Author: roovari

ಧಾರವಾಡ : ಉತ್ತರ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿಯಾದ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ದಿ. ರಾ.ಹ. ದೇಶಪಾಂಡೆ ಸಭಾಭವನದಲ್ಲಿ ನಡೆದ ‘ಗೈರ ಸಮಜೂತಿ’ ಮತ್ತು ‘ಹಾವಳಿ’ ಕಾದಂಬರಿಗಳ ಕುರಿತ ವಿಶೇಷ ಉಪನ್ಯಾಸ ಮತ್ತು ‘ಹೃದಯದ ಹಾದಿ’ ಪುಸ್ತಕ ಬಿಡುಗಡೆ ಕಾರ್ಯಕ್ರಮವು ದಿನಾಂಕ 30-01-2024ರಂದು ನಡೆಯಿತು. ‘ಹೃದಯದ ಹಾದಿ’ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಆನಂದ ಜಂಝರವಾಡರು “ಕನ್ನಡದ ಅತ್ಯುತ್ತಮ ಕಾದಂಬರಿಗಳಲ್ಲಿ ಒಂದಾಗಿರುವ ‘ಗೈರ ಸಮಜೂತಿ’ಯು ಎಲ್ಲ ಕಾಲಕ್ಕೂ ಸಲ್ಲುವ ಕೃತಿಯಾಗಿದೆ. ಕನ್ನಡದ ಮಹತ್ವದ ಲೇಖಕರಾದ ರಾಘವೇಂದ್ರ ಪಾಟೀಲರು ಬರೆದ ಆ ಕಾದಂಬರಿಯ ಬಗ್ಗೆ ಯುವ ವಿಮರ್ಶಕ ವಿಕಾಸ ಹೊಸಮನಿ ಸಂಪಾದಿಸಿದ ‘ಹೃದಯದ ಹಾದಿ’ ಎಂಬ ಸಂಪಾದಿತ ಕೃತಿಯ ಮಹತ್ವ ಈಗ ಅರಿವಾಗದಿದ್ದರೂ ಸುಮಾರು ಐವತ್ತು ವರ್ಷಗಳ ಬಳಿಕ ಮನದಟ್ಟಾಗಬಹುದು. ಪಾಟೀಲರ ದೇಸಿ ಪ್ರತಿಭೆ, ಉತ್ತರ ಕರ್ನಾಟಕದ ಭಾಷೆಯ ಸೊಗಡು, ಪದ ಪ್ರಯೋಗದ ಹಿಡಿತ, ಅರ್ಥ ಭಾವಗಳ ಮಿಡಿತ, ಉಪ ಕತೆಗಳನ್ನು ನೇಯ್ದು ಕಥನ ಕಟ್ಟುವ ಶೈಲಿ, ಕಥನದ ಧ್ವನಿಶಕ್ತಿ ಮೊದಲಾದ ಬಹುಮುಖಿ ಆಯಾಮಗಳು…

Read More

ಉಡುಪಿ : ಪರ್ಯಾಯ ಶ್ರೀಪುತ್ತಿಗೆ ಮಠ ಮತ್ತು ‘ಸುಗುಣಶ್ರೀ ಭಜನಾ ಮಂಡಳಿ’ ಮಣಿಪಾಲ ಹಾಗೂ ‘ರತ್ನಸಂಜೀವ ಕಲಾಮಂಡಲ’ ಸರಳೇಬೆಟ್ಟು ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 09-02-2024ರಂದು ಮಧ್ಯಾಹ್ನ 3 ಗಂಟೆಯಿಂದ ದಾಸಶ್ರೇಷ್ಠರಾದ ಶ್ರೀ ಪುರಂದರ ದಾಸರ ಆರಾಧನಾಂಗವಾಗಿ ‘ಶತಕಂಠ ಗಾಯನ’ ಶ್ರೀ ಕೃಷ್ಣ ಮಠ ರಾಜಾಂಗಣದಲ್ಲಿ ನಡೆಯಲಿದೆ. ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರ ಮತ್ತು ಪರಮಪೂಜ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದಂಗಳವರ ಪರಮಾನುಗ್ರಹದಿಂದ ನಡೆಯಲಿರುವ ಈ ಕಾರ್ಯಕ್ರಮದಲ್ಲಿ 100ಕ್ಕೂ ಮಿಕ್ಕಿ ಗಾಯಕರು ಗಾಯನವನ್ನು ಪ್ರಸ್ತುತ ಪಡಿಸಲಿದ್ದಾರೆ ಎಂದು ಸಂಚಾಲಕಿ ವಿದುಷಿ ಉಷಾ ಹೆಬ್ಬಾರ್ ತಿಳಿಸಿದ್ದಾರೆ.

