Author: roovari

ಶ್ರೀರಾಜ್ ವಕ್ವಾಡಿ ಇವರು ಈಗಾಗಲೇ ಮೂರು ಕವನ ಸಂಕಲನ ಹಾಗೂ ಒಂದು ಕಥಾಸಂಕಲನವನ್ನು ಪ್ರಕಟಿಸಿದ್ದಾರೆ. ವೃತ್ತಿಯಿಂದ ಜರ್ನಲಿಸ್ಟ್ ಆಗಿರುವ ಇವರು ಪ್ರಸಕ್ತ ರಾಜಕೀಯದ ಕುರಿತು ಅಂಕಣಗಳನ್ನೂ ಬರೆಯುತ್ತಾರೆ. ‘ಅತ್ತ ನಕ್ಷತ್ರ’ ಇವರು ಇತ್ತೀಚೆಗೆ ಬಿಡುಗಡೆಯಾದ ಕಿರು ಕಾದಂಬರಿ. ಗದ್ಯಕ್ಕೂ ಮನಮುಟ್ಟುವ ಕಾವ್ಯಾತ್ಮಕ ಭಾಷೆಯನ್ನು ರೂಢಿಸಿಕೊಂಡದ್ದು ಇವರು ವಿಶಿಷ್ಟ ಶೈಲಿ. ಹೊಸ ಕಥೆಯೇನೂ ಇಲ್ಲಿಲ್ಲ. ಲಾಗಾಯ್ತಿನಿಂದ ಸಾಹಿತಿಗಳ ಮೂಲಕ ಚರ್ವಿತ ಚರ್ವಣಗೊಂಡ ಅದೇ ಹಳೆಯ ಪ್ರೀತಿ-ಪ್ರೇಮದ ಕಥೆ. ಪ್ರಸ್ತುತ ಆಧುನಿಕ ಸಂದರ್ಭಕ್ಕೆ ತಕ್ಕಂತೆ ಪ್ರೀತಿ ಪ್ರೇಮಗಳಿಗೆ ಇಂದಿನ ಯುವತಿಯರು ಯಾವ ರೀತಿ ಸ್ಪಂದಿಸುತ್ತಾರೆ ಅನ್ನುವುದನ್ನು ಬೇರೆ ಬೇರೆ ಸಂಬಂಧಗಳ ಚಿತ್ರಣದ ಮೂಲಕ ಶ್ರೀರಾಜ್ ಕಟ್ಟಿ ಕೊಡುತ್ತಾರೆ. ಕೃತಿಯ ಫೋಕಸ್ ಇರುವುದು ಅಭಿಜ್ಞಾ ಮತ್ತು ಸಾಕ್ಷಿಯರ ಮೇಲೆ. ಉಳಿದೆಲ್ಲರೂ ಅವರು ಸುತ್ತ ತಿರುಗುವ ಪಾತ್ರಗಳು. ಯಾವುದೇ ಫಲಾಪೇಕ್ಷೆಯಿಲ್ಲದೆ ಪ್ರೀತಿಗೋಸ್ಕರ ಪ್ರೀತಿ ಮಾಡುವ ಅಭಿಜ್ಞಾ-ಸಾಕ್ಷಿಯರ ಭವಿಷ್ಯದ ಕನಸುಗಳನ್ನು ಅಂತರ್ಜಾತಿ ಎಂಬ ಭೂತ ಹೊಸಕಿ ಹಾಕುತ್ತಿದೆ. ಹಿರಿಯರನ್ನು ಎದುರಿಸುವ ಶಕ್ತಿಯಿಲ್ಲದೆ ಸಾಕ್ಷಿ ಅವರು ಹುಡುಕಿದ ವ್ಯಕ್ತಿಯನ್ನು ತನ್ನ…

