Author: roovari

ಮಡಿಕೇರಿ : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ಕವಿಗಳಿಂದ ಕೊಡವ ಕವನ ಆಹ್ವಾನಿಸಿದೆ. ಸುಮಾರು 50 ಕವಿಗಳ ಒಂದೊಂದು ಕವನಗಳನ್ನು ಸೇರಿಸಿ ಹೊರತರಲು ಉದ್ದೇಶಿಸಿರುವ ಕೊಡವ ಕವನ ಸಂಕಲನಕ್ಕೆ ಸ್ವರಚಿತ ಕವನಗಳನ್ನು ಕಳುಹಿಸಲು ಬಯಸುವ ಕವಿಗಳು ತಮ್ಮ ಭಾವಚಿತ್ರದೊಂದಿಗೆ ದಿನಾಂಕ 31 ಡಿಸೆಂಬರ್ 2025ರೊಳಗೆ ನೋಂದಣಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಜೂನಿಯರ್ ಕಾಲೇಜು ರಸ್ತೆ, ಮ್ಯಾನ್ಸ್ ಕಾಂಪೌಂಡ್ ಹತ್ತಿರ, ಸ್ಕೌಟ್ಸ್ ಮತ್ತು ಗೈಡ್ಸ್ ಭವನ, ಮಡಿಕೇರಿ ಈ ವಿಳಾಸಕ್ಕೆ ಕಳುಹಿಸುವುದು. ಕವಿಗಳು ಕಡ್ಡಾಯವಾಗಿ ಒಂದೊಂದು ಕವನಗಳನ್ನು ಮಾತ್ರ ಕಳುಹಿಸತಕ್ಕದ್ದು, ಒಂದಕ್ಕಿಂತ ಹೆಚ್ಚಿನ ಕವನಗಳನ್ನು ಕಳುಹಿಸಿದರೆ ಆಯ್ಕೆಗೆ ಪರಿಗಣಿಸುವುದಿಲ್ಲ. ಕವನವು ಯಾವುದೇ ಕಾರಣಕ್ಕೆ 20 ಗೆರೆ ಮೀರಬಾರದು. ಅಂತೆಯೇ ಪ್ರತೀ ಗೆರೆಗಳಲ್ಲಿ ಐದಕ್ಕಿಂತ ಹೆಚ್ಚಿನ ಶಬ್ದಗಳಿರುವಂತಿಲ್ಲ. ನಾಡು, ನುಡಿ, ಪರಿಸರ, ಪರಿಸ್ಥಿತಿ, ಸಂಸ್ಕೃತಿಗೆ ಸಂಬಂಧಪಟ್ಟ ಕವನಗಳಿಗೆ ಆದ್ಯತೆ ನೀಡುವುದು ಉತ್ತಮ ಎಂದು ಅಕಾಡೆಮಿಯ ಅಧ್ಯಕ್ಷರಾದ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯನವರು ತಿಳಿಸಿದ್ದಾರೆ. ಆಯ್ಕೆಯಾಗುವ ಕವನಗಳಿಗೆ ಪ್ರೋತ್ಸಾಹಧನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಕಚೇರಿ…

