Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ಭ್ರಾಮರೀ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ಇವರ ಆಶ್ರಯದಲ್ಲಿ ಎಂಟನೇ ವರ್ಷದ ‘ಯಕ್ಷ ವೈಭವ -2025’ ಕಾರ್ಯಕ್ರಮವನ್ನು ದಿನಾಂಕ 02 ಆಗಸ್ಟ್ 2025ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಂಜೆ 7-00 ಗಂಟೆಗೆ ಆಯೋಜಿಸಲಾಗಿದ್ದು, ಯಕ್ಷಗಾನ ಮತ್ತು ಪ್ರಶಸ್ತಿ ಪ್ರದಾನ ನಡೆಯಲಿದೆ. ತೆಂಕುತಿಟ್ಟಿನ ಹಿರಿಯ ಹಿಮ್ಮೇಳ ಕಲಾವಿದ ಪೆರುವಾಯಿ ಶ್ರೀ ನಾರಾಯಣ ಭಟ್ ಇವರಿಗೆ ‘ಭ್ರಾಮರೀ ಯಕ್ಷಮಣಿ ಪ್ರಶಸ್ತಿ’ ಮತ್ತು ಯಕ್ಷಸಂಗಮ ಮೂಡಬಿದಿರೆ ಮತ್ತು ಹಿರಿಯ ನೇಪಥ್ಯ ಕಲಾವಿದ ವಸಂತ ವಾಮದಪದವು ಇವರಿಗೆ ‘ಭ್ರಾಮರೀ ಯಕ್ಷಸೇವಾ ಪುರಸ್ಕಾರ’ ಪ್ರದಾನ ಮಾಡಲಾಗುವುದು. ತೆಂಕುತಿಟ್ಟಿನ ಸುಪ್ರಸಿದ್ಧ ಹಿಮ್ಮೇಳ ಮತ್ತು ತೆಂಕು – ಬಡಗಿನ ಮುಮ್ಮೇಳ ಕಲಾವಿದರ ಕೂಡುವಿಕೆಯಲ್ಲಿ ‘ಶ್ರೀಮತಿ ಪರಿಣಯ’, ‘ಸಾಧ್ವಿ ಸೈರಂದ್ರಿ’ ಹಾಗೂ ‘ವೈಜಯಂತಿ ಪರಿಣಯ’ ಎಂಬ ಪ್ರಸಂಗದ ಯಕ್ಷಗಾನ ಪ್ರದರ್ಶನಗಳು ನಡೆಯಲಿದೆ.
ಕಾಸರಗೋಡು : ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ನಡೆಯುವ ಏಕದಿನ ಕನ್ನಡ ಸಾಹಿತ್ಯ ಅಭಿಯಾನವಾದ, ‘ಕನ್ನಡದ ನಡಿಗೆ ಶಾಲೆಯ ಕಡೆಗೆ’ ಶೈಕ್ಷಣಿಕ ಶಿಬಿರದ 4ನೇ ಕಾರ್ಯಕ್ರಮವು ದಿನಾಂಕ 02 ಆಗಸ್ಟ್ 2025ರಂದು ಬೆಳಗ್ಗೆ 10-00 ಗಂಟೆಗೆ ಎಡನೀರಿನ ಸ್ವಾಮೀಜೀಸ್ ಪ್ರೌಢಶಾಲೆಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಎಡನೀರು ಶ್ರೀಮಠದ ವ್ಯವಸ್ಥಾಪಕ ರಾಜೇಂದ್ರ ಕಲ್ಲೂರಾಯರು ಉದ್ಘಾಟಿಸುವರು. ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮದ ಕೋಶಾಧಿಕಾರಿ ಪ್ರೊ. ಅನಂತ ಪದ್ಮನಾಭ ರಾವ್ ಸಭೆಯ ಅಧ್ಯಕ್ಷತೆ ವಹಿಸುವರು. ಎಡನೀರು ಸ್ವಾಮೀಜೀಸ್ ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಜ್ಯೋತಿಲಕ್ಷ್ಮಿ, ಎಡನೀರು ಸ್ವಾಮೀಜೀಸ್ ಪ್ರೌಢಶಾಲೆಯ ಪಿಟಿಎ ಅಧ್ಯಕ್ಷ ನಾರಾಯಣನ್ ಶುಭ ಹಾರೈಸುವರು. ಕಾರ್ಯಕ್ರಮದಲ್ಲಿ ಅಕ್ಷರ ಲೋಕದ ಮತ್ತು ಸಾಂಸ್ಕೃತಿಕ ಕ್ಷೇತ್ರದ ಸಾಧಕರಾದ ರಾಜೇಂದ್ರ ಕಲ್ಲೂರಾಯರಿಗೆ ಕನ್ನಡ ಪಯಸ್ವಿನಿ ಪ್ರಶಸ್ತಿ-2025 ಪ್ರದಾನ ನಡೆಯಲಿದೆ. ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಸಾಹಿತಿಗಳಾದ…
ಬಂಟ್ವಾಳ : ಏರ್ಯ ಆಳ್ವ ಫೌಂಡೇಷನ್ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಇದರ ಸಹಯೋಗದಲ್ಲಿ ವಿದ್ಯಾರ್ಥಿಗಳ ‘ಸಾಹಿತ್ಯ ಸಾಂಸ್ಕೃತಿಕ ಕಮ್ಮಟ’ ಏರ್ಯ ಬೀಡುವಿನಲ್ಲಿ ದಿನಾಂಕ 27 ಜುಲೈ 2025ರಂದು ನಡೆಯಿತು. ಏರ್ಯ ಬಾಲಕೃಷ್ಣ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿದರು. ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ. ತುಕರಾಂ ಪೂಜಾರಿ, ಬಂಟ್ವಾಳ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ವಿ.ಸು. ಭಟ್, ಅಮ್ಮಾಡಿ ಗ್ರಾ.ಪಂ. ಅಧ್ಯಕ್ಷ ವಿಜಯ್ಕುಮಾರ್, ಕಲಾವಿದ ಸದಾಶಿವ ಡಿ. ತುಂಬೆ, ನಿವೃತ್ತ ಮುಖ್ಯ ಶಿಕ್ಷಕ ಮಹಾಬಲೇಶ್ವರ ಹೆಬ್ಬಾರ್, ಶಿಕ್ಷಕ ಜಯರಾಮ ಪಡ್ರೆ ಉಪಸ್ಥಿತರಿದ್ದರು. ಕೇಶವ ಎಚ್. ಕಟೀಲು ಸ್ವಾಗತಿಸಿ, ಏರ್ಯರ ನೆನಪುಗಳನ್ನು ಮೆಲುಕು ಹಾಕಿದರು. ನಲ್ಕೆಮಾರು ಶಾಲೆಯ ಶಿಕ್ಷಕ ಜಗನ್ನಾಥ ವಂದಿಸಿದರು. ಕಾರ್ಯಕ್ರಮ ಸಂಯೋಜಕ ದಾಮೋದರ್ ಮಾಸ್ತರ್ ಏರ್ಯ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಮಹಾಬಲೇಶ್ವರ ಹೆಬ್ಬಾರ್ ‘ಓದುವ ಹವ್ಯಾಸ’, ಚಿತ್ರಕಲಾ ಶಿಕ್ಷಕ ತಾರಾನಾಥ ಕೈರಂಗಳ ‘ಚಿತ್ರ ಕಮ್ಮಟ’, ಶಿಕ್ಷಕ ವಿಠಲ ನಾಯಕ್ ‘ಮಕ್ಕಳ…
ಬೆಂಗಳೂರು : ಬೆಂಗಳೂರಿನ ಪ್ರವರ ಥಿಯೇಟರ್ ಪ್ರಸ್ತುತ ಪಡಿಸುವ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕವು ದಿನಾಂಕ 03 ಆಗಸ್ಟ್ 2025ರಂದು ಸಂಜೆ ಗಂಟೆ 7-00ಕ್ಕೆ ಬೆಂಗಳೂರಿನ ಎನ್.ಆರ್. ಕಾಲೋನಿಯಲ್ಲಿರುವ ಡಾ. ಸಿ. ಅಶ್ವಥ್ ಕಲಾಭವನದಲ್ಲಿ ಪ್ರದರ್ಶನಗೊಳ್ಳಲಿದೆ. ಈ ನಾಟಕದ ರಂಗರೂಪ ಕರಣಂ ಪವನ್ ಪ್ರಸಾದ್ ಮಾಡಿದ್ದು, ಸಂಗೀತ ಅಕ್ಷಯ್ ಭೊಂಸ್ಲೆ ಮತ್ತು ಬೆಳಕು ವಿನ್ಯಾಸ ಮಂಜು ನಾರಾಯಣ್ ನೀಡಿದ್ದು, ಹನು ರಾಮಸಂಜೀವ ಇವರು ವಿನ್ಯಾಸ ಮತ್ತು ನಿರ್ದೇಶನ ಮಾಡಿರುತ್ತಾರೆ. ಮಹೇಶ್ ಎಸ್.ಪಿ., ಹನು ರಾಮಸಂಜೀವ, ನಾಗಶ್ರೀ ಪುಟ್ಟರಾಜು, ಸುಶಾಂತ್ ರಾಜ್ ಆರಾಧ್ಯ, ಋತ್ವಿಕ್ ಕೆ.ಸಿ., ಅಂಬಿಕಾ ಶೆಟ್ಟಿ, ಅಜಯ್ ಕುಮಾರ್, ಸಂಜೀವಿನಿ, ಚಂದನ್ ರಾಮಚಂದ್ರೇಗೌಡ, ಶ್ರೀನಾಥ್ ಎನ್., ಪ್ರವೀಣ್ ಭಟ್, ಚರಣ್ ಗೌಡ, ದಿಲೀಪ್ ಮಹದೇವ್, ಭರಣಿ ವಿನಾಯಕ್, ಲೇಖನ, ಹರ್ಷಿತಾ, ಯಶಸ್ವಿನಿ, ಮನ್ವಿತ್ ವಿನಯ್ ಕುಮಾರ್ ರಂಗದ ಮೇಲೆ ರಂಜಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9686869676 ಸಂಖ್ಯೆಯನ್ನು ಸಂಪರ್ಕಿಸಿರಿ.
