Author: roovari

ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ಪ್ರದಾನ ಮಾಡುತ್ತಿರುವ ‘ಮಲಬಾರ್ ವಿಶ್ವರಂಗ ಪುರಸ್ಕಾರ 2024ಕ್ಕೆ ‘ ರಾಜ್ಯ ಮತ್ತು ಹೊರರಾಜ್ಯದ ಐವರು ಹಿರಿಯ  ರಂಗಕರ್ಮಿಗಳು ಆಯ್ಕೆಯಾಗಿದ್ದಾರೆ. ನಾಟಕ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಸೇವೆಯನ್ನು ಪರಿಗಣಿಸಿ ಆರ್. ಎಲ್. ಭಟ್ ಉಡುಪಿ ಇವರಿಗೆ, ರಂಗ ನಿರ್ದೇಶಕರಾದ  ಕೆ. ವಿ. ರಾಘವೇಂದ್ರ ಐತಾಳ್ ಮುಂಬೈ, ರಂಗ ಸಂಘಟಕರಾದ ಕಜೆ ರಾಮಚಂದ್ರ ಭಟ್, ರಂಗ ಸಂಘಟಕರು ಹಾಗೂ ನಿರ್ದೇಶಕರಾದ ಎಸ್. ವಿ. ರಮೇಶ್ ಬೇಗಾರ್ ಹಾಗೂ ರಂಗ ನಟಿಯಾದ ಸುಜಾತ ಶೆಟ್ಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇವರಿಗೆ  ದಿನಾಂಕ 26-03-2024 ರಂದು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನಡೆಯುವ ವಿಶ್ವರಂಗಭೂಮಿ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ ‘ಮಲಬಾರ್ ವಿಶ್ವರಂಗ ಪುರಸ್ಕಾರ-2024’ ಪ್ರಧಾನ ಮಾಡಲಾಗುವುದು ಎಂದು ಮಲಬಾರ್ ವಿಶ್ವರಂಗ ಪುರಸ್ಕಾರ ಸಮಿತಿಯ ಸಂಚಾಲಕರಾದ ರಾಜೇಶ್ ಭಟ್ ಪಣಿಯಾಡಿ ತಿಳಿಸಿರುತ್ತಾರೆ.…

Read More

ಉಡುಪಿ : ಉಡುಪಿಯ ಅಜ್ಜರ ಕಾಡಿನಲ್ಲಿರುವ ಭುಜಂಗಪಾರ್ಕ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ 12ನೇ ವರ್ಷದ ರಂಗಹಬ್ಬದ 3ನೇ ದಿನದ ಕಾರ್ಯಕ್ರಮವು ದಿನಾಂಕ 27-02-2024ರಂದು ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಂಗಕರ್ಮಿ ಉದ್ಯಾವರ ನಾಗೇಶ್ ಕುಮಾರ್ ಮಾತನಾಡಿ “ರಂಗ ಚಟುವಟಿಕೆಗಳು ಉತ್ಸವಗಳಾಗದೇ ಚಳವಳಿಗಳಾಗಬೇಕು. ಇಲ್ಲದೇ ಇದ್ದರೆ ಮನೋರಂಜನೆಗೆ ಸೀಮಿತವಾಗುತ್ತವೆ ಹೊರತು ಬೇರೇನನ್ನೂ ಹೇಳಲಾರವು. ರಂಗಚಟುವಟಿಕೆಗಳ ದೊಡ್ಡ ಕೇಂದ್ರವಾದ ಉಡುಪಿಯಲ್ಲಿ ಅನೇಕ ರಂಗಸಂಸ್ಥೆಗಳಿವೆ. ನಿರಂತರ ರಂಗ ಕಾರ್ಯಕ್ರಮಗಳಾಗುತ್ತಿರುತ್ತವೆ. ಆದರೆ, ಪರಸ್ಪರ ಕೊಡುಕೊಳ್ಳುವಿಕೆ ಇಲ್ಲದೇ ಸಂಸ್ಥೆಗಳು ದ್ವೀಪಗಳಾಗುತ್ತಿವೆ. ಇಲ್ಲಿ ರಂಗಚಳವಳಿಯಾಗದೇ ಇರಲು ಇದೂ ಕೂಡಾ ಕಾರಣ ಎಂದು ವಿಶ್ಲೇಷಿಸಿ ಕಲಾವಿದರಲ್ಲಿ, ಸಂಘಟಕರಲ್ಲಿ ಸಾಂಸ್ಕೃತಿಕ, ಸಾಮಾಜಿಕ ಬದ್ಧತೆ ಇರಬೇಕು. ವ್ಯವಸ್ಥೆಗೆ ಪ್ರಭುತ್ವಕ್ಕೆ ಪ್ರತಿರೋಧವಾಗಿ ರಂಗಭೂಮಿ ಹುಟ್ಟಿದೆ. ಆದರೆ ಇಂದು ಪ್ರಭುತ್ವದೊಂದಿಗೆ ಹೊಂದಾಣಿಕೆ, ರಾಜಿ ಮಾಡಿಕೊಂಡು ಪ್ರದರ್ಶನಗಳು ನಡೆಯುತ್ತಿವೆ. ಧರ್ಮ, ದೇವರು, ಭಾಷೆ ಹೀಗೆ ಎಲ್ಲವೂ ರಾಜಕೀಯ ಪ್ರಪಗಾಂಡದ ಟೂಲ್ ಆಗಿ ಬಳಕೆಯಾಗುತ್ತಿರುವ ಈ ಹೊತ್ತಿನಲ್ಲಿ ರಂಗಭೂಮಿ ಹೇಗೆ ಪ್ರತಿಕ್ರಿಯಿಸಬೇಕು ಎಂಬುದನ್ನು…