Read More

ಕಡಬ : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ನೇತ್ರಾವತಿ ತುಳು ಕೂಟ ರಾಮಕುಂಜ (ರಿ.) ಮತ್ತು ತೆಗ್ ರ್ ತುಳುಕೂಟ ನೂಜಿಬಾಳ್ತಿಲ (ರಿ.) ಇವರ ಸಹಯೋಗದಲ್ಲಿ ‘ಕಡಬ ತಾಲೂಕು ಪ್ರಥಮ ತುಳು ಸಮ್ಮೇಳನ’ವನ್ನು ದಿನಾಂಕ 20 ಮತ್ತು 21 ಡಿಸೆಂಬರ್ 2025ರಂದು ಕುಟ್ರುಪ್ಪಾಡಿ ಗ್ರಾಮದ ಕೇಪು ಶ್ರೀ ಮಹಾಗಣಪತಿ ಲಕ್ಷ್ಮೀ ಜನಾರ್ದನ ಆಂಜನೇಯ ದೇವಸ್ಥಾನದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 20 ಡಿಸೆಂಬರ್ 2025ರಂದು ಸಂಜೆ 4-00 ಗಂಟೆಗೆ ‘ತುಳುವಪ್ಪೆನ ನೇರೋಣಿಗೆ’ ಉದ್ಘಾಟನೆ ನಡೆಯಲಿದೆ. ದಿನಾಂಕ 21 ಡಿಸೆಂಬರ್ 2025ರಂದು ಬೆಳಗ್ಗೆ 9-00 ಗಂಟೆಗೆ ರಾಷ್ಟ್ರ ಧ್ವಜ, ನಾಡ ಧ್ವಜ ಮತ್ತು ತುಳು ಧ್ವಜಾರೋಹಣ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾದ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಇವರಿಂದ ಸಮ್ಮೇಳನ ಉದ್ಘಾಟನೆಗೊಳ್ಳಲಿದೆ. ಸೇಸಪ್ಪ ರೈ ರಾಮಕುಂಜ ಇವರು ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ ಗಟ್ಟಿ ಕಾಪಿಕಾಡ್ ಇವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. 11-00 ಗಂಟೆಗೆ ಜನಪದ…

Read More

ಮಂಗಳೂರು : ಕರಾವಳಿ ಲೇಖಕಿಯರ – ವಾಚಕಿಯರ ಸಂಘ (ಅವಿಭಜಿತ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆ )ವು ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳ ಲೇಖಕಿಯರಿಗಾಗಿ ಸಾಹಿತ್ಯ ಸ್ಪರ್ಧೆಗಳನ್ನು ನಡೆಸುತ್ತಿದೆ. ಸಣ್ಣ ಕಥೆಗಳ ಸಂಕಲನ – 2025 : ಜನವರಿಯಿಂದ ಡಿಸೆಂಬರ್ ತಿಂಗಳ ಕೊನೆಯೊಳಗೆ ಪ್ರಕಟಿತ ಸಣ್ಣ ಕಥಾಸಂಕಲನಕ್ಕೆ ಬಹುಮಾನ. ಪ್ರಾಯೋಜಕರು : ಯಶೋದಾ ಜೆನ್ನಿ ಸ್ಮೃತಿ ಸಂಚಯ ಹಿರಿಯಡ್ಕ ಹಾಗೂ ಏಕಾಂಕ ನಾಟಕ ರಚನೆ ಹಸ್ತಪ್ರತಿ ಸ್ಪರ್ಧೆ. ಏಕಾಂಕ ನಾಟಕ ರಚನಾ ಹಸ್ತಪ್ರತಿ ಸ್ಪರ್ಧೆ : ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳ ಲೇಖಕಿಯರಿಂದ ರಚಿತ ಸುಮಾರು ಒಂದು ಗಂಟೆ ಅವಧಿಯಲ್ಲಿ ಅಭಿನಯಿಸಬಹುದಾದ ಚಾರಿತ್ರಿಕ, ಸಾಮಾಜಿಕ ಅಥವಾ ಪೌರಾಣಿಕ ನಾಟಕದ ಹಸ್ತಪ್ರತಿ. ಅತ್ಯುತ್ತಮ ನಾಟಕ ಕೃತಿಗೆ ಬಹುಮಾನ ಪ್ರಾಯೋಜಕರು : ಸಂದೀಪ ಸಾಹಿತ್ಯ ಪ್ರಕಾಶನ, ಆತ್ರಾಡಿ, ಉಡುಪಿ -567107. ಸ್ಪರ್ಧಿಗಳು ತಮ್ಮ ಕಥೆಗಳ ತಲಾ ಮೂರು ಪ್ರತಿಗಳನ್ನು ದಿನಾಂಕ 15 ಜನವರಿ 2026ರ ಮೊದಲು ತಲುಪುವಂತೆ ಈ ಕೆಳಗಿನ…

