Author: roovari

ಮಡಿಕೇರಿ : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯು ಪ್ರಸಕ್ತ ಸಾಲಿನಲ್ಲಿ ಪ್ರಕಟಿಸಲು ಉದ್ದೇಶಿಸಿರುವ ವಿಷಯಾಧಾರಿತ ಪುಸ್ತಕಗಳ ಪ್ರಕಟಣೆಗೆ ಅರ್ಹ ಆಸಕ್ತ ಯುವ ಬರಹಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಕಾಡೆಮಿ ವತಿಯಿಂದ ಕೊಡ ಮಾಡುವ ಅಂದಾಜು 20 ವಿಭಿನ್ನ ರೀತಿಯ ವಿಷಯಗಳ ಮೇಲೆ ಅಧ್ಯಯನ, ಸಂಶೋಧನೆ ನಡೆಸಿ, ನಿಖರವಾದ ಮಾಹಿತಿ ಸಂಗ್ರಹಿಸಿ ಕನಿಷ್ಟ ನೂರು ಪುಟಗಳ ಸಚಿತ್ರ ವಿವರವುಳ್ಳ ಪುಸ್ತಕಗಳನ್ನು ಹೊರತರಲಾಗುವುದು. ಆಯ್ಕೆಯಾಗುವ ಬರಹಗಾರರಿಗೆ ಪುಸ್ತಕದ ವಿಷಯ ಹಾಗೂ ತಲಾ ರೂ.25 ಸಾವಿರ ಪ್ರೋತ್ಸಾಹ ಧನವನ್ನು ಷರತ್ತುಗಳೊಂದಿಗೆ ನೀಡಲಾಗುವುದು. ಆಸಕ್ತ ಬರಹಗಾರರು ಅಧ್ಯಯನ ಕ್ಷೇತ್ರದಲ್ಲಿ ತಮ್ಮ ಅನುಭವ, ಅರ್ಹತೆ ಹಾಗೂ ಆಸಕ್ತಿಯೊಂದಿಗಿನ ಸ್ವ ವಿವರವುಳ್ಳ ಅರ್ಜಿಯನ್ನು ಅಕಾಡೆಮಿ ಕಚೇರಿಗೆ ತಲುಪಿಸಲು ದಿನಾಂಕ 25 ಡಿಸೆಂಬರ್ 2025 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮೊಬೈಲ್ ಸಂಖ್ಯೆ 8762942976 ಯನ್ನು ಸಂಪರ್ಕಿಸಬಹುದು. ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಮಡಿಕೇರಿ-571201 ಈ ವಿಳಾಸಕ್ಕೆ ಕಳುಹಿಸಬಹುದು ಎಂದು ಅಧ್ಯಕ್ಷರಾದ ಅಜ್ಜಿನಿಕಂಡ ಸಿ.…

Read More

ಮಂಗಳೂರು : ಸುರತ್ಕಲ್ ತಡಂಬೈಲ್ ಇಲ್ಲಿರುವ ಶ್ರೀ ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿ ಇದರ ‘ದಶಮಾನ ವರ್ಷ ಸಂಭ್ರಮಾಚರಣೆ’ ಸಮಾರೋಪ ಸಮಾರಂಭ ಹತ್ತು ದಿನಗಳ ಕಾರ್ಯಕ್ರಮವನ್ನು ದಿನಾಂಕ 22ರಿಂದ 31 ಡಿಸೆಂಬರ್ 2025ರವರೆಗೆ ಪ್ರತಿ ದಿನ ಸಂಜೆ 4-00 ಗಂಟೆಗೆ ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 22 ಡಿಸೆಂಬರ್ 2025ರಂದು ಪುತ್ತೂರು ಬೊಳುವಾರು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದವರಿಂದ ಕವಿ ಹೊಸ್ತೋಟ ಮಂಜುನಾಥ ವಿರಚಿತ ‘ಶ್ರೀ ರಾಮ ನಿರ್ಯಾಣ’ ತಾಳಮದ್ದಲೆ ಪ್ರಸ್ತುತಗೊಳ್ಳಲಿದೆ. ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ‘ದಶದಿಶಾ, ದಶಯಶಾ ಹತ್ತರಹೊತ್ತು’ ಸ್ಮರಣ ಸಂಚಿಕೆ ಬಿಡುಗಡೆಗೊಳ್ಳಲಿದ್ದು, ಶ್ರೀ ವಿನಾಯಕ ಯಕ್ಷಗಾನ ಮಂಡಳಿಯ ಸ್ಥಾಪಕ ಸದಸ್ಯರಾದ ಬಾಲಕೃಷ್ಣ ಸುವರ್ಣ ಇವರನ್ನು ಸನ್ಮಾನಿಸಲಾಗುವುದು. ದಿನಾಂಕ 23 ಡಿಸೆಂಬರ್ 2025ರಂದು ಏಳಿಂಜೆ ಶ್ರೀ ಲಕ್ಷ್ಮೀ ಜನಾರ್ದನ ಮಹಾಗಣಪತಿ ಮಹಿಳಾ ಯಕ್ಷಗಾನ ಮಂಡಳಿಯವರಿಂದ ಕವಿ ಮಧುಕುಮಾರ್ ಬೋಳೂರು ವಿರಚಿತ ‘ಸುದರ್ಶನ…

