ದೇಶ ವಿದೇಶಗಳಲ್ಲಿ ಪರಿಣಾಮಕಾರಿ ಕಾರ್ಯಕ್ರಮಗಳನ್ನು ನೀಡಿರುವ ಅಕಾಡೆಮಿಯ ಆರಂಭಿಕ ಹಾಗೂ ಮಾಧ್ಯಮಿಕ ಹಂತದ ವಿದ್ಯಾರ್ಥಿಗಳ ತಂಡಗಳು ಸುಮಾರು 3 ಗಂಟೆಗಳ ಕಾಲ ಭರತನಾಟ್ಯ, ಲಘು ಶಾಸ್ತ್ರೀಯ ಹಾಗೂ ಜನಪದ ಶೈಲಿಯ ನೃತ್ಯಗಳನ್ನು ಪ್ರಸ್ತುತಪಡಿಸಿದರು. ಕೊನೆಯಲ್ಲಿ ಪ್ರದರ್ಶಿಸಿದಂತಹ ‘ನರ್ತನ – ಪರಿವರ್ತನ’ ನೃತ್ಯ ರೂಪಕವು ಎಲ್ಲರ ಮನಸೂರೆಗೊಂಡಿತು. ಭರತನಾಟ್ಯದಂತಹ ಶಾಸ್ತ್ರೀಯ ಕಲೆಯ ಮೂಲಕ ಈ ಬಾಲಸ್ನೇಹಿ ಪ್ರಸ್ತುತಿಯನ್ನು ಜನರಿಗೆ ಎಷ್ಟು ಪರಿಣಾಮಕಾರಿಯಾಗಿ ತಲುಪಿಸಬಹುದು ಎಂಬ ವಿಚಾರವು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಸಂಸ್ಥೆಯ ನಿರ್ದೇಶಕಿ ಶ್ರೀಮತಿ ವಿದ್ಯಾಶ್ರೀ ರಾಧಾಕೃಷ್ಣ ಇವರು ಪಾಶ್ಚಾತ್ಯ ಸಂಸ್ಕೃತಿಯ ಕಡೆಗೆ ವಾಲುತ್ತಿರುವಂತಹ ಇಂದಿನ ವಿದ್ಯಾರ್ಥಿಗಳಿಗೆ ನಮ್ಮ ಭಾಷೆ, ಉಡುಪು, ಸಂಸ್ಕೃತಿ, ಭಾರತೀಯತೆಯ ಬಗ್ಗೆ ಕಿವಿ ಮಾತನ್ನು ಹೇಳಿದರು. ಕಾರ್ಯಕ್ರಮದ ಕೊನೆಯಲ್ಲಿ ಸಂಸ್ಥೆಯ ಕಾರ್ಯದರ್ಶಿ ರಾಧಾಕೃಷ್ಣ ಭಟ್…