Read More

ಸುಬ್ರಹ್ಮಣ್ಯ : ಉಡುಪಿ ಮುದ್ರಾಡಿ ನಮ ತುಳುವೆರ್ ಕಲಾ ಸಂಘಟನೆ ಮತ್ತು ಶ್ರೀ ಸುಬ್ರಹ್ಮಣ್ಯ ಮಠದ ಸಹಯೋಗದಲ್ಲಿ ನಮ ತುಳುವೆ‌ರ್ ಸಂಘಟನೆಯ ಸುವರ್ಣ ಕರ್ನಾಟಕ ಕಾರ್ಯಕ್ರಮದ ಅಂಗವಾಗಿ ಸುವರ್ಣ ಕರ್ನಾಟಕ ರಂಗ ಅಭಿಯಾನ ಮತ್ತು ನಾಟಕ ಪ್ರದರ್ಶನ ಕಾರ್ಯಕ್ರಮವು ಸುಬ್ರಹ್ಮಣ್ಯದ ಶ್ರೀ ವನದುರ್ಗಾದೇವಿ ಸಭಾಭವನದಲ್ಲಿ ದಿನಾಂಕ 27-01-2024ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ಸುಬ್ರಹ್ಮಣ್ಯ ಮಠದ ದಿವಾನ ಸುದರ್ಶನ ಜೋಯಿಸ ಮಾತನಾಡಿ “ನಾಟಕಗಳು ನಮ್ಮ ಕಲೆಯನ್ನು ಯುವ ಪೀಳಿಗೆಗೆ ತಿಳಿಸುವ ಮಾಧ್ಯಮವಾಗಿದೆ. ಆಧುನಿಕ ಜನತೆ ನಮ್ಮ ಕಲಾ ಸಂಸ್ಕೃತಿಯತ್ತ ಹೆಚ್ಚು ಆಕರ್ಷಿತರಾಗುವುದು ಅತ್ಯವಶ್ಯಕ. ಭಾರತೀಯ ಕಲಾ ಪ್ರಕಾರಗಳು ಮನಸ್ಸಿಗೆ ಮುದ ನೀಡುವ ಶ್ರೇಷ್ಠ ಕಾರ್ಯವನ್ನು ಮಾಡುತ್ತದೆ. ಅಲ್ಲದೆ, ಬದುಕಿನಲ್ಲಿ ಶಾಂತಿ ನೆಮ್ಮದಿ ಪ್ರಗತಿಯಾಗಲು ನಮ್ಮ ಕಲೆಗಳ ಪಾತ್ರ ಅನನ್ಯವಾಗಿದೆ. ಸುಂದರ ಮನಸ್ಸುಗಳ ನಿರ್ಮಾಣದಲ್ಲಿ ನಾಟಕದ ಪಾತ್ರ ಅಮೋಘ. ನಾಟಕಗಳು ನಮ್ಮ ಪಾರಂಪರಿಕ ಕಲೆಗಳನ್ನು ಎತ್ತಿ ಹಿಡಿಯುತ್ತದೆ” ಎಂದು ಹೇಳಿದರು. ಕಲಾವಿದ ಕೆ. ಯಜ್ಞೇಶ್ ಆಚಾರ್, ನಿವೃತ್ತ ಮುಖ್ಯ ಗುರು ಶ್ರೀಕೃಷ್ಣ…

