Author: roovari

ಮಂಗಳೂರು : ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆಗಳು ಬಂಟ್ಸ್ ಹಾಸ್ಟಲ್ ಮಂಗಳೂರು ಇದರ ಸಹಯೋಗದೊಂದಿಗೆ ಜರ್ನಿ ಥೇಟರ್ ಗ್ರೂಪ್ (ರಿ.) ಮಂಗಳೂರು ಇವರು ಪ್ರಸ್ತುತ ಪಡಿಸುವ ಪದವಿ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ‘ರಂಗ ಸಂಗೀತ ಕಾರ್ಯಾಗಾರ’ವನ್ನು ದಿನಾಂಕ 15 ಮತ್ತು 16 ಫೆಬ್ರವರಿ 2025ರಂದು ಶ್ರೀ ರಾಮಕೃಷ್ಣ ಪದವಿ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9380412518 ಸಂಖ್ಯೆಯನ್ನು ಸಂಪರ್ಕಿಸಿರಿ.

Read More

ಶಿವಮೊಗ್ಗ : ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಫ್ರೆಂಡ್ಸ್ ಸೆಂಟರ್‌ ಸಹಯೋಗದಲ್ಲಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ 233ನೇ ತಿಂಗಳ ಸಾಹಿತ್ಯ ಹುಣ್ಣಿಮೆ ಕಾರ್ಯಕ್ರಮವನ್ನು ದಿನಾಂಕ 19 ಜನವರಿ 2025ರಂದು ಗೋಪಾಲ ಫ್ರೆಂಡ್ಸ್ ಸೆಂಟರ್‌ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸೂಡಾ ಅಧ್ಯಕ್ಷರಾದ ಎಚ್.ಎಸ್. ಸುಂದರೇಶ್ “ಸಮಾಜದಲ್ಲಿನ ವಾಸ್ತವತೆಯನ್ನು ಕವಿತೆ, ಹನಿಗವನ, ಕಥೆಗಳ ಮೂಲಕ ವಿಶ್ಲೇಷಿಸಿ ಪರಸ್ಪರ ಚರ್ಚಿಸುವಂತಹ ಕಾರ್ಯಕ್ಕೆ ಸಾಹಿತ್ಯ ಹುಣ್ಣಿಮೆ ಪ್ರೇರಣೆಯಾಗಿದೆ. ನಗರದ ವಿವಿಧ ಬಡಾವಣೆಗಳಲ್ಲಿ ಹಾಗೂ ಹಳ್ಳಿಗಳಲ್ಲಿ ಸಾಹಿತ್ಯ ಹುಣ್ಣಿಮೆ ಮೂಲಕ ಸಾಹಿತ್ಯವನ್ನು ಪಸರಿಸುವ ಕಾರ್ಯ ನಡೆಯುತ್ತಿರುವುದು ಶ್ಲಾಘನೀಯ. ಸಾಹಿತ್ಯ ಸಮ್ಮೇಳನದಲ್ಲಿ ಚರ್ಚಿಸುತ್ತಿರುವ ವಿಚಾರಗಳು ಸರ್ಕಾರದ ಆಡಳಿತವನ್ನು ಸದಾ ಎಚ್ಚರಿಸುತ್ತಿದ್ದು, ಸಮಾಜಕ್ಕೆ ಪೂರಕ ಶಕ್ತಿಯಾಗಿ ನಿಲ್ಲಲಿದೆ. ಮಲೆನಾಡಿನ ಸಾಹಿತಿಗಳು ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ್ದಾರೆ. ವಿದೇಶದಲ್ಲಿರುವ ಕನ್ನಡಿಗರು ರಾಜ್ಯೋತ್ಸವ ಕಾರ್ಯಕ್ರಮಗಳನ್ನು ತಮ್ಮ ದೇಶಗಳಲ್ಲಿ ಆಯೋಜಿಸುವ ಮೂಲಕ ನಾಡಿನ ಸಾಂಸ್ಕೃತಿಕ ವೈವಿಧ್ಯತೆಗಳನ್ನು ಮತ್ತಷ್ಟು ಜನಪ್ರಿಯಗೊಳಿಸಿದ್ದಾರೆ” ಎಂದು ಹೇಳಿದರು. ಜಿಲ್ಲಾ ಕನ್ನಡ ಸಾಹಿತ್ಯ…