ಉಡುಪಿ : ದಕ್ಷಿಣೋತ್ತರ ಜಿಲ್ಲೆಯ ಸುಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಮಳೆಗಾಲದ ಯಕ್ಷಗಾನ ಪ್ರದರ್ಶನವನ್ನು ದಿನಾಂಕ 03 ಆಗಸ್ಟ್ 2025ರಂದು ಮಧ್ಯಾಹ್ನ 3-00 ಗಂಟೆಗೆ ಉಡುಪಿಯ ಅಜ್ಜರಕಾಡು ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಖ್ಯಾತ ಪ್ರಸಂಗಕರ್ತರಾದ ಎಂ.ಕೆ. ರಮೇಶ ಆಚಾರ್ಯರ ಕಲಾಕುಂಚದಲ್ಲಿ ಮೂಡಿಬಂದ ಕಥಾನಕ ‘ತಿಂತಿಣಿ ಮೌನೇಶ್ವರ’ ಪ್ರಸಂಗವು ಮೌನೇಶ ಆಚಾರ್ಯ ಪರ್ಕಳ ಇವರ ಕಥಾ ಸಂಯೋಜನೆಯಲ್ಲಿ ಮೂಡಿ ಬರಲಿದೆ. ಹಿಮ್ಮೇಳದಲ್ಲಿ ಭಾಗವತರಾಗಿ ಗಾನ ಸಾರಥಿ ರಾಘವೇಂದ್ರ ಆಚಾರ್ಯ ಜನ್ಸಾಲೆ ಮತ್ತು ಕೆ.ಜೆ. ಗಣೇಶ ಆಚಾರ್ಯ, ಮದ್ದಲೆಯಲ್ಲಿ ಶಶಾಂಕ ಆಚಾರ್ಯ ಮತ್ತು ಕೆ.ಜೆ. ಸುಧೀಂದ್ರ ಆಚಾರ್ಯ ಹಾಗೂ ಚಂಡೆಯಲ್ಲಿ ಕೆ.ಜೆ. ಕೃಷ್ಣ ಆಚಾರ್ಯ, ದೀಪ್ತ ಆಚಾರ್ಯ ಮತ್ತು ಪ್ರಣೀತ ಆಚಾರ್ಯ ಇವರುಗಳು ಸಹಕರಿಸಲಿದ್ದಾರೆ. ಮುಮ್ಮೇಳದಲ್ಲಿ ಶಶಿಕಾಂತ ಶೆಟ್ಟಿ ಕಾರ್ಕಳ, ಸುಧೀರ್ ಉಪ್ಪೂರು, ಶಂಕರ ದೇವಾಡಿಗ ಉಳ್ಳೂರು, ಆನಂದ ರಾವ್ ಉಪ್ಪಿನಕುದ್ರು, ಸೀತಾರಾಮ ಕುಮಾರ್ ಕಟೀಲು, ಪ್ರಜ್ವಲ್ ಗುರುವಾಯನಕೆರೆ, ವಾಸುದೇವ ರಂಗ ಭಟ್ ಮಧೂರು, ಜಯಪ್ರಕಾಶ ಶೆಟ್ಟಿ ಪೆರ್ಮುದೆ, ಪ್ರಸನ್ನ ಶೆಟ್ಟಿಗಾರ್…
ಲೋಹಿಯಾ ಹೇಳುವಂತೆ ಜಾತಿ, ಭಾಷೆ, ಧರ್ಮ ಮತ್ತು ಸ್ಥಳೀಯತೆ ಭಾರತೀಯ ಸಮಾಜದ ನಾಲ್ಕು ಮುಖ್ಯ ಮಹತ್ವದ ಚಾಲಕ ಶಕ್ತಿಗಳು. ಕನ್ನಡತನ ಎನ್ನುವುದೂ ಇಂದು ಕನ್ನಡ ನಾಡಿಗಷ್ಟೇ ಸೀಮಿತವಾಗಿರದೆ ನಾಡಿನ ನುಡಿ ಸಂಸ್ಕೃತಿ ಪ್ರಾದೇಶಿಕತೆ ಜನಜೀವನದ ಭಾಗವಾಗಿರುವುದು ನಾವು ಕಾಣುತ್ತಿದ್ದೇವೆ. ಡಾ. ಸರ್ಜಾಶಂಕರ ಹರಳಿಮಠ ಇವರ ಪಿ.ಎಚ್.