Read More

ಧಾರವಾಡ : ಅನುಷ್ಕಾ ಪ್ರಕಾಶನ ಧಾರವಾಡ, ಹಿರೇಮಲ್ಲೂರು ಈಶ್ವರನ್ ಪದವಿಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ಧಾರವಾಡ ಇವರ ಸಹಯೋಗದಲ್ಲಿ ಪುಸ್ತಕ ಬಿಡುಗಡೆ ಸಮಾರಂಭವನ್ನು ದಿನಾಂಕ 26 ಡಿಸೆಂಬರ್ 2025ರಂದು ಅಪರಾಹ್ನ 3-30 ಗಂಟೆಗೆ ಹಿರೇಮಲ್ಲೂರು ಈಶ್ವರನ್ ಪದವಿಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ. ಪ್ರೊ. ಶಶಿಧರ ತೋಡಕಲ್ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಪ್ರೊ. ರಾಘವೇಂದ್ರ ಪಾಟೀಲ ಇವರು ಪುಸ್ತಕ ಬಿಡುಗಡೆ ಮಾಡಿ ಆಶಯ ನುಡಿಗಳನ್ನಾಡಲಿದ್ದಾರೆ. ಪ್ರೊ. ಆರುಂಧತಿ ಸವದತ್ತಿ, ಡಾ. ಅನಿತಾ ಗುಡಿ ಮತ್ತು ಲಿಂಗರಾಜ ಸೊಟ್ಟಪ್ಪನವರ ಇವರುಗಳು ಕೃತಿ ಪರಿಚಯ ಮಾಡಲಿದ್ದಾರೆ. ‘ಕಣ್ಮಂಚಿನ ತಾರೆ’, ‘ಮಾಲತಿ ಪಟ್ಟಣಶೆಟ್ಟಿ’, ‘ಕಾಡುಸಂಪಿಗೆ’ ಮತ್ತು ‘ಜೀವ ಸಂವಾದ’ ಕೃತಿಗಳು ಲೋಕಾರ್ಪಣೆಗೊಳ್ಳಲಿದೆ.

