Author: roovari

ಬೆಳ್ತಂಗಡಿ : ಕರ್ನಾಟಕ ಗಮಕ ಕಲಾ ಪರಿಷತ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ದಿನಾಂಕ 01 ನವೆಂಬರ್ 2025ರಂದು ಬೆಳ್ತಂಗಡಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಬಹಳ ವಿಶೇಷವಾಗಿ ಗಮಕ ವಾಚನ ವ್ಯಾಖ್ಯಾನವನ್ನು ಮಾಡುವುದರ ಮೂಲಕ ಆಚರಿಸಲಾಯಿತು. ಪದವಿ ಪೂರ್ವ ಕನ್ನಡ ತರಗತಿಯ ಕನ್ನಡ ಪಠ್ಯದ ಲಕ್ಷ್ಮೀಶ ಕವಿಯ ಕಾವ್ಯ ಭಾಗವನ್ನು ಮಧೂರು ವಿಷ್ಣು ಪ್ರಸಾದ ಕಲ್ಲೂರಾಯ ವಾಚನ ಮಾಡಿದರೆ, ಕರ್ನಾಟಕ ಗಮಕ ಕಲಾ ಪರಿಷತ್ ಜಿಲ್ಲಾ ಅಧ್ಯಕ್ಷ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ವ್ಯಾಖ್ಯಾನವನ್ನು ಮಾಡಿದರು. ಬಳಿಕ ಪ್ರಾಂಶುಪಾಲರಾದ ಶ್ರೀ ಸುಕುಮಾರ್ ಜೈನ್ ಮತ್ತು ಸಂಸ್ಥೆಯ ಅಧ್ಯಾಪಕರಿಂದ ಮೋಹನ ಕಲ್ಲೂರಾಯರನ್ನು ಸನ್ಮಾನ ಮಾಡಿ ಗೌರವಿಸಲಾಯಿತು. ಕಾಲೇಜಿನ ಕನ್ನಡ ಸಂಘದ ಅಧ್ಯಕ್ಷ ಡಾ. ಗಣೇಶ್ ಭಟ್, ಸಹಾಯಕ ಉಪನ್ಯಾಸಕರಾದ ಆನಂದ, ಡಾ. ಅಮೃತ, ಹೈಸ್ಕೂಲ್ ಮುಖ್ಯೋಪಾಧ್ಯಾಯನಿ ಶ್ರೀಮತಿ ಪೂರ್ಣಿಮಾ ಮತ್ತು ಉಳಿದ ಅಧ್ಯಾಪಕ ವೃಂದದವರು ಕಾರ್ಯಕ್ರಮಕ್ಕೆ ಸಹಕಾರವನ್ನು ನೀಡಿದರು.