Read More

ಬೆಂಗಳೂರು : ಖ್ಯಾತ ‘ಶ್ರದ್ಧಾ ಡ್ಯಾನ್ಸ್ ಸೆಂಟರ್’ ನೃತ್ಯ ಸಂಸ್ಥೆಯ ಬದ್ಧತೆಯ ನೃತ್ಯಗುರು ಮತ್ತು ಉತ್ತಮ ನೃತ್ಯಪಟುವೆಂದು ಹೆಸರಾದ ವಿದುಷಿ ಶಮಾ ಕೃಷ್ಣ ಇವರ ನುರಿತ ಗರಡಿಯಲ್ಲಿ ರೂಪುಗೊಂಡಿರುವ ಕಲಾಶಿಲ್ಪ ಕುಮಾರಿ ವಿದಿತಾ ಎನ್. ಕಳೆದ 6 ವರ್ಷಗಳಿಂದ ಅತ್ಯಾಸಕ್ತಿಯಿಂದ ಭರತನಾಟ್ಯ ಕಲಿಯುತ್ತಿರುವ ವಿದಿತಾ ಬೆಂಗಳೂರಿನ ಶ್ರೀ ನವೀನ್ ಮತ್ತು ಪುಷ್ಪಾ ದಂಪತಿಗಳ ಸುಪುತ್ರಿ. ಎಂಟನೆಯ ತರಗತಿಯಲ್ಲಿ ಓದುತ್ತಿರುವ ಹದಿಮೂರು ವರ್ಷದ ಈ ಬಾಲಪ್ರತಿಭೆ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಕಲಿಯುತ್ತ, ಈಗಾಗಲೇ ಕರ್ನಾಟಕ ಸರ್ಕಾರದ ‘ಜ್ಯೂನಿಯರ್’ ನೃತ್ಯಪರೀಕ್ಷೆಯನ್ನು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾಳೆ. ವಯಸ್ಸಿಗೆ ಮೀರಿದ ಪ್ರತಿಭಾನ್ವಿತಳಾದ ವಿದಿತಾ ನಾಟ್ಯಶಾಸ್ತ್ರದ 108 ‘ಕರಣ’ಗಳನ್ನು ಕಲಿಯುತ್ತಿರುವುದು ನಿಜಕ್ಕೂ ಇವಳ ಅಗ್ಗಳಿಕೆ. ನಾಡಿನಾದ್ಯಂತ ಅನೇಕ ಪ್ರತಿಷ್ಠಿತ ನೃತ್ಯೋತ್ಸವಗಳಲ್ಲಿ, ದೇವಾಲಯಗಳಲ್ಲಿ ನರ್ತಿಸಿರುವ ಇವಳು, ಪಾಶಾತ್ಯ, ಫ್ರೀ ಸ್ಟೈಲ್ ಮತ್ತು ಇನ್ನಿತರ ನೃತ್ಯ ಪ್ರಕಾರಗಳಲ್ಲೂ ಪರಿಶ್ರಮಿಸುತ್ತಿದ್ದಾಳೆ. ಜೀ ಕನ್ನಡ ವಾಹಿನಿಯ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಮತ್ತು ತೆಲುಗು ಈ ಟಿವಿಯ ‘ಧೀ’ ಡ್ಯಾನ್ಸ್ ಷೋ ನಲ್ಲಿ ಭಾಗವಹಿಸಿರುವ ವಿದಿತಾ,…

