Author: roovari

ಮಂಗಳೂರು : ಮಂಗಳೂರಿನ ಧ್ಯಾನ ಸಂಗೀತ ಅಕಾಡೆಮಿಯ ವಾರ್ಷಿಕೋತ್ಸವದ ಅಂಗವಾಗಿ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತೋತ್ಸವ ಕಾರ್ಯಕ್ರಮವು 25 ಆಗಸ್ಟ್ 2024ರಂದು ಮಂಗಳೂರಿನ ಉರ್ವಸ್ಟೋರ್ ಇಲ್ಲಿನ ತುಳುಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಖ್ಯಾತ ಕಲಾವಿದರಾದ ಮುಂಬೈ ಇಲ್ಲಿನ ಪಂಡಿತ್ ರಾಮ್ ದೇಶಪಾಂಡೆ “ಶಾಸ್ತ್ರೀಯ ಸಂಗೀತದಂತಹ ದೈವಿಕ ವಿದ್ಯೆಗಳು ಕೇವಲ ಗುರುಗಳ ಆಶೀರ್ವಾದದಿಂದ ಸಿದ್ಧಿಸುತ್ತವೆ. ಕೇವಲ ಸ್ವಪ್ರಯತ್ನ ಸಾಲದು, ಸಂಗೀತ ಗುರುಗಳು ಹಾಕಿಕೊಟ್ಟ ಹಾದಿಯೇ ಸಾಧನೆಗೆ ಮತ್ತು ಶ್ರೇಯಸ್ಸಿಗೆ ಮಾರ್ಗ.” ಎಂದರು. ಶ್ರೀಮತಿ ಲೋಲಾಕ್ಷಿ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಎಂ. ಆರ್. ಪಿ. ಎಲ್. ಹಾಗೂ ಒ. ಎನ್‌. ಜಿ. ಸಿ. ಇದರ ಜನರಲ್ ಮ್ಯಾನೇಜರ್ ಆಗಿರುವ ಮಂಜುನಾಥ ಎಚ್. ವಿ. ಹಾಗೂ ಸಂಗೀತ ಪೋಷಕರಾದ ಶ್ರೀಮತಿ ಶ್ರೇಯಾ ಕಿರಣ್ ಶೆಣೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಸಭಾಕಾರ್ಯಕ್ರಮದ ಬಳಿಕ ಪಂಡಿತ್‌ ರಾಮ್ ದೇಶಪಾಂಡೆ, ಮೈಸೂರಿನ ವಿದುಷಿ ಶ್ರೀಮತಿ ದೇವೀ ಹಾಗೂ ಧ್ಯಾನ ಸಂಗೀತ ಕಲಾ ಅಕಾಡೆಮಿಯ ವಿದ್ಯಾರ್ಥಿಗಳಿಂದ ಹಿಂದೂಸ್ಥಾನಿ ಗಾಯನ, ಲಘು…