Read More

ಹಾಸನ : ಮಾಣಿಕ್ಯ ಪ್ರಕಾಶನದಿಂದ ದಿನಾಂಕ 02 ನವೆಂಬರ್ 2025ರಂದು ಹಾಸನದ ಸಂಸ್ಕೃತ ಭವನದಲ್ಲಿ ಹಮಿಕೊಂಡಿದ್ದ ರಾಜ್ಯ ಮಟ್ಟದ 10ನೇ ಕವಿಕಾವ್ಯ ಸಂಭ್ರಮ, ಕನ್ನಡ ರಾಜ್ಯೋತ್ಸವ ಹಾಗೂ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಸಿದ್ಧ ಸಾಹಿತಿ ಕೆ.ಎಸ್. ಭಗವಾನ್ “ದೇಶದ ಪ್ರತಿಯೊಬ್ಬರಿಗೂ ಶಿಕ್ಷಣ ಸಿಗಬೇಕೆಂದರೆ ಬ್ಯಾಂಕ್‌ಗಳನ್ನು ರಾಷ್ಟ್ರೀಕರಣ ಮಾಡಿದ ರೀತಿ ಶಿಕ್ಷಣವನ್ನು ಮಾಡಬೇಕು. ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನದ ನೆರವಿನಿಂದ ಶೂದ್ರರು ಇಂದು ಅಕ್ಷರ ಕಲಿಯುವಂತಾಗಿದೆ. ಸಾವಿರಾರು ವರ್ಷಗಳಿಂದ ಶಿಕ್ಷಣವೆಂದರೆ ಕೇವಲ ಮೇಲ್ಜಾತಿಯವರಿಗೆ ಸೀಮಿತ ಎಂಬ ಪರಿಸ್ಥಿತಿ ಇತ್ತು. ಸಂವಿಧಾನ ಜಾರಿಯಾದ ಬಳಿಕ ಆ ಪರಿಸ್ಥಿತಿ ಸ್ವಲ್ಪ ಬದಲಾಗಿದೆ. ಎಲ್ಲರೂ ಸ್ವಾವಲಂಬಿ, ಘನತೆಯ ಬದುಕು ಕಟ್ಟಿಕೊಳ್ಳಬೇಕೆಂದರೆ ಶಿಕ್ಷಣ ಮುಖ್ಯ. ರಾಜ್ಯದಲ್ಲಿ ಮೊದಲ ಭಾಷೆಯಾಗಿ ಕನ್ನಡ ಹಾಗೂ ದ್ವಿತೀಯ ಭಾಷೆಯಾಗಿ ಇಂಗ್ಲೀಷ್ ಜಾರಿಯಾಗಬೇಕು. ತೃತೀಯ ಭಾಷಾ ಸೂತ್ರಕ್ಕೆ ಯಾವ ಕಾರಣಕ್ಕೂ ಒಪ್ಪಬಾರದರು. ಕನ್ನಡ ಇಲ್ಲಿನ ಮೂಲ ಭಾಷೆಯಾಗಿದ್ದು ಇಂಗ್ಲೀಷ್ ವ್ಯಾವಹಾರಿಕವಾಗಿ ಅನಿವಾರ್ಯವಾಗಿದೆ. ಹಿಂದಿ ಕಲಿಯಲೇಬೇಕೆಂಬ ಕಡ್ಡಾಯ ನಿಯಮವನ್ನು…

Read More

ಮಂಗಳೂರು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ (ರಿ.) ಪುತ್ತೂರು ಸಂಸ್ಥೆಯ 30ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ‘ಮೂಕಾಂಬಿಕಾ ಮೂವತ್ತರ ಮಾರ್ದನಿ’ ಶೀರ್ಷಿಕೆಯಲ್ಲಿ ಮಂಗಳೂರಿನ ಕಲಾಸೂರ್ಯ ನೃತ್ಯಾಲಯ ಪ್ರಸ್ತುತ ಪಡಿಸುವ ‘ಕಲಾಭವ -04’ ಪ್ರಸ್ತುತಿಯನ್ನು ದಿನಾಂಕ 09 ನವೆಂಬರ್ 2025ರಂದು ಸಂಜೆ 5-00 ಗಂಟೆಗೆ ಮಂಗಳೂರಿನ ಜೈಲ್ ರೋಡ್, ಮೊದಲನೇ ಮಹಡಿ ಸುಬ್ರಹ್ಮಣ್ಯ ಸದನದಲ್ಲಿ ಹಮ್ಮಿಕೊಳ್ಳಲಾಗಿದೆ. ಸಹಾಯಕ ಪ್ರೊಫೆಸರ್ ಡಾ. ನಿರೀಕ್ಷಾ ಶೆಟ್ಟಿ ಇವರು ಅಭ್ಯಾಗತರಾಗಿ ಭಾಗವಹಿಸಲಿದ್ದು, ವಿದುಷಿ ಸೌಜನ್ಯ ಪಡುವೆಟ್ನಾಯ ಇವರ ಶಿಷ್ಯೆ ಕುಮಾರಿ ಸುಹಾನಿ ಭಂಡಾರಿ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ. ಹಿಮ್ಮೇಳದಲ್ಲಿ ವಿದ್ವಾನ್ ಬಿ. ದೀಪಕ್ ಕುಮಾರ್ ಪುತ್ತೂರು ಇವರ ಮಾರ್ಗದರ್ಶನದಲ್ಲಿ ವಿದುಷಿ ಸೌಜನ್ಯ ಪಡುವೆಟ್ನಾಯ ನಟುವಾಂಗ, ವಿದುಷಿ ಪ್ರೀತಿಕಲಾ ಪುತ್ತೂರು ಹಾಡುಗಾರಿಕೆ, ವಿ. ಮನೋಹರ್ ರಾವ್ ಮೃದಂಗ ಮತ್ತು ಕುಮಾರಿ ಮೇಧಾ ಉಡುಪ ಕೊಳಲಿನಲ್ಲಿ ಸಹಕರಿಸಲಿದ್ದಾರೆ.

