Author: roovari

ಬೇಳ : ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಅಂಗ ಸಂಸ್ಥೆಯಾದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ನಡೆಯುವ ಏಕದಿನ ಕನ್ನಡ ಸಾಹಿತ್ಯ ಅಭಿಯಾನವಾದ, ‘ಕನ್ನಡದ ನಡಿಗೆ ಶಾಲೆಯ ಕಡೆಗೆ’ ಶೈಕ್ಷಣಿಕ ಶಿಬಿರದ 6ನೇ ಕಾರ್ಯಕ್ರಮವು ದಿನಾಂಕ 20 ಸೆಪ್ಟೆಂಬರ್ 2025ರಂದು ಬೆಳಗ್ಗೆ 9-30 ಗಂಟೆಗೆ ಬೇಳ ಸಂತ ಬರ್ತಲೋಮೆಯ ಹಿರಿಯ ಬುನಾದಿ ಶಾಲೆಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಬೇಳ ಸಂತ ಬರ್ತಲೋಮೆಯ ಹಿರಿಯ ಬುನಾದಿ ಶಾಲೆಯ ಸಂಚಾಲಕರಾದ ಸಿಸ್ಟರ್ ಮಾರ್ಸೆಲಿನ್ ಬ್ರಾಗ್ಸ್ ಇವರು ಉದ್ಘಾಟಿಸಲಿದ್ದು, ಮುಖ್ಯ ಶಿಕ್ಷಕರಾದ ಸಿಸ್ಟರ್ ಎಲಿಜಬೆತ್ ಪಿ.ಎ.ಇವರು ಸಭೆಯ ಅಧ್ಯಕ್ಷತೆ ವಹಿಸುವರು. ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯದ ಸ್ಥಾಪಕ ಅಧ್ಯಕ್ಷರಾದ ಡಾ. ಕೆ ವಾಮನ್ ರಾವ್ ಬೇಕಲ್ ಇವರು ಪ್ರಸ್ತಾವನೆ ಹಾಗೂ ಬೇಳ ಸಂತ ಬರ್ತಲೋಮೆಯ ಹಿರಿಯ ಬುನಾದಿ ಶಾಲೆಯ ಅಧ್ಯಕ್ಷರಾದ ಶಂಕರ ಡಿ. ಮತ್ತು ಶ್ರೀಮತಿ ಸರಿತಾ…

Read More

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲಾ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘಗಳ ಸಮ್ಮಿಲನ ಹಾಗೂ ಸ್ಪರ್ಧೆಗಳ ಕಾರ್ಯಕ್ರಮವು ದಿನಾಂಕ 16 ಸೆಪ್ಟೆಂಬರ್ 2025ರ ಮಂಗಳವಾರದಂದು ಶ್ರೀ ಸುಬ್ರಹ್ಮಣೇಶ್ವರ ಪದವಿಪೂರ್ವ ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕರ್ನಾಟಕ ರಾಜ್ಯ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಮಾತನಾಡಿ “ಕರ್ನಾಟಕ ರಾಜ್ಯ ಸಂಸ್ಕೃತಿ ಹಾಗೂ ಸಾಹಿತ್ಯ ಅಕಾಡೆಮಿ ವತಿಯಿಂದ ವಿದ್ಯಾರ್ಥಿಗಳಿಗಾಗಿ ಕಳೆದ ಐದು ವರ್ಷಗಳಿಂದ ಅರೆಭಾಷೆ ಸಂಸ್ಕೃತಿ ಹಾಗೂ ಸಾಹಿತ್ಯದ ಬಗ್ಗೆ ಬೇರೆ ಬೇರೆ ಕಡೆಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದೇವೆ. ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಒಟ್ಟು ಸೇರಿಸಿ ಅವರಿಗೆ ವಾರ್ತೆ ಹಾಗೂ ಸಂಸ್ಕೃತಿಯನ್ನ ಉಣ ಬಡಿಸಿದಾಗ ಅದು ಮುಂದಿನ ತಲೆಮಾರಿನವರೆಗೂ ನಿರಂತರವಾಗಿ ಸಾಗಲು ಪ್ರೇರೇವಣೆಯಾಗುತ್ತದೆ ಹಾಗೆಯೇ ವಿದ್ಯಾರ್ಥಿಗಳಿಂದಲೇ ಸಂಸ್ಕೃತಿ ಹಾಗೂ ಸಾಹಿತ್ಯಕ್ಕೆ ಪ್ರೋತ್ಸಾಹ ಸಿಗಲಿ ಎನ್ನು ಉದ್ದೇಶದಿಂದ ಎರಡು ಜಿಲ್ಲೆಗಳ ವಿದ್ಯಾರ್ಥಿಗಳಿಗಾಗಿ…

