Author: roovari

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ ನೀಡಲಾಗುವ 2022 ಮತ್ತು 2023ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ದಿನಾಂಕ 6 ಸೆಪ್ಟೆಂಬರ್ 2024ರಂದು ಸಂಜೆ 4-30ಕ್ಕೆ ನಗರದ ಪುರಭವನದಲ್ಲಿ ನಡೆಯಲಿದೆ. ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಫರೀದ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಪದಶ್ರೀ ಹರೇಕಳ ಹಾಜಬ್ಬ ‘ಗೌರವ ಪ್ರಶಸ್ತಿ’ ಪ್ರದಾನ ಮಾಡಲಿದ್ದಾರೆ. 2022ನೇ ಸಾಲಿನ ‘ಗೌರವ ಪ್ರಶಸ್ತಿ’ಯನ್ನು ಹಂಝತುಲ್ಲಾ ವೈ ಕುವೇಂಡ ಬೆಂಗಳೂರು, ಮರಿಯಮ್ ಇಸ್ಮಾಈಲ್ ಉಳ್ಳಾಲ, ಎಂ.ಜಿ. ಶಾಹುಲ್ ಹಮೀದ್ ಗುರುಪುರ ಹಾಗೂ 2023ನೇ ಸಾಲಿನ ‘ಗೌರವ ಪ್ರಶಸ್ತಿ’ಯನ್ನು ಹಾಜಿ ಟಿ.ಎ. ಆಲಿಯಬ್ಬ ಜೋಕಟ್ಟೆ, ಮುಹಮ್ಮದ್ ಶರೀಫ್ ನಿರ್ಮುಂಜೆ, ಅಶ್ರಫ್‌ ಅಪೋಲೊ ಕಲ್ಲಡ್ಕ ಸ್ವೀಕರಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯ ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕ್ಕರ್ ಸಿದ್ದೀಕ್ ಬೆಲ್ಕಿರಿ ದ್ವೈಮಾಸಿಕ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದು, ಬಂಟ್ವಾಳ ಮೂಡದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಅಭಿನಂದನಾ ಭಾಷಣ ಮಾಡಲಿದ್ದಾರೆ. ಕರ್ನಾಟಕ ಬ್ಯಾರಿ…

Read More

ಉಡುಪಿ : ತಾಳ್ತಜೆ ಕೇಶವ ಭಟ್ಟರ ಹೆಸರಿನಲ್ಲಿ ನೀಡುವ ಕೇಶವ ಪ್ರಶಸ್ತಿ ಹಾಗೂ ಕಡೆಂಗೋಡ್ಲು ಶಂಕರಭಟ್ಟರ ನೆನಪಿನಲ್ಲಿ ನೀಡುವ ಕಡೆಂಗೋಡ್ಲು ಕಾವ್ಯ ಪ್ರಶಸ್ತಿ ಪ್ರದಾನ ಸಮಾರಂಭವು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಆಶ್ರಯದಲ್ಲಿ ದಿನಾಂಕ 31 ಆಗಸ್ಟ್ 2024ರಂದು ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು. ಎಂ.ಜಿ.ಎಂ. ಕಾಲೇಜಿನ ವಿದ್ಯಾರ್ಥಿನಿ ಅನನ್ಯ ಪ್ರಾರ್ಥನೆಯಿಂದ ಆರಂಭವಾದ ಈ ಸಮಾರಂಭದಲ್ಲಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಅತಿಥಿಗಳಿಗೆ ಪುಷ್ಪ ನೀಡಿ ಸ್ವಾಗತಿಸಿದರು. ತಾಳ್ತಜೆ ವಸಂತ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅನಂತರ ಡಾ. ಯು. ಮಹೇಶ್ವರಿ ಹಾಗೂ ಡಾ. ಶೈಲೇಶ್ ಕುಮಾರ್ ಶಿವಕುಮಾರ್ ಇವರಿಗೆ ಕ್ರಮವಾಗಿ ‘ಕೇಶವ ಪ್ರಶಸ್ತಿ’ ಹಾಗೂ ‘ಕಡೆಂಗೋಡ್ಲು ಕಾವ್ಯ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಡಾ. ಯು. ಮಹೇಶ್ವರಿಯವರ ಕುರಿತು ಶಂಕರನಾರಾಯಣ ಸರಕಾರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಉದಯಕುಮಾರ್ ಶೆಟ್ಟಿ ಹಾಗೂ ಶೈಲೇಶ್…