ಡಿ ಪ್ರಬಂಧ ‘ಕನ್ನಡತನ’ ಕನ್ನಡ ಅಸ್ಮಿತೆಯ ಶತಮಾನದ ಚಿಂತನೆಗಳು, ಜಾಗತೀಕರಣದ ಹುಚ್ಚು ಹೊಳೆಯಲ್ಲಿ ಕೊಚ್ಚಿ ಹೋಗದಂತೆ ಕನ್ನಡತನ ತನ್ನ ಅಸ್ಮಿತೆಯನ್ನು ಕಟ್ಟಿಕೊಳ್ಳುವ ವಿವಿಧ ಮಾದರಿಗಳ ಒಟ್ಟಂದದ ಚಿತ್ರಣವನ್ನು ನೀಡುವ ಆಮೂಲಾಗ್ರವಾಗಿ ಅಧ್ಯಯನ ಮಾಡಿ ಬರೆದ ಗ್ರಂಥ. ಡಾ. ಸರ್ಜಾಶಂಕರ್ ಹರಳಿಮಠ ಇವರ ವಿಶೇಷತೆ ಇರುವುದು ಅವರು ಲೇಖಕ, ಕಥೆಗಾರ ಅನ್ನುವುದಕ್ಕಿಂತಲೂ ಮುಖ್ಯವಾಗಿ ಬಹು ರಾಷ್ಟ್ರೀಯ ಕಂಪನಿಯಲ್ಲಿ ಉದ್ಯೋಗಿಯಾಗಿದ್ದವರು, ಜನಪರ ಚಳವಳಿಗಳಲ್ಲಿ ಸ್ವತಃ ತೊಡಗಿಸಿಕೊಂಡವರು, ಹೀಗಾಗಿ ಕನ್ನಡತನ ಎನ್ನುವ ಅಸ್ಮಿತೆಯನ್ನು ತನ್ನ ವೈವಿಧ್ಯಮಯ ಅನುಭವ ಲೋಕಕ್ಕೆ ದಕ್ಕಿದಂತೆ ವಿಭಿನ್ನ ನೆಲೆಯಲ್ಲಿ ಗ್ರಹಿಸಿದವರು, ದೇಸಿ ಸಂಸ್ಕೃತಿ ಮಳಿಗೆ ಪ್ರಾರಂಭಿಸಿ ಮಹಿಳೆಯರು ತಯಾರಿಸುವ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವಲ್ಲಿ ಇವರು ಶ್ರಮಿಸಿದವರು…
ಬೆಂಗಳೂರು : ವಯೋಲಿನ್ ಅಕಾಡೆಮಿ ಮತ್ತು ಸಪ್ತಕ್ ಬೆಂಗಳೂರು ಇವರು ಪ್ರಸ್ತುತ ಪಡಿಸುವ ‘ಸ್ವರ ಮಲ್ಹಾರ್’ ಸಂಗೀತ ಕಾರ್ಯಕ್ರಮವನ್ನು ದಿನಾಂಕ 02 ಆಗಸ್ಟ್ 2025ರಂದು ಸಂಜೆ 5-00 ಗಂಟೆಗೆ ಬೆಂಗಳೂರಿನ ಶ್ರೀ ನರಸಿಂಹರಾಜ ಕಾಲೋನಿಯಲ್ಲಿರುವ ಪಠಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ತೇಜಸ್ ಉಪಾಧ್ಯೆ ಇವರಿಂದ ವಯೋಲಿನ್ ಸೋಲೋ, ರಾಹುಲ್ ಶರ್ಮಾ ಇವರ ಸಂತೂರ್ ಮತ್ತು ಓಜಸ್ ಅಧಿಯಾ ಇವರ ತಬಲಾ ವಾದನ ಹಾಗೂ ಪಂಡಿತ್ ಆನಂದ್ ಭಾಟೆ ಇವರ ಹಾಡುಗಾರಿಕೆಗೆ ಭರತ್ ಕಾಮತ್ ತಬಲಾದಲ್ಲಿ ಮತ್ತು ಸುಯೋಗ ಕುಂಡಲ್ಕರ್ ಹಾರ್ಮೋನಿಯಂನಲ್ಲಿ ಸಾಥ್ ನೀಡಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 70194 34992 ಮತ್ತು 95355 11888 ಸಂಖ್ಯೆಯನ್ನು ಸಂಪರ್ಕಿಸಿರಿ.
ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್ನ ದ.ಕ. ಜಿಲ್ಲಾ ಸಮಿತಿ ವತಿಯಿಂದ ನಗರದ ಕೊಡಿಯಾಲ್ ಬೈಲ್ನ ಶಾರದಾ ವಿದ್ಯಾಲಯದ ಗ್ರಂಥಾಲಯಕ್ಕೆ ನೂರು ಪುಸ್ತಕಗಳ ಹಸ್ತಾಂತರ ಸಮಾರಂಭವು ದಿನಾಂಕ 21 ಜುಲೈ 2025ರಂದು ನಡೆಯಿತು. ಸಮಾರಂಭದಲ್ಲಿ ಓದಿನ ಮಹತ್ವದ ಬಗ್ಗೆ ಉಪನ್ಯಾಸ ನೀಡಿದ ಸಾಹಿತಿ ಹಾಗೂ ನಿವೃತ್ತ ಪ್ರಾಧ್ಯಾಪಕಿಯಾದ ಡಾ. ಮೀನಾಕ್ಷಿ ರಾಮಚಂದ್ರ “ಪುಸ್ತಕ ಓದುವ ಹವ್ಯಾಸದಿಂದ ವ್ಯಕ್ತಿತ್ವ ಬೆಳವಣಿಗೆಯಾಗುತ್ತದೆ, ಅಪಾರ ಜ್ಞಾನ ಸಂಪತ್ತು ಪ್ರಾಪ್ತಿಯಾಗುತ್ತದೆ. ವಿದ್ಯಾರ್ಥಿಗಳು ಜ್ಞಾನ, ಬುದ್ದಿ, ಮೌಲ್ಯದ ಕ್ರಿಯಾಶೀಲ ವಿಕಸನಕ್ಕಾಗಿ ಪಠ್ಯಕ್ರಮಗಳ ಓದಿನ ಜತೆಗೆ ಪೂರಕ ಪುಸ್ತಕಗಳನ್ನು ಓದುವುದು ಅವಶ್ಯವಾಗಿದೆ. ಓದು ದೈನಂದಿನ ಬದುಕಿನ ಒಂದು ಅಂಗವಾಗಬೇಕು. ವಿದ್ಯಾರ್ಥಿಗಳು ಮೊಬೈಲ್ನಿಂದ ದೂರವಿದ್ದು ಪುಸ್ತಕ ಓದಲು ಸಮಯ ಮೀಸಲಿರಿಸಬೇಕು” ಎಂದು ಹೇಳಿದರು. ಶಾರದಾ ವಿದ್ಯಾಲಯದ ಪ್ರಾಂಶುಪಾಲ ದಯಾನಂದ ಕಟೀಲ್ ಮಾತನಾಡಿ “ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಿದ ಉಪಯುಕ್ತ ಪುಸ್ತಕಗಳನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡುವ ಮೂಲಕ ಸದ್ವಿನಿಯೋಗ ಪಡಿಸಿಕೊಳ್ಳಬೇಕು” ಎಂದರು. ಅ. ಭಾ. ಸಾ. ಪ . ಇದರ ದ. ಕ.…
ಉಡುಪಿ : ಡಾ. ಎಚ್.ವಿ. ನಾಗರಾಜ ರಾವ್ ಇವರು 2025ನೇ ಸಾಲಿನ ‘ಸೇಡಿಯಾಪು ಕೃಷ್ಣ ಭಟ್ಟ ಪ್ರಶಸ್ತಿ’ ಪುರಸ್ಕಾರಕ್ಕೆ ಆಯ್ಕೆಯಾಗಿರುತ್ತಾರೆ. ಕನ್ನಡ ಭಾಷೆ, ಸಾಹಿತ್ಯ, ವ್ಯಾಕರಣ, ಭಾಷಾಶಾಸ್ತ್ರ, ಕಥನಕಾವ್ಯ ಮತ್ತು ಸಂಶೋಧನ ಕ್ಷೇತ್ರಗಳಲ್ಲಿ ಮಹತ್ವದ ಕೊಡುಗೆ ನೀಡಿರುವ ಸೇಡಿಯಾಪು ಕೃಷ್ಣ ಭಟ್ಟರ ನೆನಪಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುವುದು. ಪ್ರಶಸ್ತಿಯು ರೂ.10,000/-(ಹತ್ತು ಸಾವಿರ) ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ದಿನಾಂಕ 16 ಆಗಸ್ಟ್ 2025ರಂದು ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಅವರು ತಿಳಿಸಿರುತ್ತಾರೆ. ಡಾ. ಎಚ್.