Author: roovari

ಮಂಗಳೂರು : ಕಲಾಭಿ ಥಿಯೇಟರ್ ಮಂಗಳೂರು, ಕೆನರಾ ಕಲ್ಚರಲ್ ಅಕಾಡೆಮಿಯ ಸಹಕಾರದೊಂದಿಗೆ 9ರಿಂದ 17 ವರ್ಷದ ಮಕ್ಕಳಿಗೆ ಹತ್ತು ದಿನಗಳ ‘ಅರಳು 2025’ ವೃತ್ತಿಪರ ರಂಗಭೂಮಿ ಕಾರ್ಯಾಗಾರವನ್ನು ದಿನಾಂಕ 16 ಏಪ್ರಿಲ್ 2025ರಿಂದ 27 ಏಪ್ರಿಲ್ 2025ರವರೆಗೆ ಪ್ರತಿದಿನ ಬೆಳಗ್ಗೆ 9-00 ಗಂಟೆಯಿಂದ ಸಂಜೆ 5-00 ಗಂಟೆ ತನಕ ಕೊಡಿಯಾಲ್ ಬೈಲಿನ ಕೆನರಾ ಇಂಗ್ಲೀಷ್ ಹೈಯರ್ ಪ್ರೈಮರಿ ಶಾಲೆಯಲ್ಲಿ ಆಯೋಜಿಸಲಾಗಿದೆ. ಮಂಗಳೂರಿನ ಎಲ್ಲಾ ಮಕ್ಕಳಿಗೂ ಮುಕ್ತ ಅವಕಾಶವಿದ್ದು, ಹೆಚ್ಚಿನ ಮಾಹಿತಿಗಾಗಿ 8431631998 ಮತ್ತು 7338226936 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

Read More

ಕೊಡಗು : ಕಾಸರಗೋಡು ಕನ್ನಡ ಭವನ ಮತ್ತು ಕೇರಳ ರಾಜ್ಯ – ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸಂಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ ಸಂಧ್ಯಾರಾಣಿ ದಂಪತಿಗೆ ಕೊಡಗು ಜಿಲ್ಲೆಯ ಕೊಡಗು ಕನ್ನಡ ಭವನ ಮತ್ತು ಕೊಡಗು ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ‘ಗಡಿನಾಡ ಚೇತನ ವಿಶೇಷ ಗೌರವ ಪ್ರಶಸ್ತಿ 2025’ ನೀಡಿ ಗೌರವಿಸಿತು. ಕೊಡಗು ಕನ್ನಡ ಭವನ ಅಧ್ಯಕ್ಷರಾದ ಬೊಳ್ಳಜಿರ ಬಿ. ಅಯ್ಯಪ್ಪ ಹಾಗೂ ಕೊಡಗು ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷೆ ರುಬೀನ ಎಂ.ಎ. ಜಂಟಿಯಾಗಿ ಈ ಪ್ರಶಸ್ತಿ ನೀಡಿದರು. ಕೊಡಗಿನ ಮಡಿಕೇರಿಯ ಪತ್ರಿಕಾ ಭವನದಲ್ಲಿ ದಿನಾಂಕ 23 ಮಾರ್ಚ್ 2025ರಂದು ನಡೆದ ಕೊಡಗು ಜಿಲ್ಲಾ ಘಟಕದ ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ಕೊಡಗು ಕನ್ನಡ ಭವನ ಅಧ್ಯಕ್ಷರಾದ ಬೊಳ್ಳಜಿರ ಬಿ. ಅಯ್ಯಪ್ಪ ಅಧ್ಯಕ್ಷತೆ ವಹಿಸಿದ್ದರು. ಕೊಡಗಿನ ಹಿರಿಯ ಸಾಹಿತಿ ಭಾರಧ್ವಾಜ್ ಕೆ. ಆನಂದತೀರ್ಥ, ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರೂ, ಕೊಡಗಿನ ಜನಪ್ರಿಯ ಶಕ್ತಿ ದಿನಪತ್ರಿಕೆಯ…

