Author: roovari

ಬೆಂಗಳೂರು : ಕರ್ಣಾನಂದ ಮಧುರಗಾನಕ್ಕೆ ಭಾಷೆ -ಎಲ್ಲೆಗಳ ಹಂಗಿಲ್ಲ. ಸುಸ್ವರ ಗಾನಾಮೃತ ಪ್ರತಿ ಹೃದಯಗಳ ತಂತಿ ಮೀಟಿ ರಸಾಸ್ವಾದನೆಗೆ ಅನುವು ಮಾಡಿಕೊಡುತ್ತದೆ, ಮಧುರಾನುಭೂತಿಯನ್ನು ಉಂಟು ಮಾಡುತ್ತದೆ. ಸಂಗೀತ ಎಂದೂ ನವನವೋನ್ಮೇಷಶಾಲಿನಿಯಾದ್ದರಿಂದ ಕಲ್ಲನ್ನೂ ಕರಗಿಸಿಬಿಡುವ ಅಗಾಧ ಶಕ್ತಿಯನ್ನು ಹೊಂದಿರುವುದರಿಂದ ಸಂಗೀತಕ್ಕೆ ಸೋಲದ ಮನಸ್ಸಿಲ್ಲ. ಇಂಥ ನಿತ್ಯ ನೂತನ ಉಲ್ಲಾಸಿತ ಸಂಗೀತ ಕಾರ್ಯಕ್ರಮವೊಂದು ಈ ಉದ್ಯಾನ ನಗರಿಯ ಕಲಾರಸಿಕರ ಮನತಣಿಸಲು ಬಹು ಅಚ್ಚುಕಟ್ಟಾಗಿ ರೂಪುಗೊಂಡಿದೆ. ದಿನಾಂಕ 25-01-2024ರ ಗುರುವಾರದಂದು ಸಂಜೆ ಘಂಟೆ 6.00ರಿಂದ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ‘ಅಶ್ವಗಾನ’ ಸಂಸ್ಥೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಯುವ ಗಾಯಕರಾದ ಭಾರ್ಗವ್ ಹೆಚ್.ಸಿ. ಮತ್ತು ಮೋಹಿತ್ ಪಿ. ಹಾಗೂ ಇನಿದನಿಯ ಸಾಕ್ಷಿ ಜಗದೀಶಳ ರೋಮಾಂಚಕ ನಾದಲೀಲೆಯ ‘ಆರಂಭ’ ಸಂಗೀತ ಕಾರ್ಯಕ್ರಮ ಅನಾವರಣಗೊಳ್ಳಲಿದೆ. ಯುವಕದ್ವಯರಾದ ಭಾರ್ಗವ್ ಹೆಚ್.ಸಿ. ಮತ್ತು ಮೋಹಿತ್ ಪಿ. ಹಾಗೂ ತರುಣಿ ಸಾಕ್ಷಿ ಈ ಮೂವರೂ ಪ್ರತಿಭಾನ್ವಿತ ಗಾಯಕರು. ಇನಿದನಿಯ ನಿನಾದವನ್ನು ಹೊರಹೊಮ್ಮಿಸುವ ತಾಜಾ ಪ್ರತಿಭೆ ಕು. ಸಾಕ್ಷೀ ಜಗದೀಶ್, ಗೀತೆಯ ಅಂತರಾಳದ ಭಾವವನ್ನು ಆವಿರ್ಭವಿಸಿಕೊಂಡು…

Read More

ಬೆಂಗಳೂರು : ನಾಟಕ ಬೆಂಗಳೂರು 16ನೇ ವರ್ಷದ ರಂಗ ಸಂಭ್ರಮದ ಹಿನ್ನೆಲೆಯಲ್ಲಿ ಕಲಾಗಂಗೋತ್ರಿ ತಂಡ ರಾಜ್ಯಮಟ್ಟದ ನಾಟಕ ರಚನಾ ಸ್ಪರ್ಧೆ ಏರ್ಪಡಿಸಿದ್ದು ನಾಟಕಗಳನ್ನು ಆಹ್ವಾನಿಸಿದೆ. ಸಾಮಾನ್ಯ ವಿಭಾಗದಲ್ಲಿ ಮೂರು ನಾಟಕಗಳು ಹಾಗೂ ವಿದ್ಯಾರ್ಥಿ ವಿಭಾಗದಲ್ಲಿ ಮೂರು ನಾಟಕಗಳಿಗೆ ಪ್ರಶಸ್ತಿ ಹಾಗೂ ನಗದು ಪುರಸ್ಕಾರಗಳನ್ನು ನೀಡಲಾಗುವುದು. ಸಾಮಾನ್ಯ ವಿಭಾಗದಲ್ಲಿ ಮೂರು ನಾಟಕಗಳು ಸ್ವರಚಿತ ನಾಟಕಗಳಾಗಿರಬೇಕು. ವಿದ್ಯಾರ್ಥಿ ವಿಭಾಗದಲ್ಲಿ ಎರಡು ಸ್ವರಚಿತ ಹಾಗೂ ಒಂದು ಕನ್ನಡಕ್ಕೆ ರೂಪಾಂತರವಾಗಿರಬೇಕು. ನಾಟಕಗಳನ್ನು ಕಳುಹಿಸಲು 2024 ಫೆಬ್ರವರಿ 27 ಕಡೆಯ ದಿನಾಂಕವಾಗಿದೆ. ಆಸಕ್ತರು ಡಿಟಿಪಿ ಮಾಡಿದ ಇಲ್ಲವೇ ಸ್ಪಷ್ಟವಾಗಿ ಹಸ್ತಾಕ್ಷರದಲ್ಲಿ ಬರೆದ ಮೂರು ಪ್ರತಿಗಳನ್ನು ನಂ.263, 12ನೇ ಎ ಮೇನ್, 6ನೇ ಬ್ಲಾಕ್, ರಾಜಾಜಿನಗರ-560010 ಇಲ್ಲಿಗೆ ಕಳುಹಿಸಬೇಕು. ಆಯ್ಕೆಯಾದ ನಾಟಕಗಳಿಗೆ 2024ರ ಮಾರ್ಚ್ 27ರಂದು ವಿಶ್ವರಂಗಭೂಮಿ ದಿನಾಚರಣೆಯಂದು ಪ್ರಶಸ್ತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಮೊ. 9620623344 ಅಥವಾ 8217735669ಗೆ ಕರೆ ಮಾಡಬಹುದು.

