Author: roovari

ಬೆಂಗಳೂರು : ‘ಪದ’ ಪ್ರಸ್ತುತ ಪಡಿಸಿದ ‘ಕರ್ನಾಟಕ ಜಾನಪದ ಉತ್ಸವ’ವನ್ನು ಬೆಂಗಳೂರಿನ ಮಲತ್ತಹಳ್ಳಿಯ ಕಲಾ ಗ್ರಾಮ ಸಮುಚ್ಚಯ ಭವನದಲ್ಲಿ ದಿನಾಂಕ 19-02-2024ರಂದು ಜಾನಪದ ವಿದ್ವಾಂಸರಾದ ಹಿಚಿ ಬೋರಲಿಂಗಯ್ಯನವರು ತಮಟೆ ನುಡಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡುತ್ತಾ “ಜಾನಪದ ಕಲೆ ಜನಪದದಿಂದ ಬಂದಿದ್ದು ಸರಕಾರಗಳು ಈ ಕಲೆಗೆ ಪ್ರೋತ್ಸಾಹ ನೀಡಬೇಕಾದದ್ದು ಅದರ ಕರ್ತವ್ಯ. ಹಿಂದೆ ಸರ್ಕಾರ ಜಾನಪದ ಉತ್ಸವ ಏರ್ಪಡಿಸಿ ಜನಪದ ಕಲಾವಿದರಿಗೆ ವೇದಿಕೆಯನ್ನು ನೀಡುತಿತ್ತು. ಆದರೆ ಇತ್ತೀಚಿಗೆ ಜನಪದ ಕಲಾವಿದರನ್ನು ಮೆರವಣಿಗೆಗೆ ಮಾತ್ರ ಸೀಮಿತಗೊಳಿಸಿ ಅವರನ್ನು ಬೇರೆ ಕಲಾವಿದರಿಗಿಂತ ಕಡಿಮೆ ದರ್ಜೆಯಲ್ಲಿ ಪರಿಗಣಿಸಲಾಗುತ್ತದೆ. ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಮನುಷ್ಯನ ಜೀವನದಿ. ಇದಕ್ಕೆ ಸರ್ಕಾರ ಮತ್ತು ಜನಸಾಮಾನ್ಯರು ಪ್ರೋತ್ಸಾಹ ನೀಡಬೇಕಾದದ್ದು ಬಹಳ ಮುಖ್ಯ. ಈ ಸರ್ಕಾರ ಜನಪದ ಕಲಾವಿದರನ್ನು ಮತ್ತು ಜನಪದರನ್ನು ನಿರಂತರವಾಗಿ ನಡೆಸಿಕೊಳ್ಳುತ್ತಿದೆ. ಆದರೆ ಅವರಿಗೆ ಬೇಕಾದ ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯ. ಕರ್ನಾಟಕದಲ್ಲಿ 180ಕ್ಕೂ ಮಿಕ್ಕಿ ಜನಪದ ಕಲೆಗಳಿವೆ. ದೇಶದಲ್ಲಿ ಇಂತಹ ಕಲೆಗಳು ಇರುವುದು ವಿರಳ. ಇಂತಹ…

