Subscribe to Updates
Get the latest creative news from FooBar about art, design and business.
Author: roovari
ಬಾಗಲಕೋಟೆ : ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ (ರಿ.) ಕಮತಗಿ ಹಾಗೂ ವಚನ ವೈಭವ ಮಹಿಳಾ ಜಾನಪದ ಸಾಂಸ್ಕೃತಿಕ ಕಲಾ ಸಂಘ (ರಿ.) ಬಾಗಲಕೋಟೆ ಇವರ ಸಹಯೋಗದಲ್ಲಿ ಬಾಗಲಕೋಟೆಯಲ್ಲಿ ದಿನಾಂಕ 25 ಜನವರಿ 2025ರಂದು ‘ಜನಪದ ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಸಮ್ಮೇಳನ ಸರ್ವಾಧ್ಯಕ್ಷರಾದ ರಾಷ್ಟ್ರಪ್ರಶಸ್ತಿ ಜಾನಪದ ಕಲಾವಿದರಾದ ಶ್ರೀಮತಿ ಗುರಮ್ಮ ಸಂಕಿನಮಠ ಇವರಿಗೆ ದಿನಾಂಕ 22 ಜನವರಿ 2025ರಂದು ಸಿರೂರಿನ ಅವರ ನಿವಾಸಕ್ಕೆ ತೆರಳಿ ಪ್ರೀತಿಯಿಂದ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಈ ಸಂಧರ್ಭದಲ್ಲಿ ಕಥೆಗಾರರು ಹಾಗೂ ಶಿಕ್ಷಕರಾದ ಶ್ರೀ ಲಕ್ಷ್ಮಣ ಬಾದಾಮಿ, ಗ್ರಾಮೀಣ ಕಲೆ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ಶ್ರೀ ಕಲ್ಲಪ್ಪಣ್ಣ ಭಗವತಿ, ಕಾರ್ಯದರ್ಶಿಗಳಾದ ಶ್ರೀ ಬಸವರಾಜ ಜಡ್ರಾಮಕುಂಟಿ, ಶಿಕ್ಷಕರಾದ ಶ್ರೀ ಎಂ.ಎಸ್. ಕಲ್ಗುಡಿ, ವಕೀಲರಾದ ಶ್ರೀ ಸುಭಾಸ್ ಹುಲ್ಯಾಳ ಹಾಗೂ ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘದ ಸದಸ್ಯರಾದ ಶ್ರೀ ವಿನಾಯಕ ಗಡೆದ ಗೌಡರ ಉಪಸ್ಥಿತರಿದ್ದರು. ಈ ಸಮ್ಮೇಳನದಲ್ಲಿ ಪುಸ್ತಕ ಬಿಡುಗಡೆ, ಕಲಾ ಪ್ರದರ್ಶನ, ಭರತನಾಟ್ಯ, ವಿಶೇಷ ಉಪನ್ಯಾಸ, ಕವಿಗೋಷ್ಠಿ ಮತ್ತು…
ಬೆಂಗಳೂರು : ರಂಗರಥ – ಭಾರತೀಯ ಪ್ರದರ್ಶನ ಕಲಾ ಸಂಸ್ಥೆ (ರಿ.) ಅರ್ಪಿಸುವ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು ಇವರ ಸಹಯೋಗದೊಂದಿಗೆ 90 ನಿಮಿಷಗಳ ಸಾಂಸಾರಿಕ ಕನ್ನಡ ಹಾಸ್ಯ ನಾಟಕ ‘ಇದ್ದಾಗ ನಿಮ್ದು ಕದ್ದಾಗ ನಮ್ದು’ ಪ್ರದರ್ಶನವನ್ನು ದಿನಾಂಕ 25 ಜನವರಿ 2025ರಂದು ಸಂಜೆ 7-00 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂ 14ನೇ ಅಡ್ಡ ರಸ್ತೆಯಲ್ಲಿರುವ ಸೇವಾ ಸದನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮೂಲ : ದಾರಿಯೋ ಫೋ (ದ ವರ್ಚುವಸ್ ಬರ್ಗಲರ್) ಕನ್ನಡಕ್ಕೆ ಅನುವಾದ : ಕೆ.ವಿ. ಅಕ್ಷರ, ರಂಗಪಠ್ಯ : ಆಸಿಫ್ ಕ್ಷತ್ರಿಯ, ಸಂಗೀತ: ಭಿನ್ನಷಡ್ಜ ಮತ್ತು ಆಸಿಫ್ ಕ್ಷತ್ರಿಯ ಮತ್ತು ಶ್ವೇತ ಶ್ರೀನಿವಾಸ್ ಇವರ ನಿರ್ದೇಶನದಲ್ಲಿ ಈ ನಾಟಕ ಪ್ರದರ್ಶನಗೊಳ್ಳಲಿದೆ. ನಾಟಕದ ಟಿಕೆಟ್ ಗಳಿಗಾಗಿ 8050157443 / 9448276776 ಸಂಪರ್ಕಿಸಿ.