Read More

ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸಾಪ್ತಾಹಿಕ ನೃತ್ಯಸರಣಿ 90ರ ಕಾರ್ಯಕ್ರಮವು ದಿನಾಂಕ 31 ಮಾರ್ಚ್ 2025ರಂದು ಸಂಜೆ ಗಂಟೆ 6-25ಕ್ಕೆ ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಈ ದಿನದ ಸರಣಿ ಕಾರ್ಯಕ್ರಮದಲ್ಲಿ ಮಂಗಳೂರಿನ ವಿದುಷಿ ವೈಷ್ಣವಿ ವಿ. ಪ್ರಭು ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ. ವಿದುಷಿ ವೈಷ್ಣವಿ ವಿ. ಪ್ರಭು ಇವರು ಖ್ಯಾತ ಭರತನಾಟ್ಯ ಕಲಾವಿದೆಯಾಗಿದ್ದು, ಪ್ರಸ್ತುತ ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಅಂತಿಮ ವರ್ಷದ ಎಂ.ಕಾಂ. ಪದವಿಯ ವಿದ್ಯಾರ್ಥಿಯಾಗಿದ್ದಾರೆ. 17 ವರ್ಷಗಳ ಕಾಲ ಗುರುಗಳಾದ ವಿದುಷಿ ಶ್ರೀಮತಿ ರಶ್ಮಿ ಸರಳಾಯರವರ ಮಾರ್ಗದರ್ಶನದಲ್ಲಿ ಭರತನಾಟ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರು ಜೂನಿಯರ್, ಸೀನಿಯರ್, ಪ್ರೀ ಮತ್ತು ಅಂತಿಮ ವಿದ್ವತ್ ಪರೀಕ್ಷೆಗಳಲ್ಲಿ ವಿಶೇಷ ಶ್ರೇಣಿಯನ್ನು ಪಡೆದುಕೊಂಡಿರುತ್ತಾರೆ. ಅವರು ರಮಾ ವೈದ್ಯನಾಥನ್, ಶ್ವೇತಾ ಪ್ರಚಂಡ, ರಾಧಿಕಾ ಶೆಟ್ಟಿ, ಬ್ರಘಾ ಬ್ರೆಸೆಲ್ ಸೇರಿದಂತೆ ಅನೇಕ…

Read More

ಮೂಲ ಹಿಂದಿ ನಾಟಕ – ಸುರೇಂದ್ರ ವರ್ಮಾ ಕನ್ನಡ ರೂಪಾಂತರ – ಸಿದ್ಧಲಿಂಗ ಪಟ್ಟಣಶೆಟ್ಟಿ ಪ್ರಸ್ತುತಿ – ಭೂಮಿಕಾ, ಹಾರಾಡಿ ನಿರೂಪಣೆ ಮತ್ತು ನಿರ್ದೇಶನ – ಬಿ.ಎಸ್. ರಾಮ ಶೆಟ್ಟಿ ಹಾರಾಡಿ ಭಾರತೀಯ ಪುರಾಣಗಳನ್ನು ಓದಿಕೊಂಡು ಬಂದವರಿಗೆ ‘ನಿಯೋಗ ಪದ್ಧತಿಯು’ ಹೊಸದೇನಲ್ಲ. ಮದುವೆಯ ಮುಖ್ಯವಾದ ಉದ್ದೇಶ ವಂಶಾಭಿವೃದ್ಧಿ ಎಂದು ಭಾವಿಸಿದ್ದ ಕಾಲ ಅದು. ಆಗ ಸಂತಾನಶಕ್ತಿಯು ಇಲ್ಲದ ಗಂಡನಿಂದ ದೈಹಿಕ ಸುಖದ ಕೊರತೆ ಆದಾಗ ಗಂಡನ ಒಪ್ಪಿಗೆ ಪಡೆದು ಹೆಂಡತಿ ಇನ್ನೊಬ್ಬ ಪುರುಷನನ್ನು ಸೇರಿ ಸಂತಾನಭಾಗ್ಯ ಪಡೆಯುವ ಪದ್ಧತಿಯೇ ನಿಯೋಗ. ಎಸ್.ಎಲ್. ಭೈರಪ್ಪನವರ ‘ಪರ್ವ’ ಕಾದಂಬರಿಯಲ್ಲಿ ಈ ಪದ್ಧತಿಯ ವಿಸ್ತಾರವಾದ ವಿವರಣೆ ಇದೆ. ಸೂರ್ಯಾಸ್ತದಿಂದ…….. ಒಂದು ಮನೋವೈಜ್ಞಾನಿಕವಾದ ಸಂಘರ್ಷದ ಕಥೆ. ಇದೇ ನಿಯೋಗ ಪದ್ಧತಿಗೆ ಒಳಗಾಗುವ ಮಹಾರಾಣಿ ಮತ್ತು ಆಕೆಯ ಪತಿಯಾದ ಮಹಾರಾಜರ ಮನೋವೈಜ್ಞಾನಿಕ ಸಂಘರ್ಷದ ಕಥೆಯನ್ನು ಇಲ್ಲಿ ಬಹಳ ಚಂದವಾದ ದೃಶ್ಯಗಳ ಮೂಲಕ ಭೂಮಿಕಾ ಹಾರಾಡಿ ತಂಡದವರು ಸಮರ್ಪಣೆ ಮಾಡಿದ್ದಾರೆ. ಇಲ್ಲಿ ನಾಟಕದ ಸಂಭಾಷಣೆಗಳು ಆಧುನಿಕ ಮನೋವಿಜ್ಞಾನದ ದ್ವಂದ್ವ ಮತ್ತು…