Read More

ಮಂಗಳೂರು : ಕಲಾಸೂರ್ಯ ನೃತ್ಯಾಲಯ ಮಂಗಳೂರು ಇವರು ಇತ್ತೀಚಿನ ಕೆಲವು ವರ್ಷಗಳಿಂದ ನೃತ್ಯ ತರಬೇತಿ ನೀಡುತ್ತಿರುವ ಸಂಸ್ಥೆ. ವಿದ್ವಾನ್ ದೀಪಕ್ ಕುಮಾರ್ ಪುತ್ತೂರು ಇವರ ಶಿಷ್ಯೆಯಾದ ವಿದುಷಿ ಸೌಜನ್ಯ ಪಡ್ವೆಟ್ನಾಯರವರು ನೃತ್ಯ ಶಿಕ್ಷಕಿಯಾಗಿದ್ದು, ದಿನಾಂಕ 10 ಆಗಸ್ಟ್ 2025ರಂದು ಮಂಗಳೂರಿನ ಕಾಪಿಕಾಡಿನ ಶ್ರೀರಾಮ ನಿವಾಸದಲ್ಲಿ ‘ಕಲಾಭವ’ ಎಂಬ ಸರಣಿ ನೃತ್ಯ ಕಾರ್ಯಕ್ರಮದ ಮೊದಲ ಆವೃತ್ತಿಯನ್ನು ಉದ್ಘಾಟನೆ ಮಾಡಲಾಯಿತು. ಈ ಕಾರ್ಯಕ್ರಮವನ್ನು ನಿವಾಸದ ಮಾಲಕರಾದ ಶ್ರೀ ರಮೇಶ ಭಟ್ ಸರವು ಉದ್ಘಾಟಿಸಿ, ಪ್ರಾಸ್ತಾವಿಕ ಮಾತಿನಲ್ಲಿ ಸೌಜನ್ಯಾರವರ ಪತಿ ಶ್ರೀ ವಿಕ್ರಂ ಪಡ್ವೆಟ್ನಾಯರವರು ಕಾರ್ಯಕ್ರಮದ ಉದ್ದೇಶಗಳನ್ನು ವಿವರವಾಗಿ ತಿಳಿಸಿದರು. ಸಂಸ್ಥೆಯ ವಿದ್ಯಾರ್ಥಿನಿ ಕುಮಾರಿ ಸ್ನೇಹ ಭಾಪಟ್ ಪ್ರಾರ್ಥನೆಗೈದರು. ಸಂಸ್ಥೆಯ ಶಿಕ್ಷಕಿ ವಿ. ಸೌಜನ್ಯ ಪಡ್ವೆಟ್ನಾಯರವರು ಸ್ವಾಗತಗೈದರು. ನಂತರ ಪುತ್ತೂರಿನ ಪ್ರಖ್ಯಾತ ಭರತನಾಟ್ಯ ದಂಪತಿ – ಕಲಾದೀಪ ಎಂದು ಹೆಸರು ಪಡೆದ ವಿದ್ವಾನ್ ದೀಪಕ್ ಕುಮಾರ್ ಮತ್ತು ವಿದುಷಿ ಪ್ರೀತಿಕಲಾರವರ ಅಮೋಘ ಭರತನಾಟ್ಯ ಕಾರ್ಯಕ್ರಮ ನಡೆದು ಪ್ರೇಕ್ಷಕರು ಬಹಳ ಸಂಭ್ರಮಪಟ್ಟರು. ಕೊನೆಯಲ್ಲಿ ಅಭ್ಯಾಗತರಾದ ಸರವು ರಮೇಶ್…

Read More

“ಅಮ್ಮಾ… ಕಾಲೇಜಿಗೆ ಹೊರಟಿದ್ದೇನೆ!” ರಸ್ತೆಯಿಂದಲೇ ಜೋರಾಗಿ ಕೂಗಿ ರಾಕೇಶ್ ಬೈಕ್ ಸ್ಟಾರ್ಟ್ ಮಾಡಿದ. ಹೊರಡುವ ಮುನ್ನವೇ ಅಮ್ಮನಿಗೆ ಹೇಳಿ ಹೊರಟರೂ, ಬೈಕ್ ಸ್ಟಾರ್ಟ್ ಮಾಡುವ ಮುನ್ನ ಹೀಗೆ ಜೋರಾಗಿ ಕೂಗಿ ಹೇಳೋದು ರಾಕೇಶ್‌ಗೆ ರೂಢಿ. ಮಗನ ಪ್ರೀತಿಗೆ ಸಂತೋಷ ಪಡೋದು ಅವನ ತಾಯಿಗೆ ರೂಢಿ! ರಾಕೇಶ್ ಹಾಗೆ ಕೂಗಿ ಹೇಳಿದ್ದು, ತನ್ನ ತಾಯಿಗಾಗಿ ಅಲ್ಲ ಎಂಬ ಸತ್ಯ ಆ ತಾಯಿಗೆ ತಿಳಿದಿರಲಿಲ್ಲ. ರಾಕೇಶ್‌ನ ಕೂಗು ಎಲ್ಲಿಗೆ ಕೇಳಿಸಬೇಕಿತ್ತೋ ಅಲ್ಲಿ ಕೇಳಿಸಿತು. ಅದಕ್ಕೂ ಮುನ್ನವೇ ರಾಕೇಶ್ ಮೊಬೈಲ್‌ನಿಂದ ಅಲ್ಲಿಗೆ ಸಂದೇಶ ಹೋಗಿತ್ತು. ಆ ಕೂಗು ಕೇವಲ ಔಪಚಾರಿಕ ಮಾತ್ರ. ರಾಕೇಶ್ ಬೈಕ್ ಸ್ಟಾರ್ಟ್ ಮಾಡಿ ಹೊರಟ ಕೂಡಲೇ, ಅವನ ಮನೆಯ ಪಕ್ಕದ ಪುಟ್ಟ ಶೆಟರ್‌ನಲ್ಲಿ ಬಟ್ಟೆ ಇಸ್ತ್ರಿ ಮಾಡುವ ಎಂಕಣ್ಣ ಮೆಲ್ಲನೆ ನಗುತ್ತಾ, ರಾಕೇಶ್ ಮನೆಯ ಎದುರಲ್ಲಿದ್ದ ಮನೆಯ ಕಡೆ ನೋಡಿದ. ಕಲ್ಪನಾ ಸ್ಕೂಟಿಯನ್ನು ತೆಗೆದುಕೊಂಡು ಗೇಟ್ ಹೊರಗೆ ಬಂದಳು. ಸ್ಕೂಟಿ ಸ್ಟಾರ್ಟ್ ಮಾಡಿ ಹೊರಟು ಹೋದಳು. ಎಂಕಣ್ಣ ಈ ದೃಶ್ಯವನ್ನು ಆರು…