Read More

ಮಂಗಳೂರು : ಸಾರ್ವಜನಕ ಗ್ರಂಥಾಲಯ ಇಲಾಖೆಯ ಗ್ರಂಥಾಲಯಗಳಿಗೆ ಏಕಗವಾಕ್ಷಿ ಯೋಜನೆಯಡಿ 2023ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಕನ್ನಡ, ಇಂಗ್ಲೀಷ್ ಹಾಗೂ ಇತರ ಭಾರತೀಯ ಭಾಷೆಗಳ ಪುಸ್ತಕಗಳ ಆಯ್ಕೆಗೆ ಲೇಖಕರು, ಲೇಖಕ- ಪ್ರಕಾಶಕರು, ಪ್ರಕಾಶಕರು ಮತ್ತು ಪ್ರಕಟಣಾ ಸಂಸ್ಥೆಗಳಿಂದ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿಯನ್ನು ಜಿಲ್ಲಾ ನಗರ ಕೇಂದ್ರ ಗ್ರಂಥಾಲಯ, ಮಂಗಳೂರು ಕಚೇರಿಯಿಂದ ಪಡೆದು ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ರಸ್ತೆ, ಬೆಂಗಳೂರು-560001 ಇಲ್ಲಿಗೆ ದಿನಾಂಕ 05-02-2024ರ ಒಳಗೆ ಸಲ್ಲಿಸಬೇಕು ಎಂದು ಮುಖ್ಯ ಗ್ರಂಥಾಲಯಾಧಿಕಾರಿ ತಿಳಿಸಿದ್ದಾರೆ.

Read More

ಬೆಂಗಳೂರು : ‘ಸಂಜಲಿ ಸೆಂಟರ್ ಫಾರ್ ಒಡಿಸ್ಸಿ ಡ್ಯಾನ್ಸ್’ ಖ್ಯಾತ ನೃತ್ಯಶಾಲೆಯ ಅಂತರರಾಷ್ಟ್ರೀಯ ಒಡಿಸ್ಸಿ ನೃತ್ಯಕಲಾವಿದೆ ಹಾಗೂ ನೃತ್ಯಾಚಾರ್ಯ ಶರ್ಮಿಳಾ ಮುಖರ್ಜಿಯವರ ನುರಿತ ಗರಡಿಯಲ್ಲಿ ದಶಕದ ಕಾಲ ನೃತ್ಯಶಿಕ್ಷಣ ಪಡೆದ ಉದಯೋನ್ಮುಖ ನೃತ್ಯ ಕಲಾವಿದೆಯರಾದ ಶ್ರೇಯಾನ್ಷಿ ದಾಸ್ ಮತ್ತು ಜಾನ್ವಿ ಮುದುಳಿ ಪ್ರತಿಭಾವಂತ ಶಿಷ್ಯರು. ನಾಡಿನಾದ್ಯಂತ ವಿವಿಧ ನೃತ್ಯೋತ್ಸವಗಳಲ್ಲಿ ನರ್ತಿಸಿರುವ ಉಭಯ ಕಲಾವಿದೆಯರು, ಅನೇಕ ನೃತ್ಯ ಕಾರ್ಯಾಗಾರಗಳಲ್ಲಿ ಪಾಲ್ಗೊಂಡು, ಸಂಜಲಿ ನೃತ್ಯಶಾಲೆ ಆಯೋಜಿಸಿದ ಎಲ್ಲಾ ನೃತ್ಯರೂಪಕಗಳಲ್ಲಿ ಭಾಗವಹಿಸಿ ಮೆಚ್ಚುಗೆ ಪಡೆದವರು. ಇಬ್ಬರೂ ಚಂದೀಘಡದ ಪ್ರಾಚೀನ್ ಕಲಾಕೇಂದ್ರದ ‘ಸಂಗೀತ್ ಭೂಷಣ್ ಫೈನಲ್’ ನೃತ್ಯಪರೀಕ್ಷೆಯನ್ನು ಸಂಪೂರ್ಣಗೊಳಿಸಿದ್ದಾರೆ. ಈ ಇಬ್ಬರು ಕಲಾವಿದೆಯರು ತಮ್ಮ ಒಡಿಸ್ಸಿ ‘ರಂಗಪ್ರವೇಶ’ವನ್ನು ದಿನಾಂಕ 19-01-2024ರ ಶುಕ್ರವಾರದಂದು ನೆರವೇರಿಸಿಕೊಂಡರು. ಶ್ರೀಮತಿ ಸಂಗೀತ ದಾಸ್ ಮತ್ತು ಶ್ರೀ ಸಂಜಯ್ ದಾಸ್ ಪುತ್ರಿಯಾದ ಕು. ಶ್ರೇಯಾನ್ಷಿ ದಾಸ್ ತನ್ನ 6 ನೆಯ ಎಳವೆಯಿಂದಲೇ ನೃತ್ಯಾಸಕ್ತಿ ಹೊಂದಿದ್ದು, ಗುರು ಶರ್ಮಿಳಾ ಮುಖರ್ಜಿ ಅವರಲ್ಲಿ ಕಳೆದ 11 ವರ್ಷಗಳಿಂದ ಒಡಿಸ್ಸಿ ನೃತ್ಯವನ್ನು ಕಲಿಯುತ್ತಿದ್ದಾರೆ. ಜೊತೆಗೆ ಇವರು, ಕಥಕ್…