Read More

ಮುಂಬಯಿ: ಕವಿ-ಲೇಖಕ ಮತ್ತು ಯಕ್ಷಗಾನ ವಿದ್ವಾಂಸ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರ ಎರಡು ಕವನ ಸಂಕಲನಗಳ ಬಿಡುಗಡೆ ಸಮಾರಂಭವು 24 ಆಗಸ್ಟ್ 2024ರಂದು ಮುಂಬಯಿಯ ವಿದ್ಯಾ ವಿಹಾರ್ ಪೂರ್ವದ ಶ್ರೀ ಅಂಬಿಕಾ ಆದಿನಾಥೇಶ್ವರ ಗಣಪತಿ ಮಂದಿರದಲ್ಲಿ ನಡೆಯಿತು. ಯಕ್ಷಗುರು ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರ ನೇತೃತ್ವದ ಅಜೆಕಾರು ಕಲಾಭಿಮಾನಿ ಬಳಗದ 2024ನೇ ಸಾಲಿನ ಯಕ್ಷಗಾನ ತಾಳಮದ್ದಳೆ ಸರಣಿ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಮುಂಬೈಯ ಹಿರಿಯ ಸಾಹಿತಿ ಡಾ. ಸುನೀತಾ ಎಂ. ಶೆಟ್ಟಿ ಮಾತನಾಡಿ “ತುಳುನಾಡು ಸಂಸ್ಕೃತಿ ಸಂಸ್ಕಾರಗಳಿಗೆ ಹೆಸರಾಗಿದೆ. ಇಲ್ಲಿನ ಜನರಲ್ಲಿ ಜಾತಿ ಸಂಕಟವಿಲ್ಲ. ಮತ- ಧರ್ಮಗಳ ಸಂಘರ್ಷವಿಲ್ಲ. ಆದ್ದರಿಂದ ತುಳುವರ ಸಾಹಿತ್ಯ ಕೃತಿಗಳಲ್ಲಿ ಸಮಕಾಲೀನ ಸಂಗತಿಗಳೊಂದಿಗೆ ಸಹಬಾಳ್ವೆ ಮತ್ತು  ಸಮಭಾವಗಳ ಸಂದೇಶವಿರುತ್ತದೆ. ಭಾಸ್ಕರ ರೈಯವರ ಗದ್ಯ ಮತ್ತು ಕಾವ್ಯ ಕೃತಿಗಳಲ್ಲಿ ಇದು ಹಾಸು ಹೊಕ್ಕಾಗಿರುವುದರಿಂದ ನಾಡು – ಹೊರನಾಡುಗಳಲ್ಲಿ ಅವರದೇ ಆದ ಅಭಿಮಾನಿ ವರ್ಗ ಸೃಷ್ಟಿಯಾಗಿದೆ.” ಎಂದರು. ಕಾರ್ಯಕ್ರಮವನ್ನು ಅಂಬಿಕಾ ಮಂದಿರದ ಧರ್ಮದರ್ಶಿಗಳಾದ ವೇದಮೂರ್ತಿ ಪೆರಣಂಕಿಲ ಹರಿದಾಸ ಭಟ್…

Read More

ಕಾಸರಗೋಡು : ಗಮಕ ಕಲಾ ಪರಿಷತ್ತು ಗಡಿನಾಡ ಘಟಕ ಕಾಸರಗೋಡು, ಸಿರಿಗನ್ನಡ ಸಾಂಸ್ಕೃತಿಕ ವೇದಿಕೆ ಗಡನಾಡ ಘಟಕ ಕಾಸರಗೋಡು, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ , ತರಂಗಿಣಿ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಕೈರಲಿ, ಕುಟುಂಬಶ್ರೀ ಘಟಕ ಸುಬ್ಬಯ್ಯ ಕಟ್ಟೆ ಇವುಗಳ ಸಂಯುಕ್ತ ಆಶ್ರಯದಲ್ಲಿ  ಗಮಕ ಶ್ರಾವಣ ಕಾರ್ಯಕ್ರಮವು 21 ಆಗಸ್ಟ್ 2024ರಂದು  ಸುಬ್ಬಯ್ಯಕಟ್ಟೆ ಬಿ. ಎ. ಮಹಮ್ಮದ್ ಸ್ಮಾರಕ ಮಂದಿರದಲ್ಲಿ ನಡೆಯಿತು. ಗಮಕ ಕಲಾ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಟಿ. ಶಂಕರನಾರಾಯಣ ಭಟ್ಟ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಖ್ಯಾತ ವಿದ್ವಾಂಸ ಹಾಗೂ ನಾಡೋಜ ಕವಿ ಕಯ್ಯಾರರ ಸುಪುತ್ರ ಡಾ. ಪ್ರಸನ್ನ ರೈ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ  ಅತಿಥಿಗಳಾಗಿ ಕುಡಾಲು ವಾರ್ಡಿನ ಜನ ಪ್ರತಿನಿಧಿ ಹಾಗೂ ತರಂಗಿಣಿಯ ಗೌರವಾಧ್ಯಕ್ಷರಾದ ಶ್ರೀ ಅಶೋಕ ಭಂಡಾರಿ ಹಾಗೂ ಖ್ಯಾತ ಲೇಖಕ ಮತ್ತು ಕಾಸರಗೋಡು ಜಿಲ್ಲಾ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಶ್ರೀ ರವಿ ನಾಯ್ಕಾಪು ಭಾಗವಹಿಸಿದರು. ಇದೇ ಸಂದರ್ಭದಲ್ಲಿ ಹಿರಿಯ ಕೃಷಿಕ, ಸಮಾಜಿಕ…