Read More

ಬೆಂಗಳೂರು : ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯನವರ ಜನ್ಮದಿನಾಚರಣೆ ಕಾರ್ಯಕ್ರಮ ಮತ್ತು ವಿವಿಧ ದತ್ತಿ ಪುರಸ್ಕಾರಗಳ ಪ್ರದಾನ ಕಾರ್ಯಕ್ರಮವು ದಿನಾಂಕ 17 ಸೆಪ್ಟಂಬರ್ 2025ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಪ್ರಸ್ತಾವಿಕ ನುಡಿಗಳನ್ನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು “ಇಂದು ನಮ್ಮ ಕನ್ನಡದ ನೆಲ, ವಿಜ್ಞಾನ, ತಂತ್ರಜ್ಞಾನಗಳ ತವರೂರಾಗಿದೆ. ಇದರ ಬುನಾದಿಯಲ್ಲಿ ವಿಶ್ವೇಶ್ವರಯ್ಯನವರ ಅಗಾಧ ಪರಿಶ್ರಮ ದೂರದೃಷ್ಟಿ, ಸಮಾಜಮುಖಿ ಯೋಜನೆಗಳಿವೆ. ನಿಜವಾದ ಅರ್ಥದಲ್ಲಿ ವಿಶ್ವೇಶ್ವರಯ್ಯ ಮೈಸೂರು ಸಂಸ್ಥಾನದ ಭಾಗ್ಯವಿಧಾತ, ಆಧುನಿಕ ಕರ್ನಾಟಕದ ನಿರ್ಮಾಣಕ್ಕೆ ಕಾರಣರಾದವರು. ಅವರ ಕೊಡುಗೆ ಕರ್ನಾಟಕಕ್ಕೆ ಮಾತ್ರವಲ್ಲದೆ ವಿಶ್ವಕ್ಕೇ ಸಂದಿದೆ. ಕನ್ನಡದ ಅಸ್ಮಿತೆಯನ್ನು ವಿಶ್ವಕ್ಕೇ ತೋರಿಸಿಕೊಟ್ಟರು” ಎಂದು ಪ್ರಶಂಸಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಆಧಾರ ಸ್ತಂಬಗಳಲ್ಲೊಬ್ಬರಾದ ಸರ್.ಎಂ.ವಿಶ್ವೇಶ್ವರಯ್ಯನವರು ಇಡೀ ದೇಶದ ಬೆಳವಣಿಗೆಗೆ ನೀಲಿನಕ್ಷೆಯನ್ನು ಹಾಕಿದವರು ಎಂದು ವಿಶ್ಲೇಷಿಸಿದ ನಾಡೋಜ ಡಾ.ಮಹೇಶ ಜೋಶಿಯವರು ಬೆಂಗಳೂರಿನ ನಾವು ಪ್ರತಿ ಲೋಟ ನೀರು ಕುಡಿಯುವ ಮುನ್ನ ಅವರನ್ನು ಸ್ಮರಿಸಿಕೊಳ್ಳಬೇಕು.…