Read More

ಮೈಸೂರು : ಜಿ. ಪಿ. ಐ. ಇ. ಆರ್.  ರಂಗತಂಡದ 30ನೇ ವಾರ್ಷಿಕೋತ್ಸವದ ಅಂಗವಾಗಿ ದಿನಾಂಕ 27-03-2024 ರಿಂದ 31-03-2024ರ ವರೆಗೆ ನಡೆಯಲಿರುವ ರಾಷ್ಟ್ರೀಯ ರಂಗೋತ್ಸವ ಮೈಸೂರಿನಲ್ಲಿ ನಡೆಯಲಿದ್ದು, ಇದರ ಬಿತ್ತಿಪತ್ರ(ಪೋಸ್ಟರ್) ಬಿಡುಗಡೆ ಕಾರ್ಯಕ್ರಮವು ದಿನಾಂಕ 25-02-2024 ರಂದು ಮೈಸೂರಿನ ರಂಗಮಂದಿರ ಆವರಣದ ಕಿರು ರಂಗಮಂದಿರದಲ್ಲಿ ನಡೆಯಿತು. ಮಂಟೇಸ್ವಾಮಿ ಕಥಾಪ್ರಸಂಗ ನಾಟಕ ಪ್ರದರ್ಶನದ ಸಂದರ್ಭದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿ ಶ್ರೀ ಸಿ. ಬಸವಲಿಂಗಯ್ಯ ಹಾಗೂ ಜಾನಪದ ಕಲಾವಿದರಾದ ಡಾ.ಮೈಸೂರು ಗುರುರಾಜ್ ಅವರು ಬಿತ್ತಿಪತ್ರ ಬಿಡುಗಡೆ ಗೊಳಿಸಿ ಶುಭಹಾರೈಸಿದರು. ಹಿರಿಯ ರಂಗಕರ್ಮಿ ಮೈಮ್ ರಮೇಶ್ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಂಚಾಲಕ ಎಂ. ಪಿ. ಹರಿದತ್ತ, ರಾಜೇಶ್ ತಲಕಾಡು, ಕೇಶವಮೂರ್ತಿ,  ಲೋಹಿತ್, ಚೇತನ್ ರಾವ್, ಸಂಜೈಮೋಹನ್, ಅಬ್ದುಲ್ ಕರೀಂ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Read More

ತೆಕ್ಕಟ್ಟೆ : ಧಮನಿ ಹಾಗೂ ದಿಮ್ಸಾಲ್ ಸಂಸ್ಥೆಯ ಸಹಕಾರದೊಂದಿಗೆ ತೆಕ್ಕಟ್ಟೆ ಕೊಮೆಯ ಯಶಸ್ವೀ ಕಲಾವೃಂದದ “ಸಿನ್ಸ್ 1999 ಶ್ವೇತಯಾನ”ದ ಶ್ವೇತ ಸಂಜೆ-2ರ ಕಾರ್ಯಕ್ರಮವು ಕೊಮೆಯ ಹೆಗ್ಡೆಕೆರೆ ಬೊಬ್ಬರ್ಯ ದೈವಸ್ಥಾನದಲ್ಲಿ ದಿನಾಂಕ 24-02-2024ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಡಯೆಟ್ ಉಡುಪಿಯ ಹಿರಿಯ ಉಪನ್ಯಾಸಕರಾದ ಶ್ರೀ ಯೋಗ ನರಸಿಂಹಸ್ವಾಮಿ ಇವರು ರಸರಂಗ ಕೋಟ ಸಂಸ್ಥೆಯ ಕಲಾವಿದರನ್ನು ಗೌರವಿಸಿ ಸಭೆಯನ್ನುದ್ದೇಶಿಸಿ ಮಾತನ್ನಾಡುತ್ತಾ “ಶಿಕ್ಷಣವೆನ್ನುವುದು ಪ್ರತಿಯೊಬ್ಬರ ಹಕ್ಕು. ಸಂಪೂರ್ಣ ಸಾಕ್ಷರತೆಯ ಉದ್ದೇಶವಾಗಿರಿಸಿಕೊಂಡು ಸರಕಾರ ಸಾರುತ್ತಿರುವ ಶಿಕ್ಷಣದೊಳಗಿನ ಸಾರ ಎಲ್ಲರನ್ನೂ ತಲುಪಬೇಕೆಂದಾದರೆ ಸಾರ್ವತ್ರಿಕವಾದ ಶ್ರಮ ಬೇಕಾಗುತ್ತದೆ. ನವಭಾರತ ಆಯೋಜಿಸಲ್ಪಟ್ಟಿದ್ದ ನವಭಾರತ ಸಾಕ್ಷರತಾ ಕಾರ್ಯಕ್ರಮವನ್ನು ಎಲ್ಲರೂ ಯಶಸ್ವಿಗೊಳಿಸಬೇಕು” ಎಂದು ಹೇಳಿದರು. 25ನೇ ರಜತ ಸಂಭ್ರಮವನ್ನು ಆಚರಿಸಿಕೊಂಡ ಸಂಸ್ಥೆಯ ವಾರಾಂತ್ಯದ ಕಾರ್ಯಕ್ರಮವು ವಿಭಿನ್ನ ಕಲಾ ಪ್ರಕಾರದೊಂದಿಗೆ ಸಂಪನ್ನಗೊಳ್ಳುವುದರೊಂದಿಗೆ ವಿವಿಧ ಕಲಾವಿದರ ಕಾರ್ಯಕ್ರಮವು ಸಂಸ್ಥೆಯ ವೇದಿಕೆಯಲ್ಲಿ ವಿಭಿನ್ನ ಪರಿಕಲ್ಪನೆಯಲ್ಲಿ ಪ್ರಸ್ತುತಿಗೊಳ್ಳಲಿದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಗಣಪತಿ ಟಿ. ಶ್ರೀಯಾನ್ ಹೇಳಿದರು. ಸಿನ್ಸ್ 1999 ಶ್ವೇತಯಾನ ಕಾರ್ಯಾಧ್ಯಕ್ಷ ಸುಜಯ್ ಶೆಟ್ಟಿ ಹಾಗೂ…