Read More

ಮಂಗಳೂರು : ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ದಿನಾಂಕ 17 ಆಗಸ್ಟ್ 2024ರಂದು ಸನಾತನ ನಾಟ್ಯಾಲಯದ ನೃತ್ಯ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ ಭರತನಾಟ್ಯ ವೈವಿಧ್ಯ ‘ಸನಾತನ ನೃತ್ಯೋತ್ಸವ’ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಾರ್ಕಳದ ಅಕ್ಷಯ ಗೋಖಲೆ ಇವರು ‘ಲಕ್ಷ್ಮೀಯೂ ಅವಳೇ ದುರ್ಗೆಯೂ ಅವಳೇ’ ಎಂಬ ವಿಷಯದ ಬಗ್ಗೆ ಮಾತನಾಡಿ “ಹೆಣ್ಣು ಎಂದರೆ ಹೆಂಡತಿ ಎಂದು ಜಗತ್ತಿನಲ್ಲಿ ಎಲ್ಲರೂ ಸ್ವೀಕರಿಸಿದರೆ, ಭಾರತದಲ್ಲಿ ಆಕೆಯನ್ನು ಗೃಹ್ಯಾಗ್ನಿ ಎನ್ನುವ ಧರ್ಮಾಗ್ನಿಯನ್ನು ತರುತ್ತಾಳೆ. ಮನೆಯ ಯಜಮಾನನನ್ನು ಗೃಹಸ್ಥನನ್ನಾಗಿ ಮಾಡುತ್ತಾಳೆ ಎಂದು ಭಾವಿಸಿರುವುದು ಭಾರತೀಯ ಸಮಾಜ. ದುರ್ಗೆಯನ್ನು ಜಗಜ್ಜನನಿ ಎಂದು ಕರೆಯುತ್ತೇವೆ. ಕಲಿಯುಗದಲ್ಲಿ ಭಾರತದ ಪ್ರತಿಯೊಂದು ಹೆಣ್ಣಿನಲ್ಲಿಯೂ ದುರ್ಗೆಯ ಅಂಶವಿದೆ. ಜ್ಞಾನ, ಕರುಣೆ, ಪ್ರೀತಿ, ವಿಶ್ವಾಸ ಜೊತೆಗೆ ಯಾವಾಗೆಲ್ಲ ರಾಕ್ಷಸರ ಸಂಹಾರದ ಸಮಯದಲ್ಲಿ ವಧಿಸುವ ದೇವಿಯ ರೂಪವನ್ನೂ ತಾಳುತ್ತಾಳೆ ಎಂಬುದನ್ನು ಮರೆಯಬಾರದು. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ ಸಂದರ್ಭದಲ್ಲಿ ಸಂಭ್ರಮಿಸುವ, ಸ್ವಾತಂತ್ರ್ಯ ತಂದುಕೊಡಲು ಶ್ರಮಿಸಿದವರನ್ನು ಗೌರವಿಸಲು ಸಿಕ್ಕಿದ ಅವಕಾಶವನ್ನು ತಿರಸ್ಕರಿಸಬಾರದು. ಜೊತೆಗೆ ಸಾಮಾಜಿಕವಾಗಿ ಹೆಣ್ಣು ಸಶಕ್ತವಾಗಿ…