Read More

ಉಪ್ಪಿನಕುದ್ರು : ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್ ಯಕ್ಷಗಾನ ಗೊಂಬೆಯಾಟ ಟ್ರಸ್ಟ್ (ರಿ.) ಮತ್ತು ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿ ಉಪ್ಪಿನಕುದ್ರು ಇವರ ಜಂಟಿ ಆಶ್ರಯದಲ್ಲಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ 10ನೇ ವಾರ್ಷಿಕೋತ್ಸವ ಹಾಗೂ ‘ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ -2025’ ಪ್ರದಾನ ಸಮಾರಂಭವು ದಿನಾಂಕ 19 ಜನವರಿ 2025ರಂದು ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ನಡೆಯಿತು. ಈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಡಾ. ಹರಿಕೃಷ್ಣ ಪುನರೂರುರವರು ಮಾತನಾಡಿ “ಜಾನಪದ ಕ್ಷೇತ್ರಕ್ಕೆ ಉಪ್ಪಿನಕುದ್ರು ಗೊಂಬೆಯಾಟ ತಂಡದ ಕೊಡುಗೆ ಅಪಾರ. ಇಂದು 6ನೇ ತಲಾಂತರದಲ್ಲಿ ನಡೆಯುತ್ತಿರುವ ಈ ಕಲೆಯನ್ನು ನಾವೆಲ್ಲರೂ ಸೇರಿ ಉಳಿಸಬೇಕು” ಎಂದು ನುಡಿದರು. ಹಾಲ್ಮಕ್ಕಿ ಶ್ರೀ ಜಟ್ಟಿಗೇಶ್ವರ ಭಜನಾ ಮಂಡಳಿ ಗಂಗೊಳ್ಳಿ ಇವರ ವಿಷ್ಣು ಸಹಸ್ರನಾಮದೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಗಂಗೊಳ್ಳಿಯ ಡಾ. ಕಾಶೀನಾಥ್ ಪೈಯವರು ಪ್ರಾರ್ಥಿಸಿದರು. ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್‌ರವರು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಸಮಾರಂಭವನ್ನು ಉದ್ಘಾಟಿಸಿದ ಕರ್ನಾಟಕ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ…

Read More

ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ಪಾಕ್ಷಿಕ ತಾಳಮದ್ದಳೆ ಹಾಗೂ ಇತ್ತೀಚೆಗೆ ನಿಧನರಾದ ಹಿರಿಯ ಯಕ್ಷಗಾನ ಕಲಾವಿದ ಪಕಳಕುಂಜ ಶ್ಯಾಮ್ ಭಟ್ ಇವರಿಗೆ ನುಡಿನಮನ ಕಾರ್ಯಕ್ರಮವು ದಿನಾಂಕ 18 ಜನವರಿ 2025ರಂದು ಶ್ರೀ ಆಂಜನೇಯ ಮಂತ್ರಾಲಯದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಭಾಸ್ಕರ್ ಬಾರ್ಯ ಮತ್ತು ಕಲಾವಿದ ಜಯರಾಮ‌ ದೇವಸ್ಯ ನುಡಿನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ದಿವಂಗತರ ಸಹೋದರಿಯರು, ಬಂಧುಗಳು ಉಪಸ್ಥಿತರಿದ್ದರು. ಬಳಿಕ ‘ಭೀಮ ದ್ರೌಪದೀ ಸ೦ವಾದ – ವಿದುರ ಭಕ್ತಿ’ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಆನಂದ ಸವಣೂರು, ಶ್ರೀಪತಿ ಭಟ್ ಉಪ್ಪಿನಂಗಡಿ, ಕುಮಾರಿ ಶರಣ್ಯ ನೆತ್ತೆರ್ಕೆರೆ ಸಹಕರಿಸಿದರು. ಮುಮ್ಮೇಳದಲ್ಲಿ ಜಯರಾಮ ದೇವಸ್ಯ (ಭೀಮ), ಭಾಸ್ಕರ್ ಬಾರ್ಯ (ದ್ರೌಪದೀ ಮತ್ತು ಶ್ರೀ ಕೃಷ್ಣ‌), ತಾರಾನಾಥ ಸವಣೂರು (ವಿಧುರ) ಸಹಕರಿಸಿದರು. ಟಿ. ರಂಗನಾಥ ರಾವ್ ಸ್ವಾಗತಿಸಿ, ವಂದಿಸಿದರು.