Read More

ಮುಂಬಯಿ : ‘ಸೃಜನಾ’ ಮುಂಬಯಿ ಕನ್ನಡ ಲೇಖಕಿಯರ ಬಳಗದಲ್ಲಿ ಸಾಹಿತ್ಯ ವಿಮರ್ಶೆ, ಕೃತಿ ಲೋಕಾರ್ಪಣೆ ಮತ್ತು ಜನಪದ ಹಾಡುಗಳ ಪ್ರಸ್ತುತಿ ಕಾರ್ಯಕ್ರಮವು ಮುಂಬಯಿಯ ಮಾಟುಂಗಾ ಪೂರ್ವದ ಭಾವುದಾಜಿ ರಸ್ತೆಯಲ್ಲಿರುವ ಮೈಸೂರು ಅಸೋಸಿಯೇಷನ್ ಇದರ ಕಿರು ಸಭಾಗೃಹದಲ್ಲಿ ದಿನಾಂಕ 17-02-2024ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಸಭಾ ಅಧ್ಯಕ್ಷತೆಯನ್ನು ಸೃಜನಾ ಮುಂಬಯಿ ಕನ್ನಡ ಲೇಖಕಿಯರ‌ ಬಳಗದ ಸಂಚಾಲಕಿ ಪದ್ಮಜಾ ಮಣ್ಣೂರ ವಹಿಸಿಕೊಂಡಿದ್ದು. ದೀಪ ಬೆಳಗಿಸಿ ‌ಕಾರ್ಯಕ್ರಮಕ್ಕೆ ಚಾಲನೆ ಇತ್ತು ಸ್ವಾಗತಿಸಿ ಪ್ರಾಸ್ತಾವಿಕ ‌ನುಡಿಗಳನ್ನಾಡುತ್ತಾ “ಜನಪದದಲ್ಲಿ ‌ಹಾಡುಗಳದ್ದೇ ಸಿಂಹಪಾಲು. ಇದು ಹಳ್ಳಿಯ ಜನರ ಸಂಗೀತ. ಇದು ವೇದಕಾಲದಷ್ಟು ಪುರಾತನವಾದುದು. ಇಂತಹ ಜನಪದವು ಮನುಕುಲದ ಜೀವನವಾಗಿತ್ತು. ಕನ್ನಡ ಸಾಹಿತ್ಯ ರತ್ನ ಗರ್ಭಿತ ಕಡಲಿಗೆ ಸಮಾನ. ಈ ಸಾಹಿತ್ಯದಲ್ಲಿ ಹುದುಗಿದ ಸಂಪತ್ತನ್ನು ಹೆಕ್ಕಿ ತೆಗೆದು ಬೆಳಕಿಗೆ ತರುವ ಕೆಲಸ ನಾವು ಮಾಡಬೇಕಾಗಿದೆ. ಹೊಸ ಪೀಳಿಗೆಯಲ್ಲಿ ಆಸಕ್ತಿ ಮತ್ತು ಆದ್ಯತೆಗಳು ಬದಲಾಗುತ್ತಿದ್ದು ಜನಪದ ಗೀತೆಗಳು ತೆರೆಮರೆಗೆ ಸರಿಯುತ್ತಿದೆ. ಇಂತಹ ಕಾಲಘಟ್ಟದಲ್ಲಿ ‘ಸೃಜನಾ’ದಲ್ಲಿ ಜನಪದಕ್ಕೆ ಮಹತ್ವ ಕೊಟ್ಟಿದ್ದು ಸ್ತುತ್ಯವಾಗಿದೆ” ಎಂದು ಹೇಳಿದರು.…

Read More

ಮೂಡುಬಿದಿರೆ : ಮುದ್ದಣ ಪ್ರಕಾಶನ-ಬಲಿಪಗಾನ ಯಾನ ಆಶ್ರಯದಲ್ಲಿ ದಿನಾಂಕ 17-02-2024ರಂದು ಮೂಡುಬಿದಿರೆಯ ಅಲಂಗಾರು ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಮುದ್ದಣ ಕವಿಯ ‘ಶ್ರೇಷ್ಠ ಯಕ್ಷಗಾನ ಪ್ರಸಂಗಗಳ ಧ್ವನಿ ಮುದ್ರಣ’ದ ಲೋಕಾರ್ಪಣೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಧ್ವನಿ ಮುದ್ರಣದ ಲೋಕಾರ್ಪಣೆ ಮಾಡಿದ ಅಷ್ಟಾವಧಾನಿ ವಸಂತ ಭಾರದ್ವಾಜ್ ಕಬ್ಬಿನಾಲೆ ಮಾತನಾಡುತ್ತಾ “ಮುದ್ದಣನ ಕಾವ್ಯಗಳು ಕ್ಲಿಷ್ಟಕರವೆಂದು ಅದನ್ನು ರಂಗವೇದಿಕೆಯಲ್ಲಿ ಹಾಡುವುದಕ್ಕೆ ಕೆಲವು ಭಾಗವತರು ಆಸಕ್ತಿ ತೋರದಿರುವುದು ಮತ್ತು ಅದನ್ನು ಸಾಕ್ಷಾತ್ಕರಿಸುವ ಕೌಶಲವನ್ನು ಕಲಾವಿದರು ಪ್ರದರ್ಶಿಸದೆ ಇರುವುದೇ ಕುಮಾರತ್ರಯದ ಪ್ರದರ್ಶನಗಳ ಸಂಖ್ಯೆ ಕಡಿಮೆಯಾಗಲು ಕಾರಣ. ಕುಮಾರ ವಿಜಯವನ್ನು ಬಿಟ್ಟರೆ ಪ್ರಸಂಗ ಇಲ್ಲ, ಮುದ್ದಣನನ್ನು ಬಿಟ್ಟರೆ ಕವಿ ಇಲ್ಲ ಎನ್ನುವ ವಿಮರ್ಶಕರ ಮಾತು ಸರಿಯಾಗಿದೆ. ಮುದ್ದಣನ ಕೃತಿಗಳ ವಿಶೇಷತೆ ಏನೆಂದರೆ ಅದರ ಛಂದೋಬದ್ಧ ಮತ್ತು ಪದ ಪ್ರಯೋಗ ಕೌಶಲ. ಪ್ರತಿ ಪದದಲ್ಲೂ ಒಂದು ಅಭಿನಯವನ್ನು ಕಾಣಬಹುದು. ಅದಕ್ಕಾಗಿಯೇ ಮುದ್ದಣನ ಕಾವ್ಯಗಳು ಇತರ ಪ್ರಸಂಗಗಳಿಗಿಂತ ವಿಶೇಷವಾಗಿರಲು ಕಾರಣ. ಮುದ್ದಣನ ಕಾವ್ಯದಲ್ಲಿರುವ ಶಬ್ದ ಚಮತ್ಕಾರದಿಂದಾಗಿ ಕಲಾವಿದರು ಅದನ್ನು ಸುಲಭವಾಗಿ ಅರ್ಥೈಸಲು ಸಾಧ್ಯವಾಗದೆ…