Read More

ಕರ್ನೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಟ್ಟಣಿಗೆ ಮುಡ್ನೂರು ಕರ್ನೂರು ಇಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷಗಾನ ತರಬೇತಿಯ ಉದ್ಘಾಟನಾ ಸಮಾರಂಭವು ದಿನಾಂಕ 4 ಸೆಪ್ಟೆಂಬರ್ 2024ರಂದು ನೆರವೇರಿತು. ಪಟ್ಲ ಫೌಂಡೇಶನ್ ಪುತ್ತೂರು ಘಟಕದ ಕಾರ್ಯದರ್ಶಿ ಚಂದ್ರಹಾಸ್ ರೈ ಮಾಡಾವು ಇವರು ದೀಪ ಪ್ರಜ್ವಲನೆಯನ್ನು ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪಟ್ಲ ಫೌಂಡೇಶನ್ ಯಾವ ರೀತಿ ಲೋಕಪರಿಚಯವಾಯಿತು, ಬೆಳೆದು ಬಂದು ಕಲಾಭಿಮಾನಿಗಳ ಜೊತೆ ಹೇಗೆ ಒಗ್ಗೂಡಿತು, ಸಾವಿರಾರು ಯಕ್ಷಗಾನ ಪ್ರಿಯರ ಬಾಳು ಉಜ್ವಲಗೊಳಿಸಿದ ಚರಿತ್ರೆಯನ್ನು ಇಂದಿನ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿದರು. ಪ್ರಶಾಂತ್ ರೈ ಮುಂಡಾಲ ಗುತ್ತು ಉಪನ್ಯಾಸಕರು ಸಂತ ಫಿಲೋಮಿನ ಕಾಲೇಜು ಪುತ್ತೂರು ಹಾಗೂ ಸಂಚಾಲಕರು ಪಟ್ಲ ಫೌಂಡೇಶನ್ ಪುತ್ತೂರು ಘಟಕ ಇವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಶ್ರೀರಾಮ ಪಕ್ಕಳ ಇವರು ಮಾತನಾಡಿ “ಯಕ್ಷಗಾನ ಅನ್ನೋದು ಈ ಮಣ್ಣಿನಲ್ಲೇ…

