Subscribe to Updates
Get the latest creative news from FooBar about art, design and business.
Author: roovari
ಬೆಂಗಳೂರು : ಸ್ವರತರಂಗ್ ಸಂಗೀತ ಅಕಾಡೆಮಿ (ರಿ.) ಪ್ರಸ್ತುತ ಪಡಿಸುವ ಸಂಗೀತ್ ಅರ್ಚನಾ – ಸಂತೂರ್ ವಾದನ ಕಾರ್ಯಕ್ರಮವನ್ನು ದಿನಾಂಕ 09 ಆಗಸ್ಟ್ 2025ರಂದು ಸಂಜೆ 6-00 ಗಂಟೆಗೆ ಬೆಂಗಳೂರಿನ ಗಿರಿನಗರದಲ್ಲಿರುವ ದೇವಕೃಪಾ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಧಾರವಾಡದ ಸಿತಾರ್ ವಾದಕ ಉಸ್ತಾದ್ ಶಫೀಕ್ ಖಾನ್ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಗುರುರಾಜ್ ಜೋಶಿ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ನವದೆಹಲಿಯ ಡಾ. ಬಿಪುಲ್ ಕುಮಾರ್ ರಾಯ್ ಇವರ ಸಂತೂರ್ ವಾದನಕ್ಕೆ ಬೆಂಗಳೂರಿನ ಕಾರ್ತಿಕ್ ಕೃಷ್ಣ ತಬಲಾ ಸಾಥ್ ನೀಡಲಿದ್ದಾರೆ.
ತನ್ನ ವಿಶಿಷ್ಟ ಶೀರ್ಷಿಕೆಯಿಂದಲೇ ಗಮನ ಸೆಳೆಯುವ ಕಾದಂಬರಿ ಡಾ. ಬಿ. ಜನಾರ್ದನ ಭಟ್ ಅವರ ‘ಬೂಬರಾಜ ಸಾಮ್ರಾಜ್ಯ’. ಅವರ ಇತರ ಎಲ್ಲ ಕಾದಂಬರಿಗಳಂತೆ ಇಲ್ಲಿಯೂ ಸಾಂಸ್ಕೃತಿಕ-ಐತಿಹಾಸಿಕ ವಿವರಗಳೊಂದಿಗೆ ಕಲ್ಪನೆಯನ್ನೂ ಬೆಸೆದು ವಾಸ್ತವವಾದಿ ಶೈಲಿಯಲ್ಲಿ ಕಥೆಯನ್ನು ಅವರು ಹೆಣೆದಿದ್ದಾರೆ. ಹೆಜ್ಜೆ ಹೆಜ್ಜೆಗೂ ಕುತೂಹಲ ಮೂಡಿಸಿಕೊಂಡು ಹೋಗುವ ಒಂದು ಕಥಾನಕ ಇಲ್ಲಿದೆ. ಕಾದಂಬರಿಯ ಹೊರಕವಚದಲ್ಲಿ ಕರಾವಳಿಯ ಬೂಬಾವರ ಎಂಬ ಒಂದು ಹಳ್ಳಿಯಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯುವ ಕೊಳಕು ರಾಜಕೀಯದ ಸುಳಿಯೊಳಗೆ ಸಿಕ್ಕಿ ನಲುಗುವ ಕೃಷ್ಣಚಂದ್ರ ಎಂಬ ಒಬ್ಬ ಪ್ರಾಮಾಣಿಕ, ಕರ್ತವ್ಯನಿಷ್ಠ, ಇತಿಹಾಸ ಉಪನ್ಯಾಸಕನ ಸುತ್ತ ನಡೆಯುವ ಕಥೆಯಿದೆ. ಆತ ಓರ್ವ ಸಾಹಿತಿಯೂ ಹೌದು. ಪಿ.ಹೆಚ್.ಡಿ.ಗಾಗಿ ಸಂಶೋಧನೆ ನಡೆಸುವ ತಯಾರಿಯಲ್ಲಿದ್ದಾನೆ. ಬೂಬಾವರದ ಇತಿಹಾಸದಲ್ಲಿ ಪ್ರಾಚೀನ ಕಾಲದಲ್ಲಿ ಭೂವರಾಹ ಪಾಂಡ್ಯನೆಂಬ ರಾಜನ ಆಡಳಿತವಿತ್ತು ಮತ್ತು ಅವರು ವಿದೇಶಿಯರಿಗೆ ಗುಲಾಮರ ಮತ್ತು ವೇಶ್ಯೆಯರ ಸಾಗಾಣಿಕೆಯನ್ನು ಮಾಡುತ್ತಿದ್ದರು ಎಂಬ ವಿಚಾರ ತಿಳಿದು ಅದೇ ವಿಷಯವನ್ನು ತನ್ನ ಅಧ್ಯಯನಕ್ಕಾಗಿ ಆಯ್ದುಕೊಳ್ಳುತ್ತಾನೆ. ಬೂಬಾವರದಲ್ಲಿದ್ದ ಗೇಟ್ ಭಾರತಿ ಎಂಬ ವೇಶ್ಯಾ ಕುಟುಂಬಕ್ಕೆ ಸೇರಿದವಳು…