ಉಡುಪಿ : ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಪ್ರಾಧ್ಯಾಪಕರಾದ ಧೀರಜ್ ಬೆಳ್ಳಾರೆ ಇವರಿಗೆ ಕರ್ನಾಟಕ ಅಚಿವರ್ಸ್ ಬುಕ್ ಆಫ್ ರೆಕಾರ್ಡ್ಸ್ (ಕೆ.ಎ.ಬಿ.ಆರ್.) ವತಿಯಿಂದ ದಿನಾಂಕ 10 ಜನವರಿ 2025ರಂದು ರಾಷ್ಟ್ರೀಯ ದಾಖಲೆ ಪ್ರಮಾಣಪತ್ರವನ್ನು ನೀಡಿ ಗೌರವಿಸಲಾಯಿತು. ಇವರು ಸುಳ್ಯ ತಾಲೂಕಿನ ಕಳಂಜದ ಯುವ ಮತ್ತು ಉತ್ಸಾಹಭರಿತ ಬರಹಗಾರಾಗಿದ್ದು, ‘ಸ್ಟೇಟಸ್ ಕಥೆಗಳು’ ಎಂಬ ಶೀರ್ಷಿಕೆಯ ಸರಣಿಯಡಿಯಲ್ಲಿ ಜುಲೈ 2020ರಿಂದ ಡಿಸೆಂಬರ್ 2024ರವರೆಗೆ 1,635 ಸಣ್ಣ ಕಥೆಗಳನ್ನು ಬರೆಯುವ ಮೂಲಕ ಈ ಗಮನಾರ್ಹ ಸಾಧನೆಯನ್ನು ಮಾಡಿದ್ದಾರೆ. ಈ ಕಥೆಗಳು ಕನ್ನಡ ವೆಬ್ ಸೈಟ್ ನಲ್ಲಿ ನಿರಂತರವಾಗಿ ಪ್ರಕಟವಾಗುತ್ತಿದ್ದು, ನೈತಿಕ ಮೌಲ್ಯಗಳು, ಜೀವನ ಪಾಠಗಳು ಮತ್ತು ಪ್ರಬಲ ಸಾಮಾಜಿಕ ಸಂದೇಶಗಳನ್ನು ಉತ್ತೇಜಿಸಲು ಹೆಸರುವಾಸಿಯಾದ ಇವರ ಕಥೆಗಳು ಓದುಗರನ್ನು ಶ್ರೀಮಂತಗೊಳಿಸುವುದಲ್ಲದೆ, ಸಾಮಾಜಿಕ ಯೋಗಕ್ಷೇಮಕ್ಕೂ ಪ್ರಮುಖ ಕೊಡುಗೆ ನೀಡಿವೆ. ಇವರ ಈ ಸಾಧನೆಗೆ ಸಂಸ್ಥೆಯ ಸಂಸ್ಥಾಪಕರು ಸಿ.ಎ. ಗೋಪಾಲಕೃಷ್ಣ ಭಟ್ ಹಾಗೂ ಶಿಕ್ಷಕ ಶಿಕ್ಷಕೇತರ ವೃಂದದವರು ಶುಭಹಾರೈಸಿದ್ದಾರೆ. ಮಣಿಮಜಲು ಗುರುವಪ್ಪ ಮತ್ತು ಸುಮತಿ ದಂಪತಿಗಳ ಪುತ್ರನಾಗಿರುವ ಧೀರಜ್ ಬಾಳಿಲ…
ಕಾಸರಗೋಡು : ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಆಶ್ರಯದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಸ್ಥಾಪಿಸುವ ನಿಟ್ಟಿನಲ್ಲಿ ಸಿದ್ಧತೆ ಆರಂಭವಾಗಿದೆ. ‘ಇಂದಿನ ಕನ್ನಡ ಮಕ್ಕಳೇ ಮುಂದಿನ ಕನ್ನಡ ರಕ್ಷಕರು’ ಎಂಬ ಚಿಂತನೆಯಲ್ಲಿ ಕಾರ್ಯಾಚರಿಸುವ ಈ ಸಂಸ್ಥೆಯಲ್ಲಿ ಕನ್ನಡಿಗ ಸದಸ್ಯರಿಗೆ ಉಚಿತ ಸದಸ್ಯತ್ವ ನೀಡಲು ನಿರ್ಧರಿಸಲಾಗಿದೆ. ಪರಸ್ಪರ ಸಹಕಾರ ತತ್ವದಡಿಯಲ್ಲಿ ಕನ್ನಡ ಪರವಾದ ಕೆಲಸಗಳನ್ನು ನಡೆಸಲಾಗುವುದು. ಕಾಸರಗೋಡಿನ ಕವಿಗಳಿಗೆ ಕರ್ನಾಟಕದಲ್ಲಿ ನಡೆಯುವ ಅನೇಕ ಕನ್ನಡ ಕಾರ್ಯಕ್ರಮಗಳಲ್ಲಿ ಅವಕಾಶ ಸೃಷ್ಟಿಸುವುದು, ಹಿರಿಯ ಕವಿಗಳ ಮನೆಗೆ ತೆರಳಿ ಕವಿಗೋಷ್ಠಿ ನಡೆಸಿ, ಕವಿಗಳನ್ನು ಗೌರವಿಸಲಾಗುವುದು. ಶಾಲಾ ಮಟ್ಟದಲ್ಲಿ ಸಂಪನ್ಮೂಲ ವ್ಯಕ್ತಿಗಳನ್ನು ಬಳಸಿಕೊಂಡು, ಚುಟುಕು ಸಾಹಿತ್ಯ ರಚನೆ ಸಹಿತ ಇತರ ವಿಚಾರಗಳ ಏಕದಿನ ಕಾರ್ಯಾಗಾರ ನಡೆಸುವುದು, ಶಾಲಾ ಮಕ್ಕಳಿಗೆ ಚುಟುಕು ಸಹಿತ ಸಾಹಿತ್ಯ ರಚನೆಗೆ ಅವಕಾಶ ನೀಡಿ, ಅಭಿನಂದನಾ ಪತ್ರ ನೀಡಿ ಪ್ರೋತ್ಸಾಹಿಸುವುದು. ಹೊಸ ಸಾಹಿತಿಗಳಿಗೆ ಕಾರ್ಯಕ್ರಮದ ವಿವಿಧ ಹಂತಗಳನ್ನು ನಿರ್ವಹಿಸಲು ತರಬೇತಿ ನೀಡುವುದು, ಆಯ್ದ 100 ಮಂದಿ ಕವಿಗಳ…
ನಾಪೋಕ್ಲು : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ನಾಪೋಕ್ಲು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ಬೇತು ನ್ಯಾಪೋಕ್ಲು ಇವರ ಸಂಯುಕ್ತ ಆಶ್ರಯದಲ್ಲಿ 2024 25ನೇ ಸಾಲಿನ ಮಂಡೇಪಂಡ ಅಕ್ಕಮ್ಮ ಗಣಪತಿ ಸ್ಮಾರಕ ದತ್ತಿ ಮತ್ತು ಶ್ರೀ ಎಸ್.ಎಸ್. ರಾಮಮೂರ್ತಿ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ 25 ಜನವರಿ 2025 ಶನಿವಾರ ಬೆಳಿಗ್ಗೆ 10-30 ಗಂಟೆಗೆ ನಾಪೋಕ್ಲಿನ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಪೋಕ್ಲು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ನೆರವಂಡ ಉಮೇಶ್ ಇವರು ವಹಿಸಲಿದ್ದು, ಪ್ರಾಸ್ತಾವಿಕವಾಗಿ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಮತಿ ಕಡ್ಲೇರ ತುಳಸಿ ಮೋಹನ್ ಮಾತನಾಡಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ಅಧ್ಯಕ್ಷರಾದ ಶ್ರೀ ಕುಟ್ಟಂಜೆಟ್ಟಿರ ಮಾದಪ್ಪ ಇವರು ನೆರವೇರಿಸಲಿದ್ದಾರೆ. ಮಂಡೇಪಂಡ ಅಕ್ಕಮ್ಮ ಗಣಪತಿ ಸ್ಮಾರಕ ದತ್ತಿಯ ಉಪನ್ಯಾಸದಲ್ಲಿ…