Read More

ಶಿವಮೊಗ್ಗ : ಕರ್ನಾಟಕ ನಾಟಕ ಅಕಾಡೆಮಿಯು ದಿನಾಂಕ 03 ಅಕ್ಟೋಬರ್ 2024ರಿಂದ 07 ಅಕ್ಟೋಬರ್ 2024ರವರೆಗೆ ಶಿವಮೊಗ್ಗ ಜಿಲ್ಲೆಯ ಕುಪ್ಪಳ್ಳಿ, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದಲ್ಲಿ ‘ರಾಜ್ಯಮಟ್ಟದ ನಾಟಕ ರಚನಾ ಶಿಬಿರ’ವನ್ನು ಆಯೋಜಿಸಲಾಗಿದೆ. ಈಗಾಗಲೇ ಸಾಹಿತ್ಯ ಕ್ಷೇತ್ರದಲ್ಲಿ ಮತ್ತು ರಂಗಭೂಮಿಯಲ್ಲಿ ಹೆಸರು ಮಾಡಿರುವ 18ರಿಂದ 40 ವರ್ಷದೊಳಗಿರುವ 20 ಯುವ ಬರಹಗಾರರಿಗೆ ಈ ಶಿಬಿರದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು. ನಾಡಿನ ಶ್ರೇಷ್ಠ ನಾಟಕಕಾರರು ಹಾಗೂ ಕಲಾವಿದರು ಈ ಶಿಬಿರದಲ್ಲಿ ಭಾಗವಹಿಸಿ ಮಾರ್ಗದರ್ಶನ ಮಾಡಲಿದ್ದಾರೆ. ಶಿಬಿರದಲ್ಲಿ ಭಾಗವಹಿಸಲು ಇಚ್ಛಿಸುವವರು ದಿನಾಂಕ 17 ಸೆಪ್ಟೆಂಬರ್ 2024ರೊಳಗೆ ಈ ಕೆಳಗಿನ ವಿಳಾಸಕ್ಕೆ ವಿವರದೊಂದಿಗೆ ಅರ್ಜಿಯನ್ನು ಕಳುಹಿಸಬಹುದು. ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಶಿಬಿರಾರ್ಥಿಗಳ ನೋಂದಣಿ ಮತ್ತು ಪ್ರವೇಶ ಉಚಿತವಾಗಿದ್ದು, ರಂಗಭೂಮಿ ಕ್ಷೇತ್ರದ ಎಲ್ಲಾ ಯುವ ಬರಹಗಾರರು ಭಾಗವಹಿಸಬೇಕಾಗಿ ಕೋರಿದೆ.

Read More

ತೆಕ್ಕಟ್ಟೆ : ರಸರಂಗ (ರಿ.) ಕೋಟ ಸಂಸ್ಥೆಯ ಸಂಯೋಜನೆಯಲ್ಲಿ ಕೈಲಾಸ ಕಲಾಕ್ಷೇತ್ರ ಟ್ರಸ್ಟ್ ತೆಕ್ಕಟ್ಟೆ ಇದರ ಸಹಕಾರದೊಂದಿಗೆ ‘ಸಿನ್ಸ್ -1999 ಶ್ವೇತಯಾನ-55’ ಸರಣಿ ಕಾರ್ಯಕ್ರಮದ ಅಂಗವಾಗಿ ‘ಶ್ರೀ ಕೃಷ್ಣ ದರ್ಶನ’ ವಿನೂತನ ಯಕ್ಷಗಾನ ಪ್ರಯೋಗವು 31 ಆಗಸ್ಟ್ 2024ರಂದು ತೆಕ್ಕಟ್ಟೆಯ ಹಯಗ್ರೀವದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಸರಳ ಭಗವದ್ಗೀತೆ, ಸರಳ ರಾಮಾಯಣ ಮುಂತಾದ ಕೃತಿಗಳನ್ನು ರಚಿಸಿದ ಲೇಖಕಿ ಶ್ರೀಮತಿ ನರ್ಮದಾ ಎನ್. ಪ್ರಭು ತೆಕ್ಕಟ್ಟೆ ಮಾತನಾಡಿ “ಜಗದೊಳಿರುವ ಮನುಜರಿಗೆ ಕೃಷ್ಣ ಪ್ರಜ್ಞೆಯನ್ನು ಹಾಗೂ ನಮ್ಮ ನೆಲದ ಸಂಸ್ಕೃತಿಯನ್ನು ಉಳಿಸಿಕೊಂಡು ಬರುವಲ್ಲಿ ಸತತವಾಗಿ ಹೋರಾಟವನ್ನು ಮಾಡುತ್ತಾ ಬಂದಿರುವವರು ಯಕ್ಷಗಾನ ಕಲಾವಿದರು. ಪ್ರತೀ ಹಳ್ಳಿ ಹಳ್ಳಿಗಳ ದೇವಸ್ಥಾನಗಳಲ್ಲಿ ತಮ್ಮ ಯಕ್ಷಗಾನದ ಪ್ರದರ್ಶನಗಳನ್ನು ನೀಡುವ ಮೂಲಕ ಅನಕ್ಷರಸ್ಥರಲ್ಲೂ ಜ್ಞಾನವನ್ನು ಬೆಳೆಸುವ ಕಾರ್ಯ ಯಕ್ಷಗಾನ ಮಾಡಿದೆ. ಯಕ್ಷಗಾನದಂತಹ ಕಲೆಯ ಜೊತೆಜೊತೆಗೆ ಪುಸ್ತಕದ ಓದೂ ಮನುಷ್ಯನನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ. ಉತ್ತಮ ಕಾರ್ಯಕ್ರಮವನ್ನು ನೀಡುತ್ತಿರುವ ರಸರಂಗ ಸಂಸ್ಥೆಗೆ ಶುಭವಾಗಲಿ.” ಎಂದರು. ಇನ್ನೋರ್ವ ಅಭ್ಯಾಗತರಾದ ಕೈಲಾಸ ಕಲಾಕ್ಷೇತ್ರದ ಅಧ್ಯಕ್ಷರಾದ ಹೆರಿಯ ಮಾಸ್ಟರ್…