Read More

ಮಂಗಳೂರು : ‘ಬಹು ಓದು’ ಬಳಗ ಹಾಗೂ ‘ಆಕೃತಿ ಆಶಯ’ ಪಬ್ಲಿಕೇಶನ್ ಇದರ ಸಹಯೋಗದೊಂದಿಗೆ ‘ಅವಿಭಜಿತ ದಕ್ಷಿಣ ಕನ್ನಡದ ಮಹಿಳಾ ಚಿಂತನೆ’ ಕೃತಿಯ ಲೋಕಾರ್ಪಣಾ ಸಮಾರಂಭವು ದಿನಾಂಕ 19 ಜನವರಿ 2025ರ ರವಿವಾರದಂದು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿರುವ ರಾಬರ್ಟ್ ಸಿಕ್ವೇರಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೃತಿಲೋಕಾರ್ಪಣೆಗೊಳಿಸಿದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊಫೆಸರ್ ಸಬಿಹಾ ಭೂಮಿಗೌಡ ಮಾತನಾಡಿ “ಅವಿಭಜಿತ ದಕ್ಷಿಣ ಕನ್ನಡದ ಬಹುರೂಪಿ ಚಿಂತನೆಗಳನ್ನು ಒಂದೆಡೆ ಕಟ್ಟಿಕೊಡುವ ಕೃತಿಯೇ ‘ಅವಿಭಜಿತ ದಕ್ಷಿಣ ಕನ್ನಡದ ಮಹಿಳಾ ಚಿಂತನೆ’. 1995 ರಿಂದ 2023ರವರೆಗಿನ ಮೂರು ದಶಕಗಳ ಕಾಲದ ಈ ಭಾಗದ ಲೇಖಕ ಲೇಖಕಿಯರು, ಸಾಹಿತಿ, ಸಾಹಿತ್ಯ, ಸಂಸ್ಕೃತಿ ಮತ್ತು ಸ್ತ್ರೀವಾದಿ ತಾತ್ವಿಕತೆಯ ಬಗ್ಗೆ ಏನನ್ನು ಯೋಚನೆ ಮಾಡಿದ್ದಾರೆ, ಕಾಲ ಕಾಲಕ್ಕೆ ಅನುಗುಣವಾಗಿ ಅದನ್ನು ಹೇಗೆ ಅಭಿವ್ಯಕ್ತಿಗೊಳಿಸಿದ್ದಾರೆ ಎಂಬುದು ಈ ಪುಸ್ತಕದ ಓದಿನಿಂದ ತಿಳಿದುಕೊಳ್ಳಬಹುದು” ಎಂದು ಹೇಳಿದರು. ಕೃತಿ ವಿಮರ್ಶೆ ಮಾಡಿದ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ರಾಜಲಕ್ಷ್ಮೀ ಎನ್. ಕೆ.…

