Author: roovari

ತೀರ್ಥಹಳ್ಳಿ: ತೀರ್ಥಹಳ್ಳಿ 10ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ 29-11-2023ರಂದು ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ನಡೆಯಿತು. ಸಮ್ಮೇಳನವನ್ನು ಉದ್ಘಾಟಿಸಿದ ಖ್ಯಾತ ಸಾಹಿತಿ ಹಾಗೂ ಚಿಂತಕ ಡಾ.ರಾಜೇಂದ್ರ ಚೆನ್ನಿ ಮಾತನಾಡಿ “ಕನ್ನಡದ ಕಂಪನ್ನು ಜಗತ್ತಿಗೆ ಸಾರಿದ ಜಗದ ಕವಿ ಕುವೆಂಪು ಇವರು ಸಾಹಿತ್ಯ ಲೋಕಕ್ಕೆ ಆದರ್ಶವಾಗಿದ್ದಾರೆ. ಪ್ರಾದೇಶಿಕ ಸಂಸ್ಕೃತಿ ಅತಿ ಮುಖ್ಯವಾಗಿದೆ. ಅಂತಹ ಸಂಸ್ಕೃತಿಯನ್ನು ಸಾರಿದ್ದು ತೀರ್ಥಹಳ್ಳಿ ಹಾಗೂ ಕುವೆಂಪು ಎನ್ನುವುದನ್ನು ಮರೆಯಬಾರದು. ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಗಳನ್ನು ವಿಶ್ವದಗಲ ಸಾರಿದ್ದು ಕನ್ನಡ ಸಾಹಿತ್ಯ. ಆನೇಕ ಚಳುವಳಿಗಳು ಹುಟ್ಟಿಕೊಂಡದ್ದು ಕನ್ನಡದ ನೆಲದಲ್ಲಿ. ದೇಶಕ್ಕೆ ಹಾಗೂ ಜಗತ್ತಿಗೆ ಆನೇಕ ಮಾದರಿಗಳನ್ನು ನೋಡ ನೀಡಿದ ಕನ್ನಡ ಜಗತ್ತು ವಿಶಿಷ್ಟ ಹಾಗೂ ವಿಭಿನ್ನ. ಸಮಾಜವಾದಿ ಚಿಂತನೆಗಳನ್ನು ಬಿಂಬಿಸಿದ ನೆಲ ಇದಾಗಿದೆ. ಪ್ರಸ್ತುತವಾಗಿ ಕಂಡುಬರುತ್ತಿರುವುದು ಸಾಂಸ್ಕೃತಿಕ ಮರೆವು ಎನ್ನುವ ಬಿಕ್ಕಟ್ಟು ನಮ್ಮನ್ನೆಲ್ಲ ಕಾಡುತ್ತಿದೆ. ಆಧುನಿಕತೆಯ ನೆಪದಲ್ಲಿ ಪರಿಸರವನ್ನು ನಾಶ ಮಾಡಲಾಗುತ್ತಿದೆ. ಅಭಿವೃದ್ಧಿಯ ಶಾಪದಿಂದ ಜೀವ ಸಂಕುಲ ನಾಶದ ಹಂತಕ್ಕೆ ಬರುತ್ತಿದೆ. ನಮ್ಮ ಉಳಿವಿಗೆ ನಾವೇ ಮುಂದಾಗಬೇಕು” ಎಂದರು.…