Read More

ಮಂಗಳೂರು : ಜನವರಿ 19, 20 ಮತ್ತು 21ರಂದು ಮೂರು ದಿನಗಳ ಕಾಲ ಮಂಗಳೂರಿನ ಟಿ. ಎಂ. ಎ. ಪೈ ಇಂಟರ್‌ನ್ಯಾಷನಲ್ ಕನ್ವೆನ್ನನ್ ಸೆಂಟರ್‌ನಲ್ಲಿ ನಡೆಯಲಿರುವ ಮಂಗಳೂರು ಲಿಟ್ ಫೆಸ್ಟ್‌ನ ಆರನೇ ಆವೃತ್ತಿಯು ದಿನಾಂಕ 19-01-2024ರ ಸಂಜೆ 6.00 ಗಂಟೆಗೆ ಅದ್ಧೂರಿಯಾಗಿ ಶುಭಾರಂಭಗೊಂಡಿತು. ಪಲ್ಲಕ್ಕಿ ಮೆರವಣಿಗೆಯೊಂದಿಗೆ ಪ್ರಾರಂಭಗೊಂಡ 6ನೇ ವರ್ಷದ ‘ಮಂಗಳೂರು ಲಿಟ್ ಫೆಸ್ಟ್‌’ಅನ್ನು ಚಿಂತಕ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಲಕ್ಷ್ಮೀಶ ತೋಳ್ಪಾಡಿ ಉದ್ಘಾಟಿಸಿ ಮಾತನಾಡಿ “ಸಾಹಿತ್ಯವೆಂದರೆ ಸ್ವಾಧ್ಯಾಯ, ಸಾಹಿತ್ಯದಲ್ಲಿ ಸಾಮಾನ್ಯವಾಗಿ ಬಳಸುವ ಪದ ಸೃಜನಶೀಲತೆ, ಸೃಜನಶೀಲತೆಯ ಹುಟ್ಟು ಇರುವುದು. ಆದರ್ಶ ಮತ್ತು ನೋವನ್ನು ಆಲಿಸುವ ಸಂವೇದನಾಶೀಲತೆಯ ಸಮ್ಮಿಲನದಲ್ಲಿ, ನಮ್ಮನ್ನು ಆಳುತ್ತಿರುವುದು ಯಾವುದೇ ಸರ್ಕಾರವಲ್ಲ, ಬದಲಾಗಿ ಭಾಷೆ. ಇದೇ ಶಾಂತಿಯನ್ನೂ ಕಟ್ಟುತ್ತದೆ.” ಎಂದರು. ವೇದಿಕೆಯಲ್ಲಿ ‘ಮಿಥಿಕ್ ಸೊಸೈಟಿ’ ಬೆಂಗಳೂರು ಇದರ ಗೌರವ ಕಾರ್ಯದರ್ಶಿಗಳಾದ ಎಸ್. ರವಿ ಮಾತನಾಡಿ “ಭಾರತದ ಪರಂಪರೆಯ ಗೌರವವನ್ನು ಎತ್ತಿ ಹಿಡಿಯುತ್ತಾ, ಈ ‘ಲಿಟ್ ಫೆಸ್ಟ್’ ಸಾಹಿತ್ಯ, ಕಲೆ, ಸಂಸ್ಕೃತಿಯ ಕುರಿತ ವಿಶೇಷ ಅರಿವು…

