Author: roovari

ಉಡುಪಿ : ರಂಗಭೂಮಿ ಉಡುಪಿ ಆಶ್ರಯದಲ್ಲಿ ಕಿನ್ನರ ಮೇಳ ತುಮರಿ ಪ್ರಸ್ತುತಿಯಲ್ಲಿ ರಥಬೀದಿಯ ಪೇಜಾವರ ಮಠದ ಮುಂಭಾಗದಲ್ಲಿ ದಿನಾಂಕ 14 ಡಿಸೆಂಬರ್ 2025ರಂದು ಡಾ. ಚಂದ್ರಶೇಖರ ಕಂಬಾರರು ರಚಿಸಿದ ಮೂರು ಕಥೆಗಳನ್ನು ಆಧಾರಿಸಿದ ‘ಮರವೇ ಮರ್ಮರವೇ!’ ಬೀದಿ ನಾಟಕದ ಪ್ರಥಮ ಪ್ರದರ್ಶನ ಹಾಗೂ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಂಗಭೂಮಿ ಉಡುಪಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿಯವರು ಮಾತನಾಡಿ “ನಮ್ಮ ಸಮಾಜ, ಜನ ಸಾಮಾನ್ಯರು ಬದುಕಿನಲ್ಲಿ ಎದುರಿಸುತ್ತಿರುವ ಬವಣೆಗಳು, ಸಾಮಾಜಿಕ ಸಂಘರ್ಷಗಳ ಬಗ್ಗೆ ಬೀದಿ ನಾಟಕಗಳು ಬೆಳಕು ಚೆಲ್ಲಿ ಜಾಗೃತಿಯನ್ನುಂಟು ಮಾಡುವ ಕಾರ್ಯ ಮಾಡುತ್ತಿವೆ. 60 ಸಂವತ್ಸರಗಳನ್ನು ಕಂಡಿರುವ ರಂಗಭೂಮಿ ಉಡುಪಿ ವತಿಯಿಂದ ಸಾಮಾಜಿಕ ಜಾಗೃತಿ, ಸಂದೇಶವನ್ನು ಸಾರುವ ಬೀದಿ ನಾಟಕಗಳನ್ನು ಮಾಡಿಸಿಕೊಂಡು ಬರುತ್ತಿದ್ದು, ಇತ್ತೀಚಿಗೆ ಕೋವಿಡ್ ಕಾಲದಲ್ಲಿ ನಡೆದಿರಲಿಲ್ಲ. ಇದೀಗ ಮತ್ತೆ ಈ ಅಭಿಯಾನವನ್ನು ಪ್ರಾರಂಭಿಸಲಾಗಿದ್ದು, ಇದರಲ್ಲಿ ಡಾ. ಚಂದ್ರಶೇಖರ ಕಂಬಾರರು ರಚಿಸಿದ ಮೂರು ಕಥೆಗಳನ್ನು ಆಧಾರಿಸಿದ ‘ಮರವೇ ಮರ್ಮವರವೇ !’ ನಾಟಕವನ್ನು ತುಮರಿಯ…

Read More

ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಶ್ರೀ ರಾಮಾಶ್ರಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಕೊಂಚಾಡಿ ಇವರ ಜಂಟಿ ಆಶ್ರಯದಲ್ಲಿ 115ನೇಯ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’ವು ದಿನಾಂಕ 17 ಡಿಸೆಂಬರ್ 2025ರಂದು ಶಾಲೆಯ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕರಾದ ಬಾಲಚಂದ್ರ ಕೆ. ವಹಿಸಿದ್ದರು. ಮುಖ್ಯ ಸಂಪನ್ಮೂಲ ಅತಿಥಿಯಾಗಿ ನಿವೃತ್ತ ಶಿಕ್ಷಕಿ ಶ್ರೀಮತಿ ನಳಿನಾಕ್ಷಿ ಉದಯರಾಜ್ ಮಾತನಾಡುತ್ತಾ “ಮಕ್ಕಳು ದಿನನಿತ್ಯ ದಿನಚರಿ ಡೈರಿ ಬರೆಯುವ ಹವ್ಯಾಸವನ್ನು ಹೊಂದಿರಬೇಕು. ಮೊದಲು ತಮ್ಮನ್ನು ತಾನು ಪ್ರೀತಿಸಬೇಕು. ಮುಂದೆ ಉತ್ತಮ ಪ್ರಜೆಯಾಗಿ ಬಾಳಬೇಕು. ತಮ್ಮ ಹೆತ್ತವರು ಹಾಗೂ ಗುರುಗಳಿಗೆ ಕೃತಜ್ಞತೆಗಳನ್ನು ನಿತ್ಯವೂ ಸಲ್ಲಿಸಬೇಕು. ಪ್ರತಿನಿತ್ಯ ಪತ್ರಿಕೆಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು” ಎಂದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ಬೆನೆಟ್ ಜೆ. ಅಮ್ಮನ್ನ ಹಾಗೂ ತುಳು ಪರಿಷತ್ ಮಂಗಳೂರು ಅಧ್ಯಕ್ಷರಾದ ಶುಭೋದಯ ಆಳ್ವ, ಸಂಸ್ಥೆಯ ಆಡಳಿತ ಅಧಿಕಾರಿ ಡಾ. ರಾಜೇಶ್ ಕದ್ರಿ, ಅಮೃತ ಪ್ರಕಾಶ…