Read More

ಬೆಳ್ತಂಗಡಿ : ಪ್ರೊ. ಮಧೂರು ಮೋಹನ ಕಲ್ಲೂರಾಯ ಮತ್ತು ಬಳಗದವರಿಂದ ಶ್ರೀ ಕ್ಷೇತ್ರ ಪುತ್ರಬೈಲಿನ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದಲ್ಲಿ ಮಾರಿಪೂಜೋತ್ಸವದ ಪ್ರಯುಕ್ತ ‘ಕದಂಬ ಕೌಶಿಕೆ’ ಎಂಬ ಯಕ್ಷಗಾನ ತಾಳಮದ್ದಳೆಯು ದಿನಾಂಕ 25-02-2024ರಂದು ನಡೆಯಿತು. ಮೇಳದಲ್ಲಿ ಭಾಗವತರಾಗಿ ಕುಮಾರಿ ಶ್ರೀ ವಿದ್ಯಾ ಐತಾಳ್, ಶ್ರೀ ಜನಾರ್ದನ ತೋಳ್ಪಾಡಿತ್ತಾಯ, ಶ್ರೀ ಮುರಳೀಧರ ಆಚಾರ್ಯ ಪಾಲ್ಗೊಂಡಿದ್ದರು. ಮುಮ್ಮೇಳದಲ್ಲಿ ಮಧೂರು ಮೋಹನ ಕಲ್ಲೂರಾಯ, ಮಧೂರು ಸುಂದರ ಕೃಷ್ಣ, ಉದಯಶಂಕರ ಭಟ್, ಶ್ರೀ ರಾಮಕೃಷ್ಣ ನಿನ್ನಿಕಲ್ಲು, ದಿನೇಶ್ ಭಟ್ ಬಳಂಜ, ಶ್ರೀಮತಿ ಕೆ.ಆರ್. ಸುವರ್ಣ ಕುಮಾರಿ ಭಾಗವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಶ್ರೀ ಮೋಹನದಾಸರು ಕಲಾವಿದರನ್ನು ಗೌರವಿಸಿದರು.

Read More

ಮಂಗಳೂರು : ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು, ದ.ಕ. ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ಸಾರಥ್ಯದಲ್ಲಿ ರೋಹನ್ಸ್ ಕಾರ್ಪೋರೇಶನ್ ಸಹಯೋಗದಲ್ಲಿ ದಿನಾಂಕ 01-03-2024ರಿಂದ 03-03-2024ರವೆರೆಗೆ ಪಣಂಬೂರು ಬೀಚ್ ನಲ್ಲಿ ‘ಜಾನಪದ ಕಡಲೋತ್ಸವ’ವನ್ನು ಆಯೋಜಿಸಲಾಗಿದೆ. ದಿನಾಂಕ 01-03-2024ರಂದು ಸಂಜೆ 6.30ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜಾನಪದ ಕಡಲೋತ್ಸವ ಉದ್ಘಾಟಿಸಲಿದ್ದಾರೆ. ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ವಿವಿಧ ಪ್ರದರ್ಶನ ಉದ್ಘಾಟಿಸುವರು. ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಜನಪ್ರತಿನಿಧಿಗಳು, ಗಣ್ಯರು ಭಾಗವಹಿಸಲಿದ್ದಾರೆ. ಇದೇ ವೇಳೆ ‘ಜಾನಪದ ಕಡಲೋತ್ಸವ ಪ್ರಶಸ್ತಿ’ ಪ್ರದಾನ ಮತ್ತು ಹದಿಮೂರು ಮಂದಿ ಜಾನಪದ ಕಲಾವಿದರಿಗೆ ಗೌರವಾರ್ಪಣೆ ನಡೆಯಲಿದೆ. ಸಂಜೆ 7.30ರಿಂದ ಡಾ. ರಮೇಶ್ಚಂದ್ರ ಹಾಗೂ ಕಲಾವತಿ ದಯಾನಂದ ಬಳಗದಿಂದ ‘ಜಾನಪದ ರಸ ಸಂಜೆ’ ಕಾರ್ಯಕ್ರಮ ಜರಗಲಿದೆ. ದಿನಾಂಕ 02-03-2024ರಂದು ಸಂಜೆ 5.30ರಿಂದ ವಿಚಾರ ಸಂಕಿರಣ ಮತ್ತು ಜಾನಪದ ಪರಿಷತ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರಗಲಿದೆ. ಶಾಸಕ ಅಶೋಕ್ ಕುಮಾರ್ ರೈ ಮತ್ತು ಕ.ಜಾ.ಪ. ಬೆಂಗಳೂರು ಆಡಳಿತಾಧಿಕಾರಿ…