Read More

ಬೆಂಗಳೂರು : ಕಲ್ಪವೃಕ್ಷ ಟ್ರಸ್ಟ್ (ರಿ.) ಇದರ ಸಹಕಾರದೊಂದಿಗೆ ಅಂತರಂಗ ಬಹಿರಂಗ ತಂಡ ಪ್ರಸ್ತುತ ಪಡಿಸುವ ‘ಅನುಗ್ರಹ’ ಪೌರಾಣಿಕ ನಾಟಕದ ಎರಡು ಪ್ರದರ್ಶನಗಳನ್ನು ದಿನಾಂಕ 05 ಏಪ್ರಿಲ್ 2025ರಂದು ಸಂಜೆ 4-30 ಮತ್ತು 7-30 ಗಂಟೆಗೆ ಬೆಂಗಳೂರಿನ ಬಸವನಗುಡಿಯ ವಾಡಿಯಾ ಸಭಾಂಗಣ (ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್)ದಲ್ಲಿ ಆಯೋಜಿಲಾಗಿದೆ. ಈ ನಾಟಕವನ್ನು ರಾಮಕೃಷ್ಣಪ್ಪ ರಚಿಸಿದ್ದು, ಬಾಷ್ ರಾಘವೇಂದ್ರ ನಿರ್ದೇಶನ ಮಾಡಿದ್ದಾರೆ. ಬುಕ್ ಮೈ ಶೋನಲ್ಲಿ ಟಿಕೆಟ್ ಲಭ್ಯವಿದ್ದು, ನೇರ ಬುಕ್ಕಿಂಗ್‌ಗಾಗಿ 8660547776 ಸಂಖ್ಯೆಯನ್ನು ಸಂಪರ್ಕಿಸಬಹುದು. ಅಂತರಂಗ ಬಹಿರಂಗ ತಂಡದ 7ನೇ ನಿರ್ಮಾಣ ‘ಅನುಗ್ರಹ’ ನಾಟಕ. ಈ ಹಿಂದೆ ಸಾಮಾಜಿಕ ನಾಟಕಗಳನ್ನು ನಿರ್ಮಿಸಿ ಪ್ರೇಕ್ಷಕರ ಅಪಾರ ಮೆಚ್ಚುಗೆ ಪಡೆದಿದ್ದ ತಂಡ, ಮೊದಲ ಬಾರಿಗೆ ಪೌರಾಣಿಕ ನಾಟಕವನ್ನು ಪ್ರಸ್ತುತಪಡಿಸುತ್ತಿದೆ. ಈ ನಾಟಕವು ಏಕಲವ್ಯನ ಜೀವನಾಧಾರಿತವಾಗಿದೆ. ರಚನೆಕಾರರು ಈ ನಾಟಕದಲ್ಲಿ ನಾವು ಇಲ್ಲಿಯವರೆವಿಗೂ ಕೇಳಿರುವ ಏಕಲವ್ಯನ ಕಥೆಗಿಂತ ಭಿನ್ನವಾದ ಆಯಾಮವನ್ನು ನೀಡಿದ್ದಾರೆ. ಅದು “ಯಾವುದೇ ಗುರುವು ತನ್ನ ಶಿಷ್ಯರಿಗೆ ವಿದ್ಯೆ ಕರುಣಿಸಿದ ನಂತರ ಶಿಷ್ಯರಲ್ಲಿ…