Read More

ಗಾವಳಿ : ಗಾವಳಿಯ ಯಕ್ಷ ಕುಟೀರದಲ್ಲಿ ಖ್ಯಾತ ಸ್ತ್ರೀ ವೇಷಧಾರಿ ಅರಾಟೆ ಮಂಜುನಾಥ ಸಂಸ್ಮರಣೆ ಹಾಗೂ ಹಿರಿಯ ಯಕ್ಷಗಾನ ಕಲಾವಿದ ಹೊಸಂಗಡಿ ರಾಜೀವ ಶೆಟ್ಟಿಯವರಿಗೆ ಅರಾಟೆ ಮಂಜುನಾಥ ಗೌರವ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 30-01-2024ರಂದು ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಾಲಿಗ್ರಾಮ ಮಕ್ಕಳ ಮೇಳದ ನಿರ್ದೇಶಕ ಎಚ್. ಸುಜಯೀಂದ್ರ ಹಂದೆ ಮಾತನಾಡಿ “ಕರಾವಳಿ ಮತ್ತು ಮಲೆನಾಡಿನ ಜನರ ಬೌದ್ಧಿಕ ಶ್ರೀಮಂತಿಕೆಗೆ ಕಾರಣವಾದದ್ದು ಯಕ್ಷಗಾನ ಕಲೆ. ಆನಂದದ ಅನುಭೂತಿಯೊಂದಿಗೆ ಬುದ್ಧಿಯ ವಿಕಸನಕ್ಕೆ ಯಕ್ಷಗಾನ ದಾರಿಯಾಗಿದೆ. ರಂಗಸ್ಥಳದಲ್ಲಿ ಕಲೆಯ ಸಾಕ್ಷಾತ್ಕಾರಕ್ಕೆ ಕಾರಣರಾದ ಕಲಾವಿದರನೇಕರು ಪ್ರಾತಃಸ್ಮರಣೀಯರು. ಅಂತಹ ಮೇರು ಕಲಾವಿದರ ಸಾಲಿನಲ್ಲಿ ಖ್ಯಾತ ಸ್ತ್ರೀವೇಷಧಾರಿ ಅರಾಟೆ ಮಂಜುನಾಥರು ಅಭಿವಂದನೀಯರು. ಕಲಾವಿದನಾಗಿ, ಸಂಘಟಕನಾಗಿ, ಕಲಾವಿದರ ನೋವಿನ  ಧ್ವನಿಯಾಗಿ, ಸಿಡಿಲಾಗಿ ಗುರುತಿಸಿಕೊಂಡವರು ಅರಾಟೆಯವರು. ಹಲವು ಕಲಾವಿದರ ಪ್ರತಿಭಾ ಅನಾವರಣಕ್ಕೆ ಕಾರಣರಾದ ಅರಾಟೆಯವರ ಹೆಸರಿನ ಪ್ರಶಸ್ತಿ ಅರ್ಹರಿಗೆ ದೊರೆತಿದೆ” ಎಂದು ಹೇಳಿದರು. ಗಣೇಶ್ ಪ್ರಸಾದ್ ಅರಾಟೆ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪೆರ್ಡೂರು ಮೇಳದ ಯಜಮಾನ ವೈ. ಕರುಣಾಕರ…