Read More

ಕಾಸರಗೋಡು : ಕಾಸರಗೋಡಿನ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸಂಘ ‘ರಂಗ ಚಿನ್ನಾರಿ’ ಇದರ ಮಹಿಳಾ ಘಟಕ ‘ನಾರಿ ಚಿನ್ನಾರಿ’ಯು ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ  ಸಹಯೋಗದಲ್ಲಿ ಆಯೋಜಿಸಿದ ‘ಗೃಹ ಸಲ್ಲಾಪ’, ಸಾಧಕಿಯರ ಜೊತೆ ಮಾತುಕತೆಯ ವಿನೂತನ ಕಾರ್ಯಕ್ರಮವು ದಿನಾಂಕ 26-02-2024ರ ಸೋಮವಾರ ಸಂಜೆ ಘಂಟೆ 4.00 ರಿಂದ ಕಾಸರಗೋಡಿನ ಕೂಡ್ಲು ರಾಮದಾಸ ನಗರದ ‘ಭುವನ ವಿಜಯ’ದಲ್ಲಿ ನಡೆಯಿತು.  ಈ ಸರಣಿ ಕಾರ್ಯಕ್ರಮದ ಪ್ರಥಮ ಕಾರ್ಯಕ್ರಮವನ್ನು ಲೇಖಕಿ ಹಾಗೂ ಗಾಯಕಿಯಾದ ಕೃಪಾ ಕೆ. ಜಿ. ಶಾನುಭೋಗ್  ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಧೂರು ಗ್ರಾಮ ಪಂಚಾಯತಿನ ಮಾಜಿ ಉಪಾಧ್ಯಕ್ಷೆ ಸುಜ್ಞಾನಿ ಶಾನುಭೋಗ್ ಮಾತನಾಡಿ “ರಂಗ ಚಿನ್ನಾರಿಯ ಮಹಿಳಾ ಘಟಕ ನಾರಿ ಚಿನ್ನಾರಿಯು ಕಳೆದ 12 ತಿಂಗಳಲ್ಲಿ ನಿರಂತರವಾಗಿ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದೆ. ಮಹಿಳೆಯರಲ್ಲಿ ಸೂಕ್ತವಾಗಿರುವ ಪ್ರತಿಭೆಗಳಿಗೆ ವೇದಿಕೆ ನಿರ್ಮಿಸಿ ಕೊಟ್ಟಿದೆ. ಇದೀಗ ‘ಗೃಹ ಸಲ್ಲಾಪ’ದ ಮುಖಾಂತರ ಸಾಧಕಿಯರ ಮನೆ ಮನ ಮುಟ್ಟುವ ಕೆಲಸ ಮಾಡುತ್ತಿರುವುದು ಸಂತಸ ನೀಡಿದೆ.”…

