Author: roovari

ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇವರ ವತಿಯಿಂದ ನಡೆಯುವ ‘ತಿಂಗಳ ನಾಟಕ ಸಂಭ್ರಮ’ದ ಪ್ರಯುಕ್ತ ನಾಟಕ ಪ್ರದರ್ಶನವನ್ನು ದಿನಾಂಕ 19 ಜುಲೈ 2025ರಂದು ಸಂಜೆ 6-30 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮದ ಸಮುಚ್ಚಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಸಿರಿಗೆರೆಯ ತರಳಬಾಳು ಕಲಾ ಸಂಘದ ಕಲಾವಿದರು ಅಭಿನಯಿಸುವ ಬೋಳುವಾರು ಮಹಮದ್ ಕುಂಞ ಇವರ ಕೃತಿಯಾಧಾರಿತ ನಾಟಕ ‘ಸ್ವಾತಂತ್ರ್ಯದ ಓಟ’ ಪ್ರದರ್ಶನಗೊಳ್ಳಲಿದೆ. ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ. ಚಿಕ್ಕಣ್ಣ ಇವರು ತಿಂಗಳ ಅತಿಥಿಯಾಗಿ ಭಾಗವಹಿಸಲಿದ್ದು, ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಕೆ.ವಿ. ನಾಗರಾಜಮೂರ್ತಿ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

Read More

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಪ್ರತಿಭಾ ದಿನಾಚರಣೆ “ವಿವೇಕ ನಾವಿನ್ಯ -2025” ಕಾರ್ಯಕ್ರಮವು ದಿನಾಂಕ 16 ಜುಲೈ 2025ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ತುಳು ಚಿತ್ರರಂಗದ ಖ್ಯಾತ ಕಲಾವಿದರಾದ ಭೋಜರಾಜ್ ವಾಮಂಜೂರು ಮಾತನಾಡಿ “ವಿದ್ಯಾರ್ಥಿಗಳು ಕಲೆ, ಸಾಹಿತ್ಯ, ವಿಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅಪಾರ ಆಸಕ್ತಿ ಹೊಂದಿರುತ್ತಾರೆ. ಇಂತಹ ಅಭಿರುಚಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮೊದಲಿಗೆ ಮನೆಯಿಂದ ಆಗಬೇಕು. ಯಾವಾಗ ತಂದೆ-ತಾಯಿ ತಮ್ಮ ಮಕ್ಕಳ ಆಸಕ್ತಿಗಳನ್ನು ಗುರುತಿಸಿ ಬೆಳೆಸುತ್ತಾರೋ, ಅಂತಹ ಮಗು ಯಶಸ್ಸನ್ನು ಕಾಣಲು ಸಾಧ್ಯವಾಗುತ್ತದೆ. ವಿವೇಕಾನಂದ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರತಿಭೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಸಮಾನ ಅವಕಾಶಗಳನ್ನು ನೀಡಿ, ವಿದ್ಯಾರ್ಜನೆಯ ಜೊತೆಗೆ ಪ್ರತಿಯೊಬ್ಬ ವಿದ್ಯಾರ್ಥಿಯು ಅಳವಡಿಸಿಕೊಳ್ಳಲೇಬೇಕಾದ ಸಂಸ್ಕಾರಗಳನ್ನು ಒಳಗೊಂಡ ಶಿಕ್ಷಣ ನೀಡುವಲ್ಲಿ ಸಫಲವಾಗಿದೆ. ತುಳುನಾಡಿನ ಸಂಸ್ಕಾರ, ಸಂಸ್ಕೃತಿ ಉಳಿಸುವಲ್ಲಿ ಶಿಸ್ತು ಬಹಳ ಪ್ರಾಮುಖ್ಯತೆ ವಹಿಸುತ್ತದೆ” ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ…

