Subscribe to Updates
Get the latest creative news from FooBar about art, design and business.
Author: roovari
ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಹಾಗೂ ಬೆಂಗಳೂರಿನ ಸಪ್ನ ಬುಕ್ ಹೌಸ್ನ ಸಹಯೋಗದಲ್ಲಿ ನಡೆದ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾದ ಡಾ. ಎಂ. ವೀರಪ್ಪ ಮೊಯಿಲಿಯವರ ‘ವಿಶ್ವಸಂಸ್ಕೃತಿ ಮಹಾಯಾನ’ – ಸಂಪುಟ-2, ಗದ್ಯ ಮಹಾಕಾವ್ಯ ಲೋಕಾರ್ಪಣೆ ಸಮಾರಂಭವು ದಿನಾಂಕ 12 ಜನವರಿ 2025ರಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾಗಿರಿ ಆವರಣದ ಡಾ. ವಿ.ಎಸ್. ಆಚಾರ್ಯ ಸಭಾಭವನದಲ್ಲಿ ಜರುಗಿತು. ಮಹಾಕಾವ್ಯವನ್ನು ಲೋಕಾರ್ಪಣೆಗೊಳಿಸಿದ ಮೈಸೂರು ವಿವಿಯ ನಿವೃತ್ತ ಆಂಗ್ಲ ಪ್ರಾಧ್ಯಪಕ ಹಾಗೂ ಖ್ಯಾತ ವಿಮರ್ಶಕ ಪ್ರೊ. ನಾಗಣ್ಣ ಇವರು ಮಾತನಾಡಿ “ಮೊಯಿಲಿಯವರ ಸಂಕಲ್ಪಕ್ಕೂ ಅದರ ಸಾಕ್ಷಾತ್ಕರಕ್ಕೂ ಅಂತರವೇ ಇರಲಿಲ್ಲ. ಇದಕ್ಕೆ ಮುಖ್ಯ ಕಾರಣ ಅವರು ಬರ್ಹಿಲೋಕದಲ್ಲಿ ಜನಕಲ್ಯಾಣದಲ್ಲಿ ತೊಡಗಿರುವಂತೆ, ಅಂತರಂಗದಲ್ಲಿ ಹಲವಾರು ವಿಚಾರಗಳಿಗೆ ಅಕ್ಷರ ರೂಪ ಕೊಡುವಲ್ಲಿ ಧ್ಯಾನಸ್ಥರಾಗಿರುತ್ತಾರೆ. ಇವರು ಅಪರೂಪದ ಚೈತನ್ಯವೇ ಸರಿ. ವೀರಪ್ಪ ಮೊಯಿಲಿಯವರ ‘ವಿಶ್ವಸಂಸ್ಕೃತಿ ಮಹಾಯಾನ’ದ ಹೋಲಿಕೆ ಏನಾದರೂ ಇದ್ದರೆ, ಅಮೇರಿಕಾದ ಇತಿಹಾಸತಜ್ಞ ವಿಲ್ ಡ್ಯೂರಾಂಟ್ ಬರೆದಿರುವ ‘ನಾಗರೀಕತೆಯ ಕಥೆ’ ಎನ್ನುವ 11…
ಪಡುಬಿದ್ರೆ : ಕಟೀಲು ಮೇಳದ ಭಾಗವತ ಅಂಡಾಲ ದೇವಿ ಪ್ರಸಾದ ಆಳ್ವ ಹಾಗೂ ಬಣ್ಣದ ವೇಷಧಾರಿ ಸುರೇಶ ಕುಪ್ಪೆಪದವು ಇವರಿಗೆ ಈ ವರ್ಷದ ‘ಪೂಲ ವಿಠ್ಠಲ ಶೆಟ್ಟಿ ಪ್ರಶಸ್ತಿ’ ಯನ್ನು ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಪಡುಬಿದ್ರೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ದಿನಾಂಕ 14 ಜನವರಿ 2025ರಂದು ನಡೆದ ಪಡುಬಿದ್ರೆ ಕಲ್ಲಟೆಗುತ್ತು ಮೂಲ ಕುಟುಂಬಸ್ಥರಾದ ರಾಧಾ ವಿಠ್ಠಲ ಶೆಟ್ಟಿ ಮತ್ತು ಮಕ್ಕಳು ಆಯೋಜಿಸಿದ ಶ್ರೀ ಕಟೀಲು ಮೇಳದ 28ನೇ ವರ್ಷದ ಸೇವೆ ಬಯಲಾಟದ ವೇದಿಕೆಯಲ್ಲಿ ವಿತರಿಸಲಾಯಿತು. ಸಮಾರಂಭದಲ್ಲಿ ಪರಾಧೀನವಾಗಿದ್ದ ಕಟೀಲು ಮೂಲ ಕುದುರನ್ನು ಶ್ರೀ ಕ್ಷೇತ್ರಕ್ಕೆ ಮರಳಿಸಿದ ದಾನಿಗಳಾದ ಪೂಲ ವಿಠ್ಠಲ ಶೆಟ್ಟಿ ಪರಿವಾರದ ಸೇವೆಯನ್ನು ಕಟೀಲು ಲಕ್ಷ್ಮೀ ನಾರಾಯಣ ಅಸ್ರಣ್ಣ ಸ್ಮರಿಸಿದರು. ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿದ ಕದ್ರಿ ನವನೀತ ಶೆಟ್ಟಿ ಮಾತನಾಡಿ “ಅಂಡಾಲ ದೇವೀ ಪ್ರಸಾದರು ಕಳೆದು ಮೂರುವರೆ ದಶಕಗಳಿಂದ ಯಕ್ಷಗಾನ ರಂಗದಲ್ಲಿ ಪ್ರಸಂಗ ರಚನೆ ಹಾಗೂ ಭಾಗವತಿಕೆಯಲ್ಲಿ ಪ್ರಬುದ್ಧತೆ ಮೆರೆದವರು. ತೆಂಕು ಹಾಗೂ ಬಡಗು ತಿಟ್ಟಿನ ಟೆಂಟ್…
ಧಾರವಾಡ : ಡಾ. ಪಂ. ಪುಟ್ಟರಾಜ ಸೇವಾ ಸಮಿತಿ (ರಿ.) ಇದರ ವತಿಯಿಂದ ‘ಹೆಸರಾಯಿತು ಕರ್ನಾಟಕ’ ಸುವರ್ಣ ಮಹೋತ್ಸವ ಪ್ರಯುಕ್ತ ಕವಿಗೋಷ್ಠಿ, ಕಾವ್ಯ ಗಾಯನ, ನೃತ್ಯ ನಮನ, ಸುವರ್ಣ ಸಿರಿ ಸನ್ಮಾನ ಸಮಾರಂಭವನ್ನು ದಿನಾಂಕ 19 ಜನವರಿ 2025 ರಂದು ಬೆಳಿಗ್ಗೆ 10-00 ಗಂಟೆಗೆ ಧಾರವಾಡದ ಮನ್ಸೂರು ಶ್ರೀ ರೇವಣಸಿದ್ಧೇಶ್ವರ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರೀ ರೇವಣಸಿದ್ಧೇಶ್ವರ ಮಠದ ಪೂಜ್ಯಶ್ರೀ ಡಾ. ಬಸವರಾಜ ದೇವರು ಇವರ ದಿವ್ಯ ಸಾನಿಧ್ಯದಲ್ಲಿ ಡಾ. ಪಂ. ಪುಟ್ಟರಾಜ ಸೇವಾ ಸಮಿತಿ ಇದರ ಅಧ್ಯಕ್ಷರಾದ ವೇ. ಪಂ. ಪಕ್ಕೀರೇಶ್ವರ ಶಾಸ್ತ್ರಿಗಳು ಹಿರೇಮಠ ಇವರ ಅಧ್ಯಕ್ಷತೆಯಲ್ಲಿ ಪ್ರಾಧ್ಯಾಪಕರಾದ ಡಾ. ಮೃತ್ಯುಂಜಯ ಅಗಡಿ ಇವರು ಈ ಸಮಾರಂಭವನ್ನು ಉದ್ಘಾಟನೆ ಮಾಡಲಿರುವರು. ‘ಹೆಸರಾಯಿತು ಕರ್ನಾಟಕ’ ಎಂಬ ವಿಷಯದ ಬಗ್ಗೆ ನಿವೃತ್ತ ಉಪನ್ಯಾಸಕರಾದ ಶ್ರೀ ಸುರೇಶ ಕಡೆಮನಿ ಇವರು ಉಪನ್ಯಾಸ ನೀಡಲಿದ್ದಾರೆ. ಧಾರವಾಡದ ಆಕಾಶವಾಣಿ ದೂರದರ್ಶನ ಕಲಾವಿದರಾದ ಶ್ರೀಮತಿ ಡಾ. ಸುಮಾ ಬಸವರಾಜ ಹಡಪದ ಮತ್ತು ಶ್ರೀಗುರು ಕುಮಾರೇಶ್ವರ ವಿದ್ಯಾ ಸೇವಾ ಸಂಸ್ಥೆಯ ಸಂಗೀತ…
ತೆಕ್ಕಟ್ಟೆ: ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆ ಆಶ್ರಯದಲ್ಲಿ “ಸಿನ್-1999 ಶ್ವೇತಯಾನ -98” ಕಾರ್ಯಕ್ರಮದ ಅಂಗವಾಗ “ಅರ್ಥಾಂಕುರ-12 ” ಕಾರ್ಯಕ್ರಮವು ದಿನಾಂಕ 12 ಜನವರಿ 2025 ರಂದು ತೆಕ್ಕಟ್ಟೆಯ ಹಯಗ್ರೀವದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಯಕ್ಷಗಾನದ ಪ್ರಸಿದ್ದ ಅರ್ಥದಾರಿ ಜಬ್ಬಾರ್ ಸಮೋ ಮಾತನಾಡಿ “ಅತ್ಯಂತ ತ್ವರಿತ ಗತಿಯಿಂದ ಕಲಾ ವಲಯದಲ್ಲಿ ಪ್ರಜ್ವಲಿಸಲು ಹಿರಿಯ ಕಲಾವಿದರ ಸಾಂಗತ್ಯದ ಜೊತೆಗೆ ಅರ್ಥಗಾರಿಕೆಯ ಒಡನಾಟ ಹೆಚ್ಚು ಪೂರಕ. ಹಿರಿಯ ಕಲಾವಿದರಿಂದ ಕಿರಿಯರೂ, ಕಿರಿಯ ಕಲಾವಿದರಿಂದ ಹಿರಿಯರೂ ಕಲಿಯುವಂತದ್ದು ಬಹಳ ಇರುತ್ತದೆ. ಯಾರೂ ಕಡಿಮೆಯಲ್ಲ ಯಾರೂ ಹೆಚ್ಚಲ್ಲ. ಹಿರಿಯ ಕಲಾವಿದರು ಕಿರಿಯರನ್ನು ತೆಕ್ಕೈಸಿಕೊಂಡು ನಡೆಸಿದರೆ ಭವಿಷ್ಯ ರೂಪಿಸುವ ಕಿರಿಯ ಕಲಾವಿದರು ಮುಂದಿನ ವೇದಿಕೆಗೆ ಅರ್ಥದಾರಿಗಳಾಗಿ ಬೆಳೆಯುವುದರಲ್ಲಿ ಸಂಶಯವಿಲ್ಲ” ಎಂದರು. ಖ್ಯಾತ ರಂಗ ನಿರ್ದೇಶಕ ಡಾ. ಶ್ರೀಪಾದ ಭಟ್, ಕಾರ್ಯಕ್ರಮದ ನೇತಾರ ಡಾ. ಜಗದೀಶ್ ಶೆಟ್ಟಿ, ಸತೀಶ್ ಶೆಟ್ಟಿ ಅಂಪಾರು, ಭಾಗವತ ದರ್ಶನ್ ಗೌಡ, ಕಿಶನ್ ಪೂಜಾರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಬಳಿಕ ಯಕ್ಷಗಾನ ತಾಳಮದ್ದಳೆ ‘ವಾಮನ ಚರಿತ್ರೆ’ ರಂಗ ಪ್ರಸ್ತುತಿಗೊಂಡಿತು.