Read More

ಉಡುಪಿ : ಸಾಲಿಗ್ರಾಮ ಮಕ್ಕಳ ಮೇಳ (ರಿ.) ಕೋಟ ಇದರ ವತಿಯಿಂದ ಎರಡು ದಿನಗಳ ‘ಕಲೋತ್ಸವ -2024’ ಸಮಾರಂಭವು ದಿನಾಂಕ 11-02-2024 ಮತ್ತು 12-02-2024ರಂದು ಕೋಟ ಪಟೇಲರ ಮನೆ ಆವರಣದಲ್ಲಿ ನಡೆಯಲಿರುವುದು. ದಿನಾಂಕ 11-02-2024ರಂದು ಸಂಜೆ 5.30ಕ್ಕೆ ನಡೆಯಲಿರುವ ಕಾರ್ಕಡ ಶ್ರೀನಿವಾಸ ಉಡುಪ ಸಂಸ್ಮರಣ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುಂಬೈ ಒ.ಎನ್.ಜಿ.ಸಿ.ಯ ನಿವೃತ್ತ ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಬನ್ನಾಡಿ ನಾರಾಯಣ ಆಚಾರ್ ಸಂಸ್ಮರಣ ನುಡಿಗಳನ್ನಾಡಲಿದ್ದಾರೆ. ಯಕ್ಷಗಾನ ಕಲಾವಿದ ಕೋಟ ಸುರೇಶ್ ಇವರಿಗೆ ಉಡುಪ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಇದೇ ಸಂದರ್ಭದಲ್ಲಿ ಸಂಜೆ ಗಂಟೆ 4ಕ್ಕೆ ವಿದ್ವಾನ್ ಅಶೋಕ್ ಆಚಾರ್ಯ ಮತ್ತು ಬಳಗದವರಿಂದ ‘ನಿನಾದ’ ಲಘು ಸಂಗೀತ ಮತ್ತು ಮಂಗಳೂರಿನ ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಕಲಾವಿದರಿಂದ ಶ್ವೇತ ಅರೆಹೊಳೆ ನಿರ್ದೇಶನದಲ್ಲಿ ‘ನೃತ್ಯ ಸಂಭ್ರಮ’ ಪ್ರಸ್ತುತಗೊಳ್ಳಲಿದೆ. ದಿನಾಂಕ 12-02-2024ರಂದು ನಡೆಯಲಿರುವ ಯಕ್ಷ ಕಲಾವಿದರಿಗೆ ಗೌರವ ಪ್ರದಾನ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ಪ್ರದೀಪ ಕುಮಾರ್ ಕಲ್ಕೂರ ಇವರು ವಹಿಸಲಿದ್ದಾರೆ.…

Read More

ಪುತ್ತೂರು : ಶ್ರೀ ಶಾರದಾ ಕಲಾ ಕೇಂದ್ರ ಟ್ರಸ್ಟಿನ 30ನೇ ವಾರ್ಷಿಕೋತ್ಸವ ‘ತ್ರಿಂಶತಿ ಸಂಭ್ರಮ’ವು ಪುತ್ತೂರು ಪುರಭವನದಲ್ಲಿ ಸಭೆ, ಗಾಯನ, ನರ್ತನ, ವಾದ್ಯ ವಾದನಗಳ ಪ್ರಸ್ತುತಿಗಳೊಂದಿಗೆ ದಿನಾಂಕ 28-01-2024ರಂದು ವಿಜೃಂಭಣೆಯಿಂದ ನೆರವೇರಿತು. ಹರೀಶ್ ಕಿಣಿಯವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಗೀತ ಗುರುಗಳಾದ ವಿದ್ವಾನ್ ಸುದರ್ಶನ್ ಭಟ್ ಅವರ ನಿರ್ದೇಶನದಲ್ಲಿ ಸಂಸ್ಥೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ನಡೆಯಿತು. ತದನಂತರ ಕೊಳಲು ವಾದನ ಗುರು ಸುರೇಂದ್ರ ಆಚಾರ್ಯ ಅವರ ಶಿಷ್ಯ ವೃಂದದಿಂದ ಕೊಳಲು ವಾದನ ನಡೆಯಿತು. ಸಂಜೆ 6 ಗಂಟೆಗೆ ವಿದುಷಿ ನಯನಾ ವಿ. ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಅಂತರ್ಜಲ ಸಂಶೋಧಕ ಹಾಗೂ ವಾಹಿನಿ ದರ್ಬೆ ಕಲಾಸಂಘದ ರಾಜ್ಯಾಧ್ಯಕ್ಷ ಮಧುರಕಾನನ ಗಣಪತಿ ಭಟ್ ಪಾಲ್ಗೊಂಡರು. ನಂತರ ಹಿರಿಯ ವಿದ್ಯಾರ್ಥಿಗಳು, ಗುರು ವಿದ್ವಾನ್ ಸುದರ್ಶನ್ ಎಂ.ಎಲ್. ಭಟ್ ಹಾಗೂ ತಾಯಿ ಮಾಲಿನಿ ಭಟ್ ಅವರಿಗೆ ಗುರುವಂದನೆ ಸಲ್ಲಿಸಿದರು. ಈ ಸಂದರ್ಭ ಸಂಸ್ಥೆಯ ಜೂನಿಯರ್, ಸೀನಿಯರ್, ವಿದ್ವತ್…