Read More

ಉಡುಪಿ : ಭಾರತೀಯ ಸನಾತನ ದಿವ್ಯಾತಿದಿವ್ಯ ಕ್ಷೇತ್ರವಾದ ಉಡುಪಿಯಲ್ಲಿ ದಿನಾಂಕ 15-01-2024ರಂದು ನವ ನೂತನ ಸಂಕೀರ್ತನ ಮಂದಿರ ‘ಅಭಿರಾಮ ಧಾಮ’ ಲೋಕಾರ್ಪಣೆಗೊಂಡಿದೆ. ಬೆಂಗಳೂರಿನ ಹಿರಿಯ ಪತ್ರಕರ್ತರೂ, ಸಾಂಸ್ಕ್ರತಿಕ ಚಿಂತಕರೂ ಆದ ಪರ್ಲತ್ತಾಯ ಡಾ. ಸುದರ್ಶನ ಭಾರತೀಯ ಉರುಫ್ ವೆಂಕಟ ವಿಠ್ಠಲ ಸುಗುಣದಾಸರು ತಮ್ಮ ಸುಪುತ್ರ ಸ್ವರಸಾಮ್ರಾಟ್ – ವಿದ್ವಾನ್ ಅಭಿರಾಮ್ ಭರತವಂಶಿಯವರ ಸಂಗೀತ ಸಾಧನೆಯನ್ನು ಅಮರಗೊಳಿಸುವಲ್ಲಿ ಇದು ಮಹತ್ತರ ಹೆಜ್ಜೆ ಎಂದು ‘ಅಭಿರಾಮಧಾಮ’ವನ್ನು ಜ್ಯೋತಿ ಪ್ರಜ್ವಲಿಸಿ ಉದ್ಘಾಟಿಸಿದ ಕಾಣಿಯೂರು ಮಠದ ಸ್ವಾಮೀಜಿ ಶ್ರೀ ಶ್ರೀ ಶ್ರೀ ವಿದ್ಯಾ ವಲ್ಲಭ ತೀರ್ಥರು ಅಶೀರ್ವದಿಸಿದರು. ಸುಮಾರು ಇನ್ನೂರು -ಮುನ್ನೂರು ಮಂದಿ ಭಗವದ್ಭಕ್ತರು, ಭಜನಾಕಾರರು ಈ ಸುಸಂಧರ್ಭದಲ್ಲಿ ಪಾರಾಯಣ, ಭಜನೆಗಳಲ್ಲಿ ‘ಅಭಿರಾಮಧಾಮ’ದಲ್ಲಿ ತೊಡಗಿಕೊಂಡರು. ಸಮಾಜದ ಎಲ್ಲಾ ವರ್ಗದ 8-18 ವರ್ಷದ ಮಕ್ಕಳಿಗೆ ಸಂಗೀತ, ನೃತ್ಯ, ಗಮಕ, ಭಜನೆ, ಯೋಗ, ಧ್ಯಾನ, ಗೀತಾಭಿಯಾನ ಸುಜ್ಞಾನ ದೊರಕಿಸಿ ಕೊಡುವುದೇ ಅಭಿರಾಮ ಧಾಮದ ಧ್ಯೇಯೋದ್ದೇಶ ಎಂದು ಸಂಸ್ಥಾಪಕ – ಕಾರ್ಯದರ್ಶಿ ವಿದುಷಿ ಸುಶ್ಮಾ ಸುದರ್ಶನ್ ವಿವರಿಸಿದರು. ಸಂಜೆಗೆ ನೂರಾರು ಭಕ್ತರಿಂದ…

Read More

ಮಂಗಳೂರು : ಸುರತ್ಕಲ್ ತಡಂಬೈಲ್ ಇಲ್ಲಿರುವ ಶ್ರೀ ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿ ಇದರ ವಾರ್ಷಿಕೋತ್ಸವ ಹಾಗೂ ಒಂಭತ್ತನೇ ವರ್ಷದ ಮಹಿಳಾ ಯಕ್ಷಗಾನ ತಾಳಮದ್ದಳೆ ಸಪ್ತಾಹ 2024 ಕಾರ್ಯಕ್ರಮವು ದಿನಾಂಕ 29-01-2024ರಿಂದ 05-02-2024ರವರೆಗೆ ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ. ದಿನಾಂಕ 29-01-2024ರಂದು ಮಂಡಳಿಯ ಒಂಭತ್ತನೇ ವರ್ಷದ ವಾರ್ಷಿಕೋತ್ಸವವನ್ನು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ವೇದಮೂರ್ತಿ ಶ್ರೀ ಐ. ರಮಾನಂದ ಭಟ್ ಮತ್ತು ಶ್ರೀಮತಿ ಶಕುಂತಲಾ ರಮಾನಂದ ಭಟ್ ಇವರು ಜ್ಯೋತಿ ಬೆಳಗಿ ಉದ್ಘಾಟಿಸಲಿದ್ದಾರೆ. ಸುರತ್ಕಲ್ ಬಂಟರ ಸಂಘ ಅಧ್ಯಕ್ಷರಾದ ಶ್ರೀ ಲೋಕಯ್ಯ ಶೆಟ್ಟಿ ಮುಂಚೂರು ಇವರು ಅಧ್ಯಕ್ಷತೆ ವಹಿಸಲಿದ್ದು ಸುರತ್ಕಲ್ ಬಂಟರ ಸಂಘ ಮಹಿಳಾ ವೇದಿಕೆ ಅಧ್ಯಕ್ಷರಾದ ಶ್ರೀಮತಿ ಭವ್ಯಾ ಎ. ಶೆಟ್ಟಿ ಇವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಕವಿ ಮಧುಕುಮಾರ್ ಬೋಳಾರ ವಿರಚಿತ ‘ಸುದರ್ಶನ ವಿಜಯ’ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ದಿನಾಂಕ 30-01-2024ರಂದು ಸಪ್ತಾಹದ ಸಮಾರಂಭವನ್ನು ವಕೀಲರಾದ ಶ್ರೀ ಪಿ. ಸದಾಶಿವ…