Read More

ಬೆಂಗಳೂರು : ಗಾಂಧಿ ಸ್ಮಾರಕ ನಿಧಿ ಕರ್ನಾಟಕ ಹಾಗೂ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಕಾರ್ಟೂನ್ ಬೆಂಗಳೂರು, ಈಜಿಪ್ಟ್ ಕಾರ್ಟೂನ್ ಪ್ಲಾಟ್ಫಾರ್ಮ್ ಇವರು ಜಂಟಿಯಾಗಿ “ಗಾಂಧಿ ಸ್ಮಾರಕ ಅಂತರಾಷ್ಟ್ರೀಯ ಕ್ಯಾರಿಕೇಚರ್ ಪ್ರದರ್ಶನ” ವನ್ನು ಆಯೋಜಿಸಿದ್ದು, ಅದರಲ್ಲಿ ಕರ್ನಾಟಕದ ಖ್ಯಾತ ವ್ಯಂಗ್ಯಚಿತ್ರಕಾರ ಶ್ರೀ ಜಾನ್ ಚಂದ್ರನ್ ರವರು ರಚಿಸಿದ ಗಾಂಧೀಜಿಯ ಕ್ಯಾರಿಕೇಚರ್ ಚಿತ್ರವು ಪ್ರದರ್ಶನಕ್ಕೆ ಆಯ್ಕೆಗೊಂಡಿದೆ. ಈ ಅಂತರರಾಷ್ಟ್ರೀಯ ಕ್ಯಾರಿಕೇಚರ್ ಪ್ರದರ್ಶನದಲ್ಲಿ ವಿಶ್ವಖ್ಯಾತ ವ್ಯಂಗ್ಯಚಿತ್ರಕಾರರಾದ ಸರ್ ಡೇವಿಡ್ ಲೊ, ಆರ್. ಕೆ. ಲಕ್ಷ್ಮಣ್, ಶಂಕರ್, ರಂಗ ಸಹಿತ 31 ದೇಶಗಳ ಕಲಾವಿದರ ನೂರಕ್ಕೂ ಮಿಕ್ಕಿದ ಕಲಾಕೃತಿಗಳು ಪ್ರದರ್ಶನಗೊಳ್ಳಲಿವೆ. ಪ್ರದರ್ಶನವು 04 ಅಕ್ಟೋಬರ್ 2025ರಂದು ಬೆಂಗಳೂರಿನ ಎಂ. ಜಿ. ರಸ್ತೆಯಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಕಾರ್ಟೂನಿಷ್ಟ್ಸ್ ಇಲ್ಲಿ ಉದ್ಘಾಟನೆಗೊಳ್ಳಲಿದೆ. ಸಂತ ಅಲೋಷಿಯಸ್ ಪ್ರೌಢಶಾಲೆಯಲ್ಲಿ ಕಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಜಾನ್ ಚಂದ್ರನ್ ತಮ್ಮ ವ್ಯಂಗ್ಯಚಿತ್ರ ರಚನೆಗಾಗಿ ‘ಔಟ್ ಸ್ಟ್ಯಾಂಡಿಂಗ್ ಪರ್ಸನ್ ಪ್ರಶಸ್ತಿ’, ‘ಸುವರ್ಣ ಸಾಧಕ ಪ್ರಶಸ್ತಿ’, ‘ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ’ ಮತ್ತು ‘ಜಿಲ್ಲಾ ರಾಜ್ಯೋತ್ಸವ…

Read More

ಮಂಗಳೂರು : ಸರಯೂನ ಪುಸ್ತಕ ಬಿಡುಗಡೆ ಹಾಗೂ ಪಿ. ವಿ. ಪರಮೇಶ್ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 16 ಸೆಪ್ಟೆಂಬರ್ 2025ರಂದು ಕದ್ರಿ ಶ್ರೀಕೃಷ್ಣ ಜನ್ಮಮಹೋತ್ಸವ ಸಮಿತಿ (ರಿ) ಯ ನಂದಗೋಕಲ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಮಾತನಾಡಿ “ಯಕ್ಷಗಾನ ಕಲಾವಿದರು ಬೆಳಗುತ್ತಾರೆ, ಕಾಲಾನಂತರ ಚರಿತ್ರೆಯಲ್ಲಿ ಮರೆಯಾಗಿ ಹೋಗುತ್ತಾರೆ. ಕಲಾಜಗತ್ತಿನಲ್ಲಿ ಪ್ರಜ್ವಲಿಸಿದ ಸತ್ತೂ ಜೀವಂತವಾಗಿರುವವರ ನೆನಪು ಸದಾ ಅಗತ್ಯ. ಸ್ವಯಂ ಸಾಧಕರಾದ ಪರಮೇಶ್ ರವರ ಅಕಾಲಿಕ ಮರಣ ಯಕ್ಷಗಾನ ರಂಗಭೂಮಿಗೆ ಒಂದು ಕೊರತೆಯಾಗಿ ಕಾಡುತ್ತದೆ. ಸರ್ವವಿಧದಲ್ಲೂ ಸಹಕಾರಿಯಾದ ಅವರ ನೆನಪನ್ನು ಹಸಿರಾಗಿಸುವ ಸರಯೂವಿನ ಪ್ರಯತ್ನ ಶ್ಲಾಘನೀಯವಾದುದು” ಎಂದರು. ಯಕ್ಷಕಲಾವಿದ, ಕಲಾಪೋಷಕ ಪಣಂಬೂರು ವಾಸುದೇವ ಐತಾಳರು ಮಾತನಾಡಿ “ಪರಮೇಶ್ ರಂತಹಾ ಕಲಾವಿದರ ಅಗತ್ಯ ಯಕ್ಷಗಾನಕ್ಕೆ ಇದೆ. ಯಕ್ಷಗಾನದ ಹಿತದೃಷ್ಠಿಯಿಂದ ಹೊಸ ಹೊಸ ಪರಿಕಲ್ಪನೆಯ ಮೂಲಕ ಅದನ್ನು ಸಾಕಾರಗೊಳಿಸಿದ ಸ್ವಯಂ ರಂಗಕರ್ಮಿ . ಒಳ್ಳೊಳ್ಳೆಯ ಸಂಗತಿಗಳನ್ನು ಸರಳೀಕೃತಗೊಳಿಸಿ ರಂಗಕ್ಕೆ ಕೊಟ್ಟ ಸ್ವಯಂಭೂ ಸಾಧಕ. ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಇವರು…