Read More

ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ‘ಭಾಗವತರು’ ಸಾಂಸ್ಕೃತಿಕ ಸಂಘಟನೆ ಇದರ ವತಿಯಿಂದ ಸಾಹಿತ್ಯ ಲೋಕದಲ್ಲಿ ಹೆಚ್.ಎಸ್. ಶಿವಪ್ರಕಾಶ್ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ, ಗಾಯನ, ಪುಸ್ತಕ ಬಿಡುಗಡೆ ಮತ್ತು ರಂಗ ಗೌರವ ಕಾರ್ಯಕ್ರಮವನ್ನು ದಿನಾಂಕ 21 ಡಿಸೆಂಬರ್ 2025ರಂದು ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ಕನ್ನಡ ಭವನದ ನಯನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 10-00 ಗಂಟೆಗೆ ಪ್ರಯೋಗ ರಂಗ ತಂಡದವರಿಂದ ಗಾಯನ ಪ್ರಸ್ತುತಿ, 10-30ಕ್ಕೆ ಹಿರಿಯ ಕವಿ ಅನ್ವರ್ ಆಲಿ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದು, ಹಿರಿಯ ಸಾಹಿತಿ ಪ್ರೊ. ಎಸ್.ಜಿ. ಸಿದ್ಧರಾಮಯ್ಯ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ 12-30 ಗಂಟೆಗೆ ನಡೆಯುವ ಗೋಷ್ಠಿ 1ರಲ್ಲಿ ‘ಹೆಚ್.ಎಸ್. ಶಿವಪ್ರಕಾಶ್ – ಬದುಕು ಬರಹ’ದ ಬಗ್ಗೆ ಕವಿ ಸಿರಾಜ್ ಅಹಮ್ಮದ್ ‘ಕಾವ್ಯ’, ಸಂಸ್ಕೃತಿ ಚಿಂತಕರಾದ ಡಾ. ಎಂ.ಎಸ್. ಆಶಾದೇವಿ ‘ಗದ್ಯ’ ಮತ್ತು ಗೋಷ್ಠಿ 2ರಲ್ಲಿ ರಂಗ ನಿರ್ದೇಶಕರಾದ ನಟರಾಜ ಹೊನ್ನವಳ್ಳಿ ಇವರು ‘ನಾಟಕಗಳು’, ಹಿರಿಯ ಸಾಹಿತಿ ಡಾ. ತಾರಿಣಿ…

Read More

ಬೆಂಗಳೂರು : ನಾಟಕ ಬೆಂಗ್ಳೂರ್ -26ರ ರಂಗಸಂಭ್ರಮದ ಪ್ರಯುಕ್ತ ‘ಅನೇಕ ಬೆಂಗಳೂರು’ ಅಭಿನಯಿಸುವ ‘ಲೈಟ್ಸ್ ಆಫ್’ ನಾಟಕ ಪ್ರದರ್ಶನವನ್ನು ದಿನಾಂಕ 19 ಡಿಸೆಂಬರ್ 2025ರಂದು ಸಂಜೆ 7-00 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ. ಪೀಟರ್ ಷಾಫರ್ ಇವರ ಈ ನಾಟಕವನ್ನು ಸುರೇಶ್ ಆನಗಳ್ಳಿಯವರು ಕನ್ನಡ ರೂಪ ವಿನ್ಯಾಸ ಮತ್ತು ನಿರ್ದೇಶನ ಮಾಡಿರುತ್ತಾರೆ. ಶಮಂತ್ ಹತ್ವಾರ್, ಮುರುಳಿ ಪೂರ್ವಿಕ್, ರಿತಿ ಶೆಟ್ಟಿ, ಸಿಂಧೂ ಹಂದೆ, ಪ್ರವೀಣ್ ಬಂಗೇರ್, ಪವನ್ ಜಿ.ಎನ್., ಗೃಹಿತ, ರಕ್ಷಿತ್ ಹೆಚ್.ವಿ. ರಂಗದ ಮೇಲೆ ಅಭಿನಯಿಸಲಿದ್ದಾರೆ.