Read More

ಕಾಸರಗೋಡು : ಬೆಂಗಳೂರಿನ ಶಂಪಾ ಪ್ರತಿಷ್ಠಾನ (ರಿ.) ಇದರ ವತಿಯಿಂದ ಪ್ರೊ. ಪಿ.ಎನ್. ಮೂಡಿತ್ತಾಯ ಇವರನ್ನು ಕುರಿತು ಡಾ. ಪ್ರಮೀಳಾ ಮಾಧವ್ ರಚಿಸಿದ ‘ಸದ್ದಿಲ್ಲದ ಸಾಧಕ’ ಕೃತಿ ಸಮರ್ಪಣೆ ಮತ್ತು ಅಭಿನಂದನಾ ಸಮಾರಂಭವು ದಿನಾಂಕ 26-01-2024ರಂದು ಬೆಳಿಗ್ಗೆ 10 ಗಂಟೆಗೆ ಬಾಯಿಕಟ್ಟೆ ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆಯಲಿದೆ. ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಪಿ. ಶ್ರೀಕೃಷ್ಣ ಭಟ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದು, ಕ.ಸಾ.ಪ. ಕಾಸರಗೋಡು ಗಡಿನಾಡ ಘಟಕದ ಅಧ್ಯಕ್ಷರಾದ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾಧ್ಯಾಪಕರಾದ ಡಾ. ಟಿ.ಎ.ಎನ್. ಖಂಡಿಗೆ ಕೃತಿ ಲೋಕಾರ್ಪಣೆ ಮಾಡಿ ಕೃತಿಯ ಕುರಿತು ಮಾತನಾಡಲಿದ್ದಾರೆ. ಪ್ರೊ. ಮೂಡಿತ್ತಾಯರ ಸಾಹಿತ್ಯ ಕೃತಿಗಳಲ್ಲಿ ಹಾಸ್ಯ ಸಾಹಿತ್ಯದ ಕುರಿತು ಕಲಾವಿದರಾದ ಶ್ರೀ ಬಾಲ ಮಧುರಕಾನನ, ಅನುವಾದದ ಬಗ್ಗೆ ಪ್ರಾಧ್ಯಾಪಕರಾದ ಡಾ. ಸವಿತಾ ಬೇವಿಂಜೆ, ಕಾವ್ಯದ ಬಗ್ಗೆ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಮೀನಾಕ್ಷಿ ರಾಮಚಂದ್ರ, ಸಂಶೋಧನೆ ಕುರಿತು ಶಿಕ್ಷಕರಾದ ಡಾ. ಸುಭಾಷ್ ಪಟ್ಟಾಜೆ ಮತ್ತು ಮಲಯಾಳ ಕೃತಿಗಳ…