Read More

ಮಂಗಲ್ಪಾಡಿ : ಕರ್ನಾಟಕ ಗಮಕ ಕಲಾ ಪರಿಷತ್ತಿನ ಕೇರಳ ಗಡಿನಾಡ ಘಟಕ ಮತ್ತು ಕಲಾಕುಂಚ ಕೇರಳ ಗಡಿನಾಡ ಘಟಕದ ಸಂಯುಕ್ತ ಆಶ್ರಯದಲ್ಲಿ ದಿನಾಂಕ 28-01-2024ರಂದು ‘ಮಹಾಕವಿ ನಮನ’ ಸಮಾರಂಭವು ಮಂಗಲ್ಪಾಡಿಯ ಏಕಾಹ ಭಜನಾ ಮಂದಿರದಲ್ಲಿ ನಡೆಯಿತು. “ಕುಮಾರವ್ಯಾಸನೆಂದರೆ ಜನಸಾಮಾನ್ಯರಿಗೂ ಮಹಾಕಾವ್ಯವನ್ನು ಸುಲಭವಾಗಿ ಮನದಟ್ಟು ಮಾಡಿಕೊಟ್ಟ ಮಹಾಕವಿ” ಎಂದು ಕರ್ನಾಟಕ ಕಾಲೇಜು ಇಲಾಖೆಯ ನಿವೃತ್ತ ನಿರ್ದೇಶಕ ಶ್ರೀ ಗಿರಿಧರ ಮಾಣಿಹಿತ್ತಿಲು ಅವರು ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸುತ್ತಾ ನುಡಿದರು. ಹಿರಿಯ ಸಾಹಿತಿ ಶಿಕ್ಷಣತಜ್ಞ ವಿ.ಬಿ.ಕುಳಮರ್ವ ಅವರು ಕವಿಪುಂಗವನಿಗೆ ನುಡಿಕುಸುಮಗಳನ್ನರ್ಪಿಸಿ ನಮಿಸಿ ಮಾತನಾಡುತ್ತಾ “ಜನಸಾಮಾನ್ಯರಿಗೆ ಪ್ರವೇಶಿಸಲು ಅಸಾಧ್ಯವಾದ ಸಂಸ್ಕೃತ ಭಾಷೆಯ ವ್ಯಾಸ ಮಹಾಕವಿಯ ಮಹಾಭಾರತವೆಂಬ ಗಹನ ಗಹ್ವರವಾದ ಗೊಂಡಾರಣ್ಯ ಸಮಾನವಾದ ಮಹಾಕಾವ್ಯವನ್ನು ನಗುವ ನಂದನವನವನ್ನಾಗಿಸಿ ಸುಲಭವಾಗಿ ಪ್ರವೇಶಿಸಲು ಅನುವು ಮಾಡಿಕೊಟ್ಟ ಕುಮಾರವ್ಯಾಸ ನಿಜವಾಗಿಯೂ ಮಹಾಕವಿ ರತ್ನ. ಆತ ಅಪ್ಪಟ ಭಕ್ತಕವಿ. ಕೃಷ್ಣಪರಮಾತ್ಮನ ಮೇಲಿನ ಭಕ್ತಿಯ ಪರಾಕಾಷ್ಠೆಯನ್ನು ಒಳಗೊಂಡಿರುವ ಆತನ ಮಹಾಕಾವ್ಯವೇ ಕರ್ಣಾಟ ಭಾರತ ಕಥಾಮಂಜರಿ ಅಥವಾ ಗದುಗು ಭಾರತ. ಕನ್ನಡ ಸಾಹಿತ್ಯದಲ್ಲಿ ಭಾಮಿನಿ ಷಟ್ಪದಿಯಲ್ಲಿ…