Read More

ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಯುಗಾದಿ ಹಬ್ಬದ ಪ್ರಯುಕ್ತ ಯುಗಾದಿ ಕುರಿತಂತೆ ರಾಜ್ಯ ಮಟ್ಟದ ಉಚಿತ ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ. ದಿನಾಂಕ 15-03-2024ರೊಳಗೆ ಈ ಕೆಳಗಿನ ವಿಳಾಸಕ್ಕೆ ಎ4 ಆಳತೆಯ ಹಾಳೆಯಲ್ಲಿ ಒಮ್ಮುಖವಾಗಿ 3 ಪುಟಗಳು ಮೀರದಂತೆ ಕನ್ನಡದಲ್ಲಿ ಪ್ರಬಂಧ ಬರೆದು ಕಳಿಸಬೇಕೆಂದು ತೀರ್ಪುಗಾರರಲ್ಲಿ ಒಬ್ಬರಾದ ಸಾಹಿತಿ, ಕವಿಯತ್ರಿ ಶ್ರೀಮತಿ ರೇಖಾ ಪುರಾಣಿಕ್ ತಿಳಿಸಿದ್ದಾರೆ. ಸ್ಪರ್ಧಿಗಳು ತಮ್ಮ ಪೂರ್ಣ ಪ್ರಮಾಣದ ಹೆಸರು ವಿಳಾಸ ಕನ್ನಡದಲ್ಲೇ ಬರೆಯಬೇಕು. ಆಂಗ್ಲಭಾಷೆಯಲ್ಲಿ ವಿಳಾಸ ಬರೆದರೆ ಸ್ಪರ್ಧೆಗೆ ಸ್ವೀಕರಿಸುವುದಿಲ್ಲ. ವ್ಯಾಟ್ಸಪ್ ಸಂಖ್ಯೆ ಆಂಗ್ಲ ಭಾಷೆಯಲ್ಲಿ ಬರೆಯಬಹುದು. ಯಾವುದೇ ಸಭೆ-ಸಮಾರಂಭಗಳಿಲ್ಲದೇ ಬಹುಮಾನ ವಿಜೇತರಿಗೆ ಮಾತ್ರ ಸ್ಪರ್ಧೆಯ ಫಲಿತಾಂಶ, ಅಭಿನಂದನಾ ಪತ್ರ ಸ್ಪರ್ಧಿಗಳು ಕೊಟ್ಟ ವ್ಯಾಟ್ಸಪ್ ಸಂಖ್ಯೆಗೆ ಕಳಿಸುತ್ತೇವೆ. ಪ್ರಬಂಧ ಬರೆದು ಕಳಿಸುವ ವಿಳಾಸ : ಶ್ರೀಮತಿ ರೇಖಾ ಪುರಾಣಿಕ್, # 39, ರಕ್ಷಾ ಟೆಂಪಲ್ ವ್ಯೂ, ಎಸ್.ಎಫ್.1, 2ನೇ…