Read More

ಬೊಳ್ಳಜಿರ ಬಿ. ಅಯ್ಯಪ್ಪ ಇವರು ಹುದಿಕೇರಿಯ ಬೊಳ್ಳಜಿರ ಬೋಪಯ್ಯ ಯಶೋದಾ ದಂಪತಿಗಳ ಪುತ್ರ. ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಬಿ.ಕಾಂ. ಪದವಿ ಪಡೆದಿದ್ದಾರೆ. ಇದೀಗ ಅದೇ ಕಾಲೇಜಿನಲ್ಲಿ ಕೊಡವ ಎಂ.ಎ. ವ್ಯಾಸಂಗ ಮಾಡುತ್ತಿದ್ದಾರೆ. ವೃತ್ತಿಯಿಂದ ಪತ್ರಕರ್ತರಾಗಿರುವ ಇವರು ಪ್ರವೃತ್ತಿಯಿಂದ ಓದು ಮತ್ತು ಬರಹದ ಜೊತೆಗೆ ಸಾಹಿತ್ಯದ ಸೇವೆ ಮತ್ತು ಸಮಾಜ ಸೇವೆಯನ್ನು ಹವ್ಯಾಸವನ್ನಾಗಿಸಿಕೊಂಡಿದ್ದಾರೆ. ಇವರ ಸಂಪಾದಕೀಯದಲ್ಲಿ ‘ಚಂಗೀರ’ (ಸಂಶೋಧನಾ ಕೃತಿ), ‘ಒತ್ತಜೋಡಿ’ (ಅಭಿನಂದನಾ ಗ್ರಂಥ) ಹಾಗೂ ಆಟ್‌ಪಾಟ್ ಪಡಿಪು (ಮಕ್ಕಳ ಕಲಿಕೆಗೆ ಒತ್ತುಕೊಡುವ ವಿಷಯಗಳ ಸಂಗ್ರಹ ಪುಸ್ತಕ) ಎಂಬ ಒಟ್ಟು ಮೂರು ಕೃತಿಗಳನ್ನು ಲೋಕಾರ್ಪಣೆ ಮಾಡಿದ್ದಾರೆ. ಕಳೆದ ಏಳು ವರ್ಷಗಳಿಂದ ಆಟ್ ಪಾಟ್ ಪಡಿಪು ಕಾರ್ಯಕ್ರಮ ಚಾಲನೆಯಲ್ಲಿದ್ದು ಸರಿ ಸುಮಾರು 4000 ಕೃತಿಗಳನ್ನು ಉಚಿತವಾಗಿ ಮಕ್ಕಳಿಗೆ ಮತ್ತು ಆಸಕ್ತರಿಗೆ ಹಂಚಿರುತ್ತಾರೆ. 2013ನೇ ಇಸವಿಯಿಂದ ಕೊಡವ ಮಕ್ಕಡ ಕೂಟ ಸಂಘಟನೆಯ ಸ್ಥಾಪಕ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಕೊಡವ, ಕನ್ನಡ ಎಂಬ ಭೇದ ಭಾವ ಇಲ್ಲದೆಯೇ ಸಾಹಿತ್ಯದ ಹಾಗೂ ಕೊಡಗಿಗೆ…

Read More

ಡಾ. ಗಜಾನನ ಶರ್ಮ 2019ರಲ್ಲಿ ಬರೆದ ‘ಪುನರ್ವಸು’ 544ಪುಟಗಳ ಬೃಹತ್ ಕಾದಂಬರಿ. ಜೋಗದ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ ವಿದ್ಯುತ್ ಶಕ್ತಿಯನ್ನು ಉತ್ಪಾದಿಸುವ ವಿಷಯವೇ ಕಥಾವಸ್ತು. ಮೈಸೂರಿನ ಕೃಷ್ಣರಾಜ ಒಡೆಯರ್, ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯರವರ ಕಾಲಘಟ್ಟದ ಬಹುದೊಡ್ಡ ಯೋಜನೆಯನ್ನು ಅನುಷ್ಠಾನಕ್ಕೆ ತಂದ ಭಗೀರಥ ಯತ್ನದ ಬಗೆಗೆ ಅತಿಸೂಕ್ಷ್ಮ ಆಗುಹೋಗುಗಳನ್ನು ಅವಲೋಕಿಸಿ ಅದ್ಭುತವಾಗಿ ಹೆಣೆದ ಲೇಖನ. ಶರಾವತಿ ಡ್ಯಾಮಿನೊಂದಿಗೆ ಕಟ್ಟಿದ ಅತ್ಯುತ್ತಮ ಕೊಡುಗೆಯನ್ನು ಕನ್ನಡ ಸಾಹಿತ್ಯಕ್ಕೆ ಕಟ್ಟಿಕೊಟ್ಟಿದ್ದಾರೆ ಲೇಖಕರು. ಇಂದು ನಾವು ಕಾಣುವ ಜೋಗ ಫಾಲ್, ಶರಾವತಿ ನದಿಯ ಸುತ್ತಮುತ್ತಲಿನ ಪರಿಸರ ಹಿಂದೊಮ್ಮೆ ಹೇಗೆ ಭಿನ್ನವಾಗಿತ್ತು ಅನ್ನುವುದನ್ನು ತೋರಿಸಿದ್ದಾರೆ. ಪ್ರಕೃತಿಯ ರಮ್ಯ ರಮಣೀಯ ಪರಿಸರ, ಆಧುನಿಕತೆ ಅವಶ್ಯಕತೆಗಳಿಗೆ ಒಳಪಟ್ಟು ಹೇಗೆ ಬದಲಾಗಿದೆ ಅನ್ನುವುದನ್ನು ಅಲ್ಲಿಯ ಸುತ್ತುಮುತ್ತಲಿನ ಹಳ್ಳಿಗಳಲ್ಲಿ ಆದ ಅನಿವಾರ್ಯ ಬದಲಾವಣೆ, ಜನರ ಬದುಕು ಅದಕ್ಕೆ ಹೊಂದಿಕೊಳ್ಳಲು ಮಾಡಿದ ಪ್ರಯತ್ನ ಓದಿದಾಗ ಸಂಕಟವಾಗುತ್ತದೆ. ಭೋರ್ಗರೆಯುವ ನದಿಗಳಿಗೆ ತಡೆ ನಿರ್ಮಸಿ, ನೀರು ಸಂಗ್ರಹಿಸಿ ವಿದ್ಯುತ್ ಶಕ್ತಿ ಉತ್ಪಾದಿಸುವ ಬ್ರಹತ್ ಕಾರ್ಯಕ್ಕೆ ಬೇಕಾದ ಯೋಜನೆ, ಯಂತ್ರ,…