Read More

ಪುತ್ತೂರು : ‘ಬಹುವಚನಂ’ ವತಿಯಿಂದ ‘ಜನಪದ ತಾಳತಂಬೂರಿ’ ಕಾರ್ಯಕ್ರಮವು ದರ್ಬೆ, ವಿದ್ಯಾನಗರ, ಪದ್ಮಿನೀ ಸಭಾಭವನದಲ್ಲಿ ದಿನಾಂಕ 21-01-2024ರಂದು ಸಂಜೆ 4.30ಕ್ಕೆ ನಡೆಯಲಿದೆ. ಹಳೆಪುರ ಮಾದಶೆಟ್ಟಿ, ಗುರುಸಿದ್ಧ ಶೆಟ್ಟಿ ಮತ್ತು ಎಚ್.ಎಂ. ಸ್ವಾಮಿ ಇವರುಗಳು ತಾಳತಂಬೂರಿ ಪದಗಾಯನವನ್ನು ನಡೆಸಿಕೊಡಲಿದ್ದಾರೆ. ದಕ್ಷಿಣ ಕನ್ನಡದ ಪುತ್ತೂರಿನ ದರ್ಬೆಯ ವಿದ್ಯಾನಗರದಲ್ಲಿ ‘ಬಹುವಚನಂ’ ಎಂಬ ಸಂಸ್ಥೆಯು 2005ನೇ ಇಸವಿಯಲ್ಲಿ ಪ್ರಾರಂಭವಾಗಿ ನಿರತ ನಿರಂತ ಎಂಬ ಸಂಸ್ಥೆಯ ನಿಕಟ ಸಂಬಂಧವನ್ನು ಹೊಂದಿದ್ದು, ಪ್ರಾರಂಭದ ದಿನಗಳಲ್ಲಿ ರಾಮನವಮಿಯ ಆಚರಣೆಯ ಸಂದರ್ಭದಲ್ಲಿ ರಾಮನ ಕುರಿತಾದ ಉಪನ್ಯಾಸ ಸಂಗೀತ ಕಚೇರಿಗಳನ್ನು ಏರ್ಪಡಿಸುತ್ತಾ ಬಂದಿದೆ. ಸಭ್ಯ ಪ್ರೇಕ್ಷಕರನ್ನು ಸೃಷ್ಟಿ ಮಾಡುವ ಉದ್ದೇಶದೊಂದಿಗೆ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು, ಅಳಿದು ಹೋಗುತ್ತಿರುವ ಕಲಾಪರಂಪರೆಗಳನ್ನು ಪುನರುಜ್ಜೀವನಗೊಳಿಸುವ ಪ್ರಯತ್ನದಲ್ಲಿ ಈ ಸಂಸ್ಥೆ ಸಾಗಿದೆ. ಕೇವಲ ಸಾತ್ವಿಕ ಕಾರ್ಯಕ್ರಮಗಳನ್ನು ಮಾತ್ರ ಹಮ್ಮಿಕೊಳ್ಳುವ ಈ ಸಂಸ್ಥೆ ಸುಮನಸರು ನಡೆಸುವ ಯಾವುದೇ ಕಾರ್ಯಕ್ರಮಗಳಿಗೆ ಸಭಾಭವನವನ್ನು ಶನಿವಾರ ಆದಿತ್ಯವಾರದ ದಿನಗಳಲ್ಲಿ ಉಚಿತವಾಗಿ ನೀಡುತ್ತದೆ.

