Subscribe to Updates
Get the latest creative news from FooBar about art, design and business.
Author: roovari
ಪಯ್ಯನೂರು : ತುರೀಯಮ್ ಮ್ಯೂಜಿಕ್ ಫೆಸ್ಟಿವಲ್ ಕಾರ್ಯಕ್ರಮವನ್ನು ದಿನಾಂಕ 19 ಜೂನ್ 2025ರಂದು ಸಂಜೆ 6-00 ಗಂಟೆಗೆ ಕೇರಳದ ಪಯ್ಯನೂರಿನ ಶ್ರೀ ಪ್ರಭಾ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದೆ. ಹಿಂದೂಸ್ತಾನಿ ಸಂಗೀತ ಕಛೇರಿಯಲ್ಲಿ ದುರ್ಗಾ ಶರ್ಮ ಇವರ ವಯೋಲಿನ್ ವಾದನಕ್ಕೆ ಪಂಡಿತ್ ರಾಜೇಂದ್ರ ನಾಕೋಡ್ ತಬಲಾ ಸಾಥ್ ನೀಡಲಿದ್ದಾರೆ.
ಬೆಳ್ತಂಗಡಿ : ಕರ್ನಾಟಕ ಗಮಕಕಲಾ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ಆಶ್ರಯದಲ್ಲಿ ಆಯೋಜಿಸಿದ ‘ಮನೆಮನೆ ಗಮಕ’ ಸರಣಿ ಕಾರ್ಯಕ್ರಮದ 20ನೇ ಕಾರ್ಯಕ್ರಮ ದಿನಾಂಕ 14 ಜೂನ್ 2025ರಂದು ಜಿಲ್ಲಾಧ್ಯಕ್ಷರಾದ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯರ ಬೆಳ್ತಂಗಡಿ ಗೇರು ಕಟ್ಟೆಯ ಮಧೂರು ಮನೆಯಲ್ಲಿ ನಡೆಯಿತು. ಸಂಗೀತ ವಿದ್ವಾನ್ ಶ್ರೀ ಎ. ಡಿ. ಸುರೇಶ್ ಇವರು ಕೌಶಿಕ ರಾಮಾಯಣದ ಸೀತಾ ಕಲ್ಯಾಣ ಭಾಗವನ್ನು ವಾಚನ ಮಾಡಿದರೆ, ಡಾಕ್ಟರ್ ಶ್ರೀಧರ ಭಟ್ ವ್ಯಾಖ್ಯಾನ ಮಾಡಿದರು. ಶ್ರೀ ಭುಜಬಲಿ ಧರ್ಮಸ್ಥಳ, ಡಾಕ್ಟರ್ ದಿವಾ ಕೊಕ್ಕಡ, ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ದಿವಾಕರ್ ಆಚಾರ್ಯ ಗೇರುಕಟ್ಟೆ, ಕುಂಟಿನಿ ರಾಘವೇಂದ್ರ ಭಾಂಗಿನ್ನಾಯ, ನಾರಾವಿ ಜಯರಾಮ್ ಭಟ್, ತಾಲೂಕು ಅಧ್ಯಕ್ಷರಾದ ಶ್ರೀ ರಾಮಕೃಷ್ಣ ಭಟ್ ಬಳಂಜ , ಉಪನ್ಯಾಸಕಿ ಶ್ರೀಮತಿ ಭಾರತಿ ಮತ್ತು ಹಲವು ಗಮಕದ ವಿದ್ಯಾರ್ಥಿಗಳು, ಆಸಕ್ತರು ಹಾಜರಿದ್ದರು. ಶ್ರೀಮತಿ ಕೆ. ಆರ್. ಸುವರ್ಣ ಕುಮಾರಿ ಕಲಾವಿದರನ್ನು ಗೌರವಿಸಿದರು.