Read More

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ 18ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ 01-02-2024ರ ಗುರುವಾರ ಮತ್ತು 02-02-2024ರ ಶುಕ್ರವಾರದಂದು ನಡೆಯಲಿದ್ದು, ಈ ಸಮ್ಮೇಳನದಲ್ಲಿ ನಾಡಿನ ಹಿರಿಯ ಸಾಹಿತಿಗಳಲ್ಲಿ ಒಬ್ಬರಾದ ಡಾ. ಪದ್ಮಪ್ರಸಾದ್ ಅವರು ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಮಂಜುನಾಥ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಡಾ. ಪದ್ಮಪ್ರಸಾದ್ ಅವರ ಹೆಸರನ್ನು ಆಯ್ಕೆ ಮಾಡಲಾಯಿತು. ಜೈನ ಸಾಹಿತ್ಯ, ಜಾನಪದ, ಸೃಜನಶೀಲ ಸಾಹಿತ್ಯಕ್ಕೆ ಪದ್ಮ ಪ್ರಸಾದ್ ಅವರು ಅಪಾರ ಕೊಡುಗೆ ನೀಡಿದ್ದಾರೆ. ಸಭೆಯಲ್ಲಿ ವಿವಿಧ ತಾಲೂಕುಗಳ ಪ್ರತಿಭೆಗಳಿಗೆ ಸಮ್ಮೇಳನದಲ್ಲಿ ಅವಕಾಶ ನೀಡುವ ಕುರಿತು ಹಾಗೂ ಪ್ರತಿನಿಧಿಗಳ ನೋಂದಣಿ, ಗೋಷ್ಠಿಗಳ ರೂಪುರೇಷೆ ಕುರಿತು ಚರ್ಚಿಸಲಾಯಿತು. ಪ್ರತಿನಿಧಿಗಳಾಗಿ ಭಾಗವಹಿಸುವ ಎಲ್ಲರಿಗೂ ಓ.ಓ.ಡಿ. ಸೌಲಭ್ಯ ದೊರೆಯಲಿದೆ.