Read More

ಕೋಟ : ಕೋಟ ವಿವೇಕ ವಿದ್ಯಾಸಂಸ್ಥೆಯ ಅಮೃತಮಹೋತ್ಸವ ಹಾಗೂ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮವು ದಿನಾಂಕ 02-12-2023 ರಿಂದ 04-12-2023ರಂದು ನಡೆಯಿತು. ದಿನಾಂಕ 02-12-2023 ರಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ. ಎಂ. ಮೋಹನ್‌ ಆಳ್ವ ಮಾತನಾಡಿ “ಖಾಸಗಿ ಚಿಂತನೆ ಮೂಲಕ ಶಿಕ್ಷಣ ಅಭಿವೃದ್ಧಿ ಕಾಣಬೇಕು. ಕನ್ನಡ ಮಾಧ್ಯಮದ ಶಿಕ್ಷಣ ಮಟ್ಟ ಕುಸಿತಕ್ಕೆ ಸರಕಾರವೇ ನೇರ ಕಾರಣವಾಗಿದೆ. ಶಿಕ್ಷಣದ ವ್ಯವಸ್ಥೆಯಲ್ಲಿ ಕಾಲಕ್ಕನುಗುಣವಾಗಿ ಬದಲಾವಣೆ ಅಗತ್ಯ.” ಎಂದು ಕೇಳಿದರು. ಈ ಸಂದರ್ಭ ಅಮೃತ ಮಹೋತ್ಸವದ ಸ್ಮರಣ ಸಂಚಿಕೆಯನ್ನು ವಿಶ್ರಾಂತ ಪ್ರೊಫೆಸರ್ ಡಾ. ರಾಧಾಕೃಷ್ಣ ರಾವ್ ಬಿಡುಗಡೆ ಗೊಳಿಸಿದರು. ಮುಂಬಯಿ ಒ.ಎನ್‌.ಜಿ.ಸಿ.ಯ ನಿವೃತ್ತ ಚೀಫ್ ಜನರಲ್ ಮ್ಯಾನೇಜರ್ ಬನ್ನಾಡಿ ನಾರಾಯಣ ಆಚಾರ್ ಅಧ್ಯಕ್ಷತೆ ವಹಿಸಿದ್ದರು. ವಿಶೇಷ ಆಹ್ವಾನಿತರಾಗಿ ಚಿತ್ರ ನಟಿ ವಿನಯ ಪ್ರಸಾದ್ ಭಾಗವಹಿಸಿದರು. ದಿನಾಂಕ 03-12-2023 ರಂದು ಕೋಟ ವಿದ್ಯಾ ಸಂಘ (ರಿ.) ಇದರ ಅಧ್ಯಕ್ಷರಾದ ಸಿ. ಎ. ಆಗಿರುವ ಪಿ ಪ್ರಭಾಕರ ಮಯ್ಯ ಇವರ ಅಧ್ಯಕ್ಷತೆಯೆಲ್ಲಿ ನಡೆದ…

Read More

ಉಪ್ಪಿನಂಗಡಿ : ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಗ್ರಾಮ ಪಂಚಾಯತ್ ಬಜತ್ತೂರು ಇವರ ಸಹಕಾರದೊಂದಿಗೆ ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇವರ ಸಂಯೋಜನೆಯಲ್ಲಿ ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ ರೈ ಅಬುಧಾಬಿಯವರ ಮಹಾಪೋಷಕತ್ವದಲ್ಲಿ ಬಜತ್ತೂರು ಗ್ರಾಮ ಪಂಚಾಯಿತ್ ಸಭಾಭವನದಲ್ಲಿ ಸಾಹಿತ್ಯದ ನಡೆ ಗ್ರಾಮದ ಕಡೆ ಅಭಿಯಾನದಂಗವಾಗಿ ‘ಗ್ರಾಮ ಸಾಹಿತ್ಯ ಸಂಭ್ರಮ’ ಕಾರ್ಯಕ್ರಮ ದಿನಾಂಕ 25-11-2023ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಬಜತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಗಂಗಾಧರ ಗೌಡ ನೆಕ್ಕರಾಜೆ ಮಾತನಾಡಿ “ಕನ್ನಡ ಸಾಹಿತ್ಯವನ್ನು ಓದುವವರ ಸಂಖ್ಯೆ ಕಡಿಮೆಯಾಗುತ್ತಿದ್ದು, ಗ್ರಾಮಗಳಲ್ಲಿ ಮಕ್ಕಳು ಸಾಹಿತ್ಯದ ಊರುಗೋಲುಗಳಾಗಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಈ ಮಧ್ಯೆ ಪೇಟೆ, ಪಟ್ಟಣಗಳಲ್ಲಿ ಕೆಲವರು ಕನ್ನಡ ಹೋರಾಟ ಎಂಬ ದಂಧೆಯನ್ನು ನಡೆಸುತ್ತಿದ್ದು, ಅವರ ವಿರುದ್ಧ ಜಾಗೃತರಾಗಬೇಕಿದೆ. ಗ್ರಾಮಗಳಲ್ಲಿ ಕನ್ನಡ ಸಾಹಿತ್ಯದ ಸಂಭ್ರಮ ನಡೆಸುವ ಮೂಲಕ ಮಕ್ಕಳಲ್ಲಿ ಸಾಹಿತ್ಯದ ಒಲವು-ಅರಿವು ಮೂಡಿಸುವ ಕೆಲಸ ಶ್ಲಾಘನೀಯ. ಇಂದಿನ ಯುವಜನತೆ ಕನ್ನಡ ಸಂಸ್ಕೃತಿ, ಸಾಹಿತ್ಯದತ್ತ ಹೆಚ್ಚಿನ…