Read More

ಕೋಟ : ವಿವೇಕ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ ಹಾಗೂ ಶರಣ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾ ಘಟಕ ಸಹಯೋಗದಲ್ಲಿ ವಿದ್ಯಾರ್ಥಿಗಳಲ್ಲಿ ವಚನ ಹಾಗೂ ಗಮಕ ಕಲೆಗಳ ಪರಿಚಯ ಮಾಡಿಸುವ ‘ವಚನ ಡಿಂಡಿಮ’ ವಚನಗಳ ಗಾಯನ-ವ್ಯಾಖ್ಯಾನ ಕಾರ್ಯಕ್ರಮವು 27 ಆಗಸ್ಟ್ 2024ರಂದು ಕೋಟದ ವಿವೇಕ ವಿದ್ಯಾಸಂಸ್ಥೆಗಳ ಆವರಣದಲ್ಲಿ ನಡೆಯಿತು. ವಿದ್ವಾನ್ ಶಂಭು ಭಟ್ಟರ ಗಾಯನಕ್ಕೆ ಡಾ. ರಾಘವೇಂದ್ರ ರಾವ್ ಪಡುಬಿದ್ರಿ ವ್ಯಾಖ್ಯಾನಗೈದರು. ಇದೇ ಸಂದರ್ಭದಲ್ಲಿ ಡಾ. ರಾಘವೇಂದ್ರ ರಾವ್ ಅವರನ್ನು ಸನ್ಮಾನಿಸಲಾಯಿತು. ವಚನ ಗಾಯನದ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಡಾ. ನಿರಂಜನ ಚೋಳಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಾಂಶುಪಾಲ ಕೆ. ಜಗದೀಶ ನಾವಡ ಸ್ವಾಗತಿಸಿ. ನಳಿನಾಕ್ಷಿ ಕಾರ್ಯಕ್ರಮ ನಿರ್ವಹಿಸಿ, ಹಿರಿಯ ಅಧ್ಯಾಪಕ ಪ್ರೇಮಾನಂದ ವಂದಿಸಿದರು.