Read More

ಮೂಡುಬಿದಿರೆ :  ಕಳೆದ ಮೂರು ದಶಕಗಳಿಂದ ನಾಟಕ ರಂಗದಲ್ಲಿ ವಿವಿಧ ಪಾತ್ರಗಳ ಮೂಲಕ ಗಮನ ಸೆಳೆದಿದ್ದ ತುಳು ನಾಟಕ ಕಲಾವಿದ ವಸಂತ್ ಶೆಟ್ಟಿ ತೋಡಾರು ಅವರು ಅನಾರೋಗ್ಯದಿಂದ ದಿನಾಂಕ 18-02-2024ರ ಭಾನುವಾರ ನಿಧನರಾಗಿದ್ದಾರೆ. ತೋಡಾರು ಗಗನ್ ನಿವಾಸದ ಸುಂದರ ಶೆಟ್ಟಿಯವರ ಸುಪುತ್ರರಾಗಿರುವ ಐವತ್ತೆರಡು ವರ್ಷ ಪ್ರಾಯದ ವಸಂತ ಶೆಟ್ಟಿಯವರು  ಕಳೆದ ಮೂರು ವರುಷಗಳಿಂದ ಅನಾರೋಗ್ಯದಿಂದಿದ್ದರು. ಸುರೇಂದ್ರ ಕುಮಾರ್ ಕಲತ್ರಪಾದೆಯವರ ರಚನೆಯ ಅತ್ಯುತ್ತಮ ನಾಟಕ ‘ಬೈರ ಕುರಲ್‌’ನಲ್ಲಿ ‘ಭಾಷಾ’ ಎಂಬ ಹೆಸರಿನೊಂದಿಗೆ ಖಳನಾಯಕನಾಗಿ ಹೆಸರು ಮಾಡಿದ ವಸಂತ್ ಶೆಟ್ಟಿ, ನಂತರ ತುಳು ರಂಗಭೂಮಿಯ ಪ್ರತಿಭಾನ್ವಿತ ಕಲಾವಿದನಾಗಿ ಬೆಳೆದು ಬಂದಿದ್ದರು. ತೋಡಾರು ಬಂಗಬೆಟ್ಟು ಶಾಲೆಯಲ್ಲಿ 5ನೇ ತರಗತಿಯಲ್ಲಿರುವಾಗಲೇ ನಾಟಕದಲ್ಲಿ ಅಭಿನಯಿಸಿ ನಾಟಕ ರಂಗದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದರು. ಓದು ಮುಗಿಸಿದ ಬಳಿಕ ಅವರು ತುಳು ನಾಟಕಗಳಲ್ಲಿ ತೊಡಗಿಸಿಕೊಂಡರು. ‘ಯಶಸ್ವಿ ಕಲಾವಿದೆರ್’ ಮಂಗಳೂರು ತಂಡದ ಸದಸ್ಯರಾಗಿ ಕೆಲವು ನಾಟಕಗಳಲ್ಲಿ ಅಭಿನಯಿಸಿದ್ದರು. ನಂತರ ‘ನಮ್ಮ ಕಲಾವಿದೆರ್ ಬೆದ್ರ’ ತಂಡಕ್ಕೆ ಸೇರ್ಪಡೆಯಾಗಿ ಜಿಲ್ಲೆಯಾದ್ಯಂತ ಅನೇಕ ತುಳು ನಾಟಕಗಳಲ್ಲಿ ಅಭಿನಯಿಸಿ ಯಶಸ್ವಿ…