Read More

ವಿರಾಜಪೇಟೆ : ಸೈಂಟ್ ಆನ್ಸ್ ಪದವಿ ಪೂರ್ವ ಮತ್ತು ಪದವಿ ಪೂರ್ವ ಕಾಲೇಜು ಕನ್ನಡ ಭಾಷಾ ವಿಭಾಗ ಮತ್ತು ಕನ್ನಡ ವಿದ್ಯಾರ್ಥಿ ಬಳಗದ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸಂಭ್ರಮ 50 ಪ್ರಯುಕ್ತ ಆಯೋಜಿತ ‘ನುಡಿ ನೃತ್ಯ ಸಂಭ್ರಮ-2023’ ಕಾರ್ಯಕ್ರಮ ದಿನಾಂಕ 25-11-2023ರಂದು ಕಾಲೇಜಿನ ಆವರಣದಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಜಿ. ಕಾವೇರಿಯಪ್ಪ ಇವರು ಚಾಲನೆ ನೀಡಿ ಮಾತನಾಡಿ “ಪ್ರಾಚೀನ ಭಾಷೆಯಾಗಿರುವ ಕನ್ನಡವನ್ನು ಹಲವಾರು ಸಾಹಿತಿಗಳು, ಸಂತರು ಬೆಳೆಸಿದ್ದಾರೆ. ಧೀಮಂತ ಭಾಷೆಯಾಗಿರುವ ಕನ್ನಡವನ್ನು ಉಳಿಸಿ ಬೆಳೆಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಸ್ವಾಭಿಮಾನ ಮತ್ತು ಅಭಿಮಾನದಿಂದ ಬೆಳೆಸುವಂತಾಗಬೇಕು. ಆದರೆ, ಇಂದು ನಾವು ಪರಭಾಷೆಯ ವ್ಯಾಮೋಹವನ್ನು ಬೆಳೆಸಿಕೊಂಡು ತಾಯಿನೆಲದ ಭಾಷೆಯನ್ನು ಮರೆಯಲಾರಂಭಿಸಿದ್ದೇವೆ. ಕನ್ನಡ ನುಡಿ, ನೆಲ, ಜಲವನ್ನು ಎಂದಿಗೂ ಮರೆಯದೆ ಸ್ವಾಭಿಮಾನ, ಅಭಿಮಾನದಿಂದ ಕನ್ನಡವನ್ನು ಬೆಳೆಸಿ ಉಳಿಸಬೇಕು” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಎಂ.ಬಿ. ಕಾವೇರಿಯಪ್ಪ ಮತ್ತು…