Read More

ಕನ್ನಡ ಸಾಹಿತ್ಯವು ನವ್ಯೋತ್ತರಕ್ಕೆ ಹೊರಳಿದ ಸಂದರ್ಭದಲ್ಲಿ ಪ್ರಕಟವಾದ ‘ತಂದೆ ಬದುಕು ಗುಲಾಬಿ’ (1988)ಯು ಕಾವ್ಯದ ಸೂಕ್ಷ್ಮತೆಗಳನ್ನು ಮೈಗೂಡಿಸಿಕೊಂಡು ಮೈವಡೆದಿದ್ದು, ಆತ್ಮಶೋಧನೆಯೆಡೆಗೆ ಗಮನವನ್ನು ಹರಿಸಿವೆ. ದಲಿತ ಬಂಡಾಯ ಪಂಥದ ಕೃತಿಗಳಲ್ಲಿ ಕಾಣಿಸುವ ಸಿಟ್ಟು ಅಬ್ಬರಗಳ ಬದಲಾಗಿ ಮಾರ್ದವತೆಯು ಆವರಿಸಿಕೊಂಡಿದೆ. ಸಂಕಲನದ ಶೀರ್ಷಿಕೆಯು ಎದುರಾದ ಅಡ್ಡಿ ಆತಂಕ ಮತ್ತು ತಲ್ಲಣಗಳಿಗೆದುರಾಗಿ ಬದುಕಿಗೆ ಪ್ರೀತಿ ಮತ್ತು ಮೃದುತ್ವವನ್ನು ತಂದು ಕೊಟ್ಟ ಘಟಕಗಳ ಬಗ್ಗೆ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತದೆ. ಮಾನವೀಯ ಸಂಬಂಧಗಳು ಶಿಥಿಲವೂ ಅಪರಿಚಿತವೂ ಆಗುತ್ತಿರುವ ಈ ಹೊತ್ತಿನಲ್ಲಿ ಪ್ರೀತಿಯ ದನಿಗಳು ಅನಿವಾರ್ಯವೂ ಅಪೇಕ್ಷಣೀಯವೂ ಆಗಿವೆ. ಸರಕು ಸಂಸ್ಕೃತಿಯ ಭೌತಿಕ ಸಂಪನ್ನತೆ, ಬೌದ್ಧಿಕ ಹೆಚ್ಚುಗಾರಿಕೆ, ಶುಷ್ಕ ತತ್ವೋಪದೇಶಗಳು ಬದುಕನ್ನು ಆರ್ದಗೊಳಿಸಲಾರವು. ಪ್ರೀತಿ ಎಂಬ ಎರಡಕ್ಷರಗಳೇ ಬದುಕಿನ ತಾರಕ ಮಂತ್ರ ಎನಿಸಬಲ್ಲವು. ಪ್ರೀತಿಯ ತುಡಿತವನ್ನು ಹೊಂದಿದ ಸಾಹಿತ್ಯ ಸದಾ ಜೀವಂತವಾಗಿರುತ್ತದೆ ಎಂಬುದಕ್ಕೆ ಈ ಸಂಕಲನವು ಸಾಕ್ಷಿಯಾಗಿದೆ. ಉಪದೇಶ, ಭಾಷಣ, ಘೋಷಣೆಗಳಿಂದ ಕೂಡಿದ ರಚನೆಗಳು ಇಲ್ಲಿದ್ದರೂ ಅವುಗಳಿಂದ ಹೊರತಾದ ಅಪ್ಪಟ ಕವಿತೆಗಳು ನಳನಳಿಸುತ್ತವೆ. ಈ ಸಂಕಲನಕ್ಕೆ ಮುನ್ನುಡಿಯನ್ನು ಬರೆದ ಪು.ತಿ. ನರಸಿಂಹಾಚಾರ್…