Read More

ಶಿವಮೊಗ್ಗ : ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಮಿತಿ, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಮತ್ತು ಸಹ್ಯಾದ್ರಿ ಕಲಾ ಕಾಲೇಜಿನ ಸ್ನಾತಕೋತ್ತರ ಭಾಷಾ ವಿಭಾಗಗಳು, ಅರ್ಥಶಾಸ್ತ್ರ, ರಾಜ್ಯ ಶಾಸ್ತ್ರ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ‘ವಿಶ್ವ ಮಾತೃಭಾಷೆ ದಿನಾಚರಣೆ’ಯು ದಿನಾಂಕ 21-02-2024ರಂದು ಸಹ್ಯಾದ್ರಿ ಕಲಾ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತು  ಶಿವಮೊಗ್ಗ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಡಿ. ಮಂಜುನಾಥ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ “ಬಹು ಭಾಷಾ ಕಲಿಕೆಗೆ ತಂತ್ರಜ್ಞಾನ ಬಳಕೆಯ ಸವಾಲುಗಳ ಜೊತೆಯಲ್ಲಿ ಶಿಕ್ಷಣ ಮತ್ತು ನಿತ್ಯ ಜೀವನದಲ್ಲಿ ಮಾತೃಭಾಷೆ ಬಳಕೆಗೆ ಒತ್ತು ನೀಡುವ ಅಗತ್ಯವಿದೆ. ಪ್ರಪಂಚದ ಎಲ್ಲಾ ಭಾಷೆಗಳು ಉಳಿಯಬೇಕು. ಅದನ್ನು ಮುಂದಿನ ತಲೆಮಾರಿಗೆ ಸಮರ್ಥವಾಗಿ ತಲುಪಿಸುವ ಜವಾಬ್ದಾರಿ ಎಲ್ಲರದ್ದಾಗಬೇಕು. ಅದನ್ನು ನೆನಪಿಸುವ ಸಲುವಾಗಿ ಈ ದಿನಾಚರಣೆ. ನಮ್ಮ ನಿತ್ಯದ ವ್ಯವಸ್ಥೆಯಲ್ಲಿ ಮಾತೃಭಾಷೆ ಹಾಗೂ ಪರಿಸರದ ಭಾಷೆಯನ್ನು ಚೆನ್ನಾಗಿ ಕಲಿಯಿರಿ. ಓದಲು, ಬರೆಯಲು ಬಾರದ ಕಳಪೆ ಶಿಕ್ಷಣವು ಭಾಷೆಯನ್ನು ಉಳಿಸದು. ಗುಣಮಟ್ಟದ ಶಿಕ್ಷಣ ದೊರೆಯಬೇಕಾದರೆ ಅಲ್ಲಿ…

Read More

ಮೂಡುಬಿದಿರೆ : ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮೂಡುಬಿದಿರೆ ತಾಲೂಕು ಘಟಕದ ವತಿಯಿಂದ ಮೂಡುಬಿದಿರೆ ಪ್ರಥಮ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ 20-02-2024ರ ಮಂಗಳವಾರದಂದು ಮೂದಬಿದಿರೆಯ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ “ಕನ್ನಡ ಮಾಧ್ಯಮ ಶಾಲೆಗಳು ಸೋಲುವುದೆಂದರೆ ಅದು ಶ್ರೀ ಸಾಮಾನ್ಯನ ಸೋಲಾಗುತ್ತದೆ. ಕೇವಲ ಭಾವನಾತ್ಮಕವಾಗಿ ಮಾತನಾಡಿದರೆ ಸಾಲದು. ಸರ್ಕಾರ ಹಾಗೂ ಇಲಾಖೆ ಕನಿಷ್ಠ ತರಗತಿಗೊಂದು ಶಿಕ್ಷಕರನ್ನೂ ನೀಡಲಾಗದಿದ್ದರೆ ಮೌಲ್ಯಾಧಾರಿತ ಶಿಕ್ಷಣ ನೀಡಲು ಹೇಗೆ ಸಾಧ್ಯ?. ನಾಡಿನಲ್ಲಿ ಶಿಕ್ಷಣ ವ್ಯವಸ್ಥೆ ಹಾಗೂ ಕನ್ನಡ ಮಾಧ್ಯಮ ಶಾಲೆಗಳ ಹೀನಾಯ ಪರಿಸ್ಥಿತಿಗೆ ಸರಕಾರವೇ ನೇರ ಹೊಣೆ ಎಂದು ಸಾತ್ವಿಕ ಆಕ್ರೋಶ ವ್ಯಕ್ತಪಡಿಸಿದರು. ಸಮ್ಮೇಳನಾಧ್ಯಕ್ಷತೆಯನ್ನು ವಹಿಸಿದ ರಂಗಕರ್ಮಿ ಹಾಗೂ ನಟ ಶ್ರೀಪತಿ ಮಂಜನಬೈಲು ಮಾತನಾಡಿ “ಜಾಗತೀಕರಣದ ಫಲವಾಗಿ ಇಂಗ್ಲಿಷ್ ಎಲ್ಲೆಡೆ ವ್ಯಾಪಿಸಿ ಅಡುಗೆ ಮನೆವರೆಗೂ ವ್ಯಾಪಿಸಿದೆ. ಮುಖ್ಯವಾಗಿ ಕನ್ನಡ ನಮ್ಮ ಹೃದಯದ ಭಾಷೆಯಾಗಬೇಕು.” ಎಂದು…