Read More

ಮಂಗಳೂರು : ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲಾ ಶಾಸ್ತ್ರೀಯ ನೃತ್ಯ ಕಲಾವಿದರ ಸಂಘಟನೆ ‘ಕರ್ನಾಟಕ ಕರಾವಳಿ ನೃತ್ಯ ಕಲಾ ಪರಿಷತ್ (ರಿ.) ಮಂಗಳೂರು’ ಪ್ರಸ್ತುತ ಪಡಿಸುವ ‘ಸಮೂಹ ನೃತ್ಯ’ ಪ್ರದರ್ಶನವನ್ನು ದಿನಾಂಕ 21 ಡಿಸೆಂಬರ್ 2025ರಂದು ಅಪರಾಹ್ನ 3-00 ಗಂಟೆಗೆ ಮಂಗಳೂರಿನ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಕರಾವಳಿ ನೃತ್ಯ ಕಲಾ ಪರಿಷತ್ ಇದರ ಅಧ್ಯಕ್ಷರಾದ ವಿದುಷಿ ರಾಜಶ್ರೀ ಉಳ್ಳಾಲ್ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಅರುಣ್ ಐತಾಳ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ನಾಟ್ಯನಿಕೇತನ ಕೊಲ್ಕ ಮ೦ಗಳೂರು, ಸನಾತನ ನಾಟ್ಯಾಲಯ ಬಲ್ಲಾಳಭಾಗ್, ಗಾನ ನೃತ್ಯ ಅಕಾಡೆಮಿ ಮ೦ಗಳೂರು, ಶಿವಪ್ರಣಾಮ್‌ ಸ್ಕೂಲ್ ಆಫ್‌ ಡ್ಯಾನ್ಸ್‌ ಕಿನ್ನಿಗೋಳಿ, ನಾದ ನೃತ್ಯ ಸ್ಕೂಲ್ ಆಫ್ ಡಾನ್ಸ್ ಅಂಡ್ ಕಲ್ಬರಲ್ ಟ್ರಸ್ಟ್ ಮ೦ಗಳೂರು, ಶ್ರೀ ಶಾರದಾ ನಾಟ್ಯಾಲಯ ಕುಳಾಯಿ ಹೊಸಬೆಟ್ಟು, ಸವಿಜೀವನಂ ನೃತ್ಯ ಕಲಾಕ್ಷೇತ್ರ ಉಪ್ಪಳ, ಭಾರತಿ ನೃತ್ಯಾಲಯ ಮುಡಿಪು, ನೃತ್ಯ ವಿದ್ಯಾನಿಲಯ ಕದ್ರಿ…

Read More

ಮೈಸೂರು : ಸುಗಮ ಸಂಗೀತ ಅಕಾಡೆಮಿ ಅರ್ಪಿಸುವ ‘ಮಿಶ್ರ ಮಾಧುರ್ಯ’ ಸುಮಧುರ ಗೀತೆಗಳ ಗಾಯನ ಕಾರ್ಯಕ್ರಮವನ್ನು ದಿನಾಂಕ 20 ಡಿಸೆಂಬರ್ 2025ರಂದು ಸಂಜೆ 6-00 ಗಂಟೆಗೆ ಮೈಸೂರು ಜೆ.ಎಲ್.ಬಿ. ರಸ್ತೆಯಲ್ಲಿರುವ ಸಂಗೀತ ಕಲಾನಿಧಿ ಮೈಸೂರು ವಾಸುದೇವಾಚಾರ್ಯ ಭವನ ನಾದ ಬ್ರಹ್ಮ ಸಂಗೀತ ಸಭಾದಲ್ಲಿ ಹಮ್ಮಿಕೊಳ್ಳಲಾಗಿದೆ. ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್ ಇದರ ಅಧ್ಯಕ್ಷರಾದ ಕೆ. ನಾಗರಾಜು ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಅಂಶಿ ಪ್ರನ್ನಕುಮಾರ್ ಮತ್ತು ರಾಮಮೂರ್ತಿ ರಾವ್ ಇವರನ್ನು ಸನ್ಮಾನಿಸಲಾಗುವುದು. ನಿತಿನ್ ರಾಜಾರಾಂ ಶಾಸ್ತ್ರಿ ಮತ್ತು ಶ್ರೀದೇವಿ ಮಂಜುನಾಥ್ ಇವರ ಹಾಡುಗಾರಿಕೆಗೆ ಸಮೀರ್ ರಾವ್, ಪುರುಷೋತ್ತಮ ಕಿರಗಸೂರು, ವೇದಶ್ರೀ ಸಿ.ಎಸ್., ಆತ್ಮಾರಾಂ ನಾಯಕ್ ಇವರುಗಳು ವಾದ್ಯ ಸಹಕಾರ ನೀಡಲಿದ್ದಾರೆ.