Read More

ಉಡುಪಿ : ತೆಕ್ಕಟ್ಟೆಯ ಶ್ರೀ ಹಯಗ್ರೀವ ಸಭಾಂಗಣದಲ್ಲಿ ದಿನಾಂಕ 13 ಸೆಪ್ಟೆಂಬರ್ 2025ರಂದು ಭಾವಭೂಮಿ ಕುಂದಾಪುರ, ಧಮನಿ ತೆಕ್ಕಟ್ಟೆ, ಯಶಸ್ವಿ ಕಲಾವೃಂದ ತೆಕ್ಕಟ್ಟೆ ಇವರ ಸಹಯೋಗದಲ್ಲಿ ದಿವ್ಯಾ ಶ್ರೀಧರ ರಾವ್ ರಚಿಸಿ, ನಾಗೇಶ್ ಕೆದೂರು ಇವರ ನಿದೇರ್ಶನದ ಶಶಿಕಾಂತ್ ಶೆಟ್ಟಿ ಕಾರ್ಕಳದ ಅಭಿನಯದಲ್ಲಿ ‘ಸ್ತ್ರೀ ಗೃಹಂ ರಕ್ಷತಿ’ ಏಕವ್ಯಕ್ತಿ ರಂಗ ಪ್ರಯೋಗ ಪ್ರಸ್ತುತಿಗೊಂಡಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ “ಪ್ರತಿಯೊಬ್ಬನ ಮನೆಯಲ್ಲಿ ನೆಮ್ಮದಿ, ಶಾಂತಿ ನೆಲೆಸಿದ್ದರೆ ಅದಕ್ಕಿಂತ ದೊಡ್ಡ ಸಂಪತ್ತಿಲ್ಲ. ಮನೆ ನೆಮ್ಮದಿಯಾಗಿ ಇರಬೇಕಾದರೆ ಮನೆಯ ಯಜಮಾನಿ ಸಂತೋಷದಿಂದ ಇರುವುದು ಅತೀ ಮುಖ್ಯ. ಇದನ್ನು ಅರಿತು ಬಾಳಿದವನ ಬದುಕು ಹಸನಾಗುತ್ತದೆ. ಯಾವ ಮನೆಯಲ್ಲಿ ಸ್ತ್ರೀಗೆ ರಕ್ಷಣೆ ಇದೆಯೋ ಅದು ದೇವಾಲಯ ಇದ್ದ ಹಾಗೆ ಎಂಬ ಮಾತಿದೆ. ಇದೀಗ ಈ ಸಂದೇಶವನ್ನು ರಂಗಭೂಮಿ ಮೂಲಕ ಶಶಿಕಾಂತ್ ಶೆಟ್ಟಿಯವರು ಸ್ತ್ರೀ ಸಂವೇದನೆಯೊಂದಿಗೆ ಅಭಿನಯಿಸಿ ತೋರಿಸುತ್ತಿದ್ದಾರೆ. ಕೊಳ್ಯೂರು ರಾಮಚಂದ್ರ ಹೆಗಡೆಯವರ ನಂತರ ಸಮರ್ಥ…