Read More

ಉಜಿರೆ : ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಉಜಿರೆ ಇದರ ರಜತ ಪರ್ವ ಸರಣಿಯ ಸಮಾಪನೆಯ ಪ್ರಯುಕ್ತ, ಬಲಿಪ ನಾರಾಯಣ ಭಾಗವತರ ಸ್ಮೃತಿ ಗೌರವಾರ್ಥ ತೆಂಕುತಿಟ್ಟು ಯಕ್ಷಗಾನ ಭಾಗವತಿಕೆ ಸ್ಪರ್ಧೆ ಆಯೋಜಿಸಲಾಗಿದೆ. ರಜತಪರ್ವ ಸರಣಿಯಲ್ಲಿ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ 150 ತಾಳಮದ್ದಳೆಗಳನ್ನು ಸಂಘಟಿಸಲಾಗಿದ್ದು, ಸಮಾರೋಪ ಸಮಾರಂಭದ ಪ್ರಯುಕ್ತ, ತೆಂಕುತಿಟ್ಟು ಭಾಗವತಿಕೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ, ಪದವಿ ಪೂರ್ವ ಕಾಲೇಜು ವಿಭಾಗ ಹಾಗೂ ಪದವಿ, ಸ್ನಾತಕೋತ್ತರ ಪದವಿ ವಿಭಾಗಗಳಲ್ಲಿ ಪ್ರತ್ಯೇಕ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ನೀಡಲಾಗುವುದು. ಎಲ್ಲಾ ಸ್ಪರ್ಧಾಳುಗಳಿಗೆ ಪ್ರಯಾಣ ವೆಚ್ಚ ಭರಿಸಲಾಗುವುದು. ಒಬ್ಬ ಸ್ಪರ್ಧಾಳುವಿಗೆ 10 ನಿಮಿಷಗಳ ಕಾಲಾವಕಾಶ ಇದ್ದು, ಹಿಮ್ಮೇಳ ಪರಿಕರ ಹಾಗೂ ನುರಿತ ಹಿಮ್ಮೇಳ ವಾದಕರನ್ನು ಪ್ರತಿಷ್ಠಾನದ ವತಿಯಿಂದ ಒದಗಿಸಲಾಗುವುದು. ಒಡ್ಡೋಲಗದ ಪದ್ಯ, ಶೃಂಗಾರ, ವೀರರಸದ ಹಾಡುಗಳನ್ನು ಆಯ್ಕೆ ಮಾಡುವುದು ಕಡ್ಡಾಯ. ಕೊಟ್ಟ ಸಮಯದ ಮಿತಿಯಲ್ಲಿ ಎಷ್ಟು ಹಾಡುಗಳನ್ನಾದರೂ ಹಾಡಬಹುದು. ಪೌರಾಣಿಕ ಪ್ರಸಂಗಗಳ ಹಾಡುಗಳನ್ನೇ ಆಯ್ದುಕೊಳ್ಳಬೇಕು. ಸ್ಪರ್ಧಾಳುಗಳು ಕಾಲೇಜಿನಲ್ಲಿ ವಿದ್ಯಾಭ್ಯಾಸ…