ತೆಕ್ಕಟ್ಟೆ: ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆಯ ಸಂಯೋಜನೆಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇದರ ಸಹಯೋಗದದೊಂದಿಗೆ ‘ಸಿನ್ಸ್ 1999 ಶ್ವೇತಯಾನ – 101’ ನೇ ಕಾರ್ಯಕ್ರಮದ ಅಂಗವಾಗಿ ಮೈಸೂರಿನ ‘ನಿರ್ದಿಗಂತ’ ತಂಡದಿಂದ ‘ತಿಂಡಿಗೆ ಬಂದ ತುಂಡೇರಾಯ’ ನಾಟಕದ ಪ್ರದರ್ಶನವು ದಿನಾಂಕ 21 ಜನವರಿ 2025ರಂದು ತೆಕ್ಕಟ್ಟೆಯ ಹಯಗ್ರೀವದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ರಂಗ ಸಾಹಿತಿಗಳಾದ ಅಭಿಲಾಷ ಸೋಮಯಾಜಿ ಮಾತನಾಡಿ “ನಾಟಕ ರಂಗಭೂಮಿಯ ವಿಶಿಷ್ಟವಾದ ಕಾರ್ಯದಿಂದಲೇ ರಂಗಕ್ಷೇತ್ರದ ಶಿಸ್ತು ಮತ್ತು ಮೌಲ್ಯ ವೃದ್ಧಿಯಾಗಿದೆ. ‘ನಿರ್ದಿಗಂತ’ ನಾಟಕ ತಂಡದಿಂದ ಹೊಸ ಹೊಸ ಕಲ್ಪನೆಯೊಂದಿಗೆ ಹೊಸ ಹೊಸ ಆವಿಷ್ಕಾರ ನಡೆಯುತ್ತಲೇ ಇದೆ. ರಂಗಭೂಮಿಯ ಪರಿಕಲ್ಪನೆಗಳು ಪ್ರತೀ ನಿರ್ದೇಶಕರಿಂದಲೂ ಬೇರೆ ಬೇರೆ ರೀತಿಯ ಆಯಾಮ ಹೊಂದಿ ವಿಭಿನ್ನವಾಗಿ ರಂಗದಲ್ಲಿ ಬಿತ್ತರಗೊಂಡು ಬುದ್ಧಿಗೆ ಕೆಲಸ ಕೊಡುವಂತಿರುತ್ತದೆ ಹಾಗೂ ಇನ್ನಷ್ಟು ಹುಡುಕಾಟಕ್ಕೆ ಆಸ್ಪದ ನೀಡುತ್ತದೆ” ಎಂದರು. ‘ರಸರಂಗ’ದ ಸುಧಾ ಕದ್ರಿಕಟ್ಟು, ನಿವೃತ್ತ ಜೀವ ವಿಮಾ ಅಧಿಕಾರಿಗಳಾದ ಸತ್ಯನಾರಾಯಣ ಅರಸ್, ಗುರುರಾಜ ಹೆಬ್ಬಾರ್ ಹಂಗಳೂರು, ದೈಹಿಕ ಶಿಕ್ಷಕರರಾದ ಉಮೇಶ್…
ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಇದರ ವತಿಯಿಂದ ಪ್ರತಿಷ್ಠಿತ ಆಳ್ವಾಸ್ ಶಿಕ್ಷಣ ಸಂಸ್ಥೆ ಮೂಡುಬಿದ್ರೆ ಇದರ ವಿದ್ಯಾರ್ಥಿಗಳು ನಟಿಸಿರುವ ಹಿರಿಯ ಸಾಹಿತಿ ವೈದೇಹಿ ಇವರ ರಚನೆಯ ‘ನಾಯಿಮರಿ’ ನಾಟಕವು ದಿನಾಂಕ 30 ಜನವರಿ 2025 ಗುರುವಾರ ಉಡುಪಿಯ ಯಕ್ಷಗಾನ ಕಲಾರಂಗದ ಐ.ವೈ.