Read More

ನಾಪೋಕ್ಲು : ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬಲಮುರಿಯ ನೆಬ್ಬೂರು ಗೌಡ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಕಟ್ರತನ ಮೊಟ್ಟೆಕೊಡಿ ಬಾಣೆಯಲ್ಲಿ ‘ಜಾನಪದ ಸಿರಿ’ ಕಾರ್ಯಕ್ರಮವು ದಿನಾಂಕ 28-11-2023ರಂದು ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಇವರ ಅಧ್ಯಕ್ಷತೆಯಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಈ ಕಾರ್ಯಕ್ರಮವನ್ನು ನೆಬ್ಬೂರು ಗೌಡ ಸಂಘದ ಅಧ್ಯಕ್ಷರಾದ ಕಟ್ರತನ ಬಿ. ಲೋಕನಾಥ ಅವರು ಪರೆಗೆ ಭತ್ತ ತುಂಬಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ವಕೀಲರಾದ ಕೊಟ್ಟಕೇರಿಯನ ಶ್ರೀ ಡಿ. ದಯಾನಂದ ಅವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ “ನೆಬ್ಬೂರು ಗೌಡ ಸಂಘ ನಾಲ್ಕು ತಲೆಮಾರಿನಿಂದ ನಡೆದುಕೊಂಡು ಬಂದಿದ್ದು, ಕೇವಲ ಮೂರು ಕುಟುಂಬಗಳು ಮಾತ್ರ ಸೇರಿ ಕಟ್ಟಿದ ಸಂಘವಾಗಿದೆ. ಯಾವುದೇ ಕಟ್ಟಡವಿಲ್ಲ ಕಚೇರಿ ಇಲ್ಲದೆ ವರ್ಷಕ್ಕೊಮ್ಮೆ ಗ್ರಾಮೀಣ ಕ್ರೀಡಾಕೂಟ ನಡೆಸಿಕೊಂಡು ಹಬ್ಬ ಹರಿದಿನಗಳನ್ನು ಒಂದಾಗಿ ಸೇರಿ ಆಚರಿಸಿಕೊಂಡು ಬರುತ್ತಿದ್ದೇವೆ, ಹಾಗೆಯೇ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸವನ್ನು ಮಾಡುತ್ತಾ…

Read More

ಮಂಗಳೂರು : ಪುರಭವನದ ಮಿನಿ ಹಾಲಿನಲ್ಲಿ ದಿನಾಂಕ 03-12-2023ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ 16ನೇ ಮಹಾಸಭೆ ನಡೆಯಿತು. ಚುನಾವಣಾ ಅಧಿಕಾರಿಯಾದ ಅಡ್ವಕೇಟ್ ಸತೀಶ್ ಭಟ್ ಅವರು “ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಒಂದು ಸಕ್ರಿಯ ನಡೆಯ ಸಂಘಟನೆ” ಎಂದು ಅಭಿಪ್ರಾಯ ಪಟ್ಟರು. ವರ್ಷದಲ್ಲಿ ಅನೇಕ ಉಪಯುಕ್ತ ಕಾರ್ಯಕ್ರಮಗಳನ್ನು ಸಂಘಟಿಸುತ್ತ ಕಲಾವಿದರ ಕಷ್ಟಗಳಿಗೆ ಸ್ಪಂದಿಸುವ ಈ ಸಂಸ್ಥೆಯ ತ್ಯಾಗ ಪೂರ್ಣ ಮತ್ತು ಪಾರದರ್ಶಕ ಕೆಲಸವನ್ನು ಅವರು ಶ್ಲಾಘಿಸಿದರು. 2023-24ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಒಕ್ಕೂಟದ ಅಧ್ಯಕ್ಷ ಮೋಹನ್ ಪ್ರಸಾದ್ ನಂತೂರು ಅಧ್ಯಕ್ಷತೆ ವಹಿಸಿದ್ದರು. ಗೌರವ ಸಲಹೆಗಾರ ತೋನ್ಸೆ ಪುಷ್ಕಳಕುಮಾರ್ ಪ್ರಸ್ತಾವಿಸಿ ಸ್ವಾಗತಿಸಿದರು. ಕಾರ್ಯದರ್ಶಿ ದೀಪಕ್ ರಾಜ್ ಉಳ್ಳಾಲ್ ವರದಿ ವಾಚಿಸಿದರು. ನಿಕಟ ಪೂರ್ವ ಅಧ್ಯಕ್ಷ ರಮೇಶ್ ಸಾಲ್ಯಾನ್ ಲೆಕ್ಕಪತ್ರ ಮಂಡಿಸಿದರು. ವೇದಿಕೆಯಲ್ಲಿ ಒಕ್ಕೂಟದ ಮಾಜಿ ಅಧ್ಯಕ್ಷರುಗಳಾದ ಮುರಳಿಧರ ಕಾಮತ್, ಜಗದೀಶ್ ಶೆಟ್ಟಿ, ರವೀಂದ್ರ…