Read More

ಮಂಗಳೂರು : ಖ್ಯಾತ ಕಲಾವಿದ, ಶೇವಗೂರ್‌ ಫೈನ್ ಆರ್ಟ್ಸ್ ಖ್ಯಾತಿಯ ರಾಮದಾಸ್ ಕಾಮತ್ ಶೇವಗೂರ್‌ ದಿನಾಂಕ 15 ಜನವರಿ 2025 ರಂದು ನಿಧನರಾದರು ಇವರಿಗೆ 78 ವರ್ಷ ವಯಸ್ಸಾಗಿತ್ತು. ಇವರ ಪತ್ನಿ ಕೊಂಕಣಿ ಕಿರು ಕಥೆಗಳ ಹೆಸರಾಂತ ಲೇಖಕಿ ಸಂಧ್ಯಾ ಶೇವಗೂರ್‌ 2011ರಲ್ಲಿ ನಿಧನ ಹೊಂದಿದ್ದರು. ಮಂಗಳೂರಿನ ಪ್ರಸಿದ್ದ ಶೇವಗೂರ್ ಕಲಾವಿದರ ಕುಟುಂಬದ ರಾಮದಾಸ್ ಅಗ್ರಗಣ್ಯ ಗ್ರಾಫಿಕ್ ಡಿಸೈನರ್ ಮತ್ತು ಭಾವಚಿತ್ರ ಕಲಾವಿದ ಎಲ್. ಕೆ. ಶೇವಗೂರ್‌ ಅವರ ಪುತ್ರರಾಗಿದ್ದಾರೆ. ಮುಂಬಯಿಯ ಪ್ರತಿಷ್ಠಿತ ಜೆ. ಜೆ. ಸ್ಕೂಲ್ ಆಫ್ ಆರ್ಟ್‌ನಲ್ಲಿ ಕಲಾ ಶಿಕ್ಷಣವನ್ನು ಪಡೆದ ಇವರು ತಂದೆಯ ನಿಧನಾನಂತರ ಶೇವಗೂರ್ ಫೈನ್ ಆರ್ಟ್ಸ್ ನಲ್ಲಿ ತಂದೆಯ ಪರಂಪರೆಯನ್ನು ಮುಂದುವರಿಸಿದರು. ಭಾವಚಿತ್ರ ರಚನೆಯಲ್ಲಿ, ಅದರಲ್ಲೂ ವಿಶೇಷವಾಗಿ ತೈಲವರ್ಣ ಚಿತ್ರದಲ್ಲಿ ರಾಮದಾಸ್ ಪ್ರಾವೀಣ್ಯ ಹೊಂದಿದ್ದರು. ಕರಾವಳಿಯಾದ್ಯಂತ ಹಲವಾರು ಶಿಕ್ಷಣ ಸಂಸ್ಥೆಗಳು ಮತ್ತು ಇತರ ಸಂಸ್ಥೆಗಳ ಗೋಡೆಗಳನ್ನು ಇವರ ಜೀವ ಸದೃಶ ಭಾವಚಿತ್ರಗಳು ಅಲಂಕರಿಸಿವೆ. ವಿಶ್ವ ಕೊಂಕಣಿ ಕೇಂದ್ರದ ಹಾಲ್ ಆಫ್ ಫೇಮ್‌ನಲ್ಲಿ ಕಾಣಸಿಗುವ ಅನೇಕ…

Read More

ತೆಕ್ಕಟ್ಟೆ: ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಸಹಯೋಗದಲ್ಲಿ ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆ ಸಂಯೋಜನೆಯಲ್ಲಿ ‘ಸಿನ್ಸ್ 1999 ಶ್ವೇತಯಾನ-100’ ಕಾರ್ಯಕ್ರಮದಡಿಯಲ್ಲಿ ‘ದೊಂದಿ ಬೆಳಕಿನ ಹಾಗೂ ಮಂದ ಬೆಳಕಿನ ಯಕ್ಷಗಾನ’ ಮತ್ತು ವಿಶ್ರಾಂತ ಕಲಾವಿದರಿಂದ ‘ಗಾನ ವೈಭವ’ ದಿನಾಂಕ 19 ಜನವರಿ 2025 ರಂದು ತೆಕ್ಕಟ್ಟೆಯ ಹಯಗ್ರೀವದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕ್ಲಾಸ್ 1, ಕಂಟ್ರ್ಯಾಕ್ಟರ್ ಮೊಳಹಳ್ಳಿ ದಿನೇಶ್ ಹೆಗ್ಡೆ ಮಾತನಾಡಿ “ಇಪ್ಪತ್ತೈದರ ‘ಬೆಳ್ಳಿ ಹಬ್ಬ’ದ ಸಂಸ್ಥೆಯಾದ ಯಶಸ್ವೀ ಕಲಾವೃಂದ ಕಳೆದ ಇಪ್ಪತ್ತೈದು ವರ್ಷಗಳಿಂದ ಕಲೆಯ ಉಳಿವಿಗಾಗಿ ಶ್ರಮಿಸಿ, ಈ ವಸಂತದಲ್ಲಿ 100 ಕಾರ್ಯಕ್ರಮ ಈಗಾಗಲೇ ನಿರ್ವಹಿಸಿರುವುದು ಸಣ್ಣ ವಿಶಯವಲ್ಲ. ಈ ತಂಡಕ್ಕೆ ಇನ್ನಷ್ಟು ಸಹಕಾರ ಸರಕಾರದಿಂದ ದೊರೆತು ಶಕ್ತಿ ವೃದ್ಧಿಸಲಿ” ಎಂದು ಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ತಲ್ಲೂರು ಡಾ. ಶಿವರಾಮ ಶೆಟ್ಟಿ ಮಾತನಾಡಿ “ವರ್ಷವಿಡೀ ನಿರಂತರತೆಯನ್ನು ಕಾಯ್ದುಕೊಳ್ಳುವುದು ಬಹಳ ಕಷ್ಟ. ಒಂದೇ ವರ್ಷದಲ್ಲಿ 108ಕಾರ್ಯಕ್ರಮದ ಸಂಕಲ್ಪಕ್ಕೆ ಮನ ಮಾಡಿದ ಸಂಸ್ಥೆಗೆ ಸರಕಾರ ಸಹಕಾರ ಮಾಡದಿದ್ದರೆ…