Read More

ಪುತ್ತೂರು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ 30ನೇ ವರ್ಷದ ಸಂಭ್ರಮದ ಪ್ರಯುಕ್ತ ‘ಮೂಕಾಂಬಿಕಾ ಮೂವತ್ತರ ಮಾರ್ದನಿ’ ಶೀರ್ಷಿಕೆಯಲ್ಲಿ ಅನೇಕ ಯೋಜನೆಯಿದ್ದು, ಅದರ ಒಂದು ಪ್ರಯೋಗವಾಗಿ ‘ತ್ರಿಶಕ್ತಿ’ ಎಂಬ ಸಂಶೋಧನಾತ್ಮಕ ಪ್ರಸ್ತುತಿ ದಿನಾಂಕ 05 ಜುಲೈ 2025ರಂದು ಶಶಿಶಂಕರ ಸಭಾಂಗಣದಲ್ಲಿ ನಡೆಯಿತು. ಚೆನ್ನೈನ ರೆನಾಲ್ಟ್ ನಿಸಾನ್ ತಂತ್ರಜ್ಞಾನ ಕೇಂದ್ರದ ಪ್ರಬಂಧಕರೂ, ವಿದ್ವಾನ್ ದೀಪಕ್ ಕುಮಾರ್ ಇವರ ಹಿರಿಯ ಭರತನಾಟ್ಯ ಶಿಷ್ಯರೂ ಆದ ಶ್ರೀ ಗುರುಪ್ರಸಾದ್ ಐ.ಆರ್. ಇವರು ನೃತ್ಯಕಲೆಯ ಮಹತ್ವವನ್ನು ಹೇಳಿದರು. ಸಂಸ್ಥೆಯ ಹಿರಿಯ ಕಲಾವಿದರಾದ ಗಿರೀಶ್ ಕುಮಾರ್, ಸೌಜನ್ಯ ಪಡ್ವೆಟ್ನಾಯ, ಅಕ್ಷತಾ ಕೆ., ವಸುಧಾ ಜಿ.ಎನ್., ಅಪೂರ್ವ ಗೌರಿ ದೇವಸ್ಯ, ಶಮಾ ಚಂದುಕೂಡ್ಲು, ಪ್ರಣಮ್ಯ ಪಾಲೆಚ್ಚಾರು ಮತ್ತು ವಿಭಾಶ್ರೀ ವಿ. ಗೌಡ ಇವರು ‘ತ್ರಿಶಕ್ತಿ’ ಎಂಬ ವಿಷಯಾಧಾರಿತ ನೃತ್ಯ ಪ್ರಸ್ತುತಿಗೈದರು. ಹಿಮ್ಮೇಳದಲ್ಲಿ ನಟುವಾಂಗದಲ್ಲಿ ವಿದ್ವಾನ್ ದೀಪಕ್ ಕುಮಾರ್, ಹಾಡುಗಾರಿಕೆಯಲ್ಲಿ ವಿದುಷಿ ಪ್ರೀತಿಕಲಾ, ಮೃದಂಗದಲ್ಲಿ ವಿದ್ವಾನ್ ಶ್ಯಾಮ್ ಭಟ್ ಸುಳ್ಯ ಮತ್ತು ಕೊಳಲಿನಲ್ಲಿ ವಿದ್ವಾನ್ ಕೃಷ್ಣಗೋಪಾಲ್ ಪುಂಜಾಲಕಟ್ಟೆ ಸಹಕರಿಸಿದ್ದರು. ಕಾರ್ಯಕ್ರಮದ ನಿರೂಪಣೆ…

Read More

ಬೆಳಗಾವಿ : ಕನ್ನಡ ಮಾತು ಸಂಸ್ಕೃತಿ ಇಲಾಖೆ, ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಮತ್ತು ಕನ್ನಡ ಭವನ ಬೆಳಗಾವಿ ಇವರ ವತಿಯಿಂದ ‘ಯುವ ಕವಿಗೋಷ್ಠಿ’ಯನ್ನು ದಿನಾಂಕ 21 ಜುಲೈ 2025 ರಂದು ಬೆಳಗ್ಗೆ 10-30 ಗಂಟೆಗೆ ಬೆಳಗಾವಿಯ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್.ಎನ್. ಮುಕುಂದರಾಜ್ ಇವರು ನೆರವೇರಿಸಲಿದ್ದು, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಗಾವಿ ಕನ್ನಡ ಭವನದ ನಿರ್ದೇಶಕರಾದ ಡಾ. ಬಸವರಾಜ ಜಗಜಂಪಿ ಇವರು ವಹಿಸಲಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯ ಸಂಚಾಲಕರಾದ ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಇವರು ಆಶಯ ನುಡಿಗಳನ್ನಾಡುವರು. ಯುವ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಯುವಕವಿ ದೇವರಾಜ ಹುಣಸಿಕಟ್ಟಿ ಇವರು ವಹಿಸಲಿದ್ದು, ಒಟ್ಟು 23 ಯುವಕವಿಗಳು ಆಯ್ಕೆಯಾಗಿರುತ್ತಾರೆ. ಯುವ ಕವಿಗೋಷ್ಠಿಯ ನಿರ್ವಹಣೆಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಶ್ರೀ ಮಹಾದೇವ ಬಸರಕೋಡ ಇವರು ಮಾಡಲಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಮಧ್ಯಾಹ್ನ 2-00 ಗಂಟೆಗೆ ಡಾ. ಹೇಮಾ ಪಟ್ಟಣಶೆಟ್ಟಿ ಇವರು “ಕಾವ್ಯ – ಅನುಸಂಧಾನ” ಎನ್ನುವ…