Read More

ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ 17ನೇ ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ಸುಂಟಿಕೊಪ್ಪದಲ್ಲಿ ನಡೆಸಲು ಜಿಲ್ಲಾ ಸಮಿತಿಯು ತನ್ನ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ತೀರ್ಮಾನಿಸಿದೆ.‌‌ ಈ ಸಭೆಯು ದಿನಾಂಕ 16-02-2024ರಂದು ಮಡಿಕೇರಿಯ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಇವರ ಅಧ್ಯಕ್ಷತೆಯಲ್ಲಿ ನಡೆದಿದೆ. ಮಾರ್ಚ್ ಎರಡನೇ ವಾರದಲ್ಲಿ ಈ ಸಮ್ಮೇಳನವು ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಕೇಂದ್ರ ಸಮಿತಿ ನೀಡುವ ಸತ್ಯವತಿ ವಿಜಯ ರಾಘವ ಚಾರಿಟೇಬಲ್ ಟ್ರಸ್ಟ್ ದತ್ತಿ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಬರಹಗಾರ್ತಿ ಹಂಚೆಟೀರ ಫ್ಯಾನ್ಸಿ ಮುತ್ತಣ್ಣ ಇವರು ಆಯ್ಕೆಯಾಗಿದ್ದು, ಅವರು ಜಿಲ್ಲಾ ಕಾರ್ಯಕಾರಿ ಸಮಿತಿಯ ನಿರ್ದೇಶಕರೂ ಆಗಿದ್ದು, ಅವರನ್ನು ಅವರ ಸಾಧನೆಗಾಗಿ ಗೌರವಿಸಿ ಸನ್ಮಾನಿಸಲಾಯಿತು. ಸನ್ಮಾನಿಸಿದ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ “ಕೊಡಗು ಜಿಲ್ಲೆಯ ಇತಿಹಾಸ ಮತ್ತು ಮಹಿಳೆಯ ಸಮಸ್ಯೆ ಬಗ್ಗೆ ವಿಶೇಷ ಅಧ್ಯಯನ…

Read More

ನೃತ್ಯ ಕಲಾವಿದ/ ಕಲಾವಿದೆಯಾಗಿ ಕಲಾಮಾತೆಯ ಸೇವಾ ಕೈಂಕರ್ಯದಲ್ಲಿ ನಿರಂತರವಾಗಿ ಮುಂದುವರೆದು, ನಟರಾಜನ ದಯೆಗೆ ಪಾತ್ರರಾಗಿ, ಕಲಾ ರಸಿಕರ ಮನದಲ್ಲಿ ಸದಾ ನೆಲೆಗೊಂಡು ಅತ್ಯುತ್ತಮ ಸ್ಥಾನ ಗಳಿಸಿಕೊಳ್ಳುವುದು ಒಂದು ದೊಡ್ಡ ಸಾಧನೆ. ಈ ಸಾಧನೆಗೆ ಪರಿಪಕ್ವ ಮನಸ್ಸು ಮತ್ತು ಶಾಂತಚಿತ್ತದಿಂದ ಎಲ್ಲವನ್ನೂ ಒಂದೇ ರೀತಿಯಲ್ಲಿ ಒಪ್ಪಿಕೊಳ್ಳುವ – ಅಪ್ಪಿಕೊಳ್ಳುವ ಗುಣವು ಬೇಕೇ ಬೇಕು. ಧನಾತ್ಮಕ ಮತ್ತು ಮುಖ್ಯವಾಗಿ ಋಣಾತ್ಮಕ ಅಂಶಗಳನ್ನೂ ಪಡೆದುಕೊಂಡು, ಅದನ್ನು ಮನದಲ್ಲಿ ಅಳೆದು ತೂಗಿ, ತಪ್ಪುಗಳಿದ್ದರೆ ತಿದ್ದಿಕೊಂಡು ಮುಂದಿನ ದಿನಗಳಲ್ಲಿ ಹೊಸ ಬದಲಾವಣೆಯನ್ನು ಸೃಷ್ಟಿಸಿ ಎಲ್ಲರಿಂದ ಸೈ ಅನ್ನಿಸಿಕೊಳ್ಳಲು ಬಹಳ ಕಾಲ ಹಿಡಿಯುತ್ತದೆ. ಈ ಮಧ್ಯೆ ಅದೆಷ್ಟೋ ಅಡಚಣೆಗಳು, ಕಠೋರ ಮಾತುಗಳು, ಮೂಕ ರೋದನೆ ಮತ್ತು ಕೆಲವೊಮ್ಮೆ ಪ್ರತಿಭಟನೆ ಹೀಗೆ ಹಲವಾರು ಆಪತ್ತನ್ನು ಎದುರಿಸುತ್ತಾ, ಒಳ್ಳೆಯದನ್ನು ಸ್ವೀಕರಿಸಿ, ಖುಷಿ ಪಟ್ಟುಕೊಳ್ಳುತ್ತಾ ಸಾಗುತ್ತದೆ ಕಲಾ ಬದುಕು. ನಾವು ಮಾಡುವ ಕೆಲಸಗಳು ಎಲ್ಲರನ್ನೂ ತಲುಪುವುದಿಲ್ಲ, ತಲುಪಿದರೂ ಸಹಜವಾದ ಬದಲಾವಣೆಯನ್ನು ಅವರವರ ದೃಷ್ಟಿಕೋನದಲ್ಲಿ ಉಂಟುಮಾಡಿ ನಮ್ಮನ್ನು ಕ್ರಿಯಾತ್ಮವಾಗಿ ಬೆಳೆಸುತ್ತದೆ. ಇಂತಹ ಕಲಾವಿದ/ಕಲಾವಿದೆಯರು ನಮ್ಮ ನಡುವೆ…