Read More

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸೆಕೆಂಡರಿ ಶಾಲೆಯಲ್ಲಿ ಕುಮಾರವ್ಯಾಸ ಜಯಂತಿ ಕಾರ್ಯಕ್ರಮವು ದಿನಾಂಕ 13.01.2024ರಂದು ನಡೆಯಿತು. ಮುಖ್ಯೋಪಾಧ್ಯಾಯರಾದ ಶ್ರೀ ಸುರೇಶ್ ಕೆ. ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕುಮಾರವ್ಯಾಸ ಭಾರತದ ಕರ್ಣ ಭೇದನದ ಗಮಕ ವಾಚನ ವ್ಯಾಖ್ಯಾನ ನಡೆಯಿತು. ಕುಮಾರಿ ನಂದನ ಮಾಲೆಂಕಿ ವಾಚನ ಮಾಡಿದರೆ, ದಕ್ಷಿಣ ಕನ್ನಡ ಜಿಲ್ಲಾ ಗಮಕ ಕಲಾ ಪರಿಷತ್ ಅಧ್ಯಕ್ಷ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ವ್ಯಾಖ್ಯಾನವನ್ನು ಮಾಡಿದರು.

Read More

ಹೊಸಕೋಟೆ : ಹೊಸಕೋಟೆ ನಿಂಬೆಕಾಯಿಪುರದ ‘ಜನಪದರು ಸಾಂಸ್ಕೃತಿಕ ವೇದಿಕೆ’ಯ ತಿಂಗಳ ಎರಡನೇ ಶನಿವಾರದ ನಾಟಕ ಸರಣಿ ‘ರಂಗ ಮಾಲೆ’ ಇದರ 68ನೇ ಕಾರ್ಯಕ್ರಮವು ದಿನಾಂಕ 13-01-2024ರಂದು ನಡೆಯಿತು. ನಾಟಕ ಸರಣಿಯ ಈ ಕಾರ್ಯಕ್ರಮದಲ್ಲಿ ರಷ್ಯನ್ ಲೆeಖಕರಾದ ವಿ. ಯಝೋವ್ ಮತ್ತು ಚುಕ್ರೈ ರಚಿಸಿ, ಸುರೇಶ ಸಂಕೃತಿ ಕನ್ನಡಕ್ಕೆ ಅನುವಾದಿಸಿ, ನಿರ್ದೇಶಕ ಎಂ. ಸುರೇಶ್ ನಿರ್ದೇಶಿಸಿದ ‘ಯೋಧಾಂತರ್ಯ’ ನಾಟಕವನ್ನು ಹೊಸಕೋಟೆಯ ಜನಪದರು ಸಾಂಸ್ಕೃತಿಕ ವೇದಿಕೆಯ ಸದಸ್ಯರು ಪ್ರಸ್ತುತಪಡಿಸಿದರು. ನಾಟಕ ಪ್ರದರ್ಶನ ಉದ್ಘಾಟಿಸಿದ ವೇದಿಕೆಯ ಅಧ್ಯಕ್ಷ ಕೆ.ವಿ. ವೆಂಕಟರಮಣಪ್ಪ @ ಪಾಪಣ್ಣ ಕಾಟಂನಲ್ಲೂರು ಮಾತನಾಡಿ “ಇಂದು ಜಗತ್ತಿನ ಯುದ್ಧ ಮಾನವ ಕುಲದ ನಾಶದ ಮುನ್ನುಡಿ. ಶಾಂತಿ, ನೆಮ್ಮದಿ ಮತ್ತು ಬದುಕು ಕಲಕಿದ ಜಾಗತಿಕ ಯುದ್ಧಗಳ ಕಾಲದ ಮನಸ್ಥಿತಿಯ ಈ ನಾಟಕ ಎಂದಿಗೂ ಪ್ರಸ್ತುತ.” ಎಂದರು. ನಾಟಕ ಅನುವಾದಕ ಸುರೇಶ್ ಸಂಕೃತಿ ಹಾಗೂ ನಿರ್ದೇಶಕ ಎಂ. ಸುರೇಶ ಅವರನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು. ಪದಾಧಿಕಾರಿಗಳಾದ ಜಗದೀಶ ಕೆಂಗನಾಳ, ಸಿದ್ದೇಶ್ವರ ನನಸು ಮನೆ, ಚಲಪತಿ, ಅಗ್ರಹಾರ ಮುನಿರಾಜು…

Read More