Read More

ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಹಾಗೂ ಸರಕಾರಿ ಹಿರಿಯ ಪ್ರೌಢ ಶಾಲೆ ಅತ್ತಾವರ ಮಂಗಳೂರು ಆಯೋಜಿಸುವ 109ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ 18 ಜುಲೈ 2025ರಂದು ಅತ್ತಾವರ ಶಾಲೆ ಸಭಾಂಗಣದಲ್ಲಿ ಮಧ್ಯಾಹ್ನ ಘಂಟೆ 2:00 ರಿಂದ 3:00ರ ವರೆಗೆ ನಡೆಯಲಿದೆ. ಅತ್ತಾವರ ಸರಕಾರಿ ಹಿರಿಯ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಬಿ. ರಾಘವೇಂದ್ರ ರಾವ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಹಿರಿಯ ಬರಹಗಾರರಾದ ಎನ್ ಸುಬ್ರಾಯ ಭಟ್, ಶಿಕ್ಷಕಿ ಹಾಗೂ ಕವಯತ್ರಿಯಾದ ಶ್ರೀಮತಿ ನಿರ್ಮಲ ಉದಯಕುಮಾರ್ ಇವರು ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಹಾಗೂ ರೋಟರಿ ಕ್ಲಬ್ ಮಂಗಳೂರು ಇದರ ಅಧ್ಯಕ್ಷರಾದ ಭಾಸ್ಕರ್ ರೈ ಕಟ್ಟ ಹಾಗೂ ಹಿರಿಯ ಯೋಗ ಶಿಕ್ಷಕಿಯಾದ ದೇವಿಕಾ ಪುರುಷೋತ್ತಮ ಇವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕರಾದ ಡಾ. ಮಾಲತಿ ಶೆಟ್ಟಿ ಮಾಣೂರು ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದ್ದಾರೆ.

Read More

ಮಂಗಳೂರು : ಕುಳಾಯಿ ಹೊಸಬೆಟ್ಟು ಇಲ್ಲಿರುವ ಶ್ರೀ ಶಾರದಾ ನಾಟ್ಯಾಲಯದ ವತಿಯಿಂದ ‘ತ್ರಿದಶ ನಾಟ್ಯ ಕಲೋತ್ಸವ’ ಕಾರ್ಯಕ್ರಮವನ್ನು ದಿನಾಂಕ 19 ಜುಲೈ 2025ರಂದು ಸಂಜೆ 5-00 ಗಂಟೆಗೆ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ರಂಗ ಸಂಗೀತ, ಜಾನಪದ ಗೀತೆ ಗಾಯನ ಹಾಗೂ ನೃತ್ಯ ವೈವಿಧ್ಯ ಕಾರ್ಯಕ್ರಮಗಳು ನಡೆಯಲಿದೆ. ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಆಡಳಿತಾತ್ಮಕ ನಿರ್ದೇಶಕರಾದ ಪ್ರೊ. ರಮೇಶ್ ಭಟ್ ಎಸ್.ಜಿ. ಇವರು ಅಧ್ಯಕ್ಷತೆ ವಹಿಸಲಿದ್ದು, ಸನಾತನ ನಾಟ್ಯಾಲಯದ ಕರ್ಣಾಟಕ ಕಲಾಶ್ರೀ ವಿದುಷಿ ಶಾರದಾಮಣಿ ಶೇಖರ್ ಇವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಲಿದ್ದಾರೆ. ನೃತ್ಯ ನಿರ್ದೇಶಕಿ ವಿದುಷಿ ವಿನಯ ರಾವ್ ಇವರನ್ನು ಸನ್ಮಾನಿಸಲಿದ್ದು, ಮಂಗಳೂರಿನ ಜರ್ನಿ ಥೇಟರ್ ಗ್ರೂಪ್ ಪ್ರಸ್ತುತ ಪಡಿಸುವ ರಂಗ ಸಂಗೀತ ಮತ್ತು ಜಾನಪದ ಗೀತೆ ಗಾಯನ ಹಾಗೂ ಸಂಸ್ಥೆಯ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ ಕಾರ್ಯಕ್ರಮಗಳು ನಡೆಯಲಿವೆ.