ಮಂಗಳೂರು : ಕನ್ನಡ ಭವನ ಮತ್ತು ಗ್ರಂಥಾಲಯ (ರಿ) ಕನ್ನಡ ಭವನ ಪ್ರಕಾಶನ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಇದರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗಾಗಿ ಏಕದಿನ ಸಾಹಿತ್ಯ ಅಭಿಯಾನ ಕನ್ನಡದ ನಡಿಗೆ ಶಾಲೆಯ ಕಡೆಗೆ ದಿನಾಂಕ 06 ಆಗಸ್ಟ್ 2025ರ ಬುಧವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೋಳಾರ ಇಲ್ಲಿ ಹಮ್ಮಿಕೊಳ್ಳಲಾಯಿತು. ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಶ್ರೀಮತಿ ರೇಖಾ ಸುದೇಶ್ ರಾವ್ ಇವರು ಕನ್ನಡ ಶಾಲನ್ನು ಹಾಕಿ, ಅತಿಥಿ ಅಭ್ಯಾಗತರನ್ನು ಸ್ವಾಗತಿಸಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿಯವರು ಹಾಗೂ ಶಿಕ್ಷಣಾಧಿಕಾರಿ ಸುಷ್ಮಾ ಕಿಣಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಗೌರವಾಧ್ಯಕ್ಷರು ಡಾ. ರವೀಂದ್ರ ಜೆಪ್ಪು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಶ್ರೀ ಉಮೇಶ್ ರಾವ್ ಕುಂಬಳೆ ಕಾರ್ಯಧ್ಯಕ್ಷರು ಪ್ರಾಸ್ತಾವಿಕ ನುಡಿಯೊಂದಿಗೆ ಆಂಗ್ಲ ಭಾಷೆಯನ್ನು ಕನ್ನಡಕ್ಕೆ ಪರಿವರ್ತಿಸುವ ರಸಪ್ರಶ್ನೆ ನಡೆಸಿಕೊಟ್ಟರು. ಶಾಲಾ ಮುಖ್ಯೋಪಾಧ್ಯಾಯನಿ…
ಪುತ್ತೂರು : ಪುತ್ತೂರಿನ ದರ್ಬೆ ವಿದ್ಯಾನಗರದಲ್ಲಿರುವ ಬಹುವಚನಂ ಇದರ ವತಿಯಿಂದ ವಾಗರ್ಥ ಯಕ್ಷ ಬಳಗ ಪ್ರಸ್ತುತಿಯಲ್ಲಿ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮವನ್ನು ದಿನಾಂಕ 10 ಆಗಸ್ಟ್ 2025ರಂದು ಸಂಜೆ 4-30 ಗಂಟೆಗೆ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಯಕ್ಷ ಕಲಾಕೇಂದ್ರದಲ್ಲಿ ಆಯೋಜಿಸಿಲಾಗಿದೆ. ‘ಅಂಗದ ಸಂಧಾನ’ ಪ್ರಸಂಗದ ಹಿಮ್ಮೇಳದಲ್ಲಿ ಭಾಗವತರು ಮುಂಡಾಳಗುತ್ತು ಪ್ರಶಾಂತ ರೈ, ಚಂಡೆಯಲ್ಲಿ ಶ್ರೀಧರ ವಿಟ್ಲ ಮತ್ತು ಮದ್ದಲೆಯಲ್ಲಿ ಬಾಲ ಸುಬ್ರಹ್ಮಣ್ಯ ಹಾಗೂ ಮುಮ್ಮೇಳದಲ್ಲಿ ರಾಧಾಕೃಷ್ಣ ಕಲ್ಚಾರ್ ಮತ್ತು ಗಣೇಶ ಶೆಟ್ಟಿ ಕನ್ನಡಿಕಟ್ಟೆ ಸಹಕರಿಸಲಿದ್ದಾರೆ.