Read More

ಉಡುಪಿ : 47ನೆಯ ‘ವಾದಿರಾಜ ಕನಕದಾಸ ಸಂಗೀತೋತ್ಸವ’ ಕಾರ್ಯಕ್ರಮವು ದಿನಾಂಕ 28 ಡಿಸೆಂಬರ್ 2025ರಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ವಾದಿರಾಜ ಕನಕದಾಸ ಸಂಗೀತೋತ್ಸವ ಸಮಿತಿ, ಕನಕದಾಸ ಅಧ್ಯಯನ ಸಂಶೋಧನ ಪೀಠ ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್‌ ಎಜ್ಯುಕೇಶನ್, ಎಂ.ಜಿ.ಎಂ. ಕಾಲೇಜು ಉಡುಪಿ, ಸರಿಗಮ ಭಾರತಿ ಸಂಗೀತ ವಿದ್ಯಾಲಯ (ರಿ) ಪರ್ಕಳ ಸಂಸ್ಥೆಗಳು ಸಂಘಟಿಸಿವೆ. ಸಂಗೀತೋತ್ಸವದ ಪ್ರಯುಕ್ತ ಪ್ರಾಥಮಿಕ, ಪ್ರೌಢ, ಕಾಲೇಜು, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗಾಗಿ ವಾದಿರಾಜ-ಕನಕ ಗಾಯನ ಸ್ಪರ್ಧೆಯನ್ನು ದಿನಾಂಕ 27 ಡಿಸೆಂಬರ್ 2025ರಂದು ಬೆಳಿಗ್ಗೆ 9-00 ಗಂಟೆಗೆ ಸರಿಯಾಗಿ ಎಂ.ಜಿ.ಎಂ. ಕಾಲೇಜಿನ ಆವರಣದಲ್ಲಿರುವ ರವೀಂದ್ರ ಮಂಟಪದಲ್ಲಿ ನಡೆಸಲಾಗುವುದು. ಸ್ಪರ್ಧಾಳುಗಳು ವಾದಿರಾಜರ ಮತ್ತು ಕನಕದಾಸರ ಎರಡೆರಡು ಕೀರ್ತನೆಗಳನ್ನು ಅಭ್ಯಸಿಸಿದ್ದು, ತೀರ್ಪುಗಾರರು ಕೇಳುವ ಕೀರ್ತನೆಯನ್ನು ಹಾಡಲು ಶಕ್ತರಿರಬೇಕು. ಭಾಗವಹಿಸಲು ಇಚ್ಛಿಸುವವರು ತಮ್ಮ ಹೆಸರನ್ನು ಆಡಳಿತಾಧಿಕಾರಿಗಳು, ಕನಕದಾಸ ಅಧ್ಯಯನ ಸಂಶೋಧನ ಪೀಠ, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ,…

Read More

ಮೂಡಬಿದಿರೆ : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಧವಳತ್ರಯ ಜೈನಕಾಶಿ ಟ್ರಸ್ಟ್ (ರಿ.) ಶ್ರೀ ಜೈನಮಠ ಮೂಡಬಿದಿರೆ ಮತ್ತು ನಾದನೂಪುರ ಯಕ್ಷೋತ್ಥಾನ ಟ್ರಸ್ಟ್ ವಂಡಾರು ಇವರ ಆಶ್ರಯದಲ್ಲಿ ದಿನಾಂಕ 16 ಡಿಸೆಂಬರ್ 2025ರಂದು ಮೂಡಬಿದಿರೆ ಜೈನಮಠದಲ್ಲಿ ಜರಗಿದ ‘ತುಳು ನಾಡು – ನುಡಿಗೆ ಜೈನರ ಕೊಡುಗೆ’ ವಿಚಾರ ಸಂಕಿರಣದ ಅಂಗವಾಗಿ ‘ಮಹಾತ್ಮ’ ನೂತನ ಪ್ರಸಂಗದ ತುಳು ತಾಳಮದ್ದಳೆ ಜರಗಿತು. ಜೈನ ಧರ್ಮದ 16ನೇ ತೀರ್ಥಂಕರ ಶಾಂತಿನಾಥ ಸ್ವಾಮಿಯ ಪ್ರಥಮ ಭವಾಂಕವನ್ನು ಆಧರಿಸಿ ನಾದ ನೂಪುರ ಯಕ್ಷೋತ್ಥಾನ ಟ್ರಸ್ಟ್ ಕಾರ್ಯದರ್ಶಿ ಮತ್ತು ಯುವ ಪ್ರಸಂಗಕರ್ತೆ ಶುಭಾಶಯ ಇವರು ಬರೆದ ‘ಮಹಾತ್ಮ’ ಪ್ರಸಂಗದ ಮೊದಲ ಪ್ರಯೋಗದಲ್ಲಿ ಜಿಲ್ಲೆಯ ಪ್ರಸಿದ್ಧ ಯಕ್ಷಗಾನ ಕಲಾವಿದರು ಭಾಗವಹಿಸಿದರು. ಹೆಸರಾಂತ ತಾಳಮದ್ದಳೆ ಅರ್ಥಧಾರಿಗಳಾದ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ (ಸತ್ಯಕ – ವಿದ್ಯಾಧರ), ಎಂ.ಕೆ. ರಮೇಶಾಚಾರ್ಯ (ಸತ್ಯಭಾಮೆ), ಡಾ. ತಾರಾನಾಥ ವರ್ಕಾಡಿ (ಧರಣೀಜಟ), ರಾಧಾಕೃಷ್ಣ ಕಲ್ಚಾರ್ (ಕಪಿಲ), ಸದಾಶಿವ ಆಳ್ವ ತಲಪಾಡಿ (ಶ್ರೀಷೇಣ ರಾಜ) ಮತ್ತು ಡಾ. ಶ್ರುತಕೀರ್ತಿ ರಾಜ್…