The eminent Kannada writer N. Mogasale’s much acclaimed novel ‘Dharma Yuddha’ has been translated into English by the well-known translator Dr. N.T. Bhat, and it has been published by Subbu Prakashana of Hubli with the very same original title. The title reminds us of the Dharma Yuddha of the Mahabharata. There, though it was decided that the battle will be taught abiding by righteousness, all kinds of tricks were played by both the parties. In Mogasale’s novel also righteousness seems to have gone to the dogs. Hence the title carries irony. The novel records the societal transformation in a coastal…
ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಮತ್ತು ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ (ರಿ.) ಸವದತ್ತಿ ಇವುಗಳ ಜಂಟಿ ಆಶ್ರಯದಲ್ಲಿ ‘ತಿಂಗಳ ನಾಟಕ ಸಂಭ್ರಮ’ದ ಪ್ರಯುಕ್ತ ನಾಟಕ ಪ್ರದರ್ಶನವನ್ನು ದಿನಾಂಕ 21 ಜೂನ್ 2025ರಂದು ಸಂಜೆ 6-30 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮದ ಸಮುಚ್ಚಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಝಕೀರ ನದಾಫ ಇವರ ರಚನೆ, ನಿರ್ದೇಶನ ಮತ್ತು ಸಂಗೀತ ಸಂಯೋಜನೆಯಲ್ಲಿ ‘ನೆಲ ಮುಗಿಲು’ ನಾಟಕ ಪ್ರದರ್ಶನಗೊಳ್ಳಲಿದೆ.
ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ತಿಂಗಳ ಸರಣಿ ಕಾರ್ಯಕ್ರಮದ ಅಂಗವಾಗಿ ಬಲಮುರಿ ಶ್ರೀ ವಿದ್ಯಾ ಗಣಪತಿ ದೇವಸ್ಥಾನ ಭಾರತಿ ನಗರ ಬನ್ನೂರು ಇದರ ಆಶ್ರಯದಲ್ಲಿ ತಾಳಮದ್ದಳೆ ‘ಅತಿಕಾಯ ಮೋಕ್ಷ’ ಎಂಬ ಆಖ್ಯಾನದೊಂದಿಗೆ ಜರಗಿತು. ಹಿಮ್ಮೇಳದಲ್ಲಿ ಭಾಗವತರಾಗಿ ಎಲ್.ಎನ್. ಭಟ್ ಬಟ್ಯಮೂಲೆ, ಆನಂದ ಸವಣೂರು ಹಾಗೂ ಚೆಂಡೆ, ಮದ್ದಲೆಗಳಲ್ಲಿ ಪದ್ಯಾಣ ಶಂಕರನಾರಾಯಣ ಭಟ್, ಮುರಳೀಧರ ಕಲ್ಲೂರಾಯ, ಅಚ್ಯುತ ಪಾಂಗಣ್ಣಾಯ, ಮಾಸ್ಟರ್ ಪರೀಕ್ಷಿತ್, ಕುಮಾರಿ ಶರಣ್ಯ ನೆತ್ತರಕೆರೆ, ಮಾಸ್ಟರ್ ಅನೀಶ್ ಕೃಷ್ಣ ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ ಬಾರ್ಯ ಮತ್ತು ದುಗ್ಗಪ್ಪ ನಡುಗಲ್ಲು (ಶ್ರೀರಾಮ), ಗುಂಡ್ಯಡ್ಕ ಈಶ್ವರ ಭಟ್ ಹಾಗೂ ಶುಭಾ ಅಡಿಗ (ಅತಿಕಾಯ), ಮಾಂಬಾಡಿ ವೇಣುಗೋಪಾಲ ಭಟ್ (ರಾವಣ), ಪ್ರೇಮಲತಾ ರಾವ್ (ವಿಭೀಷಣ), ಕಿಶೋರಿ ದುಗ್ಗಪ್ಪ ನಡುಗಲ್ಲು (ಲಕ್ಷ್ಮಣ) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು. ಶಿವಶಂಕರ ಭಟ್ ಬೋನಂತಾಯ ಪ್ರಾಯೋಜಿಸಿದ ಈ ಕಾರ್ಯಕ್ರಮಕ್ಕೆ ವ್ಯವಸ್ಥಾಪಕ ಸುಬ್ರಹ್ಮಣ್ಯ ಭಟ್ ಸಹಕರಿಸಿದರು.