Read More

ಮಂಗಳೂರು : ಆಕೃತಿ ಆಶಯ ಪಬ್ಲಿಕೇಶನ್ಸ್ ಮಂಗಳೂರು ಹಾಗೂ ಸಂತ ಅಲೋಶಿಯಸ್ ಪರಿಗಣಿತ ವಿ. ವಿ. ಕನ್ನಡ ವಿಭಾಗ ಇವುಗಳ ಸಹಯೋಗದೊಂದಿಗೆ ಸುಲೋಚನಾ ಪಚ್ಚಿನಡ್ಕ ಇವರ ಕೃತಿಗಳ ಲೋಕಾರ್ಪಣಾ ಸಮಾರಂಭವು 24 ಆಗಸ್ಟ್ 2024ರ ಶನಿವಾರದಂದು ಸಂತ ಅಲೋಶಿಯಸ್ ಪರಿಗಣಿತ ವಿ. ವಿ. ಇದರ ಸಾನ್ನಿಧ್ಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಹಿರಿಯ ವಿದ್ವಾಂಸ ಹಾಗೂ ವಿಶ್ರಾಂತ ಕುಲಪತಿ ಡಾ. ಕೆ. ಚಿನ್ನಪ್ಪ ಗೌಡ ಪ್ರಾದೇಶಿಕ ವಿವರಗಳನ್ನು ಬಳಸಿಕೊಂಡು ಸಾರ್ವತ್ರಿಕಗೊಳಿಸುವುದು ಕೃತಿಕಾರರ ಮುಂದಿರುವ ಸವಾಲಾಗಿದೆ. ಡಾ. ಶಿವರಾಮ ಕಾರಂತರ ಕೃತಿಗಳಲ್ಲಿ ಸಾಕಷ್ಟು ಪ್ರಾದೇಶಿಕ ವಿವರಗಳು ದೊರೆತರೂ ಅವರ ಕೃತಿಗಳು ಪ್ರಾದೇಶಿಕವಾಗಿ ಸೀಮಿತಗೊಳ್ಳದೆ ಸಾರ್ವತ್ರಿಕ ವಿಚಾರಗಳನ್ನು ತಿಳಿಸುತ್ತದೆ. ಯುವ ಬರಹಗಾರರ ವಿಸ್ತ್ರತವಾದ ಓದು ಬರವಣಿಗೆಯನ್ನು ಇನ್ನಷ್ಟು ಶಕ್ತಗೊಳಿಸುತ್ತದೆ. ಸುಲೋಚನ ಪಚ್ಚಿನಡ್ಕ ಇವರ ಕೃತಿ ಪ್ರಾದೇಶಿಕ ವಿವರ ಒಳಗೊಂಡಿದೆ.” ಎಂದರು. ಕೃತಿ ಪರಿಚಯಿಸಿದ ರಘು ಇಡ್ಕಿದು ಮಾತನಾಡಿ “ಸುಲೋಚನಾ ಪಚ್ಚಿನಡ್ಕ ಇವರ ಚುಟುಕುಗಳು ಕಾವ್ಯ ಬಿಂದುವಾಗಿದೆ. ಅವರ ಕೃತಿಯಲ್ಲಿ ಹೆಣ್ಣಿನ ಬಗೆಗಿನ…