Read More

ಹುಬ್ಬಳ್ಳಿ : ಮಂಗಳೂರಿನ ಕಿಶೋರ್ ಡಿ. ಶೆಟ್ಟಿ ನೇತೃತ್ವದ ಶ್ರೀ ಲಲಿತೆ ತಂಡದವರು ಹುಬ್ಬಳ್ಳಿಯ ಸಾವಾಯಿ ಗಂಧರ್ವ ಸಭಾ ಭವನದಲ್ಲಿ ದಿನಾಂಕ 13 ಡಿಸೆಂಬರ್ 2025ರಂದು ಪ್ರದರ್ಶಿಸಿದ ‘ಶನಿ ಮಹಾತ್ಮೆ’ ಕನ್ನಡ ಪೌರಾಣಿಕ ನಾಟಕವು ಪ್ರೇಕ್ಷಕರನ್ನು ಬೆರಗುಗೊಳಿಸಿತು. ಹುಬ್ಬಳ್ಳಿಯ ಶನಿ ಪೂಜಾ ಸೇವಾ ಸಮಿತಿಯವರು ಸಾಮೂಹಿಕ ಶನಿ ಪೂಜೆ ನಡೆಸಿ ಶನಿ ದೇವರ ಕಥೆಯನ್ನು ನಾಟಕದ ಮೂಲಕ ಪ್ರಸ್ತುತಿ ಗೈದರು. ಶನಿ ಜನ್ಮ, ಶನಿ ಪ್ರಭಾವವನ್ನು ಬೇರೆ ಬೇರೆ ಯುಗಗಳಲ್ಲಿ ತೋರುವ ನವ ರಸ ಭರಿತ ಕಥಾ ವಸ್ತುವನ್ನು ಹೊಂದಿದ ಕದ್ರಿ ನವನೀತ ಶೆಟ್ಟಿ ಇವರು ರಚಿಸಿದ ಈ ನಾಟಕದ 48ನೇ ಪ್ರದರ್ಶನ ಇದಾಗಿದೆ. ಅದ್ದೂರಿ ಸಂಪ್ರದಾಯಿಕ ರಂಗ ವಿನ್ಯಾಸ, ಆಧುನಿಕ ಬೆಳಕಿನ ವಿನ್ಯಾಸ, ಪೂರ್ವ ಮುದ್ರಿತ ಧ್ವನಿ, ಸೊಗಸಾದ ವೇಷ ಭೂಷಣ, ಹಿತ ಮಿತ ಸಂಗೀತ, ಪ್ರಬುದ್ಧ ಕಲಾವಿದರ ಭಾವ ಪೂರ್ಣ ಅಭಿನಯಗಳೊಂದಿಗೆ ಅಚ್ಚುಕಟ್ಟಾಗಿ ಪ್ರದರ್ಶನಗೊಂಡ ನಾಟಕವನ್ನು ಪ್ರೇಕ್ಷಕರು ಭಕ್ತಿ ಭಾವದಿಂದ ಆಸ್ವಾದಿಸಿದರು. ಇದೇ ಸಂದರ್ಭದಲ್ಲಿ ನಾಟಕ ರಚನೆ ಮಾಡಿದ…