ಬೆಂಗಳೂರು : ಚೌಕಿ ಮನೆ ಟ್ರಸ್ಟ್ ಪ್ರಸ್ತುತ ಪಡಿಸುವ ‘ನಿಮ್ಮೊಳಗಿನ ಜಗತ್ತು’ ಕಲ್ಪನೆಯ ಕುರಿತು ನಟನಾ ಕಾರ್ಯಾಗಾರವನ್ನು ದಿನಾಂಕ 29 ಜೂನ್ 2025ರಿಂದ 05 ಜುಲೈ 2025ರವೆರೆಗೆ ಬೆಂಗಳೂರಿನ ಜೆ.ಪಿ. ನಗರದಲ್ಲಿರುವ ಅನ್ ಟೈಟಲ್ ಆರ್ಟ್ಸ್ ಫೌಂಡೇಷನ್ ಇಲ್ಲಿ ಹಮ್ಮಿಕೊಳ್ಳಲಾಗಿದೆ. ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆ ಮತ್ತು ಹೆಗ್ಗೋಡು ನೀನಾಸಂ ಇದರ ಹಳೆಯ ವಿದ್ಯಾರ್ಥಿ ಮಂಜು ಕಾಸರಗೋಡು ಇವರು ಈ ಕಾರ್ಯಾಗಾರವನ್ನು ನಡೆಸಿಕೊಡಲಿದ್ದು, ಹೆಚ್ಚಿನ ಮಾಹಿತಿಗಾಗಿ ಹಾಗೂ ನೋಂದಾವಣೆಗೆ 9900864577 ಸಂಖ್ಯೆಯನ್ನು ಸಂಪರ್ಕಿಸಿರಿ.
ಉಡುಪಿ : ಉಡುಪಿಯ ಯಕ್ಷಗಾನ ಕಲಾರಂಗ, ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ನೆನಪಿನಲ್ಲಿ ವಿದ್ವಾಂಸರಿಗೆ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ನಾಡಿನ ಹಿರಿಯ ಬಹುಶ್ರುತ ವಿದ್ವಾಂಸ, ಬಹುಭಾಷಾ ವಿಶಾರದ, ಏಕವ್ಯಕ್ತಿ ಯಕ್ಷಗಾನದ ಹರಿಕಾರ, ಹಲವು ಶ್ರೇಷ್ಠ ಗ್ರಂಥಗಳನ್ನು ಸಾರಸ್ವತ ಲೋಕಕ್ಕೆ ನೀಡಿ ವಿದ್ವಜ್ಜನ ಗೌರವಕ್ಕೆ ಭಾಜನರಾದ ಶತಾವಧಾನಿ ಡಾ. ಆರ್. ಗಣೇಶ್ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭ 04 ಜುಲೈ 2025ರ ಶುಕ್ರವಾರ ಸಂಜೆ ಘಂಟೆ 4.00ಕ್ಕೆ ಸಂಸ್ಥೆಯ ಐ. ವೈ. ಸಿ. ಸಭಾಂಗಣದಲ್ಲಿ ನಡೆಯಲಿದೆ. ಎಂದು ಸಂಸ್ಥೆಯ ಅಧ್ಯಕ್ಷರಾದ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿರುತ್ತಾರೆ. ತಲ್ಲೂರು ಫ್ಯಾಮಿಲಿ ಟ್ರಸ್ಟ್ ಪ್ರಾಯೋಜಿತ ಈ ಪ್ರಶಸ್ತಿಯು ರೂ.60,000 ನಗದು ಪುರಸ್ಕಾರ ಒಳಗೊಂಡಿದೆ.