ಉಡುಪಿ: ಸಾಹಿತಿ, ಹವ್ಯಾಸಿ ಪತ್ರಕರ್ತ, ಅಂಕಣ ಬರಹಗಾರ ಮರವಂತೆ ಪ್ರಕಾಶ್ ಪಡಿಯಾರ್ ದಿನಾಂಕ 05 ಆಗಸ್ಟ್ 2025ರ ಮಂಗಳವಾರದಂದು ಕಾರ್ಕಳದ ಹೊಸಬೆಳಕು ಆಶ್ರಮದಲ್ಲಿ ನಿಧನರಾದರು. ಇವರಿಗೆ 64ವರ್ಷ ವಯಸ್ಸಾಗಿತ್ತು ಸಾಹಿತ್ಯ, ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಪಡಿಯಾರ್, ಗ್ರಾಮೀಣ ಭಾಗದ ಸಮಸ್ಯೆ ಕುರಿತು ಬರೆದ ವರದಿಗಳು, ಆಡಳಿತ ವ್ಯವಸ್ಥೆಯ ಗಮನ ಸೆಳೆದು ಫಲಶ್ರುತಿ ಪಡೆಯುತ್ತಿದ್ದವು. ಹಲವಾರು ಸಂಘಸಂಸ್ಥೆಗಳು ಅವರನ್ನು ಸನ್ಮಾನಿಸಿದ್ದವು. ಕೆಲವು ವರ್ಷ ಕಾಲ ಜೀವವಿಮಾ ಏಜೆಂಟರಾಗಿ, ಮಾಧ್ಯಮಗಳಿಗೆ ಜಾಹೀರಾತು ಸಂಗ್ರಾಹಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಅನಾರೋಗ್ಯ ಸಮಸ್ಯೆಯಿಂದ ಮಾನಸಿಕವಾಗಿ ನೊಂದಿದ್ದ ಪಡಿಯಾರ್, ಜೀವನ ನಿರ್ವಹಣೆ ಎದುರಿಸಲು ಅಸಹಾಯಕರಾಗಿ ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು ಮತ್ತು ತಾರಾನಾಥ ಮೇಸ್ತ ಶಿರೂರು ಮೂಲಕ ಕಾರ್ಕಳದ ಹೊಸಬೆಳಕು ಆಶ್ರಮದಲ್ಲಿ ಆಶ್ರಯ ಪಡೆದಿದ್ದರು. . ಮೃತರು ಪತ್ನಿ, ಪುತ್ರಿಯರನ್ನು ಅಗಲಿದ್ದಾರೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಿಲಾಗ್ರಿಸ್ ಕಾಲೇಜ್, ಹಂಪನಕಟ್ಟೆ ಮಂಗಳೂರು, ಆಂತರಿಕ ಗುಣಮಟ್ಟ ಖಾತರಿ ಕೋಶ, ಕನ್ನಡ ವಿಭಾಗದ ಸಹಯೋಗದೊಂದಿಗೆ ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕ್ ಇವರ ಕವಿ ಕಾವ್ಯ ಸಾಹಿತ್ಯ – ಪರಂಪರೆಯ ಮಾಲಿಕೆ 5 ಕಾರ್ಯಕ್ರಮವು ದಿನಾಂಕ 7 ಆಗಸ್ಟ್ 2025ರ ಗುರುವಾರ ಅಪರಾಹ್ನ ಘಂಟೆ 2:00ರಿಂದ ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಮಿಲಾಗ್ರಿಸ್ ಕಾಲೇಜು ಆವರಣದಲ್ಲಿ ನಡೆಯಲಿದೆ. ದ. ಕ. ಜಿಲ್ಲಾ ಕ. ಸಾ. ಪ. ಇದರ ಅಧ್ಯಕ್ಷರಾದ ಡಾ. ಎಂ. ಪಿ. ಶ್ರೀನಾಥ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಮಿಲಾಗ್ರಿಸ್ ಕಾಲೇಜು ಇದರ ಪ್ರಾಂಶುಪಾಲರಾದ ರೆ. ಡಾ. ಅಶ್ವಿನ್ ಸೆರವೊ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕ. ಸಾ. ಪ. ಬೆಂಗಳೂರಿನ ಕೇಂದ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರಾದ ಡಾ. ಮಾಧವ ಎಂ. ಕೆ. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದು, ಮಿಲಾಗ್ರಿಸ್ ಕಾಲೇಜ್ ಮಂಗಳೂರು ಇಲ್ಲಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಸೌಮ್ಯ…
ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಇದರ ವತಿಯಿಂದ ಕಲಾವಿದರ ಯಕ್ಷಪಯಣದ ಸ್ವಗತ ‘ಯಕ್ಷಾಯಣ- ದಾಖಲೀಕರಣ’ ಸರಣಿಯ 8ನೇ ಕಾರ್ಯಕ್ರಮ ದಿನಾಂಕ 05 ಆಗಸ್ಟ್ 2025ರ ಮಂಗಳವಾರ ನಡೆಯಿತು. ಕಾರ್ಯಕ್ರಮದಲ್ಲಿ ತಮ್ಮ ಯಕ್ಷ ಪಯಣದ ಅನುಭವವನ್ನು ಹಂಚಿಕೊಂಡ ಯಕ್ಷಗಾನ ರಂಗದ ಹಿರಿಯ ಕಲಾವಿದರಾದ ರಾಮಕೃಷ್ಣ ರಾವ್ ರೆಂಜಾಳ “ಕಲಿತು ಮುಗಿಯದ ಕಲೆ ಯಕ್ಷಗಾನ. ಪರಿಶ್ರಮ, ಪ್ರಯತ್ನ, ಆಸಕ್ತಿ ಇದ್ದರೆ ಮಾತ್ರ ಈ ಕಲೆ ಒಲಿದು ಬರುತ್ತದೆ. ಕಲಾವಿದರಿಗೂ ಪರಂಪರೆಯ ಒಲವು, ಕಾಲ ಜ್ಞಾನ ಮತ್ತು ತಿಟ್ಟಿನ ಶಿಸ್ತು ಬೇಕು. ಬೆರಕೆ ಬೇಡ. ಯಕ್ಷಗಾನ ಕಲೆಯು ಪರಂಪರೆ ಹಾಗೂ ಚೌಕಟ್ಟನ್ನು ಮೀರದೆ ಕಲೆಯ ಮೌಲ್ಯವನ್ನು ಉಳಿಸಿಕೊಂಡು ಬೆಳೆಯಬೇಕು. ನಾಟಕೀಯತೆ ಹೆಚ್ಚಾಗಿ ಯಕ್ಷಗಾನ ಎಂದಿಗೂ ನಾಟಕ ಸಭಾ ಆಗದಿರಲಿ. ಕಾಲಮಿತಿ ಬಂದನಂತರ ಹೊಸತನದೊಂದಿಗೆ ಪರಂಪರೆಯ ವೇಷಗಳು ಮರೆಯಾಗುತ್ತಿವೆ. ಈಗಿನ ಕಲಾವಿದರಿಗೆ ಮೇಳ ತಿರುಗಾಟ ಕಷ್ಟ ಇಲ್ಲ. ಆಗ ಮೂರು ರೂಪಾಯಿ ಸಂಬಳ ಸಿಗುತ್ತಿದ್ದ ಕಾಲದಲ್ಲೂ…