Read More

ಬೆಂಗಳೂರು : ರಂಗಚಂದಿರ (ರಿ.) ಆಯೋಜಿಸಿರುವ ‘ರಂಗಕರ್ಮಿ ಟೆಲಿಕಾಂ ದತ್ತಾತ್ರೇಯ ನೆನಪು’ ಕಾರ್ಯಕ್ರಮದ ಪ್ರಯುಕ್ತ ಗಾಯನ, ರಂಗ ಗೌರವ ಮತ್ತು ನಾಟಕ ಪ್ರದರ್ಶನವು ದಿನಾಂಕ 29 ಜನವರಿ 2025ರಂದು ಸಂಜೆ 4-00 ಗಂಟೆಗೆ ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯಲಿದೆ. ಸಂಜೆ 4-00 ಗಂಟೆಗೆ ಕುವೆಂಪು ಪ್ರಕಾಶ್ ತಂಡದವರಿಂದ ಗಾಯನ ಕಾರ್ಯಕ್ರಮ ಪ್ರಸ್ತುತಗೊಳ್ಳಲಿದೆ. 6-00 ಗಂಟೆಗೆ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಶ್ರೀ ಪ್ರಕಾಶಮೂರ್ತಿ ಇವರ ಅಧ್ಯಕ್ಷತೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕರಾದ ಶ್ರೀ ಬಲವಂತರಾವ್ ಪಾಟೀಲ್ ಇವರು ಉದ್ಘಾಟನೆ ಮಾಡಲಿರುವರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ಬೈರಮಂಗಲ ರಾಮೇಗೌಡ, ಹಿರಿಯ ಪತ್ರಕರ್ತರಾದ ಶ್ರೀ ರಾಜು ಮಳವಳ್ಳಿ, ರಂಗ ನಿರ್ದೇಶಕರಾದ ಶ್ರೀ ವೆಂಕಟಾಚಲ, ಭಾರತ ತಂಡ ವಾಲಿಬಾಲ್ ಮುಖ್ಯ ತರಬೇತಿದಾರರಾದ ಶ್ರೀ ಕೆ.ಆರ್. ಲಕ್ಷ್ಮೀನಾರಾಯಣ ಮತ್ತು ‘ಕುಹೂ ಕುಹೂ’ ಸಂಗೀತ ಸಂಸ್ಥೆಯ ನಿರ್ದೇಶಕರಾದ ಶ್ರೀ ಸುರೇಶ್ ಬಾಬು ಇವರಿಗೆ…