Read More

ಮೂಡುಬಿದಿರೆ : ಮಂಗಳೂರು ವಿಶ್ವವಿದ್ಯಾನಿಲಯ ಕನಕದಾಸ ಅಧ್ಯಯನ ಪೀಠ ಮತ್ತು ಕನಕದಾಸ ಸಂಶೋಧನಾ ಕೇಂದ್ರದ ವತಿಯಿಂದ ಶ್ರೀ ಧವಲಾ ಕಾಲೇಜು ಮೂಡಬಿದ್ರೆ ಕನ್ನಡ ವಿಭಾಗ ಇವರ ಸಹಯೋಗದೊಂದಿಗೆ 2024 -25ನೇ ಸಾಲಿನ ಕನಕ ತತ್ವ ಚಿಂತನ ಪ್ರಚಾರೋಪನ್ಯಾಸ ಮಾಲಿಕೆಯು ದಿನಾಂಕ 3 ಸೆಪ್ಟೆಂಬರ್ 2024ರಂದು ಮೂಡಬಿದ್ರೆಯ ಶ್ರೀ ಧವಲಾ ಕಾಲೇಜಿನಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಮುನಿರಾಜ ರೆಂಜಾಳ ಇವರು ‘ಕನಕದಾಸರ ಕಾವ್ಯ : ರಸ ವಿನ್ಯಾಸ’ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡುತ್ತಾ “ಕಲಿಯೂ ಕವಿಯೂ ಆಗಿದ್ದ ಕನಕದಾಸರ ಕೀರ್ತನೆ ಮತ್ತು ಕಾವ್ಯಗಳು ಜನಸಾಮಾನ್ಯರಿಗೂ ತಲುಪಬಲ್ಲಷ್ಟು ಸರಳವೂ ಮತ್ತು ನವರಸಗಳಿಂದ ತುಂಬಿಕೊಂಡು ಆನಂದದಾಯಕವೂ ಆಗಿದೆ. ‘ಬಾಗಿಲನು ತೆರೆದು’ ಎಂಬ ಒಂದು ಕೀರ್ತನೆಯಲ್ಲಿಯೇ ಶೃಂಗಾರ, ಹಾಸ್ಯ, ಕರುಣ, ವೀರ, ಅದ್ಭುತ ರಸಗಳು ಕೂಡಿಕೊಂಡು ಅಪೂರ್ವವಾಗಿದೆ. ಮೋಹನ ತರಂಗಿಣಿ, ನಳಚರಿತ್ರೆಯಲ್ಲಿ ಶೃಂಗಾರ ರಸ, ಡೊಂಕು ಬಾಲದ ನಾಯಕರೇ, ಎಲ್ಲರೂ ಮಾಡುವುದು ಹೊಟ್ಟೆಗಾಗಿ ಕೀರ್ತನೆಗಳಲ್ಲಿ ಹಾಗೂ ರಾಮಧಾನ್ಯ ಚರಿತೆಯಲ್ಲಿ ಹಾಸ್ಯ ರಸ, ಕಾರ್ಕೋಟಕ ಪ್ರಸಂಗದಲ್ಲಿ…

Read More

ಮುದವಾದ ತಂಪೆರೆವ ಸಂಜೆಯ ವಾತಾವರಣದಲ್ಲಿ ರಂಗದ ಮೇಲೆ ಮುದ್ದಾದ ಹಕ್ಕಿಗಳ ಚಿಲಿಪಿಲಿ. ಪುಟಾಣಿ ಹೆಜ್ಜೆಗಳ ಕಲರವ. ಬಣ್ಣ ಬಣ್ಣದ ವಸ್ತ್ರಾಲಂಕಾರದಲ್ಲಿ, ದೇವಕನ್ನಿಕೆಯರಂತೆ ಶೋಭಿಸುವ ಉದ್ದನೆಯ ಕುಚ್ಚಿನ ಹೆರಳು, ಮಲ್ಲಿಗೆಯ ಮುಡಿಯಲ್ಲಿ ಆಭರಣ ಭೂಷಿತ ಉದಯೋನ್ಮುಖ ನೃತ್ಯ ವಿದ್ಯಾರ್ಥಿಗಳು ಪರಮೋತ್ಸಾಹದಿಂದ ಗೆಜ್ಜೆ ಕಟ್ಟಿ ನರ್ತಿಸಿದ ದೃಶ್ಯವನ್ನು ನೋಡಬೇಕಿತ್ತು. ಅಲ್ಲಿ ನೃತ್ಯದ ಶಾಸ್ತ್ರಕ್ಕೆ ದುರ್ಬೀನು ಹಚ್ಚಿ ನೋಡುವ ಅಗತ್ಯವಿರಲಿಲ್ಲ. ಮಕ್ಕಳ ಪರಿಶ್ರಮದ ನೃತ್ಯಾಭ್ಯಾಸ, ಗೆಜ್ಜೆಗಳ ಲಯಬದ್ಧ ದನಿ, ಸುಂದರ ಆಂಗಿಕಾಭಿನಯ, ಅಭಿನಯದ ವೈಖರಿ ಕಣ್ಮನ ತುಂಬಿತು. ಪುಟ್ಟಮಕ್ಕಳಿಂದ ಹಿಡಿದು ನೈಪುಣ್ಯ ಪಡೆದ ಹಿರಿಯ ನೃತ್ಯ ಕಲಾವಿದರವರೆಗೂ ಅವರ ನೃತ್ಯದ ಹೆಜ್ಜೆಗಳಿಗೆ ಅನುವು ಮಾಡಿಕೊಟ್ಟ, ಪ್ರೋತ್ಸಾಹದ ಸಿಂಚನದೊಂದಿಗೆ ಅವರ ಬೆಳವಣಿಗೆಗೆ ಇಂಬು ನೀಡಿ, ಕಲಾನೈಪುಣ್ಯದ ಆಯಾಮಗಳನ್ನು ಕಲಿಸುತ್ತಿರುವ ಭರತನಾಟ್ಯ ಗುರು ವಿದುಷಿ ಕಾವ್ಯಾ ದಿಲೀಪ್ ಅವರ ನಿರಂತರ ಕಾರ್ಯಕ್ರಮಗಳ ಉತ್ಸಾಹ ಗಮನೀಯ. ವಿ. ಕಾವ್ಯಾ ದಿಲೀಪ್ ನೇತೃತ್ವದ ‘ರಚನಾ ಡ್ಯಾನ್ಸ್ ಅಕಾಡೆಮಿ’ಯು ಮಲ್ಲೇಶ್ವರದ ಸೇವಾ ಸದನದಲ್ಲಿ ಆಯೋಜಿಸಿದ್ದ ‘ನೂಪುರ ನಿರಂತರ’ ಐದನೆಯ ವಾರ್ಷಿಕೋತ್ಸವದ ಸಮಾರಂಭ ವೈವಿಧ್ಯಪೂರ್ಣವಾಗಿ…

Read More

ಮಂಗಳೂರು : ಶಾರದಾ ಪದವಿಪೂರ್ವ ಕಾಲೇಜಿನ ಸಂಸ್ಕೃತ ಸಂಘದ ಆಶ್ರಯದಲ್ಲಿ ಸಂಸ್ಕೃತ ದಿನೋತ್ಸವ ಕಾರ್ಯಕ್ರಮವು ದಿನಾಂಕ 02 ಸೆಪ್ಟೆಂಬರ್ 2024ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಕೆನರಾ ಪ್ರೌಢಶಾಲೆ ಉರ್ವ ಇಲ್ಲಿಯ ಸಂಸ್ಕೃತ ಶಿಕ್ಷಕ ಶ್ರೀ ಬಿ. ಮುರಾರಿ ತಂತ್ರಿಯವರು “ಸಂಸ್ಕೃತ ಸಂಸ್ಕರಿಸಲ್ಪಟ್ಟ ಭಾಷೆ. ಈ ಭಾಷೆಯು ಬಹುಪ್ರಾಚೀನ ಕಾಲದಲ್ಲಿ ವ್ಯವಹಾರ ಭಾಷೆಯಾಗಿ ಜನಮಾನಸದಲ್ಲಿ ಉಳಿದ ಭಾಷೆ. ರಾಮಾಯಣದ ಸೀತಾನ್ವೇಷಣೆಯ ಕಾಲದಲ್ಲಿ ಸೀತೆಯೊಂದಿಗೆ ಆಂಜನೇಯ ಸಂಸ್ಕೃತ ಭಾಷೆಯಲ್ಲಿಯೇ ಮಾತನಾಡಿದ ಎಂದು ಮಾಲ್ಮೀಕಿ ಮಹರ್ಷಿಗಳು ವರ್ಣಿಸುತ್ತಾರೆ. ಅಂತಹ ಭಾಷಾ ಸೌಂದರ್ಯದಿಂದ ಆಕರ್ಷಿಸಲ್ಪಟ್ಟ ಭಾಷೆ ಇಂದು ವೈಜ್ಞಾನಿಕ ಭಾಷೆಯಾಗಿಯೂ ಸರ್ವಜನಾನುರಾಗಿಯಾಗಿದೆ. ಹೇಗೆ ಚಿನ್ನದ ಗಟ್ಟಿ ಆಭರಣವಾದಾಗ ಇನ್ನೂ ಹೆಚ್ಚು ಸೌಂದರ್ಯದಿಂದ ಕೂಡಿರುತ್ತದೆಯೊ ಹಾಗೆ ಸಂಸ್ಕೃತ ದೇವ ಭಾಷೆ ಎಂದು ಪೂಜಿಸಿದರೆ ಸಾಲದು ಅದನ್ನು ವ್ಯಾವಹಾರಿಕವಾಗಿ ಬಳಸುವಂತಾಗಬೇಕು” ಎಂಬುದಾಗಿ ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದ ಶಾರದಾ ಸಮೂಹ ಸಂಸ್ಥೆಗಳ ವಿಶ್ವಸ್ಥರಾದ ಶ್ರೀ ಸುಧಾಕರ ರಾವ್ ಪೇಜಾವರ ಇವರು ಮಾತನಾಡಿ “ಸಂಸ್ಕೃತ ಭಾಷೆ…