ತಮಿಳುನಾಡು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ವಿದ್ಯಾರ್ಥಿನಿಯಾದ ಕುಮಾರಿ ಮೇಧಾ ಸಾವಿತ್ರಿಯವರು ದಿನಾಂಕ 19 ಜುಲೈ 2025ರಂದು ತಮಿಳುನಾಡಿನ ಕರೂರು ಜಿಲ್ಲೆಯ ನಾರದ ಗಾನ ಸಭಾ (ರಿ.) ಇದರ 81ನೇ ವರ್ಷದ ಸಲುವಾಗಿ ನಡೆಸಿದ ಜಿಲ್ಲಾ ಮಟ್ಟದ ಜೂನಿಯರ್ ವಿಭಾಗದ ಭರತನಾಟ್ಯ ಸ್ಪರ್ಧೆಯಲ್ಲಿ ಜೂನಿಯರ್ ವಿಭಾಗದಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. ಮೇಧಾರವರು ವಿದ್ವಾನ್ ದೀಪಕ್ ಕುಮಾರ್ ಹಾಗೂ ಅವರ ಶಿಷ್ಯೆ ವಿದುಷಿ ಅಪೂರ್ವಗೌರಿಯವರಲ್ಲಿ ನೃತ್ಯ ತರಬೇತಿ ಪಡೆಯುತ್ತಿದ್ದಾರೆ. ಇವರು ಕರೂರಿನ ಶ್ರೀ ಮಹೇಶ್ ಉಪಾಧ್ಯಾಯ ಮತ್ತು ಶ್ರೀಮತಿ ಅಕ್ಷತಾ ಮಹೇಶ್ ರವರ ಪುತ್ರಿ ಹಾಗೂ ಕಬಕದ ನಿವೃತ್ತ ಪೋಸ್ಟ್ ಮಾಸ್ಟರ್ ಶ್ರೀ ಶ್ಯಾಮ್ ಭಟ್ ಕೂವೆತ್ತಿಲರವರ ಮೊಮ್ಮಗಳು. ಮೇಧಾರವರ ತಾಯಿ ಶ್ರೀಮತಿ ಅಕ್ಷತಾ ಮಹೇಶ್ ರವರೂ ಕೂಡ ಭರತನಾಟ್ಯ ಕಲಾವಿದೆಯಾಗಿತ್ತು ಭರತನಾಟ್ಯದಲ್ಲಿ ವಿದ್ವತ್ ಪೂರ್ವ ಪರೀಕ್ಷೆಯವರೆಗೆ ವಿದ್ವಾನ್ ದೀಪಕ್ ಕುಮಾರ್ ರವರಲ್ಲಿಯೇ ಭರತನಾಟ್ಯ ಕಲಿತಿದ್ದಾರೆ.
ಬೆಂಗಳೂರು : ಜನಸಂಸ್ಕೃತಿ ಪ್ರತಿಷ್ಠಾನ, ಬೆಂಗಳೂರು ಆರ್ಟ್ ಫೌಂಡೇಷನ್, ಕಿರಂ ಪ್ರಕಾಶನ ಇವರ ವತಿಯಿಂದ ದಿನಾಂಕ 07 ಆಗಸ್ಟ್ 2025ರಂದು ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡದ ಖ್ಯಾತ ವಿಮರ್ಶಕ ಪ್ರೊ. ಕಿ.ರಂ. ನಾಗರಾಜ ಇವರ ನೆನಪಿನಲ್ಲಿ ‘ಕಾಡುವ ಕಿರಂ’ ಅಹೋರಾತ್ರಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ. ಪುರುಷೋತ್ತಮ ಬಿಳಿಮಲೆ ಇವರು ನೆರವೇರಿಸಲಿದ್ದಾರೆ. ‘ಕಿರಂ ಹೊಸ ಕವಿತೆ 2025’ ಕೃತಿಯನ್ನು ಲಲಿತ ಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ಹಾಗೂ ಅಂತರರಾಷ್ಟ್ರೀಯ ಕಲಾವಿದರಾದ ಡಾ. ಎಂ.ಎಸ್. ಮೂರ್ತಿಯವರು ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಪನ್ಯಾಸಕಿ ಸಹನಾ ಕೆ.