Read More

ವೈಕಂ ಮುಹಮ್ಮದ್ ಬಷೀರ್ ಇವರ ‘ಶಬ್ದಗಳು’ ಮತ್ತು ‘ಸಾವಿನ ನೆರಳಿನಲ್ಲಿ’ ಎಂಬ ಎರಡು ಅನನ್ಯ ಕಾದಂಬರಿಗಳನ್ನು ಪಾರ್ವತಿ ಜಿ. ಐತಾಳ್ ಮಲೆಯಾಳಂನಿಂದ ಕನ್ನಡಕ್ಕೆ ಅನುವಾದಿಸಿದ್ದಾರೆ. ಈ ಕಾದಂಬರಿಗಳ ಭಾಷೆ ಮತ್ತು ಶೈಲಿ ಅನುವಾದಕರಿಗೊಂದು ಸವಾಲು.‌ ಅನೇಕ ಅಮೂರ್ತ ವಿವರಗಳು ಮತ್ತು ವಿಚಾರಗಳು, ಕಲ್ಪನೆಗಳು ಕಾವ್ಯಾತ್ಮಕ ರೂಪ ಕಲಾತ್ಮಕವಾಗಿ ನವ್ಯ ರೂಪಕಗಳಿಂದ ಮುಪ್ಪುರಿಗೊಂಡಿವೆ. ಮನುಷ್ಯನ ಸುಪ್ತಪ್ರಜ್ಞೆಯಲ್ಲಿರಬಹುದಾದ ಅನೂಹ್ಯ ಅತೀತದ ರೂಪಕಗಳು ಕೃತಿಗಳಿಗೆ ಸಂಕೀರ್ಣತೆಯನ್ನು ತಂದುಕೊಟ್ಟಿವೆ. ಕಾಫ್ಕಾ ಅಥವಾ ದೊಸ್ತೊವಸ್ಕಿ ಬರೆಯುವ ಅಧೋ ಲೋಕದ ಚಿತ್ರಣಗಳಿದ್ದಂತೆಯೇ ಈ ಕಾದಂಬರಿಗಳಲ್ಲಿ ಕೂಡ ಅತೀತದ ಭೀಭತ್ಸ ಚಿತ್ರಣಗಳಿವೆ. ಆ ಚಿತ್ರಣಗಳು ಮನುಷ್ಯನ ಒಳ ವ್ಯಕ್ತಿತ್ವಗಳ ಚಿತ್ರಣಗಳೇ ಆಗಿವೆ‌. ಮಾರ್ಕ್ವಿಸ್ ‘ಒಂದು ನೂರು ವರ್ಷಗಳ ಏಕಾಂತ’ದಲ್ಲಿ ಮಾನವನ ವಿಕಾಸವನ್ನು ಚಿತ್ರಿಸಿದಂತೆ ಬಷೀರ್ ಇಡೀ ಬ್ರಹ್ಮಾಂಡದ ಉಗಮ ಅಥವಾ ಸೃಷ್ಟಿಯಿಂದ ಹಿಡಿದು ಈ ಆಧುನಿಕ ಯುಗದವರೆಗಿನ ಏಕಾಂತವನ್ನು ಚಿತ್ರಿಸುತ್ತಾರೆ‌. ಕಾದಂಬರಿಯಲ್ಲಿ ಕಥಾನಕಕ್ಕಿಂತ ಕಥಾನಾಯಕನ ಮನೋವಿಕಾರಗಳಿಗೆ (ಆ ವಿಕಾರಗಳು ಎಲ್ಲ ಮನುಷ್ಯರಲ್ಲಿ ಇರುವಂತವೆ) ಶಬ್ದಗಳನ್ನು ಟಂಕಿಸುತ್ತಾರೆ. ಅಸಂಗತ ಎಂದೆನಿಸಿದರೂ ಕಥಾನಕದಲ್ಲಿ ಸಾಂಗತ್ಯವಿದೆ‌.…