Read More

ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ಆಶ್ರಯದಲ್ಲಿ ಶ್ರೀ ಪುರಂದರ ದಾಸರ ಆರಾಧನಾ ಮಹೋತ್ಸವವು ‘ಶತಕಂಠ ಗಾಯನ’ವು ದಿನಾಂಕ 09-02-2024ರಂದು ಶ್ರೀ ಕೃಷ್ಣ ಮಠ ರಾಜಾಂಗಣದಲ್ಲಿ ನಡೆಯಿತು. ಆ ಪ್ರಯುಕ್ತ ನಡೆದ ಸಭೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು “ಶ್ರೀ ಪುರಂದರ ದಾಸರ ಒಂದೊಂದು ರಚನೆಯಲ್ಲೂ ದೈವಿಕತೆ ಮತ್ತು ದೇವರ ಸಾನ್ನಿಧ್ಯವಿದೆ. ಅವುಗಳನ್ನು ಬಹಳ ಭಕ್ತಿಯಿಂದ ಭಾವಪೂರ್ಣವಾಗಿ ರಚಿಸಿದ್ದಾರೆ. ಅವುಗಳು ಸುಲಲಿತ ಮತ್ತು ಭಾವಜನಕವಾಗಿದ್ದು, ಪ್ರಭಾವ ಬೀರುತ್ತವೆ. ನಿರಂತರ ಆಲಿಸುವಂತೆ ಮಾಡುವ ಶಕ್ತಿಯುಳ್ಳ ಶಾಸ್ತ್ರೀಯ ರಚನೆಗಳು ಪುರಂದರದಾಸರನ್ನು ಆದುದರಿಂದಲೇ ಅವರ ಹಾಡುಗಳು ಎಲ್ಲ ಕಾಲಕ್ಕೂ ಎಲ್ಲರ ಮೇಲೂ ಪ್ರಭಾವ ಬೀರುತ್ತದೆ” ಎಂದು ನುಡಿದರು. ಶ್ರೀಮನ್ ಮಾಧವತೀರ್ಥ ಸಂಸ್ಥಾನದ ಕಿರಿಯ ಪಟ್ಟದ ಯತಿ ಶ್ರೀ ವಿದ್ಯಾವಲ್ಲಭ ಮಾಧವತೀರ್ಥ ಶ್ರೀಪಾದರು ಮಾತನಾಡಿ, ಭ – ಭಕ್ತಿ ಪೂರ್ವಕವಾಗಿ, ಜ – ಜನಾರ್ದನ ರೂಪಿಯಾದ ಕೃಷ್ಣನನ್ನು ಕೃಷ್ಣರೂಪಿ ಜನಾರ್ದನನ್ನು, ನೆ – ನಿರಂತರ ನೆನೆಯುವುದೇ…

Read More