Read More

ಸಾಗರ : ಸಾಕೇತ ಕಲಾವಿದರು (ರಿ), ಕೆಳಮನೆ ಹೆಗ್ಗೋಡು ಪ್ರಾಂತ್ಯ ಇವರು ಎಚ್. ಎಮ್. ಶಿವಾನಂದ ಹಂಸಗಾರು ಇವರ ನೆನಪಿನಲ್ಲಿ ಅರ್ಪಿಸುವ ‘ಗದಾಯುದ್ಧ’ ಯಕ್ಷಗಾನ ಪ್ರದರ್ಶನವು ದಿನಾಂಕ 19 ಜುಲೈ 2025ರ ಶನಿವಾರದಂದು ಸಾಗರದ ಕುಡುಪಲಿ ಸದಾನಂದ ಸ್ವರಾಲಯದಲ್ಲಿ ಸಂಜೆ ಘಂಟೆ 6.00ರಿಂದ ನಡೆಯಲಿದೆ.

Read More

ಬಂಟ್ವಾಳ : ತುಳು ರಂಗಭೂಮಿಯ ಹವ್ಯಾಸಿ ಕಲಾವಿದ, ಮಾಣಿ ಸಮೀಪದ ಕಾಪಿಕಾಡು ನಿವಾಸಿ ಮೌನೇಶ ಆಚಾರ್ಯ ಮಾಣಿ ಇವರು ಹೃದಯಾಘಾತಕ್ಕೊಳಗಾಗಿ ದಿನಾಂಕ 15 ಜುಲೈ 2025ರಂದು ನಿಧನರಾದರು, ಅವರಿಗೆ 44ವರ್ಷ ವಯಸ್ಸಾಗಿತ್ತು. ಹಾಸ್ಯಪ್ರಜ್ಞೆಯ ಇವರು ಜಯಂ ಕಲಾನಿಕೇತನ ಮಾಣಿ ನೃತ್ಯತಂಡದಲ್ಲಿ ಕಲಾವಿದರಾಗಿ ಗುರುತಿಸಿದ್ದರು. ಕಲಾಮಾತೆ ನಾಗನವಳಚ್ಚಿಲ್‌ ತಂಡದಲ್ಲೂ ಕಲಾಸೇವೆ ಮಾಡುತ್ತಿದ್ದ ಅವರು ಹಿರಿಯ ಕಲಾವಿದ ದಿವಂಗತ ಶಾಂತರಾಮ್ ಕಲ್ಲಡ್ಕ ಅವರ ಕಲಾ ಬಳಗದ ನಾಟಕಗಳಲ್ಲಿಯೂ ಅಭಿನಯಿಸಿದ್ದರು. ಪ್ರಸ್ತುತ ನಮ್ಮ ಕಲಾವಿದರು ನೆಲ್ಯಾಡಿ ತುಳುನಾಟಕ ತಂಡದಲ್ಲಿ ಕಲಾಸೆವೆಗೈಯುತ್ತಿದ್ದ ಇವರು ಹಲವು ಹಾಸ್ಯ ವೀಡಿಯೋಗಳಲ್ಲಿ ಅಭಿನಯಿಸಿದ್ದಾರೆ. ಮೃತರು ತಾಯಿ, ಸಹೋದರ, ಪತ್ನಿ, ಪುತ್ರಿ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.