Read More

ಉಡುಪಿ : ಯಕ್ಷಗಾನ ಕಲಾರಂಗವು ಪ್ರತೀವರ್ಷ ವೃತ್ತಿ ಕಲಾವಿದರಾದ 1300 ಯಕ್ಷನಿಧಿ ಸದಸ್ಯರ ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನೊಳಗೊಂಡ ಡೈರಿಯನ್ನು ಪ್ರಕಟಿಸುತ್ತಿದ್ದು, 2026ರ ಯಕ್ಷನಿಧಿ ಡೈರಿಯನ್ನು ದಿನಾಂಕ 17 ಡಿಸೆಂಬರ್ 2025ರಂದು ಬಾರ್ಕೂರು ಬಳಿಯ ಬೆಣ್ಣೆಕುದುರು ಕುಲಮಹಾ ಸ್ತ್ರೀ ದೇವಳದಲ್ಲಿ ಅಮೃತೇಶ್ವರೀ ಮೇಳದ ಸಂಚಾಲಕರೂ, ಗೀತಾನಂದ ಫೌಂಡೇಶನ್ ಅಧ್ಯಕ್ಷರೂ ಆದ ಆನಂದ ಸಿ. ಕುಂದರ್ ಇವರು ಬಿಡುಗಡೆಗೊಳಿಸಿ, ಸಂಸ್ಥೆಯ ನಿರಂತರ ಕಾರ್ಯ ಚಟುವಟಿಕೆಗಳು ಬೆರಗುಂಟುಮಾಡುವಂತದ್ದು, ಕಲಾರಂಗಕ್ಕೆ ಶ್ರೇಯಸ್ಸಾಗಲೆಂದು ಶುಭ ಹಾರೈಸಿದರು. ವೃತ್ತಿ ಮೇಳದ ಕಲಾವಿದರಿಗೆ ಕಳೆದ ಎರಡು ದಶಕಗಳಿಂದ ಕೆನರಾ ಬಸ್ ಮಾಲಕರ ಸಂಘವು ನೀಡುತ್ತಾ ಬಂದ 50% ರಿಯಾಯತಿಯ ಬಸ್ ಪಾಸನ್ನು ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಕುಯಿಲಾಡಿ ಸುರೇಶ್ ನಾಯಕ್ ಇವರು ವಿವಿಧ ಮೇಳಗಳ ಪ್ರತಿನಿಧಿಗಳಿಗೆ ವಿತರಿಸಿದರು. 10 ತಿಂಗಳ ಅವಧಿಯ ಬಸ್ ಪಾಸ್ ಸೌಲಭ್ಯವನ್ನು ಮುಂದೆ ಸಂಘದ ಅಧ್ಯಕ್ಷರು ಹಾಗೂ ಸದಸ್ಯರ ಸಹಕಾರದೊಂದಿಗೆ ಒಂದು ವರ್ಷಕ್ಕೆ ವಿಸ್ತರಿಸುವ ಯೋಚನೆ ಇದೆ ಎಂಬುದಾಗಿ ಈ ಸಂದರ್ಭದಲ್ಲಿ ಸುರೇಶ್ ನಾಯಕರು ನುಡಿದರು.…