Read More

ಕಾಸರಗೋಡು : ಸಂಘಟಕ, ಪತ್ರಕರ್ತ, ಚಿತ್ರನಟ ಹಾಗೂ ಸಾಹಿತಿಯಾದ ಶ್ರೀ ಬೊಳ್ಳಜಿರ ಬಿ. ಅಯ್ಯಪ್ಪ ಇವರನ್ನು ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ಕೊಡಗು ಜಿಲ್ಲೆಯ ಜಿಲ್ಲಾ ಘಟಕದ, ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಕನ್ನಡ ಭವನದ ರಜತ ಸಂಭ್ರಮ ವರ್ಷವಾದ 2025ರಲ್ಲಿ ಕರ್ನಾಟಕ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಕನ್ನಡ ಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸದುದ್ದೇಶದಿಂದ ಎಲ್ಲಾ ಜಿಲ್ಲೆಗಳಲ್ಲಿ ಘಟಕ ಸ್ಥಾಪಿಸಲಾಗುತ್ತಿದೆ. ಕನ್ನಡ ಭವನದ ಕರ್ನಾಟಕ ರಾಜ್ಯ ಸಂಚಾಲಕರಾದ ಡಾ. ಟಿ. ತ್ಯಾಗರಾಜ್ ಮೈಸೂರು ನಾಮನಿರ್ದೇಶನ ಮಾಡಿ, ಇನ್ನೊರ್ವ ಕರ್ನಾಟಕ ರಾಜ್ಯ ಸಂಚಾಲಕರಾದ ಬಿ. ಶಿವಕುಮಾರ್ ಕೋಲಾರ ಹಾಗೂ ನಿರ್ದೇಶಕರಾದ ಡಾ. ಕೊಳಚಪ್ಪೆ ಗೋವಿಂದ ಭಟ್ ಅನುಮೋದಿಸಿದರು. ಸರ್ವಾನುಮತಿಯೊಂದಿಗೆ ಆಯ್ಕೆಯಾದ ಶ್ರೀ ಬೊಳ್ಳಜಿರ ಬಿ. ಅಯ್ಯಪ್ಪ ಇವರು ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯ (ರಿ.), ಕನ್ನಡ ಭವನ ಪ್ರಕಾಶನ, 20,000 ಪುಸ್ತಕಗಳುಳ್ಳ ಸಾರ್ವಜನಿಕ ವಾಚನಾಲಯ, ಕರ್ನಾಟಕದಿಂದ ಕಾಸರಗೋಡು ಪ್ರದೇಶಕ್ಕೆ ಆಗಮಿಸುವ ಸಾಹಿತ್ಯ, ಸಾಂಸ್ಕೃತಿಕ ಯಾತ್ರಾರ್ಥಿಗಳಿಗೆ ‘ಉಚಿತ ವಸತಿ ಸೌಕರ್ಯ’, ‘ಪ್ರತಿ ಮನೆಗೊಂದು…

Read More

ಪೆರ್ಲ : ರಂಗ ಚಿನ್ನಾರಿ ಕಾಸರಗೋಡು ಇದರ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು. ನಾಲಂದ ಕಾಲೇಜು ಆಡಳಿತ ಮಂಡಳಿ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ರಂಗ ಸಂಸ್ಕೃತಿ ಕಾರ್ಯಾಗಾರವು ದಿನಾಂಕ 17 ಜನವರಿ 2025ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಪ ನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಪ್ರಶಸ್ತಿ ಪುರಸ್ಕೃತ ಸಿನಿಮಾ ನಟ, ನಿರ್ದೇಶಕ ಹಾಗೂ ರಂಗಕರ್ಮಿ ಕಾಸರಗೋಡು ಚಿನ್ನಾ ಮಾತನಾಡಿ “ನಟನೆ ತುಂಬಾ ಸುಲಭ. ಆದರೆ ನಟನೆಯ ಅನುಕರಣೆ ಕಷ್ಟ. ರಂಗ ಕಲೆಯಲ್ಲಿ ನಟನಾ ಕೌಶಲ್ಯ, ವಾಕ್ ಸ್ಪುಟತೆ, ಉಚ್ಚಾರ ಸ್ಪಷ್ಟತೆಯ ಸಂಭಾಷಣೆ, ಪಾತ್ರಕ್ಕೆ ತಕ್ಕ ಹಾವ ಭಾವ, ಸಂಜ್ಞೆಗಳ ಅಭಿನಯ ಮೂಲಕ ಪ್ರೇಕ್ಷಕರ ಮನ ತಣಿಸಬೇಕು. ರಂಗ ಕಲೆ ‘ನಾನು ಅಲ್ಲ ನಾವು’ ಎಂಬುದನ್ನು ಕಲಿಸಿಕೊಡುತ್ತದೆ. ಒಂದು ತಿಂಗಳ ರಂಗ ತರಬೇತಿಯಲ್ಲಿ ಭಾಗವಹಿಸುವ ಮಕ್ಕಳು ಜಾತಿ, ಮತ, ಬೇಧ, ಭಾವವಿಲ್ಲದೆ ಪರಸ್ಪರ ಬೆರೆಯುತ್ತಾರೆ. ಇದರಿಂದ ಮನುಷ್ಯ ಸಂಬಂಧ ಬಲಗೊಳ್ಳುತ್ತದೆ. ಮಕ್ಕಳಲ್ಲಿನ ಸುಪ್ತ ಪ್ರತಿಭೆ ಅನಾವರಣಗೊಳಿಸಲು ಹೆತ್ತವರು ಮತ್ತು ಶಿಕ್ಷಕರು…

Read More