ಉಪ್ಪಿನಕುದ್ರು : “ಪ್ರತಿಭೆ ನಿಮ್ಮದು ವೇದಿಕೆ ನಮ್ಮದು” 2025ರ ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸತತ 108ನೇ ತಿಂಗಳ ಕಾರ್ಯಕ್ರಮ ದಿನಾಂಕ 15 ಜೂನ್ 2025ರಂದು ವಿಷ್ಣು ಸಹಸ್ರನಾಮದೊಂದಿಗೆ ಆರಂಭವಾಯಿತು. ಅಧ್ಯಕ್ಷತೆಯನ್ನು ನಿವೃತ್ತ ಶಿಕ್ಷಕ ಸದಾಶಿವ ಐತಾಳ್, ಉಪ್ಪಿನಕುದ್ರು ವಹಿಸಿದ್ದರು. ವೇದಿಕೆಯಲ್ಲಿ ನಿವೃತ್ತ ಪ್ರಾಂಶುಪಾಲ ಎಮ್. ರತ್ನಾಕರ ಪೈ, ಉಪನ್ಯಾಸಕಿ ಮಾಲತಿ ಜಿ. ಪೂಜಾರಿ, ಶ್ರೀರಕ್ಷಾ ಎಸ್. ಪೈ, ವಸಂತಿ ಆರ್. ಪಂಡಿತ್ ಹಾಗೂ ಅಕಾಡೆಮಿ ಅಧ್ಯಕ್ಷರಾದ ಭಾಸ್ಕರ್ ಕೊಗ್ಗ ಕಾಮತ್ ಉಪಸ್ಥಿತರಿದ್ದರು. ವಸಂತಿ ಆರ್. ಪಂಡಿತ್ ಇವರನ್ನು ಗೊಂಬೆಯಾಟ ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು. ವರದರಾಯ ಕಾಮತ್ ಮತ್ತು ವೀಣಾ ಕಾಮತ್ ಇವರನ್ನು ಗೌರವಿಸಲಾಯಿತು. ವಸಂತಿ ಆರ್. ಪಂಡಿತ್ ಕುಂದಾಪುರ ಇವರು ನಡೆಸಿಕೊಟ್ಟ ಭಜನ್ ಸಂಧ್ಯಾ ಕಾರ್ಯಕ್ರಮ ಅದ್ಭುತವಾಗಿ ಮೂಡಿ ಬಂತು. ಶಾಮ್ ಜಿ. ಎನ್. ಪೂಜಾರಿ ಗಂಗೊಳ್ಳಿ ಇವರ ಕೊಳಲು ವಾದನ ಹಾಗೂ ಆಕಾಂಕ್ಷಾ ಎಸ್. ಪೈ ಇವರ ಭಾವಗೀತೆ ಪ್ರೇಕ್ಷಕರ ಗಮನ ಸೆಳೆಯಿತು. ಭಾಸ್ಕರ್ ಕೊಗ್ಗ ಕಾಮತ್ ನಿರೂಪಿಸಿದರು.
ಮಂಗಳೂರು : ನಾಟ್ಯನಿಕೇತನ (ರಿ.) ಕೊಲ್ಯ ಕೋಟೆಕಾರ್ ಆಯೋಜಿಸೀದಾ ನಾಟ್ಯಮೋಹನ ನವತ್ಯುತ್ಸವ ನೃತ್ಯ ಸರಣಿಯ 18ನೇ ಕಾರ್ಯಕ್ರಮ ದಿನಾಂಕ 18 ಜೂನ್ 2025ನೇ ಬುಧವಾರದಂದು ಸಂಜೆ ಘಂಟೆ 6.00ಕ್ಕೆ ಕೊಲ್ಯದಲ್ಲಿರುವ ನಾಟ್ಯನಿಕೇತನ ನೃತ್ಯಾಂಗಣದಲ್ಲಿ ನಡೆಯಲಿದೆ. ಸಮಾರಂಭದಲ್ಲಿ ಗುರು ಶ್ರೀ ಉಳ್ಳಾಲ ಮೋಹನ್ ಕುಮಾರ್ ದೇವತಾ ದೀಪ ಪ್ರಜ್ವಲನೆ ಗೈಯ್ಯಲಿದ್ದು, ನಮ್ಮಕುಡ್ಲ ವಾಹಿನಿಯ ಹಿರಿಯ ಛಾಯಾಗ್ರಾಹಕರಾದ ಜಯಂತ್ ಉಳ್ಳಾಲ್ ಉಪಸ್ಥಿತರಿರುವರು. ಬಳಿಕ ನಾಟ್ಯನಿಕೇತನದ ಹಿರಿಯ ವಿದ್ಯಾರ್ಥಿ, ಶಾಂತಲಾ ನಾಟ್ಯಾಲಯ (ರಿ), ಬೆಳಗಾವಿ ಇದರ ನಿರ್ದೇಶಕಿಯಾದ ವಿದ್ವಾನ್ ಶ್ರೀಮತಿ ರೇಖಾ ಅಶೋಕ್ ಹೆಗ್ಡೆ ನೃತ್ಯ ಪ್ರಸ್ತುತ ಪಡಿಸಲಿದ್ದಾರೆ.