Read More

ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯು ಬೆಂಗಳೂರಿನ ಬಾಲ ಪ್ರತಿಭೆ ಕುಮಾರಿ ನಿಹಾರಿಕ ಹೆಚ್.ಎನ್. ಇವರನ್ನು ‘ಕರ್ನಾಟಕ ಸುವರ್ಣ ಸಿರಿ’ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ. ನವೀನ್ ಹೆಚ್.ಎಂ. ಮತ್ತು ಶ್ರೀಮತಿ ದೀಪಾ ಕೆ.ಹೆಚ್. ಇವರ ಸುಪುತ್ರಿಯಾಗಿರುವ ನಿಹಾರಿಕ ಹೆಚ್.ಎನ್. ಮೂರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಚಿತ್ರಕಲೆ, ಭರತನಾಟ್ಯ, ಸಂಗೀತ, ಕೀಬೋರ್ಡ್ ಮುಂತಾದ ಲಲಿತ ಕಲೆಗಳ ಎಲ್ಲಾ ಪ್ರಕಾರಗಳಲ್ಲಿ ಸಾಧನೆ ಮಾಡುತ್ತಿರುವುದನ್ನು ಗುರುತಿಸಿ ಈ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಸಂಸ್ಥೆಯ ಅಧ್ಯಕ್ಷರಾದ ಕೆ.ಹೆಚ್. ಮಂಜುನಾಥ್, ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಶ್ರೀಮತಿ ಜ್ಯೋತಿ ಗಣೇಶ್ ಶೆಣೈ, ಅಧ್ಯಕ್ಷರಾದ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಸೇರಿದಂತೆ ಕಲಾಕುಂಚದ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕಾಸರಗೋಡು : ಶ್ರೀ ಗೋಪಾಲಕೃಷ್ಣ ಸಂಗೀತ ಶಾಲೆಯ 27ನೇ ವಾರ್ಷಿಕೋತ್ಸವವು ದಿನಾಂಕ 21-01-2024ರಂದು ಕಾಸರಗೋಡಿನ ಬೀರಂತಬೈಲಿನಲ್ಲಿರುವ ಲಲಿತ ಕಲಾಸದನದಲ್ಲಿ ಜರಗಿತು. ಈ ಸಮಾರಂಭದಲ್ಲಿ ದೀಪ ಪ್ರಜ್ವಲನೆ ಮಾಡಿ ಆಶೀರ್ವಚನ ನೀಡಿದ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು “ಭಾರತೀಯ ಸಂಸ್ಕೃತಿಯನ್ನು ಎತ್ತಿಹಿಡಿಯುವಲ್ಲಿ ಇಲ್ಲಿನ ವಿವಿಧ ಕಲಾಪ್ರಾಕಾರಗಳು ಕಾರಣವಾಗಿವೆ. ಈ ನಿಟ್ಟಿನಲ್ಲಿ ಸಂಗೀತ ಕಲಾಸೇವೆಯ ಮೂಲಕ ದೇಶಕ್ಕೆ ಅನನ್ಯ ಕೊಡುಗೆಯನ್ನು ನೀಡಿದ ಈ ಸಂಸ್ಥೆಯು ಇನ್ನಷ್ಟು ಬೆಳಗಲಿ” ಎಂದು ನುಡಿದರು. ಹಿರಿಯ ಸಂಗೀತ ಗುರುಗಳಾದ ಕಲ್ಮಾಡಿ ಸದಾಶಿವ ಆಚಾರ್ಯ ಮಾತನಾಡುತ್ತಾ “ತಾನು ಕಲಿತ ವಿದ್ಯೆಯನ್ನು ತನ್ನ ಶಿಷ್ಯರಿಗೆ ನೀಡುವ ಮೂಲಕ ಗುರು ಋಣವನ್ನು ಉಷಾ ಈಶ್ವರ ಭಟ್ ಅವರು ತೀರಿಸುತ್ತಿದ್ದಾರೆ. ಶಿಷ್ಯಂದಿರಿಗೆ ವಿದ್ಯೆಯನ್ನು ನೀಡುವಲ್ಲಿಯೂ ಆನಂದವಿದೆ. ಗುರುಗಳನ್ನು ಮೀರಿಸುವ ಶಿಷ್ಯಂದಿರು ರೂಪುಗೊಂಡಾಗ ಲಭಿಸುವ ಸಂತೋಷ ಬೇರೆಲ್ಲೂ ಸಿಗದು. ಅಂತಹ ಶಿಷ್ಯಂದಿರನ್ನು ಇವರು ಹೊಂದಿದ್ದಾರೆ” ಎಂದರು. ಹಿರಿಯ ನ್ಯಾಯವಾದಿ ಎಂ. ನಾರಾಯಣ ಭಟ್ ಮಾತನಾಡಿ “27 ವರ್ಷಗಳಿಂದ ಕಾಸರಗೋಡಿನಲ್ಲಿ ಕಲಾಸೇವೆಯನ್ನು ನೀಡುತ್ತಾ…