Read More

ಬೆಂಗಳೂರು : ಕರ್ನಾಟಕ ಯಕ್ಷಗಾನ ಅಕಾಡೆಮಿಯ 2025ನೇ ಸಾಲಿನ ವಾರ್ಷಿಕ ‘ಗೌರವ ಪ್ರಶಸ್ತಿ’, ‘ಯಕ್ಷಸಿರಿ’ ಪ್ರಶಸ್ತಿ’, ‘ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಪ್ರಶಸ್ತಿ’ ಮತ್ತು ‘ಪುಸ್ತಕ ಬಹುಮಾನ ಪ್ರಶಸ್ತಿ’ಯನ್ನು ಪ್ರಕಟ ಮಾಡಲಾಗಿದ್ದು, ಎಲ್ಲಾ ಪ್ರಶಸ್ತಿಗಳನ್ನು ದಿನಾಂಕ 21 ಡಿಸೆಂಬರ್ 2025ರಂದು ಉಡುಪಿ ಜಿಲ್ಲೆ ಅಂಬಲಪಾಡಿಯ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಆವರಣದಲ್ಲಿ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದ್ದಾರೆ. ಯಕ್ಷಗಾನ ಕಲಾವಿದರಾದ ಬೆಳ್ತಂಗಡಿಯ ರೆಂಜಾಳ ರಾಮಕೃಷ್ಣ ರಾವ್ (ತೆಂಕುತಿಟ್ಟು), ಉತ್ತರ ಕನ್ನಡ ಜಿಲ್ಲೆಯ ವಿಷ್ಣು ಆಚಾರಿ ಬಳಕೂರು (ಬಡಾಬಡಗು), ಬಂಟ್ವಾಳದ ಡಿ. ಮನೋಹರ್ ಕುಮಾರ್ (ತೆಂಕುತಿಟ್ಟು), ಉಡುಪಿಯ ಮುರಲಿ ಕಡೆಕಾರ್ (ಬಡಗುತಿಟ್ಟು), ರಾಮನಗರದ ರಮೇಶ್ (ಮುಖವೀಣೆ, ಮೂಡಲಪಾಯ) ಇವರನ್ನು 2025ನೇ ಸಾಲಿನ ಅಕಾಡೆಮಿಯ ‘ಗೌರವ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ. ಈ ಪುರಸ್ಕಾರವು ರೂ.50 ಸಾವಿರ ನಗದು ಮತ್ತು ಫಲಕ ಒಳಗೊಂಡಿದೆ. ‘ಯಕ್ಷಸಿರಿ ವಾರ್ಷಿಕ ಪ್ರಶಸ್ತಿ’ಗೆ ಕಾಸರಗೋಡು ದಾಸನಡ್ಕ ರಾಮ ಕುಲಾಲ್…

Read More

ಸುರತ್ಕಲ್ : ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಇದರ ಸಹಭಾಗಿತ್ವದಲ್ಲಿ ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿ (ರಿ.) ಇದರ ‘ನಲ್ವತ್ತರ ನಲಿವು -29’ನೇ ಸರಣಿ ಕಾರ್ಯಕ್ರಮವನ್ನು ದಿನಾಂಕ 20 ಡಿಸೆಂಬರ್ 2025ರಂದು ಸಂಜೆ ಗಂಟೆ 5-30ಕ್ಕೆ ನಾಟ್ಯಾಂಜಲಿ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಇವರು ಉದ್ಘಾಟನೆ ಮಾಡಲಿದ್ದಾರೆ. ಮೂಡುಬಿದಿರೆಯ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ರಂಗಮಾಂತ್ರಿಕ ಡಾ. ಜೀವನ್ ರಾಂ ಸುಳ್ಯ ಇವರ ಸಂಯೋಜನೆಯಲ್ಲಿ ‘ಕನ್ನಡ ಗಾನ ಗುಚ್ಛ’ ಪ್ರಸ್ತುತಗೊಳ್ಳಲಿದೆ. ಡಾ. ಜೀವನ್ ರಾಂ ಸುಳ್ಯ, ವಿದ್ವಾನ್ ಚಿನ್ಮಯ್ ಕೆ. ಭಟ್, ಮಮತಾ ಕಲ್ಮಕಾ, ವಿದ್ವಾನ್ ವಿನೋದ್ ಕೆ.ಪಿ., ಮನುಜ ನೇಹಿಗ ಸುಳ್ಯ, ಸಮನ್ವಿತ್ ಬೆಳ್ತಂಗಡಿ, ಸಮನ್ವಿತ ಹುಬ್ಬಳ್ಳಿ, ನಿಶ್ಮಿತಾ ಬೆಂಗಳೂರು, ಕೃಪಾ ನಾಯಕ್ ತುಮಕೂರು ಮುಂತಾದ ಕಲಾವಿದರು ಭಾಗವಹಿಸಲಿದ್ದಾರೆ.