ವಿ. ನಾಗರಾಜ ರಾವ್ ಅವರು 1942ರ ಸೆಪ್ಟೆಂಬರ್ 10ರಂದು ಕರ್ನಾಟಕದ ಕೋಲಾರ ಜಿಲ್ಲೆಯ ಸೋಮೇನಹಳ್ಳಿ ಗ್ರಾಮದಲ್ಲಿ ಶ್ರೀ ವೆಂಕಟನಾರಾಯಣಪ್ಪ ಹಾಗೂ ಸತ್ಯಲಕ್ಷ್ಮಮ್ಮ ದಂಪತಿಗಳ ಪುತ್ರನಾಗಿ ಜನಿಸಿದರು. ಪ್ರಾಥಮಿಕ ಶಿಕ್ಷಣದ ಅನಂತರ ಅವರು ಗುಡಿಬಂಡೆಯಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸ ಪೂರ್ಣಗೊಳಿಸಿದರು. ಮೈಸೂರಿನ ಮಹಾರಾಜಾ ಸಂಸ್ಕೃತ ಕಾಲೇಜಿನಲ್ಲಿ ವ್ಯಾಕರಣಶಾಸ್ತ್ರ ಮತ್ತು…
ಮಂಗಳೂರು : ಅ. ಭಾ. ಸಾ. ಪ. ಮಂಗಳೂರು ತಾಲೂಕು ಮತ್ತು ರೋಟರಿ ಕ್ಲಬ್ ಮಂಗಳೂರು ದಕ್ಷಿಣ ಸಹಯೋಗದಲ್ಲಿ ಸಂಸ್ಕಾರ- ಸಂಸ್ಕೃತಿ-ಜ್ಞಾನ ಪ್ರಸರಣ ಮಾಲಿಕೆಯ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 28 ಜುಲೈ 2025ರಂದು ಮಂಗಳೂರಿನ ಸರಕಾರೀ ಪ್ರಾಥಮಿಕ ಶಾಲೆ, ಗಾಂಧಿನಗರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ರೋಟರಿ ಕ್ಲಬ್ ಮಂಗಳೂರು ದಕ್ಷಿಣದ ಅಧ್ಯಕ್ಷರಾದ ಶ್ರೀ ಹರೀಶ್ ಅಡ್ಯಾರ್ ಮಾತನಾಡಿ “ಇದೊಂದು ವಿನೂತನವಾದ ಕಾರ್ಯಕ್ರಮ. ಹಿಂದೆ ಒವಿದ್ಯಾರ್ಥಿಗಳು ತಮ್ಮ ಮನೆಯಿಂದಲೇ ಸಂಸ್ಕಾರ ಕಲಿಯುತ್ತಿದ್ದರು. ಇಂದಿನ ವಿದ್ಯಾರ್ಥಿಗಳಿಗೆ ಅದು ದುರ್ಲಭವಾಗಿದೆ. ಅವರಿಗೆ ಅಗತ್ಯವಾಗಿ ನಾವು ಸಂಸ್ಕಾರವನ್ನು ಈ ಮೂಲಕವಾಗಿ ಕೊಡಬೇಕಾಗಿದೆ. ಆ ನಿಟ್ಟಿನಲ್ಲಿ ಅ. ಭಾ. ಸಾ. ಪ. ಕೈಗೊಂಡಿರುವ ಈ ಕಾರ್ಯಕ್ರಮ ಶ್ಲಾಘನೀಯ ಮಾತ್ರವಲ್ಲ ನಮ್ಮನ್ನೂ ಅದರಲ್ಲಿ ಸೇರಿಸಿಕೊಂಡಿರುವುದು ನಮ್ಮ ಸೌಭಾಗ್ಯ” ಎಂದು ನುಡಿದರು. ಅಧ್ಯಕ್ಷತೆ ವಹಿಸಿದ್ದ ಅ. ಭಾ. ಸಾ. ಪ. ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಶ್ರೀ ಹರೀಶ್ ಪಿ. ಬಿ. ಯವರು ವಿದ್ಯಾರ್ಥಿಗಳಿಗೆ ಮಾಧ್ಯಮ ಮತ್ತು ಅಂತರ್ಜಾಲದ…