Read More

ಕುಂದಾಪುರ : ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ-ಐರೋಡಿ ಸಂಸ್ಥೆಯ ಐವತ್ತರ ಸಂಭ್ರಮಾಚರಣೆಯ ಸಂದರ್ಭದಲ್ಲಿ ಹಮ್ಮಿಕೊಂಡ ‘ಯಕ್ಷ ಸಪ್ತೋತ್ಸವ – 2024’ ಇದರ ಉದ್ಘಾಟನಾ ಸಮಾರಂಭವು ದಿನಾಂಕ 01-01-2024 ರಂದು ಗುಂಡ್ಮಿ-ಸಾಲಿಗ್ರಾಮದ ಸದಾನಂದ ರಂಗ ಮಂಟಪದಲ್ಲಿ ನಡೆಯಿತು. ಕಲಾಕೇಂದ್ರದ ಅಧ್ಯಕ್ಷರಾದ ಆನಂದ ಸಿ. ಕುಂದರ್ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿಯ ತಲ್ಲೂರು ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ “ಇಂದಿನ ಯುವ ಪೀಳಿಗೆ ಹಿರಿಯರನ್ನು ಗೌರವಿಸುವಂತಾಗಲು, ತಂದೆ-ತಾಯಿಯರ ಮಾತುಗಳನ್ನು ಪಾಲಿಸುವಂತಾಗಲು ರಾಮಾಯಣದ ನೈತಿಕ ಮೌಲ್ಯಗಳನ್ನು ಅವರಿಗೆ ದಾಟಿಸುವ ಕೆಲಸವಾಗಬೇಕು. ಯಕ್ಷಗಾನದಿಂದ ಈ ಕಾರ್ಯವನ್ನು ಮಾಡಲು ಸಾಧ್ಯವಿದೆ. ಇಂದು ವೃದ್ಧಾಶ್ರಮಗಳ ಸಂಖ್ಯೆ ಹೆಚ್ಚುತ್ತಿರುವುದು, ವೃದ್ಧ ತಂದೆತಾಯಿ ವೃದ್ಧಾಶ್ರಮಗಳನ್ನು ಸೇರುತ್ತಿರುವುದನ್ನು ಕಂಡಾಗ ದಿಗಿಲು ಹುಟ್ಟುತ್ತದೆ. ದುಡ್ಡಿನಿಂದ ಮಾನವ ಸಂಬಂಧಗಳು ಬಲಗೊಳ್ಳಲಾರವು ಎಂಬುದನ್ನು ಈ ಘಟನೆಗಳು ಸಾಬೀತುಪಡಿಸುತ್ತವೆ. ಇಂದಿನ ಯುವ ಜನರಿಗೆ ವೃದ್ಧರೇಕೆ ಬೇಡವಾಗಿದ್ಧಾರೆ ಎಂಬುದನ್ನು ವಿಮರ್ಶಿಸಿದಾಗ, ಅವರಲ್ಲಿ ಸಂಸ್ಕಾರ ಹಾಗೂ ನೈತಿಕ ಮೌಲ್ಯಗಳ ಅಧಃಪತನ ಕಂಡು ಬರುತ್ತಿದೆ. ಈ…