Read More

ಮಂಗಳೂರು : ಕಾರ್ಕಳದ ಕ್ರಿಯೇಟಿವ್ ಪುಸ್ತಕ ಮನೆ ಮತ್ತು ಕನ್ನಡ ವಿಭಾಗ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ ಮಂಗಳೂರು ಇದರ ಸಹಯೋಗದಲ್ಲಿ ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದ ವಿಶೇಷ ಪ್ರಕಟಣೆ ‘ಭೂತಾರಾಧನೆ’ ಮಾಯದ ನಡೆ ಜೋಗದ ನುಡಿ ಡಾ. ಕೆ. ಚಿನ್ನಪ್ಪ ಗೌಡರ ಸಂಶೋಧನಾ ಕೃತಿ ಬಿಡುಗಡೆ ಸಮಾರಂಭವನ್ನು ದಿನಾಂಕ 20 ಡಿಸೆಂಬರ್ 2025ರಂದು ಅಪರಾಹ್ನ 3-00 ಗಂಟೆಗೆ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಎಲ್.ಸಿ.ಆರ್.ಐ. ಬ್ಲಾಕ್ ಎಲ್.ಎಫ್. ರಸ್ಕಿನ್ಹ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಸಂಸ್ಥಾಪಕರಾದ ಅಶ್ವತ್ ಎಸ್.ಎಲ್. ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಸಾಹಿತಿ ಮತ್ತು ಜಾನಪದ ವಿದ್ವಾಂಸರಾದ ಡಾ. ಬಿ.ಎ. ವಿವೇಕ ರೈ ಇವರು ಕೃತಿ ಅನಾವರಣಗೊಳಿಸಲಿದ್ದಾರೆ. ಸಾಹಿತಿ ಮತ್ತು ವಿಮರ್ಶಕರಾದ ಡಾ. ರಾಜಶೇಖರ್ ಹಳೆಮನೆ ಇವರು ಕೃತಿ ಅವಲೋಕನ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ದೈವ ನರ್ತಕ ಶೇಖರ ಪರವ ಇವರನ್ನು ಸನ್ಮಾನಿಸಲಾಗುವುದು.

Read More

ಪುತ್ತೂರು : ಬೆಂಗಳೂರಿನ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ಸಹಯೋಗ ಮತ್ತು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಕಾರದಲ್ಲಿ ದಿನಾಂಕ 20 ಡಿಸೆಂಬರ್ 2025ರಂದು ಸಂಜೆ 4-30 ಗಂಟೆಗೆ ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುವ ಗಡಿ-ಸಂಸ್ಕೃತಿ ಉತ್ಸವದ ಅಂಗವಾಗಿ ಏರ್ಪಡಿಸುವ ‘ಕಲಾರ್ಣವ-2025’ ಭಾವ ರಾಗ ತಾಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಂಜೆ 4-30 ಗಂಟೆಗೆ ವಿವಿಧ ತಂಡಗಳಿಂದ ‘ಜಾನಪದ ನೃತ್ಯ’ಗಳ ಪ್ರದರ್ಶನ, ಗಂಟೆ 6-15ಕ್ಕೆ ಡಾನ್ಸ್ ಫೆಡರೇಶನ್ ಆಫ್ ಇಂಡಿಯಾದ ಯುವ ಕಲಾ ಪ್ರಶಸ್ತಿ ಪುರಸ್ಕೃತ ಭರತನಾಟ್ಯ ಬಾಲ ಕಲಾವಿದ ಮಾಸ್ಟರ್ ಶಮಂತಕ ಇವರಿಂದ ‘ಭರತನಾಟ್ಯ’ ಮತ್ತು 7-00 ಗಂಟೆಗೆ ಅಂತಾರಾಷ್ಟ್ರೀಯ ಖ್ಯಾತಿಯ ವಯೋಲಿನ್ ಬಾಲ ಕಲಾವಿದೆ ಕುಮಾರಿ ಗಂಗಾ ಶಶಿಧರನ್ ಇವರಿಂದ ‘ವಯೋಲಿನ್ ವೈಭವ’ ಹಾಗೂ ನಡೆಯಲಿದೆ.