Read More

ಸುಳ್ಯ : ಐವರ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತೆಂಕುತಿಟ್ಟು ಯಕ್ಷಗಾನ ನಾಟ್ಯ ತರಬೇತಿ ಶಿಬಿರವು ದಿನಾಂಕ 26-11-2023ರಂದು ಉದ್ಘಾಟನೆಗೊಂಡಿತು. ಬಾಳಿಲ ವಿದ್ಯಾಬೋಧಿನಿ ಪ್ರೌಢ ಶಾಲೆಯ ಸಂಸ್ಕೃತ ಅಧ್ಯಾಪಕರಾದ ಶ್ರೀ ವೆಂಕಟೇಶ್ ಕುಮಾರ್ ಇವರು ತರಬೇತಿ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಎಸ್.ಡಿ.ಎಂ.ಸಿ. ಅಧ್ಯಕ್ಷರು ಹಾಗೂ ಯಕ್ಷಗಾನ ಸಮಿತಿ ಅಧ್ಯಕ್ಷರಾದ ಶ್ರೀ ನವೀನ್ ಕುಮಾರ್ ಅರಳಿಕಟ್ಟೆ, ಎಣ್ಮೂರು ಸರಕಾರಿ ಪ್ರೌಢ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕರಾದ ಶ್ರೀ ಲಿಂಗಪ್ಪ ಬೆಳ್ಳಾರೆ, ಯಕ್ಷಗಾನ ಗುರುಗಳಾದ ಶ್ರೀ ಬಾಲಕೃಷ್ಣ ನಾಯ‌ರ್ ನೀರಬಿದಿರೆ, ಪೋಷಕರ ಸಮಿತಿಯ ನಾಗಪ್ಪ ಗೌಡ ಪಾಲೆಪ್ಪಾಡಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ರಾಜೇಶ್ವರಿ ದೊಡ್ದತೋಟ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಪ್ರಾರ್ಥನೆಯನ್ನು ಸಾನ್ವಿ, ನಿಶಾ, ಅಕ್ಷತಾ ನೆರವೇರಿಸಿದರು. ಉಪಾಧ್ಯಕ್ಷರಾದ ರಾಜೀವಿ ಉದ್ದಂಪಾಡಿ ಸ್ವಾಗತಿಸಿ, ಶ್ರೀಮತಿ ಅಮಿತ ಲಾವಂತಡ್ಕ ಕಾರ್ಯಕ್ರತು ನಿರೂಪಿಸಿದರು. ಅತಿಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಶ್ರೀಮತಿ ರಾಜೇಶ್ವರಿ ವಂದಿಸಿದರು.