Read More

ಕಾರ್ಕಳ : ಜಾಗೃತಿ ಸಾಹಿತ್ಯಾಸಕ್ತ ಮಹಿಳಾ ಸಂಘಟನೆಯ ಮಾಸಿಕ ಕಾರ್ಯಕ್ರಮ ಹಾಗೂ ಕಥಾಗೋಷ್ಠಿ ದಿನಾಂಕ 25-02-2024 ರಂದು ಕಾರ್ಕಳದ ಸರಕಾರಿ ಪದವಿ ಪೂರ್ವ ಕಾಲೇಜಿನ ಹೈಸ್ಕೂಲ್ ವಿಭಾಗದಲ್ಲಿ ನಡೆಯಿತು. ಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಸಾಹಿತಿ ಗಂಗಾಧರ ಪಣಿಯೂರು ಕಥಾರಚನೆ ಮತ್ತು ಕಥಾ ಪ್ರಕಾರಗಳ ಕುರಿತು ಮಾಹಿತಿ ನೀಡಿದರು ಮತ್ತು ಕಥೆಗಳನ್ನು ವಿಮರ್ಶಿಸಿ ಕಥಾ ಕೌಶಲದ ಬಗ್ಗೆ ಅರಿವು ಮೂಡಿಸಿದರು. ಜಾಗೃತಿ ಸಾಹಿತ್ಯಾಸಕ್ತ ಮಹಿಳಾ ಸಂಘಟನೆಯ ಸದಸ್ಯರಾದ ಶ್ಯಾಮಲಾ ಗೋಪಿನಾಥ್, ಸಾವಿತ್ರಿ ಮನೋಹರ್, ಅನುಪಮಾ ಚಿಪ್ಲುಂಕರ್, ಶೈಲಜಾ ಹೆಗ್ಡೆ, ಡಾ. ಸುಮತಿ ಪಿ., ವಸುಧಾ ಶೆಣೈ, ಮಾಲತಿ ಜಿ. ಪೈ, ಶ್ರೀ ಮುದ್ರಾಡಿ, ಪ್ರಜ್ಞಾವಾಣಿ ಗೋರೆ ಹಾಗೂ ರೇಖಾ ವಸಂತ್ ಕಥಾ ಗೋಷ್ಠಿಯಲ್ಲಿ ಭಾಗವಹಿಸಿದ್ದರು. ಗೀತಾ ಆರ್ ಮರಾಠ ಪ್ರಾರ್ಥಿಸಿ, ಜಾಗೃತಿ ಸಾಹಿತ್ಯಾಸಕ್ತ ಮಹಿಳಾ ಸಂಘಟನೆಯ ಅಧ್ಯಕ್ಷ ಮಿತ್ರಪ್ರಭಾ ಹೆಗ್ಡೆ ಸ್ವಾಗತಿಸಿ, ಬಿ. ವಿ. ಸುಲೋಚನಾ ಕಾರ್ಯಕ್ರಮ ನಿರೂಪಿಸಿ, ಶಕುಂತಲಾ ಜಿ. ಅಡಿಗ ವಂದಿಸಿದರು.

Read More

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ದಿನಾಂಕ 19-02-2024 ರಂದು ನಿಧನರಾದ ಹಿರಿಯ ಸಾಹಿತಿ ಕೆ.ಟಿ. ಗಟ್ಟಿ ಅವರಿಗೆ ನುಡಿ ನಮನ ಕಾರ್ಯಕ್ರಮವು ದಿನಾಂಕ 24-02-2024ರ ಶನಿವಾರದಂದು ಮಂಗಳೂರಿನ ಎಸ್‌. ಡಿ. ಎಂ. ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ವಿದ್ವಾಂಸ ಡಾ. ಪ್ರಭಾಕರ ಜೋಷಿ “ಸಾಮಾನ್ಯರ ಜೀವನದ ಜೀವಂತ ಪಾತ್ರಗಳು ಕೆ. ಟಿ. ಗಟ್ಟಿ ಅವರ ಸಾಹಿತ್ಯದಲ್ಲಿ ಎದ್ದು ಕಾಣುವ ರೀತಿಯಲ್ಲಿ ಇರುತ್ತಿದ್ದವು. ಅವರ ಎಲ್ಲಾ ಸಾಹಿತ್ಯದ ಸಮಗ್ರ ಅಧ್ಯಯನ ವಿದ್ಯಾರ್ಥಿಗಳಿಗೆ ಕಲಿಕೆಯ ಪಾಠವಾಗಬೇಕು.” ಎಂದು ನುಡಿದರು. ಪ್ರಾಧ್ಯಾಪಕ ಡಾ. ಶ್ರುತಕೀರ್ತಿರಾಜ್ ಮಾತನಾಡಿ “ಸಾಹಿತಿ ಕೆ. ಟಿ. ಗಟ್ಟಿ ಅವರು ದಿನದ ನಿತ್ಯ ಕರ್ಮ ಬಿಟ್ಟರೆ ಇಪ್ಪತ್ನಾಲು ಗಂಟೆಗಳ ಸಮಯ ಬರವಣಿಗೆಗೆ ಮೀಸಲಿಟ್ಟಿದ್ದರು. ಸಮಯ ಮಿಕ್ಕಿದರೆ ಕೃಷಿಯಲ್ಲಿ ತೊಡಗುತ್ತಿದ್ದರು. ಆದುದರಿಂದ ಅವರ ಬರಹಗಳು ನೈಜತೆಯ ಆಗರವಾಗಿದ್ದುವು.” ಎಂದು ತಿಳಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ಜಿಲಾಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಮಾತನಾಡಿ “ಸಾಹಿತ್ಯದ ಬೆಳವಣಿಗೆಗೆ ಮತ್ತು ಅಧ್ಯಯನಕ್ಕೆ…