Read More

ಪುತ್ತೂರು : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ.) ಬಂಟ್ವಾಳ ತಾಲೂಕು ಘಟಕ ನೇತೃತ್ವದಲ್ಲಿ ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ತಾಲೂಕು ಇದರ ಸಂಯೋಜನೆಯಲ್ಲಿ ದಿನಾಂಕ 23 ಆಗಸ್ಟ್ 2025ರಂದು ಶ್ರೀ ವಿಷ್ಣುಮಂಗಲ ದೇವಸ್ಥಾನ ಎರುಂಬು ಅಳಿಕೆ ಇದರ ವಠಾರದಲ್ಲಿ ‘ಸ್ವಾತಂತ್ರ್ಯೋತ್ಸವ ಮಕ್ಕಳ ಕವಿಗೋಷ್ಠಿ :2025’ ನಡೆಯಿತು. ಸಭಾಧ್ಯಕ್ಷತೆ ವಹಿಸಿದ್ದ ಕ. ರಾ. ಮ. ಸಾ. ಪರಿಷತ್ತು ಬಂಟ್ವಾಳ ತಾಲೂಕು ಘಟಕ ಇದರ ಗೌರವಾಧ್ಯಕ್ಷರಾದ ಶ್ರೀ ಬಾಲಕೃಷ್ಣ ಕಾರಂತ್ ಎರುಂಬು ಇವರು “ವಿದ್ಯಾರ್ಥಿಗಳು ಅವಕಾಶಗಳ ಸದ್ಬಳಕೆ ಮಾಡಿಕೊಂಡಾಗ ಯಶಸ್ಸು ಸಾಧ್ಯ. ಸಾಹಿತ್ಯವು ಯಾವ ವಿದ್ಯಾರ್ಥಿಗಳ ಅಧ್ಯಯನಕ್ಕೂ ಅಡಚಣೆಯನ್ನು ಉಂಟು ಮಾಡುವುದಿಲ್ಲವೆಂದು” ಅಭಿಮತ ವ್ಯಕ್ತಪಡಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಇದರ ಅಧ್ಯಕ್ಷರಾದ ಶ್ರೀ ಪುತ್ತೂರು ಉಮೇಶ್ ನಾಯಕ್ ದೀಪ ಪ್ರಜ್ವಲನೆ ಮೂಲಕ ಸಮಾರಂಭವನ್ನು ಉದ್ಘಾಟಿಸಿ “ಸ್ವರಚಿತ ಕವನಗಳೊಂದಿಗೆ ಸಂಭ್ರಮಿಸುತ್ತಿರುವ ಮಕ್ಕಳು ಭವಿಷ್ಯದ ಬಗ್ಗೆ ಹೊಸ ಭರವಸೆಯನ್ನು ಮೂಡಿಸುತ್ತಾರೆ ಇವರಿಗೆ ವೇದಿಕೆಯನ್ನೊದಗಿಸುವುದು ನಮ್ಮೆಲ್ಲರ ಕರ್ತವ್ಯ: ಎಂದು ಶುಭ ಹಾರೈಸಿದರು.…

Read More

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಮತ್ತು ಮುಂಡಾಜೆ ಪದವಿ ಪೂರ್ವ ಕಾಲೇಜು ಇದರ ಸಂಯುಕ್ತ ಆಶ್ರಯದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು : ಉಪನ್ಯಾಸ ಮಾಲೆ – 6ರಲ್ಲಿ ಡಾ. ಚಂದ್ರಶೇಖರ ಕಂಬಾರ ಇವರ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ 29 ಆಗಸ್ಟ್ 2025ರಂದು ಮಧ್ಯಾಹ್ನ 2-00 ಗಂಟೆಗೆ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾದ ಡಿ. ಯದುಪತಿ ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಉಪನ್ಯಾಸ ಮಾಲೆಯಲ್ಲಿ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥರಾದ ಮಹಾಬಲ ಗೌಡ ಇವರು ಉಪನ್ಯಾಸ ನೀಡಲಿದ್ದಾರೆ. ಮುಂಡಾಜೆ ಶತಾಬ್ಧಿ ವಿದ್ಯಾಲಯ ಸಮಿತಿ ಸಂಚಾಲಕರಾದ ನಾರಾಯಣ ಫಡ್ಕೆ ಮತ್ತು ಮುಂಡಾಜೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಗೀತಾ ಇವರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