ಉಡುಪಿ : ಕಲಾವಿದ ಮಹೇಶ್ ಮರ್ಣೆ ಇತ್ತೀಚಿಗೆ ಎರಡು ಗಂಟೆ 30 ನಿಮಿಷಗಳ ಕಾಲ ಉರಿ ಬಿಸಿಲಿನಲ್ಲಿ ಕುಳಿತು ಸೂರ್ಯನ ಕಿರಣಗಳಿಂದ ಮರದ ಹಲಗೆಯಲ್ಲಿ ರಚಿಸಿದ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರ ಭಾವಚಿತ್ರ ರಚಿಸಿದ್ದರು. ಇದೀಗ ಈ ಕಲಾಕೃತಿಯು ಕಿಂಗ್ಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೆ ಸೇರ್ಪಡೆಗೊಂಡಿದೆ. ಈ ಕಲಾಕೃತಿಯನ್ನು ರಾಷ್ಟ್ರಪತಿ ಮೆಚ್ಚಿ ಸಂದೇಶ ಕಳುಹಿಸಿದ್ದರು. ಮಹೇಶ್ ಮರ್ಣೆಯವರ ಕಲಾಕೃತಿಯು ಮೂರನೇ ದಾಖಲೆಗೆ ಸೇರ್ಪಡೆಗೊಳ್ಳುವುದರ ಮೂಲಕ ತಮ್ಮ ಕಲಾ ಸಾಧನೆಯಲ್ಲಿ ಮತ್ತೊಂದು ಮೈಲುಗಲ್ಲು ಸಾಧಿಸಿದ್ದಾರೆ. ಇವರು ಮರ್ಣೆ ಗ್ರಾಮದ ಶ್ರೀಧರ ಆಚಾರ್ಯ ಮತ್ತು ಲಲಿತಾ ದಂಪತಿಯ ಸುಪುತ್ರ. ಇವರು ಐಸ್ ಕ್ರೀಮ್ ಕಡ್ಡಿ ಮತ್ತು ಬೆಂಕಿ ಕಡ್ಡಿಯಿಂದ ಮಾಡಿದ ಗಣಪತಿ ಕಲಾಕೃತಿ 2015ರಲ್ಲಿ ‘ಇಂಡಿಯಾ ಬುಕ್ ಆಫ್ ರೆಕಾರ್ಡ್’ಗೆ ಸೇರ್ಪಡೆಗೊಂಡಿದೆ. ಸೋಪಿನಿಂದ ಕಲಾಕೃತಿ, ಥರ್ಮಕೋಲ್ ಮತ್ತು ಥರ್ಮಫೋಮ್ ನಿಂದ ಶಿಲ್ಪಗಳು, ಚಾಕ್ ಪೀಸ್ ನಲ್ಲಿ ಕೆತ್ತನೆ, ಬಳಪದಲ್ಲಿ ಗಣಪ, ಬಾಟಲಿಯ ಒಳಗೆ ಆವೆ ಮಣ್ಣಿನಲ್ಲಿ ಗಣೇಶ, ಅಶ್ವತ್ಥ…
ಉಡುಪಿ : ಕನ್ನಡ ನಾಡಿನ ಪ್ರತಿಷ್ಠಿತ ರಂಗಭೂಮಿ ಸಂಸ್ಥೆಗಳಲ್ಲಿ ಒಂದಾಗಿರುವ ರಂಗಭೂಮಿ ಉಡುಪಿ ಸದಾ ಹೊಸತನ್ನು, ಪ್ರಥಮವನ್ನು ನಾಡಿಗೆ ನೀಡಿ ಪ್ರಸಿದ್ಧಿ ಪಡೆದಿದೆ. ಪ್ರಸ್ತುತ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿರುವ ಈ ಸಂಸ್ಥೆ ಇದೀಗ ಪ್ರೌಢಶಾಲೆ ಹಾಗೂ ಕಾಲೇಜು ಮಕ್ಕಳಿಗೆ ರಂಗಶಿಕ್ಷಣವನ್ನು ನೀಡುವ ಮೂಲಕ ರಾಜ್ಯದ ರಂಗಭೂಮಿಯಲ್ಲಿ ಮಹಾನ್ ಕ್ರಾಂತಿಯನ್ನೇ ನಿರ್ಮಿಸಲು ಹೊರಟಿದೆ. ದೂರದೃಷ್ಟಿಯಿಂದ ಈ ಮಹಾತ್ವಾಕಾಂಕ್ಷಿ ಯೋಜನೆ ಇದೀಗ ಉಡುಪಿಯ ಆಯ್ದ 12 ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಯೋಗಿಕವಾಗಿ ಪ್ರಾರಂಭವಾಗಿ ಅಭೂತಪೂರ್ವ ಯಶಸ್ಸನ್ನು ಕಂಡಿದೆ. 