ಎನ್., ವಾರ್ತಾ ಇಲಾಖೆಯ ಜಂಟಿ ನಿರ್ದೇಶಕಿ ಡಾ. ಕವನ ಕೆ.ಎನ್., ಉಪನ್ಯಾಸಕಿ ಚಂದನ ಕೆ.ಎನ್. ಭಾಗವಹಿಲಿದ್ದಾರೆ. ಕಾರ್ಯಕ್ರಮದ ಪ್ರಸ್ತಾವನೆಯನ್ನು ಸಂಶೋಧಕ ಮತ್ತು ಪತ್ರಕರ್ತ ಡಾ. ಪ್ರದೀಪ್ ಮಾಲ್ಗುಡಿ ಮಾಡಲಿದ್ದು, ‘ಕಿರಂ ಹೊಸ ಕವಿತೆ 2025’ ಕೃತಿಯ ಸಂಪಾದಕ ಎಸ್. ಮಂಜುನಾಥ್ ವೇದಿಕೆಯಲ್ಲಿ ಉಪಸ್ಥಿತರಿರುತ್ತಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಖ್ಯಾತ…
ಮಡಿಕೇರಿ : ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಸಭಾಂಗಣದಲ್ಲಿ ದಿನಾಂಕ 31 ಜುಲೈ 2025ರಂದು ಆಯೋಜಿತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಡಗು ಜಿಲ್ಲೆ ವತಿಯಿಂದ ವಿಶೇಷ ಘಟಕ ಯೋಜನೆಯಡಿಯಲ್ಲಿನ ವಿದ್ಯಾರ್ಥಿನಿಯರಿಗೆ ‘ಸುಗಮ ಸಂಗೀತ’ ಕಲಾ ತರಬೇತಿ ಶಿಬಿರ ನಡೆಯಿತು. ಈ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ “ವಿದ್ಯಾರ್ಥಿ ಜೀವನದಲ್ಲಿಯೇ ಕಲಾ ಸಂಸ್ಕೃತಿಯನ್ನು ಮೈಗೂಡಿಸಿಕೊಂಡಲ್ಲಿ ಆತ್ಮವಿಶ್ವಾಸ ಹೆಚ್ಚಾಗುವುದರ ಜೊತೆಗೆ, ಮನಸ್ಸಿನಲ್ಲಿನ ಋಣಾತ್ಮಕ ಅಂಶಗಳೂ ಮರೆಯಾಗಲು ಸಹಕಾರಿಯಾಗುತ್ತದೆ. ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಸುಗಮ ಸಂಗೀತ ತರಬೇತಿ ಶಿಬಿರವನ್ನು ಸರ್ಕಾರ ಹಮ್ಮಿಕೊಂಡಿರುವುದು ಶ್ಲಾಘನೀಯ. ಸುಗಮ ಸಂಗೀತ ಮಾಧ್ಯಮವು ನಮ್ಮ ಭಾವನೆಗಳ ಅಭಿವ್ಯಕ್ತಿಗೆ ಸೂಕ್ತವಾಗಿದೆ. ಸಮಾಜದ ವಿವಿಧ ರಂಗದಲ್ಲಿ ಸಾಧನೆ ಮಾಡಿದ ಸಾಧಕರನ್ನು ವಿದ್ಯಾರ್ಥಿಗಳು ಮಾದರಿಯಾಗಿ ಪರಿಗಣಿಸಿಕೊಂಡಲ್ಲಿ ಅವರು ಕೂಡ ಅಮೂಲ್ಯವಾದ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಸರ್ಕಾರ ಆಯೋಜಿಸುವ ವಿವಿಧ ಕಾರ್ಯಕ್ರಮಗಳಿಗೆ ಸಮಾಜದ ವಿವಿಧ ಸಂಘಸಂಸ್ಥೆಗಳೂ ಕೈಜೋಡಿಸಿದರೆ ಅಂತಹ…