Read More

ಮೂಡುಬಿದಿರೆ : ತುಳುವ ಮಹಾಸಭೆ ಮೂಡುಬಿದಿರೆ, ಧವಳತ್ರಯ ಜೈನ ಕಾಶಿ ಟ್ರಸ್ಟ್ ಮೂಡುಬಿದಿರೆ, ಮಂದಾರ ಪ್ರತಿಷ್ಠಾನ ಮಂಗಳೂರು, ತುಳು ಕೂಟ ಬೆದ್ರ ಸಹಯೋಗದಲ್ಲಿ ಮೂಡುಬಿದಿರೆ ಜೈನಮಠದಲ್ಲಿ ದಿನಾಂಕ 24 ಆಗಸ್ಟ್ 2025ರಂದು ತುಳು ವಾಲ್ಮೀಕಿ ಮಂದಾರ ಕೇಶವ ಭಟ್ಟರ ‘ಬೀರದ ಬೊಲ್ಪು’ ಕಾವ್ಯಯಾನ ಕಾರ್ಯಕ್ರಮ ನಡೆಯಿತು. ಮಂದಾರ ಪ್ರತಿಷ್ಠಾನದ ಅಧ್ಯಕ್ಷ ಡಾ. ಮಂದಾರ ರಾಜೇಶ್ ಭಟ್ ಅಧ್ಯಕ್ಷತೆ ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚರ್ಯವರ್ಯ ಸ್ವಾಮೀಜಿ ಇವರು ಆಶೀರ್ವಚನ ನೀಡಿ “ಮಂದಾರ ಕೇಶವ ಭಟ್ಟರು ತುಳು ಸಂಸ್ಕೃತಿ ಮತ್ತು ಪರಂಪರೆಯ ಸೊಗಡನ್ನು ತಮ್ಮ ಕಾವ್ಯದಲ್ಲಿ ಎಳೆ ಎಳೆಯಾಗಿ ಚಿತ್ರಿಸಿದ್ದಾರೆ. ಕಾವ್ಯಯಾನದಂತಹ ಜನಪ್ರಿಯ ಮಾಧ್ಯಮದ ಮೂಲಕ ಅದು ಸಾರ್ವಜನಿಕವಾಗಿ ಅನಾವರಣಗೊಳ್ಳುತ್ತಿದೆ. ಕಾವ್ಯವು ಸಂಗೀತದೊಡನೆ ಸೇರಿ ಕಲಾ ರಸಿಕರಿಗೆ ವಿಶೇಷ ಅನುಭೂತಿ ನೀಡುತ್ತದೆ” ಎಂದು ಹೇಳಿದರು. ಶ್ರೀಕೃಷ್ಣನ ಬಾಲಲೀಲೆಯ ಕುರಿತಾದ ‘ಬೀರದ ಬೊಲ್ಪು’ ತುಳು ಕಾವ್ಯದ ಸುಗಿಪು-ದುನಿಪು (ವಾಚನ-ಪ್ರವಚನ) ಕಾರ್ಯಕ್ರಮದಲ್ಲಿ ಯಕ್ಷಗಾನ ಅರ್ಥಧಾರಿ ಮತ್ತು ಪ್ರವಚನಕಾರ ಪ್ರೊ. ಭಾಸ್ಕರ…

Read More

ಬಂಟ್ವಾಳ : ಏರ್ಯ ಫೌಂಡೇಶನ್ ವತಿಯಿಂದ ಕರಾವಳಿಯ ಪ್ರಸಿದ್ಧ ಸಾಹಿತಿ, ಸಹಕಾರಿ ಸಂಘಗಳ ಪ್ರಮುಖ ನೇತಾರರಾಗಿದ್ದ ದಿ. ಏರ್ಯ ಲಕ್ಷ್ಮೀನಾರಾಯಣ ಆಳ್ವರವರ ಜನ್ಮಶತಮಾನೋತ್ಸವದ ಅಂಗವಾಗಿ ಕನ್ನಡದ ಹಿರಿಯ ಸಾಹಿತಿ, ರಂಗಕರ್ಮಿ, ನಿವೃತ್ತ ಪ್ರೊ. ನಾ. ದಾಮೋದರ ಶೆಟ್ಟಿ ಹಾಗೂ ಪ್ರಸಿದ್ಧ ಜಾನಪದ ವಿದ್ವಾಂಸ, ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಡಾ. ಕೆ. ಚಿನ್ನಪ್ಪ ಗೌಡ ಇವರಿಗೆ ‘ಏರ್ಯ ಲಕ್ಷ್ಮೀನಾರಾಯಣ ಆಳ್ವ ಶತಮಾನೋತ್ಸವ ಗೌರವ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು. ಸಾಧಕರಿಗೆ ತಲಾ ರೂ. ಒಂದು ಲಕ್ಷ ರೂಪಾಯಿಗಳು, ಪ್ರಶಸ್ತಿ ಫಲಕ, ಅರಸು ಪೇಟ ನೀಡಿ ಸನ್ಮಾನಿಸಲಾಗುವುದು ಎಂದು ಏರ್ಯ ಫೌಂಡೇಶನ್ ತಿಳಿಸಿದೆ. ಬಂಟ್ವಾಳದ ‘ಏರ್ಯ ಬೀಡುವಿನಲ್ಲಿ’ ದಿನಾಂಕ 28 ಆಗಸ್ಟ್ 2025ರಂದು ನಾಡೋಜ ಪ್ರೊ. ಹಂಪ ನಾಗರಾಜಯ್ಯ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಇದೇ ಸಂದರ್ಭ ನಾ.ದಾ. ಸಂಪಾದಿತ ‘ಏರ್ಯ ಸಾಹಿತ್ಯ ಮರುಚಿಂತನ’ ಕೃತಿಯನ್ನು ಕನ್ನಡ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಾ. ಬಿ.ಎ. ವಿವೇಕ ರೈ ಅನಾವರಣಗೊಳಿಸುವರು.…