Read More

ಕಾಸರಗೋಡು : ಕಾಸರಗೋಡು ಸಾಂಸ್ಕೃತಿಕ -ಸಾಹಿತ್ಯಕ ಸಂಸ್ಥೆ ರಂಗ ಚಿನ್ನಾರಿ ಮತ್ತು ಅದರ ಸಹ ಘಟಕಗಳಾದ ನಾರಿ ಚಿನ್ನಾರಿ, ಸ್ವರ ಚಿನ್ನಾರಿ ಜೊತೆಗೆ ಕಾಸರಗೋಡಿನ ಕನ್ನಡ ಪರ ಸಂಘಟನೆಗಳ ಸಹಯೋಗದೊಂದಿಗೆ ಆಯೋಜಿಸಿದ 2021ನೇ ಸಾಲಿನ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಅತ್ಯುತ್ತಮ ವಿಮರ್ಶಕ ಪ್ರಶಸ್ತಿಗೆ ಭಾಜನರಾದ ಸುಬ್ರಹ್ಮಣ್ಯ ನಾರಾಯಣ ಬಾಡೂರು (ಬಾನಾಸು) ಅವರಿಗೆ ಹುಟ್ಟೂರ ಗೌರವ ಪ್ರಶಸ್ತಿ ಕಾರ್ಯಕ್ರಮವು ದಿನಾಂಕ 01-12-2023 ರಂದು ಕಾಸರಗೋಡಿನ ಪದ್ಮಗಿರಿ ಕಲಾ ಕುಟೀರದಲ್ಲಿ ನಡೆಯಿತು. ಹುಟ್ಟೂರ ಗೌರವ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಎಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರು ಮಾತನಾಡಿ “ಕಾಸರಗೋಡಿನ ಕನ್ನಡ ಪರ ಸಂಘಟನೆಗಳು ಕೈ ಜೋಡಿಸಿದರೆ ಕಾಸರಗೋಡಿನ ಕನ್ನಡಿಗರ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಬಹುದು. ಸುಬ್ರಹ್ಮಣ್ಯ ಬಾಡೂರು ಅವರ ರಾಷ್ಟ್ರ ಮಟ್ಟದ ಸಾಧನೆ ಕಾಸರಗೋಡಿನ ಕನ್ನಡಿಗರಿಗೆಲ್ಲ ಕೀರ್ತಿ ತಂದಿದೆ.” ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಖ್ಯಾತ ಚಲನಚಿತ್ರ ಹಾಗೂ ರಂಗಭೂಮಿ ನಟಿಯಾದ ಶಾಸಕಿ ಉಮಾಶ್ರೀ…

Read More

ಮಣಿಪಾಲ : ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ದಿನಾಂಕ 26-11-2023 ಮತ್ತು 27-11-2023ರಂದು 76ನೇ ವಾರ್ಷಿಕ ಭಜನ ಏಕಾಹ ನಡೆಯಿತು. ಮಹಾರಾಷ್ಟ್ರ ಸಿಂಧುದುರ್ಗಾ ಕುಡಾಳ್‌ನ ಶ್ರೀ ಜಗನ್ನಾಥ ಮ್ಯೂಸಿಕ್ ಸ್ಕೂಲ್ ಪಕ್ವಾಜ್ ಅಲಂಕಾರ್ ಮಹೇಶ್ ವಿಟ್ಠಲ್ ಸಾವಂತ್ ಅವರ ನೇತೃತ್ವದ ನೂರು ಮಂದಿ ಕಲಾವಿದರ ತಂಡದಿಂದ ವಿಶೇಷ ಆಕರ್ಷಣೆಯಾಗಿ ಪಕ್ಷಾಜ್-ತಬಲಾ-ಡೋಲಕ್ ಜುಗಲ್‌ ಬಂದಿ ಮತ್ತು ಶತ ಮೃದಂಗ ವಾದನ ‘ಭಜನ ರಂಗ್’ ಕಾರ್ಯಕ್ರಮವನ್ನು ಶ್ರೀ ಪೂರ್ಣಾನಂದ ಸ್ಮೃತಿ ಮಂಟಪದಲ್ಲಿ ಹಿರಿಯರಾದ ಎಸ್.ಕೆ. ಸಾಮಂತ್ ಉದ್ಘಾಟಿಸಿ ಶುಭ ಹಾರೈಸಿದರು. ಆಕಾಶವಾಣಿ ಆಲ್ ಇಂಡಿಯಾ ರೇಡಿಯೋ ಕಲಾವಿದರು, ಪಕ್ವಾಜ್ ವಿಶಾರದರು, ಡೋಲಕ್ ಕಲಾವಿದರು, ತಬಲಾ ವಿಶಾರದರು ಸೇರಿದಂತೆ ವೋಕಲ್, ಹಾರ್ಮೋನಿಯಂ ವಾದಕರನ್ನು ಹೊಂದಿದ ಕಲಾ ತಂಡವು ಚಿಕ್ಕ ವಯಸ್ಸಿನಿಂದ ಹಿಡಿದು ಹಿರಿಯರನ್ನು ಒಳಗೊಂಡಿದೆ. 75 ಮಂದಿ ಪಕ್ವಾಜ್ ಕಲಾವಿದರು, ನಾಲ್ವರು ತಬಲಾ ವಾದಕರು, ಇಬ್ಬರು ಡೋಲಕ್ ವಾದಕರು ಹಾಗೂ ಉಳಿದಂತೆ ಇತರೆ ಪಕ್ಕವಾದ್ಯಗಳೊಂದಿಗೆ ಗಾನ ಸಂಗೀತ ವಿಶಾರದರನ್ನು ಸೇರಿದ ನೂರು ಮಂದಿಯ ತಂಡದಿಂದ ಭಜನ…