Read More

ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಆಯೋಜನೆಯಲ್ಲಿ ಸಂಸ್ಕೃತಿ ಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಕತ್ವದಲ್ಲಿ ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಳದ ಆಶ್ರಯದಲ್ಲಿ ಕವಿ ದಿ. ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ ಪ್ರದಾನ 2024, ಮಹಿಳಾ ಕಾವ್ಯ ಸಂವಾದ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮವು ದಿನಾಂಕ 24-08-2024ರಂದು ಅಂಬಲಪಾಡಿಯ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಭವಾನಿ ಮಂಟಪದಲ್ಲಿ ನಡೆಯಿತು. ಕವಿಗಳಾದ ವಿಜಯಪುರದ ಸುಮಿತ್ ಮೇತ್ರಿ ಹಾಗೂ ಮಂಗಳೂರಿನ ಜಯಶ್ರೀ ಬಿ. ಕದ್ರಿ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಾರಂಭದಲ್ಲಿ ಮಹಿಳಾ ಕಾವ್ಯ ಸಂವಾದದಲ್ಲಿ ಉಡುಪಿ ಜಿಲ್ಲೆಯ ಮಹಿಳಾ ಕವಯತ್ರಿಯರಾದ ಡಾ. ಮಾಧವಿ ಭಂಡಾರಿ, ಡಾ. ನಿಕೇತನ, ಸುಕನ್ಯಾ ಕಳಸ, ಸುಧಾ ಅಡುಕಳ, ಪೂರ್ಣಿಮಾ ಸುರೇಶ್ ಭಾಗವಹಿಸಿ ಇಂದಿನ ಮಹಿಳಾ ಬರಹಗಾರರಿಗೆ ಇರುವ ಸಮಸ್ಯೆಗಳನ್ನು ಸಂವಾದದಲ್ಲಿ ಚರ್ಚಿಸಲಾಯಿತು. ಸಂವಾದ ಕಾರ್ಯಕ್ರಮವನ್ನು ಉಪಾಧ್ಯಕ್ಷೆ ಸಂಧ್ಯಾ ಶೆಣೈ ನಿರ್ವಹಿಸಿದರು. ಕಾವ್ಯ ಗಾಯನವನ್ನು ವಿದುಷಿ ಉಮಾಶಂಕರಿ ನಡೆಸಿಕೊಟ್ಟರು. ಇದೇ ಸಂದರ್ಭದಲ್ಲಿ…

Read More

ಪುತ್ತೂರು : ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ನರಿಮೊಗರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಸಹಕಾರದಲ್ಲಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ, ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ ರೈ ಅಬುದಾಬಿಯವರ ಪೋಷಕತ್ವದಲ್ಲಿ, ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನದಂಗವಾಗಿ ಸ. ಉ. ಹಿ. ಪ್ರಾ. ಶಾಲೆ ನರಿಮೊಗರು ಇಲ್ಲಿನ ಶತ ಸಂಭ್ರಮ ವೇದಿಕೆಯಲ್ಲಿ ನಡೆದ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ -16 ದಿನಾಂಕ 24 ಆಗಸ್ಟ್ 2024ರಂದು ಅತ್ಯಂತ ಯಶಸ್ವಿಯಾಗಿ ನಡೆಯಿತು. ನರಿಮೊಗರು ಹಾಗೂ ಶಾಂತಿಗೋಡು ಗ್ರಾಮದ ಎಂಟು ಶಾಲೆಯ ಆಯ್ದ ಸಾಹಿತ್ಯಾಸಕ್ತ ವಿದ್ಯಾರ್ಥಿಗಳು ಪುರುಷರ ಕಟ್ಟೆಯಿಂದ ಕನ್ನಡ ಭುವನೇಶ್ವರಿಯ ಭಾವಚಿತ್ರದೊಂದಿಗೆ ಸಾಹಿತ್ಯ ಸಂಭ್ರಮದ ಸರ್ವಾಧ್ಯಕ್ಷತೆ ವಹಿಸಿದ ಪುಟಾಣಿ ಕುಮಾರಿ ಪೂಜಾಶ್ರೀ ಹಾಗೂ ಸಮಾರೋಪ ಭಾಷಣಗಾರ ಪುಟಾಣಿ ಧವನ್ ಕುಮಾರ್ ಇವರನ್ನು ಕನ್ನಡ ಶಾಲು ಹಾಗೂ ಕನ್ನಡ ಪೇಟವನ್ನು ತೊಡಿಸಿ ಭವ್ಯ ಮೆರವಣಿಗೆ ಮೂಲಕ ಸಭಾಂಗಣಕ್ಕೆ ಬರಮಾಡಿಕೊಳ್ಳಲಾಯಿತು. ಸಭಾಧ್ಯಕ್ಷತೆ ವಹಿಸಿದ ಕನ್ನಡ ಸಾಹಿತ್ಯ…