Read More

ಪೆರಿಂಜೆ : ಕರ್ನಾಟಕ ಗಮಕ ಕಲಾ ಪರಿಷತ್ತು ಬೆಳ್ತಂಗಡಿ ತಾಲೂಕು ಇದರ ವತಿಯಿಂದ ದಿನಾಂಕ 16 ಆಗಸ್ಟ್ 2025ರಂದು ಪೆರಿಂಜೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ಗಮಕ ಕಾರ್ಯಕ್ರಮದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕರ್ನಾಟಕ ಗಮಕಲಾ ಪರಿಷತ್ ಜಿಲ್ಲಾಧ್ಯಕ್ಷ ಪ್ರೊ. ಮಧೂರು ಮೋಹನ ಕಲ್ಲೂರಾಯ “ಕಾವ್ಯಗಳು ಮಕ್ಕಳಿಗೆ ಅರ್ಥವಾಗಬೇಕು ಅಂತಾದರೆ ಗಮಕದಲ್ಲಿ ಅದನ್ನು ಹೇಳಬೇಕು. ಗಮಕದ ಪ್ರಾಥಮಿಕ ಜ್ಞಾನ ಇದ್ದಂತಹ ಅಧ್ಯಾಪಕರು ಉತ್ತಮ ಅಧ್ಯಾಪಕರಾಗಿ ರೂಪುಗೊಳ್ಳಲು ಗಮಕವು ತುಂಬಾ ಸಹಕಾರಿಯಾಗುತ್ತದೆ. ರಾಗಬಾರದ ವ್ಯಕ್ತಿ ಇಲ್ಲ. ಬರುವಂತಹ ರಾಗದಲ್ಲಿ ಸಾಹಿತ್ಯದ ಸ್ಪಷ್ಟತೆಯನ್ನು ಅರಿತುಕೊಂಡು ಗಟ್ಟಿಯಾಗಿ ಕಾವ್ಯವನ್ನು ಓದುವಂತಹುದು ವಿದ್ಯಾರ್ಥಿಗಳಿಗೆ ಪದ್ಯಗಳನ್ನು ಕಲಿಯಲು ತುಂಬಾ ಅನುಕೂಲವಾಗುತ್ತದೆ” ಎಂದು ಹೇಳಿದರು. ಮುಖ್ಯೋಪಾಧ್ಯಾಯರಾದ ಶ್ರೀ ಮುಕುಂದ ಚಂದ್ರ ಇವರು ವಿದ್ಯಾರ್ಥಿಗಳು ಈ ಕಲೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕೆಂದು ಹೇಳಿದರು. ಕನ್ನಡ ಭಾಷಾ ಶಿಕ್ಷಕಿ ಶ್ರೀಮತಿ ಜಯಂತಿ ಅವರು ಸ್ವಾಗತಿಸಿ, ವಂದನಾರ್ಪಣೆಯನ್ನು ಮಾಡಿದರು. ಅಧ್ಯಾಪಕ ವೃಂದ ಮತ್ತು ವಿದ್ಯಾರ್ಥಿಗಳು ಗಮಕವನ್ನು ಆಸ್ವಾದಿಸಿದರು. ಪಠ್ಯ…