Read More

ಮಂಗಳೂರು : ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು (ರಿ.) ಕೇಂದ್ರ ಸಮಿತಿ ಹುಬ್ಬಳ್ಳಿ, ದ.ಕ. ಜಿಲ್ಲಾ ಸಮಿತಿ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು ಇವರ ವತಿಯಿಂದ ದಿನಾಂಕ 05 ಸೆಪ್ಟೆಂಬರ್ 2024ರಂದು ಕಟೀಲು ಕ್ಷೇತ್ರದಲ್ಲಿ ಶಿಕ್ಷಕ ದಿನಾಚರಣೆ ಪ್ರಯುಕ್ತ ರಾಜ್ಯಮಟ್ಟದ ಶಿಕ್ಷಕ ಸಾಹಿತಿಗಳ 7ನೇ ಸಮ್ಮೇಳನವು ನಡೆಯಲಿದೆ. ಹೊಸಕೋಟೆಯ ಹಿರಿಯ ಶಿಕ್ಷಕ ಸಾಹಿತಿಯಾದ ಶ್ರೀಕಾಂತ್ ಕೆ.ವಿ. ಇವರ ಸರ್ವಾಧ್ಯಕ್ಷತೆಯಲ್ಲಿ ಈ ಸಮ್ಮೇಳನವು ನಡೆಯಲಿದ್ದು, ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ಶ್ರೀಮಾನ್ ಹರಿನಾರಾಯಣ ಆಸ್ರಣರು ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿಚಾರಗೋಷ್ಠಿ, ಕವಿಗೋಷ್ಠಿ ಮತ್ತು ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮಗಳು ನಡೆಯಲಿದ್ದು, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹರಿನಾರಾಯಣ ಆಸ್ರಣ್ಣ ಇವರಿಗೆ ‘ದುರ್ಗಾಪ್ರಸಾದ’ ಹಾಗೂ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರಿಗೆ ‘ಚುಟುಕು ದಾಸೋಹಿ ಗೌರವ ಪುರಸ್ಕಾರ’ ನೀಡಲಾಗುವುದು. ಶಿಕ್ಷಕ ಸಾಹಿತಿಗಳಾದ ವಿ.ಬಿ. ಕುಲಮರ್ವ ಕಾಸರಗೋಡು, ಡಾ.…

Read More