Read More

ಬೈಲಹೊಂಗಲ : ಕೇಂದ್ರ ಬಸವ ಸಮಿತಿ ಬೆಂಗಳೂರು ಇವರ ವತಿಯಿಂದ ಬಸವ ಜಯಂತಿ ನಿಮಿತ್ತ ಚೆನ್ನಮ್ಮಾಜಿಯವರ ಐಕ್ಯ ಸ್ಥಳವಾದ ಬೈಲಹೊಂಗಲದಲ್ಲಿ 04 ಮೇ 2025ರಂದು ರಾಜ್ಯಮಟ್ಟದ ಕವಿಗೋಷ್ಠಿಯನ್ನು ಆಯೋಜಿಸಲಾಗಿದೆ ಈ ನಿಮಿತ್ತ ಉದಯೋನ್ಮುಖ ಹಾಗೂ ಪ್ರತಿಭಾವಂತ ಕವಿಗಳಿಂದ ಬಸವೇಶ್ವರರು, ಅಕ್ಕಮಹಾದೇವಿ, ಅಲ್ಲಮಪ್ರಭು, ಸಿದ್ದರಾಮೇಶ್ವರರು, ಚನ್ನಬಸವಣ್ಣ, ಮಡಿವಾಳ ಮಾಚಿದೇವರು, ಹಡಪದ ಅಪ್ಪಣ್ಣ ಇತರ ಶರಣರ ತತ್ವಗಳ ಕುರಿತು ಕವನಗಳನ್ನು ಆಹ್ವಾನಿಸಲಾಗಿದೆ. ಕವನ 30 ಸಾಲುಗಳಿಗೆ ಮಿಕ್ಕದಂತೆ ಕಾಗದದ ಒಂದೇ ಮಗ್ಗುಲಲ್ಲಿ ಬರೆದು ಅಥವಾ ಡಿ.ಟಿ.ಪಿ. ಮಾಡಿಸಿ ಸ್ವವಿಳಾಸ, ಕಿರುಪರಿಚಯ, ಭಾವಚಿತ್ರ, ವಾಟ್ಸಪ್ ಮೊಬೈಲ್ ಸಂಖ್ಯೆಯೊಂದಿಗೆ ದಿನಾಂಕ 15 ಏಪ್ರಿಲ್ 2025ರ ಒಳಗಾಗಿ ಶ್ರೀ ಮೋಹನ ಬಸನಗೌಡ ಪಾಟೀಲ, ಕಾರ್ಯಕಾರಿ ಸಮಿತಿ ಸದಸ್ಯರು, ಕೇಂದ್ರ ಬಸವ ಸಮಿತಿ, ‘ಬಸವ ನಿವಾಸ’, ಚನ್ನಮ್ಮನಗರ ಮೊದಲನೆಯ ಅಡ್ಡರಸ್ತೆ, ಬೈಲಹೊಂಗಲ- 591102, ಬೆಳಗಾವಿ ಜಿಲ್ಲೆ ಈ ವಿಳಾಸಕ್ಕೆ ನೋಂದಾಯಿತ ಅಂಚೆ ಮೂಲಕ ಕಳಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ 9448920888 ಸಂಪರ್ಕಿಸಬೇಕೆಂದು ಕೇಂದ್ರ ಬಸವ ಸಮಿತಿಯ ಅಧ್ಯಕ್ಷರಾದ ಡಾ. ಅರವಿಂದ…