Read More

ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಮಾಂಡ್ ಸೊಭಾಣ್ ಸಹಯೋಗದಲ್ಲಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಏರ್ಪಡಿಸಿದ 34ನೇ ಕೊಂಕಣಿ ಮಾನ್ಯತಾ ದಿನಾಚರಣೆಯನ್ನು ದಿನಾಂಕ 20 ಆಗಸ್ಟ್ 2025ರಂದು ಶಕ್ತಿನಗರದ ಕಲಾಂಗಣದಲ್ಲಿ ಶಾಲಾ ಕಾಲೇಜುಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸುವ ಮೂಲಕ ವೈಭವಯುತವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದ ಸಮಾರೋಪದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಪ್ರೊ. ಅರುಣಾ ಕಾಮತ್ “ರಾಜ್ಯಭಾಷೆ ಯಾವುದೇ ಒಂದು ರಾಜ್ಯಕ್ಕೆ ಸೀಮಿತವಾದರೆ ಕೊಂಕಣಿಯ ವಿಶೇಷತೆ ಏನೆಂದರೆ ಅದು ಇಡೀ ಕೊಂಕಣ ಪ್ರದೇಶಕ್ಕೆ ಅನ್ವಯಿಸುವ ಭಾಷೆ. ಸಾವಿರಾರು ಭಾಷೆ, ಉಪಭಾಷೆಗಳಿರುವ ಭಾರತದಲ್ಲಿ ಕೇವಲ 22 ಭಾಷೆಗಳಿಗೆ ಮಾತ್ರ ಅಧಿಕೃತ ಭಾಷೆಯ ಸ್ಥಾನಮಾನವಿದೆ. ಅದರಲ್ಲಿ ಕೊಂಕಣಿ ಒಂದು ಎಂಬ ಅಭಿಮಾನ ನಮ್ಮದು. ಹಲವಾರು ಕಠಿಣ ನಿಬಂಧನೆಗಳನ್ನು ದಾಟಿ, ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಲು ನಮ್ಮ ಹಿರಿಯರು ಶ್ರಮಿಸಿದ್ದಾರೆ. ಇಂದು ಕರ್ನಾಟಕದಲ್ಲಿ ಕೊಂಕಣಿ ಕಲಿಕೆಗೆ, ಸ್ನಾತಕೋತ್ತರ ಶಿಕ್ಷಣಕ್ಕೆ ಮತ್ತು ಸಂಶೋಧನೆಗೆ ಅವಕಾಶವಿದೆ. ಅದನ್ನು ಬಳಸಬೇಕು ಹಾಗೂ ಇದು ತಂತ್ರಜ್ಞಾನ…

Read More

ಧಾರವಾಡ : ಧಾರವಾಡ ರಂಗಾಯಣ ಆವರಣದ ಸಾಂಸ್ಕೃತಿಕ ಸಮುಚ್ಚಯದಲ್ಲಿ ದಿನಾಂಕ 22 ಅಗಸ್ಟ್ 2025 ರವಿವಾರ ಸಂಜೆ ನಡೆದ ಶ್ರಾವಣದ ಕವಿ ಬೇಂದ್ರೆ ವಾಚನ – ಗಾಯನ – ನೃತ್ಯ ಒಂದು ಅಭೂತಪೂರ್ವ ಕಾರ್ಯಕ್ರಮ ಎನಿಸಿ ಹೊಸದೊಂದು ದಾಖಲೆ ಬರೆಯುವಲ್ಲಿ ಯಶಸ್ವಿಯಾಯಿತು. ವೇದಿಕೆಯಲ್ಲಿ ಬೇಂದ್ರೆಯವರು ಮಾತ್ರ ಇದ್ದರು. ಅವರ ಭಾವಚಿತ್ರ ಮಾತ್ರ ಅಲ್ಲಿತ್ತು. ಕುರ್ಚಿಗಳು ಇರಲಿಲ್ಲ. ಸಂಘಟಕರು, ಉದ್ಘಾಟಕರು ಎಲ್ಲರೂ ವೇದಿಕೆಯ ಎದುರಿಗೆ ಪ್ರೇಕ್ಷಕರ ನಡುವೆ ಆಸೀನರಾಗಿದ್ದರು. ವೇದಿಕೆಯ ಬ್ಯಾನರ್ ಅತ್ಯಂತ ಸೊಗಸಾಗಿ ಕಂಗೊಳಿಸುತ್ತಿತ್ತು. ಬೇಂದ್ರೆಯವರ ವಿವಿಧ ಭಾವಚಿತ್ರಗಳು ಮತ್ತು ಹಸ್ತಾಕ್ಷರ ಪದೇ ಪದೇ ಲಕ್ಷಕೊಟ್ಟು ನೋಡುವಂತೆ ಆಕರ್ಷಣೀಯವಾಗಿದ್ದವು. ಮನೋಹರ ಗ್ರಂಥಮಾಲೆ, ಜಿ.ಬಿ. ಮೆಮೋರಿಯಲ್ ಟ್ರಸ್ಟ್, ಕುರ್ತಕೋಟಿ ಮೆಮೋರಿಯಲ್ ಟ್ರಸ್ಟ್, ಮಹಿಪತಿ ಸಾಂಸ್ಕೃತಿಕ ಕೇಂದ್ರ, ಸಕ್ರಿ ಬಾಳಾಚಾರ್ಯ (ಶಾಂತಕವಿ) ಟ್ರಸ್ಟ್, ಸ್ನೇಹ ಪ್ರತಿಷ್ಠಾನ ಸಂಯುಕ್ತವಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಬರೀ ಯುವಕರು ಮಾತ್ರ ಶ್ರಾವಣದ ಕವಿ ಬೇಂದ್ರೆಯವರ ಕವನಗಳನ್ನು ವಾಚಿಸಿದರು, ಹಾಡಿದರು, ನೃತ್ಯ ರೂಪದಲ್ಲಿ ಪ್ರಸ್ತುತ ಪಡಿಸಿದರು. ಡಾ. ಕೃಷ್ಣ ಕಟ್ಟಿಯವರು…