Read More

ಚಿಕ್ಕಮಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ದಿನಾಂಕ 14 ಡಿಸೆಂಬರ್ 2025ರಂದು ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ‘ಕೊಂಕಣಿ ಕಲೋತ್ಸವ’ ಕಾರ್ಯಕ್ರಮ ಜರಗಿತು. ಪೂರ್ವಾಹ್ನ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರು ವಹಿಸಿದ್ದರು. ಇವರು ಪ್ರಾಸ್ತಾವಿಕವಾಗಿ ಮಾತನಾಡಿ, “ನಮ್ಮ ಭಾಷೆ, ಸಂಸ್ಕೃತಿಯನ್ನು ಜನರಿಗೆ ಪರಿಚಯಿಸಲು ಹಾಗೂ ನಮ್ಮಲ್ಲಿರುವ ಒಗ್ಗಟ್ಟನ್ನು ತೋರಿಸಲು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಕಾರ್ಯಕ್ರಮ ಕೊನೆಗೊಳ್ಳುವ ತನಕ ಎಲ್ಲರೂ ನಿಂತು ಕಲೆ, ಸಾಹಿತ್ಯವನ್ನು ಪ್ರೋತ್ಸಾಹಿಸಬೇಕು” ಎಂದು ಹೇಳಿ, ನೆರೆದವರೆಲ್ಲರನ್ನೂ ಸ್ವಾಗತಿಸಿದರು. ಗುಮಟ್ ಬಾರಿಸುವುದರ ಮೂಲಕ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಧರ್ಮಗುರುಗಳಾದ ಫಾ. ಜೋಯ್ ರೆಜಿನಾಲ್ಡ್ ಪಾಯ್ಸ್ ರವರು ಮಾತನಾಡಿ, “ಕೊಂಕಣಿ ಸಂಸ್ಕೃತಿಯಲ್ಲಿ ಬೆಳೆದ ನಾನು, ಕೊಂಕಣಿ ಭಾಷೆ, ಶಿಕ್ಷಣವನ್ನು ಯಾವ ಊರಿಗೆ ಹೋದರೂ ಮರೆಯಲು ಸಾಧ್ಯವಿಲ್ಲ. ಇದರಿಂದ ಕೊಂಕಣಿ ಸಂಸ್ಕೃತಿ ಉಳಿಯಲು ಸಾಧ್ಯ” ಎಂದರು. ಗೌರವ ಅತಿಥಿಗಳಾಗಿದ್ದ ವಿಧಾನಪರಿಷತ್ ಸದಸ್ಯರಾದ ಶ್ರೀ ಸಿ.ಟಿ. ರವಿಯವರು ಮಾತನಾಡಿ “ನಾವು…

Read More

ಬೆಂಗಳೂರು : ಶ್ರೀ ರಾಮಸೇವಾ ಮಂಡಲಿ ಟ್ರಸ್ಟ್ (ರಿ.) ಇದರ ವತಿಯಿಂದ ಎಸ್.ವಿ. ನಾರಾಯಣಸ್ವಾಮಿ ರಾವ್ ಇವರ ಜನ್ಮ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ದಿನಾಂಕ 21 ಡಿಸೆಂಬರ್ 2025ರಂದು ಬೆಳಿಗ್ಗೆ 9-30 ಗಂಟೆಗೆ ಬೆಂಗಳೂರು ನೆಟ್ಟಿಗೆರೆ ಗ್ರಾಮದ ಕನಕಪುರ ರಸ್ತೆಯಲ್ಲಿರುವ ಎಸ್.ವಿ.ಎನ್. ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದೆ. ಬೆಳಗ್ಗೆ 9-30 ಗಂಟೆಗೆ ವಿದ್ವಾನ್ ಚಂದ್ರಮೌಲಿ ರಾವ್ ಮತ್ತು ವಿದುಷಿ ಮಾಳವಿಕಾ ರಾವ್ ಇವರ ಹಾಡುಗಾರಿಕೆಗೆ ವಿದ್ವಾನ್ ಮಧುಸೂದನ್ ಭಟ್ ಹಾರ್ಮೋನಿಯಂ ಮತ್ತು ವಿದ್ವಾನ್ ವಿಶ್ವಾಸ್ ಸಾಗರ್ ತಬಲಾ ಸಾಥ್ ನೀಡಲಿದ್ದಾರೆ. ಗಂಟೆ 11-15ಕ್ಕೆ ವಿವಿಧ ಕ್ಷೇತ್ರದ ಸಾಧಕರಿಗೆ ಎಸ್.ವಿ.ಎನ್. ಸ್ಮಾರಕ ಜೀವಮಾನ ಸಾಧನೆ ಪ್ರಶಸ್ತಿ 2025 ಪ್ರದಾನ ಹಾಗೂ ಶ್ರೀದೇವಿ ರವೀಂದ್ರ ದತ್ತಿನಿಧಿ ಸಂಗೀತ ಸ್ಪರ್ಧೆಯ ಬಹುಮಾನ ವಿತರಣೆ ನಡೆಯಲಿದೆ. 12-20 ಗಂಟೆಗೆ ಎಸ್.ಎ.ಪಿ.ಎ. ಇದರ ವಿದ್ಯಾರ್ಥಿಗಳಿಂದ ವಯೋಲಿನ್ ವಾದನ ಪ್ರಸ್ತುತಗೊಳ್ಳಲಿದೆ.