Read More

ಮಹಾರಾಷ್ಟ್ರ : ಅಖಿಲ ಭಾರತ ತುಳು ಒಕ್ಕೂಟ ವತಿಯಿಂದ ದೀರ್ಘಕಾಲದಿಂದ ಉದ್ಯಮದೊಂದಿಗೆ ತುಳುಭಾಷೆ ಸಂಸ್ಕೃತಿ ಅಭಿವೃದ್ಧಿ ನೆಲೆಯಲ್ಲಿ ತುಳುನಾಡ ಸಂಘ ಸ್ಥಾಪಿಸಿ ತುಳು ಸಾಂಸ್ಕೃತಿಕ ಭವನದ ರೂವಾರಿಯಲ್ಲಿ ಒಬ್ಬರಾದ ಶ್ರೀನಿವಾಸ ಮಂಕುಡೆ ಅವರಿಗೆ ‘ಪೆರ್ಮೆದ ತುಳುವೆ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಮಹಾರಾಷ್ಟ್ರದ ಮೀರಜ್‌ನಲ್ಲಿ ದಿನಾಂಕ 22-01-2024ರಂದು ನಡೆಯಿತು. ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ ಅವರು ಈ ಸಂದರ್ಭದಲ್ಲಿ ಮಾತನಾಡಿ “ಬಹಳ ವರ್ಷಗಳಿಂದ ಹೊರರಾಜ್ಯದಲ್ಲಿ ತುಳು ಭಾಷೆಗಾಗಿ ಶ್ಲಾಘನೀಯ ಕೆಲಸ ಮಾಡಿ, ತುಳುವರ ಅಭಿಮಾನ, ಪ್ರೀತಿಗೆ ಪಾತ್ರರಾದ ಮಂಕುಡೆಯವರಿಗೆ ಈ ಗೌರವ ಸಲ್ಲಲೇಬೇಕಿತ್ತು” ಎಂದರು. ಪ್ರಧಾನ ಕಾರ್ಯದರ್ಶಿ ಮೂಲ್ಕಿ ಕರುಣಾಕರ ಶೆಟ್ಟಿ ಮಾತನಾಡಿ, “ಶ್ರೀನಿವಾಸ ಮಂಕುಡೆ ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಮಹಾರಾಷ್ಟ್ರ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೇಷ್ಠ ಕನ್ನಡಿಗ, ಕರ್ನಾಟಕ ದೇವಾಡಿಗ ಸಂಘದಿಂದ ಸಂಘಟನೆಗೊಬ್ಬ ಸರದಾರ ಹಾಗೂ ಮುಂಬೈ, ಸಂಘಟನೆಯಿಂದ ವರ್ಷದ ವ್ಯಕ್ತಿ ಮತ್ತಿತರ ಗೌರವ ಪ್ರಶಸ್ತಿ ಪಡೆದಿದ್ದಾರೆ” ಎಂದರು. ಸಮ್ಮಾನ ಸ್ವೀಕರಿಸಿದ ಮಂಕುಡೆ ಅವರು “ಪ್ರಾಮಾಣಿಕ ಸೇವೆಯನ್ನು…

Read More