Read More

ಮಡಿಕೇರಿ: ಮಡಿಕೇರಿ ನಗರದ ಶ್ರೀ ಓಂಕಾರೇಶ್ವರ ದೇವಸ್ಥಾನದ ಬಳಿಯ ಮಧುಕೃಪದ ಆವರಣದಲ್ಲಿ ‘ಬಾಲಗೋಕುಲ’ ಮಡಿಕೇರಿ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಮಕ್ಕಳಿಗಾಗಿ ‘ವಸಂತ ಶಿಬಿರ – 2025’ ಹೆಸರಿನಲ್ಲಿ ಉಚಿತ ಬೇಸಿಗೆ ಶಿಬಿರವನ್ನು ದಿನಾಂಕ 31 ಮಾರ್ಚ್ 2025 ರಿಂದ 9 ಏಪ್ರಿಲ್ 2025ರ ವರೆಗೆ ವನ್ನು ಆಯೋಜಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಯಶಸ್ವಿಯಾಗಿ ನಡೆದ ಈ ಶಿಬಿರವು ಮಕ್ಕಳಿಗೆ ಬಹಳ ಉಪಯುಕ್ತವಾಗಿದ್ದು, ಮಕ್ಕಳು ತುಂಬಾ ಉತ್ಸಾಹದಿಂದ ಭಾಗವಹಿಸುವಂತೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಶಿಬಿರದಲ್ಲಿ ಭಾಗವಹಿಸಲು ಇಚ್ಚಿಸುವವರು ನೊಂದಣಿಗಾಗಿ ಬಾಲಗೋಕುಲ ಮಡಿಕೇರಿ: 9448541328 ಸಂಪರ್ಕಿಸ ಬಹುದಾಗಿದೆ.

Read More

ಬೈಲೂರು: ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಬೆಂಗಳೂರು, ಇಂಡಿಯಾ ಪೌಂಡೇಷನ್ ಫಾರ್ ಆರ್ಟ್ಸ್ ಬೆಂಗಳೂರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಇವರ ಸಹಯೋಗದಲ್ಲಿ ದ್ವಿತೀಯ ಸಮುದಾಯದತ್ತ ಶಾಲಾ ಕಾರ್ಯಕ್ರಮದ ಅಂಗವಾಗಿ ‘ಬಣ್ಣದ ಗರಿ’ ಕರಾವಳಿಯ ವೀರ ವನಿತೆಯರ ಕಥನದ ‘ಮಕ್ಕಳ ಯಕ್ಷೋತ್ಸವ’ ಕಾರ್ಯಕ್ರಮವು ದಿನಾಂಕ : 08 ಏಪ್ರಿಲ್ 2025ರ ಮಂಗಳವಾರ ಸಂಜೆ ಘಂಟೆ 6.00 ರಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಇಲ್ಲಿ ನಡೆಯಲಿದೆ. ಸ.ಹಿ.ಪ್ರಾ.ಶಾಲೆ ಬೈಲೂರು ಇಲ್ಲಿನ ಸಹಶಿಕ್ಷಕರಾದ ಆನಂದ ಕುಲಾಲ ಇವರ ನಿರ್ದೇಶನದ ಈ ಯೋಜನೆ ಹಾಗೂ ‘ಯಕ್ಷಸಿರಿ ಶಂಕರನಾರಾಯಣ’ ಇದರ ಸಂಚಾಲಕರಾದ ಕಿಶೋರ ಕುಮಾರ ಆರೂರು ಇವರ ನಿರ್ದೇಶನದ ಈ ‘ಮಕ್ಕಳ ಯಕ್ಷೋತ್ಸವ’ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಸಾಂಸ್ಕೃತಿಕ ಸ್ಪರ್ಧೆಗಳು, ಶಾಲಾ ಮಕ್ಕಳಿಂದ ಹೆಜ್ಜೆ ಗೆಜ್ಜೆ – ನೃತ್ಯೋತ್ಸವ, 4 ನೇ ತರಗತಿ ವಿದ್ಯಾರ್ಥಿಗಳಿಂದ “ನಂಗೇಲಿ ಕಥನ” ಯಕ್ಷ ನೃತ್ಯರೂಪಕ, 5 ನೇ ತರಗತಿ ವಿದ್ಯಾರ್ಥಿಗಳಿಂದ “ಕಮಲಾದೇವಿ ಕಥನ” ಯಕ್ಷಗಾನ…