300ಕ್ಕೂ ಅಧಿಕ ವಿದ್ಯಾರ್ಥಿಗಳು ರಂಗಶಿಕ್ಷಣ ಪಡೆದು, ಇದೀಗ ಎರಡು ಹಂತದಲ್ಲಿ ನಾಟಕಗಳನ್ನು ಆಡಿ ತೋರಿಸುವ ಮೂಲಕ ತಾವು ಕಲಿತ ರಂಗ ಶಿಕ್ಷಣವನ್ನು ಎಂ.ಜಿ.ಎಂ. ಕಾಲೇಜಿನ ನೂತನ ರಂಗಮಂದಿರದಲ್ಲಿ ಯಶಸ್ವಿಯಾಗಿ ಪ್ರಸ್ತುತಿ ಪಡಿಸಿ, ಸಂಸ್ಥೆ ಹೆಮ್ಮೆಯಿಂದ ಬೀಗುವಂತೆ ಮಾಡಿದ್ದಾರೆ. ಯಾಕೆ ಈ ರಂಗ ಶಿಕ್ಷಣ ? : ನಾನು ಯಕ್ಷಗಾನ ಕಲಾರಂಗದ ಅಧ್ಯಕ್ಷನಾಗಿದ್ದ ಸಂದರ್ಭದಲ್ಲಿ ಯಕ್ಷಗಾನಕ್ಕೆ ಭವಿಷ್ಯದಲ್ಲಿ ಪ್ರೇಕ್ಷಕರ ಕೊರತೆಯನ್ನು ನೀಗಿಸಲು ಹಾಗೂ ಉತ್ತಮ ಕಲಾವಿದರು ಬೆಳೆದು ಬರುವಂತಾಗಬೇಕು…
ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಮಂಜೇಶ್ವರ, ಕಾಸರಗೋಡು, ಹೊಸದುರ್ಗ ತಾಲೂಕು ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ
ಕಾಸರಗೋಡು : ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಮೈಸೂರು ಇದರ ಕೇರಳ ಗಡಿನಾಡ ಘಟಕವಾದ ‘ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್’ 2001ರಲ್ಲಿ ಶಿವರಾಮ ಕಾಸರಗೋಡು ಅಧ್ಯಕ್ಷತೆಯಲ್ಲಿ ಅಸ್ತಿತ್ವಕ್ಕೆ ಬಂದು 25 ವರ್ಷ ಪೂರೈಸುತ್ತಿದೆ. ಈಗಾಗಲೇ ಆರು ಬಾರಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ಸಂಘಟಿಸಿರುತ್ತದೆ. ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಇದರ 25ನೇ ಬೆಳ್ಳಿ ಹಬ್ಬ ವರ್ಷಾಚರಣೆ ಸಂಭ್ರಮಕ್ಕೆ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಮೈಸೂರು ಇದರ ಸ್ಥಾಪಕರಾದ ರಾಜ್ಯ ಪ್ರಧಾನ ಸಂಚಾಲಕ ಡಾ. ಎಂ.ಜಿ.ಆರ್. ಅರಸ್ ಇವರು ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಇದರ ಸಮಗ್ರ ಸಾಧನೆ, ಕಾರ್ಯ ಚಟುವಟಿಕೆಗೆ ವಾರ್ಷಿಕ ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಿ ಪ್ರೋತ್ಸಾಹಿಸಲಾಗುವುದೆಂದು ಘೋಷಿಸಿದ್ದಾರೆ. ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಇದರ 25ನೇ ಬೆಳ್ಳಿ ಹಬ್ಬ ವರ್ಷಾಚರಣೆಯ ಸಂದರ್ಭದ ನೆನಪಿಗಾಗಿ ಕಾಸರಗೋಡು ಜಿಲ್ಲೆಯ ಮಂಜೇಶ್ವರ, ಕಾಸರಗೋಡು ಹೊಸದುರ್ಗ ಉದುಮ ಹಾಗೂ ಇತರ ಭಾಗಗಳಲ್ಲಿ ತಾಲೂಕು…