Read More

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಮ್ಮೇಳನ ಸಮಿತಿ ಮಂಗಳೂರು ಇವರ ವತಿಯಿಂದ ಆಯೋಜಿಸುವ ‘ವರ್ಣಯಾನ’ ದಕ್ಷಿಣ ಕನ್ನಡ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಮ್ಮೇಳನವು ದಿನಾಂಕ 09 ನವೆಂಬರ್ 2025ರಂದು ಬೆಳಗ್ಗೆ 9-30 ಗಂಟೆಗೆ ಮಂಗಳೂರಿನ ಕೊಡಿಯಾಲ್ ಬೈಲ್ ಸಂತ ಅಲೋಶಿಯಸ್ ಪ್ರೌಢಶಾಲೆಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಂತ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ರೆಕ್ಟರ್ ರೆ.ಫಾ. ಮೆಲ್ವಿನ್ ಪಿಂಟೊ ಎಸ್.ಜೆ. ಇವರು ನಿರ್ವಹಿಸಲಿದ್ದು, ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಖಂಡಿಗ ಇವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸಂವಾದ ಕಾರ್ಯಕ್ರಮದಲ್ಲಿ ‘ಶಿಕ್ಷಣದಲ್ಲಿ ಚಿತ್ರಕಲೆಯ ಮಹತ್ವ ಮತ್ತು ಪ್ರಸ್ತುತ ಸ್ಥಿತಿಗತಿ’ ಎಂಬ ವಿಷಯದ ಬಗ್ಗೆ ಖ್ಯಾತ ಲೇಖಕ ಹಾಗೂ ಚಿಂತಕರಾದ ಅರವಿಂದ ಚೊಕ್ಕಾಡಿ ವಿಷಯ ಮಂಡನೆ ಮಾಡಲಿದ್ದಾರೆ. ಕಾವ್ಯ ಕುಂಚದಲ್ಲಿ ಕಲಾವಿದರಾದ ಮುರಳೀಧರ ಆಚಾರ್ಯ, ಯಶು ಸ್ನೇಹಗಿರಿ, ಲಾಲ್ ಮೋಹನ್ ಅಭಿಷೇಕ್ ತೀರ್ಥಹಳ್ಳಿ ಇವರ ಕಲಾ ಪ್ರದರ್ಶನ ಮತ್ತು 3-00 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಇದೇ ಸಂದರ್ಭದಲ್ಲಿ…

Read More

ಉಡುಪಿ : ಕನಕದಾಸ ಅಧ್ಯಯನ ಸಂಶೋಧನ ಪೀಠ ಉಡುಪಿ ಮತ್ತು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಇವರ ಆಶ್ರಯದಲ್ಲಿ 2025ನೆಯ ಸಾಲಿನ ‘ಕನಕ ಜಯಂತಿ’ ಕಾರ್ಯಕ್ರಮವು ದಿನಾಂಕ 08 ನವಂಬರ್ 2025ರ ಶನಿವಾರದಂದು ಬೆಳಿಗ್ಗೆ 9-00 ಗಂಟೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜು ಆವರಣದಲ್ಲಿರುವ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಬೆಳಿಗ್ಗೆ 9-00 ಗಂಟೆಯಿಂದ ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಂದ ಕನಕ ಕೀರ್ತನೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿಗಳಾದ ಡಾ. ಮಹಾಬಲೇಶ್ವರ ರಾವ್ ಇವರು ವಹಿಸಲಿದ್ದು, ಎಂ.ಜಿ.ಎಂ. ಕಾಲೇಜಿನ ಗಾಂಧಿಯನ್ ಸೆಂಟರ್ ಮುಖ್ಯಸ್ಥರಾದ ವಿನೀತ್ ರಾವ್ ಉಪಸ್ಥಿತರಿರುವರು. ಮಂಗಳೂರಿನ ವಿಶ್ರಾಂತ ಕನ್ನಡ ಪ್ರಾಧ್ಯಾಪಕರಾದ ಡಾ. ಆರ್. ನರಸಿಂಹಮೂರ್ತಿ ಇವರಿಂದ ‘ದಾಸ ಪರಂಪರೆಯ ಅನನ್ಯ ಚೇತನ ಕನಕದಾಸರು’ ಎಂಬ ವಿಷಯದ ಕುರಿತು ಉಪನ್ಯಾಸ ನಡೆಯಲಿದೆ. ಇದೇ ಸಂದರ್ಭದಲ್ಲಿ ದಿನಾಂಕ 07 ನವೆಂಬರ್ 2025ರಂದು ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ನಡೆಸಿದ ಕನಕ ಕೀರ್ತನೆ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.