Read More

ಮಂಗಳೂರು : ಕದ್ರಿ ನೃತ್ಯ ವಿದ್ಯಾ ನಿಲಯ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ಇವರು ಪ್ರಸ್ತುತ ಪಡಿಸುವ ಗುರು ಯು.ಕೆ. ಪ್ರವೀಣ್ ಇವರ ಶಿಷ್ಯೆ ಕುಮಾರಿ ಶರಣ್ಯ ಎಸ್. ರಾವ್ ಇವರ ‘ಭರತನಾಟ್ಯ ರಂಗಪ್ರವೇಶ’ವು ದಿನಾಂಕ 30 ಮಾರ್ಚ್ 2025ರಂದು ಸಂಜೆ 4-00ಕ್ಕೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾಂಕಿನ ಚೈರ್ಮನ್ ಪಿ. ಪ್ರದೀಪ್ ಕುಮಾರ್ ಮತ್ತು ಶಾರದಾ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ.ಬಿ. ಪುರಾಣಿಕ್ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಭರತನಾಟ್ಯ ಕಾರ್ಯಕ್ರಮಕ್ಕೆ ನಟುವಾಂಗಂನಲ್ಲಿ ಗುರು ಯು.ಕೆ. ಪ್ರವೀಣ್, ಹಾಡುಗಾರಿಕೆಯಲ್ಲಿ ವಿದುಷಿ ಉಷಾ ಪ್ರವೀಣ್, ಮೃದಂಗದಲ್ಲಿ ವಿದ್ವಾನ್ ಗಿತೇಶ್ ಎ.ಜಿ. ನೀಲೇಶ್ವರಂ, ವಯೋಲಿನ್ ವಿದ್ವಾನ್ ಶ್ರೀಧರ್ ಆಚಾರ್ ಪಡಿಗಾರ್ ಉಡುಪಿ, ಕೊಳಲು ವಿದ್ವಾನ್ ರಾಜಗೋಪಾಲ್ ವಿ.ಪಿ. ಇವರುಗಳು ಸಹಕರಿಸಲಿದ್ದಾರೆ.

Read More

ಕೊಪ್ಪಳ : ಮುಜುಮದಾರ ಫೌಂಡೇಶನ್ ಮತ್ತು ತಿರುಳ್ಗನ್ನಡ ಸಾಹಿತಿಗಳ ಸಹಕಾರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಡಾ. ಪಂಚಾಕ್ಷರಿ ಹಿರೇಮಠ ಇವರ ‘ನುಡಿ ನಮನ’ ಕಾರ್ಯಕ್ರಮವು ದಿನಾಂಕ 25 ಮಾರ್ಚ್ 2025ರ ಮಂಗಳವಾರದಂದು ಕೊಪ್ಪಳದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಕೊಪ್ಪಳದ ಹಿರಿಯ ಸಾಹಿತಿ ಎಚ್. ಎಸ್. ಪಾಟೀಲ್ ಮಾತನಾಡಿ “ನಮ್ಮ ಭಾಗದ ಸಾಹಿತಿಗಳ ಪುಸ್ತಕಗಳನ್ನು ಓದಿ ಅವರನ್ನು ನಾವು ಗೌರವಿಸಬೇಕು. ನಮ್ಮ ದೇಶದಲ್ಲಿ ಬದುಕಿದ್ದಾಗ ಅವರ ಬಗ್ಗೆ ಆಲೋಚನೆ ಮಾಡುವುದಿಲ್ಲ, ಅವರು ಮರಣ ಹೊಂದಿದ ನಂತರ ಅವರ ಕುರಿತು ಹೆಚ್ಚು ಚರ್ಚೆ ಮಾಡುತ್ತೇವೆ. ಈ ರೀತಿ ಪದ್ಧತಿ ಹೋಗಬೇಕು. ಪಂಚಾಕ್ಷರಿ ಹಿರೇಮಠ ಅವರು 1947 ಆಗಸ್ಟ್ 15 ರಂದು ಕೊಪ್ಪಳ ಕೋಟೆಯ ಮೇಲೆ ತ್ರಿವರ್ಣ ದ್ವಜ ಹಾರಿಸಿದ್ದರು. ಆಗ ಅವರು 7 ನೇ ತರಗತಿ ಓದುತ್ತಿದ್ದರು. ಇವರು ಧಾರವಾಡದಲ್ಲಿ ಪಾಟೀಲ್ ಪುಟ್ಟಪ್ಪ ಅವರ ಪ್ರಪಂಚ ಪತ್ರಿಕೆಯಲ್ಲಿ ಕೆಲಸ ಮಾಡಿದ್ದಾರೆ. ಇವರು ಕಥೆ, ಕಾದಂಬರಿ, ಕಥಾ ಸಂಕಲನ, ಅನುವಾದ ಹೀಗೆ 250ಕ್ಕೂ ಮಿಕ್ಕಿ…

Read More