Read More

ಧಾರವಾಡ : ಆಲೂರು ವೆಂಕಟರಾವ್ ಸಭಾಭವನದಲ್ಲಿ ದಿನಾಂಕ 24 ಆಗಸ್ಟ್ 2024ರಂದು ಧಾರವಾಡದ ಜಿ.ಬಿ. ಜೋಶಿ ಮೆಮೋರಿಯಲ್ ಟ್ರಸ್ಟ್ ಹಾಗೂ ಹುಬ್ಬಳ್ಳಿಯ ಕ್ಷಮತಾ ಸಂಸ್ಥೆಗಳ ಸಹಯೋಗದಲ್ಲಿ ಧಾರವಾಡದ ಸಂಗೀತದ ಪರಿಚಾರಕ ಅನಂತ ಹರಿಹರ ಅವರ ಸಂಸ್ಮರಣೆಯಲ್ಲಿ ನಡೆಯುತ್ತಿರುವ ಎರಡನೇ ದಿನದ ಸಂಗೀತೋತ್ಸವದಲ್ಲಿ ಗಾಯನ-ವಾದನಗಳ ನಿನಾದ ಹರಿದುಬಂತು. ಆರಂಭದಲ್ಲಿ ಉ. ಫಯ್ಯಾಜ್ ಖಾನರ ಶಿಷ್ಯ-ಪುತ್ರ ಸರಫರಾಜ್ ಖಾನರಿಂದ ಸಾರಂಗಿ ತಂತುಗಳ ವಾದನದಿಂದ ಮನಮೋಹಕ ಸ್ವರ ತರಂಗಗಳು ಝೇಂಕರಿಸಿದವು. ಅವರು ರಾಗ ಜನಸಮ್ಮೋಹಿನಿಯಲ್ಲಿ ಆಲಾಪ ಜೋಡ್ ಗಳನ್ನು ಸುಂದರವಾಗಿ ನುಡಿಸಿದರು. ಇವರಿಗೆ ಉ. ನಿಸಾರ್ ಅಹಮದ್ ತಬಲಾ ಸಾಥ್ ನೀಡುವ ಮೂಲಕ ಸಂಗೀತ ಆಸಕ್ತರ ಗಮನ ಸೆಳೆದರು. ನಂತರ ವೀರೇಶ್ವರ ಪುಣ್ಯಾಶ್ರಮದ ಪರಂಪರೆಯ ಯುವ ಪ್ರತಿಭೆ ಅಯ್ಯಪ್ಪಯ್ಯ ಹಲಗಲಿಮಠ ಅವರು ಸಾಯಂಕಾಲೀನ ಸಂಧಿಪ್ರಕಾಶ ರಾಗ, ಪೂರ್ವಿ ಥಾಟನ್ ಶ್ರೀ ಪ್ರಸ್ತುತಪಡಿಸಿದರು. ವಿಲಂಬಿತ್ ಏಕತಾಲ್ ನಲ್ಲಿ “ಮೋರಾ ಆಸರಾ…”, ಧೃತ್ ತೀನತಾಲ್ ನಲ್ಲಿ “ಬಾಜೆ ಮುರಲಿಯಾ ಮೋಹನ…” ಬಂದಿಶಗಳನ್ನು ಹಾಗೂ ಮನಮೋಹಕ ಮೀಂಡ್, ತಾನುಗಳೊಂದಿಗೆ ಪ್ರಬುದ್ಧ…