Read More

ಮಂಗಳೂರು : ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ, ಸಸಿಹಿತ್ಲು ಘಟಕ ಆತಿಥ್ಯದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಕಾರ, ವಿಶುಕುಮಾರ್ ದತ್ತಿನಿಧಿ ಸಂಚಾಲನ ಸಮಿತಿ ಸಹಯೋಗದಲ್ಲಿ ‘ವಿಶುಕುಮಾರ್ ತುಳು ಸಾಹಿತ್ಯೋತ್ಸವ, ತುಳು ಕುಣಿತ ಭಜನಾ ಸ್ಪರ್ಧೆ ಮತ್ತು ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 09 ನವೆಂಬರ್ 2025ರಂದು ಬೆಳಗ್ಗೆ ಗಂಟೆ 8-30ಕ್ಕೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ನಟ, ನಿರ್ದೇಶಕ, ಕಥೆ, ಕಾದಂಬರಿಕಾರರಾಗಿ, ಸಾಹಿತಿ, ಪತ್ರಕರ್ತರಾಗಿ, ಸಾಹಿತ್ಯ ಲೋಕದಲ್ಲಿ ಅನನ್ಯ ಸೇವೆ ಮಾಡಿ, ಕರಾವಳಿ, ವಿಪ್ಲವ, ಕಪ್ಪುಸಮುದ್ರ, ನೆತ್ತರಗಾನದಂತಹ 12 ಸಾಹಿತ್ಯ ಕೃತಿಗಳನ್ನು ನೀಡಿ, ಕೋಟಿ ಚೆನ್ನಯ್ಯದಂತಹ ಅಪೂರ್ವ ಸಿನಿಮಾ ನೀಡಿ ಐವತ್ತು ವರುಷಗಳ ಕಾಲ ಕನ್ನಡ ಸಾರಸ್ವತ ಲೋಕದಲ್ಲಿ ಮಿಂಚಿ ಮರೆಯಾದ ಚೇತನ, ಅಗ್ರಮಾನ್ಯ ಸಾಹಿತಿ ವಿಶುಕುಮಾ‌ರ್ ಇವರ ನೆನಪಿನಲ್ಲಿ ಯುವವಾಹಿನಿ ಸಂಸ್ಥೆ ವಿಶುಕುಮಾ‌ರ್ ದತ್ತಿನಿಧಿಯನ್ನು ಸ್ಥಾಪಿಸಿ, ಆ ಮೂಲಕ ಕಳೆದ 23 ವರುಷದಿಂದ ಸಾಹಿತ್ಯ ಸಾಧಕರಿಗೆ ವಿಶುಕುಮಾರ್ ಪ್ರಶಸ್ತಿ ನೀಡುತ್ತಿದೆ. ಈ ಬಾರಿಯ ವಿಶುಕುಮಾ‌ರ್…