Read More

ಉಡುಪಿ : ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆ ವತಿಯಿಂದ ಭುಜಂಗ ಪಾರ್ಕ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ರಂಗಹಬ್ಬದ 2ನೇ ದಿನದ ಕಾರ್ಯಕ್ರಮವು ದಿನಾಂಕ 26-02-2024ರಂದು ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾರ್ಕಳ ಜ್ಞಾನಸುಧಾ ವಿದ್ಯಾಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಎಂ. ಕೊಡವೂರು ಮಾತನಾಡಿ “ಸಮಾಜದ ತೊಡಕುಗಳನ್ನು ತೊಡೆದು ಹಾಕುವ ಕೆಲಸವನ್ನು ರಂಗಭೂಮಿ ಮಾಡುತ್ತದೆ. ಯಾವುದೇ ಸಾಂಸ್ಕೃತಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡಾಗ ಬದುಕು ಸಂಭ್ರಮದಿಂದ ಕೂಡಿರುತ್ತದೆ. ವೃತ್ತಿ, ಪ್ರವೃತ್ತಿ ಬೇರೆ ಬೇರೆಯಾಗಿರುತ್ತದೆ. ವೃತ್ತಿಗೆ ಹೆಚ್ಚು ಗಮನಕೊಡಬೇಕಾಗುತ್ತದೆ. ಆಗ ಪ್ರವೃತ್ತಿ ಹಿಂದಕ್ಕೆ ಸರಿಯುತ್ತದೆ. ಮಕ್ಕಳಲ್ಲಿ ಉತ್ತಮ ಅಭಿರುಚಿ ಬೆಳೆಸಲು ಪ್ರವೃತ್ತಿ ಅಗತ್ಯ. ಕಾಲ ಬದಲಾಗಿದೆ, ಮಕ್ಕಳು ಬದಲಾಗಿದ್ದಾರೆ. ಹಿಂದಿನಂತೆ ಇಲ್ಲ ಎಂಬ ಮಾತುಗಳಿವೆ. ಆದರೆ, ಬದಲಾಗಿದ್ದು, ಕಾಲ ಅಥವಾ ಮಕ್ಕಳು ಅಲ್ಲ. ಬದಲಾಗಿದ್ದು, ಹೆತ್ತವರ ಮನಸ್ಸು. ಇರುವ ಒಂದು ಅಥವಾ ಎರಡು ಮಕ್ಕಳೇ ಸಂಗೀತ, ಕರಾಟ, ಕ್ರೀಡೆ, ಕಲಿಕೆ ಎಲ್ಲದರಲ್ಲಿಯೂ ಮೊದಲ ಸ್ಥಾನದಲ್ಲಿರಬೇಕು ಎಂದು ಹೆತ್ತವರು ಬಯಸುತ್ತಿರುವುದೇ ಮಕ್ಕಳು ಹಿಂದಿನ ಕಾಲದಲ್ಲಿ ಇರುವಂತೆ ಈಗ…

Read More