ಶಿಕ್ಷಣ ತಜ್ಞ, ಸಂಸ್ಕೃತಿ ಚಿಂತಕ, ಸಾಹಿತಿ ಡಾ. ಜಿ. ರಾಮಕೃಷ್ಣ ಇವರು ಶೈಕ್ಷಣಿಕ ಹಾಗೂ ಸಾಮಾಜಿಕ ವಲಯದಲ್ಲಿ ಜಿ. ಆರ್. ಎಂದೇ ಪ್ರಸಿದ್ದರು. ವಂಶದಿಂದ ಇವರ ಮೂಲ ಹೆಸರು ಗಂಪಲಹಳ್ಳಿ ರಾಮಕೃಷ್ಣ. ಸುಬ್ರಹ್ಮಣ್ಯಂ ಮತ್ತು ನರಸಮ್ಮ ದಂಪತಿಗಳ ಪುತ್ರನಾಗಿ 17 ಜೂನ್ 1939 ರಂದು ಮಾಗಡಿಯ ಸಮೀಪವಿರುವ ಕೆಂಪಸಾಗರದಲ್ಲಿ ಜನಿಸಿದರು. ಇವರು ತಮ್ಮಪ್ರಾಥಮಿಕ ಮತ್ತು ಪ್ರೌಢ ವಿದ್ಯಾಭ್ಯಾಸವನ್ನು ಕೆಂಪ ಸಾಗರ ಮತ್ತು ಮಾಗಡಿಯಲ್ಲಿ ಮುಗಿಸಿದರು. ಸಂಸಾರದಲ್ಲಿ ಆರ್ಥಿಕ ಮಿತಿ ಇದ್ದ ಕಾರಣ ಮೈಸೂರಿಗೆ ಹೋಗಿ ವಾರಾನ್ನ ಮಾಡಿಕೊಂಡು ಕಷ್ಟಪಟ್ಟು ಓದಿ, ಸಂಸ್ಕೃತ, ವೇದ, ತತ್ವಶಾಸ್ತ್ರಗಳನ್ನು ಅಧ್ಯಯನ ಮಾಡಿ ಪಾಂಡಿತ್ಯವನ್ನು ಪಡೆದರು. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ. ಮತ್ತು ಸಂಸ್ಕೃತದಲ್ಲಿ ಎಂ. ಎ., ಪುಣೆ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ನಲ್ಲಿ ಎಂ. ಎ. ಪದವಿಯನ್ನು ಪಡೆದುಕೊಂಡ ನಂತರ ಮೈಸೂರು ವಿಶ್ವ ವಿದ್ಯಾಲಯದಿಂದ “Origin and growth of rhuta in vedic literature” ಮಹಾಪ್ರಬಂಧಕ್ಕೆ ಪಿ. ಎಚ್. ಡಿ. ಪದವಿ ಮತ್ತು ವೇಲ್ಸ್ ವಿಶ್ವವಿದ್ಯಾಲಯದಿಂದ…