ಸಿ. ಹವಾನಿಯಂತ್ರಿತ ಸಭಾಂಗಣದಲ್ಲಿ ಪ್ರದರ್ಶನಗೊಳ್ಳಲಿದೆ. ರಂಗ ಮಾಂತ್ರಿಕ ಜೀವನ ರಾಂ ಸುಳ್ಯ ಇವರ ನಿರ್ದೇಶನದ ಶ್ರೇಷ್ಠ ನಾಟಕಗಳಲ್ಲಿ ‘ನಾಯಿಮರಿ’ ನಾಟಕವು ಒಂದು. ಅದ್ಭುತ ಪರಿಕಲ್ಪನೆಯ ಈ ನಾಟಕ ಹಲವು ಪ್ರದರ್ಶನಗಳನ್ನು ಕಂಡಿರುತ್ತದೆ. ಚುರುಕು ನಟನೆ, ರಂಗ ಚಲನೆಗಳು, ರಂಗ ವಿನ್ಯಾಸ, ವಸ್ತ್ರ ವಿನ್ಯಾಸ, ರಂಗ ಪರಿಕರಗಳು ಹಾಗೂ ಬೆಳಕು ಎಲ್ಲವೂ ಈ ನಾಟಕದ ಯಶಸ್ಸಿಗೆ ಕಾರಣ. ಪ್ರತಿಯೊಬ್ಬ ಮಕ್ಕಳು, ಹಿರಿಯರು, ಕುಟುಂಬ ಸಮೇತರಾಗಿ ನೋಡಲೇಬೇಕಾದ ನಾಟಕ. ‘ನಾಯಿಮರಿ’ ನಾಟಕದಲ್ಲಿ ಬರುವ ನಾಯಿಮರಿ ಪಾತ್ರ, ಮಂಗಾಣಿ ಪಾತ್ರ ಹಾಗೂ ಎಲ್ಲಾ ಪಾತ್ರಗಳು ಅದ್ಭುತ.
ಸುರತ್ಕಲ್ : ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ.) ಮತ್ತು ನಾಗರಿಕ ಸಲಹಾ ಸಮಿತಿ (ರಿ.) ಸುರತ್ಕಲ್ ಈ ಸಂಸ್ಥೆಗಳು ಜಂಟಿಯಾಗಿ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಪ್ರಸ್ತುತ ಪಡಿಸುವ ‘ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ’ಯನ್ನು ದಿನಾಂಕ 26 ಜನವರಿ 2025ರಂದು ಸಂಜೆ 5-30 ಗಂಟೆಗೆ ಸುರತ್ಕಲ್ಲಿನ ಅನುಪಲ್ಲವಿಯ ಶ್ರೀ ವಿಶ್ವೇಶ ತೀರ್ಥ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಕೃಷ್ಣಶ್ರೀ ಇವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಗುವ ಈ ಸಂಗೀತ ಕಛೇರಿಯಲ್ಲಿ ಯುವ ಕಲಾ ಮಣಿ ವಿದ್ವಾನ್ ಅನೀಶ್ ವಿ. ಭಟ್ ಇವ ಶಿಷ್ಯ ಬೆಂಗಳೂರಿನ ಪ್ರದ್ಯುಮ್ನ ಭಟ್ ಇವರ ಹಾಡುಗಾರಿಕೆಗೆ ಪುತ್ತೂರಿನ ತನ್ಮಯೀ ಉಪ್ಪಂಗಳ ಮಯಲಿನ್ ಮತ್ತು ಮಂಗಳೂರಿನ ಯುವ ಕಲಾ ಮಣಿ ಕೃಷ್ಣ ಪವನ್ ಕುಮಾರ್ ಮೃದಂಗದಲ್ಲಿ ಸಾಥ್ ನೀಡಲಿದ್ದಾರೆ. ಮಣಿ ಕೃಷ್ಣಸ್ವಾಮಿ ಆಕಾಡೆಮಿಯ ಕಾರ್ಯದರ್ಶಿಯಾದ ಪಿ. ನಿತ್ಯಾನಂದ ರಾವ್ ಹಾಗೂ ಸುರತ್ಕಲ್ ನಾಗರಿಕ ಸಲಹಾ ಸಮಿತಿ ಅಧ್ಯಕ್ಷರಾದ ಡಾ. ಕೆ. ರಾಜಮೋಹನ್ ರಾವ್ ತಮಗೆಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.
ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನೂತನವಾಗಿ ಪ್ರಾರಂಭಿಸಿರುವ ‘ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೊಡಗು ಜಿಲ್ಲೆಯ ಮಹಿಳಾ ಲೇಖಕಿಯರು ಪ್ರಕಟಿಸಿದ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ. 2024-25ನೇ ಸಾಲಿನ ಪ್ರಶಸ್ತಿ ಪುರಸ್ಕಾರ ಪಡೆಯಲು ಆಸಕ್ತ ಮಹಿಳಾ ಲೇಖಕಿಯರು ತಾವು ರಚಿಸಿದ ಸೃಜನಶೀಲ ನಮಾಜಮುಖಿ ಕಥೆ, ಕಾದಂಬರಿ, ಕವನ ಸಂಕಲನ ಕೃತಿಗಳ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಕಳುಹಿಸಬೇಕು. 2019ರ ನಂತರ ಪ್ರಕಟಿತ ಪುಸ್ತಕಗಳನ್ನು ಮಾತ್ರ ಕಳುಹಿಸಬೇಕು. ಸ್ಪರ್ಧೆಗೆ ಪುಸ್ತಕ ಕಳಿಸುವ ಲೇಖಕಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರಬೇಕು. ಓರ್ವ ಲೇಖಕಿ ಒಂದು ಕೃತಿಯನ್ನು ಮಾತ್ರ ಕಳುಹಿಸಬೇಕು. ಲಕೋಟೆಯ ಮೇಲೆ ‘ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ’ ಎಂದು ಬರೆಯತಕ್ಕದ್ದು. ಕೊಡಗು ಜಿಲ್ಲೆಯ ಲೇಖಕಿಯರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು. ಕಳುಹಿಸಬೇಕಾದ ವಿಳಾಸ : ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ. ಮೊಬೈಲ್ ಸಂಖ್ಯೆ : 94483…
ಮಂಗಳೂರು : ಸೌರಭ ಸಂಗೀತ ನೃತ್ಯ ಕಲಾ ಪರಿಷತ್ (ರಿ.) ಮಂಗಳೂರು ಪ್ರಸ್ತುತ ಪಡಿಸುವ ರಾಷ್ಟ್ರಕವಿ ಕುವೆಂಪು ರಚಿಸಿರುವ ‘ಶ್ರೀ ರಾಮಾಯಣ ದರ್ಶನಂ’ ನೃತ್ಯ ರೂಪಕದ ಪ್ರದರ್ಶನವನ್ನು ದಿನಾಂಕ 25 ಜನವರಿ 2025ರಂದು ಸಂಜೆ 5-30 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಂಶುಪಾಲರಾದ ಡಾ. ಗಣಪತಿ ಗೌಡ ಎಸ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ರಾಜೇಶ್ ಜಿ., ಯಾದವ ಸಭಾ ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಎ.ಕೆ. ಮನಿಯಾಣಿ ಮತ್ತು ಕೊಲ್ಯ ನಾಟ್ಯ ನಿಕೇತನದ ವಿದುಷಿ ರಾಜಶ್ರೀ ಉಳ್ಳಾಲ್ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಿಂದ ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಹಿರಿಯ ಪ್ರಾಧ್ಯಾಪಕರಾದ ಡಾ. ಮೋಹನ್ ಕುಂತಾರ್ ಇವರ ಪರಿಕಲ್ಪನೆಯ ವಿದುಷಿ ಶ್ರೀವಿದ್ಯಾ ಇವರ ನಿರ್ದೇಶನದಲ್ಲಿ ನೃತ್ಯ ರೂಪಕ ಪ್ರಸ್ತುತಗೊಳ್ಳಲಿದೆ.