ಉಡುಪಿ : ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಳದ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಎಂ.ಜಿ.ಎಂ. ಕಾಲೇಜು ಉಡುಪಿ ಸಹಕಾರದಲ್ಲಿ ರಂಗಭೂಮಿ ಉಡುಪಿ ಆಯೋಜಸಿರುವ ಡಾ. ನಿ.ಬೀ. ಅಣ್ಣಾಜಿ ಬಲ್ಲಾಳ್ ಅವರ ಸ್ಮರಣಾರ್ಥ ‘ಅಂಬಲಪಾಡಿ ನಾಟಕೋತ್ಸವ’ವು ದಿನಾಂಕ 12 ಜನವರಿ 2025ರಂದು ಎಂ.ಜಿ.ಎಂ. ಕಾಲೇಜಿನ ಮುದ್ದಣ ಮಂಟಪದಲ್ಲಿ ಉದ್ಘಾಟನೆಗೊಂಡಿತು. ಈ ನಾಟಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ. ಎನ್.ಬಿ. ವಿಜಯ ಬಲ್ಲಾಳ್ “ನಾಟಕಗಳು ನಮ್ಮ ಜೀವ, ಜೀವನದಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಹಾಸುಹೊಕ್ಕಾಗಿವೆ. ಸಾಮಾಜಿಕ, ಐತಿಹಾಸಿಕ, ಧಾರ್ಮಿಕ ವಿಷಯಗಳಲ್ಲಿ ರಂಗಭೂಮಿ ಇಂದು ಬೆಳೆದು ಸಮೃದ್ಧವಾಗಿದೆ. ಉತ್ತಮ ಜೀವನ ಸಂದೇಶವನ್ನು ಭಿತ್ತರಿಸುವ ಈ ರಂಗಭೂಮಿ ಆರೋಗ್ಯವಂತ ಸಮಾಜದ ಪ್ರತಿಬಿಂಬವೂ ಹೌದು. ಬ್ರಿಟೀಷರ ಕಾಲದಲ್ಲಿ ಅವರ ವಿರುದ್ಧ ಹೋರಾಡಲು ನಾಟಕಗಳ ಮೂಲಕ ಪರಿಣಾಮಕಾರಿ ಜಾಗೃತಿ ಮೂಡಿಸಲಾಗಿತ್ತು. ರಂಗಭೂಮಿಗೆ ಬಿ.ವಿ. ಕಾರಂತ, ಗುಬ್ಬಿ ವೀರಣ್ಣ, ಕಾರ್ನಾಡ್ ಇವರ ಕೊಡುಗೆಯನ್ನು ಮರೆಯುವಂತಿಲ್ಲ. ನೀನಾಸಂ ಹೆಗ್ಗೋಡಿನ ಕೆ.ವಿ. ಸುಬ್ಬಣ್ಣರವರನ್ನು ಇಲ್ಲಿ ನೆನೆಯಲೇಬೇಕು.…
ಉಳ್ಳಾಲ : ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ 2025ರ ಫೆಬ್ರವರಿ ತಿಂಗಳ 3ನೇ ವಾರದಲ್ಲಿ ಜರಗುವ ವೀರರಾಣಿ ಅಬ್ಬಕ್ಕ ಉತ್ಸವದಲ್ಲಿ ಓರ್ವ ಮಹಿಳಾ ಸಾಧಕರಿಗೆ ‘ವೀರರಾಣಿ ಅಬ್ಬಕ್ಕ ಪ್ರಶಸ್ತಿ’ ಮತ್ತು ಓರ್ವ ಮಹಿಳಾ ಸಾಧಕರಿಗೆ ‘ವೀರರಾಣಿ ಅಬ್ಬಕ್ಕ ಪುರಸ್ಕಾರ’ ನೀಡಲು ನಿರ್ಧರಿಸಲಾಗಿದೆ. ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ನೀಡಲಾಗುವ ಈ ಪ್ರಶಸ್ತಿಗಳು ನಗದು ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿದ್ದು, ಪ್ರಶಸ್ತಿ ಮತ್ತು ಪುರಸ್ಕಾರಗಳಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿ, ಪುರಸ್ಕಾರಗಳಿಗೆ ಅರ್ಜಿ ಸಲ್ಲಿಸುವವರಿಗೆ ಮಾನದಂಡಗಳು : ‘ವೀರರಾಣಿ ಅಬ್ಬಕ್ಕ ಪ್ರಶಸ್ತಿ’ – ತುಳುನಾಡಿನಲ್ಲಿ ಹುಟ್ಟಿ ಸಾಹಿತ್ಯ, ಸಂಸ್ಕೃತಿ ಮತ್ತು ಸಂಶೋಧನಾ ವಿಭಾಗಗಳಲ್ಲಿ ಗಣನೀಯ ಸಾಧನೆ ಮಾಡಿದ ಓರ್ವ ಮಹಿಳೆಗೆ ಈ ಪ್ರಶಸ್ತಿ ಮೀಸಲಾಗಿದೆ. ನಾಡು, ನುಡಿ ಹಾಗೂ ಪರಂಪರೆಗೆ ನೀಡಿದ ಮಹತ್ವದ ಸೇವೆಯನ್ನು ಇಲ್ಲಿ ಪರಿಗಣಿಸಲಾಗುವುದು. ‘ವೀರರಾಣಿ ಅಬ್ಬಕ್ಕ ಪುರಸ್ಕಾರ’ – ತುಳು ಸಂಸ್ಕೃತಿಯ ಹಿನ್ನೆಲೆಯೊಂದಿಗೆ ಕಲೆ, ಕ್ರೀಡೆ, ಸಮಾಜಸೇವೆ ಇತ್ಯಾದಿ ಕ್ಷೇತ್ರಗಳಲ್ಲಿ ಮಹತ್ವದ ಸಾಧನೆ…
ರಾಷ್ಟ್ರೀಯ ಮಟ್ಟದ ತಬಲವಾದಕ ಪಂಡಿತ್ ರಘುನಾಥ್ ನಾಕೋಡ್ ಇವರು 17 ಜನವರಿ 1954ರಲ್ಲಿ ಹುಬ್ಬಳ್ಳಿಯ ಸಂಗೀತಗಾರರ ಮನೆತನದ ಪ್ರಸಿದ್ಧ ಹಿಂದೂಸ್ತಾನಿ ಸಂಗೀತಗಾರರಾದ ಅರ್ಜುನ್ ಸಾ ನಾಕೊಡ್ ಹಾಗೂ ಅನಸೂಯಾ ನಾಕೊಡ್ ದಂಪತಿಗಳ ಸುಪುತ್ರನಾಗಿ ಜನಿಸಿದರು. ಎಸ್. ಎಸ್. ಎಲ್. ಸಿ. ವರೆಗೆ ವಿದ್ಯಾಭ್ಯಾಸವನ್ನು ಮಾಡಿದ ರಘುನಾಥರಿಗೆ ಸಂಗೀತದ ಪ್ರಥಮ ಗುರು ತಂದೆಯಾಗಿದ್ದರು. ಮುಂದಕ್ಕೆ ಅವರು ಆರಿಸಿಕೊಂಡದ್ದು ಸಂಗೀತವಾದ್ಯಗಳಲ್ಲಿ ಒಂದಾದ ತಬಲಾವಾದನ. ಗುರು ವೀರಣ್ಣ ಕುಮಾರ್ ಇವರ ತಾಳ – ಲಯದ ಗುರು ಆಗಿದ್ದರು. ಮುಂದೆ ಬಸವರಾಜ ಬೆಂಡಿಗೇರಿ ಇವರಲ್ಲಿ ಶ್ರಮಪಟ್ಟು ಹೆಚ್ಚಿನ ಅಭ್ಯಾಸವನ್ನು ಮಾಡಿ ತಬಲ ವಾದನವನ್ನು ಕರಗತಗೊಳಿಸಿಕೊಂಡರು . ಹೈದರಾಬಾದಿನ ಉಸ್ತಾದ್ ಶೇಕ್ ದಾವೂದ್ ಇವರ ಮಗ ತಬ್ಬೀರ್ ದಾವೂದ್, ಗುರುಬಂಧು ನಂದಕುಮಾರ್ ಮುಂತಾದವರ ಬಳಿ ಹೆಚ್ಚಿನ ಶಿಕ್ಷಣವನ್ನು ಪಡೆದು ಈ ಕಲೆಯನ್ನು ಮೈಗೂಡಿಸಿಕೊಂಡರು. ತಾನು ಪಡೆದ ಅಗಾಧ ಜ್ಞಾನದಿಂದಾಗಿ ಪಂಡಿತ್ ಪುಟ್ಟರಾಜ ಗವಾಯಿಗಳು, ಪಂಡಿತ್ ಸೋಮನಾಥ ಮರಡೂರ, ಪಂಡಿತ್ ವೆಂಕಟೇಶ್ ಕುಮಾರ್, ಪಂಡಿತ್ ರಾಜೀವ್ ತಾರಾನಾಥ್, ಡಾ. ಗಂಗೂಬಾಯಿ…