Read More

ಕಾರ್ಕಳ : ಕನ್ನಡ ಸಂಘ ಕಾಂತಾವರ, ಅಲ್ಲಮಪ್ರಭು ಪೀಠ ಕಾಂತಾವರ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕ ಇವುಗಳ ಸಹಭಾಗಿತ್ವದಲ್ಲಿ 2025ರ ವರ್ಷ ಪ್ರತೀ ತಿಂಗಳು ರಾಮಸಾಗರಗಾಮಿನೀ ಎಂಬ ಶ್ರೀಮದ್ ವಾಲ್ಮೀಕಿ ರಾಮಾಯಣ ದರ್ಶನ ಉಪನ್ಯಾಸವನ್ನು ಹಮ್ಮಿಕೊಂಡಿದ್ದು, ಈ ಮಾಲೆಯ ಕೊನೆಯ ಕಾರ್ಯಕ್ರಮ ದ್ವಾದಶ ಸೋಪಾನ ‘ಮಂಗಲಂ ಕೋಸಲೇಂದ್ರಾಯ’ ಎಂಬ ವಿಷಯದ ಕುರಿತು ದಿನಾಂಕ 13 ಡಿಸೆಂಬರ್ 2025ರಂದು ಕಾರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಪ್ರಸಿದ್ಧ ವಿದ್ವಾಂಸರಾದ ಡಾ. ರಾಘವೇಂದ್ರ ರಾವ್ ಪಡುಬಿದ್ರಿ “ಪರಸ್ತ್ರೀ ಅಪಹರಣ ಭೂಷಣವಲ್ಲ. ಅಂಥವರಿಂದ ವಿನಾಶ ಕಂಡ ಅನೇಕ ಉದಾಹರಣೆಗಳಿವೆ. ಯುದ್ಧಕ್ಕೆ ಭುಜಬಲ ಒಂದೇ ಸಾಲದು ಧರ್ಮದ ಬಲವೂ ಬೇಕು. ಶ್ರೀರಾಮನು ಸಾಮಾನ್ಯ ಮನುಷ್ಯನಲ್ಲ ಆತನಲ್ಲಿ ದೈವಬಲದ ಶಕ್ತಿ ಇರುವುದರಿಂದ ನೀನು ವಿವೇಚನೆಯನ್ನು ಕಳೆದುಕೊಳ್ಳದೆ ಸೀತೆಯನ್ನು ರಾಮನಿಗೆ ಒಪ್ಪಿಸು ಎಂಬ ತಮ್ಮ ವಿಭೀಷಣದ ಮಾತಿಗೆ ಕುಪಿತನಾದ ರಾವಣ ವಿಭೀಷಣನನ್ನೂ ಹೊರಗೆ ಹಾಕಿದ. ಹಾಗೆ…

Read More

ಶಿವಮೊಗ್ಗ : ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ (ರಿ.) ಶಿವಮೊಗ್ಗ ಮತ್ತು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಸಮಿತಿ ಇದರ ವತಿಯಿಂದ 244ನೇ ‘ಸಾಹಿತ್ಯ ಹುಣ್ಣಿಮೆ’ ಹಾಡು ಹಾಸ್ಯ ಕಥೆ ಕವನ ಹನಿಗವನ ವಿಚಾರ ತಿಂಗಳ ಕಾರ್ಯಕ್ರಮವನ್ನು ದಿನಾಂಕ 20 ಡಿಸೆಂಬರ್ 2025ರಂದು ಸಂಜೆ 6-30 ಗಂಟೆಗೆ ಶಿವಮೊಗ್ಗದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಉಂಬ್ಳೇಬೈಲು ಮೋಹನ್ ಇವರು ಉದ್ಘಾಟನೆ ಮಾಡಲಿದ್ದು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷರಾದ ಡಿ. ಮಂಜುನಾಥ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಭಜನಾ ಮಂಡಳಿಯವರಿಂದ ಭಜನೆ, ಶಿವಮೊಗ್ಗ ಕದಂಬ ಕರೋಕೆ ಗಾಯನ ತಂಡದವರಿಂದ ಹಾಡು, ಮೇಗರವಳ್ಳಿ ರಮೇಶ್, ಶ್ರೀನಿವಾಸ ಮತ್ತು ಶುಭ ಇವರಿಂದ ಕವನ ವಾಚನ, ಹು.ವ. ಸತೀಶ ಮತ್ತು ಶ್ರೀಮತಿ ಗಾಯತ್ರಿ ಇವರಿಂದ ಹನಿಗವನ ಹಾಗೂ ಕುಮಾರಿ ಸ್ಪಂದನಾ ಚರಂತಿಮಠ ಇವರಿಂದ ಕಥೆ ಪ್ರಸ್ತುತಗೊಳ್ಳಲಿದೆ.