Read More

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿ ಪ್ರಕಟಿಸಿರುವ ಡಾ. ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂಚ ನಾಡೊಂದು’ ಕೃತಿಯು ದಿನಾಂಕ 5 ನವೆಂಬರ್ 2025ರಂದು ತುಳು ಭವನದ ಸಿರಿ ಚಾವಡಿಯಲ್ಲಿ ಲೋಕಾರ್ಪಣೆಗೊಂಡಿತು. ಕೃತಿ ಬಿಡುಗಡೆಗೊಳಿಸಿದ ಸಂಶೋಧಕಿ ಹಾಗೂ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಡಾ. ಆಶಾಲತಾ ಸುವರ್ಣ “ತುಳುನಾಡಿನ ಸಂಸ್ಕೃತಿ, ಆಚರಣೆಗಳು, ಭೌತಿಕ ವಸ್ತು ಹಾಗೂ ಗುತ್ತು ಮನೆ, ಆರಾಧನೆ ಸ್ಥಳಗಳ ಕುರಿತು ಆಳವಾದ ಅಧ್ಯಯನ ಮಾಡಿರುವ ಡಾ. ಇಂದಿರಾ ಹೆಗ್ಗಡೆ ಇವರ ಕ್ಷೇತ್ರ ಕಾರ್ಯದ ಅನುಭವಗಳು ಅನನ್ಯವಾಗಿದ್ದು. ಅವು ಕೃತಿ ರೂಪದಲ್ಲಿ ದಾಖಲಾಗಿದ್ದು ಸಂಶೋಧಕರಿಗೆ ಅತ್ಯಂತ ಉಪಯುಕ್ತವಾಗಿದ್ದು, ಇದೊಂದು ಮಹತ್ವದ ಕೃತಿಯಾಗಲಿದೆ.” ಎಂದು ನುಡಿದರು. ಡಾ. ಇಂದಿರಾ ಹೆಗ್ಗಡೆ ಮಾತನಾಡಿ “ತನ್ನ ಸಂಶೋಧನಾ ಕೃತಿಗಳನ್ನು ಓದಿದ ಓದುಗರು ತನ್ನ ವ್ಯಾಪಕ ಕ್ಷೇತ್ರ ಕಾರ್ಯದ ಕುರಿತು ಆಸಕ್ತಿಯಿಂದ ಪ್ರಶ್ನಿಸುತ್ತಿದಿದ್ದುದೇ ಈ ಕೃತಿಗೆ ಪ್ರೇರಣೆಯಾಗಿದ್ದು, ಇದು ಯುವ ಸಂಶೋಧಕರಿಗೆ ಮಾರ್ಗದರ್ಶನ ನೀಡುವಂತಾಗಲಿ” ಎಂದರು. ಎಸ್.ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್…

Read More

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ, ಸಂಗೀತ ಸಂಭ್ರಮ ಕಾರ್ಯಕ್ರಮವು ದಿನಾಂಕ 05 ನವೆಂಬರ್ 2025ರಂದು ಮಂಗಳೂರಿನ ಎಸ್.ಡಿ.ಎಂ. ಸಂಸ್ಥೆಯ ಪ್ರಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಾಹಿತಿ ಮತ್ತು ಸಾಹಿತ್ಯ ತಜ್ಞರಾದ ಶ್ರೀ ಚಂದ್ರಶೇಖರ ದೈತೋಟ ಇವರು ಕನ್ನಡ ರಾಜ್ಯೋತ್ಸವ ಸಂದೇಶವನ್ನು ನೀಡಿದರು. ಕವಿರಾಜಮಾರ್ಗದಿಂದಾರಂಭಿಸಿ, ಕನ್ನಡ ಸಾಹಿತ್ಯದಲ್ಲಿ ಪ್ರಾಚೀನದಿಂದ ಅರ್ವಾಚೀನ‌ದವರೆಗೆ ಕಂಡುಬರುವ ವೈವಿಧ್ಯಮಯ ಸೊಗಸನ್ನು ಸವಿವರವಾಗಿ ನೀಡಿದ ಅವರು, ಕನ್ನಡ ಸಾಹಿತಿಗಳಾದ ಮಂಗರಸ, ಬಸವಪ್ಪಶಾಸ್ತ್ರಿ, ದಿನಕರ ದೇಸಾಯಿ, ಕೆ.ಎಸ್.‌ ನರಸಿಂಹಸ್ವಾಮಿ ಮುಂತಾದ ಹಲವಾರು ಸಾಹಿತಿಗಳ ಕೊಡುಗೆಗಳನ್ನು ಶ್ಲಾಘಿಸಿದರು. ಮಂಗಳೂರಿನ ‘ಇಂಚರ’ ತಂಡದ ಶ್ರೀಮತಿಯರಾದ ಸುಮಾ ಅರುಣ್ ಮಾನ್ವಿ, ಉಮಾ ಪಾಲಾಕ್ಷಪ್ಪ, ಅನುಪಮಾ, ವಿದ್ಯಾ ಇವರು ಸುಮಧುರವಾದ ನಾಡಭಕ್ತಿಯ ಗೀತೆಗಳನ್ನು ಹಾಡಿದರು. ಯುವ ಗಾಯಕ ವಿನಮ್ರ ಇಡ್ಕಿದು ಇವರ ಗಾಯನವು ಕಾರ್ಯಕ್ರಮಕ್ಕೆ ಇನ್ನಷ್ಟು ಸೊಬಗನ್ನು ಇತ್ತಿತು. ಸಾಹಿತಿಗಳಾದ ರಘು ಇಡ್ಕಿದು, ಸುಬ್ರಾಯ ಭಟ್, ಗಣೇಶ ಪ್ರಸಾದ…