Read More

ಉಪ್ಪಿನಕುದ್ರು : ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಇದರ ವತಿಯಿಂದ 2025ರ ವಿನೂತನ ಕಾರ್ಯಕ್ರಮ ಸರಣಿಯ ಸೆಪ್ಟೆಂಬರ್ ತಿಂಗಳ ಕಾರ್ಯಕ್ರಮದಲ್ಲಿ ಮಂಗಳೂರಿನ ಪ್ರತಿಭಾನ್ವಿತ ಕಲಾವಿದೆ ಕುಮಾರಿ ಪಂಚಮಿ ಭಟ್ ಇವರಿಂದ ‘ಭಕ್ತಿ ಸಂಗೀತ ಕಾರ್ಯಕ್ರಮ’ವನ್ನು ದಿನಾಂಕ 21 ಸೆಪ್ಟೆಂಬರ್ 2025ರಂದು ಸಂಜೆ 4-00 ಗಂಟೆಗೆ ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ಹಮ್ಮಿಕೊಳ್ಳಲಾಗಿದೆ.

Read More

ಮಂಗಳೂರು : ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ (ರಿ.) ಬೆಂಗಳೂರು, ಶ್ರೀ ರಾಮಕೃಷ್ಣ ಮಠ ಮಂಗಳಾದೇವಿ, ಬಹುವಚನಂ ಪುತ್ತೂರು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ಇದರ ಸಹಯೋಗದಲ್ಲಿ ‘ವಿಶ್ವ ಬನ್ನಂಜೆ 90ರ ನಮನ’ ಸಮಾರಂಭವನ್ನು ದಿನಾಂಕ 21 ಸೆಪ್ಟಂಬರ್ 2025ರಂದು ಬೆಳಿಗ್ಗೆ 10-00 ಗಂಟೆಗೆ ಮಂಗಳೂರಿನ ಶ್ರೀ ರಾಮಕೃಷ್ಣ ಮಠದಲ್ಲಿ ಹಮ್ಮಿಕೊಳ್ಳಲಾಗಿತ್ತು. ಶ್ರೀ ರಾಮಕೃಷ್ಣ ಮಠದ ಅಧ್ಯಕ್ಷರಾದ ಶ್ರೀ ಜಿತಕಾಮಾನಂದ ಸ್ವಾಮೀಜಿ ಇವರ ಅಧ್ಯಕ್ಷತೆಯಲ್ಲಿ ಈ ಸಮಾರಂಭವನ್ನು ಉಚ್ಛ ನ್ಯಾಯಮೂರ್ತಿಗಳಾದ ವೇದವ್ಯಾಸ ಆಚಾರ್ಯ ಶ್ರೀಶಾನಂದರು ಉದ್ಘಾಟನೆ ಮಾಡಲಿದ್ದಾರೆ. ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಪತಿಗಳಾದ ಸಿ.ಎ. ರಾಘವೇಂದ್ರ ರಾವ್ ಇವರಿಗೆ ‘ಬನ್ನಂಜೆ ಗೌರವ’ ಸನ್ಮಾನ ಮಾಡಲಾಗುವುದು. ಗೋಷ್ಠಿ 1ರಲ್ಲಿ ‘ಬನ್ನಂಜೆಯವರ ಅನುವಾದ ಸೌಂದರ್ಯ’ ಎಂಬ ವಿಷಯದ ಬಗ್ಗೆ ಪ್ರಾಧ್ಯಾಪಕರಾದ ವಿದ್ವಾನ್ ಕೃಷ್ಣರಾಜ ಕುತ್ಪಾಡಿ ಮತ್ತು ‘ಬನ್ನಂಜೆಯವರು ಸ್ತ್ರೀಯರಿಗೆ ಕೊಟ್ಟ ಧೈರ್ಯ’ ಎಂಬ ವಿಷಯದ ಬಗ್ಗೆ ಕುಮಾರಿ ಅಕ್ಷಯಾ ಗೋಖಲೆ ಇವರು ವಿಷಯ ಮಂಡನೆ ಮಾಡಲಿದ್ದಾರೆ. ಶ್ರೀಮತಿ ಕವಿತಾ ಉಡುಪ ಮತ್ತು ಶ್ರೀಮತಿ ಸುಮಾ…

Read More