Read More

ಮಂಗಳೂರು : ಅರೆಹೊಳೆ ಪ್ರತಿಷ್ಠಾನ, ನಂದಗೋಕುಲ, ಅಸ್ತಿತ್ವ (ರಿ.) ಮಂಗಳೂರು, ರಂಗಸಂಗಾತಿ ಮಂಗಳೂರು, ಕೆನರಾ ಕಲ್ಚರ್ ಅಕಾಡೆಮಿ ಮತ್ತು ರೂವಾರಿ. ಕಾಂ ಇವರ ಸಹಕಾರದೊಂದಿಗೆ ಆಯೋಜಿಸುತ್ತಿರುವ ‘ನೀನಾಸಂ ತಿರುಗಾಟ ನಾಟಕೋತ್ಸವ 2025’ವು ದಿನಾಂಕ 23 ಮತ್ತು 24 ಡಿಸೆಂಬರ್ 2025ರಂದು ಪ್ರತಿದಿನ ಸಂಜೆ ಗಂಟೆ 6-45ಕ್ಕೆ ಮಂಗಳೂರಿನ ಕೆನರಾ ಪದವಿಪೂರ್ವ ಕಾಲೇಜಿನ ಬಯಲು ರಂಗಮಂಟಪದಲ್ಲಿ ನಡೆಯಲಿದೆ. ದಿನಾಂಕ 23 ಡಿಸೆಂಬರ್ 2025ರಂದು ಖ್ಯಾತ ಲೇಖಕಿ ಬಾನು ಮುಷ್ತಾಕ್ ಇವರ ಕತೆಯಾಧಾರಿಸಿ ಡಾ. ಎಂ. ಗಣೇಶ್ ನಿರ್ದೇಶಿಸಿದ ‘ಹೃದಯದ ತೀರ್ಪು’ ಎಂಬ ನಾಟಕ ಪ್ರದರ್ಶನಗೊಳ್ಳಲಿದೆ. ದಿನಾಂಕ 24 ಡಿಸೆಂಬರ್ 2025ರಂದು ಮಲೆಯಾಳ ಮೂಲ ಜಿ. ಶಂಕರ್ ಪಿಳ್ಳೈ ರಚಿಸಿದ, ಡಾ. ನಾ. ದಾಮೋದರ ಶೆಟ್ಟಿ ಕನ್ನಡಕ್ಕೆ ಅನುವಾದಿಸಿ, ಶಂಕರ್ ವೆಂಕಟೇಶ್ವರ್ ನಿರ್ದೇಶಿಸಿದ ‘ಅವತರಣಮ್ ಭ್ರಾಂತಾಲಯಂ’ ಎಂಬ ನಾಟಕ ಪ್ರದರ್ಶನಗೊಳ್ಳಲಿದೆ. ಎರಡೂ ವಿಭಿನ್ನ ನಾಟಕಗಳು ರಾಜ್ಯಾದ್ಯಂತ ಸಾಕಷ್ಟು ಸುದ್ದಿ ಮಾಡಿದ ರಂಗಪ್ರಯೋಗಗಳು. ‘ಹೃದಯದ ತೀರ್ಪು’ ನಾಟಕದಲ್ಲಿ ಒಂದು ಸಾಂಸಾರಿಕ ವೃತ್ತಾಂತವೇ ಚಿತ್ರಿತವಾಗಿದೆ. ಮುಖ್ಯವಾಗಿ ತಾಯಿ,…

Read More