Read More

ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ದಿನಾಂಕ 08 ನವೆಂಬರ್ 2025ರಂದು ಸಂಜೆ 4-00 ಗಂಟೆಗೆ ಅಕಾಡೆಮಿ ಸಭಾಂಗಣದಲ್ಲಿ ‘ಕಾವ್ಯಾಂ ವ್ಹಾಳೊ-8’ ಶೀರ್ಷಿಕೆಯಡಿ ಕವಿಗೋಷ್ಟಿಯನ್ನು ಹಮ್ಮಿಕೊಂಡಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್‌ರವರು ವಹಿಸಿಕೊಳ್ಳಲಿದ್ದಾರೆ. ದ.ಕ. ಜಿಲ್ಲಾ ಕುಡುಬಿ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಕೃಷ್ಣ ಕೊಂಪದವು ಮುಖ್ಯ ಅತಿಥಿಯಾಗಿ ಹಾಗೂ ಕೊಂಕಣಿಯ ಹಿರಿಯ ಕವಿ, ಸಾಹಿತಿಯಾದ ಶ್ರೀ ಜೊಸ್ಸಿ ಪಿಂಟೊರವರು ಪ್ರಮುಖ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ಖ್ಯಾತ ನಾಟಕಕಾರ ಹಾಗೂ ಚಲನಚಿತ್ರ ನಿರ್ಮಾಪಕರಾದ ಶ್ರೀ ಹೆನ್ರಿ ಡಿಸಿಲ್ವರವರಿಗೆ ಸನ್ಮಾನವನ್ನು ಆಯೋಜಿಸಲಾಗಿದೆ. ಶ್ರೀಮತಿ ಐರಿನ್‌ ರೆಬೆಲ್ಲೊ ಇವರು ಕವಿಗೋಷ್ಟಿಯ ಅಧ್ಯಕ್ಷತೆಯನ್ನು ವಹಿಸಲಿದ್ದು, ಮಾರ್ಸೆಲ್ ಡಿಸೋಜ (ಮಾಚ್ಚಾ ಮಿಲಾರ್), ಅಸುಂತಾ ಡಿಸೋಜ, ಸೃಜನಾ ಮಥಾಯಸ್, ಚಂದ್ರಿಕಾ ಮಲ್ಯ, ಫ್ಲಾವಿಯಾ ಅಲ್ಬುಕರ್ಕ್, ರವೀಂದ್ರ ನಾಯಕ ಸಣ್ಣಕ್ಕಿಬೆಟ್ಟು, ಪ್ರವೀಣ್ ತಾವ್ರೊ, ಜೀವನ್ ಕ್ರಾಸ್ತಾ, (ಜೀವ್ ನಿಡ್ಡೋಡಿ), ಲ್ಯಾನ್ಸಿ ಸಿಕ್ವೇರ ಸುರತ್ಕಲ್, ರೊಯ್ಸ್ಟನ್ ಡಿಕುನ್ಹ ಮುಂತಾದವರು ತಮ್ಮ ಕವಿತೆಗಳನ್ನು ವಾಚಿಸುವರು.

Read More

ಮಂಗಳೂರು : ರಂಗ ಸ್ವರೂಪ (ರಿ.) ಕುಂಜತ್ತಬೈಲ್ ಇದರ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ದೊರೆತ ಸಂಭ್ರಮದಲ್ಲಿ ನಾದ ಮಣಿನಾಲ್ಕೂರುರವರಿಂದ ವಿನೂತನ ತತ್ವ-ಭಾವ ಗಾನ ಯಾನ ‘ರಂಗಾಂತರಂಗ’ ಸ್ವರ ಕರಗಳ ಸಮ್ಮಿಲನ ಕಾರ್ಯಕ್ರಮವನ್ನು ದಿನಾಂಕ 09 ನವೆಂಬರ್ 2025ರಂದು ಕುಂಜತ್ತಬೈಲ್ ಇಲ್ಲಿರುವ ‘ಆಸರೆ’ ಮನೆಯಲ್ಲಿ ಹಮ್ಮಿಕೊಳ್ಳಲಾಗಿದೆ.

Read More