Read More

ಒಂದೇ ವೇದಿಕೆಯ ಮೇಲೆ ನೂರಾರು ಬಣ್ಣಗಳ ಕಾರಂಜಿಗಳು ಪುಟಿದ ರೋಮಾಂಚಕ ಅನುಭವ. ಕಣ್ತುಂಬಿದ ಬಣ್ಣಗಳ ಓಕುಳಿ. ಉದಯೋನ್ಮುಖ ನೃತ್ಯ ಕಲಾವಿದರ ಚೈತನ್ಯ ಸಮಾಗಮ. ಒಂದು ಗಳಿಗೆಯೂ ಬಿಡುವು ಕೊಡದೆ ರಂಗದ ಮೇಲಿನ ನವಿಲಂಥ ಚೆಲುವೆಯರು, ಗರಿಬಿಚ್ಚಿ ನಲಿದ ಸಂಭ್ರಮ ‘ನೃತ್ಯ ದರ್ಪಣ್’ದ ‘ತಾಳ್ ತರಂಗ್’ ದ ವೈಶಿಷ್ಟ್ಯ. ಇವೆಲ್ಲ ಸಾಕ್ಷಾತ್ಕರವಾದದ್ದು ಬೆಂಗಳೂರಿನ ‘ನೃತ್ಯ ದರ್ಪಣ್’ ಅಕಾಡೆಮಿಯ ಆರ್ಟಿಸ್ತಿಕ್ ಡೈರೆಕ್ಟರ್ ಪಾದರಸ ವ್ಯಕ್ತಿತ್ವದ ವಿದುಷಿ ವೀಣಾ ಭಟ್ ಇವರ ವಿಶಿಷ್ಟ ಪರಿಕಲ್ಪನೆಯ ಸಮರ್ಥ ಕಾರ್ಯಕ್ಷಮತೆಯಿಂದ. ವರ್ಷ ಪೂರ್ತಿ ನಿರಂತರ ಸಕ್ರಿಯರಾಗಿರುವ ಪ್ರಯೋಗಶೀಲ ಕಥಕ್ ನೃತ್ಯಗಾರ್ತಿ ವೀಣಾ ಆರ್. ಭಟ್ ಕಳೆದ ಒಂದೂವರೆ ದಶಕಕ್ಕೂ ಹೆಚ್ಚಿನ ಕಾಲದಿಂದ ‘ನೃತ್ಯದರ್ಪಣ್’ -ಕಥಕ್ ನೃತ್ಯಶಾಲೆಯನ್ನು ಉತ್ತಮ ಗುರುವಾಗಿ, ಮುನ್ನಡೆಸುತ್ತ ತಮ್ಮ ವರ್ಣರಂಜಿತ ಕಾರ್ಯಕ್ರಮಗಳಿಗೆ ಅತ್ಯಂತ ಜನಪ್ರಿಯತೆ ಪಡೆದಿದ್ದಾರೆ. ನೂರಾರು ವಿದ್ಯಾರ್ಥಿಗಳಿಗೆ ಕಥಕ್ ನೃತ್ಯದ ಶಿಕ್ಷಣ ನೀಡುತ್ತ ಮಾರ್ಗದರ್ಶಕರಾಗಿ ಯಶಸ್ವಿಯಾಗಿ ಅನೇಕ ಸಮ್ಮೋಹಕ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಅವರ ಅಸ್ಮಿತೆ. ಇತ್ತೀಚೆಗೆ ನಗರದ ಎ.ಡಿ.ಎ. ರಂಗಮಂದಿರದಲ್ಲಿ ‘ತಾಳ್ ತರಂಗ್’ ವೀಕ್ಷಿಸಲು…

Read More