Read More

ವಿರಾಜಪೇಟೆ : ಮನೆ ಮನೆ ಕಾವ್ಯಗೋಷ್ಠಿ ಪರಿಷತ್ತು ಬಳಗ ಕೊಡಗು ಜಿಲ್ಲೆ ಮತ್ತು ಕಾವೇರಿ ಗಣೇಶೋತ್ಸವ ಸಮಿತಿ ಮೂರ್ನಾಡು ರಸ್ತೆ ವಿರಾಜಪೇಟೆ ಇವರ ಸಹಯೋಗದಲ್ಲಿ ದಿನಾಂಕ 31 ಆಗಸ್ಟ್ 2025ರ ಭಾನುವಾರದಂದು ಬೆಳಿಗ್ಗೆ 10-00 ಗಂಟೆಗೆ ವಿರಾಜಪೇಟೆಯ ಮೂರ್ನಾಡು ರಸ್ತೆಯ ಕಾವೇರಿ ಗಣೇಶೋತ್ಸವ ಸಮಿತಿಯ ವೇದಿಕೆಯಲ್ಲಿ ‘ಗಣೇಶೋತ್ಸವ ಕವಿಗೋಷ್ಠಿ, ಕೃತಿ ಲೋಕಾರ್ಪಣೆ, ಗೀತಗಾಯನ ಹಾಗೂ ಸಾಧಕರಿಗೆ ಸನ್ಮಾನ’ ಕಾರ್ಯಕ್ರಮವು ನಡೆಯಲಿದೆ. ಮೈಸೂರಿನ ಖ್ಯಾತ ಕವಿಗಳಾದ ಜಯಪ್ಪ ಹೊನ್ನಾಳಿಯವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ಉಪ ಖಜಾನೆಯ ಅಧೀಕ್ಷಕರಾದ ಗಣೇಶ್ ನಿಲುವಾಗಿಲು ಇವರ ‘ಹುಣಸೂರಿನ ಅರಸು’ ಕೃತಿಯ ಲೋಕಾರ್ಪಣೆ ಹಾಗೂ ಮೂವತ್ತಕ್ಕೂ ಹೆಚ್ಚು ಕವಿಗಳಿಂದ ಕವನ ವಾಚನ ನಡೆಯಲಿದೆ ಎಂದು ಮನೆ ಮನೆ ಕಾವ್ಯಗೋಷ್ಠಿ ಪರಿಷತ್ತಿನ ಸಂಸ್ಥಾಪಕರಾದ ವೈಲೇಶ್ ಪಿ.ಎಸ್. ಕೊಡಗು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಚಿಸುವವರು 8861405738 ಅಥವಾ 98862 64430 ಸಂಖ್ಯೆಗಳಿಗೆ ಸಂದೇಶ ಅಥವಾ ಕರೆಮಾಡಿ ನೋಂದಾಯಿಸಿಕೊಳ್ಳಬಹುದು.

Read More