Read More

ಕಾಸರಗೋಡು : ಕಳೆದ 19 ವರ್ಷಗಳಿಂದ ಕಲೆ ಹಾಗೂ ಸಾಂಸ್ಕೃತಿಕ ಸಂಘಟನೆಯಾಗಿ ಕಾರ್ಯ ನಿರ್ವಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ನೃತ್ಯೋಪಾಸನಾ ಕಲಾ ಕೇಂದ್ರವು 20ನೇ ವರ್ಷಕ್ಕೆ ಪಾದಾರ್ಪಣೆಯಿಡುವ ಸಂಭ್ರಮದಲ್ಲಿ ‘ನೃತ್ಯೋಪಾಸನಾ ಕಲಾ ಅಕಾಡೆಮಿ’ ಪುತ್ತೂರು, ದ.ಕ. ಎಂದು ಪುನರ್ ನಾಮಕರಣಗೊಂಡಿದೆ. ನೃತ್ಯೋಪಾಸನಾ ಕಲಾ ಅಕಾಡೆಮಿ ಎಂಬ ಹೆಸರಿನಲ್ಲಿ ಮುಂದಿನ ದಿನಗಳಲ್ಲಿ ಕಲೆ, ಸಂಸ್ಕೃತಿಯ ರಕ್ಷಣೆ ಹಾಗೂ ಬೆಳವಣಿಗೆಗೆ ಇನ್ನಷ್ಟು ಹೊಸ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಿದೆ. ಈ ಹಿನ್ನೆಲೆಯಲ್ಲಿ ದಿನಾಂಕ 10-01-2024ನೇ ಬುಧವಾರದಂದು ನೃತ್ಯೋಪಾಸನಾ ಕಲಾ ಅಕಾಡೆಮಿ ಇದರ ಲೋಗೋವನ್ನು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳು ಶ್ರೀ ಎಡನೀರು ಮಠದಲ್ಲಿ ಅನಾವರಣಗೊಳಿಸಿ ಅನುಗ್ರಹಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು “ನೃತ್ಯೋಪಾಸನಾ ಕಲಾ ಅಕಾಡೆಮಿಯಿಂದ ಮತ್ತಷ್ಟು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಮೂಡಿಬರಲಿ.” ಎಂದು ಆಶೀರ್ವದಿಸಿದರು. ಈ ಸಂದರ್ಭ ಕಲಾ ಕೇಂದ್ರದ ಸಂಸ್ಥಾಪಕಿ, ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್ ಮತ್ತು ಪ್ರಧಾನ ಕಾರ್ಯದರ್ಶಿ ಆತ್ಮಭೂಷಣ್‌ ಉಪಸ್ಥಿತರಿದ್ದರು.

Read More

ಬೈಂದೂರು : ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಲಾವಣ್ಯ (ರಿ) ಬೈಂದೂರು ಹಾಗೂ ಸುರಭಿ (ರಿ) ಬೈಂದೂರು ಸಂಸ್ಥೆಗಳೊಂದಿಗೆ ಜಂಟಿಯಾಗಿ ಆಯೋಜಿಸಿದ ಕರ್ಣಾಟಕ ಸಂಭ್ರಮ 50 ‘ಸಾಂಸ್ಕೃತಿಕ ಸೌರಭ 2023-24’ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ ಗಮಕ ವಾಚನ ಕಾರ್ಯಕ್ರಮವು ದಿನಾಂಕ 04-01-2024ರಂದು ಬೈಂದೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಮೊಗೇರಿ ಗೋಪಾಲಕೃಷ್ಣ ಅಡಿಗ ವೇದಿಕೆಯಲ್ಲಿ ನೆರವೇರಿತು. ಅನುಭಾವಿ ಸಂತ ಕವಿ ಕನಕದಾಸರ ನಳ ಚರಿತ್ರೆಯ ಕಾರ್ಕೋಟಕ ದಂಶನ ಭಾಗದ ಕಥಾವಸ್ತುವನ್ನು ಆಯ್ದುಕೊಂಡಿದ್ದು, ಗಂಗೊಳ್ಳಿ ಸರಸ್ವತಿ ವಿದ್ಯಾಲಯದ ಕನ್ನಡ ಉಪನನ್ಯಾಸಕ ಸುಜಯೀಂದ್ರ ಹಂದೆ ಎಚ್. ಗಮಕ ವಾಚನ ಮಾಡಿ, ಉಡುಪಿ ಎಂ. ಜಿ. ಎಂ. ಕಾಲೇಜಿನ ಕನ್ನಡ ಉಪನ್ಯಾಸಕ ಕೋಟ ರಾಘವೇಂದ್ರ ತುಂಗ ವ್ಯಾಖ್ಯಾನ ನಡೆಸಿಕೊಟ್ಟರು. ಬೈಂದೂರು ವಿಧಾನ ಸಭಾ ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪೂರ್ಣಿಮಾ, ಪ್ರಾಂಶುಪಾಲ ಮಂಜುನಾಥ ಪಿ. ನಾಯ್ಕ್,…

Read More