Read More

ಮಂಗಳೂರು : ಶ್ರೀ ಅಯ್ಯಪ್ಪ ಮಂದಿರ (ರಿ.) ಕಾಪಿಗುಡ್ಡ ಆಕಾಶಭವನ ಕಾವೂರು ಮಂಗಳೂರು ಇದರ 28ನೇ ವಾರ್ಷಿಕೋತ್ಸವದ ಪ್ರಯುಕ್ತ ಚಿತ್ರಕಲಾ ಸ್ಪರ್ಧೆಯನ್ನು ದಿನಾಂಕ 21 ಡಿಸೆಂಬರ್ 2025ರಂದು ಸಂಜೆ 3-00 ಗಂಟೆಗೆ ಅಯ್ಯಪ್ಪ ಮಂದಿರದಲ್ಲಿ ಆಯೋಜಿಸಲಾಗಿದೆ. ಮೂರು ವಿಭಾಗಗಳಲ್ಲಿ ಈ ಸ್ಪರ್ಧೆಯು ನಡೆಯಲಿದ್ದು, ತರಗತಿ 1ರಿಂದ 3 – ಐಚ್ಚಿಕ, ತರಗತಿ 4ರಿಂದ 7 ‘ನಮ್ಮ ಹಬ್ಬಗಳು’ ಮತ್ತು ತರಗತಿ 8ರಿಂದ 10 ‘ತುಳುನಾಡ ಸಂಸ್ಕೃತಿ’ ಎಂಬ ವಿಷಯಗಳಲ್ಲಿ ಚಿತ್ರ ರಚನೆ ಮಾಡಬಹುದು. ಹೆಚ್ಚಿನ ಮಾಹಿತಿ ಹಾಗೂ ನೋಂದಾವಣೆಗೆ ಲೋಹಿತ್ – 98444663861, ಹರೀಶ್ – 9964143032 ಮತ್ತು ವಿಶ್ವನಾಥ್ – 9980311029 ಸಂಖ್ಯೆಗಳನ್ನು ಸಂಪರ್ಕಿಸಿರಿ.

Read More

ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇವರಿಂದ ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಮಾಸಿಕ ತಾಳಮದ್ದಲೆ ಪಾರ್ತಿಸುಬ್ಬ ವಿರಚಿತ ‘ವಾಲಿಮೋಕ್ಷ’ ಪ್ರಸಂಗದೊಂದಿಗೆ ದಿನಾಂಕ 16 ಡಿಸೆಂಬರ್ 2025ರ ಮಂಗಳವಾರ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಬಟ್ಯಮೂಲೆ ಲಕ್ಷ್ಮೀನಾರಾಯಣ ಭಟ್, ನಿತೀಶ ಕುಮಾರ್ ಎಂಕಣ್ಣಮೂಲೆ ಹಾಗೂ ಚೆಂಡೆ ಮದ್ದಲೆಗಳಲ್ಲಿ ಪಿ.ಟಿ. ಜಯರಾಮ ಭಟ್, ಶ್ರೀಪತಿ ಭಟ್ ಉಪ್ಪಿನಂಗಡಿ, ಅಚ್ಯುತ ಪಾಂಗಣ್ಣಾಯ ಕೋಡಿಬೖಲು, ಅನೀಶ್ ಕೃಷ್ಣ ಪುಣಚ ಭಾಗವಹಿಸಿದರು. ಶ್ರೀರಾಮನಾಗಿ ಭಾಸ್ಕರ ಶೆಟ್ಟಿ ಸಾಲ್ಮರ ಮತ್ತು ಭಾಸ್ಕರ ಬಾರ್ಯ, ವಾಲಿಯಾಗಿ ಗುಡ್ಡಪ್ಪ ಬಲ್ಯ, ಸುಗ್ರೀವನಾಗಿ ಮಾಂಬಾಡಿ ವೇಣುಗೋಪಾಲ ಭಟ್ ಮತ್ತು ತಾರೆಯ ಪಾತ್ರದಲ್ಲಿ ಲಕ್ಷ್ಮೀ ಕಾಂತ ಹೆಗ್ಡೆ ಪಾತ್ರಪೋಷಣೆ ಮಾಡಿದರು. ಭಾಸ್ಕರ ಬಾರ್ಯರ ಸಂಯೋಜನೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಬಡೆಕ್ಕಿಲ ಚಂದ್ರಶೇಖರ ಭಟ್ ಪ್ರಾಯೋಜಿಸಿದರು. ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು.

Read More