Read More

ಸುರತ್ಕಲ್ : “ರಂಗಚಾವಡಿ” ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್‌ ಫೇರ್‌ ಅಸೋಸಿಯೇಶನ್ ಸುರತ್ಕಲ್ ಸಹಯೋಗದೊಂದಿಗೆ ರಂಗಚಾವಡಿ ವರ್ಷದ ಹಬ್ಬ ಹಾಗೂ ರಂಗಚಾವಡಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ದಿನಾಂಕ 03-12-2023 ರಂದು ಸುರತ್ಕಲ್ಲಿನ  ಬಂಟರ ಭವನದಲ್ಲಿ ಜರುಗಿತು. ಖ್ಯಾತ ರಂಗಕರ್ಮಿ, ನಾಟಕ ರಚನೆಕಾರ-ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ದಂಪತಿಯನ್ನು ವೇದಿಕೆಯಲ್ಲಿ ಅತಿಥಿಗಳು ಸನ್ಮಾನಿಸಿ ಗೌರವಿಸಿದರು. ವಿಜಯ ಕುಮಾರ್ ಕೊಡಿಯಾಲ್ ಬೈಲ್ ಅವರಿಗೆ ‘ರಂಗಚಾವಡಿ-2023’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಉದ್ಘಾಟನೆ ನೆರವೇರಿಸಿ ಮಾತಾಡಿದ ಹೇರಂಬ ಇಂಡಸ್ಟ್ರೀಸ್ ಮುಂಬೈ ಇದರ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ ಅವರು, “ರಂಗಚಾವಡಿ ಸಂಘಟನೆ ಹಿರಿಯ ಕಲಾವಿದರನ್ನು ಗುರುತಿಸಿ ಸನ್ಮಾನಿಸುವುದು ಶ್ಲಾಘನೀಯ ವಿಚಾರ. ಇಂದು ಸನ್ಮಾನಿಸಲ್ಪಟ್ಟಿರುವ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರ ಸಾಧನೆ ಹಾಗೂ ಮಹಾ ವ್ಯಕ್ತಿತ್ವ ಮೆಚ್ಚುವಂತದ್ದು. ರಂಗಚಾವಡಿ ಮಂಗಳೂರು ಸಂಸ್ಥೆ ಬಹಳಷ್ಟು ಒಳ್ಳೆಯ ಕೆಲಸ ಮಾಡುತ್ತಿದೆ. ಅತ್ಯಂತ ಯೋಗ್ಯ ವ್ಯಕ್ತಿಯನ್ನು ಸನ್ಮಾನಿಸಿರುವುದು ಖುಷಿ ತಂದಿದೆ. ದೇವರು ಕೊಡಿಯಾಲ್ ಬೈಲ್…

Read More