Read More

ಬೆಂಗಳೂರು : ಜನ ಸಾಮಾನ್ಯರಲ್ಲಿ ಅದರಲ್ಲಿಯೂ ವಿಶೇಷವಾಗಿ ಕನ್ನಡ ಯುವಜನತೆಯಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯದ ಕುರಿತು ಆಸಕ್ತಿ ಮೂಡಿಸಲು ಆಗ ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾಗಿದ್ದ ಬಿ.ಎಂ.ಶ್ರೀಯವರು ರೂಪಿಸಿದ ಮುಖ್ಯ ಯೋಜನೆ ಕನ್ನಡ ಸಾಹಿತ್ಯ ಪರೀಕ್ಷೆಗಳು. 1940ರ ಜೂನ್ ತಿಂಗಳಿನಿಂದ ‘ಕನ್ನಡ ಅಣುಗ’ ‘ಕನ್ನಡ ಕಾವ’ ‘ಕನ್ನಡ ಜಾಣ’ ಪರೀಕ್ಷೆಗಳು ಆರಂಭವಾದವು. 1948ರಲ್ಲಿ ‘ಅಣುಗ’ವನ್ನು ಕೈ ಬಿಡಲಾಯಿತು. 1966ರಲ್ಲಿ ‘ಕನ್ನಡ ರತ್ನ’ ಪರೀಕ್ಷೆ ಆರಂಭವಾಗಿದ್ದು, 1992ರಲ್ಲಿ ‘ಕನ್ನಡ ಪ್ರವೇಶ’ ಆರಂಭವಾಯಿತು. ಈ ಎಲ್ಲಾ ಪರೀಕ್ಷೆಗಳು ಲಕ್ಷಾಂತರ ಕನ್ನಡಿಗರಲ್ಲಿ ಭಾಷೆ ಮತ್ತು ಸಾಹಿತ್ಯದ ಕುರಿತು ಅರಿವು ಮೂಡಿಸುವಲ್ಲಿ ಯಶಸ್ವಿಯಾಗಿದ್ದು ನಿರಂತರವಾಗಿ ನಡೆದುಕೊಂಡು ಬರುತ್ತಿದೆ. ಕನ್ನಡ ಸಾಹಿತ್ಯ ಪರಿಷತ್ತು 2025-26ನೆಯ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 2025ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಮೇಲ್ಕಂಡ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಲು 2025ರ ಸೆಪ್ಟೆಂಬರ್ 15 ಕೊನೆಯ ದಿನಾಂಕವಾಗಿದ್ದು, 2025ರ ಸೆಪ್ಟೆಂಬರ್ 30ರವರೆಗೆ ದಂಡ ಶುಲ್ಕ ರೂ.50-00…

Read More

ಮಂಗಳೂರು : ನಮ್ಮ ಕುಡ್ಲ ತುಳು ಚಾನೆಲ್ ಇದರ ಬೆಳ್ಳಿ ಹಬ್ಬದ ಪ್ರಯುಕ್ತ ‘ಕವಿಗಳು ಕಂಡ ನಮ್ಮ ಕುಡ್ಲ’ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ‘ನಮ್ಮ ಕುಡ್ಲ’ ವಿಷಯದ ಬಗ್ಗೆ ಕವನ, ಕವಿತೆ ಮತ್ತು ಚುಟುಕು ಬರಹಗಳನ್ನು ತುಳು ಮತ್ತು ಕನ್ನಡದಲ್ಲಿ ವಾಚಿಸಲು ಆಹ್ವಾನಿಸಲಾಗಿದೆ. 25 ಕವಿಗಳಿಗೆ ನಮ್ಮ ಕುಡ್ಲ ನೇರಪ್ರಸಾರದಲ್ಲಿ ಪಾಲ್ಗೊಳ್ಳಲು ಅವಕಾಶವಿದ್ದು, ದಿನಾಂಕ 20 ಜುಲೈ 2025ರ ಮುಂಚಿತವಾಗಿ 9741776139 ಸಂಖ್ಯೆಗೆ ಕವನ, ಕವಿತೆ ಮತ್ತು ಚುಟುಕು ಬರಹಗಳನ್ನು ವಾಟ್ಸ್ ಹ್ಯಾಪ್ ಮಾಡಿ ಜೊತೆಗೆ ತಮ್ಮ ವಿಳಾಸ, ಮೊಬೈಲ್ ನಂಬ್ರ ಮತ್ತು ಫೋಟೋ ಕಳುಹಿಸಿರಿ. ಆಯ್ಕೆಯಾದ ಕವಿತೆಗಳನ್ನು ಕೃತಿ ರೂಪದಲ್ಲಿ ಪ್ರಕಟಿಸಲಾಗುವುದು ಹಾಗೂ ಅತ್ಯುತ್ತಮ ಮೂರು ಕವಿತೆಗಳಿಗೆ ಆಕರ್ಷಕ ಬಹುಮಾನವಿದೆ.

Read More