Read More

ಹಾವಂಜೆ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಮತ್ತು ಭಾವನಾ ಫೌಂಡೇಷನ್ (ರಿ.) ಹಾವಂಜೆ ಇವರ ಸಂಯುಕ್ತ ಆಶ್ರಯದಲ್ಲಿ ‘ಮನೆಯೇ ಗ್ರಂಥಾಲಯ’ ಅಭಿಯಾನದಲ್ಲಿ 99ನೇ ಗ್ರಂಥಾಲಯದ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 30 ಆಗಸ್ಟ್ 2024ರಂದು ಸಂಜೆ 4-30 ಗಂಟೆಗೆ ಯಕ್ಷಗುರು ಹಾವಂಜೆ ಮಂಜುನಾಥಯ್ಯನವರ ಮನೆಯಲ್ಲಿ ನಡೆಯಲಿದೆ. ಇದೇ ಸಂದರ್ಭದಲ್ಲಿ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ‘ಶ್ರೀ ಕೃಷ್ಣ ಸಂಧಾನ’ ಯಕ್ಷಗಾನ ತಾಳಮದ್ದಳೆ ಪ್ರಸ್ತುತಗೊಳ್ಳಲಿದೆ.

Read More

ಮಡಿಕೇರಿ : ಕೊಡಗು ಜಿಲ್ಲೆಯ ಸಾಹಿತಿಗಳು ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರೂ ಆದ ಶ್ರೀಮತಿ ಹಂಚೇಟಿರ ಫ್ಯಾನ್ಸಿ ಮುತ್ತಣ್ಣ ಇವರು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ತಮ್ಮ ಮಾವ ಮತ್ತು ಅತ್ತೆಯವರಾದ ದಿ. ಹಂಚೇಟಿರ ಕುಟ್ಟಪ್ಪ ಮತ್ತು ಕಾಮವ್ವ ದಂಪತಿಗಳ ಜ್ಞಾಪಕಾರ್ಥ ರೂ.50,000/-ಗಳ ದತ್ತಿನಿಧಿಯನ್ನು ದಿನಾಂಕ 24 ಆಗಸ್ಟ್ 2024ರಂದು ಸ್ಥಾಪಿಸಿರುತ್ತಾರೆ. ದತ್ತಿಯ ಆಶಯವು – 1. ಕೊಡಗಿನ ಜಾನಪದ ಪ್ರಕಾರಗಳ ಹಿನ್ನೆಲೆ, ಹಾಡು, ಕುಣಿತಗಳ ಕುರಿತು ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಏರ್ಪಡಿಸುವುದು. 2. ಕೊಡಗಿನ ಒಂದು ಪದವಿ ಕಾಲೇಜಿನಿಂದ ಒರ್ವ ವಿದ್ಯಾರ್ಥಿಗೆ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ. 3. ಕೊಡಗಿನ ಜಾನಪದ ಕುರಿತು ಉಪನ್ಯಾಸ ಏರ್ಪಡಿಸುವುದು. ದತ್ತಿಯ ಮೊತ್ತದ ಚೆಕ್ ಅನ್ನು ಜಿಲ್ಲಾ ಕ.ಸಾ.ಪ.ದ ಮಾಜಿ ಅಧ್ಯಕ್ಷರಾದ ಟಿ.ಪಿ. ರಮೇಶ್ ಇವರು ಮೂರ್ನಾಡು ಹೋಬಳಿ ಕ.ಸಾ.ಪ.ದ ಅಧ್ಯಕ್ಷರಾದ ಶ್ರೀಮತಿ ಈರಮಂಡ ಹರಿಣಿ ವಿಜಯ್, ಸದಸ್ಯರಾದ ಬೊಳ್ಳಜೀರ ಅಯ್ಯಪ್ಪ ಮತ್ತಿತರ ಸಮ್ಮುಖದಲ್ಲಿ ಸ್ವೀಕರಿಸಿದ್ದಾರೆ…

Read More